Author: admin

ಪುತ್ತೂರು ತಾಲೂಕು ಬಂಟರ ಸಂಘದ ಕಾರ್‍ಯಕಾರಿ ಸಮಿತಿ ಸಭೆಯು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಿ, ಮಾತನಾಡಿ ಆ. ೧೩ ರಂದು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜರಗಲಿರುವ ಆಟಿಡೊಂಜಿ ದಿನ, ಸಾಧಕರಿಗೆ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಬಂಟ ಸಮಾಜ ಭಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ವಿನಂತಿಸಿ, ಸಮಾಜದಲ್ಲಿ ಬಂಟ ಸಮುದಾಯದ ಸಾಧಕರು ತುಂಬಾ ಮಂದಿ ವಿವಿಧ ಕ್ಷೇತ್ರದಲ್ಲಿ ಇದ್ದಾರೆ, ಅವರನ್ನು ಹಂತ ಹಂತವಾಗಿ ಗುರುತಿಸಿ, ಗೌರವಿಸುವ ಕಾರ್‍ಯವನ್ನು ಬಂಟರ ಸಂಘ ಮಾಡುತ್ತಿದೆ ಎಂದು ಹೇಳಿದರು. ಸಮಾಜಕ್ಕೆ ಗೌರವ – ಸವಣೂರು ಕೆ.ಸೀತಾರಾಮ ರೈ : ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈರವರು ಮಾತನಾಡಿ ಬಂಟರ ಸಂಘದ ಕಾರ್‍ಯಕ್ರಮ ಅರ್ಥಪೂರ್ಣವಾಗಿ ನಡೆದು ಸಮಾಜಕ್ಕೆ ಗೌರವ ತರುವ ಕಾರ್‍ಯ ನಿರಂತರವಾಗಿ ನಡೆಯಲಿ. ಶಶಿಕುಮಾರ್ ರೈ…

Read More

ಬ್ರಹ್ಮಾವರದಲ್ಲಿರುವ ಫಾರ್ಚ್ಯೂನ್ ಅಕಾಡೆಮಿಕ್ ಆಂಡ್ ಚಾರಿಟೆಬಲ್ ಟ್ರಸ್ಟ್ ನ ಆಡಳಿತಕ್ಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಮಾಬುಕಳ ಬಿ.ಡಿ. ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜರಗಿತು. ಅತಿಥಿಗಳಾಗಿ ಹಂಗಾರಕಟ್ಟೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಬಿ. ಭರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಎಚ್. ಇಬ್ರಾಹಿಂ ಸಾಹೇಬ್, ಚೇತನಾ ಪ್ರೌಢಶಾಲೆಯ ಕಲ್ಪನ ಶೆಟ್ಟಿ ಉಪಸ್ಥಿತರಿದ್ದರು. ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನ ಅಧ್ಯಕ್ಷ ಡಾ. ದೈವಿಕ್ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಪ್ರಾವೀಣ್ಯತ ಪ್ರಶಸ್ತಿ ವಿತರಿಸಿದರು. ಕಾಲೇಜಿನ ಚೇರ್ ಮೆನ್ ತಾರನಾಥ್ ಶೆಟ್ಟಿ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ರತ್ನಾಕರ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ನಾಯಕರಾದ ಧ್ರುವ ಧನುಷ್ ಇದ್ದರು. ಪ್ರಾಂಶುಪಾಲ ಪ್ರೊ.ಸ್ಮಿತಾಮೊಲ್ ಎಂ. ಸ್ವಾಗತಿಸಿ, ಉಪನ್ಯಾಸಕರಾದ ಸುಪ್ರೀತಾ, ಪೂರ್ಣಿಮಾ, ಸುಕುಮಾರ್ ಶೆಟ್ಟಿಗಾರ್ ಬಹುಮಾನ ವಿಜೇತರ ವಿವರ ವಾಚಿಸಿದರು. ಅಶ್ವಿನಿ ನಿರೂಪಿಸಿ, ಜೆರಿಕ್ ಡಿ…

