Author: admin

ಯಾವುದೇ ಭೇದ ಭಾವವಿಲ್ಲದೆ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರುವಾಸಿಯಾಗಿದೆ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು. ಅತಿಥಿ ದೇವೋ ಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4 ರ ನ್ಯೂ ಗಾಂಧಿ ನಗರದಲ್ಲಿ ನವೀಕೃತಗೊಂಡಿರುವ ಬಂಟರ ಭವನದ ಉದ್ಘಾಟನಾ ಸಮಾರಂಭ ಹಾಗೂ ಮಾಣಿಕ್ಯ ಸಂಭ್ರಮದಲ್ಲಿ ಮಾತನಾಡಿದ ಸಚಿವರು, ಚಿಕ್ಕ ವಯಸ್ಸಿನಲ್ಲೇ ಮನೆಬಿಟ್ಟು ಹೋಗಿ ಸ್ವಂತ ಕಾಲ ಮೇಲೆ ನಿಲ್ಲುವ ಸ್ವಾಭಿಮಾನಿಗಳು. ದೇಶದ ವಿವಿಧೆಡೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಸಂಸ್ಕೃತಿ ಕಲೆಯಲ್ಲಿ ನಿಮ್ಮ ಸಮಾಜಕ್ಕೆ ಇರುವ ಆಸಕ್ತಿ ನೋಡಿ ಮಂತ್ರ ಮುಗ್ಧಳಾಗಿದ್ದೇನೆ. ಈ ಸಮುದಾಯದವರು ನಿಸ್ವಾರ್ಥಿಗಳು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಉಡುಪಿ ಶ್ರೀ ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ, ಕಾಪು ಮಾರಿಗುಡಿ ದೇವರ ದರ್ಶನ ಭಾಗ್ಯ…

Read More

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಜೂನ್ 21ರಂದು ಸಾಯಂಕಾಲ 3.30 ಕ್ಕೆ ಸಯನ್ ನಿತ್ಯಾನಂದ ಸಭಾಗೃಹದ ವೇದಿಕೆಯಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಶನ್ ಸಂಸ್ಥೆಯ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆ ಹಾಗೂ ಮಾರ್ಗದರ್ಶನದೊಂದಿಗೆ ಯೋಗ ದಿನಾಚರಣೆಯು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಗೋಲ್ಡ್ ಮೆಡಲ್ ಪಡೆದ ಹಾಗೂ “ದೇವಾಡಿಗ ರತ್ನ” ಪ್ರಶಸ್ತಿಗೆ ಭಾಜನರಾದ ಯೋಗ ಗುರು ಜಯಂತಿ ದೇವಾಡಿಗರವರು ವಿಶೇಷವಾಗಿ ಆಗಮಿಸಿ ಸಹಕರಿಸಲಿದ್ದಾರೆ. ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ, ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ, ಯೋಗದ ಹೊಲಬ ನೀನೆತ್ತ ಬಲ್ಲೆ. ವಚನಕಾರರಾದ ಅಲ್ಲಮ ಪ್ರಭುಗಳ ಈ ಸಾಲುಗಳು ಸರಳವಾಗಿ ಹೇಳುವುದೇನೆಂದರೆ, ವ್ಯಕ್ತಿಯು ಯೋಗದ ಮೂಲಕ ಅಗ್ನಿ, ಉದಕ, ವಾಯು ಮತ್ತು ಆಕಾಶದಂತಹ ಪ್ರಕೃತಿಯ ಶಕ್ತಿಗಳನ್ನು ತನ್ನ ಅಧೀನದಲ್ಲಿ ತರಬಹುದು ಅಥವಾ ಅವುಗಳೊಂದಿಗೆ ಸಾಮರಸ್ಯದಿಂದ ಬದುಕಬಹುದು. ಅಲ್ಲದೇ ಇದು ಯೋಗದ ಅಂತಿಮ ಗುರಿ ಅಥವಾ ಉದ್ದೇಶವನ್ನು ಸೂಚಿಸುತ್ತದೆ ಮತ್ತು ಯೋಗದ ಶಕ್ತಿಯ ಬಗ್ಗೆ ತಿಳಿಸುತ್ತದೆ. ಯೋಗವು…

Read More

ಮುಂಬಯಿಯ ಪ್ರಸಿದ್ಧ ಲೆಕ್ಕ ಪರಿಶೋಧಕ ಸಂಸ್ಥೆಯಾದ ಸದಾಶಿವ ಶೆಟ್ಟಿ & ಕಂಪನಿಯ ಸಿ.ಎ ಸದಾಶಿವ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಬಂಟರ ಸಂಘ ಮುಂಬಯಿಯ ಮಾಜಿ ಕಾರ್ಯದರ್ಶಿಯಾಗಿ, ಸಮಾಜ ಸೇವಕರಾಗಿ ಹೆಸರು ವಾಸಿಯಾಗಿರುವ ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಇಲ್ಲಿ ಒಬ್ಬ ಮುಂಜಾನೆ ಮಳೆ, ಗಾಳಿ, ಬಿಸಿಲು,ಎನ್ನದೆ ