Author: admin

ಲೀಲಣ್ಣ ಅಜಾತಶತ್ರು. ಕೂಡಿಟ್ಟಿದ್ದರೆ ಕೋಟ್ಯಾಧಿಪತಿ. ಆದರೆ ಹಂಚಿದ ಒಂದೊಂದು ‌ಪೈಸೆಯೂ ಕೂಡ ತನ್ನ ಕಿಸೆಯಿಂದಲೇ ಬೆವರು ಸುರಿಸಿ ದುಡಿದ ಹಣದಿಂದ ಸತ್ಯದ ಬಾಗಿಲು ಅವರ ಹಿಂದೆಯೇ ಇತ್ತು. ಮರ್ಯಾದೆ ಅಂದರೆ ಯಾವುದನ್ನೂ ಲೆಕ್ಕಿಸದೆ ಜೀವನ ಪರ್ಯಾಂತ ಬದುಕು ಸಾಗಿಸಿದ ಪುಣ್ಯಾತ್ಮ ಲೀಲಣ್ಣ. ಹೋಗ್ಬಿಟ್ರಿ ನೀವು ಮಾನದ ಹಿಂದೆ ಪ್ರಾಣವನ್ನು ಲೆಕ್ಕಿಸದೆ ಹೋಗ್ಬಿಟ್ರಿ ನಮ್ಮನ್ನು ಬಿಟ್ಟು ಹೋಗ್ಬಿಟ್ರಿ. ನಿಮ್ಮ ಕಾಲಿನ‌ ಧೂಳಿಗೂ ಸಮಾನವಲ್ಲದ ಆ ದತ್ತು ಪುತ್ರಿಯ ಕಪಟ ನಾಟಕಕ್ಕೆ ಬಲಿಯಾಗಿ ಬಿಟ್ರಿ. ನಿಮ್ಮ ಗಟ್ಟಿ ಧ್ವನಿ ಕಿವಿಯಲ್ಲಿ ಮತ್ತೆ ಮತ್ತೆ ಪ್ರತಿಧ್ವನಿಸುತ್ತಿದೆ. ಕಾಪುವಿನ ಗೋಡೆ ಗೋಡೆಯು ನಿಮ್ಮ ಬಗ್ಗೆ ಮಾತಾಡುತ್ತಿದೆ. ಬೀಸುತ್ತಿರುವ ಗಾಳಿ ಲೀಲಣ್ಣ ಅನ್ನುತ್ತಿದೆ. ಒಂದು ಬಾರಿಯಾದರೂ ಓ…. ಎನ್ನುವಿರಾ ಲೀಲಣ್ಣ..!! ಮನಸ್ಸಿನ ಭಾರವನ್ನು ನೀವು ಹಂಚಿಕೊಂಡಿಲ್ಲ. ದುಃಖವನ್ನು ಹೊರ ಪ್ರಪಂಚಕ್ಕೆ ಬಿಟ್ಟು ಕೊಟ್ಟಿಲ್ಲ. ಮಕ್ಕಳಿಗೆ ತಾತನಾದಿರಿ, ಹಿರಿಯರಿಗೆ ಗುರುವಾದಿರಿ. ಸಾವಿರಾರು ಮಂದಿಗೆ ಅಣ್ಣನಾಗಿ ಜೊತೆಗೆ ನಿಂತಿರಿ. ನೂರಾರು ಹೆಣ್ಣು ಮಕ್ಕಳಿಗೆ ಧಾರೆ ಎರೆದಿರಿ. ಸಾವಿರಾರು ವಿದ್ಯಾರ್ಥಿಗಳಿಗೆ ಜೀವನ ಕಟ್ಟಿ…

