Author: admin

ವಿದ್ಯಾಗಿರಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಸಹಯೋಗದಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಯಕ್ಷರೂಪಕ ಸ್ಪರ್ಧೆಗಳಲ್ಲಿ ಮುಲ್ಲಕಾಡು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ (ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆ) ತಂಡ ಹಾಗೂ ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (ಪ್ರೊ.ಎಂ.ಎ.ಹೆಗಡೆ  ವೇದಿಕೆ) ತಂಡಗಳು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡವು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ನಡೆದ ಯಕ್ಷರೂಪಕ ಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಯ ರಾಕೇಶ್ ರೈ ಅಡ್ಕ ನೇತೃತ್ವದ ತಂಡವು ದಶಾವತಾರ ಆಖ್ಯಾನಕ್ಕೆ ಪ್ರಥಮ ತಂಡ ಪ್ರಶಸ್ತಿ ಪಡೆಯಿತು. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ(ಗುರುಪುರ)ಯ ದೀವಿತ್ ಎಸ್. ಕೆ. ಪೆರಾಡಿ ನೇತೃತ್ವದ ತಂಡವು ಶ್ರೀ ರಾಮಾಯಣ ದರ್ಶನಂ ಆಖ್ಯಾನಕ್ಕೆ ದ್ವಿತೀಯ ಹಾಗೂ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ (ಹರೇಕಳ)ಯ ಅಶ್ವತ್ ಮಂಜನಾಡಿ ನೇತೃತ್ವದ ತಂಡವು ಕ್ಷೀರಾಬ್ಧಿ ಮಥನ ಆಖ್ಯಾನಕ್ಕೆ ತೃತೀಯ ತಂಡ ಪ್ರಶಸ್ತಿ…

Read More

ನಿರಂತರ ಅಭ್ಯಾಸ, ಪ್ರಾಮಾಣಿಕತೆ, ಆತ್ಮವಿಶ್ವಾಸದ ಜತೆಗೆ ಕೌಶಲಾಭಿವೃದ್ಧಿಯಿಂದ ಸುಭದ್ರ ಬದುಕು ಕಟ್ಟಿಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಕೌಶಲಾಭಿವೃದ್ಧಿ, ಉದ್ಯೋಗಾವಕಾಶ, ಉಚಿತ ಕಂಪ್ಯೂಟರ್ ತರಬೇತಿಯ ಸದಾವಕಾಶ ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಿರಿ ಎಂದು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಕರೆ ನೀಡಿದರು. ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ ನ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಪ್ರಾಯೋಜಕತ್ವದಲ್ಲಿ ನಡೆದ 14ನೇ ಬ್ಯಾಚ್ ನ ಉಚಿತ ಕಂಪ್ಯೂಟರ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಪಡುಬಿದ್ರಿ ಬಂಟರ ಸಂಘ ಮತ್ತು ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಆತ್ಮಸ್ಥೈರ್ಯದೊಂದಿಗೆ ನಿಖರ ಗುರಿಯೊಂದಿಗೆ ಭವಿಷ್ಯವನ್ನು ಸುಭದ್ರಗೊಳಿಸಿರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ 13 ನೇ…

