Author: admin
ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಸಿರಿಧಾನ್ಯಗಳು ಬಳಕೆಯಲ್ಲಿದ್ದವು. ವೇದಗಳಲ್ಲಿ ಕೆಲವು ಸಿರಿಧಾನ್ಯಗಳ ಬಗ್ಗೆ ಉಲ್ಲೇಖಗಳು ಕಾಣಸಿಗುತ್ತವೆ. ವಿವಿಧ ನಾಗರಿಕತೆಗಳಲ್ಲಿ, ಭಾರತಕ್ಕೆ ಪ್ರವಾಸ ಬಂದ ಹೊರ ದೇಶಗಳ ಯಾತ್ರಿಗಳ ಕಥನಗಳಲ್ಲಿ ನಮ್ಮಲ್ಲಿ ಸಿರಿಧಾನ್ಯಗಳನ್ನು ಬಳಸುತ್ತಿದ್ದ ಬಗ್ಗೆ ಉಲ್ಲೇಖಗಳು ಇವೆ. ಸಮೃದ್ಧ ಪೋಷಕಾಂಶಗಳನ್ನು ಹೊಂದಿರುವ ಸಿರಿಧಾನ್ಯಗಳ ಸೇವನೆ ಆರೋಗ್ಯಕರವಾಗಿದ್ದು ವಿವಿಧ ರೋಗಗಳಿಂದ ನಮಗೆ ರಕ್ಷಣೆ ದೊರಕಿಸಿಕೊಡುವುದರ ಜತೆಯಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತವೆ. ಇತರ ಬೆಳೆಗಳಿಗೆ ಹೋಲಿಸಿದಲ್ಲಿ ಸಿರಿಧಾನ್ಯಗಳ ಬೆಳೆಗಳಿಗೆ ಕಡಿಮೆ ಪ್ರಮಾಣದ ನೀರು ಸಾಕು. ಕೀಟ ಬಾಧೆ ಮತ್ತು ಹವಾಮಾನ ವೈಪರೀತ್ಯದ ಸವಾಲನ್ನೂ ಎದುರಿಸುವ ಸಾಮರ್ಥ್ಯವನ್ನು ಸಿರಿಧಾನ್ಯಗಳ ಸಸಿಗಳು ಹೊಂದಿವೆ. ಸಿರಿಧಾನ್ಯಗಳನ್ನು ಬೆಳೆಯುವುದು ಇತರೆಲ್ಲ ಧಾನ್ಯಗಳ ಬೆಳೆಗಳಿಗಿಂತ ಹೆಚ್ಚು ಪರಿಸರಸ್ನೇಹಿಯಾಗಿದೆ. ಸರಕಾರದ ಪ್ರೇರಣೆಯಿಂದ ಸಿರಿಧಾನ್ಯಗಳಿಗೆ ಈಗ ಕೇವಲ ದೇಶ ಮಾತ್ರವಲ್ಲ ವಿಶ್ವಾದ್ಯಂತ ಬೇಡಿಕೆ ಲಭಿಸತೊಡಗಿದ್ದು ಕೃಷಿಕರು ಮತ್ತೆ ಇವುಗಳನ್ನು ಬೆಳೆಯಲು ಮನಸ್ಸು ಮಾಡಬೇಕಿದೆ. ದೇಶದ ಜನತೆ ಈ ಸಿರಿಧಾನ್ಯಗಳನ್ನು ಸೇವಿಸುವ ಪರಿಪಾಠವನ್ನು ಆರಂಭಿಸುವ ಮೂಲಕ ಸಿರಿಧಾನ್ಯಗಳನ್ನು ಮುಂದಿನ ಪೀಳಿಗೆಗೆ ಕಾಪಿಡುವ ಕಾರ್ಯ ಮಾಡಬೇಕಿದೆ.…
ಗ್ಯಾಸ್ ಸಿಲಿಂಡರ್ ತಂದುಕೊಡುವ ವ್ಯಕ್ತಿಗೆ ಎಕ್ಸ್ಟ್ರಾ ಭಕ್ಷೀಸು ಕೊಡಲೇಬೇಕು. ಇಲ್ಲದಿದ್ದರೆ ಅವರು ನೀವೇ ಬಂದು ಹೊತ್ಕೊಂಡು ಹೋಗಿ ಅನ್ನುತ್ತಾರೆ ಅನ್ನುವ ಮಾತುಗಳು “ಸಾಮಾನ್ಯ’ವಾಗಿರುವ ದಿನಗಳಿವು. ಹೀಗಿರುವಾಗ ಮೊನ್ನೆ ಸಿಲಿಂಡರ್ ತಂದುಕೊಟ್ಟ ವ್ಯಕ್ತಿ, ಭಕ್ಷೀಸಿನ ಹಣವನ್ನು ವಾಪಸ್ ಕೊಟ್ಟದ್ದು