Read More

ಮುಂಬಯಿ (ಆರ್ ಬಿ ಐ), ಅ.05: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ (ರಿಜಿಸ್ಟರ್ ) ಆಗಿರುವ ಗಡಿನಾಡ ಕನ್ನಡಿಗ ತುಳುವ ಡಾ| ಸುಬ್ಬಣ್ಣ ರೈ ಅವರು ಪ್ರಪ್ರಥಮ ಮುಂಬಯಿ ವಾಪಸಿಗರ ಸಮ್ಮಿಲನ ಐತಿಹಾಸಿಕ ಕಾರ್ಯಕ್ರಮದ ಸರ್ವಾಧ್ಯಕ್ಷರಾಗಿದ್ದಾರೆ ಎಂದು ಸಂಘಟಕ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ರಾಜ್ಯಾಧ್ಯಕ್ಷ, ವಿಶ್ವ ಮಾಧ್ಯಮ ಚಕ್ರವರ್ತಿ ಗೌರವಕ್ಕೆ ಪಾತ್ರರಾಗಿರುವ ಡಾ| ಶೇಖರ ಅಜೆಕಾರು ತಿಳಿಸಿದ್ದಾರೆ. ಕರಾವಳಿಗರ ಎರಡನೇ ತವರು ಎಂದೇ ಖ್ಯಾತವಾಗಿರುವ ಮುಂಬಯಿ ಕನ್ನಡಿಗರು ತುಳು-ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರು. ನಿವೃತ್ತರಾಗಿ, ಊರಿನ ಅನಿವಾರ್ಯತೆಯಿಂದ, ಸೋಲು-ಗೆಲುವುಗಳಿಂದಾಗಿ ಊರಿಗೆ ಬಂದು ನೆಲೆಸಿದ್ದಾರೆ. ಮುಂಬಯಿಯಲ್ಲಿದ್ದು ಬಳಿಕ ಊರಿಗೆ ವಾಪಸು ಬಂದು ನೆಲೆಸಿರುವವರು ಒಂದು ದಿನ ಸಮ್ಮಿಲನವಾಗ ಬೇಕು. ಅಂತ ಮುಂಬಯಿಯಿಂದ ವಾಪಸು ಬಂದು ಊರಲ್ಲಿ ನೆಲೆಸಿರುವರನ್ನು ಒಂದು ಸೂರಿನಡಿ ತರುವ ಪ್ರಯತ್ನ ಇದಾಗಿದೆ. ಉಡುಪಿ ಜಿಲ್ಲೆಯ ರಜತ ಸಂಭ್ರಮ, ಕನ್ನಡ ಸೇವಾ ಸಂಘ ಪೊವಾಯಿ ಇದರ ಬೆಳ್ಳಿ ಹಬ್ಬದ ಸಂಧರ್ಭದಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿತವಾಗಿದೆ. ಡಾ|…

Read More

ಬಂಟರ ಸಂಘ ಸಿಟಿ ಪ್ರಾದೇಶಿಕ ಸಮಿತಿ ಮುಂಬಯಿಯ 122 ಬಂಟ ಪುಟಾಣಿಗಳೊಂದಿಗೆ ಬಂಟ ಭವಿಷ್ಯ ಸನಾತನ ಸನ್ನಡತೆಯ ಸತ್ಸಂಗ ಸಂಭ್ರಮ ಕಾರ್ಯಕ್ರಮವು ಜನವರಿ 27 ರಂದು ಸಂಜೆ 3:30 ಕ್ಕೆ ಬಂಟರ ಸಂಘ ಮುಂಬಯಿಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಿಟಿ ಪ್ರಾದೇಶಿಕ ಸಮಿತಿಯ ಎಲ್ಲಾ ಸದಸ್ಯರು ಸೇರಿ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಮುಕ್ತಾನಂದ ಸಭಾಗೃಹದ ವೇದಿಕೆಗೆ ಸರಸ್ವತಿ ದೇವಿಯನ್ನು ಪೂರ್ಣ ಕುಂಭ, ಭಜನೆಯೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ಕುಣಿತ ಭಜನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್ ಕೆ ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಮನ್ವಯಕರಾದ ಶ್ರೀ ರವೀಂದ್ರನಾಥ ಭಂಡಾರಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾದ್ಯಕ್ಷರಾದ ಕಾರ್ಯಾನಗುತ್ತು ಶಿವರಾಂ ಶೆಟ್ಟಿ ಮತ್ತು…

