Author: admin

ಕಳೆದ ಹಲವು ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ್ ರೈ ಅವರು ಪ್ರತಿಷ್ಠಿತ ಟೋಸ್ಟ್ ಮಾಸ್ಟರ್ ಇಂಟರ್ ನ್ಯಾಷನಲ್ ಸಂಸ್ಥೆಯ ಅತ್ಯುನ್ನತ ಪದವಿ ಡಿ. ಟಿ. ಎಂ. ಹಾಗೂ ಇತರ ಶ್ರೇಷ್ಟ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 1924 ಟೋಸ್ಟ್ ಮಾಸ್ಟರ್ ಇಂಟರ್ ನ್ಯಾಷನಲ್ ನಾನ್ ಪ್ರಾಫಿಟ್ ಎಜುಕೇಶನಲ್ ಆರ್ಗನೈಸೇಶನ್ ಯು.ಎಸ್.ಎ. ಯಲ್ಲಿ ಪ್ರಾರಂಭವಾಗಿ ಪ್ರಸ್ತುತ 144ಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಬಹಳಷ್ಟು ಅತ್ಯುನ್ನತ ಕಾರ್ಯ ನಿರ್ವಹಿಸುತ್ತಿದೆ. ಕಮ್ಯುನಿಕೇಷನ್ ಮತ್ತು ಲೀಡರ್ ಶಿಪ್ ಎಂಬ ಧ್ಯೇಯವಾಕ್ಯದೊಂದಿಗೆ ಜಗತ್ತಿನಾದ್ಯಂತ ಲಕ್ಷಾಂತರ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಮಿತ್ರಂಪಾಡಿ ಜಯರಾಮ್ ರೈ ಅವರು ಐ.ಎಸ್.ಸಿ. ಟೋಸ್ಟ್ ಮಾಸ್ಟರ್ ಇಂಟರ್ ನ್ಯಾಷನಲ್ ಇದರ ಸ್ಥಾಪಕ ಅಧ್ಯಕ್ಷರಾಗಿ, ಏರಿಯಾ ಡೈರೆಕ್ಟರ್ ಆಗಿ, ಇನ್ನಿತರ ಸೇವೆಗಳಲ್ಲಿ ಮುಂದುವರೆಯುತ್ತಿದ್ದಾರೆ. ಶ್ರೇಷ್ಠ ಭಾಷಣಕಾರರಾಗಿ, ಭೋಧಕರಾಗಿ, ಸಲಹೆಗಾರರಾಗಿ ಬಹಳಷ್ಟು ಜನರ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಇವರ ಕೊಡುಗೆಯಿದೆ. ಪ್ರಸ್ತುತ ಟೋಸ್ಟ್ ಮಾಸ್ಟರ್ ಇಂಟರ್ ನ್ಯಾಷನಲ್ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳಷ್ಟು ಹೆಸರನ್ನು ಗಳಿಸುತ್ತಾ, ಜೀವನದಲ್ಲಿ ಹೊಸತನವನ್ನು ಮೂಡಿಸುತ್ತಿರುವ…