ಮಾತ್ರವಲ್ಲ, ನಮ್ಮ ಏಜೆನ್ಸಿಯಲ್ಲಿ ಎಕ್ಸ್ಟ್ರಾ ದುಡ್ಡು ತಗೋಳಲ್ಲ ಅಂದುಬಿಟ್ಟರು. ಕುತೂಹಲದಿಂದ ವಿಚಾರಿಸಿದರೆ, ಅದು ನಮ್ಮ ಮಾಲಕರ ಆದೇಶ ಎಂದರು! ಜನ ಹೀಗೂ ಇರ್ತಾರಾ ಎಂಬ ಅಚ್ಚರಿಯೊಂದಿಗೇ ಆ ಏಜೆನ್ಸಿಯ ಮಾಲಕರ ಪರಿಚಯ ಮಾಡಿಕೊಂಡು, ಗೆಳೆತನ ಬೆಳೆಸಿಕೊಂಡು, ಸಲುಗೆ ಹೆಚ್ಚಿದಾಗ-ಸರ್ ನಿಮ್ಮ ಹಿನ್ನೆಲೆ ಹೇಳ್ತೀರಾ ಅಂದರೆ- “ಹೀಗೂ ಉಂಟೇ?’ ಎಂದು ಉದ್ಗರಿಸುವಂಥ ಕಥೆಯನ್ನೇ ಅವರು ಹೇಳಿಬಿಟ್ಟರು. ಅದು ಹೀಗೆ: 80ರ ದಶಕದಲ್ಲಿದ್ದ ರೌಡಿಸಂ ಅಂತ ಓದಿರ್ತೀರಲ್ಲ, ಆ ಜಮಾನಾ ನಮು. ಒಂದೇ ವ್ಯತ್ಯಾಸ ಅಂದ್ರೆ, ಆ ಕಾಲದ ರೌಡಿ ಗಳು ದೊಡ್ಡ ಹೆಸರು ಮಾಡಿದ್ರು. ಕೆಲವ್ರು ಚೆನ್ನಾಗಿ ಆಸ್ತಿ ಮಾಡಿ ದ್ರು. ಐದತ್ತು ವರ್ಷ ಡಾನ್ಗಳಾಗಿ ಮೆರೆದ್ರು. ನಾನು, ನನ್ನಂಥ ಅದೆಷ್ಟೋ ಜನ, ಅಂಥಾ…
ಮೈಸೂರ್ ಪಾಕ್ ಎಂದಾಕ್ಷಣ ಎಲ್ಲರಿಗೂ ನೆನಪಾಗುವುದು ಸಿಹಿಯಾದ ತಿಂಡಿ. ಇದರ ಹಿಂದಿನ ಕಥೆ ರೋಚಕವಾಗಿದ್ದು. ಮೈಸೂರು ಅರಮನೆಯ ಪಾಕ ಶಾಲೆಯಲ್ಲಿ ಜನ್ಮ ತಳೆದ ತಿಂಡಿ ಇದು. ಮಹರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜ ಒಡೆಯರ್ ಆಡಳಿತಾವದಿಯಲ್ಲಿ ಅರಮನೆಯಲ್ಲಿದ್ದ ಕುಟುಂಬಕ್ಕೆ ಬೇಕಾದ ಸಿಹಿ ಖಾರದ ತಿನಿಸು ತಯಾರಿಸುವುದರಲ್ಲಿ ಜಾಣ್ಮೆ ಹೊಂದಿದ್ದ ಅರಮನೆಯ ಪಾಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕಾಕಾಸುರ ಮಾದಪ್ಫನವರಲ್ಲಿ ಒಮ್ಮೆ ಮಹಾರಾಜರು ಯಾವುದಾದರೊಂದು ತಿಂಡಿ ತಯಾರಿಸುವಂತೆ ಹೇಳಿದಾಗ ಕಡಲೆ ಹಿಟ್ಟು ಸಕ್ಕರೆ, ತುಪ್ಪ, ಎಣ್ಣೆ ಸೇರಿಸಿ ತಿಂಡಿಯೊಂದನ್ನು ಮಾಡಿ ಅದನ್ನು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ತಿನ್ನಲು ಕೊಟ್ಟರು. ಇದರ ರುಚಿ ನೋಡಿದ ಮಾಹಾರಾಜರಿಗೆ ತುಂಬಾ ಖುಷಿಯಾಗಿ ಮಾದಪ್ಫನವರಿಗೆ ಪ್ರೋತ್ಸಾಹ ನೀಡಿ ಪ್ರಶಂಸಿಸುತ್ತಾ, ಇದು ಯಾವ ತಿಂಡಿ? ಚೆನ್ನಾಗಿದೆ, ತಿಂಡಿಯ ಹೆಸರೇನು? ಎಂದು ಕೇಳಿದ ಮಹಾರಾಜರಿಗೆ ತಬ್ಬಿಬ್ಬಾದ ಮಾದಪ್ಪನವರು ಗಡಿ ಬಿಡಿಯಲ್ಲಿ ಮೈಸೂರು ಪಾಕ್ ಎಂದರಂತೆ. ಇದು ಮೈಸೂರು ಅರಮನೆಯಲ್ಲಿ ಮೊದಲ ಬಾರಿಗೆ ತಯಾರಾಗಿದ್ದರಿಂದ ಇದಕ್ಕೆ ಮೈಸೂರು ಪಾಕ್ ಎಂದು…
