Author: admin
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನ ಮತ್ತು ಪೋಷಕಾಂಶ ಆಧ್ಯಯನ ವಿಭಾಗದಲ್ಲಿ ‘ಫ್ಯೂಜೊ’ ‘ಆಳ್ವಾಸ್ನಲ್ಲಿ ವೈವಿಧ್ಯ ಆಹಾರದ ಘಮಲು’
ವಿದ್ಯಾಗಿರಿ: ಬ್ರೌನಿ ಕೇಕ್, ಆಮ್ಲಾ ಶಾಟ್ಸ್, ಜಿಂಜರ್ ಜ್ಯೂಸ್, ಸೌತೆಕಾಯಿ ಕೂಲರ್, ಗ್ರೇಪ್ ಮೋಗುಮೊಗು, ಸೌತೆಕಾಯಿ ಸುಶಿ, ಪ್ಯಾನ್ ಕೇಕ್ ಬಾಂಬ್… ಹೀಗೆ ವೈವಿಧ್ಯಮಯ ದೇಸಿ ಹಾಗೂ ಪಾಶ್ಚ್ಯಾತ್ಯ ತಿನಿಸುಗಳ ಘಮಲು ಹಾಗೂ ರುಚಿಯ ಸವಿಯು ಆಹಾರ ಪ್ರಿಯರನ್ನು ಕೈ ಸೆಳೆದು ಕರೆಯುತ್ತಿತ್ತು. ಅದು ಯಾವುದೇ ತಾರಾ ಹೋಟೆಲ್, ಖ್ಯಾತ ಕೇಕ್ ಮಳಿಗೆ ಅಥವಾ ಫುಡ್ ಜಂಕ್ಷನ್ಗಳಲ್ಲ. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನ ಮತ್ತು ಪೋಷಕಾಂಶ ಆಧ್ಯಯನ ವಿಭಾಗದ ವತಿಯಿಂದ ಕಾಲೇಜಿನ ಅಬ್ದುಲ್ ಕಲಾಂ ಸ್ನಾತಕೋತ್ತರ ಕಟ್ಟಡದಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಶನಿವಾರ ಹಮ್ಮಿಕೊಂಡ ‘ಫ್ಯೂಜೊ – ಆಹಾರ ಮೇಳ’ದ ಘಮಲು. ಇನ್ಸ್ಟಾಗ್ರಾಂನಲ್ಲಿ ‘ಪುಳಿಮುಂಚಿ ವೈನ್ಸ್’ ಖ್ಯಾತಿ ಪಡೆದ ಹಾಗೂ ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಜೇಸನ್ ಪಿರೇರಾ ಆಹಾರ ಮೇಳವನ್ನು ಉದ್ಘಾಟಿಸಿ ಹಾರೈಸಿದರು. ಬಳಿಕ ವಿವಿಧ ಮಳಿಗೆಗಳ ತಿನಿಸುಗಳನ್ನು ವೀಕ್ಷಿಸಿ, ಸವಿದು ಸಂತಸ ವ್ಯಕ್ತಪಡಿಸಿದರು. ಸೃಜನಾತ್ಮಕವಾಗಿ ಕಾಗದದಿಂದ ತಯಾರಿಸಿದ ‘ಹಿಮ ಪುರುಷ’ (ಸ್ನೋ ಮ್ಯಾನ್) ಆಕರ್ಷಿಸಿತು. ‘ಒಂದು ತಿಂಗಳಿನಿಂದ…
ಯುವ ಬಂಟರ ಸಂಘ ಪುತ್ತೂರು ನೇತೃತ್ವದಲ್ಲಿ ದಿ. ಸೀತಾರಾಮ ಶೆಟ್ಟಿ ಕಂಬಳತ್ತಡ್ಡರವರ ಸ್ಮರಣಾರ್ಥ ಉಚಿತ ದಂತ ತಪಾಸಣಾ ಶಿಬಿರ
ಯುವ ಬಂಟರ ಸಂಘ ಪುತ್ತೂರು ಇವರ ನೇತೃತ್ವದಲ್ಲಿ ಜನ್ಮ ಫೌಂಡೇಶನ್ ಟ್ರಸ್ಟ್ ಪುತ್ತೂರು, ಇಂಟರಾಕ್ಟ್ ಕ್ಲಬ್, ರಾಮಕೃಷ್ಣ ಯುವ, ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದಲ್ಲಿ ಯುವ ಬಂಟರ ಸಂಘದ ಪೂರ್ವಧ್ಯಕ್ಷರಾದ ದಿ. ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಇವರ ಸ್ಮರಣಾರ್ಥ ಉಚಿತ ದಂತ ತಪಾಸಣಾ ಚಿಕಿತ್ಸಾ ಶಿಬಿರ ಅ. 4 ರಂದು ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಪುತ್ತೂರು ಇಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು. ಶಿಬಿರವನ್ನು ಉದ್ಘಾಟಿಸಿದ ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇದರ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಯುವ ಬಂಟರ ಸಂಘ ದಿ. ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಇವರ ಸ್ಮರಣಾರ್ಥ ಮಾಡುವ ಶಿಬಿರ ಅರ್ಥಪೂರ್ಣವಾದುದು. ಇದಕ್ಕೆ ಸಹಕರಿಸಿದ ಕೆ.ವಿ.ಜಿ ಶಿಕ್ಷಣ ಸಂಸ್ಥೆಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಖ್ಯ ಅತಿಥಿಯಾಗಿದ್ದ ಬಂಟರ ಸಂಘದ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಸಮಾಜಕ್ಕೆ ಉಪಯೋಗವಾಗುವ ಇಂತಹ ಬೇರೆ ಬೇರೆ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಸಾರ್ವಜನಿಕರೆಲ್ಲರೂ ಇದರ ಸದುಪಯೋಗ ಪಡೆಯಲಿ…
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ ಮಾತೆ ಶ್ರೀ ಮಾತಾನಂದಮಯಿಯವರ ಆಶೀರ್ವಾದದೊಂದಿಗೆ ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಥಾಣೆ (ಮಹಾರಾಷ್ಟ್ರ) ಘಟಕದ ಭಜನಾ ಸತ್ಸಂಗವು ಆಗಸ್ಟ್ 31 ರ ಹುಣ್ಣಿಮೆಯ ಶುಭ ದಿನದಂದು ಥಾಣೆಯ ವರ್ತಕ್ ನಗರದ ಶ್ರೀ ಹನುಮಾನ್ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಬಳಗದ ಹಿರಿಯರಾದ ವಾಮಯ್ಯ ಬಿ ಶೆಟ್ಟಿ, ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಮಾಜಿ ಅಧ್ಯಕ್ಷೆ ರೇವತಿ ವಿ ಶೆಟ್ಟಿ, ಅಧ್ಯಕ್ಷೆ ಶ್ವೇತಾ ಸಿ ರೈ, ಬಳಗದ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾದ ಮೋಹನ್ ಹೆಗ್ಡೆ, ಗುಣಪಾಲ್ ಶೆಟ್ಟಿ ಮತ್ತು ಥಾಣೆಯ ಗುರುಭಕ್ತರು ಉಪಸ್ಥಿತರಿದ್ದು ಭಜನಾ ಸತ್ಸಂಗಕ್ಕೆ ಚಾಲನೆ ನೀಡಲಾಯಿತು.
ಮುಂಬಯಿ ಸಾರಸ್ವತ ಲೋಕದ ಸಜ್ಜನ ಸಾಹಿತಿ, ಅಜಾತ ಶತ್ರು ‘ಶಿಮುಂಜೆ ಪರಾರಿ’ ಎಂಬ ವಿಶಿಷ್ಟ ಕಾವ್ಯ ನಾಮದಿಂದ ಪ್ರಸಿದ್ದಿಯಾದ ತುಳು ಕನ್ನಡ ಕವಿ, ನಾಟಕಗಾರ, ಅನುವಾದಕಾರ, ಅಧ್ಯಾಪಕ ಕಂಠದಾನ ಕಲಾವಿದ ಮತ್ತು ನಟ ಹೀಗೆ ಬಹುಮುಖ ಪ್ರತಿಭೆಗಳಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದ ಶಿಮುಂಜೆ ಪರಾರಿ ಸೀತಾರಾಮ ಮುದ್ದಣ್ಣ ಶೆಟ್ಟಿ ಅವರನ್ನು ಈ ಸಾರಿಯ ‘ವಯೋ ಸಮ್ಮಾನ’ದ ಗೌರವಕ್ಕೆ ಐಲೇಸಾ ದಿ ವಾಯ್ಸ್ ಆಫ್ ಓಷನ್ (ರಿ.) ಸಂಸ್ಥೆ ಆಯ್ಕೆ ಮಾಡಿದೆ. ಬೆಂಗಳೂರಿನ ಐಲೇಸಾ ಅಂತಾರಾಷ್ಟ್ರೀಯ ಡಿಜಿಟಲ್ ಸಂಸ್ಥೆ ತನ್ನ ಸ್ಥಾಪನೆಯ ಮೂರನೇ ವರ್ಷವನ್ನು ಇದೇ ಆಗಸ್ಟ್ ತಿಂಗಳಲ್ಲಿ ಪೂರ್ಣಗೊಳಿಸಲಿದ್ದು ಆ ಪ್ರಯುಕ್ತ ಈ ವಯೋ ಸಮ್ಮಾನ ಗೌರವವನ್ನು ಶಿಮುಂಜೆ ಪರಾರಿಯವರಿಗೆ ಜುಲೈ ತಿಂಗಳ 29 ನೇ ತಾರೀಕಿನಂದು ಸಲ್ಲಿಸುವುದರೊಂದಿಗೆ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ. ಖ್ಯಾತ ಹಿನ್ನಲೆ ಗಾಯಕ ರಮೇಶ್ಚಂದ್ರರ ಸಾರಥ್ಯದ ಐಲೇಸಾ ಸಂಸ್ಥೆಯ ವಯೋ ಸಮ್ಮಾನ್ ಗೌರವ ಸಮಿತಿಯು ಅನಂತರಾವ್ ನೇತೃತ್ವದಲ್ಲಿ ಮುಂಬಯಿಯ ಸಾಹಿತಿ ಪೇತ್ರಿ ವಿಶ್ವನಾಥ್…
ಕಾಸರಗೋಡು ಕರ್ನಾಟಕಕ್ಕೆ ಸೇರಿದಾಗ ಮಾತ್ರ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಆತ್ಮಕ್ಕೆ ಶಾಂತಿ – ಡಾ. ಇಂದಿರಾ ಹೆಗ್ಡೆ
ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ತಮ್ಮ ಉಸಿರಿರುವವರೆಗೂ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಶ್ರಮಿಸಿದ್ದಾರೆ. ಮಹಾಜನ ವರದಿಯಲ್ಲೂ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ವರದಿ ನೀಡಿದೆ. ಹಾಗಾಗಿ ಸರಕಾರ ಈ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ಎಂದು ಲೇಖಕಿ ಡಾ. ಇಂದಿರಾ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಬಸವನಗುಡಿಯ ಬಿಎಂಶ್ರೀ ಪ್ರತಿಮೆಯ ಎದುರು ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಸಂಘಟನೆಗಳು ಆಯೋಜಿಸಿದ್ದ ‘ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಿಟಿಷರ ನಂತರವು ಕೆಲ ಕಾಲ ಕಾಸರಗೋಡು ಅಪ್ಪಟ ಕನ್ನಡ ನಾಡಾಗಿತ್ತು. ಕೋರ್ಟ್ ತೀರ್ಪುಗಳು ಕನ್ನಡದಲ್ಲಿ ಬರುತ್ತಿದ್ದವು. ಈಗಲೂ ಅಲ್ಲಿ ನೂರಾರು ಕನ್ನಡ ಶಾಲೆಗಳಿವೆ. ಕಾಸರಗೋಡು ಕರ್ನಾಟಕಕ್ಕೆ ಸೇರಿದಾಗ ಮಾತ್ರ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಆತ್ಮಕ್ಕೆ ಶಾಂತಿ ದೊರಕುತ್ತದೆ ಎಂದರು. ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ. ನಂ. ಚಂದ್ರಶೇಖರ ಮಾತನಾಡಿ, ನಮ್ಮಲ್ಲೇ ಇರುವ ಬೆಳಗಾವಿಯನ್ನು ಉಳಿಸಿಕೊಳ್ಳುತ್ತೇವೆ ಎನ್ನುವಂತಹ ವಿರೋಧಾಭಾಸದ ಹೇಳಿಕೆಯನ್ನು ನೀಡುತ್ತಿರುವ ನಾವು ಮಹಾಜನ ವರದಿಯು…
2022-23 ನೇ ಶೈಕ್ಷಣಿಕ ವರ್ಷದ ಸಿಬಿಎಸ್ ಇ ಬೋರ್ಡ್ ನ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪುಣೆ ಚಿಂಚ್ವಾಡ್ ಪೋದಾರ್ ಇಂಟರ್ ನ್ಯಾಷನಲ್ ಹೈಸ್ಕೂಲ್ ವಿದ್ಯಾರ್ಥಿನಿ ತೃಪ್ತಿ ಹರೀಶ್ ಶೆಟ್ಟಿ ಶೇ . 88 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಈಕೆ ತುಳು ಸಂಘ ಪಿಂಪ್ರಿ- ಚಿಂಚ್ವಾಡ್ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್ ಹಾಗೂ ಮಿಜಾರ್ ಕಾಂಬೆಟ್ಟು ಜಯಲಕ್ಷ್ಮಿ ಶೆಟ್ಟಿಯವರ ಪುತ್ರಿ.
ಮುಂಬಯಿ ವಿಶ್ವವಿದ್ಯಾನಿಲಯ, ಕನ್ನಡ ವಿಭಾಗದ ಎಂ. ಎ. ದ್ವಿತೀಯ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಸವಿತಾ ಅರುಣ್ ಶೆಟ್ಟಿ ಅವರು ‘ವ್ಯಾಸರಾಯ ಬಲ್ಲಾಳ ಅತ್ಯುತ್ತಮ ವಿದ್ಯಾರ್ಥಿ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ. ಹೊರನಾಡಾದ ಮುಂಬೈಯಲ್ಲಿ ನೆಲೆಸಿ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಕನ್ನಡ ಸಾಹಿತ್ಯವನ್ನು ವಿಭಿನ್ನ ನೆಲೆಗಳಲ್ಲಿ ಬಲಗೊಳಿಸಿದ ಸಾಹಿತಿ ವ್ಯಾಸರಾಯ ಬಲ್ಲಾಳ ಅವರ ಶತಮಾನೋತ್ಸವದ ನೆನಪಿಗೆ ಮುಂಬೈ ವಿಶ್ಕವಿದ್ಯಾನಿಲಯದ ವಿದ್ಯಾರ್ಥಿಯೊಬ್ಬರಿಗೆ ಅತ್ಯುತ್ತಮ ವಿದ್ಯಾರ್ಥಿ ಪುರಸ್ಕಾರ ನೀಡುವ ನಿರ್ಧಾರಕ್ಕೆ ಬರಲಾಗಿದ್ದು, ಈ ಚೊಚ್ಚಲ ಪುರಸ್ಕಾರಕ್ಕೆ ಸವಿತಾ ಅರುಣ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ನಗದು ಬಹುಮಾನ, ಕೃತಿ ಕರಂಡಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಸವಿತಾ ಅರುಣ್ ಶೆಟ್ಟಿ ಅವರು ಈಗಾಗಲೇ ‘ಮಿತ್ರಾ ವೆಂಕಟ್ರಾಜ್ – ಬದುಕು ಬರಹ’ ಎಂಬ ಸಂಪ್ರಬಂಧವನ್ನು ರಚಿಸಿ ವಿಶ್ವ ವಿದ್ಯಾಲಯಕ್ಕೆ ಸಾದರಪಡಿಸಿದ್ದಾರೆ. ಇದೀಗ ” ಮುಂಬೈ ಕನ್ನಡ ಲೋಕದ ಅವಲೋಕನ ” ಎಂಬ ಶೋಧ ಸಂಪ್ರಬಂಧದ ರಚನೆಯಲ್ಲಿ ನಿರತರಾಗಿದ್ದಾರೆ. ಸವಿತಾ ಅರುಣ್ ಶೆಟ್ಟಿ ಅವರು ಉತ್ತಮ ಸಾಹಿತ್ಯಾಸಕ್ತರಾಗಿದ್ದು, ಅವರು…
ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲದ ನೂತನ ಧ್ವಜಸ್ತಂಭ ಶೋಭಾಯಾತ್ರೆಗೆ ಮಾ. 29ರ ಮಧ್ಯಾಹ್ನ 3.30ಕ್ಕೆ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಚಾಲನೆ ನೀಡಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಡಾ| ಜಿ. ಶಂಕರ್, ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಜ್ವಲ್ ಡೆವಲಪರ್ನ ಪುರುಷೋತ್ತಮ ಪಿ. ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕೋಟ ಶ್ರೀ ಅಮೃತೇಶ್ವರಿ ದೇಗುಲದ ಅಧ್ಯಕ್ಷ ಆನಂದ ಸಿ. ಕುಂದರ್, ಕಾಪು ಹೊಸ ಮಾರಿಗುಡಿ ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಸಾಯಿರಾಧಾ ಡೆವಲಪರ್ನ ಮನೋಹರ ಎಸ್. ಶೆಟ್ಟಿ, ಉದ್ಯಮಿಗಳಾದ ಭುವನೇಂದ್ರ ಕಿದಿಯೂರು, ಡಾ| ತಲ್ಲೂರು ಶಿವರಾಮ ಶೆಟ್ಟಿ, ರಂಜನ್ ಕಲ್ಕೂರ್, ತೋನ್ಸೆ ಮನೋಹರ ಶೆಟ್ಟಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಆರ್ಕಿಟೆಕ್ಟ್ ಶ್ರೀ ನಾಗೇಶ್ ಹೆಗ್ಡೆ, ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ಮಟ್ಟು…
ದೇವರ ಅನುಗ್ರಹವಾದರೆ ನಮ್ಮೆಲ್ಲರ ಬಾಳು ಹಸನಾಗುತ್ತದೆ. ದೇವರನ್ನು ಮೀರಿ ಹೋಗುತ್ತೇನೆ ಎಂಬವನಿಗೆ ಜೀವನದಲ್ಲಿ ಏಳಿಗೆ ಇಲ್ಲ ಎಂದು ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನುಡಿದರು. ಮಂಗಳೂರು ಸಮೀಪದ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಶ್ರೀ ವಿಧ್ಯೆಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ದೇವಸ್ಥಾನದ ಪೂಜೆ ಪುರಸ್ಕಾರದ ಜತೆಗೆ ಅನ್ನದಾನ, ಸಂಸ್ಕೃತಿಯ ಕೇಂದ್ರವನ್ನಾಗಿ ಬೆಳೆಸುವ ಇಚ್ಛೆಯಿದೆ.