Read More

ಯುವ ಬಂಟರ ಸಂಘ (ರಿ.) ಕಂಬಳಕಟ್ಟ – ಕೊಡವೂರು, ಲಯನ್ಸ್ ಕ್ಲಬ್ ಉಡುಪಿ – ಚೇತನ ಇವರ ಜಂಟಿ ಆಶ್ರಯದಲ್ಲಿ ಪೃಥ್ವಿ ಡಿಜಿಟಲ್ ಸೇವಾ ಕೇಂದ್ರ, ಮಲ್ಪೆ ಇವರ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ – ಆಭಾ ಆರೋಗ್ಯ ಕಾರ್ಡ್ ನೋಂದಣಿ ಕಾರ್ಯಗಾರ ಹಾಗೂ ಜೆ. ಎಸ್. ಡಬ್ಲ್ಯೂ ಫೌಂಡೇಶನ್ ಮತ್ತು ಇಂಡಿಯಾ ವಿಷನ್ ಸಂಸ್ಥೆ ಇವರ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭವು ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಲಯನ್ಸ್ ಜಿಲ್ಲೆ 317-C ಇದರ ದ್ವಿತೀಯ ಜಿಲ್ಲಾ ಉಪಗವರ್ನರ್ ಲl ಮೊಹಮ್ಮದ್ ಹನೀಫ್ MJF ಮಾತನಾಡಿ ಲಯನ್ಸ್ ಸಂಸ್ಥೆಯು ಸಾರ್ವಜನಿಕವಾಗಿ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರ ಮಾಡುತ್ತಾ ಬರುತ್ತಿದ್ದು, ಲಯನ್ಸ್ ಕ್ಲಬ್ ಉಡುಪಿ – ಚೇತನ ಹಾಗೂ ಯುವ ಬಂಟರ ಸಂಘ ಕಂಬಳಕಟ್ಟ – ಕೊಡವೂರು ಇವರುಗಳ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವು ಉಪಯುಕ್ತವಾಗಿದ್ದು, ಈ…

Read More

ಯಕ್ಷಗಾನ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ. ತೆಂಕು ಮತ್ತು ಬಡಗುತಿಟ್ಟಿಗೆ ಸಮಾನ ಪ್ರೇಕ್ಷಕರು ಇರುವ ಜಾಗ ಉಡುಪಿ. ಇಂತಹ ಕೇಂದ್ರ ಸ್ಥಾನದಲ್ಲಿ ಮೊದಲ ಸಮ್ಮೇಳನ ನಡೆಯುತ್ತಿರುವುದು ಅರ್ಥಪೂರ್ಣ. ಕಾಲಕ್ಕೆ ತಕ್ಕಂತೆ ಯಕ್ಷಗಾನ ಕ್ಷೇತ್ರದಲ್ಲೂ ಮಾರ್ಪಾಡು ಅವಶ್ಯ. ಆದರೆ ಬದಲಾವಣೆಗಳು ಯಕ್ಷಗಾನದ ಮೂಲಸತ್ವಕ್ಕೆ ಧಕ್ಕೆಯಾಗದೆ ರೀತಿಯಲ್ಲಿ ನಿರ್ದಿಷ್ಟ ಚೌಕಟ್ಟಿನಲ್ಲಿರಬೇಕು ಎಂದು ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು. ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದಲ್ಲಿ ಸಾಧಕರನ್ನು ಸಮ್ಮಾನಿಸಿ ಅವರು ಆಶೀರ್ವಚನ ನೀಡಿದರು. ವೇದ, ಪುರಾಣ, ಇತಿಹಾಸ ಭಾರತೀಯ ಸಂಸ್ಕೃತಿಯ ಜೀವಾಳ. ಇದು ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತಗೊಳ್ಳದೆ ಯಕ್ಷಗಾನ ಮಾಧ್ಯಮ ಜನಸಾಮನ್ಯರಿಗೆ ತಲುಪುವಂತಾಗಿದೆ. ಪೌರಾಣಿಕ ಪಾತ್ರಗಳ ಚಿತ್ರಣಗಳನ್ನು ಕಣ್ಣಿಗೆ ಕಟ್ಟುವಂತೆ ಮೂಡಿಸುವ ಜವಾಬ್ದಾರಿ ಕಲಾವಿದರಿಗಿದೆ ಎಂದರು. ಯಕ್ಷಗಾನ ಕಲಾವಿದರು ಶಿಲ್ಪಿಯಂತೆ ವಿಗ್ರಹ ಸುಂದರವಾಗಿ ಮೂಡಲು ಶಿಲ್ಪಿಯಲ್ಲಿ ಅಸಾಧಾರಣ ಪ್ರತಿಭೆ ಇರಬೇಕು. ಕಲಾವಿದರು ಎಷ್ಟು ಪಾತ್ರ ಮಾಡಿದರೂ ವಿಭಿನ್ನತೆ ಇರುತ್ತದೆ. ಹೀಗಾಗಿ ಯಕ್ಷಗಾನ ಜೀವಂತ ಕಲೆಯಾಗಿದೆ. ಸರಕಾರ, ಸಂಘ-ಸಂಸ್ಥೆಗಳ ವತಿಯಿಂದ ಕಲೆಗೆ…