Read More

ವಿದ್ಯಾಗಿರಿ: ‘ಪ್ರಸ್ತುತ ಬೇಡಿಕೆಗೆ ಅನುಗುಣವಾಗಿ ನಾವು ನಮ್ಮನ್ನುಅಳವಡಿಸಿಕೊಳ್ಳಬೇಕು’ಎಂದುಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ  ಪ್ರಾಂಶುಪಾಲ ಡಾ.ಗುರುರಾಜ ಎಚ್. ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ವತಿಯಿಂದ ಬುಧವಾರ ಡಾ.ವಿಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ 2020-2021 ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಂಪನ್ನಮ್ ಸಮಾರಂಭದಲ್ಲಿ ಅವರು ಮಾತನಾಡಿದರು. ಎನ್‍ಎಬಿಎಚ್, ಎನ್‍ಎಎಸಿ ನಂತಹ ಮಾನ್ಯತೆ ಪಡೆಯುವುದು ಬಹುಮುಖ್ಯ. ವೈದ್ಯಕೀಯ ಆಕಾಂಕ್ಷಿಗಳು ಅಂತಹ ಮಾನ್ಯತೆ ಪಡೆದ ಸಂಸ್ಥೆಯನ್ನು ಆಯ್ಕೆ ಮಾಡುತ್ತಾರೆ ಎಂದರು. ಇಂದು ಹೆಚ್ಚಿನ ರೋಗಿಗಳು ಗೂಗಲ್ ಮತ್ತು ಇತರ ಸಾಮಾಜಿಕ ಜಾಲತಣವನ್ನು ಬಳಸಿ ವೈದ್ಯರನ್ನು ಆಯ್ಕೆ ಮಾಡುತ್ತಾರೆ. ಆದ್ದರಿಂದ ನೀವು ಅಂತಹದರಲ್ಲಿ ಸಕ್ರಿಯರಾಗಿರಬೇಕು ಎಂದರು. ನಾವು ಮಾನಸಿಕ ಚಿಕಿತ್ಸಕರು, ಶ್ರವಣಶಾಸ್ತ್ರಜ್ಞರು, ಸ್ಪೀಚ್ ಚಿಕಿತ್ಸಕರು, ಮನೋವೈದ್ಯರಂತಹ ಸಮಕಾಲೀನ ಜನರೊಂದಿಗೆ ಸಂಪರ್ಕ ಹೊಂದಬೇಕು, ನಾವು ಸಾಮಾನ್ಯವಾಗಿ ಅಂತಹ ಚಿಕಿತ್ಸೆಯೊಂದಿಗೆ ವ್ಯವಹರಿಸುತ್ತೇವೆ. ನಾವು ಯಾವುದೇ ರೀತಿಯ ಚಿಕಿತ್ಸೆಯನ್ನು ಅಳವಡಿಸಿಕೊಂಡರೂ ಉತ್ತಮ ಫಲಿತಾಂಶ ನೀಡಲು ಅವರ ಸಹಭಾಗಿತ್ವದ ಅಗತ್ಯ ಇದೆ ಎಂದರು. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಷ್ಟಪಟ್ಟು ಕೆಲಸ…

Read More

ಪುಣೆ ಬಂಟ್ಸ್ ಅಸೋಸಿಯೇಷನ್ ನ ಹನ್ನೊಂದನೇ ವಾರ್ಷಿಕೊತ್ಸವ ಸಮಾರಂಭವು ಫೆಬ್ರವರಿ 3 ರಂದು ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನ ಬಂಟರ ಭವನ ಬಾಣೇರ್ ಇಲ್ಲಿ ಜರಗಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಹರೀಶ್ ಪೂಂಜಾರವರು, ನಮ್ಮ ಸಂಸ್ಕ್ರತಿ ಸಂಸ್ಕಾರವೇ ನಮ್ಮ ವೈಭವಕ್ಕೆ ಮೂಲ ಕಾರಣ. ಈ ಸಂಸ್ಕಾರದ ಮೂಲ ನಮ್ಮ ಪೂರ್ವಜರು ಹಿರಿಯರು ಹಾಕಿಕೊಂಡಿರುವ ಸಾಂಸಾರಿಕ, ಪ್ರಾಕೃತಿಕವಾದ ಆಚಾರ ವಿಚಾರಗಳ ಸಂಸ್ಕ್ರತಿಯಿಂದ ಬಂದಿದೆ. ನಮ್ಮವರು ಸಮಾಜವನ್ನು ಬೆಳೆಸಿದ ರೀತಿ ಕಲ್ಪನಾತೀತವಾದುದು. ಅದೇ ರೀತಿ ಇಂದಿನ ಯುವ ಜನತೆಗೆ ಶಕ್ತಿ ನೀಡಿ ಮುಂದೆ ತಂದು ಸಮಾಜ ಕಟ್ಟುವ ಕಾರ್ಯ ಆಗಬೇಕಾಗಿದೆ. ಯುವಕರ ಕಲ್ಪನೆಯಂತೆ ವಿಭಿನ್ನ ರೀತಿಯಲ್ಲಿ ಉದ್ಯಮ ಸೃಷ್ಟಿಯಾಗಿ ಉದ್ಯೋಗ ನೀಡುವ ಶಕ್ತಿ ಯುವಕರಲ್ಲಿ ಬರಲಿ. ಅದೇ ರೀತಿ ನಮ್ಮ ಶ್ರೀಮಂತ ಕಲೆ ಸಂಸ್ಕ್ರತಿಯನ್ನು ಉಳಿಸಿ ಬೆಳೆಸಿಕೊಂಡು ಬರುವ ನಾಯಕತ್ವ ಗುಣ ಕೂಡಾ ಯುವಕರಲ್ಲಿ ಮತ್ತು ಮಹಿಳೆಯರಲ್ಲಿ ಬರಲಿ. ಉತ್ತಮ ಕಾರ್ಯ ಮಾಡಿದರೆ ಸಮಾಜದಲ್ಲಿ ಗುರುತಿಸುತ್ತಾರೆ. ಇದೇ ದ್ಯೇಯ…