Read More

ಪ್ರಕೃತಿಯ ಮಡಿಲಲ್ಲಿ ಮೈವೆತ್ತು ನಿಂತಿರುವ ಶಿಬರೂರಿನ ಶ್ರೀ ಕೊಡಮಣಿತ್ತಾಯ ದೈವಸ್ಥಾನವು ಐತಿಹಾಸಿಕ ಮತ್ತು ಕಾರಣಿಕ ಕ್ಷೇತ್ರ. ಪೊಡಮಟ್ಟವರ ಒಡಲಿಷ್ಟಾರ್ಥವ ಕರುಣಿಸುವ ಧರ್ಮದೈವ ಶಿಬರೂರ ಕೊಡಮಣಿತ್ತಾಯ. ಪಾಡ್ದನದಲ್ಲಿ ತಿಳಿಸುವ ಕೊಡಮಣಿತ್ತಾಯ ದೈವದ ಹುಟ್ಟಿನ ಕಥೆ ಹೀಗಿದೆ. ತುಳುನಾಡಿನ ಪ್ರಸಿದ್ಧ ಜೈನ ಮನೆತನದ ಕೊಡಮಣಿ ಬರ್ಕೆಯ ಅರಸು ಕುಂಞ ಆಳ್ವರು. ಅಂದೊಂದು ಶುಭ ವರ್ಷ ತುಲಾ ಸಂಕ್ರಮಣ ಸಮಯದಲ್ಲಿ ಗಂಗಾ ಉಗಮ ಸ್ಥಾನದ ಗಂಗಾಮೂಲ ಸ್ಥಳದಲ್ಲಿ ನಡೆಯುವ ಗಂಗೆಯ ಉತ್ಸವಕ್ಕೆ ಹೋಗುತ್ತಾರೆ. ನಾಲ್ಕೆಂಟು ದಿನಗಳ ಉತ್ಸವದಲ್ಲಿ ಪಾಲ್ಗೊಂಡು ಇನ್ನು ನನ್ನ ಕೊಡಮಣಿ ಬರ್ಕೆಗೆ ಹಿಂತಿರುಗುತ್ತೇನೆಂದು ಮನದಲ್ಲಿ ನಿಶ್ಚಯಿಸಿ ಹಿಂತಿರುಗಲು ದೈವವೊಂದು ಪ್ರಕಟಗೊಂಡು ನಾನು ಕೊಡಮಣಿ ಬರ್ಕೆಗೆ ಬರುತ್ತೇನೆಂದು ಹೇಳುತ್ತದೆ. ಆಳ್ವರು ದೈವದ ಹೆಸರೇನೆಂದು ಕೇಳಲು ’ಹೊಸ ದೈವ ಕುಮಾರ (ಹೊಸದೈವ ಕುಮಾರೆ ಪಂಡ್ದ್ ಬರ್ರ‍ೆ)’ ಎಂದು ಕುಂಞ ಆಳ್ವರ ಬೆನ್ನು ಹಿಡಿದು ಬರುತ್ತದೆ. ಅವರ ಹಿಂದೆ ಬಂದ ದೈವವು ಕೊಡಂಗೆ ಗವಸಾಲೆ ಬರ್ಕೆಯಲ್ಲಿ ಹಾಲು ನೀರು ಸೇವಿಸಿ ಕೊಡಮಣಿ ಬರ್ಕೆಗೆ ಬರುತ್ತದೆ. ಮುಂದೆ ಕೊಡಮಣಿ…