Read More

ಮುಂಬಯಿ, ಫೆ.12: ದೇಶದ ಪ್ರದಾನಿ ಮಂತ್ರಿ ಮಾನ್ಯ ನರೇಂದ್ರ ಮೋದಿಜಿ ಅವರು ಖೇಲೋ ಇಂಡಿಯಾ ಯೋಜನೆ ಜಾರಿ ಗೊಳಿಸಿ ರಾಷ್ಟ್ರದಾದ್ಯಂತ ಕ್ರೀಡಾಕ್ರಾಂತಿ ಮಾಡಿರುವರು. ಇದು ಭಾರತೀಯರ ಹೆಮ್ಮೆಯ ಸಾಧನೆ. ಇಂತಹ ದೂರದೃಷ್ಠಿತ್ವದ ಕ್ರೀಡಾರಂಗದಲ್ಲಿ ಬಂಟರೂ ಮುನ್ನಡೆಯಲ್ಲಿರುವುದು ಹೆಮ್ಮೆದಾಯಕ. ಆದ್ದರಿಂದ ಮಕ್ಕಳು ತಮ್ಮಲ್ಲಿನ ಕ್ರೀಡಾ ಕಲಾ ಕೌಶಲ್ಯವನ್ನು ಅನಾವರಣಗೊಳಿಸಿ ಯೋಜನೆಯ ಸದುಪಯೋಗ ಪಡೆಯಬೇಕು. ಪರಿಶ್ರಮದಿಂದ ದುಡಿದವರೇ ಮುಂದೆ ಸಾಗುತ್ತಾರೆ. ಅವರೇ ಸಾಧಕರೆಣಿಸಿ ರಾಷ್ಟ್ರದ ಸಂಪತ್ತು ಗಳಾಗುತ್ತಾರೆ ಎಂದು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ ಸಿ.ಶೆಟ್ಟಿ ತಿಳಿಸಿದರು. ಕ್ರೀಡೆಗಳ ಮೂಲಕ ಏಕತೆ ಮತ್ತು ಸಮಗ್ರತೆ ಧ್ಯೇಯವನ್ನಿರಿಸಿ ಬಂಟ್ಸ್ ಸಂಘ ಮುಂಬಯಿ ಇದರ ಕ್ರೀಡಾ ಸಮಿತಿ ಇಂದಿಲ್ಲಿ ಆದಿತ್ಯವಾರ ಕಾಂದಿವಲಿ ಪಶ್ಚಿಮದ ಪೂಯಿಸರ್ ಜಿಮ್ಖಾನದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2023ನೇ ವಾರ್ಷಿಕ 35ನೇ ಕ್ರೀಡೋತ್ಸವವನ್ನು ಕ್ರೀಡಾಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಬಲೂನ್‍ಗುಚ್ಛ ಆಗಸಕ್ಕಾರಿಸಿ ಕ್ರೀಡೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆಯನ್ನಿತ್ತು ಗೋಪಾಲ ಶೆಟ್ಟಿ ಮಾತಾನಾಡಿದರು. ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ಅಧ್ಯಕ್ಷತೆ ಹಾಗೂ ಸಂಘದ ಕ್ರೀಡಾ…

