Author: admin
“ಪರಿಣಾಮಕಾರಿ ನಾಯಕತ್ವ ಗುಣ ಹಾಗೂ ಮುನ್ನುಗ್ಗುವ ಪ್ರವೃತ್ತಿಯಿಂದ ವಿಶ್ವದಾದ್ಯಂತ ಪ್ರಸಿದ್ಧರಾಗಿರುವ ಬಂಟ ಸಮಾಜದವರು ಮುಖ್ಯವಾಹಿನಿಯಲ್ಲಿ ಹೆಚ್ಚಾಗಿ ಗುರುತಿಸಿಕೊಳ್ಳುವುದು ಅತ್ಯಗತ್ಯ,” ಎಂದು ಅದಾನಿ ಸಮೂಹ ಸಂಸ್ಥೆಗಳ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಹೇಳಿದರು. ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಭಾನುವಾರ ಪಡುಬಿದ್ರಿ ಬಂಟರ ಸಂಘ ಮತ್ತು ಬಂಟ್ಸ್ ವೇಲ್ಫರ್ ಟ್ರಸ್ಟ್ ವತಿಯಿಂದ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಪ್ರಾಯೋಜಕತ್ವದಲ್ಲಿ ನಡೆದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆಶಕ್ತರಿಗೆ ನೆರವು ವಿತರಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, “ಪಡುಬಿದ್ರಿ ಬಂಟರ ಸಂಘದ ಈ ಕಾರ್ಯಕ್ರಮ ಅನುಕರಣೀಯ. ಸಮಾಜದ ಸರ್ವರೂ ಇದನ್ನು ಪ್ರೋತ್ಸಾಹಿಸಬೇಕು. ಅ.28, 29ರಂದು ಉಡುಪಿಯಲ್ಲಿ ಹಮ್ಮಿಕೊಂಡಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಬೇಕು.” ಎಂದರು. ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ, “ಒಗ್ಗಟ್ಟಿನ…
ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯ ಇದರ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ಹಾಗೂ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ ಕಾರ್ಯಕ್ರಮ ಬಂಟರ ಸಭಾಂಗಣದಲ್ಲಿ ನಡೆಯಿತು. ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸಲಾಯಿತು. ಹೆಬ್ರಿ ಅಜೆಕಾರು ವಲಯ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತೃ ಸಂಘದ ನಿರ್ದೇಶಕರಾದ ಭೂತುಗುಂಡಿ ಕರುಣಾಕರ ಶೆಟ್ಟಿ, ಪ್ರಮೋದ ರಾಜಕುಮಾರ್ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಬಾನು ಪಿ.ಬಲ್ಲಾಳ್, ಸಂಘದ ಉಪಾಧ್ಯಕ್ಷರಾದ ವಾದಿರಾಜ್ ಶೆಟ್ಟಿ, ದಯಾನಂದ ಆರ್ ಶೆಟ್ಟಿ, ಸುರೇಶ್ ಶೆಟ್ಟಿ ಗುಳಿಬೆಟ್ಟು, ಆಶಾ ಬಿ.ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಮಹಿಳಾ ಘಟಕದ ಕಾರ್ಯದರ್ಶಿ ಜ್ಯೋತಿ ಕೆ.ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ, ರಮೇಶ್ ಶೆಟ್ಟಿ, ಸತ್ಯನಾರಾಯಣ ಪೂಜಾ ಸಮಿತಿ ಸಂಚಾಲಕ ಉದಯ ಶೆಟ್ಟಿ…
ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ದಿನಾಂಕ 5-09-2023 ರಂದು ಶಿಕ್ಷಕರ ದಿನಾಚರಣೆಯನ್ನು ಬಹಳ ಸಡಗರದಿಂದ ಆಚರಣೆ ಮಾಡಲಾಯಿತು. ಬೆಳಿಗ್ಗೆ 8:30 ಕ್ಕೆ ವಿದ್ಯಾರ್ಥಿಗಳು ಆರತಿ ಬೆಳಗುವುದರ ಮೂಲಕ ಪುಷ್ಪಗುಚ್ಛಗಳನ್ನು ನೀಡಿ ಶಿಕ್ಷಕರನ್ನು ಸ್ವಾಗತಿಸಿದರು. ನಂತರ ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಧಾಕರ ಎಸ್ ಶೆಟ್ಟಿ ಅವರು ಶಿಕ್ಷಕರ ದಿನಾಚರಣೆಯನ್ನು ಕುರಿತು ಮಾತನಾಡಿದರು. ಡಾ. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವ ಪ್ರಮುಖ ಉದ್ದೇಶವೇ ಶಿಕ್ಷಕರ ಮಹತ್ವವನ್ನು ಸಾರುವುದು ಜೊತೆಗೆ ಶಿಕ್ಷಣದಲ್ಲಿ ಯುವ ಜನತೆಗೆ ಪ್ರೋತ್ಸಾಹಿಸುವುದು. ಪ್ರತಿ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಒಬ್ಬ ಗುರುವಿಗೆ ನೀಡುತ್ತಾರೆ. ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಶಿಕ್ಷಣದ ಮೂಲಾರ್ಥವನ್ನು ತಿಳಿಸಿ ಪ್ರತಿ ವ್ಯಕ್ತಿಯ ಬದುಕನ್ನು ಬೆಳಗಿಸುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ. ಪ್ರತಿ ವ್ಯಕ್ತಿಯ ಬದುಕಿನ ದೀಪವಾಗಿರುವ ಶಿಕ್ಷಕರಿಗೂ ಸಹ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ…
ಅದು 1999ರ ಮೇ ತಿಂಗಳ ಕೊನೆಯ ದಿನಗಳು. ಭಾರತೀಯ ಸೇನೆಯಲ್ಲಿ ಒಂದು ವರ್ಷದ ತರಬೇತಿ, ಸುಮಾರು 6 ತಿಂಗಳುಗಳ ಕರ್ತವ್ಯ ಮುಗಿಸಿ ಮೊದಲ ಬಾರಿಗೆ 36 ದಿನಗಳ ರಜೆಯಲ್ಲಿ ಊರಿಗೆ ಬಂದಿದ್ದೆ. ರೈಲಿನ ಪ್ರಯಾಣ ಎಲ್ಲಾ ಸೇರಿ ಸುಮಾರು 7 ದಿನ ಕಳೆದಿರಬಹುದು. ಇದ್ದಕ್ಕಿದ್ದಂತೆ ಸೇನೆಯಿಂದ ಒಂದು ಟೆಲಿಗ್ರಾಂ ಬಂತು. ತತ್ಕ್ಷಣ ಶ್ರೀನಗರಕ್ಕೆ ಆಗಮಿಸಿ ಕರ್ತವ್ಯಕ್ಕೆ ಹಾಜರಾಗುವುದು, ಇಷ್ಟೇ ಬರೆದಿತ್ತು. ಯಾಕೆ-ಏನು ಎಂದು ಗೊತ್ತಿಲ್ಲ. ರಜೆಯನ್ನು ಮೊಟಕುಗೊಳಿಸಿ ಕರ್ತವ್ಯಕ್ಕೆ ಮರಳಿದೆ. ಶ್ರೀನಗರಕ್ಕೆ ತಲುಪುವವರೆಗೂ ‘ಕಾರ್ಗಿಲ್ ಯುದ್ಧ’ ನಡೆಯಲಿದೆ ಎನ್ನುವ ಸಣ್ಣ ಸುಳಿವೂ ಕೂಡಾ ಸಿಕ್ಕಿರಲಿಲ್ಲ. ಅದರ ಅನಂತರ ನಡೆದಿರುವುದು ಎಲ್ಲ ಇತಿಹಾಸ. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯವರಾದ ಉಳ್ಳಾಲ ಪಿಲಾರು ಮೇಗಿನ ಮನೆಯ ಪ್ರವೀಣ್ ಶೆಟ್ಟಿ ಅವರು ಕಾರ್ಗಿಲ್ ಯುದ್ಧದ ತಮ್ಮ ಅನುಭವದ ಬಗ್ಗೆ ಮಾತನಾಡಲು ಆರಂಭಿಸಿದ್ದು ಹೀಗೆ. ಯುದ್ಧದಲ್ಲಿ ಪ್ರಮುಖ ಪಾತ್ರವಹಿಸಿದ್ದ ಭಾರತೀಯ ಸೇನೆಯಲ್ಲಿದ್ದ ಹೆವಿ ಮೋಟಾರ್ ರೆಜಿಮೆಂಟ್ನ ಯೋಧ ಪ್ರವೀಣ್. ಅದರಲ್ಲೂ ಅತೀ ಕಿರಿಯ ವಯಸ್ಸಿನ…
ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯೊಂದಿಗೆ ಜನಸಾಮಾನ್ಯರ ಬಹುತೇಕ ಬೇಡಿಕೆಗಳಿಗೆ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಪೂರಕವಾಗಿ ಸ್ಪಂಧಿಸಿದ್ದಾರೆ. ಅವರದ್ದೇ ಹಾದಿಯಲ್ಲಿ ಮುಂದುವರಿಯುತ್ತಾ ಕಾಪುವಿನ ಸುಂದರ ಭವಿಷ್ಯಕ್ಕಾಗಿ ದೂರದರ್ಶಿತ್ವದ ಯೋಜನೆಗಳುಳ್ಳ ಸಮಗ್ರ ಅಭಿವೃದ್ಧಿಯ ಕಲ್ಪನೆಯೊಂದಿಗೆ ನೀಲ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಲ್ಪನೆಯ ಸಾಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ವಿನಂತಿಸಿದ್ದಾರೆ. ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ವಾರ್ಡ್, ಪೊಲಿಪುಗುಡ್ಡೆ, ಭಾರತ್ನಗರ, ಕಲ್ಯ, ದಂಡತೀರ್ಥ, ಕೋತಲಕಟ್ಟೆ, ಕೈಪುಂಜಾಲು, ಕಾಪು ಪರಿಸರದಲ್ಲಿ ಮತಯಾಚನೆ ನಡೆಸಿ, ಜೇಸಿ ಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಮಹತ್ವಾಕಾಂಕ್ಷಿಯ ಜನೋಪಯೋಗಿ ಜನ ಸೇವಾ ಕಾರ್ಯಕ್ರಮಗಳು ಬಿಜೆಪಿಯ ಗೆಲುವಿಗೆ ಪೂರಕವಾಗಲಿವೆ. ಅದರ…
ಶ್ರೀ ಕೃಷ್ಣನಗರಿ ಉಡುಪಿಯ ರಥಬಿದಿಯಲ್ಲಿ ತಿಂಗಳ ಹಿಂದೆ ಸಾಗುತ್ತಾ ಇದ್ದೆ. ತಾಳೆ ಹಣ್ಣು ತುಂಬಿದ ಕೈಗಾಡಿಯೆದುರು ಹಿರಿಯ ಕಿರಿಯರು ತಾಳೆ ಸೊಳೆ ತಿನ್ನುವುದಕ್ಕೆ ಸೇರಿದ್ದರು. ಆರೋಗ್ಯದಾಯಕ ನೈಸರ್ಗಿಕ ಆಹಾರದ ಮಹತ್ವಕ್ಕೆ ಕೊಡಬೇಕಾದ ಕಾಲ ಘಟ್ಟವಿದು. ದೇಹದಲ್ಲಿ ರೋಗ ನೀರೊಧಕ ಶಕ್ತಿ ಹೆಚ್ಚಿಸಿಕೊಳ್ಳವುದರ ಮಹತ್ವದ ಅರಿವು ಇಂದು ಜನಸಾಮಾನ್ಯರಿಗೆ ಆಗಿದ್ದು, ತಾಳೆಹಣ್ಣು ತಿನ್ನುವುದರಲ್ಲಿ ಮುಗಿಬಿದ್ದರೊ ಎನಿಸಿತು. ಸರಿ ನಾನು ಹೋಗಿ ತಿಂದೆ. ಬಿಸಿಲ ಬೇಗೆಯಿಂದ ಧಣಿವಾರಿಸಿಕೊಳ್ಳಲು ಜನ ತಂಪು ಪದಾರ್ಥಗಳನ್ನೇ ಬಯಸುತ್ತಿದ್ದು ಅದರಲ್ಲಿ ಆರೋಗ್ಯಕ್ಕೆ ಹಿತಕರ ತಾಟಿನಿಂಗು ಪ್ರಮುಖ ಸ್ಥಾನದಲ್ಲಿದೆ. ಸಾಮಾನ್ಯವಾಗಿ ಎಪ್ರಿಲ್ ಆರಂಭದಲ್ಲಿ ಕೊಯ್ಲಿಗೆ ಬಂದರೆ ಜೂನ್ ಜುಲೈವರೆಗೂ ಲಭ್ಯವಿರುತ್ತದೆ. ಸಾಕಷ್ಟು ಔಷಧೀಯ ಗುಣಗಳ ಪೋಷಕಾಂಶಗಳ ಆಗರವಾಗಿದ್ದು