Read More

ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡುವಿನಲ್ಲಿ ಅಳಿಯ ಕಟ್ಟು ಪರಂಪರೆಯ ಮೂಲ ಅರಸ ಭೂತಾಳ ಪಾಂಡ್ಯ ರಾಜನ ಕುಂಡೋಧರ ದೈವಸ್ಥಾನದಲ್ಲಿ ಮೂರು ವರ್ಷಕೊಮ್ಮೆ ನಡೆಯುವ ರಾಜನ್ ದೈವಗಳ ನಡಾವಳಿ ಮತ್ತು ನೇಮೋತ್ಸವ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಚಲನಚಿತ್ರ ನಟ, ನಿರ್ದೇಶಕ ರಿಷಬ್ ಶೆಟ್ಟಿ ನೇಮೋತ್ಸವದಲ್ಲಿ ಭಾಗಿಯಾದರು. ಸಂಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು. ಸಂಸ್ಥಾನದ ಅಧ್ಯಕ್ಷ ಕೆ. ಎಂ. ಶೆಟ್ಟಿ, ಪದಾಧಿಕಾರಿಗಳಾದ ಮನೋಹರ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ನಾಗರಾಜ್ ನಾಯ್ಕ್, ರಾಘವೇಂದ್ರ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನಾ ಬಾಳಿಕೆ ಕುರ್ಕಿಲ್ ಬೆಟ್ಟು ಇದ್ದರು. ಸಾವಿರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ದೊಂದಿ ಬೆಳಕಿನಲ್ಲಿ ನೇಮೋತ್ಸವ ನಡೆದದ್ದು ವಿಶೇಷವಾಗಿತ್ತು.

Read More

ಸಾಮಾಜಿಕ ನ್ಯಾಯ ಎಂದು ಹೇಳುತ್ತಾ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ (Kundapura Assembly Constituency) ಐದು ಬಾರಿ ಗೆದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ (Haladi Srinivas Shetty) ಕರಾವಳಿಯ ರಾಜಕೀಯದಲ್ಲೇ ಒಬ್ಬ ವಿಭಿನ್ನ ಜನಪ್ರತಿನಿಧಿ. ಜನ ಪ್ರೀತಿಯಿಂದ ಇವರಿಗೆ ʼಕರಾವಳಿಯ ವಾಜಪೇಯಿʼ ಎಂದು ಹೆಸರನ್ನಿಟ್ಟಿದ್ದಾರೆ. ಕ್ಷೇತ್ರದಲ್ಲಿ ಆಗುವ ಯಾವುದೇ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಗುದ್ದಲಿ ಪೂಜೆ ಮಾಡುವುದಿಲ್ಲ. ಉದ್ಘಾಟನೆ ನಡೆಸುವುದಿಲ್ಲ. 25 ವರ್ಷಗಳಿಂದ ಎಲ್ಲವೂ ಸರ್ಕಾರಿ ಅಧಿಕಾರಿಗಳ ಕೈಯಲ್ಲೇ ಮಾಡಿಸುತ್ತಿದ್ದಾರೆ. 1999 ರಿಂದ ಆರಂಭಗೊಂಡು ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎಂದೇ ಎನಿಸಿಕೊಂಡಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ, ಜಾತಿಯನ್ನು ಮೀರಿ ಹಾಲಾಡಿ ನಿರಂತರವಾಗಿ ಗೆದ್ದುಕೊಂಡು ಬಂದಿದ್ದಾರೆ‌. ವರ್ಷದಿಂದ ವರ್ಷಕ್ಕೆ ಹಾಲಾಡಿಯವರ ಗೆಲುವಿನ ಅಂತರ ದೊಡ್ಡದಾಗುತ್ತಾ ಹೋಗುತ್ತಿರುವುದು ವಿಶೇಷ. ಹಿಂದೆ 2,500 ಮತಗಳ ಅಂತರ ಈಗ 50 ಸಾವಿರಕ್ಕೆ ಏರಿಕೆಯಾಗಿದೆ. ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂದು ಜನ ನಂಬಿದ್ದಾರೆ. ಕಷ್ಟ ಅಂತ ಮನೆಗೆ ಬಂದ ಜನರನ್ನು ಹಾಲಾಡಿ ಬರಿಗೈಯಲ್ಲಿ ವಾಪಸ್…

