Author: admin
“ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ”. “ನನ್ನ ಜೀವನದ ಪ್ರತಿಯೊಂದು ಘಟ್ಟದಲ್ಲೂ ಪತ್ರಕರ್ತ ಮಿತ್ರರು ನನ್ನ ಜೊತೆ ನಿಂತು ಪ್ರೋತ್ಸಾಹ ಮಾಡಿರುವ ಕಾರಣ ದೇಶ ವಿದೇಶಗಳಲ್ಲಿ ಸರ್ಕಸ್ ಸಿನಿಮಾ ಜನರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ಚಿತ್ರದ ನಿರ್ಮಾಪಕರು ಹಾಕಿರುವ ಬಂಡವಾಳ ವಾಪಾಸ್ ಬಂದಿದೆ. ಇದಕ್ಕಾಗಿ ಪ್ರತಿಯೊಬ್ಬ ಪ್ರೇಕ್ಷಕನಿಗೂ ಧನ್ಯವಾದಗಳು. ಗಿರಿಗಿಟ್, ಗಮ್ಜಾಲ್, ಸರ್ಕಸ್ ಮೂರೂ ಚಿತ್ರಗಳಿಗೆ ಸಂಭಾಷಣೆ ಬರೆದಿರುವ ಪ್ರಸನ್ನ ಶೆಟ್ಟಿ ಬೈಲೂರು ಅವರು ನನ್ನ ಬೆನ್ನೆಲುಬು. ಅವರಿಗೆ ನಾನು ಥ್ಯಾಂಕ್ಸ್ ಹೇಳಬೇಕು” ಎಂದು ಸರ್ಕಸ್ ಚಿತ್ರ ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದರು. ಅವರು ತಮ್ಮ ನಿರ್ದೇಶನ ಮತ್ತು ಅಭಿನಯದ “ಸರ್ಕಸ್” ತುಳು ಸಿನಿಮಾ ಜೂನ್ 23ರಂದು ವಿಶ್ವದಾದ್ಯಂತ…
ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್ನ 9ನೇ ತರಗತಿಯ ವಿದ್ಯಾರ್ಥಿ ಮಾಸ್ಟರ್ ಅಮೋಘ್ ಎ ಹೆಬ್ಬಾರ್ 2024ರ ಮಾರ್ಚ್ ತಿಂಗಳ ಕೊನೆಯಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, IFESTನಲ್ಲಿ “ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ”ಎಂಬ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾರೆ. ಗುಜರಾತ್ನ ರಾಜಕೋಟ್ನಲ್ಲಿ ಜನವರಿ 26, 2024 ರಂದು ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಬೆಳ್ಳಿ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದ ಅಮೋಘ್, ಇತ್ತೀಚಿಗೆ ಕಲ್ಬುರ್ಗಿಯಲ್ಲಿ ನಡೆದ ರಾಜ್ಯ ಮಟ್ಟದ ರಾಷ್ಟೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ಮೇಳದಲ್ಲಿ ತಮ್ಮ ಸಂಶೋಧನಾ ಯೋಜನೆಯನ್ನು ಪ್ರದರ್ಶಿಸಿದ್ದರು. ಆಳ್ವಾಸ್ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಎಚ್ ಅಜಿತ್ ಹೆಬ್ಬಾರ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್…