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕರಾವಳಿಯಲ್ಲಿ ಕೋವಿಡ್ ಕೂಡ ಏರಿಕೆ ಕಾಣುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದೆಡೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳ ತಂಡ ನಿಗಾ ವಹಿಸಿದರೆ ಇನ್ನೊಂದೆಡೆ ಚುನಾವಣೆ ಸಮಯ ಕೊರೊನಾ ಏರಿಕೆಯಾಗದಂತೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಮಿಕ್ರಾನ್ ರೂಪಾಂತರಿ ಎಕ್ಸ್ಬಿಬಿ 1.16 ತಳಿಯ ಪರಿಣಾಮ ಜಿಲ್ಲೆಯಲ್ಲಿ ಸೌಮ್ಯ ಕೋವಿಡ್ ಪ್ರಕರಣ (ಎ ಸಿಂಪ್ಟಮ್ಯಾಟಿಕ್) ಹೆಚ್ಚಾಗಿ ದೃಢಪಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 14 ದಿನಗಳಲ್ಲಿ 38 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಅದಕ್ಕೆ ತಕ್ಕಂತೆ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಕೂಡ ಹೆಚ್ಚಳ ಮಾಡಲಾಗಿದೆ. ಸದ್ಯ ದಿನಂಪ್ರತಿ ಸುಮಾರು 400ಕ್ಕೂ ಹೆಚ್ಚಿನ ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಹೆಚ್ಚಾಗಿ ಹಿರಿಯ ನಾಗರಿಕರಲ್ಲಿ ಕೋವಿಡ್ ದೃಢಪಡುತ್ತಿದ್ದು, ಮುಖ್ಯವಾಗಿ ಜ್ವರ, ಭೇದಿ ಸಹಿತ ಹಾಸಿಗೆ ಹಿಡಿದವರು, ದೀರ್ಘಕಾಲದ ರೋಗಿಗಳನ್ನು, ಹಿರಿಯರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ದೇಶಾದ್ಯಂತ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಪರಿಶೀಲನ ಸಭೆ ಕೆಲ ವಾರದ ಹಿಂದೆಯಷ್ಟೇ ನಡೆದಿದೆ. ರಾಜ್ಯಗಳು ಜಾಗರೂಕರಾಗಿ, ನಿರ್ವಹಣೆಗೆ…