Read More

✍ಕೆ .ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ. ಸುದ್ದಿ @ಹೈಕಾಡಿ (ಕುಂದಾಪುರ ) ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಲ್ಕೆರೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರು ,ಕೃಷಿಕರು ಹೈನುಗಾರರಾದ  ಶ್ರೀಮತಿ ಚೈತ್ರ.ವಿ ಅಡಪ ಇವರಿಗೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಕಾಡಿ ಯಲ್ಲಿ  ಜರುಗಿದ ಹುಯ್ಯಾರು ಪಟೇಲ್ ಚಾರಿಟೆಬಲ್ ಟ್ರಸ್ಟ್ .(ರಿ.) ನವರು ನಡೆಸಿದ ಹತ್ತನೇ ವರ್ಷದ ವಾರ್ಷಿಕೋತ್ಸವ ದಿನಾಚರಣೆಯಲ್ಲಿ ಅಭಿನಂದನಾ ಸನ್ಮಾನ ಮಾಡಿ ಗೌರವಿಸಲಾಯಿತು. ಗ್ರಾಮೀಣ ಭಾಗದ ಕೈಲ್ಕೆರೆ ಪರಿಸರದಲ್ಲಿ ಸುಮಾರು 32  ಜಾನುವಾರುಗಳನ್ನು ಆರೈಕೆ ಮಾಡಿ ಪೋಷಿಸಿ, ಹೈನೋದ್ಯಮದಲ್ಲಿ ತನ್ನ ಹೆಸರನ್ನು ಪ್ರತಿಷ್ಠಾಪಿಸಿ ಕೊಂಡಿರುವುದರಿಂದ  ಈ ಕಾರ್ಯಕ್ರಮದಲ್ಲಿ  ಅಭಿನಂದಿಸಲಾಯಿತು. ಅದೇ ರೀತಿ ಚೈತ್ರ ವಿ. ಅಡಪ ಅವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಹಲವಾರು ಬಾರಿ ಸನ್ಮಾನ ಪುರಸ್ಕಾರಗಳು ದೊರೆತಿವೆ. ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ರೈತ ಸಂಘ ಆಯೋಜನೆ ಆಯೋಜನೆ ಮಾಡಿದ್ದು ,ಕಾರ್ಯಕ್ರಮದ ಅಧ್ಯಕ್ಷರಾಗಿ ಡಾ. ಕೆ. ರತ್ನಾಕರ್ ಶೆಟ್ಟಿ ಹುಯ್ಯಾರು,ಕಾರ್ಯಕ್ರಮದ…

Read More

ಮುಲುಂಡ್ ಪರಿಸರದ ಪ್ರಸಿದ್ಧ ವಿದ್ಯಾಸಂಸ್ಥೆ ನವೋದಯ ಇಂಗ್ಲಿಷ್ ಹೈಸ್ಕೂಲ್ ಮತ್ತು ಜೂನಿಯರ್ ಕಾಲೇಜಿನ ಸಂಚಾಲಕ ಸಂಸ್ಥೆ ನವೋದಯ ಕನ್ನಡ ಸೇವಾ ಸಂಘದ ವತಿಯಿಂದ ಅಯೋಧ್ಯೆಯ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆಯ ಶುಭ ಸಂದರ್ಭ ಶ್ರೀರಾಮೋತ್ಸವ – ನವೋದಯ ದೀಪೋತ್ಸವ ಎಂಬ ವಿಶೇಷ ಕಾರ್ಯಕ್ರಮವು ಸಂಸ್ಥೆಯ ನವೋದಯ ಸದನ ಸಭಾಗೃಹದಲ್ಲಿ ಜರಗಿತು. ಸಂಘದ ಅಧ್ಯಕ್ಷರು ಮತ್ತು ಸಂಸ್ಥೆಯ ಕಾರ್ಯಾಧ್ಯಕ್ಷ ಎಳತ್ತೂರುಗುತ್ತು ದಯಾನಂದ್ ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಮತ್ತು ಯುವ ವಿಭಾಗದ ಸರ್ವ ಸದಸ್ಯರು, ಶಾಲೆಯ ಮುಖ್ಯ್ಯೊಪಾಧ್ಯಾಯಿನಿ, ಶಿಕ್ಷಕ ಶಿಕ್ಷಕಿಯರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಂಘದ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು. ನವೋದಯ ಭಜನಾ ಮಂಡಳಿಯ ಸದಸ್ಯರಿಂದ, ವಿಜಯ್ ಶೆಟ್ಟಿ ಮೂಡುಬೆಳ್ಳೆ ಮತ್ತು ತಂಡದವರಿಂದ ಭಜನೆ ಹಾಗೂ ನವೋದಯದ ಮಕ್ಕಳಿಂದ ಕುಣಿತ ಭಜನಾ ಕಾರ್ಯಕ್ರಮವು ಸರ್ವರ ಮೆಚ್ಚುಗೆಗೆ ಪಾತ್ರವಾಯಿತು. ನವೋದಯ ದೀಪೋತ್ಸವದಲ್ಲಿ ಭಕ್ತರು ಜತೆಗೂಡಿ ಸುಮಾರು 1000 ಹಣತೆಗಳ ದೀಪ ಪ್ರಜ್ವಲನೆ…