ಒಂದು ಮನೆಯಲ್ಲಿನ ನಾಯಿ ಮತ್ತು ಬೆಕ್ಕು ಸ್ನೇಹದಲ್ಲಿರುವುದನ್ನು ನಾವು ನೋಡಿದ್ದೇವೆ. ಒಂದು ಕೊಟ್ಟಿಗೆಯಲ್ಲಿನ ಹಸುಗಳು ಮತ್ತು ಮೇಕೆಗಳು ಸಹಬಾಳ್ವೆಯಿಂದ ಬದುಕುವುದನ್ನು ಗಮನಿಸಿದ್ದೇವೆ. ಆನೆ, ಕುದುರೆ ಮುಂತಾದ ಪ್ರಾಣಿಗಳು ತನ್ನ ಮಾಲಕನ ಜತೆಗೆ ಸಹಕಾರದಿಂದ ಇರುವುದನ್ನು ನಾವು ಕಾಣುತ್ತೇವೆ. ಆಲದ ಮರವು ನೂರಾರು ಪ್ರಾಣಿಗಳಿಗೆ ನೆರಳನ್ನು ನೀಡುತ್ತದೆ. ಮರದಲ್ಲಿ ಹತ್ತಾರು ಪಕ್ಷಿಗಳು ಆಶ್ರಯ ಪಡೆಯುತ್ತವೆ. ಸಸ್ಯಗಳು ಪ್ರಾಣಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಕಾರ ನೀಡುತ್ತಾ ಬಂದಿವೆ. ಉಸಿರಾಡಲು ಆಮ್ಲಜನಕ, ತಿನ್ನಲು ಆಹಾರ ನೀಡುತ್ತಾ ಬಂದಿವೆ. ಇಲ್ಲೆಲ್ಲೂ ಸ್ವಾರ್ಥವೆಂಬುದಿಲ್ಲ. ಆದರೆ ಬುದ್ಧಿಜೀವಿಯಾದ ಮನುಷ್ಯ ಮನುಷ್ಯರ ನಡುವೆ ಸಹಕಾರದ ಕೊರತೆ ಏಕೆ ಎದ್ದು ಕಾಣುತ್ತಿದೆ? ಹಾಗಾದರೆ ಸಹಬಾಳ್ವೆಯಿಂದ ಜೀವನ ನಡೆಸಲು ಮನುಷ್ಯರಿಗೆ ಸಾಧ್ಯವಿಲ್ಲವೇ?… ಖಂಡಿತ ಸಾಧ್ಯವಿದೆ. ನಾನು, ನನ್ನದು ಎಂಬ ಸ್ವಾರ್ಥ ಮನೋಭಾವ, ನಾನೇ ಎಲ್ಲ, ನನ್ನಿಂದಲೇ ಎಲ್ಲ, ನಾನು ಎಣಿಸಿದಂತೆ ನಡೆಯಬೇಕು ಎಂಬ ದುರಹಂಕಾರವು ಮನುಷ್ಯನ ಬುದ್ಧಿಯನ್ನು ವಿಕಾರಗೊಳಿಸುತ್ತದೆ. ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ಮಾತಿನಂತೆ ಮನೆ ಮಂದಿಯೆಲ್ಲ ಒಗ್ಗಟ್ಟಿನಿಂದ ಬಾಳಿದರೆ ಖಂಡಿತ…
ಸಂಘಟಕ, ಸಮಾಜ ಸೇವಕ, ಯುವ ಉದ್ಯಮಿ ರಾಕೇಶ್ ಶೆಟ್ಟಿ ಬೆಳ್ಳಾರೆ ಅವರು ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿರುವ ರಾಕೇಶ್ ಶೆಟ್ಟಿ ಅವರು ಅತಿಥಿ ಎಂಬ ಸಸ್ಯಾಹಾರಿ ಹೋಟೆಲ್ ನ ಮಾಲಕರಾಗಿದ್ದಾರೆ. ತನ್ನ ಸರಳ ಶಿಸ್ತಿನ ಗುಣ ನಡತೆಯಿಂದ ಎಲ್ಲರೊಂದಿಗೆ ಬೆರೆತು ಸುಖ ದುಃಖ ಗಳಿಗೆ ಸದಾ ಬೆರೆಯುವ ಶ್ರೀಯುತರ ಸಾಧನೆ, ಸಮಾಜಸೇವೆಗೆ ಧರ್ಮಪತ್ನಿ ಪೆಲತ್ತೂರು ಸುನೀತಾ ಶೆಟ್ಟಿ ಹಾಗೂ ಪುತ್ರಿ ಶ್ರೀಖಾ, ಪುತ್ರ ಕವಿನ್ ರವರು ಪ್ರೋತ್ಸಾಹಿಸುತ್ತಾ ಬರುತ್ತಿದ್ದಾರೆ.