Read More

ವಿದ್ಯಾಗಿರಿ (ಮೂಡುಬಿದಿರೆ): ‘ಮಕ್ಕಳಿಗೆ ಶಾಲೆಯಲ್ಲಿ ಯಕ್ಷ ಶಿಕ್ಷಣವನ್ನೂ ನೀಡಬೇಕು’ ಎಂದು ಶಾಸಕ ಉಮಾನಾಥ್ ಎ. ಕೋಟ್ಯಾನ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ)ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರತಿಭಾವಂತ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಬೇಕು. ಈ ಸದುದ್ದೇಶದಿಂದ ಪಟ್ಲ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ನಮ್ಮ ಜೀವನಕ್ಕೆ ಬೇಕಾದ ಅಮೂಲ್ಯ ವಿಷಯಗಳನ್ನು ಅರಿತುಕೊಳ್ಳಲು ಯಕ್ಷಗಾನ ಒಳ್ಳೆಯ ಮಾಧ್ಯಮ ಎಂದರು. ನಮ್ಮ ಪೂರ್ವಜರು ಅನಕ್ಷರಸ್ಥರಾಗಿದ್ದರೂ, ರಾಮಾಯಣ ಹಾಗೂ ಮಹಾಭಾರತದ ಕಥೆಗಳನ್ನು ತಿಳಿದುಕೊಂಡು ಮಕ್ಕಳಿಗೆ ತಿಳಿಸುತ್ತಿದ್ದರು. ಏಕೆಂದರೆ ಅವರು ಯಕ್ಷಗಾನವನ್ನು ನೋಡಿ ಅದನ್ನು ಅನುಭವಿಸುತ್ತಿದ್ದರು ಎಂದು ವಿವರಿಸಿದರು. ಪೌರಾಣಿಕ ಕಥೆಗಳನ್ನು ಅರ್ಥ ಮಾಡಿಕೊಳ್ಳಲು ಯಕ್ಷಗಾನವು ಸಹಕಾರಿ. ಯಕ್ಷಧ್ರುವ ಪಟ್ಲ ಹಾಗೂ ಆಳ್ವಾಸ್…