Read More

ಬ್ರಹ್ಮಾವರ-ಡಿ.16: ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಡಿ. 16 ರಂದು ಮಕ್ಕಳ ಸಂತೆ ‘ಜಿ ಎಮ್ ಬಜಾರ್’ನ್ನು ಅಯೋಜಿಸಲಾಗಿತ್ತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಜ್ಯೋತಿ ಬೆಳಗಿಸಿ ಜಿ ಎಮ್ ಬಜಾರನ್ನು ಉದ್ಘಾಟಿಸಿ ಮಾತನಾಡಿ ನಮ್ಮ ದಿನನಿತ್ಯದ ಜೀವನದಲ್ಲಿ ಹಣವು ಮುಖ್ಯವಾಗಿದ್ದು ಅದರ ಮೌಲ್ಯಗಳ ಅರಿವು ಮಕ್ಕಳಿಗೆ ಇರಬೇಕು. ಜೊತೆಗೆ ವಸ್ತುಗಳನ್ನು ಕೊಂಡುಕೊಳ್ಳುವ ಹಣವನ್ನು ವೆಚ್ಚಮಾಡುವ ಪರಿಜ್ಞಾನವಿರಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮಕ್ಕಳ ಸಂತೆಯು ವಿದ್ಯಾರ್ಥಿಗಳಿಗೆ ವಸ್ತುಗಳ ಖರೀದಿ, ಅವುಗಳ ಬೆಲೆ, ವ್ಯವಹಾರ ಜ್ಞಾನವನ್ನು ಬೆಳೆಸುತ್ತದೆ. ಇದು ಅವರು ಸಮಾಜದಲ್ಲಿ ವ್ಯವಹರಿಸುವಾಗ ನೆರವಾಗುತ್ತದೆ ಎಂದರು. ಶಾಲೆಯ ಪ್ರಿ ನರ್ಸರಿ, ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳು ತಮ್ಮ ಪೆÇೀಷಕರ ಜೊತೆ ಹಣವನ್ನು ನೀಡಿ ವಸ್ತುಗಳನ್ನು ಖರೀದಿಸಿ ಸಂತೆಯ ಪ್ರಾತ್ಯಕ್ಷಿಕ ಅನುಭವ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಸಿನಿಮಾ ಸಮಾಜದಿಂದ ಸೋಮವಾರ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಮತ್ತು ಪತ್ರಿಕೋದ್ಯಮ ವಿಭಾಗದ ಸ್ಟುಡಿಯೋದಲ್ಲಿ ‘ರಿಬೇಟ್’ (ರಿವೀವ್ ಆ್ಯಂಡ್ ಡಿಬೇಟ್) ಕಾರ್ಯಕ್ರಮ ನಡೆಯಿತು. ಮೊದಲಿಗೆ ವಿದ್ಯಾರ್ಥಿಗಳಿಗೆ ‘ಬದಲಾವಣೆ’ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಬಳಿಕ ಬಿಡ್ ಮೂಲಕ ವಿದ್ಯಾರ್ಥಿಗಳ ಎರಡು ತಂಡಗಳನ್ನು ಆಯ್ಕೆ ಮಾಡಲಾಯಿತು. ಇತ್ತಂಡಗಳಿಗೆ ‘ಲೂಸಿಯಾ’ ಮತ್ತು ‘ಸಿನಿ ಅಡ್ಡೆ’ ಎಂದು ವಿದ್ಯಾರ್ಥಿಗಳು ಹೆಸರಿಸಿಕೊಂಡರು. ಕಿರುಚಿತ್ರದಲ್ಲಿ ಪ್ರಸ್ತಾವಗೊಂಡ ಪ್ರಮುಖ 5 ವಿಷಯಗಳ ಕುರಿತು ಎರಡು ತಂಡಗಳ ಮಧ್ಯೆ ಪರ-ವಿರೋಧ ಚರ್ಚೆ ನಡೆಯಿತು. ಅನಂತರ ಸಿನಿಮಾದ ತಂತ್ರಜ್ಞಾನ, ಚಿತ್ರಕತೆ ಕುರಿತು ರಸಪ್ರಶ್ನೆ ನಡೆಯಿತು. ವಿದ್ಯಾರ್ಥಿ ಅವಿನಾಶ್ ಕಟೀಲ್ ಕಾರ್ಯಕ್ರಮ ನಡೆಸಿಕೊಟ್ಟರು. ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹಾಗೂ ಸೃಜನಶೀಲತೆಯ ಮೂಲಕ ಆಳ್ವಾಸ್ ಸಿನಿಮಾ ಸಮಾಜದ ಕಾರ್ಯಕ್ರಮ ವಿಭಿನ್ನವಾಗಿದೆ’ ಎಂದು ಶ್ಲಾಘಿಸಿದರು. ಸಹಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕರಾದ ಹರ್ಷವರ್ಧನ ಪಿ.ಆರ್. ನಿಶಾನ್ ಕೋಟ್ಯಾನ್, ದೀಕ್ಷಿತಾ, ಇಂಚರಾ ಗೌಡ ಮತ್ತು ಅಕ್ಷಯ್ ಕುಮಾರ್ ತೀರ್ಪುಗಾರರಾಗಿ ಸಹಕರಿಸಿದರು.