ಕರ್ಮ ಕಾರ್ಯ ಮಾಡುವಾಗ ನಾನಲ್ಲ, ಸಮಾಜಕ್ಕಾಗಿ ಮಾಡುವವನು ಎಂಬ ಆತ್ಮ ಸ್ಮರಣೆ ನಮ್ಮಲ್ಲಿರಬೇಕು. ಕರ್ಮಫಲವನ್ನು ಅನುಭವಿಸುವವನು ಕೂಡಾ ನಾನಲ್ಲ. ಸಮಾಜಕ್ಕಾಗಿ ಮಾಡಿದೆ ಎಂಬ ಹೆಮ್ಮೆ ನಮ್ಮಲ್ಲಿರಲಿ. ಯಾವುದೇ ಕಾರ್ಯ ಇರಲಿ ಧನಾತ್ಮಕವಾಗಿ ನಡೆದಾಗ ಅದಕ್ಕೆ ಫಲ ಸಿಗುವುದು ಅದು ಸೃಷ್ಠಿಯ ನಿಯಮ. ಒಳ್ಳೆಯ ಕಾರ್ಯಕ್ಕೆ ಉತ್ತಮ ಫಲ ಸಿಕ್ಕಿಯೇ ಸಿಗುತ್ತದೆ. ನಮ್ಮ ಶ್ರೀಮಂತ ಸಂಸ್ಕ್ರತಿಗೆ ತಕ್ಕಂತೆ ಕೈಗೊಂಡ ಕಾರ್ಯ ಪರಿಪೂರ್ಣಗೊಳ್ಳುವ ತನಕ ವಿರಮಿಸದೆ ಸಮಾಜಕ್ಕಾಗಿ ಅರ್ಪಣೆ ಮಾಡುವ ಛಲವೊಂದಿದ್ದರೆ ಅದು ಬಂಟರಲ್ಲಿ ಕಾಣಬಹುದು. ನಿರ್ಮಲ ಮನಸ್ಸಿನ ಸೇವೆಯಿಂದ ಚಿತ್ತ ಶುದ್ದಿಯನ್ನು ಪಡೆಯಲು ಸಾದ್ಯ. ನಮ್ಮಲ್ಲಿರುವ ವಿವೇಕ ಚಿಂತನೆಯಿಂದ ಯಾವುದೇ ಪ್ರತ್ಯಾಪೇಕ್ಷೆ ಇಲ್ಲದೇ ಮಾಡುವ ಕಾರ್ಯವೇ ಶ್ರೇಷ್ಠವಾದುದು ಎಂದು ಮಣಿಪಾಲ್ ಹಾಸ್ಪಿಟಲ್ ನ ಕಾರ್ಯಾಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ನುಡಿದರು. ಬಂಟರ ಸಂಘ ಪುಣೆ ಇದರ ವಾರ್ಷಿಕೊತ್ಸವ ಸ್ನೇಹ ಸಮ್ಮಿಲನ ಸಮಾರಂಭವು ಜ 26ರಂದು ಬಾಣೇರ್ ನಲ್ಲಿರುವ ಪುಣೆ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ…
ವಿದ್ಯಾಗಿರಿ (ಮೂಡುಬಿದಿರೆ): ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯ ಶ್ಲಾಘಿಸಿದರು. ಇಲ್ಲಿನ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 29ನೇ ಆಳ್ವಾಸ್ ವಿರಾಸತ್ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ನಾಲ್ಕು ದಿನಗಳ ಪ್ರದರ್ಶನ ಹಾಗೂ ಮಹಾಮೇಳವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ವಿರಾಸತ್ ಇಂದು ರಾಜ್ಯದಾದ್ಯಂತ ಮನೆಮಾತಾಗಿದೆ. ಡಾ.