Author: admin
ಬಂಟ್ಸ್ ಅಸೋಸಿಯೇಷನ್ ಪುಣೆ ಮತ್ತು ಬೇಬಿ ಫ್ರೆಂಡ್ ಕ್ಲಿನಿಕ್ ಜಂಟಿ ಆಶ್ರಯದಲ್ಲಿ ಕಟೀಲ್ ಬೇಬಿ ಫ್ರೆಂಡ್ ಚೈಲ್ಡ್ ಹೆಲ್ತ್ ಕಾರ್ಡ್ ಬಿಡುಗಡೆ
ಮಕ್ಕಳ ಆರೋಗ್ಯ ದ್ರಷ್ಟಿಯಲ್ಲಿ ಇದು ಮಾದರಿ ಸೇವೆಯಾಗಬಹುದು -ಗಣೇಶ್ ಹೆಗ್ಡೆ ಪುಣ್ಚೂರು ಪುಣೆ : ಮನುಷ್ಯರಲ್ಲಿ ಅರೋಗ್ಯ ಎಂಬುದು ಇಂದಿನ ಕಾಲದಲ್ಲಿ ಬಹಳ ಎಚ್ಚರಿಕೆವಹಿಸಬೇಕಾದ ಒಂದು ಮುಖ್ಯ ವಿಚಾರ ,ಅದರಲ್ಲೂ ಮಕ್ಕಳ ಅರೋಗ್ಯ ಕಾಪಾಡುವಲ್ಲಿ ತುಂಬಾ ಮುತುವರ್ಜಿ ವಹಿಸಬೇಕಾಗುತ್ತದೆ ,ಏಳವೆಯಿಂದ ಪ್ರೌಡವಸ್ಥೆಯ ವರೆಗಿನ ಬೆಳವಣಿಗೆಯಲ್ಲಿ ಮಕ್ಕಳ ಆರೋಗ್ಯದಲ್ಲಿ ಬಗ್ಗೆ ಜಾಗ್ರತಿ ಮೂಡಿಸುವುದು ಒಳ್ಳೆಯದು ,ಈ ರೀತಿಯ ಸೇವೆಯಲ್ಲಿ ನಮ್ಮ ಬಂಟ್ಸ್ ಅಸೋಸಿಯೇಷನ್ ಮೆಡಿಕಲ್ ವಿಬಾಗದ ಕಾರ್ಯಾಧ್ಯಕ್ಷರಾದ ಬೇಬಿ ಫ್ರೆಂಡ್ ಕ್ಲಿನಿಕ್ ನ ಮಾಲಕರಾದ ಡಾ ಸುಧಾಕರ್ ಶೆಟ್ಟಿ ಯವರು ಮಾಡುತ್ತಾ ಬರುತಿದ್ದು , ಮಕ್ಕಳ ಅರೋಗ್ಯ ಸೇವೆಯಲ್ಲಿ ಸುಮಾರು 40 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಾ ಬಂದವರು ,ಇವರ ಜೊತೆಯಲ್ಲಿ ಬಹಳ ವರ್ಷಗಳ ಒಡನಾಟ ನನಗೆ ಇದೆ, ಇಂತಹ ಸೇವೆಯ ಬಗ್ಗೆ ನಮ್ಮಲ್ಲಿ ಹಲವಾರು ಬಾರಿ ಮಾತುಕತೆ ನಡೆದಿತ್ತು ,ಸಮಾಜಕೊಸ್ಕರ ಏನಾದರು ಮಾಡಬೇಕು ಎಂಬ ಯೋಚನೆ ನಮ್ಮಲ್ಲಿತ್ತು ,ಈಗ ಡಾ .ಸುಧಾಕರ್ ಶೆಟ್ಟಿ ಯವರ ಪರಿಕಲ್ಪನೆಯ ಈ ಮಕ್ಕಳ ಆರೋಗ್ಯದ ಕಾರ್ಯಕ್ರಮ ವೈದ್ಯಕೀಯ…
ತುಳು ಸಿನಿಮಾರಂಗದ ರಾಕ್ ಸ್ಟಾರ್, ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ “ಸರ್ಕಸ್” ತುಳು ಸಿನಿಮಾ ಬಿಡುಗಡೆಗೆ ದಿನ ನಿಗದಿಯಾಗಿದೆ. ಜೂನ್ 23 ರಂದು ಸಿನಿಮಾ ಅದ್ದೂರಿಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾವನ್ನು ಏಕಕಾಲದಲ್ಲಿ ವಿದೇಶದಲ್ಲೂ ಬಿಡುಗಡೆಗೊಳಿಸಲು ಯೋಜನೆ ರೂಪಿಸಿದ್ದಾರೆ. ತುಳು ಸಿನಿಮಾ ರಂಗದಲ್ಲಿ ಅತಿ ದೊಡ್ಡ ಹಿಟ್ ಚಿತ್ರ “ಗಿರಿಗಿಟ್” ಸಿನಿಮಾ ಭರ್ಜರಿ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ತುಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟರಾಗಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡದಲ್ಲಿ ‘ಗೋವಿಂದಾ ಗೋವಿಂದಾ’ ಸಹಿತ ಐದು ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ರೂಪೇಶ್ ಶೆಟ್ಟಿ ತಂಡ ಸರ್ಕಸ್ ಸಿನಿಮಾ ನಿರ್ಮಾಣ ಮಾಡಿ ಬಿಡುಗಡೆಗಾಗಿ ಜೂನ್ ತಿಂಗಳಿನಲ್ಲಿ ದಿನ ನಿಗದಿಗೊಳಿಸಿದ್ದಾರೆ. ಪ್ರತೀ ಚಿತ್ರದಲ್ಲೂ ಹೊಸತನ ಬಯಸುವ ರೂಪೇಶ್ ಶೆಟ್ಟಿ ಈ ಬಾರಿ ಕೂಡಾ ಒಂದು ಉತ್ತಮ ಕಥೆಯನ್ನು ಆಯ್ಕೆ ಮಾಡಿದ್ದಾರೆ. ಗಿರಿಗಿಟ್, ಗಮ್ಜಾಲ್ ಗೆ ಸಂಭಾಷಣೆ ಬರೆದ ಪ್ರಸನ್ನ ಶೆಟ್ಟಿ ಬೈಲೂರು ಈ ಸಿನಿಮಾಕ್ಕೂ…
ನ್ಯೂಯಾರ್ಕ್ ನ ಕ್ಲಾರಾಜೆಟಿಕಿನ್ ಎಂಬ ಮಹಿಳೆ ಉದ್ಯೋಗಸ್ಥ ಮಹಿಳೆಯರ ಸಮಾನ ವೇತನ ಹೆರಿಗೆ ಸೌಲಭ್ಯ ಹಾಗೂ ಮಹಿಳೆಯರ ಸಮಸ್ಯೆಯ ಪರಿಹಾರಕ್ಕಾಗಿ ಹೋರಾಟ ನಡೆಸಿ ಗೆಲುವು ಸಾದಿಸಿದ ದಿನವನ್ನು ಮಹಿಳೆಯರಿಗೆ ಅರ್ಪಿಸುತ್ತಾ ಗೆಲುವಿನ ಸ್ಮರಣೆಗಾಗಿ ಸಾಧನೆಯ ಸಂಕೇತವಾಗಿ ಮಾರ್ಚ್ 8 ನ್ನು ವಿಶ್ವ ಮಹಿಳಾ ದಿನವನ್ನಾಗಿ ಆಚರಿಸಲಾರಂಬಿಸಿದರು. ಹೀಗೊಂದು ನಿಗದಿತ ವಿಶ್ವ ಮಹಿಳಾ ದಿನ ಕೇವಲ ಆಚರಣೆಗೆ ಮಾತ್ರ ಸೀಮಿತವಾಗದಿರಲಿ. ಸ್ತ್ರೀ ಪ್ರಕೃತಿಯ ವರದಾನ, ಬದುಕಿನಂಚಿನವರೆಗೂ ಮಹಿಳೆ ಕುಟುಂಬಕ್ಕೆ, ಸಮಾಜಕ್ಕೆ ಅಗಾಧ ಜ್ಞಾನ ಒಲವು ನೆರವು ನೀಡುತ್ತಿರುತ್ತಾಳೆ. ಕೇವಲ ಅಲಂಕಾರಿಕ ವಸ್ತುಗಳಾಗಿ ಉಳಿಯದೆ ಶಿಕ್ಷಣ, ಸಾಹಿತ್ಯ, ಧರ್ಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಕಿರುತೆರೆ ಬೆಳ್ಳಿ ತೆರೆ,ಎಲ್ಲದರಲ್ಲೂ ಮಹಿಳೆಯರು ಮಿಂಚುತ್ತಿರುವುದು ಹೆಮ್ಮೆಯ ವಿಷಯ. ಮಹಿಳೆಯರಿಗಿಂದು ತೆರೆದ ಜಗತ್ತು ಎಲ್ಲಾ ಕ್ಷೇತ್ರಗಳಲ್ಲಿ ಅವಕಾಶ ನೀಡುತ್ತಿದೆ. ಆದರೆ ತೆರದ ಜಗತ್ತಿನಲ್ಲೂ ಉಸಿರುಗಟ್ಟಿಸುವ ದೌರ್ಜನ್ಯಕ್ಕೆ ಕೊರತೆ ಇಲ್ಲದಿರುವುದೇ ವಿಪರ್ಯಾಸ. ಸಮಾಜದ ಯಾವುದೇ ಮೂಲೆಯನ್ನು ಅವಲೋಕಿಸಿ ನೋಡಿ, ಹೆಣ್ಣು ಮಗಳೊ ಬ್ಬಳ ರೋಧನ ಇದ್ದೆ ಇರುತ್ತದೆ. ಕಾನೂನಿನ ದುರುಪ…
