Author: admin
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ : ಥ್ರೋಬಾಲ್ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿನಿಯರು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ 14ರ ವಯೋಮಾನದ ವಿಭಾಗದ ಥ್ರೋಬಾಲ್ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ಬೈಂದೂರು ತಾಲೂಕು ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಎಂಟನೇ ತರಗತಿಯ ತನಿಷ್ಕಾ, ಸಾನಿಕಾ ಮತ್ತು ಪ್ರೇಕ್ಷಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ಪ್ರದೀಪ್ ಕೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಿದ್ದರು. ಸುಜ್ಞಾನ ಪದವಿ ಪೂರ್ವ…
‘ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಾಂಗಣ ಸಂಸ್ಥೆ ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ ಭಾಷೆಯನ್ನು ಯಕ್ಷಗಾನದಂತೆ ಸಶಕ್ತವಾಗಿ ಬಳಸಿಕೊಳ್ಳುವ ಕಲಾ ಮಾಧ್ಯಮ ಬೇರೊಂದಿಲ್ಲ’ ಎಂದು ಅಹ್ಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಅಹ್ಮದ್ ನಗರ ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದಲ್ಲಿ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು 2025 ನವೆಂಬರ್ 23ರಿಂದ 29ರ ವರೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಆಯೋಜಿರುವ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿ ಹಬ್ಬ, ತ್ರಯೋದಶ ಸರಣಿಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ‘ಜಿಲ್ಲೆಯ ವಿವಿಧ ಯಕ್ಷಗಾನ…
ಸಂಶೋಧಕಿ ಡಾ| ಇಂದಿರಾ ಹೆಗ್ಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ. ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಆಶಾಲತಾ ಸುವರ್ಣ ಅವರು ಹೇಳಿದರು. ಅವರು ತುಳು ಭವನದಲ್ಲಿ ಆಯೋಜಿಸಲಾಗಿದ್ದ ಡಾ| ಇಂದಿರಾ ಹೆಗ್ಡೆ ಅವರ ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಾನಪದೀಯ ಅಧ್ಯಯನ ಕ್ಷೇತ್ರ ಕಾರ್ಯಗಳ ಸಂದರ್ಭದಲ್ಲಿ ಮಹಿಳೆಯರು ಸಾಕಷ್ಟು ಎಡರು ತೊಡಕುಗಳನ್ನು ಎದುರಿಸುವ ಸಂದರ್ಭ ಉಂಟಾಗುತ್ತಿತ್ತು. ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದು ಡಾ| ಇಂದಿರಾ ಹೆಗ್ಡೆ ಅವರು ಹಲವು ಮಹತ್ವದ ಕೃತಿಗಳನ್ನು ನೀಡಿರುವುದು ಪ್ರಶಾಂಸನೀಯ ಎಂದು ಡಾ| ಆಶಾಲತಾ ಸುವರ್ಣ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಾ| ಸಮೀರ್ ಮಾಡ, ಹಿರಿಯ ಲೇಖಕಿ ಪ್ರೇಮಾ ಅಜ್ರಿ ಕಾರ್ಕಳ, ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜಿನ…
