Author: admin
ಸೋಲಿನ ಮೂಲಕವೇ ಗೆಲುವಿನ ಮೆಟ್ಟಿಲು ಸುಲಭವಾಗುತ್ತದೆ. ನಾನು ಕೂಡ ಬಹಳಷ್ಟು ಸ್ಪರ್ಧೆಗಳಲ್ಲಿ ಸೋಲು ಕಂಡಿದ್ದೇನೆ. ಆದರೆ ಸೋಲಿಗೆ ಹೆದರಿ ನನ್ನ ಕನಸನ್ನು ಸಾಕಾರ ಮಾಡುವ ಬಗ್ಗೆಯೇ ಯೋಚಿಸುತ್ತಿದ್ದೆ. ಇದರ ಪರಿಣಾಮವೇ ಇಂದಿನ ಫಲಿತಾಂಶ ಎನ್ನುತ್ತಾರೆ ಮಿಸ್ ಇಂಡಿಯಾ ಯುನಿವರ್ಸ್ – 2022 ಆಗಿ ಆಯ್ಕೆಗೊಂಡ ಮಂಗಳೂರು ಮೂಲದ ದಿವಿತಾ ರೈ. ಮಿಸ್ ಯಿನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ದಿವಿತಾ ರೈ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಬಂಟ್ಸ್ ಹಾಸ್ಟೆಲ್ ನ ಗೀತಾ ಎಸ್. ಎಂ ಶೆಟ್ಟಿ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಹುಟ್ಟೂರ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸೋಲು ಸಾಮಾನ್ಯ. ಇದಕ್ಕಾಗಿ ಭಯ ಬೇಡ. ಹಿಂದೆ ಸರಿಯಲೂ ಬಾರದು. ಕನಸುಗಳ ಸಾಕಾರಕ್ಕಾಗಿ ಧೈರ್ಯದಿಂದ ಮುನ್ನುಗ್ಗುವ ಹಾಗೂ ವಿಶ್ವಾಸದಿಂದ ಗುರಿ ಮುಟ್ಟುವ ಮನೋಭಾವ ಬೇಕು. ಬಂಟರ ಸಮಾಜ ಹೋರಾಟದ ಮನೋಭಾವವನ್ನು ಮೈಗೂಡಿಸಿದೆ, ಇದೇ ಸಮುದಾಯದಲ್ಲಿ ಹುಟ್ಟಿದ ನಾನು…
ಬಂಟರ ಸಂಘ ಮುಂಬಯಿ ಇದರ ನೂತನ ಟ್ರಸ್ಟಿಯಾಗಿ ಸರ್ವಾನುಮತದಿಂದ ನೇಮಕಗೊಂಡಿರುವ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ದಾಸ್ ಶೆಟ್ಟಿಯವರನ್ನು ಸೊಸೈಟಿಯ ಮಾಸಿಕ ಸಭೆಯಲ್ಲಿ ಮಾತೃಭೂಮಿ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಯ ಉಪ ಕಾರ್ಯಾಧ್ಯಕ್ಷ ಡಾ ಆರ್ ಕೆ ಶೆಟ್ಟಿ, ಗೌರವ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಗೌರವ ಕೋಶಾಧಿಕಾರಿ ಸಿಎ ಹರೀಶ್ ಶೆಟ್ಟಿಯವರು ಗೌರವಿಸಿದರು. ಈ ಸಂದರ್ಭದಲ್ಲಿ ಮಾತೃಭೂಮಿ ಸೊಸೈಟಿಯ ನಿರ್ದೇಶಕರಾದ ಮಹೇಶ್ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅಧ್ಯಾತ್ಮಿಕತೆಯೊಂದಿಗೆ ಕೂಡಿ ಬದುಕುವ ಕಲೆ, ಜೀವನ ಮೌಲ್ಯ, ಆದರ್ಶಗಳಿಂದ ಸಂಸ್ಕಾರಯುತವಾದ ಜೀವನ ಸಾಧ್ಯ. ನಮ್ಮ ಪೌರಾಣಿಕ ಹಿನ್ನಲೆಯ ಯಕ್ಷಗಾನದಿಂದ ಭಾಷಾ ಶುದ್ದತಿ, ತತ್ವ ಮತ್ತು ಚರಿತ್ರೆಯನ್ನು ತಿಳಿದಂತೆ ಭಕ್ತಿ ಮತ್ತು ಸಂಸ್ಕಾರ ಪಾಠವನ್ನು ಭಜನೆ ಕಳಿಸುತ್ತದೆ. ಸುಜ್ಞಾನದಿಂದ ಕೂಡಿದ ಉತ್ತಮ ವಿಚಾರಗಳೊಂದಿಗೆ ಮಕ್ಕಳಿಗೆ ಸಂಸ್ಕಾರ, ಧರ್ಮದ ಪ್ರಜ್ಞೆಯನ್ನು ಕಳಿಸುವ ಕಾರ್ಯ ಆಗಬೇಕು. ಅದು ಇಂದು ಇಲ್ಲಿ ಉತ್ತಮ ಕಾರ್ಯ ಸೇವಾ ಬಳಗದಿಂದ ನಡೆದಿದೆ. ಭಾರತದ ಮೂಲ ಕೃಷಿ ಸಂಸ್ಕ್ರತಿಯಿಂದ ಹಳ್ಳಿಯಿಂದ ದೇಶದ ಪ್ರಗತಿಯಾದಂತೆ ಋಷಿ ಪರಂಪರೆಯಿಂದ ಸಂಸ್ಕ್ರತಿ, ಧರ್ಮ ಸಂರಕ್ಷಣೆ ಕಾರ್ಯ ಆಗುತ್ತಿದೆ. ತ್ಯಾಗ ಮತ್ತು ಸೇವೆಯಿಂದ ಸಮಾಜದ ಅಭಿವೃದ್ಧಿ ಸಾದ್ಯ. ಪ್ರತಿಯೊಂದು ಉತ್ತಮ ವಿಚಾರಗಳು ಸಂಸ್ಕಾರಯುತವಾಗಿ ನಡೆದರೆ ಸದೃಡ ಸಮಾಜ ನಿರ್ಮಾಣ ಆಗಬಹುದು ಎಂದು ಒಡಿಯೂರು ಶ್ರೀ ಗುರುದೇವ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಆಶೀರ್ವಚನ ನೀಡಿದರು. ನವೆಂಬರ್ 26 ರಂದು ಪುಣೆಯ ಬಾಣೇರ್ ನಲ್ಲಿರುವ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಕೇಂದ್ರದಲ್ಲಿ ಜರಗಿದ ಪುಣೆ…
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.: 2023-24ನೇ ಸಾಲಿನ ಅರ್ಧ ವರ್ಷಾಂತ್ಯಕ್ಕೆ ರೂ. 900 ಕೋಟಿಮೀರಿದ ಒಟ್ಟು ವ್ಯವಹಾರ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಗಳಲ್ಲೊಂದಾದ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯು, 2023-24ನೇ ಸಾಲಿನ ಅರ್ಧ ವಾರ್ಷಿಕ ಅವಧಿ ದಿನಾಂಕ 30.09.2023ಕ್ಕೆ ರೂ. 900 ಕೋಟಿ ಮೀರಿದ ಒಟ್ಟು ವ್ಯವಹಾರವನ್ನು ದಾಖಲಿಸಿ ಪ್ರಗತಿ ಪಥದಲ್ಲಿ ಯಶಸ್ಸಿನ ಹೊಸ ಮೈಲಿಗಲ್ಲನ್ನು ದಾಟಿದ ಸಾಧನೆ ಮಾಡಿದೆ. ದಿನಾಂಕ30.09.2023ಕ್ಕೆಠೇವಣಾತಿಯು ರೂ.484 ಕೋಟಿ,ಹೊರಬಾಕಿ ಸಾಲ ರೂ.417 ಕೋಟಿ,ಒಟ್ಟು ವ್ಯವಹಾರ ರೂ.901 ಕೋಟಿಯನ್ನು ಮೀರಿದ್ದು ತನ್ನ “Vision 2025”ರರೂ. 