ಪರೋಪಕಾರ ಬಂಟ ಸಮುದಾಯದ ದೊಡ್ಡ ಗುಣ, ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿರುವುದರಿಂದಲೇ ಇಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗಿರುವುದು, ಹಾಗಾಗಿ ಈ ಸಮುದಾಯವು ಗುರುಪೀಠದ ಗೋಜಿಗೆ ಹೋಗದೆ ಹಿರಿಯರು ತೋರಿದ ಹಾದಿಯಲ್ಲೇ ಮುಂದೆ ಸಾಗಬೇಕು, ದೇವರನ್ನೇ ಗುರುವನ್ನಾಗಿ ಕಾಣಬೇಕು, ಈ ನಿಟ್ಟಿನಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಕೆಲಸಗಳಾಗಬೇಕೆಂದು ಕೇಮಾರು ಸಾಂದೀಪನೀ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿಯವರು ಹೇಳಿದರು. ಮೂಡುಬಿದಿರೆ ಯುವ ಬಂಟರ ಸಂಘದ ವತಿಯಿಂದ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು ಸಂಸ್ಕøತಿ, ಶಿಕ್ಷಣ, ಉದ್ಯಮ, ಧಾರ್ಮಿಕ, ಸಾಮಾಜಿಕ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಬಂಟ ಸಮುದಾಯದ ಕೊಡುಗೆ ದೊಡ್ಡದು, ಇದು ಬಂಟ ಸಮುದಾಯದ ಹೆಮ್ಮೆ ಎಂದರು. ಆಧ್ಯಾತ್ಮವೆಂದರೆ ಕೇವಲ ಗುಡಿ ಗೋಪುರಗಳನ್ನು ಕಟ್ಟುವುದಲ್ಲ, ಯಾರು ಹಸಿದವರಿರುತ್ತಾರೋ, ಯಾರು ಕಷ್ಟದಲ್ಲಿರುತ್ತಾರೋ ಅಂತವರಿಗೆ ನೆರವಾಗುವುದೇ ಶ್ರೇಷ್ಠವಾದ ಆಧ್ಯಾತ್ಮವೆಂದು ಹೇಳಿದ…
ಕರ್ನಾಟಕದ ಬಾಗಲು ಕೋಟೆ ಜಿಲ್ಲೆಯ ಇಳಕಲ್ ಎಂಬ ಸಣ್ಣ ಊರಿನ ಚಟ್ಟಕ್..ಪಟ್ಟಕ್.. ಶಬ್ದ ಕೇಳುತ್ತಿರುವ ಗಲ್ಲಿಯೊಳಗೆ ತಯಾರಾಗುವ ಇಳಕಲ್ ಸೀರೆ ಸಂಸತ್ತಿನಲ್ಲಿ ಕಾಣಸಿಕ್ಕಿದ್ದು ಪರೋಕ್ಷವಾಗಿ ನೇಕಾರಿಗೆ ಸಲ್ಲಿಸಿದ ಗೌರವ, ಪ್ರೇರಣೆ ಹಾಗೂ ವ್ಯವಹಾರದ ಏರಿಕೆಗೂ ಇಳಕಲ್ ಸೀರೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯುಲು ಕಾರಣವಾಯಿತು. 