Read More

“ಮಮ್ಮಾಯಿದೂತೆ, ಊರುಗುದಾತೆ, ನಂಬಿನಾಯಗ್‌ ವೈದ್ಯನಾತೆ’ ಎನ್ನುವ ಕೀರ್ತಿಯೊಂದಿಗೆ ತುಳುನಾಡಿನಾದ್ಯಂತ ಪ್ರಸಿದ್ಧವಾದ, ಸತ್ಯದ ದೈವವಾಗಿ ನಂಬಿ ಬರುವ ಭಕ್ತರಿಗೆ ಭವರೋಗ ವೈದ್ಯನಾಗಿ, ಅಭಯ-ರಕ್ಷಣೆ ನೀಡುವ ಮಣಿಪಾಲದ ಶ್ರೀ ಬಬ್ಬುಸ್ವಾಮಿಗೆ ಸರಳ-ಸುಂದರ-ಶಾಸ್ತ್ರೀಯ ಆಯ ಪ್ರಮಾಣದ ದೈವಸ್ಥಾನ ನಿರ್ಮಿಸಿದ್ದು, ಪ್ರಸ್ತುತ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಸಮುಚ್ಚಯವು ಭವ್ಯ ದೈವಸ್ಥಾನವಾಗಿ ವಿಜೃಂಭಿಸುತ್ತ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ. ಪ್ರಕೃತಿಯ ಆರಾಧನೆಯೊಂದಿಗೆ ಗೋಳಿಮರದ ಅಡಿಯಲ್ಲಿರುವ ದೈವಸ್ಥಾನದಲ್ಲಿ ಎಲ್ಲ ಪರಿವಾರ ದೈವಗಳ ಆರಾಧನೆ ಸಂಪನ್ನಗೊಳ್ಳುತ್ತಿದೆ. ಆಕರ್ಷಕ ಸ್ವಾಗತ ಗೋಪುರ, ಹೂ, ಗಿಡಗಳ ಅಲಂಕಾರ ದೈವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಆಹ್ಲಾದ ನೀಡುತ್ತಿದೆ. ಪ್ರತೀ ವರ್ಷ ಮಾರ್ಚ್‌ನಲ್ಲಿ ನಡೆಯುವ ಸಿರಿಸಿಂಗಾರದ ನೇಮದಲ್ಲಿ ಸಾವಿರಾರು ಭಕ್ತರು ಭಾಗವಹಿಸುತ್ತಾರೆ. ಮಾ. 10ರ ಸಂಜೆ ಹೊರೆಕಾಣಿಕೆಯಿಂದ ಚಾಲನೆಗೊಳ್ಳುವ ಈ ವರ್ಷದ ನೇಮೋತ್ಸವ ಮಾ. 12ರ ವರೆಗೆ ಜರಗಲಿದೆ. ಇಲ್ಲಿ ಜರಗುವ ಅನ್ನಸಂತರ್ಪಣೆಯಲ್ಲಿ ವರ್ಷಂಪ್ರತಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದು, ಈ ವರ್ಷ ಮಾ. 11ರಂದು ನಡೆಯುವ ಮಹಾ ಅನ್ನಸಂತರ್ಪಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ದೈವಸ್ಥಾನದ…