1,000 ಕೋಟಿ ಒಟ್ಟು ವ್ಯವಹಾರದ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ದೃಢ ಹೆಜ್ಜೆಯೊಂದಿಗೆ ಮುನ್ನಡೆಯುತ್ತಿದೆ. ಹಿಂದಿನ ಸಾಲಿನ30.09.2022ಕ್ಕೆಹೋಲಿಸಿದಾಗ, ಠೇವಣಾತಿಯು ರೂ. 72 ಕೋಟಿ ಹೆಚ್ಚಳಗೊ0ಡು ಶೇ.18 ರಷ್ಟು ವೃದ್ಧಿಗೊ0ಡಿರುವುದು, ಹೊರಬಾಕಿ ಸಾಲವು ರೂ.75 ಕೋಟಿ ಹೆಚ್ಚಳಗೊ0ಡು ಶೇ.22ರಷ್ಟು ವೃದ್ಧಿಗೊ0ಡಿರುವುದು, ಒಟ್ಟು ವ್ಯವಹಾರವು ರೂ.148 ಕೋಟಿ ಹೆಚ್ಚಳಗೊ0ಡು ಶೇ.20 ರಷ್ಟು ವೃದ್ಧಿಯಾಗಿರುವುದು.ನಿವ್ವಳ ಅನುತ್ಪಾದಕ ಆಸ್ತಿಯು ಕಳೆದ 16 ವರ್ಷಗಳಿಂದ ಶೂನ್ಯ ಪ್ರಮಾಣದಲ್ಲಿರುವುದು.ಸ್ಥಾಪನೆಯಾದಾಗಿನಿಂದಲೂ ಡಿವಿಡೆಂಡ್ ನೀಡುತ್ತಿರುವ ಸಂಸ್ಥೆ, ಕಳೆದ 5ವರ್ಷಗಳಿಂದ ಸದಸ್ಯರಿಗೆ ನಿರಂತರವಾಗಿ ಶೇ. 25 ಡಿವಿಡೆಂಡ್ ನೀಡುತ್ತಿರುವುದು.…
ಯುವ ಬಂಟರ ಸಂಘ ಕುಂದಾಪುರ ಹಾಗೂ ಡಾ. ಅಂಪಾರು ನಿತ್ಯಾನಂದ ಶೆಟ್ಟಿ. ಹೌದು ಬಂಟ ಸಮಾಜದಲ್ಲಿ ಸಂಚಲನ ಮೂಡಿಸಿರುವ ಸಂಘಟನೆ ಮತ್ತು ಯುವ ನಾಯಕ. ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಬಂಟ ಸಮುದಾಯ ವಿಶೇಷ ಸ್ಥಾನಮಾನ ಪಡೆದ ಒಂದು ಸಮುದಾಯ. 2000 ಇಸವಿಯಲ್ಲಿ ಆರಂಭವಾದ ಕುಂದಾಪುರ ಬಂಟರ ಯಾನೆ ನಾಡವರ ಸಂಘದಲ್ಲಿ ಡಾ. ಯಡ್ತರೆ ನರಸಿಂಹ ಶೆಟ್ಟಿ, ಶ್ರೀ ಬಿ. ಅಪ್ಪಣ್ಣ ಹೆಗ್ಡೆ , ಶ್ರೀ ಅರುಣ್ ಕುಮಾರ್ ಶೆಟ್ಟಿ ಅಂತಹ ಹಿರಿಯ ಮುತ್ಸದ್ದಿಗಳು ಅಧ್ಯಕ್ಷರಾಗಿ ಮಹತ್ತರವಾದ ಕೊಡುಗೆಗಳನ್ನು ಈ ಸಮಾಜಕ್ಕೆ ನೀಡಿದವರು. ಅವರ ಮುಂದುವರಿಕೆಯ ಭಾಗವಾಗಿ ಇವತ್ತು ಅಂಪಾರು ಮುಂಚೂಣಿಯಲ್ಲಿ ಇದ್ದಾರೆ. ಇಂದು ಕುಂದಾಪುರ ಬೈಂದೂರು ತಾಲೂಕಿನಲ್ಲಿ ಅತ್ಯಂತ ಪ್ರಭಾವಿ ಯುವ ನಾಯಕನಾಗಿ ಬಂಟ ಸಮುದಾಯದಲ್ಲಿ ಗುರುತಿಸಿಕೊಳ್ಳುತ್ತಿರುವ ಹೆಸರೇ ಡಾ. ಅಂಪಾರು ನಿತ್ಯಾನಂದ ಶೆಟ್ಟಿ. ಬಂಟ ಸಮುದಾಯಕ್ಕೆ ಅವರು ನೀಡಿದ ಸೇವೆಗೆ ಇಡೀ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಹೆಸರು ಗುರುತಿಸಲ್ಪಟ್ಟಿದೆ ಎಂದರೆ ತಪ್ಪಾಗಲಾರದು. ಅವರ ಬದುಕಿನ ದಾರಿಯನ್ನು ನೋಡಿದರೆ ಇಂದಿನ…