Read More

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ವತಿಯಿಂದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮೂರು ದಿನಗಳ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ಬಂದಿದ್ದ ರೂಪೇಶ್ ಶೆಟ್ಟಿಯವರು ನಗರದ ಫಾರ್ಚೂನ್ ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ಯಕ್ಷಗಾನ ಅಭ್ಯಾಸ ಕೇಂದ್ರದ ವತಿಯಿಂದ ನಡೆಸುವ ಯಕ್ಷಗಾನ ತರಗತಿಗೆ ಭೇಟಿಕೊಟ್ಟಾಗ ಆರತಿ ಬೆಳಗಿಸಿ ಹರಸಲಾಯಿತು. ನಂತರ ಯಕ್ಷಗಾನ ಮಕ್ಕಳ ಹಾಗೂ ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸರಳವಾಗಿ ಏರ್ಪಡಿಸಿದ್ದ ರೂಪೇಶ್ ಶೆಟ್ಟಿಯವರನ್ನು ಸಾಂಪ್ರದಾಯಿಕವಾಗಿ ಸನ್ಮಾನಿಸಲಾಯಿತು. ಯಕ್ಷಗಾನ ಗುರುಗಳಾದ ಶೇಖರ್ ಶೆಟ್ಟಿಗಾರ್ ಕೇಂದ್ರ ನಡೆದುಕೊಂಡು ಬಂದ ಹಾದಿಯನ್ನು ರೂಪೇಶ್ ಶೆಟ್ಟಿಯವರಿಗೆ ತಿಳಿಸಿದರು. ಸನ್ಮಾನ ಕಾರ್ಯಕ್ರಮದಲ್ಲಿ ಯಕ್ಷಗಾನ ಅಭ್ಯಾಸ ಕೇಂದ್ರದ ರೂವಾರಿ ದಿನೇಶ್ ಶೆಟ್ಟಿ, ಜಯಾನಂದ ಪಕ್ಕಳ, ಗಮ್ಮತ್ ಕಲಾವಿದರು ದುಬೈಯ ನಿರ್ದೇಶಕ ವಿಶ್ವನಾಥ ಶೆಟ್ಟಿ, ಹಿರಿಯ ಯಕ್ಷಗಾನ ಕಲಾವಿದರಾದ ಭವಾನಿಶಂಕರ ಶರ್ಮ ಪಟ್ಲ ಘಟಕ ದುಬೈಯ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ದಿನೇಶ್ ಶೆಟ್ಟಿಯವರು ಸ್ವಾಗತಿಸಿ ಧನ್ಯವಾದವಿತ್ತರು. ವಿಜಯಕುಮಾರ್ ಶೆಟ್ಟಿ ಗಾಣದಮೂಲೆ…

Read More

ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನವಂಬರ್ 20 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಮುದ್ದು ಮೂಡುಬೆಳ್ಳೆ ಅವರು ಬಹುಮುಖ ಪ್ರತಿಭಾವಂತರು ಹಾಗೂ ಬೇರೆ ಬೇರೆ ರಂಗಗಳಲ್ಲಿ ಸೇವೆ ಸಲ್ಲಿಸಿ ಗಮನ ಸೆಳೆದವರು ಹಾಗೂ ಸೆಳೆಯುತ್ತಿರುವವರು. ಸುಮಾರು 16ರ ಪ್ರಾಯದಿಂದಲೇ ಕೆಲಸ ಮತ್ತು ಶಿಕ್ಷಣ – ಜೊತೆಗೆ ನಡೆದು ಬಂತು. ತುಳು ನಾಡು, ಹುಬ್ಬಳ್ಳಿ, ಬೆಂಗಳೂರು, ಮುಂಬೈ – ಮುಂತಾಡೆದೆ ನೌಕರಿ ಮಾಡಿದವರು. ಸರಕಾರದ ನ್ಯಾಯಾಂಗ ಹಾಗೂ ಪ್ರಸಾರ ಇಲಾಖೆಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದವರು. ಬಳಿಕ ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿ ಗಮನಾರ್ಹ ಸೇವೆ ಸಲ್ಲಿಸಿದವರು. ಇಂಥ ಸಾಧಕನ ಬಗ್ಗೆ ಒಂದು ಕಿರುಪರಿಚಯ ಇಲ್ಲಿದೆ. ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದಾಗಲೇ ಕತೆಗಾರರಾಗಿ ಗುರುತಿಸಿಕೊಂಡಿದ್ದ ಮುದ್ದು ಮೂಡುಬೆಳ್ಳೆ ಅವರು ಕಲೆ (ನಾಟಕ ಸಂಗೀತ) ಹಾಗೂ…