2023 ರ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಚಿವೆಯಾಗಿ ಸತತ 5 ನೇ ಬಾರಿಗೆ ಮತ್ತು ಮುಂದಿನ ವರ್ಷದ ಮಹಾಚುನಾವಣೆಗೆ ಮುಂಚಿತವಾಗಿ ಸಂಸತ್ತಿನಲ್ಲಿ ಬಜೆಟ್ ಮಂಡಿಸಲು ಬಂದಾಗ ಉಟ್ಟ ಇಳಕಲ್ ಸೀರೆ ಇಳಕಲ್ ಸೀರೆಗಳ ಮೆರಗನ್ನು ಹೆಚ್ಚಿಸಿತು. ಅನೇಕರು ಸಾಮಾಜಿಕ ಜಾಲತಾಣದಲ್ಲಿ ಈ ಸೀರೆಯ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಇಳಕಲ್ ಸೀರೆಗಳ ಮಾಹಿತಿ ಕೇಂದ್ರ ವೆಬ್ ಸೈಟ್ ಗಳನ್ನು ಜಾಲಾಡಿದವರ ಸಂಖ್ಯೆಯು ಅಪರಿಮಿತ. ಅಷ್ಟೇ ಅಲ್ಲದೆ ಸೀರೆ ಅಂಗಡಿಗೆ ಹೋಗಿ ಇಳಕಲ್ ಸೀರೆ ಕಂಡು, ಕೊಂಡು ಬಂದವರ ಸಂಖ್ಯೆ ಎಷ್ಟು ಎಂದರೆ ಇಡೀ ಒಂದು ವರ್ಷದಲ್ಲಿ ಮಾರಾಟವಾಗುವ ಸಂಖ್ಯೆಯ ಅರ್ಧದಷ್ಟು…
ಉಡುಪಿ ಭಾಗದಲ್ಲಿ ನಡೆಯುವ ದೇವರ ಮತ್ತು ಜನ್ನ ಕಂಬಳದಲ್ಲಿ ಅನೇಕ ನಂಬಿಕೆ ಆಚರಣೆ ಇದೆ. ಬ್ರಹ್ಮಾವರ ಬಳಿ ಚೇರ್ಕಾಡಿಯಲ್ಲಿ ಮಾತ್ರ ಇರುವ ಜನ್ನ ಕಂಬಳದಲ್ಲಿ ಒಂದು ವಿಶೇಷತೆ. ಗದ್ದೆಯಲ್ಲಿ ಕಂಬಳದ ಕೋಣಗಳ ಓಟ ನಡೆಯುತ್ತಿದ್ದರೆ ಕಂಬಳ ಮನೆತನದ ಪಟ್ಟದ ಅರಸರು ರಾಜ ಪೋಷಾಕಿನಲ್ಲಿ ಕಂಬಳ ಗದ್ದೆಯ ಒಂದು ವಿಶೇಷ ಕಟ್ಟೆಯಲ್ಲಿ ಕುಳಿತು ಕಂಬಳವನ್ನು ವೀಕ್ಷಿಸುತ್ತಾರೆ. ಆಗಮಿಸಿದ ಕೋಣಗಳ ಓಟ ಮುಗಿಸಿ ಕೊನೆಯದಾಗಿ ಕಂಬಳ ಮನೆಯ ಕೋಣಗಳು ಗದ್ದೆಯಲ್ಲಿ ಓಟ ಮುಗಿಸಿದ ಬಳಿಕ ಮುಕ್ತಾಯದ ಒಂದು ಸನ್ನಿವೇಶ ಅತೀ ಕೂತೂಲಕಾರಿ. ತುಳುನಾಡಿನ ಮೂಲ ನಿವಾಸಿಗಳಾದ ಕೊರಗ ಜನಾಂಗದ ವ್ಯಕ್ತಿ, ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಡೋಲು ವದನದೊಂದಿಗೆ ಕೈಯಲ್ಲಿ ಒಂದು ದಂಡವನ್ನು ಹಿಡಿದು ಕಂಬಳ ಗದ್ದೆಗೆ ಬರುತ್ತಾರೆ. ತಲತಲಾಂತರದಿಂದ ಬಂದಂತೆ ಮನೆತನದ ಹಿರಿಯ ವ್ಯಕ್ತಿ ಕಂಬಳ ಗದ್ದೆಗೆ ಮೊದಲು 5 ಅಡಕೆಯನ್ನು ಎಸೆಯುತ್ತಾರೆ. ಕೊನೆಯದಾಗಿ ತೆಂಗಿನ ಕಾಯಿಯನ್ನು ಎಸೆಯುತ್ತಾರೆ. ಗದ್ದೆಯಲ್ಲಿ ಇರುವ ವ್ಯಕ್ತಿ ಆ ತೆಂಗಿನ ಕಾಯಿಯನ್ನು ತನ್ನ ದಂಡದಿಂದ ಹೊಡೆಯಬೇಕು. ಕಾಯಿ ಹೊಡೆಯುದು…
