Author: admin
ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ತುಮ್ಕಾನೆ ಸುಧಾಕರ್ ಎಸ್ ಶೆಟ್ಟಿ ಅವರನ್ನು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅದೇಶಿಸಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರಾಜಕೀಯ ಪ್ರವೇಶ ಮಾಡಿದ ಸುಧಾಕರ ಶೆಟ್ಟಿ ಚುನಾವಣೆಯಲ್ಲಿ ಸೋತರೂ ಶೃಂಗೇರಿ ಕ್ಷೇತ್ರದಲ್ಲಿ ನೆಲೆ ಕಳೆದುಕೊಂಡಿದ್ದ ಜೆಡಿಎಸ್ ನ್ನು ಬಲವರ್ಧನೆಗೊಳಿಸುವಲ್ಲಿ ಯಶಸ್ವಿಯಾದರು. ಇವರ ಪಾದರಸ ವ್ಯಕ್ತಿತ್ವ, ಸಂಘಟನಾ ಚತುರತೆ, ಸಾಮಾಜಿಕ ಕಳಕಳಿ ತಿಳಿದಿರುವ ಎಚ್ಡಿಕೆ ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟಿಸಿರುವ ನಿಟ್ಟಿನಲ್ಲಿ ಪಕ್ಷದ ಹಿರಿಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ನನ್ನ ಮೇಲೆ ಇರಿಸಿದ ನಂಬಿಕೆಗೆ ಚಿರಋಣಿಯಾಗಿದ್ದೇನೆ. ಪಕ್ಷ ಬಲವರ್ಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿರುವ ಸುಧಾಕರ್ ಶೆಟ್ಟಿ ತನಗೆ ಜವಾಬ್ದಾರಿಯುತ ಸ್ಥಾನ ನೀಡಿರುವ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ. ಕುಮಾರ ಸ್ವಾಮಿಯವರಿಗೆ ಕೃತಜ್ಞತೆ ತಿಳಿಸಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಜಾನಪದ ಪರಿಷತ್ತು ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಸುಳ್ಯದ ಉದ್ಯಮಿ ಜಯರಾಮ ಶೆಟ್ಟಿ ಕೆ.ಎನ್. ಆಯ್ಕೆಯಾಗಿದ್ದಾರೆ. ಜಯರಾಮ ಶೆಟ್ಟಿಯವರು ದುಗ್ಗಲಡ್ಕದ ಮಿತ್ರ ಯುವಕ ಮಂಡಳಿ ಕೊಯಿಕುಳಿ ಇದರ ಅಧ್ಯಕ್ಷರಾಗಿ, ಕಾರ್ಯಕ್ರಮ ಸಂಘಟಕರಾಗಿ ಕೆಲಸ ನಿರ್ವಹಿಸಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಜಾನಪದ, ಸಂಸ್ಕೃತಿ, ಕಲೆ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಮತ್ತು ಜಿಲ್ಲಾ ಘಟಕದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಸಹಕರಿಸುವುದು ತಾಲೂಕು ಘಟಕದ ಕಾರ್ಯವಾಗಿದೆ.
ಗೋವಾ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜಸೇವಕ ಸದಾಶಿವ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೋವಾ ಮಡಗಾವ್ ಲಕ್ಷ್ಮಿ ಎಂಪಾಯರ್ ಹೋಟೆಲಿನ ಮಾಲಿಕರಾಗಿರುವ ಸದಾಶಿವ ಶೆಟ್ಟಿಯವರು ಗೋವಾ ಕನ್ನಡ ಸಾಹಿತ್ಯ ಪರಿಷತ್ತಿನ ಸಲಹಾ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ವಿವಿಧ ಸಮಾಜಮುಖಿ ಸೇವೆಯಿಂದ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಧನೆ ಜೆಇಇ ಮೈನ್ಸ್ ಫಲಿತಾಂಶ: 53 ವಿದ್ಯಾರ್ಥಿಗಳಿಗೆ 95ಕ್ಕೂ ಅಧಿಕ ಪಸರ್ಂಟೈಲ್
ವಿದ್ಯಾಗಿರಿ: ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 95 ಪಸರ್ಂಟೈಲ್ಗಿಂತ ಅಧಿಕ ಅಂಕ ಪಡೆದಿದ್ದಾರೆ. ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ- 97.1516355 ಹಾಗೂ ಗಣಿತ- 99.537079) ಪಡೆದಿದ್ದಾರೆ. ಎಸ್ಸೆಸ್ಸೆಲ್ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿ ಪ್ರಶಾಂತ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 98.7993863 ಪರ್ಸಂಟೈಲ್ ಪಡೆದಿರುತ್ತಾರೆ. ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ಸೇರಿದಂತೆ ಮೂರು ವಿಷಯಗಳಲ್ಲಿ 98 ಪಸರ್ಂಟೈಲ್ಗಿಂತ ಅಧಿಕ ಒಂಬತ್ತು ವಿದ್ಯಾರ್ಥಿಗಳು, 97 ಪಸರ್ಂಟೈಲ್ಗಿಂತ ಅಧಿಕ 19 ವಿದ್ಯಾರ್ಥಿಗಳು ಪಡೆದಿದ್ದಾರೆ. ವಿದ್ಯಾರ್ಥಿಗಳಾದ ರಜತ್ ಮತ್ತು ಪ್ರಶಾಂತ್ ಜೊತೆ ದರ್ಶನ್ಕುಮಾರ್ ತಲ್ಲೊಳ್ಳಿ (98.6175507), ನಮಿತಾ ಎ.ಪಿ. (98.5761436), ಪ್ರೀತಮ್ ಎಂ. (98.1895688), ಪ್ರಜ್ವಲ್ ಡಿ.ಎಸ್. (98.1603894), ನವೀನ್ ಬಿ. ಸೋಲಂಕಿ (98.0893667), ಪುನೀತ್ ಎಸ್. (98.079865) ಮತ್ತು ರೋಹಿತ್ ಕುಮಾರ್ ಎಲ್.…
ಉಡುಪಿಯಲ್ಲಿ ನಾಡವರೆಂದು, ದ.ಕ. ದಲ್ಲಿ ಬಂಟರೆಂದು ಕರೆದರೂ, ಈಗಲೂ ಈ ಜಿಲ್ಲೆ ಭಾವನಾತ್ಮಕವಾಗಿ ಒಂದೇ ಆಗಿದೆ. ಬ್ಯಾಂಕ್ ಅಥವಾ ಉದ್ಯಮ ಆರಂಭಿಸಿ, ಸಮುದಾಯದ ಇನ್ನಷ್ಟು ಯುವಕರಿಗೆ ಕೆಲಸ ಕೊಡುವ ಕಾರ್ಯ ಆಗಲಿ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು. ಕೋಟೇಶ್ವರದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಭಾಗವಾಗಿ ಆಯೋಜಿಸಿದ “ಭಾವೈಕ್ಯ” ಬಂಟರ ಮಹಾ ಸಮಾಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಂಬಯಿ ಉದ್ಯಮಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಿದರು. ದಿ| ಯಡ್ತರೆ ನರಸಿಂಹ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಸ್ವೀಕರಿಸಿದ ಎಂಆರ್ಜಿ ಸಮೂಹ ಸಂಸ್ಥೆ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಬಂಟ ಸಮಾಜದವರಿಂದಲೇ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ಆ ಋಣ ನನ್ನ ಮೇಲಿದೆ. ಅದಕ್ಕಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುತ್ತಿದ್ದೇನೆ ಎಂದರು. ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕಾಸರಗೋಡಿನಿಂದ ಶಿರೂರುವರೆಗಿನ ಬಂಟರೆಲ್ಲರೂ ಒಂದೇ. ಅವರ ಕೀರ್ತಿ…
ಸರಳತೆ ಮತ್ತು ಸಂಘಟನ ಚತುರತೆಯ ಮೂಲಕ ಹೃದಯ ಶ್ರೀಮಂತಿಕೆ ಮೆರೆದ ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಶಾಂತಾರಾಮ ಸೂಡ ಅವರು ಪೆರ್ಡೂರಿನ ಆಸ್ತಿಯಾಗಿದ್ದು ಅವರ ಮುಂದಾಳತ್ವದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಭವ್ಯವಾದ ಸಮುದಾಯ ಭವನ ತಲೆ ಎತ್ತಿ ನಿಂತಿರುವುದು ಶ್ಲಾಘನೀಯ ಎಂದು ಬೆಂಗಳೂರು ಎಂಆರ್ಜಿ ಗ್ರೂಪ್ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.ಬಂಟರ ಸಂಘ ಪೆರ್ಡೂರು ಮಂಡಲದಿಂದ ನಿರ್ಮಾಣಗೊಂಡ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಭಾಭವನವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್ ಮಾತನಾಡಿ, ಈ ಭವನ ಕೇವಲ ಬಂಟ ಸಮಾಜಕ್ಕೆ ಮಾತ್ರ ಸೀಮಿತವಾಗಿರದೆ ಎಲ್ಲಾ ಸಮುದಾಯದವರಿಗೂ ಅವಕಾಶ ನೀಡಿರುವುದು ಶ್ಲಾಘನೀಯ ಎಂದರು. ಪ್ರತಿ ಮನೆಗೆ ಭೇಟಿ ನೀಡಿ ಅವರ ಸಹಭಾಗಿತ್ವವನ್ನು ಪಡೆದು ಭವನವನ್ನು ನಿರ್ಮಾಣ ಮಾಡಿದ ಸೂಡರು ಮಾದರಿಯಾಗಿದ್ದಾರೆ ಎಂದು ಅತಿಥಿಗೃಹ ಉದ್ಘಾಟಿಸಿದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಅತೀ…
ರೈ ಸುಮತಿ ಎಜ್ಯುಕೇಶನ್ ಟ್ರಸ್ಟ್ ಮೀರಾ ಭಯಂದರ್ : ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಂಸ್ಥೆಗಳ 17 ನೇಯ ವಾರ್ಷಿಕೋತ್ಸವ
ರೈ ಸುಮತಿ ಎಜ್ಯುಕೇಶನ್ ಟ್ರಸ್ಟ್ ಮೀರಾ ಭಯಂದರ್ ವತಿಯಿಂದ ಇತ್ತೀಚೆಗೆ ತನ್ನ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಂಸ್ಥೆಗಳ 17 ನೇ ವಾರ್ಷಿಕ ಉತ್ಸವವನ್ನು ನೆರವೇರಿಸಿತು. ಭಯಂದರ್ ನ ಆನಂದ ದಿಘೆ ಮೈದಾನದಲ್ಲಿ ಸಂಜೆ 5 ಗಂಟೆಯಿಂದ ನಡೆದ ಈ ಉತ್ಸವದಲ್ಲಿ ಸಂಸ್ಥೆಯ ಕೆ.ಎಸ್. ಮೆಹ್ತಾ ಜೂನಿಯರ್ ಕಾಲೇಜ್, ಆದರ್ಶ್ ನಿಕೇತನ್ ಸ್ಕೂಲ್ ಸಮೂಹ ಸಂಸ್ಥೆಗಳ ಅಧೀನತೆಯ ಸೈಂಟ್ ಅಗ್ನೇಸಿಯಸ್ ಸ್ಕೂಲ್ ನ ಸಾವಿರಾರು ವಿದ್ಯಾರ್ಥಿಗಳು ಈ ಮಹೋತ್ಸದಲ್ಲಿ ಪಾಲ್ಗೊಂಡಿದ್ದರು. ಅತಿಥಿಗಳಾಗಿ ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೊಟೇಲ್ಸ್ ನ ಆಡಳಿತ ನಿರ್ದೇಶಕರಾದ ರವಿ ಶೆಟ್ಟಿ, ಭಯಂದರ್ ನವಘರ್ ಪೋಲಿಸ್ ಠಾಣೆಯ ನಿರೀಕ್ಷಕ ಧೀರಜ್ ಕೊಹ್ಲಿ, ಬಂಟರ ಸಂಘ ಮುಂಬಯಿ ಇದರ ಗೌರವ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಉದ್ಯಮಿ ಭಾಸ್ಕರ್ ಶೆಟ್ಟಿ, ಮಾಜಿ ನಗರ ಸೇವಕ ಪ್ರವೀಣ್ ಪಾಟೀಲ್, ಐಯರ್ ಇಂಡಿಯಾದ ಪೈಲೆಟ್ ಅಭಿ ಭಂಡಾರಿ, ಯಸ್. ಎನ್. ಕಾಲೇಜಿನ ಛೇರ್ಮನ್ ರೋಹಿದಾಸ್ ಪಾಟೀಲ್, ಮಾಜಿ ನಗರ ಸೇವಕರುಗಳಾದ…
ಆಳ್ವಾಸ್ ಎಂಬಿಎಯಲ್ಲಿ ಯುವ ಉದ್ಯಮಶೀಲತಾ ಶೃಂಗಸಭೆಯಲ್ಲಿ ಕರ್ಣ ಬೆಳೆಗೆರೆ ‘ಮನಸ್ಸು, ದೇಹ, ಹೃದಯ ಸಮರ್ಪಿಸಿದಾಗ ಯಶಸ್ಸು’
ವಿದ್ಯಾಗಿರಿ: ಮನಸ್ಸು, ದೇಹ ಹಾಗೂ ಹೃದಯವನ್ನು ಸಮರ್ಪಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಅವುಗಳಿಂದ ನಿಮ್ಮ ಆಂತರಿಕ ಸಾಮಥ್ರ್ಯ ಹೆಚ್ಚಳವಾಗುತ್ತದೆ ಎಂದು ಬೆಂಗಳೂರಿನ ಪ್ರಾರ್ಥನಾ ಶಾಲೆ ಕರ್ಣ ಬೆಳೆಗೆರೆ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ನಾತಕೋತ್ತರ ವ್ಯವಹಾರ ಆಡಳಿತ ವಿಭಾಗದ ‘ಎಂಬಿಎ ಆಗಮನ 2024ರ’ ಸಲುವಾಗಿ ಉದ್ಯಮಶೀಲತಾ ಅಭಿವೃದ್ಧಿ ಕೋಶ (ಇಡಿಸಿ)ದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡ ಯುವ ಉದ್ಯಮ ಶೀಲತಾ ಶೃಂಗಸಭೆಯಲ್ಲಿ ಅವರು ಮಾತನಾಡಿದರು. ಮ್ಯಾನೇಜ್ಮೆಂಟ್ ಆಫ್ ಬಿಸಿನೆಸ್ ಆಡ್ಮಿಸ್ಟ್ರೇಷನ್ (ಎಂಬಿಎ)ಗೆ ಹೊಸ ವ್ಯಾಕ್ಯನ ನೀಡಿದ ಅವರು, ಮೈಂಡ್, ಬಾಡಿ, ಆರ್ಟ್ (ಹಾರ್ಟ್) ಸರಿಯಾದ ಮಿಳಿತವೇ ಉನ್ನತಿಗೆ ರಹದಾರಿ. ಉತ್ತಮ ಸಂವಹನ ಕಲೆ ಇದ್ದಾಗ ಉದ್ಯಮದಲ್ಲಿ ಯಶಸ್ಸು ಪಡೆಯಲು ಸಾಧ್ಯ. ಅವಕಾಶಗಳು ಅಪರಿಮಿತ. ಯುವಜನತೆ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಜೀವನದಲ್ಲಿ ಏರುಪೇರು ಸಾಮಾನ್ಯ. ಅಂತಹ ಸಮಸ್ಯೆಗಳಿಂದ ಮೇಲೆ ಬರಲು ಯತ್ನಿಸಬೇಕು. ನನಗೆ ನನ್ನ ಅಪ್ಪ ಯಾವಾಗಲೂ ಹೇಳುತ್ತಿದ್ದರು. ‘ನಿನಗೆ ಏಕೆ ಕರ್ಣ ಎಂದು ಹೆಸರಿಟ್ಟಿದ್ದೇನೋ ಗೊತ್ತಿಲ್ಲ. ನೀನು ಕುಂಭಕರ್ಣ’…