ದೇಹಕ್ಕೆ ಚೈತನ್ಯ ನೀಡುತ್ತದೆ. ಮಾರುಕಟ್ಟೆಯಲ್ಲಿ ಅಷ್ಟೊಂದು ಬೇಡಿಕೆ ಇಲ್ಲದೆ ಇದ್ದ ಈ ಹಣ್ಣು ಇತ್ತೀಚೆಗೆ ಕೆಲ ವರ್ಷಗಳಿಂದ ಜನ ಮುಂಚಿತವಾಗಿ ನಿಗದಿಗೊಳಿಸಿ ತರಿಸಿಕೊಂಡು ತಿನ್ನುತ್ತಾರೆ. ದಾಹ ತಣಿಸುವ ತಾಟಿಹಣ್ಣು ಬೇಸಿಗೆಯಲ್ಲಿ ಮಾತ್ರವಲ್ಲ ವರ್ಷದ 12 ತಿಂಗಳಲ್ಲಿ ಬೇಡಿಕೆ ಇದ್ದು ಕೇವಲ ನೀರಡಿಕೆ ಇಂಗಿಸುವುದಕ್ಕಷ್ಟೆ…
ಕಳೆದ 5 ವರ್ಷಗಳಲ್ಲಿ ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸುಮಾರು 2095 ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗಿದ್ದು, ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಹಲವು ಯೋಜನೆಗಳ ಅನುಷ್ಠಾನಕ್ಕೆ ಕ್ಷೇತ್ರದ ಮತದಾರರು ಮತ್ತೂಮ್ಮೆ ಆಶೀರ್ವಾದ ಮಾಡಬೇಕು ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಮನೆ ಮನೆ ಭೇಟಿಯ ಮೂಲಕ ಮತಯಾಚನೆ ನಡೆಸಿ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದರು. ನಾನು ಶಾಸಕನಾಗುವ ಮೊದಲು ಬಂಟ್ವಾಳದಲ್ಲಿ ಬರೀ ಕೋಮು ಗಲಭೆಗಳು, ಹತ್ಯೆಗಳು, ಇನ್ನಿತರ ಅಹಿತಕರ ಘಟನೆಗಳು ಮರುಕಳಿಸುತ್ತಲೇ ಇತ್ತು. ಹೀಗಾಗಿ ತಾನು ಶಾಸಕನಾದರೆ ಶಾಂತಿಯ ಬಂಟ್ವಾಳವನ್ನು ನಿರ್ಮಾಣ ಮಾಡಬೇಕು ಎಂಬ ಪಣತೊಟ್ಟಿದ್ದು, ಅದರಂತೆ ಕಳೆದ 5 ವರ್ಷಗಳಿಂದ ಒಂದೇ ಒಂದು ಕೋಮುಗಲಭೆ, ಕೊಲೆಗಳು ನಡೆಯದೆ ಶಾಂತಿಯ ಬಂಟ್ವಾಳ ನಿರ್ಮಾಣವಾಗಿದೆ. ಗ್ರಾಮೀಣ ಭಾಗಗಳಿಗ ತೆರಳಿದ ಸಂದರ್ಭ ಕ್ಷೇತ್ರದ ಜನತೆ ಇದೇ ಮಾತನ್ನು ಹೇಳಿ ಮತ್ತೊಮ್ಮೆ ಗೆಲ್ಲಿಸುವ ಭರವಸೆ ನೀಡುತ್ತಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ…
ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಭಾರತಿ ಜಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಕೇಸರಿ ಎಸ್ ಪೂಂಜ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ ಶೆಟ್ಟಿ, ಮಹಿಳಾ ವೇದಿಕೆಯ ಮಾಜಿ ಅಧ್ಯೆಕ್ಷೆ, ಆಶಾ ಶೆಟ್ಟಿ ಬೇಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