Read More

ವಿದ್ಯಾಗಿರಿ: ಪಡುವಣದಲ್ಲಿ ನೇಸರ ಹೊಂಗಿರಣ ಬೀರಿ ಬೈ ಬೈ ಹೇಳುತ್ತಿದ್ದರೆ, ಇತ್ತ ಮೂಡಣ ದಿಕ್ಕಿನ ಬಿದಿರೆಯ ನಾಡಲ್ಲಿ, ಶಿಕ್ಷಣ- ಸಾಂಸ್ಕøತಿಕ ಕಾಶಿಯ ಬೀಡಲ್ಲಿ ನಾದ ನಿನಾದ ‘ಗಾನ ವೈಭವ’ ಮೊಳಗಿತು. ಹಿಂದಿ, ತಮಿಳು, ತೆಲುಗು, ಮಲಯಾಳಂ, ಕನ್ನಡ, ಬೆಂಗಾಲಿ, ಗುಜರಾತಿ ಮತ್ತು ಮರಾಠಿ ಸೇರಿದಂತೆ 19ಕ್ಕೂ ಅಧಿಕ ಭಾಗಗಳಲ್ಲಿ 3500 ಹಾಡುಗಳನ್ನು ಹಾಡಿದ ಖ್ಯಾತ ಹಿನ್ನೆಲೆ ಗಾಯಕ ಬಿನ್ನಿ ದಯಾಲ್ ಅವರ ಬಾಲಿವುಡ್, ಪಂಜಾಬ್, ತಮಿಳು ಸೇರಿದಂತೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದ ಸ್ವರ ಮಾಧುರ್ಯಕ್ಕೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ತುಂಬಿದ ಪ್ರೇಕ್ಷಕರ ಕರತಾಡನ, ಜಯಕಾರ ಮುಗಿಲು ಮುಟ್ಟಿತು. ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸಿದ ಸಭಾಂಗಣದ ಮುಂಭಾಗದ ಭವ್ಯ ವೇದಿಕೆಯಲ್ಲಿ ಬಿನ್ನಿ ಗಾನದ ಬೆಳಕು ಹರಿಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ಆಳ್ವಾಸ್ ವಿರಾಸತ್ ನ ಎರಡನೇ ದಿನವಾದ ಶುಕ್ರವಾರದ ಚಿತ್ರಣ. ‘ಈ ಹಾಡಲ್ಲಿ ನಾನು ಹೆಚ್ಚು ಮಾತನಾಡಬೇಕಾಗುತ್ತದೆ’…