Read More

ಬಂಟರು ಸಂಘಟನಾತ್ಮಕವಾಗಿ, ಧಾರ್ಮಿಕವಾಗಿಯೂ ಬಲಶಾಲಿಯಾಗಿದ್ದರೂ ಸಮಾಜದಲ್ಲಿ ಪರಸ್ಪರ ಸ್ಪರ್ಧಾ ಮನೋಭಾವ ಕಡಿಮೆಯಾಗಬೇಕು. ಒಗ್ಗಟ್ಟು ಹೆಚ್ಚಾಗಬೇಕು. ಇದಕ್ಕಾಗಿ ಹಿರಿಯರ ಸಮ್ಮುಖದಲ್ಲಿ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ರೂಪಿಸಬೇಕಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಸುರತ್ಕಲ್ ಬಂಟರ ಸಂಘದ 22 ನೇ ವಾರ್ಷಿಕ ಮಹಾಸಭೆಯ ಬಳಿಕ ನಡೆದ ಅಭಿನಂದನೆ, ಸಹಾಯ ಹಸ್ತ ಮತ್ತು ವಿದ್ಯಾರ್ಥಿ ವೇತನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಸುರತ್ಕಲ್ ಬಂಟರ ಸಂಘ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಾ ಬಂದಿದೆ. 25ನೇ ವರ್ಷದ ಹೊಸ್ತಿಲಲ್ಲಿರುವ ಸಂಘ ಇನ್ನಷ್ಟು ಸಮಾಜಮುಖಿ ಸೇವೆ ಮಾಡುತ್ತಾ ಸಮಾಜದ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಲಿ. ಬಂಟರ ಸಂಘಗಳು ಇಂದು ದೇಶ ವಿದೇಶದಲ್ಲಿ ಕೂಡಾ ಇವೆ. ಆದರೆ ಇದೆಲ್ಲವನ್ನು ಒಂದೇ ವೇದಿಕೆಯಡಿ ತರುವ ಕೆಲಸ ನಡೆಯಬೇಕು. ಬಂಟರ ಸಮಾಜ ಎಲ್ಲೂ ಎಡವದಂತೆ ಎಚ್ಚೆತ್ತುಕೊಂಡು ಸಮಾಜದ ಪ್ರತಿಯೊಂದು ಕುಟುಂಬಕ್ಕೂ ಆಸರೆಯಾಗಬೇಕು” ಎಂದು ಐಕಳ ಹರೀಶ್ ಶೆಟ್ಟಿ ಶುಭ…

Read More

ಮುಂಬಯಿ ಬಂಟರ ಸಂಘದ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಹಾಗೂ ಎಸ್ ಎಂ ಶೆಟ್ಟಿ ಶಿಕ್ಷಣ ಸಂಸ್ಥೆ ಯು ಜಂಟಿಯಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದರು. ಈ ಸಂಧರ್ಭದಲ್ಲಿ ಮುಲುಂಡ್ ಬಂಟ್ಸ್ ನ ಮಾಜಿ ಅಧ್ಯಕ್ಷ ಡಾ. ಸತ್ಯಪ್ರಕಾಶ್ ಶೆಟ್ಟಿ, ಮಾತೃಭೂಮಿ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಮುಲುಂಡ್ ಬಂಟ್ಸ್ ನ ಅಧ್ಯಕ್ಷ ವಸಂತ್ ಎನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. Blood Donation Camp organised by Andheri Bandra Region along with Bunts Sangha’s SM Shetty Group of Institution.