ಅಬಕಾರಿ ಸುಂಕ ಕಡಿಮೆಗೊಳಿಸಲು ಫೆಡರೇಶನ್ ಆಫ್ ಹೊಟೇಲ್ ಹಾಗೂ ರೆಸ್ಟೋರೆಂಟ್ ಅಸೋಸಿಯೇಶನ್ ನಿಂದ ಮುಖ್ಯಮಂತ್ರಿಗೆ ಮನವಿ.
ಹೊಟೇಲ್ ಬಾರ್ ಎಂಡ್ ರೆಸ್ಟೋರೆಂಟ್ ಗಳ 2023-2024 ರ ಸಾಲಿನ ಶೇ 15 ರಷ್ಟು ಅಬಕಾರಿ ಸುಂಕ ಹೆಚ್ಚಳವನ್ನು ಕಡಿತ ಮಾಡುವಂತೆ ಫೆಡರೇಶನ್ ಆಫ್ ಹೊಟೇಲ್ ಹಾಗೂ ರೆಸ್ಟೋರೆಂಟ್ ಅಸೋಸಿಯೇಶನ್ ನಿಯೋಗವು ವಿರಾರ್ ಶಂಕರ್ ಶೆಟ್ಟಿಯವರ ನೇತೃತ್ವದಲ್ಲಿ ಮೀರಾ ಭಯಂಧರ್ ಶಾಸಕಿ ಗೀತಾ ಜೈನ್ ರವರ ಮುಂದಾಳತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರನ್ಮು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಈಗಾಗಲೇ ಕೊರೊನಾ ಹಾವಳಿಯಿಂದ ಕಂಗೆಟ್ಟಿರುವ ಹೊಟೇಲ್ ಉದ್ಯಮ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುವ ಸಮಯದಲ್ಲಿಯೇ ಸುಂಕ ಹೆಚ್ಚಳವು ಉದ್ಯಮಕ್ಕೆ ಮಾರಕ ಹೊಡೆತ ಬಿದ್ದಂತಾಗಿದೆ. ಮಾತ್ರವಲ್ಲದೆ ಸರಕಾರದ ನಿಯಮಾವಳಿಗಳ ಪ್ರಕಾರ ಕ್ರಮಬದ್ದವಾಗಿ ಉದ್ಯಮವು ಮುಂದುವರಿಯುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಉದ್ಯಮಕ್ಕೆ ಅಬಕಾರಿ ಸುಂಕ ಹೆಚ್ಚಳದಿಂದ ತುಂಬಲಾರದ ನಷ್ಟವಾಗುತ್ತಿದೆ ಎಂದು ನಿಯೋಗವು ಮುಖ್ಯಮಂತ್ರಿಯವರಿಗೆ ಪೂರ್ಣ ಮಾಹಿತಿಯೊಂದಿಗೆ ಮನವರಿಕೆ ಮಾಡಲಾಯಿತು. ನಿಯೋಗದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಯವರು ವಿಮರ್ಷಾತ್ಮಕವಾಗಿ ನಿಯೋಗದೊಂದಿಗೆ ಚರ್ಚಿಸಿದರು. ಹೊಟೇಲ್ ಉದ್ಯಮದ ಸಂಕಷ್ಟಗಳನ್ನು ಆಲಿಸಿದ ಮುಖ್ಯಮಂತ್ರಿಯವರು ಸರಕಾರದ ಅಬಕಾರಿ ಮಂತ್ರಿ ಶಂಭುರಾಜ್ ದೇಸಾಯಿಯವರಿಗೆ ಪೋನಾಯಿಸಿ ಸುಂಕ ಹೆಚ್ಚಳವನ್ನು…