Read More

2016ರ ಒಂದು ದಿನ ಕನ್ನಡದಲ್ಲಿ ರಿಕ್ಕಿ ಎಂಬ ಸಿನೆಮಾವು ಬಿಡುಗಡೆ ಆಗಿತ್ತು. ಆ ಸಿನೆಮಾದ ನಿರ್ದೇಶಕರಾಗಿ ತನ್ನ ಮೊದಲ ಹೆಜ್ಜೆಯನ್ನು ಇಡುತ್ತಿದ್ದ ಈ ಕುಂದಾಪುರದ ಕೆರಾಡಿ ಗ್ರಾಮದ ಹುಡುಗನು ಆ ಸಿನೆಮಾಕ್ಕೆ ಥಿಯೇಟರ್ ಸಿಗಲಿ ದೇವರೇ ಎಂದು ತನ್ನ ಫೇಸ್ ಬುಕ್ ಪುಟದಲ್ಲಿ ತಾನೇ ಬರೆದುಕೊಂಡಿದ್ದರು! ಆ ಸಿನೆಮಾಕ್ಕೆ ಥಿಯೇಟರ್ ಸಿಕ್ಕಿತೋ ಗೊತ್ತಿಲ್ಲ! ಆದರೆ ಇಂದು ಅದೇ ಹುಡುಗ ನಿರ್ದೇಶನ ಮಾಡಿ, ಪ್ರಮುಖ ಪಾತ್ರ ವಹಿಸಿರುವ ‘ ಕಾಂತಾರ ‘ ಎಲ್ಲೆಡೆಯೂ ಬಿಡುಗಡೆಯಾಗಿ ಕೆಲವು ದಿನಗಳು ಆಗಿವೆ. ಆದರೆ ಆ ಸಿನೆಮಾ ನೋಡಲು ಬಂದವರು ಟಿಕೆಟ್ ಸಿಗದೆ ಹಿಂದೆ ಹೋಗುವ ಪರಿಸ್ಥಿತಿಯು ಇಡೀ ರಾಜ್ಯದಲ್ಲಿ ಇಂದು ಇದೆ! ಕಾಂತಾರ ಕನ್ನಡ ಸಿನೆಮಾದ ಸುನಾಮಿ ಎಂದು ಇಂದು ಪ್ರೂವ್ ಆಗಿದೆ! ಸೂಪರ್ ಹಿಟ್ ಆಗಿರುವ ಕಾಂತಾರ ಸಿನೆಮಾ ಒಬ್ಬ ಗ್ರಾಮೀಣ ಹುಡುಗನ ಸಿನೆಮಾ ಬದುಕಿನ ಯಶಸ್ಸಿಗೆ ಭಾರೀ ಮುನ್ನುಡಿಯನ್ನು ಬರೆದಾಗಿದೆ! ಆ ಯುವಕನೆ ರಿಷಭ್ ಶೆಟ್ಟಿ! ನಮ್ಮ ಕುಂದಾಪುರದ ಕೆರಾಡಿ ಗ್ರಾಮದ ಹುಡುಗ!…

Read More