ಆತಿಥ್ಯ ಹಾಗೂ ಸಮಾಜಮುಖಿ ಚಟುವಟಿಕೆಯಲ್ಲಿ ರಾಜ್ಯದ ಗಮನ ಸೆಳೆದ ಪೆರ್ಡೂರು ಬಂಟರ ಸಂಘ ಅತ್ಯಾಕರ್ಷಕ ಸಮುದಾಯ ಭವನ ನಿರ್ಮಾಣ ಮಾಡುವುದರ ಜತೆಗೆ ಪೆರ್ಡೂರಿನ ಬಂಟರ ಮಾಹಿತಿಯುಳ್ಳ ಸಂಚಿಕೆಯನ್ನು ಬಿಡುಗಡೆ ಮಾಡಿ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಅದಾನಿ ಗ್ರೂಪ್ನ ಅಧ್ಯಕ್ಷ ಕಿಶೋರ್ ಆಳ್ವ ಹೇಳಿದರು. ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಕೆ. ಶಾಂತಾರಾಮ ಸೂಡ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಕೆ. ಶೆಟ್ಟಿ ಕುತ್ಯಾರು ಬೀಡು, ಕೋಶಾಧಿಕಾರಿ ಪ್ರಮೋದ್ ರೈ ಪಳಜೆ, ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ಕುತ್ಯಾರುಬೀಡು, ಮಹೇಶ್ ಶೆಟ್ಟಿ ಪೈಬೆಟ್ಟು, ಸುಧಾಕರ ಶೆಟ್ಟಿ, ಸುರೇಶ್ ಹೆಗ್ಡೆ, ಪ್ರಕಾಶ್ ಶೆಟ್ಟಿ, ದಿನೇಶ್ಚಂದ್ರ ಶೆಟ್ಟಿ, ರಾಜ್ಕುಮಾರ್ ಶೆಟ್ಟಿ, ಶಿವರಾಮ ಶೆಟ್ಟಿ, ಸರಳ ಎಸ್. ಹೆಗ್ಡೆ, ಭಾರತಿ ಶ್ರೀಧರ್ ಶೆಟ್ಟಿ, ಪ್ರೇಮಲತಾ ಎಸ್. ಹೆಗ್ಡೆ ಮೊದಲಾದವರಿದ್ದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ: ಸತತ ಎರಡನೇ ವರ್ಷವೂ ಪ್ರಥಮ ರ್ಯಾಂಕ್ ಹೋಮಿಯೋಪಥಿ: ಆಳ್ವಾಸ್ಗೆ 115 ರ್ಯಾಂಕ್
ವಿದ್ಯಾಗಿರಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ 16 ಹಾಗೂ ವಿಷಯವಾರು 97 ಸೇರಿದಂತೆ 115 ರ್ಯಾಂಕ್ ಗಳನ್ನುಪಡೆದಿದ್ದಾರೆ. ಹೋಮಿಯೋಪಥಿಯಲ್ಲಿ ವಿಶ್ವವಿದ್ಯಾಲಯಕ್ಕೆ ಮೀನುಮುರಳಿ ಪ್ರಥಮ ರ್ಯಾಂಕ್ ಪಡೆದರೆ, ಸಾರಾ ಸಹ್ಲಾ ಐದನೇ ರ್ಯಾಂಕ್ ಪಡೆದಿದ್ದಾರೆ. ಆ ಮೂಲಕ ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಸತತ ಎರಡನೇ ವರ್ಷವೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಥಮ ರ್ಯಾಂಕ್ ಜೊತೆಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಪ್ರಥಮ ವರ್ಷದ ಬಿಎಚ್ಎಂಎಸ್-ಸೆಪ್ಟೆಂಬರ್ 2018 (ಹೋಮಿಯೋಪಥಿ ವೈದ್ಯಕೀಯ ವಿಜ್ಞಾನ ಪದವಿ)ನಲ್ಲಿ ಮೀನು ಮುರಳಿ 5ನೇ ಹಾಗೂ ಅಶ್ನಿ ವಿ. ಸುವರ್ಣ 10ನೇ ರ್ಯಾಂಕ್ ಪಡೆದಿದ್ದಾರೆ. ದ್ವಿತೀಯ ಬಿಎಚ್ಎಂಎಸ್ (ಸೆಪ್ಟೆಂಬರ್ 2019)ನಲ್ಲಿ ಮೀನುಮುರಳಿ ಪ್ರಥಮ ಹಾಗೂ ಮಹಾಝಕಾರಿಯಾ ಪಣಕ್ಕಲ್ ತೃತೀಯ, ಸಾರಾಸಹ್ಲಾ ಐದನೇ ಹಾಗೂ ಶಿಲ್ಪಾ ಸಿವದಾಸ್ ಮತ್ತು ಗ್ರೀಷ್ಮಾಗಣೇಶ್ ಏಳನೇ, ಸ್ಪೂರ್ತಿ ಮತ್ತು ಅಶ್ನಿ ಸುವರ್ಣ 8ನೇ, ಅನಘಾ ಎಸ್.ಎಂ. 10ನೇ ರ್ಯಾಂಕ್ ಪಡೆದಿದ್ದಾರೆ. ತೃತೀಯ ಬಿಎಚ್ಎಂಎಸ್…