ತುಳುನಾಡ ಸೃಷ್ಟಿಕರ್ತನ ಕಂಚಿನ ಪ್ರತಿಮೆಯನ್ನು ಹೊಂದಿರುವ “ಪರಶುರಾಮ ಥೀಂ ಪಾರ್ಕ್’ 15 ಕೋ.ರೂ. ವೆಚ್ಚದಲ್ಲಿ ಕಾರ್ಕಳ ಸಮೀಪದ ಉಮ್ಮಿಕ್ಕಳ ಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿದೆ. 57 ಅಡಿ ಎತ್ತರದಲ್ಲಿ 33 ಅಡಿಯ ಸುಂದರ ಕಂಚಿನ ಮೂರ್ತಿ ಸ್ಥಾಪನೆಯಾಗಲಿದೆ. 2 ಕೋಟಿ ರೂ. ವೆಚ್ಚದ ಈ ಮೂರ್ತಿ ರಚನೆಗೆ 15 ಟನ್ ಕಂಚು ಮತ್ತು ಉಕ್ಕು ಬಳಸಲಾಗಿದೆ.ಪ್ರತಿಮೆಯ ನಿರ್ಮಾಣ ಕಾರ್ಯವು ಬೆಂಗಳೂರಿ ನಲ್ಲಿ 7 ತಿಂಗಳ ಹಿಂದೆ ಆರಂಭ ಗೊಂಡಿದ್ದು, ಅಂತಿಮ ಹಂತಕ್ಕೆ ತಲುಪಿದೆ. ಉಮ್ಮಿಕ್ಕಳ ಬೆಟ್ಟಕ್ಕೆ ಪ್ರತಿಮೆಯ ತಳಭಾಗ ಬಂದಿದ್ದು ಅಳವಡಿಸುವ ಕಾರ್ಯ ನಡೆಯುತ್ತಿದೆ. ಸೊಂಟದ ಪಟ್ಟಿ, ಮೂರ್ತಿ ಹಾಗೂ ಪರಶುರಾಮನ ಕೊಡಲಿ ಬರಲು ಬಾಕಿಯಿದೆ. 10 ದಿನಗಳಲ್ಲಿ ಮೂರ್ತಿ ಜೋಡಣೆ ಕಾರ್ಯ ಪೂರ್ಣಗೊಳ್ಳಲಿವೆ. ಜನವರಿ 10ರ ವೇಳೆಗೆ ಬೆಟ್ಟದ ಮೇಲೆ ಪರಶುರಾಮ ಮೂಡಿಬರಲಿದ್ದಾನೆ. ಪಾರ್ಕ್ನಲ್ಲಿ ಆಡಿಯೋ ವಿಶುವಲ್ ಕೊಠಡಿ, ಸುಸಜ್ಜಿತ ಆರ್ಟ್ ಮ್ಯೂಸಿಯಂ, ನೇಯ್ಗೆ ಡೆಕ್ ಗ್ಯಾಲರಿ, ಸಾವಿರ ಮಂದಿ ಆಸನ ಸಾಮರ್ಥ್ಯದ ಬಯಲು ಮಂದಿರ, ಭಜನ ಮಂದಿರ, ಹಸುರು ಕೋಣೆಗಳ ಪಾಪ್ ಸಂಗ್ರಹಣೆ, ಪೂರಕ…
ಸಮಾಜಸೇವಕ, ನೇರ ನಡೆ ನುಡಿಯ ಪ್ರಖ್ಯಾತ್ ಶೆಟ್ಟಿಯವರು ಉದ್ಯಮಿಯಾಗಿದ್ದುಕೊಂಡು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದಾ ಹಸನ್ಮುಖಿಯಾಗಿರುವ ಪ್ರಖ್ಯಾತ್ ಶೆಟ್ಟಿಯವರು ತೆಂಕನಿಡಿಯೂರು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿದ್ದು ಇವರ ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಕೋರುತ್ತಿದ್ದೇವೆ.
ಕ್ಯಾಪ್ಟನ್ ಬ್ರಜೇಶ್ ಚೌಟ ಸಾರಥ್ಯದಲ್ಲಿ 7 ನೇ ವರ್ಷದ ಮಂಗಳೂರು ಕಂಬಳ ಡಿ. 30 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕೆರೆಯಲ್ಲಿ ನಡೆಯಲಿದ್ದು ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ಶುಕ್ರವಾರ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗರಾದ ಪ್ರಸಾದ್ ಕುಮಾರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಶೆಟ್ಟಿ ಮಾತನಾಡಿ 7 ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ಮಾತನಾಡಿ, ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ…