Read More

ಸಾಧಿಸಬೇಕೆಂಬ ಛಲ ಇದ್ದರೆ ಯಾವ ರೂಪದಲ್ಲಾದರೂ ತನ್ನ ಕನಸುಗಳನ್ನು ನನಸು ಗೊಳಿಸಬಹುದೆಂಬುವುದಕ್ಕೆ ಸರಿಯಾದ ನಿದರ್ಶನವೆಂದರೆ ಹಲವಾರು ಪ್ರಶಸ್ತಿಗಳ ಸರದಾರರೆನಿಸಿಕೊಂಡ ಸುರೇಶ್ ರೈ ಸೂಡಿಮುಳ್ಳು ಅವರು. 1-07-1971 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸೂಡಿಮುಳ್ಳಿನಲ್ಲಿ ನಾರಾಯಣ ರೈ ಮತ್ತು ರಾಮಕ್ಕ ದಂಪತಿಗಳ ದ್ವಿತೀಯ ಪುತ್ರನಾಗಿ ಜನಿಸಿದ ಸುರೇಶ್ ರೈ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಣ್ಚಪ್ಪಾಡಿ ಹಾಗೂ ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಸವಣೂರಿನಲ್ಲಿ ಒಂಭತ್ತನೇ ತರಗತಿಯವರೆಗೆ ವ್ಯಾಸಂಗ ಮಾಡಿದರು. ಶಾಲಾ ದಿನಗಳಲ್ಲಿ ತುಳು ನಾಟಕದಲ್ಲಿ ಆಸಕ್ತಿ ವಹಿಸಿ ನಾಟಕಗಳಲ್ಲಿ ಭಾಗವಹಿಸುತ್ತಿದ್ದರು. ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಕ್ಕೆ ಸೇರಿ ನಂತರ ಜೀಪು ಚಾಲಕನಾಗಿ ಸವಣೂರಿನಲ್ಲಿ ವೃತ್ತಿ ಜೀವನ ಆರಂಭಿಸಿ ನಂತರದ ದಿನಗಳಲ್ಲಿ ಡೊಳ್ಳು ಕುಣಿತ, ಯಕ್ಷಗಾನ ಕಲೆಯ ಕಡೆ ಗಮನ ಸೆಳೆದು ಯುವಕ ಮಂಡಲ ಸವಣೂರಿನ ಸಕ್ರಿಯ ಸದಸ್ಯನಾಗಿ ಪಾಲ್ಗೊಂಡು ಅಭ್ಯಸಿಸತೊಡಗಿದರು. ಯುವಕ ಮಂಡಲದ ಜೊತೆಯಾಗಿ ಊರು ಪರವೂರಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ಪ್ರಶಂಸೆಗೆ…

Read More

ಮಹಾನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ಮಕ್ಕಳ ಸಾವಿಗೆ ಬೀದಿ ನಾಯಿಗಳೇ ಕಾರಣ ; ನಾಯಿ ಹಿಡಿಯುವ ನೆಪದಲ್ಲಿ ಕೋಟಿ ಕೋಟಿ ಬೊಕ್ಕಸಕ್ಕೆ ಪಂಗನಾಮ ಇಟ್ಟ ಬಿಬಿಎಂಪಿ….! ಸಾರ್ವಜನಿಕರ ಹಣ ದುಂದು ವೆಚ್ಚ ….!? – ಕೆ. ಸಂತೋಷ ಶೆಟ್ಟಿ ಮೊಳಹಳ್ಳಿ ಕುಂದಾಪುರ, ಉಡುಪಿ ಜಿಲ್ಲೆ. (ಪತ್ರಕರ್ತರು & ಮಾಧ್ಯಮ ವಿಶ್ಲೇಷಕರು) ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ನಾಯಿ ಹಿಡಿಯುವ ನೆಪದಲ್ಲಿ ಕೋಟಿ ಕೋಟಿ ಬಂಡವಾಳ ಹಾಕಿದ್ದೇವೆ ಎಂದು ಲೆಕ್ಕಪತ್ರವನ್ನ ಸರ್ಕಾರಕ್ಕೆ ರವಾನಿಸಿದ್ದಾರೆ. ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಅದಲ್ಲದೆ ಮಾಂಸಹಾರ ಇರುವ ಅಂಗಡಿ ಪ್ರದೇಶಗಳಲ್ಲಿ ಬೀದಿ ನಾಯಿಗಳು ರವಾನೆ ಆಗಿರುತ್ತದೆ ಅದಲ್ಲದೆ ಬೀದಿನಾಯಿಗಳ ಉಪಟಳವನ್ನು ತಡೆಯಲು ಬಿಬಿಎಂಪಿ ಹರಸಾಹಸ ಪಡುತ್ತಿದೆ ಎಂದು ಸರ್ಕಾರಕ್ಕೆ ಲೆಕ್ಕ ಪತ್ರ ವಿಚಾರವನ್ನು ತಿಳಿಸಿದೆ, ಆದರೆ ಬಿಬಿಎಂಪಿ ಲೆಕ್ಕ ಪ್ರಕಾರ ಕೋಟಿ ಕೋಟಿ ದುಂದು ವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಕಣ್ಣು ಕೆಂಪಗಾಗಿಸಿದೆ ಅದಲ್ಲದೆ ಸರ್ಕಾರ ಇದರ ಬಗ್ಗೆ ಮುತುವರ್ಜಿಯನ್ನು ವಹಿಸದೆ ಬಿಬಿಎಂಪಿಯ ಅಧಿಕಾರಕ್ಕೆ ಕೊಟ್ಟು…