ದೇವಸ್ಥಾನವನ್ನು ಇಷ್ಟು ಭವ್ಯವಾಗಿ ನಿರ್ಮಿಸಲು ಸಹಕರಿಸಿದ ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ದಾನಿಗಳಿಗೆ, ಕರ ಸೇವಕರಿಗೆ, ವಿವಿಧ ಸಮುದಾಯ ಭಕ್ತರಿಗೆ ದೇವಿಯು ಆಶೀರ್ವದಿಸಿ ಮಂಗಳವನ್ನುಂಟು ಮಾಡಲಿ ಎಂದರು. ಶಾಸಕ ಡಾ| ಭರತ್ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರದ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲು ಸಹಕಾರದಲ್ಲಿ ಸರಕಾರದಿಂದ 2 ಕೋ.ರೂ. ಬಿಡುಗಡೆಯಾಗಿದೆ. ಇದರ ಜತೆಗೆ ಮುಡಾ ವತಿಯಿಂದ 1 ಕೋ.ರೂ. ವೆಚ್ಚದಲ್ಲಿ ಕ್ಷೇತ್ರದ ಕೆರೆ ಅಭಿವೃದ್ಧಿ ಪಡಿಸಲಾಗುವುದು. ಸಮುದಾಯ ಭವನಕ್ಕೆ 1 ಕೋ.ರೂ. ಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ…
ಇತ್ತೀಚಿಗೆ ಬಂಟ ಸಮುದಾಯದ ಯುವ ನ್ಯಾಯವಾದಿ ಕುಲದೀಪ್ ಶೆಟ್ಟಿ ಇವರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ತೀವ್ರವಾಗಿ ಖಂಡಿಸಿದ್ದಾರೆ. ಸಮಾಜದ ನ್ಯಾಯಸಮ್ಮತ ವ್ಯವಸ್ಥೆಯಲ್ಲಿ ಪೋಲೀಸರ ಪಾಲು ಬಹು ದೊಡ್ಡದು. ಓವ್ರ ವಕೀಲರ ಮೇಲೆ ಪೂರ್ವಪರ ಯೋಚಿಸದೆ ಅಮಾನಿಯವಾಗಿ ಅರೆಬೆತ್ತಲೆಗೊಳಿಸಿ ಮಧ್ಯ ರಾತ್ರಿ ಬಾರ್ಯ ಮನೆಯಿಂದ ಕರೆದುಕೊಂಡು ಹೋಗಿರುವ ಕ್ರಮಕ್ಕೆ ತಾಲೂಕು ಬಂಟ ಸಮುದಾಯ ಖಂಡಿಸುತ್ತದೆ. ಪುಂಜಾಲಕಟ್ಟೆ ಆರಕ್ಷಕ ಉಪನಿರೀಕ್ಷಕರ ಅಮಾನವೀಯ ಕ್ರಮದ ಬಗ್ಗೆ ಸರಕಾರವು ತಕ್ಷಣ ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸಿ ಯುವ ನ್ಯಾಯವಾದಿ ಕುಲದೀಪ್ ಶೆಟ್ಟಿಯವರಿಗೆ ನ್ಯಾಯ ದೊರಕಿಸಿಕೊಟ್ಟು ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಬಂಟರ ಸಂಘ ತಿಳಿಸಿದೆ.. ಬಂಟರ ಸಂಘದಲ್ಲಿ ನಡೆದ ಸಭೆಯಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಉಪಾಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ಸಂಜೀವ ಶೆಟ್ಟಿ ಕುಂಟಿನಿ, ಕೋಶಾಧಿಕಾರಿ ಆನಂದ ಶೆಟ್ಟಿ ಐಸಿರಿ, ಮಾಜಿ ಅಧ್ಯಕ್ಷರುಗಳಾದ ಎಸ್. ಜಯರಾಮ…