ಎಂ. ಮೋಹನ ಆಳ್ವ ಅವರು ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದ ಅದ್ವಿತೀಯ ನಾಯಕರಾಗಿದ್ದಾರೆ. ಪ್ರತಿ ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವ ಅವರ ಗುಣ ಹಾಗೂ ಶೈಕ್ಷಣಿಕ ಬದಲಾವಣೆಗೆ ತ್ವರಿತವಾಗಿ ಸ್ಪಂದಿಸುವ ರೀತಿ ಅನನ್ಯ ಎಂದರು. ಸ್ಕೌಟ್ಸ್ ಗೈಡ್ಸ್ ಒಳ್ಳೆಯ ವ್ಯಕ್ತಿಗಳನ್ನು ರೂಪಿಸುವ ಅಂತರ ರಾಷ್ಟ್ರೀಯ ಚಳವಳಿ, 200 ದೇಶಗಳಲ್ಲಿದೆ.…
ಭಾರತೀಯ ಜನತಾ ಪಕ್ಷದ ದಕ್ಷಿಣ ಭಾರತೀಯ ಘಟಕ ಮೀರಾ ಭಾಯಂದರ್ ನ ಅಧ್ಯಕ್ಷರಾಗಿ ಬಳ್ಕುಂಜೆಗುತ್ತು ರವೀಂದ್ರ ಶೆಟ್ಟಿ ಗುತ್ತಿನಾರ್ ಆಯ್ಕೆ
ಮೀರಾ ಭಾಯಂದರ್ ಪರಿಸರದಲ್ಲಿ ಸಾಮಾಜಿಕ, ಧಾರ್ಮಿಕ ಸೇವೆಗಳನ್ನು ಮಾಡುತ್ತಾ ಸಂಘಟಕರಾಗಿ, ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿಯಾಗಿ, ನವತರುಣ ಮಿತ್ರ ಮಂಡಳಿಯ ಗೌ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರುವ ಬಳ್ಕುಂಜೆ ಗುತ್ತು ಗುತ್ತಿನಾರ್ ರವೀಂದ್ರ ಶೆಟ್ಟಿ (ಕೊಟ್ರಪಾಡಿ) ಅವರನ್ನು ಭಾರತೀಯ ಜನತಾ ಪಕ್ಷದ ದಕ್ಷಿಣ ಭಾರತೀಯ ಘಟಕ ಮೀರಾ ಭಾಯಂದರ್ ನ ಅಧ್ಯಕ್ಷರಾಗಿ ಮಹಾರಾಷ್ಟ್ರ ಬಿಜೆಪಿ ಸಮಿತಿಯು ಆಯ್ಕೆ ಮಾಡಿದೆ. ಆಯ್ಕೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಬಿಜೆಪಿ ಸಮಿತಿಯ ಪದಾಧಿಕಾರಿಗಳು, ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್, ಮೀರಾ ಭಾಯಂದರ್ ನ ಮಾಜಿ ಬಿಜೆಪಿ ಎಂಎಲ್ ಎ ನರೇಂದ್ರ ಮೆಹ್ತಾ, ಮೀರಾ ಭಾಯಂದರ್ ನ ಬಿಜೆಪಿ ಅಧ್ಯಕ್ಷ ಕಿಶೋರ್ ಶರ್ಮಾ, ಮೀರಾ ಭಾಯಂದರ್ ನ ನಗರ ಸೇವಕ ಅರವಿಂದ ಆನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರ ಮೆಹ್ತಾ ಅವರ ಶಿಫಾರಸ್ಸಿನ ಮೇಲೆ ರವೀಂದ್ರ ಶೆಟ್ಟಿ ಕೊಟ್ರಪಾಡಿ ಅವರು ದ. ಭಾರತೀಯ ಘಟಕದ ಅಧ್ಯಕ್ಷರಾಗಿ…