ನಿರಂತರ ಸಮಾಜೋಮುಖಿ ಕಾರ್ಯಗಳನ್ನೇ ತನ್ನ ಉಸಿರಾಗಿಸಿಕೊಂಡ ಪಡುಬಿದ್ರಿಯ ಆದ್ಯಾ ಫೌಂಡೇಷನ್ ವತಿಯಿಂದ ಶ್ರೀಯುತ ರಾಕೇಶ್ ಅಜಿಲ ನೇತೃತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಪಡುಬಿದ್ರಿ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಸರಳ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ಮೊಕ್ತೇಸರರಾದ ಜಿತೇಂದ್ರ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಸ್ಥಳೀಯ ಪ್ರಮುಖರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಅಶೋಕ ಪೂಜಾರಿ, ಗೀತಾ ಪ್ರಭಾಕರ್, ಶೋಭಾ ಜೆ. ಶೆಟ್ಟಿ, ಸಂದೇಶ್ ಶೆಟ್ಟಿ, ಮಕರಂದ್ ಸಾಲ್ಯಾನ್, ಪತ್ರಕರ್ತ ಸುರೇಶ್ ಎರ್ಮಾಳ್, ನಾಗರಾಜ್ ವರ್ಕಾಡಿ ಉಪಸ್ಥಿತರಿದ್ದರು.
ಬಂಟ ಸಮಾಜದ ಹೆಮ್ಮೆಯ ಸುಪುತ್ರ ಸರ್ವ ಸಮಾಜದ ಏಳಿಗೆಗೆ ಮಹಾನ್ ಕೊಡುಗೆ ನೀಡಿ ಪ್ರಾತಃ ಸ್ಮರಣೀಯರು ಆಗಿರುವ ಶ್ರೀ ಸುಂದರರಾಮ್ ಶೆಟ್ಟಿಯವರ ನೆನಪಿನಲ್ಲಿ ಸುಂದರ್ ರಾಮ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಮತ್ತು ಮುಲ್ಕಿ ಬಂಟರ ಸಂಘ ಜಂಟಿಯಾಗಿ ನೀಡುವ ಸುಂದರರಾಮ್ ಶೆಟ್ಟಿ ಸ್ಮಾರಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಈ ಸಮಾರಂಭವು ಮುಲ್ಕಿ ಬಂಟರ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಶೆಟ್ಟಿ, ಮಾತೃಭೂಮಿ ಕೋ ಆಪರೇಟಿವ್ ಸೊಸೈಟಿ ಯ ನಿಕಟ ಪೂರ್ವ ಅಧ್ಯಕ್ಷರಾದ ಮುಡ್ಕುರು ಶ್ರೀ ರತ್ನಾಕರ ಶೆಟ್ಟಿ,ಶ್ರೀ ಸುಚರಿತ ಶೆಟ್ಟಿ, ಮುಲ್ಕಿ ಬಪ್ಪನಾಡು ದೇವಸ್ಥಾನದ ಮೊಕ್ತೇಸರ ಶ್ರೀ ಮನೋಹರ್ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷರು ಶ್ರೀಪುರುಷೋತ್ತಮ ಶೆಟ್ಟಿ, ಗೌರವ ಅಧ್ಯಕ್ಷರು ಶ್ರೀ ಸಂತೋಷ್ ಕುಮಾರ್ ಹೆಗ್ಡೆ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಶುಭಾಶಂಸನೆ ಶ್ರೀ ಕುದಿ…