Read More

ಜನ್ಮ ಭೂಮಿ ತುಳುನಾಡಿನ ಮಣ್ಣಿನ ಮಕ್ಕಳಾದ ತುಳುವರಾದ ತಾವೆಲ್ಲರೂ ಶಿವಾಜಿ ಮಹಾರಾಜರ ಪುಣ್ಯ ಮಣ್ಣು ಪುಣೆಯಲ್ಲಿ ನೆಲೆ ನಿಂತು ಉದ್ಯಮದ ಜೊತೆಯಲ್ಲಿ ತುಳು ಬಾಷೆ, ಕಲೆ ಸಂಸ್ಕ್ರತಿಯ ಬೆಳವಣಿಗೆಗೆ ನಿರಂತರ ಶ್ರಮಿಸುವ ನಿಮ್ಮ ಕಾರ್ಯ ಶ್ಲಾಘನೀಯ. ಪುಣೆಯಲ್ಲಿರುವ ತುಳುವರಿಗಾಗಿ ಏನಾದರು ಸೇವೆ ಮಾಡಬೇಕು, ನಮ್ಮಿಂದಾದ ಸಹಕಾರ ತುಳುವರಿಗೆ ಸಿಗಬೇಕು ಎಂದರಿತು ಸಂಘಟನೆಯನ್ನು ಕಟ್ಟಿ ಅದರ ಮುಖಾಂತರ ತುಳುವರಿಗೆ ಉಪಕಾರವಗುವಂಥಹ ಸ್ವಂತ ಕಟ್ಟಡವನ್ನು ಹೊಂದಬೇಕು ಎಂಬ ನಿಮ್ಮ ಹಂಬಲ ಆದಷ್ಟು ಬೇಗ ಈಡೇರಲಿ. ನನ್ನಿಂದಾದ ಅರ್ಥಿಕ ಸಹಾಯವನ್ನು ಘೋಷಿಸುತ್ತೇನೆ ಮತ್ತು ಯಾವ ಮಟ್ಟದಲ್ಲಿ ಸಹಾಯ ಸಿಗಬಹುದು ಎಂಬುದನ್ನು ಅರಿತು ಪ್ರಯತ್ನ ಮಾಡುತ್ತೇನೆ. ನನ್ನ ಕ್ಷೇತ್ರದಲ್ಲಿರುವ ಎಲ್ಲಾ ಜಾತಿ ಧರ್ಮ ಪಂಗಡವನ್ನು ಒಟ್ಟು ಸೇರಿಕೊಂಡು ತುಳುವರ ಸೇವಕನಾಗಿ ದುಡಿದವ ನಾನು. ದೊಡ್ಡ ಕ್ಷೇತ್ರವಾದ ಬೆಳ್ತಂಗಡಿಗೆ ಅನುದಾನ ತರುವಲ್ಲಿ ಕೈ ಮೀರಿ ಶ್ರಮಿಸಿ ದುಡಿದಿದ್ದೇನೆ. ಪುಣೆ ತುಳುಕೂಟಕ್ಕೆ ಬರುವ ಯೋಗಾನುಯೋಗ ಸಿಕ್ಕಿದೆ. ತುಂಬಾ ಸಂತೋಷವಾಯಿತು. ನಿಮ್ಮ ಯೋಜಿತ ಕಾರ್ಯ ಯೋಜನೆಗಳು ಆದಷ್ಟು ಬೇಗ ಪರಿಪೂರ್ಣವಾಗಿ ತುಳುವರಿಗೆ…

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಫೆಬ್ರವರಿ 11ರಂದು ಕುಂದಾಪುರ ರೂರಲ್ ಮೆಡಿಕಲ್ ಕಾಲೇಜು ಕ್ರೀಡಾಂಗಣ, ಯುವ ಮೆರಿಡಿಯನ್ ಸಂಕೀರ್ಣ, ಕೋಟೇಶ್ವರ ಇಲ್ಲಿ ಭಾವೈಕ್ಯ ಬಂಟರ ಮಹಾಸಮಾಗಮ ಕಾರ್ಯಕ್ರಮ ನಡೆಯಲಿದೆ. ಇದು ಕುಂದಾಪುರ ಪರಿಸರದಲ್ಲಿ ನಡೆಯುತ್ತಿರುವ ಮೊದಲ ಬಂಟರ ಸಮಾವೇಶವಾಗಿದ್ದು, ವಿದೇಶಗಳನ್ನೂ ಒಳಗೊಂಡಂತೆ ಭಾರತದ ವಿವಿಧೆಡೆಗಳಲ್ಲಿ ನೆಲೆಸಿರುವ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬಂಟ ಸಮುದಾಯ ಬಾಂಧವರು ಈ ಮಹಾಸಮಾವೇಶದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ. ಈ ಬಂಟರ ಮಹಾಸಮಾಗಮದ ಪ್ರಧಾನ ಸಂಚಾಲಕರಾಗಿ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಆಯ್ಕೆಯಾಗಿದ್ದು ಇವರು ಸಂಘದ ಉಪಾಧ್ಯಕ್ಷರಾಗಿ, ಸಂಘಟನಾ ಕಾರ್ಯದರ್ಶಿಯಾಗಿ, ವಿದ್ಯಾರ್ಥಿವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ, ಸಂಘದ ವತಿಯಿಂದ ಪ್ರಕಟಿಸಲಾಗುತ್ತಿರುವ ಯುವ ಚೈತನ್ಯ ಸಂಚಿಕೆಯ ಸಂಪಾದಕರಾಗಿ ವಿವಿಧ ಅವಧಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬಂಟರ ಮಹಾಸಮಾಗಮದ ಅಂಗವಾಗಿ ಅಂದು ಬಂಟರ ಸಾಂಸ್ಕೃತಿಕ ಸಂಭ್ರಮ ಎಂಬ ರಾಷ್ಟ್ರ ಮಟ್ಟದ ವೈವಿಧ್ಯಮಯ ಸಮೂಹನೃತ್ಯ ಸ್ವರ್ಧೆ ನಡೆಯಲಿದೆ. ವಿದ್ಯಾದೀವಿಗೆ ಯೋಜನೆಯಡಿ ಕುಂದಾಪುರ ಮತ್ತು ಬೈಂದೂರು ತಾಲೂಕು ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ…