ಪನ್ವೇಲ್ ನ ಪ್ರಸಿದ್ಧ ಕ್ರೀಡಾ ಸಂಸ್ಥೆ ಕರಾವಳಿ ಸ್ಪೋರ್ಟ್ಸ್ ಮತ್ತು ಎಜುಕೇಶನಲ್ ಟ್ರಸ್ಟ್ (ರಿ.) ಇದರ 12 ನೇ ವಾರ್ಷಿಕೋತ್ಸವ ಸಮಾರಂಭವು ನ್ಯೂ ಪನ್ವೇಲ್ ಪಶ್ಚಿಮ ಖಾಂದ ಕಾಲೊನಿಯ ಬಿಜೆಪಿ ಜನ ಸಂಪರ್ಕ ಕಾರ್ಯಾಲಯದ ಸಭಾಂಗಣದಲ್ಲಿ ಧಾರ್ಮಿಕ ಹಾಗೂ ಸನ್ಮಾನ ಕಾರ್ಯಕ್ರಮದೊಂದಿಗೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಅದೇ ದಿನ ಪ್ರಧಾನಿ ನರೇಂದ್ರ ಮೋದಿಯವರಿಂದ ಅಯೋಧ್ಯೆಯಲ್ಲಿ ರಾಮಮಂದಿರದ ಮಹಾ ಉದ್ಘಾಟನಾ ಕಾರ್ಯಕ್ರಮವು ಜರಗಿದ ಹಿನ್ನಲೆಯಲ್ಲಿ ಕರಾವಳಿ ನಿರ್ವಹಣಾ ತಂಡವು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳ ಬದಲಿಗೆ ಸಂಪೂರ್ಣವಾಗಿ ಧಾರ್ಮಿಕ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಿತ್ತು. ಕರಾವಳಿ ಸ್ಪೋರ್ಟ್ಸ್ ಮತ್ತು ಎಜುಕೇಶನಲ್ ಟ್ರಸ್ಟ್ ನ ಗೌರವಾಧ್ಯಕ್ಷ ಮಹಾಬಲ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕಾಳಿಕಾಂಬಾ ವಿನಾಯಕ ಟ್ರಸ್ಟ್ (ರಿ.) ಅಧ್ಯಕ್ಷ ಸಿಎ ಶ್ರೀಧರ ಆಚಾರ್ಯ ಮುಖ್ಯ ಅತಿಥಿಯಾಗಿ ಹಾಗೂ ಡಾ. ಆರತಿ ಮಲಿಕ್, ಎಂ.ಡಿ., (ಪ್ಯಾಥೋ), ಆರತಿ ಮಲಿಕ್ ಲ್ಯಾಬ್, ನ್ಯೂ ಪನ್ವೇಲ್ ಮತ್ತು ಡಾ. ಸ್ವಾತಿ ಲಿಖಿತೆ, ಎಂಬಿಬಿಎಸ್, ಡಿಸಿಎಚ್ (ಲಿಖಿತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ,…
ಬದುಕು ಕಟ್ಟಿಕೊಳ್ಳುವ ಸವಾಲಿನ ನಡುವೆ ಬೆಂಗಳೂರಿನಲ್ಲಿ ಟೆಕ್ನಿಶಿಯನ್ ಆಗಿ ದುಡಿಯುತ್ತಿದ್ದ ಯುವಕ ಆರ್. ರಾಜೇಶ್ ಶೆಟ್ಟಿ ಇಂದು ದೇಶದ ಉದ್ದಗಲ ವ್ಯಾಪಿಸಿರುವ ಪ್ರತಿಷ್ಠಿತ ಕಂಪನಿಗಳ ಎಲೆಕ್ಟ್ರಿಕಲ್ ನಿರ್ವಹಣೆಯ ಕೋಟ್ಯಂತರ ವಹಿವಾಟಿನ ಯಶಸ್ವಿ ಉದ್ಯಮಿ. ಸಂಸ್ಥೆ ರಜತ ಸಂಭ್ರಮದಲ್ಲಿರುವಾಗಲೇ ಐತಿಹಾಸಿಕ ಅಯೋಧ್ಯೆಯ ಶ್ರೀರಾಮ ಮಂದಿರದ ಸಮಗ್ರ ಎಲೆಕ್ಟ್ರಿಕಲ್ ವ್ಯವಸ್ಥೆ, ನಿರ್ವಹಣೆಯ ಹೊಣೆ ಅವರ ಬಳಗಕ್ಕೆ ಲಭಿಸಿದೆ. ಇವರು ಕರಾವಳಿ ಕರ್ನಾಟಕದ ದ. ಕ. ಜಿಲ್ಲೆಯ ಮೂಡಬಿದಿರೆಯವರು. ಸಾಫ್ಟ್ ವೇರ್ ಎಂಜಿನಿಯರಿಂಗ್ ಆಗಬೇಕೆಂದಿದ್ದ ರಾಜೇಶ್, ಬೆಂಗಳೂರಿನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಶಿಕ್ಷಣ ಪೂರೈಸಿ ಅಲ್ಲೇ ಟೆಕ್ನಿಷಿಯನ್ ಆಗಿ ಬದುಕು