ಆರ್ಥಿಕ ಸ್ವಾವಲಂಬನೆಯಿಂದ ಮಹಿಳೆಯರಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡುತ್ತದೆ. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದ್ದು, ಸಂಘ ಸಂಸ್ಥೆಗಳು ಕೂಡ ಪ್ರೋತ್ಸಾಹ ನೀಡುವುದು ಅವಶ್ಯ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕ ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವತಿಯಿಂದ ಯೆಯ್ಯಾಡಿಯ ಡಿಐಸಿಎಂ ಸಭಾಂಗಣದಲ್ಲಿ ಮಹಿಳೆಯರಿಗೆ ಆಯೋಜಿಸಿದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಅಧ್ಯಕ್ಷೆ ಚಂದ್ರಕಲಾ ಡಿ.ರಾವ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯದರ್ಶಿ ಸುಮತಿ ದೇವದಾಸ್, ರೆಡ್ ಕ್ರಾಸ್ ಸೊಸೈಟಿ ನಿರ್ದೇಶಕ ಪಿ.ಬಿ.ಹರೀಶ್ ರೈ, ಸಂಪನ್ಮೂಲ ವ್ಯಕ್ತಿಗಳಾದ ಶಾಂತಿ ಆಚಾರ್ಯ, ರೇಖಲತಾ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿಯ ಪದಾಧಿಕಾರಿಗಳು ಇದ್ದರು. ರೆಡ್ ಕ್ರಾಸ್ ಸೊಸೈಟಿ ಮಹಿಳಾ ಮತ್ತು ಮಕ್ಕಳ ಸುರಕ್ಷಾ ಉಪ ಸಮಿತಿ ನಿರ್ದೇಶಕಿ ಡಾ.ಸುಮನಾ ಬೋಳಾರ್ ಸ್ವಾಗತಿಸಿ, ಕಾರ್ಯದರ್ಶಿ…
ಪುತ್ತೂರು ಯುವ ಬಂಟರ ಸಂಘದ ನೇತೃತ್ವದಲ್ಲಿ ಜರಗಿದ ಅದ್ದೂರಿ ಕಾರ್ಯಕ್ರಮ ಬಂಟೆರೆ ಪರ್ಬ ನೋಡಿ ಅತೀ ಸಂತೋಷವಾಯಿತು. ಯುವ ಬಂಟರು ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಜುಲೈ 23 ರಂದು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಪುತ್ತೂರು ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿದ ‘ತುಳುನಾಡ ಬಂಟೆರೆ ಪರ್ಬ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಬಂಟ ಸಮಾಜದ ಸಮಗ್ರ ಅಭಿವೃದ್ಧಿ ಆಗಬೇಕೆಂಬ ಉದ್ದೇಶ ನನ್ನದು. ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಬೇಕೆಂದು ನಾನು ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತಿದೇನೆ. ಪುತ್ತೂರು ಬಂಟ ಸಮಾಜದಿಂದ ಎಲ್ಕೆಜಿಯಿಂದ ಪ್ರಾಥಮಿಕ ಹಂತ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಸಂಸ್ಥೆ ಆಗಬೇಕೆಂಬ ಕಲ್ಪನೆ ಇದೆ. ಬಂಟ ಸಮಾಜದ ಅಭಿವೃದ್ಧಿಗೆ ಪೂರ್ಣ ರೀತಿಯ ಸಹಕಾರ ನೀಡುತ್ತೇನೆ. ಜೊತೆಗೆ ಬಂಟರ ಸಂಘದಿಂದ ಹೊಸ ಜಾಗ ಖರೀದಿಗೂ ಸಹಕಾರ ನೀಡುತ್ತೇನೆ ಎಂದು…
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಮತ್ತು ಯಕ್ಷದ್ರುವ ಪಟ್ಲ ಪೌಂಡೇಷನ್ ದುಬೈ ಘಟಕದ ವತಿಯಿಂದ “ದುಬೈ ಯಕ್ಷೋತ್ಸವ-2023 – ವಿಶ್ವ ಪಟ್ಲ ಸಂಭ್ರಮ” ಜೂನ್ 11 ರಂದು ದುಬೈನಲ್ಲಿ ಜರಗಲಿದೆ. ನಗರದ ಕರಾಮ ಇಂಡಿಯನ್ ಸ್ಕೂಲ್ನ ಶೇಖ್ ರಷೀದ್ ಸಭಾಂಗಣದಲ್ಲಿ ಜೂನ್ 11 ರಂದು ಮಧ್ಯಾಹ್ನ 2 ಗಂಟೆಯಿಂದ ವಿಶ್ವದಲ್ಲಿ ಇರುವ ಪಟ್ಲ ಪೌಂಡೇಷನ್ ನ 38 ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ “ವಿಶ್ವ ಪಟ್ಲ ಸಂಭ್ರಮ” ಜರಗಲಿದೆ. ಯಕ್ಷಶ್ರೀ ರಕ್ಷ ಗೌರವ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರು ದುಬೈ ಮತ್ತು ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ ನೀಡುವ “ಯಕ್ಷಶ್ರೀ ರಕ್ಷಾ ಗೌರವ” ಪ್ರಶಸ್ತಿಯನ್ನು ಕಲಾವಿದರಾದ ಪಟ್ಲ ಗುತ್ತು ಮಹಾಬಲ ಶೆಟ್ಟಿಯವರಿಗೆ ಗಣ್ಯತಿ ಗಣ್ಯರ ಸಮ್ಮುಖದಲ್ಲಿ ನೀಡಲಾಗುವುದು. ಮುಖ್ಯ ಅತಿಥಿಗಳಾಗಿ ಪಟ್ಲ ಪೌಂಡೇಷನ್ ಕೇಂದ್ರ ಘಟಕದ ಗೌರವಾಧ್ಯಕ್ಷರಾದ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ, ಘಟಕದ ಪ್ರದಾನ ಸಂಚಾಲಕರಾದ ಶಶಿಧರ ಶೆಟ್ಟಿ ಬರೋಡ, ಐಕಳ ಹರೀಶ್ ಶೆಟ್ಟಿ, ಪಟ್ಲ…