Read More

ಬಂಟ ಸಮಾಜದ ಸಾಧಕರ ಕೀರ್ತಿ ವಿವಿಧ ಕ್ಷೇತ್ರಗಳಲ್ಲಿ ಜಗಜ್ಜಾಹೀರಾಗಿದ್ದು, ಇವರು ಪ್ರವೇಶಿಸಿದ ಕ್ಷೇತ್ರಗಳ ಪ್ರತಿಷ್ಠೆಯನ್ನೂ ಹೆಚ್ಚಿಸಿ ನಮ್ಮ ಸಮಾಜ ಇಂದು ವಿಶ್ವಮಾನ್ಯ ಎನಿಸಿದ್ದರೆ ಅದರ ಹಿಂದೆ ನಮ್ಮವರ ಛಲ, ಪರಿಶ್ರಮ, ಏಕಾಗ್ರತೆಗಳ ಅರಿವಾಗದಿರದು. ಇಂಥಹ ಸಾಧಕರ ಸಾಲಿಗೆ ಸೇರ್ಪಡೆಯಾಗಿ ರಾಸಾಯನಿಕ ಉತ್ಪನ್ನಗಳ ಕ್ಷೇತ್ರ ಸಂಬಂಧಿ ಕೈಗಾರಿಕೋದ್ಯಮದಲ್ಲಿ ಪ್ರಸಿದ್ಧಿ ಪಡೆದ ಬೊಲ್ಯಗುತ್ತು ವಿವೇಕ್ ಶೆಟ್ಟರ ಹೆಸರು ಅತೀ ಗೌರವ ಭಾವದಿಂದ ಉಲ್ಲೇಖಿಸಲ್ಪಡುತ್ತದೆ. ಶ್ರೀಯುತರು ಯಾವುದೇ ಪರಿಸರ ಮಾಲಿನ್ಯಕ್ಕೆ ಕಾರಣವಾಗಿ ಜನರ ಸ್ವಾಸ್ಥ್ಯ ಕೆಡದಂತೆ ರಾಸಾಯನಿಕ ಪದಾರ್ಥಗಳ ಉತ್ಪಾದನೆಗೆ ನವೀನ ರೀತಿಯ ತಂತ್ರಜ್ಞಾನವನ್ನು ಬಳಸುವುದರ ಮೂಲಕ ಸಾರ್ವಜನಿಕ ಸ್ವಾಸ್ಥ್ಯಕ್ಕೆ ಪ್ರಾಶಸ್ತ್ಯ ನೀಡುವ ಮಾನವ ಕಾಳಜಿಯಿಂದ ಗುರುತಿಸಿಕೊಂಡಿದ್ದಾರೆ. ಮಂಗಳೂರಿನ ಬಹು ಪ್ರತಿಷ್ಠಿತ ಬೊಲ್ಯಗುತ್ತು ಮನೆತನದಲ್ಲಿ ಜನ್ಮ ತಾಳಿದ ವಿವೇಕ್ ಶೆಟ್ಟರು ಬಾಲ್ಯದ ದಿನಗಳಲ್ಲೇ ಮುಂಬಯಿ ನಗರ ಸೇರಿಕೊಂಡರು. ಇಲ್ಲಿಯೇ ಶಿಕ್ಷಣ ಪಡೆದು ಓರ್ವ ಉನ್ನತ ಶಿಕ್ಷಣ ಪಡೆದ ಯುವಕನಾಗಿ ತನ್ನ ಕನಸುಗಳಿಗೆ ಸಾಕಾರ ರೂಪ ಕೊಡಬಹುದಾದ ಅನುಭವ ಸಂಪತ್ತನ್ನು ವಿವಿಧ ಮೂಲಗಳಿಂದ ಸಂಪಾದಿಸಿಕೊಂಡರು. ಮುಂಬಯಿಯಲ್ಲಿ ಅಮೇರಿಕಾ…