Read More

ದುರ್ಗಾಪರಮೇಶ್ವರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಭಯ ಸೇವಾ ಫೌಂಡೇಶನ್ ಅಧ್ಯಕ್ಷರಾದ ಎಂ ಬಿ ಉಮೇಶ್ ಶೆಟ್ಟಿಯವರು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಪ್ರತಿಕೆ ಇವರಿಂದ ಸಮಾಜ ಸೇವೆಗೆ ಕೊಡಲಾಗುವ 2024 ರ ಸಾಲಿನ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಬಂಟರ ಸಂಘದ ಮಾಜಿ ಕಾರ್ಯಕಾರಿ ಸದಸ್ಯರಾಗಿರುವ ಇವರು ಸಮಾಜಸೇವೆಗೆ ಪ್ರಸಿದ್ಧರಾಗಿದ್ದಾರೆ. ಈ ಪ್ರಶಸ್ತಿ ದೊರಕಲು ಜೊತೆಯಿದ್ದು ಸಮಾಜದ ಸೇವೆ ಮಾಡಲು ಪ್ರತಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಹಾಗೂ ಶುಭ ಹಾರೈಸಿದ ಕನ್ನಡ ನಾಡಿನ ಜನತೆಗೆ ಹಾಗೂ ಎಲ್ಲಾ ಆತ್ಮೀಯ ಬಂಧುಗಳಿಗೆ ಉಮೇಶ್ ಶೆಟ್ಟಿಯವರು ಧನ್ಯವಾದಗಳನ್ನು ಸಮರ್ಪಸಿದ್ದಾರೆ.

Read More

ಪರಸ್ಪರ ಸಹಕಾರದಿಂದಲೇ ಸಂಘಟನೆಗಳು ಬೆಳೆಯಲು ಸಾಧ್ಯ. ಸಂಘಟನೆಗಳನ್ನು ಬಳಪಡಿಸುವ ಮೂಲಕ ಕಾರ್ಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಶಮಿಸಬೇಕು ಎಂದು ಹಿರಿಯ ಲೆಕ್ಕ ಪರಿಶೋಧಕ ಜಯರಾಮ ಶೆಟ್ಟಿ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಮಿತ್ರವೃಂದ ತುಮಕೂರು ವಿಶ್ವ ವಿದ್ಯಾಲಯ ಕಲಾ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕರಾವಳಿಯಿಂದ ತುಮಕೂರಿಗೆ ಬಂದು ಉದ್ದಿಮೆ, ಉದ್ಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕ್ರಿಯಾಶೀಲ ಮಂದಿ ತುಮಕೂರಿನ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು. ಸಂಘಟನೆಯ ಬೆಳವಣಿಗೆಗೆ ಎಲ್ಲರೂ ಸಕ್ರಿಯರಾಗಿ ತೊಡಗಿಸಿಕೊಳ್ಳಬೇಕು. ಸಂಘಟನೆಯ ಅಭಿವೃದ್ಧಿಯಿಂದಷ್ಟೇ ಸಮಾಜದ ಅಭಿವೃದ್ಧಿ ಸಾಧ್ಯ. ಮಿತ್ರವೃಂದ ನಡೆಸುತ್ತಿರುವ ವಿವಿಧ ಸಮಾಜಪರ ಚಟುವಟಿಕೆ ಈ ನಿಟ್ಟಿನಲ್ಲಿ ಹೆಚ್ಚಿನ ಪರಿಣಾಮ ಬೀರಲಿವೆ ಎಂದರು. ಕ್ರೀಡಾಕೂಟದ ಅಂಗವಾಗಿ ವಿವಿಧ ವಯೋಮಾನದ ಕ್ರೀಡಾಸಕ್ತರಿಗೆ ಆಟೋಟ ಸ್ವರ್ಧೆ ನಡೆಸಲಾಯಿತು. ಓಟ, ವೇಗದ ನಡಿಗೆ, ಗುಂಡು ಎಸೆತ, ವಾಲಿಬಾಲ್, ಥ್ರೋಬಾಲ್, ಕ್ರಿಕೆಟ್, ಹಗ್ಗಜಗ್ಗಾಟ ಸೇರಿದಂತೆ ಅನೇಕ ಸಾಂಪ್ರದಾಯಿಕ ಸ್ವರ್ಧೆಗಳಲ್ಲಿ ದಕ್ಷಿಣ ಕನ್ನಡದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು. ಉದ್ಯಮಿ ಎಚ್.ಜಿ.…