ಪುಣೆ ಬಂಟ್ಸ್ ಅಸೋಸಿಯೇಶನ್ ವತಿಯಿಂದ ಸಮಾಜ ಬಾಂಧವರಿಗಾಗಿ ಮಲ್ಟಿ ಸ್ಪೆಷಾಲಿಟಿ ಉಚಿತ ಆರೋಗ್ಯ ತಪಾಸಣ ಶಿಬಿರವು ಆ. 27 ರಂದು ಬೆಳಗ್ಗೆ 9 ರಿಂದ ಅಪರಾಹ್ನ 1 ರವರೆಗೆ ಪುಣೆ ಕ್ಯಾಂಪ್ ನ ಗುರುನಾನಕ್ ಮೆಡಿಕಲ್ ಫೌಂಡೇಶನ್ ನ ಗುರುನಾನಕ್ ದರ್ಬಾರ್ ಹಾಲ್ (ಹಾಲಿವುಡ್ ಗುರುದ್ವಾರ) ನಲ್ಲಿ ನಡೆಯಲಿದೆ. ಪುಣೆ ಬಂಟ್ಸ್ ಅಸೋಸಿಯೇಶನ್ ಆಯೋಜನೆಯಲ್ಲಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ನಡೆಯಲಿರುವ ಈ ಉಚಿತ ಆರೋಗ್ಯ ತಪಾಸಣ ಶಿಬಿರದಲ್ಲಿ ಸ್ತ್ರೀರೋಗ ಶಾಸ್ತ್ರ ಮತ್ತು ಬಂಜೆತನ, ಮಕ್ಕಳ ರೋಗ ತಪಾಸಣೆ, ನೇತ್ರ, ದಂತ ತಪಾಸಣೆ, ಔಷಧ ಮತ್ತು ರೋಗ ಶಾಸ್ತ್ರದ ಬಗ್ಗೆ ಮಾಹಿತಿ, ತುರ್ತು ರೋಗಿಗಳಿಗೆ ಉಚಿತ ಇಸಿಜಿ, ರೋಗ ಲಕ್ಷಣ ಹೊಂದಿರುವ ರೋಗಿಗಳಿಗೆ ಉಚಿತ ಗರ್ಭಕಂಠದ ಕ್ಯಾನ್ಸರ್ ಸ್ಕ್ರೀನಿಂಗ್ ಇನ್ನಿತರ ವೈದ್ಯಕೀಯ ತಪಾಸಣೆಯನ್ನು ಮಾಡಲಾಗುವುದು. ಆರೋಗ್ಯ ತಪಾಸಣ ಶಿಬಿರದಲ್ಲಿ ಪುಣೆಯ ಖ್ಯಾತ ವೈದ್ಯರಾದ ಡಾ.ಚಿತ್ತರಂಜನ್ ಶೆಟ್ಟಿ, ಡಾ. ಸಂಜಯ್ ಬಿ. ಕುಲಕರ್ಣಿ, ಡಾ. ಸುಧಾಕರ್ ಶೆಟ್ಟಿ, ಡಾ. ಗೋಪಾಲಕೃಷ್ಣ ಗಾವಡೆ, ಡಾ.…
ಅಬ್ಬರದ ಮಳೆ ನಡು ನಡುವೆ ಅಲ್ಪ ಬಿಸಿಲು ಮೈ ತಾಕುತ್ತಿದ್ದ ತಂಗಾಳಿ ಕುಗ್ಗದ ಉತ್ಸಾಹದಲ್ಲಿ ಆಡಿ ನಲಿದು ಸಂಭ್ರಮಿಸುತ್ತಾ, ಹಿಂದಿನ ಪರಂಪರೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳುವಳಿಕೆ ಮೂಡಿಸುವಲ್ಲಿ ಗಾಳಿಬೀಡುವಿನಲ್ಲಿ ನಡೆದ ಬಂಟ ಸಮುದಾಯದವರ ‘ಆಡಿಡೊಂಜಿ ದಿನ ಕೆಸರ್ದ ಗೊಬ್ಬು’ ಕಾರ್ಯಕ್ರಮ ಯಶಸ್ವಿಯಾಯಿತು. ಗಾಳಿಬೀಡುವಿನ ಕೃಷಿಕ ಹೊರಮಲೆ ಶಿವಪ್ರಸಾದ್ ರೈ ಅವರ ಭತ್ತದ ಗದ್ದೆಯಲ್ಲಿ ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಯುವಕರು, ಮಹಿಳೆಯರು, ಮಕ್ಕಳು, ಹಿರಿಯರು ಎಲ್ಲರೂ ವಯಸ್ಸಿನ ಅಂತರದ ಅಂಜಿಕೆಯಿಲ್ಲದೆ ಆಡಿ ನಲಿದು ಸಂಭ್ರಮಿಸಿದರು. ಕೆಸರು ಗದ್ದೆಯಲ್ಲಿ ಮನರಂಜನೆಗಾಗಿ ಹ್ಯಾಂಡ್ ಬಾಲ್, ಹಗ್ಗ ಜಗ್ಗಾಟ, ಓಟ, ಮುಂತಾದ ಸ್ಪರ್ಧೆಗಳು ನಡೆದವು. ಆಕರ್ಷಕವಾಗಿ ವಿನ್ಯಾಸಗೊಂಡಿದ್ದ ಮುಖ್ಯ ವೇದಿಕೆ ‘ಹೊರಮಲೆ ಚಾವಡಿ’ಯಲ್ಲಿ ಸಾಂಪ್ರದಾಯಿಕ ಬದುಕಿನ ಚಿತ್ರಣವನ್ನು ತಿಳಿಸುವ ಪ್ರಯತ್ನವಾಯಿತು. ಇಂಥದ್ದೊಂದು ಅಪರೂಪದ ಕಾರ್ಯಕ್ರಮಕ್ಕೆ ವೇದಿಕೆ ಒದಗಿಸಿದ್ದು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್. ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಕಾರದಲ್ಲಿ…
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾಪೋಷಕ, ಮಹಾನ್ ದಾನಿ, ನಿಸ್ವಾರ್ಥ ಸಮಾಜ ಸೇವಕರಾಗಿರುವ ಕೂಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ ಅವರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿಯ ಕನ್ಯಾನದ ಕೂಳೂರಿನ ಫಕೀರ ಶೆಟ್ಟಿ ಮತ್ತು ಶೀಲಾವತಿ ದಂಪತಿಗಳ ಸುಪುತ್ರರಾಗಿ ಜೂನ್ 13, 1954ರಂದು ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿ ಕಲಿತ ಅವರು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಓದಿದರು. ಆ ಬಳಿಕ ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದರು. ತದನಂತರ, ಉದ್ಯೋಗ ನಿಮಿತ್ತ ಮುಂಬಯಿಗೆ ಹೋದ ಅವರು ನಿರ್ಲೋನ್ ಲಿಮಿಟೆಡ್, ಘಾರ್ದ ಇಂಡಸ್ಟ್ರೀಸ್, ಹೋಟೆಸ್ಟ್ ಫಾರ್ಮಾಸಿಟಿಕಲ್ಸ್ ಲಿ. ಸೇರಿದಂತೆ ಹಲವಾರು ಪ್ರತಿಷ್ಠಿತ ಕಂಪೆನಿಗಳಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದರು. ಕೈಗಾರಿಕೆ ಕ್ಷೇತ್ರದಲ್ಲಿ ಸಲ್ಲಿಸಿದ 20 ವರ್ಷಗಳ ಅನುಭವವು ಅವರನ್ನು ಸ್ವಂತ ಉದ್ಯಮ ಆರಂಭಿಸಲು ಪ್ರೇರೇಪಿಸಿತ್ತು. ಕಠಿಣ ಪರಿಶ್ರಮ, ಛಲ, ಮಹತ್ವಾಕಾಂಕ್ಷೆ, ದೂರದೃಷ್ಟಿತ್ವ ಮತ್ತು ಸ್ವಾಭಿಮಾನ ಅವರನ್ನು…