Read More

ದೇವರ ಸ್ವಂತ ನಾಡಾದ ಕೇರಳ ರಾಜ್ಯದ ಉತ್ತರ ಭಾಗದ ತುಳುನಾಡಿನಲ್ಲಿ ಕುಂಬಳೆ ಸೀಮೆ ಪ್ರಸಿದ್ಧವಾದುದು. ಈ ಸೀಮೆಯ ಉದ್ದಗಲಕ್ಕೂ ತುಳುನಾಡಿನ ರಾಜದೈವಗಳೆಂದು ಪ್ರಖ್ಯಾತವಾದ ಶ್ರೀ ಪೂಮಾಣಿ ಕಿನ್ನಿಮಾಣಿ ದೈವಗಳ ಹಲವು ದೈವಸ್ಥಾನಗಳು ಕಾಣಸಿಗುತ್ತವೆ. ಬೆಳೆಂಜದ ಕಿನ್ನಿಗೋಳಿ ಮಾಡವು ಇಂತಹ ಕಾರಣಿಕ ದೈವಸ್ಥಾನಗಳಲ್ಲಿ ಒಂದಾಗಿದೆ. ಬಹಳ ವರ್ಷಗಳ ಹಿಂದೆ ಬಾರಕೂರಿನ ರಾಜನಿಗೆ ಮಕ್ಕಳಿಲ್ಲದೆ ಆತ ತನ್ನ ಸೊಸೆಯನ್ನು ಅಳಿಯ ಸಂತಾನ ಪದ್ಧತಿಯ ಪ್ರಕಾರ ರಾಣಿಯನ್ನಾಗಿ ನೇಮಿಸುತ್ತಾನೆ. ಆಕೆ ಹಲವು ವರ್ಷಗಳ ಕಾಲ ರಾಜ್ಯಭಾರ ಮಾಡುತ್ತಾಳೆ. ಅವಳ 9 ಮಕ್ಕಳಲ್ಲಿ ಒಬ್ಬಳು ಹೆಣ್ಣು ಮತ್ತು ಇಬ್ಬರು ಗಂಡು ಮಕ್ಕಳನ್ನು ಬಿಟ್ಟು ಇತರರೆಲ್ಲ ಯುದ್ಧದಲ್ಲಿ ಮಡಿಯುತ್ತಾರೆ. ಸೋಲಿನಿಂದ ಅವಮಾನಿತರಾಗಿ ಆ ಮೂವರು ಕಾಶಿಯಾತ್ರೆ ಕೈಗೊಳ್ಳುತ್ತಾರೆ. ಕಾಶಿ ವಿಶ್ವನಾಥನನ್ನು ಒಲಿಸಿಕೊಂಡು ಪೂಮಾಣಿ – ಕಿನ್ನಿಮಾಣಿ, ದೈಯಾರೆ ಎಂಬ ಹೆಸರನ್ನು ಪಡೆದು, ಕಾರಣಿಕ ಶಕ್ತಿಯನ್ನು ಗಳಿಸಿ ಅಲ್ಲಿಂದ ದಕ್ಷಿಣಕ್ಕೆ ಪ್ರಯಾಣ ಬೆಳೆಸುತ್ತಾರೆ. ಹಾಗೆ ಭಗಂಡ ಕ್ಷೇತ್ರ (ಭಾಗಮಂಡಲ)ಕ್ಕೆ ತಲುಪಿ ಕಾವೇರಮ್ಮನ ದರ್ಶನ ಪಡೆದು ಘಟ್ಟ ಇಳಿದು ಬರುತ್ತಾರೆ. ಬರುತ್ತಿರುವಾಗ…

Read More