Read More

ಜೀವನದಲ್ಲಿ ಪ್ರತೀ ಬಾರಿಯೂ ಸೋಲುವ ವ್ಯಕ್ತಿ ಗೆಲ್ಲುವ ನಿರೀಕ್ಷೆಯನ್ನು ಬಿಟ್ಟುಬಿಡುತ್ತಾನೆ. ಆದರೆ ಸೋಲು ಗೆಲುವು ಎರಡು ಸಮಾನ. ಎರಡನ್ನೂ ಸ್ವೀಕರಿಸಿ ಜೀವನ ನಡೆಸುವುದು ಬಹುಮುಖ್ಯ. ಸೋಲು ಶಾಶ್ವತವಲ್ಲ, ಗೆಲುವು ಅಂತಿಮವೂ ಅಲ್ಲ. ಮೊದಲು ನಮಗೆ ನಮ್ಮ ಮೇಲೆ ನಂಬಿಕೆ ಇರಬೇಕು. ನಂಬಿಕೆ ಎನ್ನುವುದು ಜಯದ ಮೊದಲ ಮೆಟ್ಟಿಲು. ಮುಂದೊಂದು ದಿನ ನನ್ನ ದಿನವೂ ಬಂದೇ ಬರುತ್ತದೆ ಎಂದು ಬಲವಾದ ನಂಬಿಕೆ ಇಟ್ಟು ಜೀವನ ನಡೆಸಬೇಕು. ನಮಗೆಲ್ಲ ತಿಳಿದ ಹಾಗೆ ದ್ರೋಣಾಚಾರ್ಯರು ಹಕ್ಕಿಯ ಕಣ್ಣಿಗೆ ಬಾಣ ಹೊಡೆಯಲು ಹೇಳಿದಾಗ ಅಲ್ಲಿ ಅನೇಕ ವೀರಾನುಪುರುಷರು ಇದ್ದರು. ಹಾಗೆ ಅರ್ಜುನನೂ ಇದ್ದ, ಆದರೆ ಅಲ್ಲಿ ಹಕ್ಕಿಯ ಕಣ್ಣನ್ನು ಭೇದಿಸಿದ್ದು ಮಾತ್ರ ಅರ್ಜುನ. ಯಾಕೆಂದರೆ ಆ ಗುರಿಯ ಸ್ಪಷ್ಟತೆ ಅವನಿಗೆ ಇತ್ತು. ಜೀವನದಲ್ಲಿ ಗುರಿ, ಗುರು ಎಲ್ಲವೂ ಅಗತ್ಯ. ಗುರುವಿನ ಮಾರ್ಗದರ್ಶನ ಅತ್ಯಂತ ಅಗತ್ಯ. ದೇವನೂರು ಮಹದೇವರು ಹೇಳಿದ ಹಾಗೆ, ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ, ನಾಳೆ ಫ‌ಲ ಕೊಟ್ಟೇ ಕೊಡುತ್ತದೆ. ಭೂಮಿಗೆ ಬಿದ್ದ…

Read More