ಕಟ್ಟಿಕೊಳ್ಳಲು ಒದ್ದಾಡಿದರು. ತಾನಿದ್ದ ಕಂಪನಿಯಲ್ಲಿ ಕೆಲಸ ಇನ್ನೇನು ಕಾಯಂ ಆಗುತ್ತದೆ ಎನ್ನುವಷ್ಟರಲ್ಲೇ ಮೇಲಾಧಿಕಾರಿಯ ಒತ್ತಡಕ್ಕೆ ಕಟ್ಟು ಬಿದ್ದು ತನ್ನದೇ ಸಂಸ್ಥೆ ತೆರೆಯಬೇಕಾದ ಅನಿವಾರ್ಯತೆಗೆ ಸಿಲುಕಿದ್ದು ಬದುಕಿಗೇ ಹೊಸ ತಿರುವು ನೀಡಿತು. ಅಂದು ಒತ್ತಡಕ್ಕೆ ಸಿಲುಕಿ ಸ್ಥಾಪಿಸಿದ್ದ ಶಂಕರ್ ಹೆಸರಿನ ಸಂಸ್ಥೆ ಇಂದು ಶಂಕರ್ ಎಲೆಕ್ಟ್ರಿಕಲ್ಸ್ ಸರ್ವೀಸಸ್ ಇಂಡಿಯಾ ಪ್ರೈ. ಲಿ. ಎಂಬ ಬೃಹತ್ ಸಂಸ್ಥೆಯಾಗಿ…
ವಿಶ್ವದರ್ಶನ ಕನ್ನಡ ದಿನಪತ್ರಿಕೆ ಮತ್ತು ಪ್ರಜಾ ದರ್ಶನ ಪತ್ರಿಕೆಯ ಮಾಧ್ಯಮ ಸಹಯೋಗದಲ್ಲಿ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಧಾರವಾಡದ ರಂಗಾಯಣ ಸಭಾಭವನದಲ್ಲಿ ವಿಜ್ರಂಭಣೆಯಿಂದ ಜರುಗಿತು. ಕಾರ್ಯಕ್ರಮವು ದೇವರ ಸ್ತುತಿಯೊಂದಿಗೆ ದೀಪ ಬೆಳಗುವುದರೊಂದಿಗೆ ಉದ್ಘಾಟನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಿತು. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿ. ಭಾವೈಕ್ಯತೆಯ ಸಂಗಮವಾಗಿ ಸಂಸ್ಕೃತಿಯ ನೆಲೆಬೀಡು ಹುಬ್ಬಳ್ಳಿಯು ಮುಖ್ಯ ತಾಣ. ಬಹುಸಂಖ್ಯಾತರು ವಾಸಿಸುವ ನಿಸರ್ಗ ರಮಣೀಯ ತಾಣ. ಕವಿಶ್ರೇಷ್ಠರು, ಮಠಮಂದಿರಗಳು, ದಾಸ, ಸಾಹಿತ್ಯ ಶ್ರೇಷ್ಠ, ಸಂಸ್ಕೃತಿಯ ನೆಲೆಬೀಡು, ಮಠಾಧೀಶರ ತವರೂರಾದ ಹುಬ್ಬಳ್ಳಿಯ ರಮಣೀಯ ತಾಣದಲ್ಲಿ ಸಾಹಿತ್ಯ ಸಿಂಚನವಾದ “ಎಸ್. ಎಸ್ ಪಾಟೀಲ್ ಅವರ ಸಾರಥ್ಯದಲ್ಲಿ ಜಗತ್ತಿನಾದ್ಯಂತ ಪ್ರಸರಣ ಹೊಂದುತ್ತಿರುವ “ವಿಶ್ವದರ್ಶನ ಕನ್ನಡ ದಿನಪತ್ರಿಕೆ” ವರುಷ ಪೂರೈಸಿದ ಸಂದರ್ಭದಲ್ಲಿ ವಿಶಿಷ್ಟ ಕಾರ್ಯಕ್ರಮದ ಅನಾವರಣ ನಡೆಯಿತು. ಇಂದಿನ ದಿನಮಾನಸದಲ್ಲಿ ಪತ್ರಿಕೆಗಳ ಶ್ರಮ ಬೆಟ್ಟದಷ್ಟಿದೆ. ಪತ್ರಿಕೆಯ ಓದುಗರ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಇರುವಂತಹ ಅಪಾರ ಜ್ಞಾನ ಹೊಂದಿರುವ ತಂದೆ-ತಾಯಿಗಳು ಮಕ್ಕಳಿಗೆ ಶೈಕ್ಷಣಿಕ ಮತ್ತು ಸಾಹಿತ್ಯ ಪರವಾದಂತಹ…