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನವೆಂಬರ್ 14ರಂದು ವಿದ್ಯಾರಣ್ಯದ ಅಂಗಳದಲ್ಲಿ ಸುಜ್ಞಾನ ಪಿ.ಯು. ಕಾಲೇಜು ಹಾಗೂ ವಿದ್ಯಾರಣ್ಯದ ವಿದ್ಯಾರ್ಥಿಗಳಿಗಾಗಿ ಅದ್ದೂರಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಪಿ.ಯು.ಸಿ. ಎನ್ನುವುದು ವಿದ್ಯಾರ್ಥಿಗಳ ಜೀವನದ ಅತ್ಯಂತ ಪ್ರಮುಖ ಘಟ್ಟ. ಹಾಗಾಗಿ ಕಲಿಕೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಂದು ಸುಂದರವಾದ ವ್ಯಕ್ತಿತ್ವವನ್ನು ಕಟ್ಟಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ವಿದ್ಯಾರ್ಥಿಗಳಲ್ಲಿ ಸಂಕಲ್ಪ ಶಕ್ತಿ ಇರಬೇಕು. ಆಗ ಮಾತ್ರ ಅವರು ಜೀವನದಲ್ಲಿ ಅಭಿವೃದ್ಧಿಯ ಕಡೆಗೆ ಸಾಗಲು ಸಾಧ್ಯ. ಈಗ ಉದ್ಯೋಗದಿಂದ ಹಿಡಿದು ಎಲ್ಲದಕ್ಕೂ ಸ್ಪರ್ಧೆಗಳು ಇವೆ. ಹಾಗಾಗಿ ವಿದ್ಯಾರ್ಥಿಗಳು ತುಂಬಾ ಶ್ರಮ ವಹಿಸಬೇಕು ಮತ್ತು ವಿದ್ಯೆಯ ಕುರಿತು ಆಲಸ್ಯ ಮಾಡಬಾರದು ಎಂದು ಅವರು ನುಡಿದರು. ಬದುಕಿನಲ್ಲಿ ಅವಕಾಶ ಮತ್ತೆ ಸಿಗದು -ಭರತ್ ಶೆಟ್ಟಿ ಸಂಸ್ಥೆಯ ಖಜಾಂಚಿ ಭರತ್…
ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ರೋಟರಿ ಬಾಲ ಭವನದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಲಕ್ಷ್ಮಣ ಡಿ. ನಿವೃತ್ತ ಶಿಕ್ಷಕರು ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿ ಹಲವು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸಿದರು. ಇದೇ ಸಂದರ್ಭದಲ್ಲಿ ಮಮತಾ ಶೆಟ್ಟಿ ಹಿರ್ಗಾನ ಇವರಿಗೆ ರಾಜ್ಯೋತ್ಸವದ ಪ್ರಯುಕ್ತ ಕ್ಲಬ್ಬಿನ ವತಿಯಿಂದ ಹೊಲಿಗೆ ಯಂತ್ರ ನೀಡಲಾಯಿತು. ಹಿರಿಯ ಸದಸ್ಯರಾದ ದಾನಿ ತುಕಾರಾಮ ನಾಯಕ್ ಮತ್ತು ಜನಾರ್ಧನ ಇಡ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿ ನಿರೂಪಿಸಿ, ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.
ಗಣಿತನಗರ : ಶಿಕ್ಷಣವು ಜೀವನದ ದಾರಿಗೆ ಹೊಂಬೆಳಕು. ಶಿಸ್ತು, ಪರಿಶ್ರಮ ಹಾಗೂ ದೃಢತೆ ಎಂಬ ತ್ರಿಸೂತ್ರವನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಅರಸಿಕೊಂಡು ಬರುತ್ತದೆ. ಶ್ರದ್ಧೆ, ಬದ್ಧತೆ ಮತ್ತು ಪ್ರಾಮಾಣಿಕವಾಗಿ ಇದ್ದಾಗ ವಿದ್ಯಾರ್ಥಿ ಪ್ರತಿಭಾನ್ವಿತನಾಗಿ ಹೊರಹೊಮ್ಮುತ್ತಾನೆ. ಅಂತಹ ಪ್ರತಿಭೆಗೆ ಸದಾವಕಾಶದ ಬಾಗಿಲು ಜ್ಞಾನಸುಧಾ ಆಗಿದೆ ಎಂದು ಬಂಟಕಲ್ನ ಶ್ರೀ ಸೋದೆ ವಾದಿರಾಜ ಮಠ ಎಜುಕೇಶನಲ್ ಇನ್ಸ್ಟಿಟ್ಯೂಷನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್. ಐತಾಳ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಜ್ಞಾನಸಂಭ್ರಮ-2025ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದ ಉದ್ಯಮಿ ಶ್ರೀ ಅಂಡಾರು ಮಹಾವೀರ ಹೆಗ್ಡೆ ಮಾತನಾಡಿ ವಿದ್ಯೆಯೊಂದಿಗೆ ಜೀವನ ಕೌಶಲ್ಯವನ್ನು ತುಂಬಿಸುವ ಮಹಾತ್ಕಾರ್ಯ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಿಂದ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರು ಮಾತನಾಡಿ ಬದುಕಿನ ಕಗ್ಗಂಟುಗಳನ್ನು ಮೆಟ್ಟಿ ನಿಂತವನಿಗೆ ಅನುಭವ ಜಾಸ್ತಿ. ಅವನೇ ಮುಂದೆ ಸರ್ವರಿಗೂ ಸ್ಪೂರ್ತಿಯಾಗುತ್ತಾನೆ. ಎಲ್ಲರ ಮನೆಮಾತಾಗುತ್ತಾನೆ ಎಂದರು.…
ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಶ್ರೀಮತಿ ಕರಿಷ್ಮಾ ಸನಿಲ್ ಹೇಳಿದರು. ಇವರು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್ ಮತ್ತು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಜಂಟಿಯಾಗಿ ವಿದ್ಯಾನಗರ ಗ್ರೀನ್ಸ್, ಮಣಿಪಾಲದಲ್ಲಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಐಕ್ಯಮ್ ಸ್ಪೋಟ್ಸ್ ಸೈನ್ಸ್ನ ಮ್ಯಾನೆಜಿಂಗ್ ಡೈರೆಕ್ಟರ್ ಆಗಿರುವ ರೋಹನ್ ಕೆ ಇವರು ಮಾತನಾಡಿ ಎಲ್ಲಾ ಕ್ರೀಡೆಗಳಿಗೂ ಸಮಾನ ಆದ್ಯತೆ ಸಿಗಬೇಕು. ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಸದುಪಯೋಗಪಡಿಕೊಂಡರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಮುಂಚೂಣಿಯಲ್ಲಿರಲು ಸಾಧ್ಯವಾಗುವುದು ಎಂದರು. ಇದೇ ಸಂದರ್ಭದಲ್ಲಿ ಆಗಮಿಸಿದ ಗಣ್ಯರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಅರ್ನ್ ಎಂಡ್ ಲರ್ನ್ ಬಿಸ್ನೆಸ್ ಫೇರ್ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ…
ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಅಂಧಮುಕ್ತ ಸಮಾಜ ನಿರ್ಮಾಣ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣದ ಗುರಿ : ಎಂ.ಬಿ ಉಮೇಶ್ ಶೆಟ್ಟಿ
ಅಭಯ ಸೇವಾ ಫೌಂಡೇಶನ್ ವತಿಯಿಂದ ಡಿಸೆಂಬರ್ 19, 20 ಮತ್ತು 21 ರಂದು ನಡೆಯಲಿರುವ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಅನಾವರಣ ಕಾರ್ಯಕ್ರಮ ನವೆಂಬರ್ 08 ರಂದು ನಡೆಯಿತು. ಉದ್ಯಮಿ ಇರ್ಮಾಡಿ ಜಯಪ್ರಸಾದ್ ಶೆಟ್ಟಿ, ಅಭಯ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಎಂ. ಬಿ. ಉಮೇಶ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಡಿ. ಚಂದ್ರಹಾಸ್ ರೈ ನಿಕಟಪೂರ್ವ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯ ಕೆ. ಉಮೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಉಪಾಧ್ಯಕ್ಷರಾದ ಸಂತೋಷ್ ಶೆಟ್ಟಿ, ಬಿಜೆಪಿ ಮಹಿಳಾ ಮುಖಂಡರಾದ ಕಾಂತಿ ಶೆಟ್ಟಿ, ಕನ್ನಡಪರ ಹೋರಾಟಗಾರ ಶಿವಾನಂದ ಶೆಟ್ಟಿ, ಆರ್.ಎಸ್.ಎಸ್ ಮುಖಂಡರಾದ ಸುರೇಶ್ ರವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಭಯ ಸೇವಾ ಫೌಂಡೇಶನ್ ಬಡವರ, ನೊಂದವರ ಸೇವೆ ಮಾಡಲು ಮತ್ತು ಸಂಸ್ಕೃತಿಯನ್ನು ಉಳಿಸಲು ಕಂಕಣಬದ್ಧವಾಗಿದ್ದು, ಕಳೆದ ವರ್ಷ ಸೇವಾ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡು…
2026 ನೇ ಸಾಲಿನ ಜೇಸಿಐ ಕಾರ್ಕಳದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಜೇಸಿ ಅವಿನಾಶ್ ಜಿ ಶೆಟ್ಟಿ, ಕಾರ್ಯದರ್ಶಿಯಾಗಿ ಸುಶಾಂತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಶ್ಮಿತಾ ರಾವ್, ರಕ್ಷಿತಾ ರಾವ್, ಶಿವಕುಮಾರ್, ಶಾಹಿನ್ ರಿಜ್ವಾನ್ ಖಾನ್, ರೇವತಿ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ರಿಜ್ವಾನ್ ಖಾನ್, ಕೋಶಾಧಿಕಾರಿಯಾಗಿ ಮಂಜುನಾಥ್ ಡಿ, ಚುನಾವಣಾ ಕಮಿಟಿಯ ಛೇರ್ಮನ್ ಪ್ರಚಿತ್ ಕುಮಾರ್ ಹಾಗೂ ಸದಸ್ಯರಾದ ವಿಜ್ಞೇಶ್ ಪ್ರಸಾದ್, ಡಾ. ಮುರಳೀಧರ ಭಟ್ ಇವರ ಚುನಾವಣಾ ಪ್ರಕ್ರಿಯೆ ನಡೆಸಿ, ಜೆಸಿಐ ಕಾರ್ಕಳದ ಅಧ್ಯಕ್ಷೆ ಜೇಸಿ ಶ್ವೇತಾ ಜೈನ್ ಇವರು ಎಲ್ಲಾ ಪೂರ್ವಾಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದರು. ಅಧ್ಯಕ್ಷರಾಗಿ ಆಯ್ಕೆಯಾದ ಉದ್ಯಮಿ ಅವಿನಾಶ್ ಜಿ. ಶೆಟ್ಟಿಯವರು ಅಮ್ಮನ ನೆರವು ಎಂಬ ಚಾರಿಟೇಬಲ್ ಟ್ರಸ್ಟ್ ನ್ನು ಸ್ಥಾಪಿಸಿ, ಹಲವಾರು ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬಗಳಿಗೆ ನೆರವಾಗುತ್ತಿರುವ ಸಮಾಜ ಸೇವಕ, 2025 ನೇ ಸಾಲಿನ ಸಾಧನಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಕಾರ್ಯದರ್ಶಿಯಾಗಿ ಆಯ್ಕೆಯಾದ ಸುಶಾಂತ್ ಶೆಟ್ಟಿಯವರು ಯುವ ಉದ್ಯಮಿಯಾಗಿದ್ದು ರಾಷ್ಟ್ರೀಯ…
ಉಡುಪಿ ಜಿಲ್ಲಾ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಶ್ರೀ ಎನ್ ರಮೇಶ್ ಶೆಟ್ಟಿ ಹಾವಂಜೆಯವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ) ಬೆಂಗಳೂರು ಇವರ ವತಿಯಿಂದ ಸಹಕಾರ ಕ್ಷೇತ್ರದಲ್ಲಿ ಸಾಧನೆಗಾಗಿ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.