ಮಂಗಳೂರು ನಗರದಿಂದ ಕೇವಲ 10 ಕಿ. ಮೀ, ದೂರದ ಮಂಗಳೂರು – ಕಾರ್ಕಳ ರಾಷ್ಟೀಯ ಹೆದ್ದಾರಿ ಹಾದು ಹೋಗುವ ವಾಮಂಜೂರಿನ ತಿರುವೈಲು ಪರಿಸರದ ಆಕರ್ಷಕ ಕಣಿವೆ ಪ್ರದೇಶದ ಪ್ರಕೃತಿ ರಮಣೀಯ ಸೌಂದರ್ಯದ ನಡುವೆ ಕಳೆದ 25 ವರ್ಷಗಳಿಂದ ರಾರಾಜಿಸುತ್ತಿರುವ ಮಾತ್ರವಲ್ಲದೇ, ಸಹಸ್ರ ಸಹಸ್ರ ವಿದ್ಯಾರ್ಥಿಗಳ ಉಜ್ಜಲ ಭವಿಷ್ಯಕ್ಕೆ ಬುನಾದಿ ಹಾಕಿಕೊಟ್ಟ ಜಾಣು ಶೆಟ್ಟಿ ಮೆಮೋರಿಯಲ್ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಆಡಳಿತದಲ್ಲಿರುವ ಅಮೃತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬೆಳ್ಳಿ ಹಬ್ಬ ಸಮಾರಂಭ ಜನವರಿ 18 ರಂದು ನಡೆಯಲಿದೆ. ಹಾಗೆಯೇ ಮೂರು ಅಂತಸ್ತಿನ ಸಕಲ ಸೌಕರ್ಯಗಳುಳ್ಳ ಸುಸಜ್ಜಿತ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ಜನವರಿ 17 ರಂದು ಸಂಜೆ 5ರಿಂದ 10 ರ ತನಕ ಬಹಳ ವಿಜೃಂಭಣೆಯಿಂದ ನಡೆಯಲಿದೆ. 1925 ರಲ್ಲಿ ಶ್ರೀ ಕ್ಷೇತ್ರ ಅಮೃತೇಶ್ವರ ದೇವಸ್ಥಾನದ ಸುತ್ತಮುತ್ತದ ನೂರಾರು ಮಕ್ಕಳಿಗಾಗಿ ಸರಕಾರದಿಂದ ಸ್ಥಾಪಿಸಲ್ಪಟ್ಟ ಪ್ರಾಥಮಿಕ ಶಾಲೆ ನಂತರ 1963 ರಲ್ಲಿ ವಾಮಂಜೂರು ಪದವಿಗೆ ಸ್ಥಳಾಂತರಗೊಂಡು ತಿರುವೈಲು ಪರಿಸರದ ಮಕ್ಕಳು…
ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್ ಮಹಾರಾಷ್ಟ್ರ ಇದರ 4ನೇ ಮಹಾರಾಷ್ಟ್ರ ರಾಜ್ಯ ಮಾಸ್ಟರ್ಸ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಮ್ಯಾರಥಾನ್ ಪಟು, ರಾಷ್ಟೀಯ ಅಂತಾರಾಷ್ಟ್ರೀಯ ಮಟ್ಟದ ಅತ್ಲೀಟ್, ತುಳು – ಕನ್ನಡಿಗ ಶಿವಾನಂದ ಶೆಟ್ಟಿ ಚಿನ್ನ ಗೆದ್ದಿದ್ದಾರೆ. ನ.19 ರಂದು ನಾಸಿಕ್ ನ ಮೀನಾ ತಾಯಿ ಠಾಕ್ರೆ ಮೈದಾನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ 45 ವರ್ಷ ಮೇಲ್ಪಟ್ಟವರ 5 ಸಾವಿರ ಮೀಟರ್ ಓಟದಲ್ಲಿ ಚಿನ್ನದ ಪದಕ ಜಯಿಸಿರುವ ಶಿವಾನಂದ ಶೆಟ್ಟಿ 2024ರ ಫೆಬ್ರವರಿಯಲ್ಲಿ ಗೋವಾದಲ್ಲಿ ನಡೆಯಲಿರುವ 6ನೇ ವಾರ್ಷಿಕ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ. ಇವರು ನ.19 ರಂದು ಮುಂಬಯಿಯಲ್ಲಿ ನಡೆದ ಡಬ್ಲ್ಯೂಎನ್ ಐ ನೇವಿ ಹಾಫ್ ಮ್ಯಾರಥಾನ್ ನಲ್ಲಿ 46-59 ವಯೋಮಿತಿಯ ವಿಭಾಗದಲ್ಲಿ 3ನೇ ಸ್ಥಾನ, ನ. 26 ರಂದು ನವಿಮುಂಬಯಿಯಲ್ಲಿ ನಡೆದ ನವಿಮುಂಬಯಿ ಎನ್ ಎಂಎಂಸಿಎಸ್ ಹಾಫ್ ಮ್ಯಾರಥಾನ್ 42-50 ವಯೋಮಿತಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಸ್ವರ್ಧೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಕ್ರೀಡಾಳುಗಳು ಭಾಗವಹಿಸಿದ್ದರು. ನ.5…
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಮತ್ತು ಶಾಸಕಾಂಗ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಕರ್ನಾಟಕ ಮೂಲದ ಬಂಟ ಸಮಾಜದ ಉದಯ ಕುಮಾರ್ ಶೆಟ್ಟಿ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ. ಉದಯ ಕುಮಾರ್ ಶೆಟ್ಟಿ ಈ ಹಿಂದೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ಶಾಸಕಾಂಗ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಈಗ ಹೆಚ್ಚುವರಿ ಕಾರ್ಯದರ್ಶಿಯಾಗಿ ಭಡ್ತಿ ಪಡೆದಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕರ್ನಾಟಕದ ಅಧಿಕಾರಿಯೊಬ್ಬರು ಕಾನೂನು ಸಚಿವಾಲಯದ ಉನ್ನತ ಹುದ್ದೆಗೇರಿದಂತಾಯಿತು. ಪ್ರಸ್ತುತ ಅವರು ಗುಜರಾತ್ ನ ರಾಷ್ಟೀಯ ರಕ್ಷಾ ವಿವಿ ಆಡಳಿತ ಮಂಡಳಿಯ ಎಕ್ಸ್ – ಆಫಿಷಿಯೋ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 2003 ಬ್ಯಾಚ್ ನ ಭಾರತೀಯ ಕಾನೂನು ಸೇವೆಗೆ ಸೇರಿದ ಶೆಟ್ಟಿಯವರು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದವರು. ಉದಯ ಕುಮಾರ್ ಶೆಟ್ಟಿ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಎಲ್ಎಲ್ ಬಿ ಮಾಡಿ ನಂತರ ಬೆಂಗಳೂರು ವಿವಿಯಿಂದ ಕಾರ್ಮಿಕ ಕಾನೂನುಗಳಲ್ಲಿ ಎಲ್ ಎಲ್…