Read More

ದೇಹದಲ್ಲಿನ ನಿಶಕ್ತಿ ,ಕೊಬ್ಬಿನಂಶವನ್ನು ತ್ಯಜಿಸುವ , ಅಗಾಧ ಕ್ಯಾಲ್ಸಿಯಂ ಮತ್ತು ವಿಟಮಿನ್ ಪೂರೈಸುವ ರಾಗಿ ಉತ್ತಮ ಆರೋಗ್ಯಕ್ಕೆ ರಹದಾರಿ…..! ರಾಗಿಯಲ್ಲಿ ದೇಹಕ್ಕೆ ಬೇಕಾಗಿರುವಂತಹ ಹಲವು ಪೌಷ್ಟಿಕಾಂಶಗಳು ಇವೆ. ರಾಗಿ ರೊಟ್ಟಿ ರಾಗಿ ಮುದ್ದೆ ರಾಗಿ ಅಂಬಲಿ ಸೇವಿಸುವುದರಿಂದ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಈ ಗ್ಯಾಸ್ಟಿಕ್ ಸಮಸ್ಯೆ ಅನ್ನುವುದು ಕೂಡ ಇರುವುದಿಲ್ಲ. ದೇಹಕ್ಕೆ ತಂಪು ನೀಡುವಂತಹ ರಾಗಿ ಅಂಬಲಿಯನ್ನು ಸೇವಿಸುವುದರಿಂದ ಯಾವೆಲ್ಲ ಲಾಭವಿದೆ ಅನ್ನುವುದನ್ನು ತಿಳಿಸಿಕೊಡುತ್ತೇವೆ. ರಾಗಿ ಅಂಬಲಿ ಯಲ್ಲಿ ಪ್ರೋಟಿನ್ ಹಾಗೂ ಕ್ಯಾಲ್ಸಿಯಂ ಅಂಶ ಇರುವುದರಿಂದ ಇದರ ಸೇವನೆಯಿಂದ ದೇಹಕ್ಕೆ ಉತ್ತಮ ಎನರ್ಜಿ ಹಾಗೂ ಶಕ್ತಿ ಸಿಗುತ್ತದೆ. ಅಷ್ಟೇ ಅಲ್ಲದೆ ದೇಹದಲ್ಲಿನ ಮೂಳೆಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗುತ್ತದೆ. ಮತ್ತು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿರುವಂತಹ ಈ ರಾಗಿಯಲ್ಲಿಉತ್ತಮ ಆರೋಗ್ಯ ಸಿಗುವುದರ ಜೊತೆಗೆ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ. ರಾಗಿ ಅಂಬಲಿಯನ್ನು ಸೇವಿಸುವುದರಿಂದ ತಲೆ ಕೂದಲ ಆರೋಗ್ಯ ಹಾಗೂ ವಿಟಮಿನ್ ಡಿ ಸಮಸ್ಯೆ ನಿವಾರಣೆಯಾಗುವುದು. ಅಷ್ಟೇ ಅಲ್ಲದೆ ರಾತ್ರಿ ವೇಳೆ ರಾಗಿಯಿಂದ ತಯಾರಿಸಿದ…