80,90 ದಶಕದವರಿಗೆ ದೂರದರ್ಶನ ಅಂದ್ರೆ ಒಂದು ರೋಮಾಂಚನಕಾರಿ ಅನುಭವ. ಅದರೊಂದಿಗೆ ಒಂದು ಅವಿನಾಭಾವ ನಂಟು ಬೆಳೆದಿರುತ್ತೆ. ಅದ್ರಲ್ಲೂ ಹಳ್ಳಿಯವರಾದರೆ ಆ ನಂಟಿನ ಸೊಗಸೇ ಅದ್ಭುತ. ಈಗಲೂ ಆ ದಿನಗಳನ್ನು ನೆನಪಿಸಿ ಮಿಸ್ ಮಾಡಿಕೊಳ್ಳೋರಿಗೆ ಆ ಮಜಭೂತನ್ನು ತೆರೆ ಮೇಲೆ ಕಟ್ಟಿಕೊಡಲು ಸಿದ್ದವಾಗಿರೋ ಸಿನಿಮಾ ‘ದೂರದರ್ಶನ’. ಟೈಟಲ್ ಕೇಳಿದಾಕ್ಷಣ ಬಹಳ ಬೇಗ ಕನೆಕ್ಟ್ ಆಗುತ್ತೆ ಅದೇ ರೀತಿ ಸಿನಿಮಾ ಕೂಡ ಹಳ್ಳಿ ಸೊಗಡಲ್ಲೇ ಮೋಡಿ ಮಾಡೋಕೆ ಸಿದ್ದವಾಗಿದೆ. ಹಾಡುಗಳ ಮೂಲಕ ಮೋಡಿ ಮಾಡಿರೋ ‘ದೂರದರ್ಶನ’ ಚಿತ್ರತಂಡ ಪ್ರಾಮಿಸಿಂಗ್ ಆಗಿರೋ ಟೀಸರ್ ಬಿಡುಗಡೆ ಮಾಡಿದೆ. ಮಾಸ್ ಸಿನಿಮಾ ಭರಾಟೆಯಲ್ಲಿ ಹಳ್ಳಿ ಸೊಗಡಿರೋ, ಹಳ್ಳಿಯಲ್ಲಿ ನಡೆಯೋ ಕಥಾನಕಗಳಿರೋ ಸಿನಿಮಾಗಳು ಕಡಿಮೆ ಆಗಿದೆ ಅನ್ನೋರಿಗೆ ಪಕ್ಕಾ ಹಳ್ಳಿ ಸೊಗಡಿರೋ, 80, 90 ದಶಕದ ಚಿತ್ರಣವನ್ನೊಳಗೊಂಡ ‘ದೂರದರ್ಶನ’ ಸಿನಿಮಾ ಮನರಂಜನೆ ನೀಡಲು ಸಜ್ಜಾಗಿದೆ. ಹಾಗೆಂದ ಮಾತ್ರಕ್ಕೆ ಕ್ಲಾಸ್ ಆಡಿಯನ್ಸ್ ಸಿನಿಮಾವೇನಲ್ಲ. ಮಾಸ್ ಆಡಿಯನ್ಸ್ ಗಳನ್ನು ಸೆಳೆಯೋ ಕಟೆಂಟ್ ಚಿತ್ರದಲ್ಲಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಪ್ರಾಮಿಸಿಂಗ್ ಟೀಸರ್ ಬಿಡುಗಡೆ ಮಾಡಿ…
ಕ್ರೀಡೆ ಸಹಬಾಳ್ವೆ ಹಾಗೂ ಭ್ರಾತ್ವತ್ವದ ಸಂಕೇತ ಮಾತ್ರವಲ್ಲದೆ, ಜೀವನ ಕೌಶಲಗಳನ್ನು ಕಲಿಸಿಕೊಡುವುದರ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವಲ್ಲಿ ಸಹಕರಿಸುತ್ತದೆ ಎಂದು ಟೋರ್ಪೆಡೋಸ್ ಟೆನ್ನಿಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟಕರಾಗಿ ಮಾತನಾಡುತ್ತಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ನಿರ್ದೇಶಕ ಪ್ರೊ ವೈ.ವಿ. ರತ್ನಾಕರ್ ರಾವ್ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಪ್ರಾಂಶುಪಾಲೆ ಲಕ್ಷ್ಮೀ ಪಿ, ಉಪಪ್ರಾಂಶುಪಾಲೆ ಸುನೀತಾ ಕೆ, ವಿದ್ಯಾರ್ಥಿ ಕ್ಷೇಮಪಾಲೆ ಪಲ್ಲವಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ನಿಖಿಲ್ ಭೂಷಣ್ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಅನೀಶ್ ಶೆಟ್ಟಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ನಿಹಾರಿಕಾ ಅತಿಥಿಗಳ ಪರಿಚಯ ನೆರವೇರಿಸಿದರು. ಗಣಕಶಾಸ್ತ್ರ ಉಪನ್ಯಾಸಕರಾದ ರಾಕೇಶ್ ಹೊಸಬೆಟ್ಟು ವಂದಿಸಿದರು. ಯಶ್ರಿತಾ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ವಿವಿಧ ಕ್ರೀಡಾ ಸ್ವರ್ಧೆಗಳು ನಡೆದವು.