Read More

ಬ್ರಹ್ಮಾವರ ನ. 09: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಕ್ಕಳ ಸುರಕ್ಷತೆಯ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೆಲ್ತ್ ಆಂಡ್ ಎಮೋಶನ್ ಗ್ರೂಪ್‍ನ ಸ್ಥಾಪಕರಾದ ಡಾ. ರಾಜಲಕ್ಷ್ಮೀ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅವರು ಮಕ್ಕಳು ಇಂದು ಎದುರಿಸುತ್ತಿರುವ ಸಮಸ್ಯೆಗಳು, ಮೊಬೈಲ್ ಬಳಕೆಯ ದುಷ್ಪರಿಣಾಮಗಳು, ಮಕ್ಕಳ ಸುರಕ್ಷತೆಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು. ನಂತರ ಮಕ್ಕಳು ವೈದ್ಯೆಯೊಂದಿಗೆ ಮುಕ್ತವಾಗಿ ಚರ್ಚಿಸಿ ತಮ್ಮ ಗೊಂದಲಗಳಿಗೆ ಪರಿಹಾರ ಕಂಡುಕೊಂಡರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ನಮಗೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ, ಆರ್ಥಿಕ, ಬೌದ್ಧಿಕ, ಸಾಮಾಜಿಕ ಸ್ವಾಸ್ಥ್ಯದ ಅರಿವಿರಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಅತಿವೇಗವಾಗಿ ಬೆಳೆಯುತ್ತಿರುವ ಇಂದಿನ ವಿದ್ಯಮಾನಗಳಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸಬಹುದು. ಆದ್ದರಿಂದ ವಿದ್ಯಾರ್ಥಿಗಳಿಗೆ ತಮ್ಮ ನಿರ್ದಿಷ್ಟ ಗುರಿಯನ್ನು ತಲುಪಲು ಸರಿಯಾದ ಮಾರ್ಗದರ್ಶನ, ಮಾಹಿತಿಗಳ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಜಿ ಎಮ್ ಇಂತಹ ಹಲವಾರು ಕಾರ್ಯಕ್ರಮಗಳನ್ನು…

Read More

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ನ ಜೂಯಿ ನಗರ ಬಂಟ್ಸ್‌ ಸೆಂಟರ್‌ನ ಶಶಿಕಲಾ ಮನ್‌ಮೋಹನ್‌ ಶೆಟ್ಟಿ ಕಾಂಪ್ಲೆಕ್ಸ್‌ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ, ರಕ್ತದಾನ ಶಿಬಿರವು ಅಸೋಸಿಯೇಷನ್ ನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ನ್ಯಾಯವಾದಿ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಎಸ್.ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಶ್ರೀಧರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷೀ ಎಸ್‌. ಶೆಟ್ಟಿ, ಉಪ ಕಾರ್ಯಧ್ಯಕ್ಷೆ ಶಾಂತ ನಾರಾಯಣ ಶೆಟ್ಟಿ, ಸದಾನಂದ ಡಿ ಶೆಟ್ಟಿ, ಮಹಿಳಾ ವಿಭಾಗದ ನಾಗವೇಣಿ ಶೆಟ್ಟಿ, ಸುನಿತಾ ಸದಾನಂದ ಶೆಟ್ಟಿ, ರೇವತಿ ಶೆಟ್ಟಿ, ಶ್ರೀಮತಿ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲೆ ಡಾಕ್ಟರ್ ರಶ್ಮಿ ಚಿತ್ತಲಾಂಗೆ, ರಾತ್ರಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್ ಎಸ್ ಭಂಡಾರಿ ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ವಿವಿಧ ಉಪಸಮಿತಿಗಳ…

Read More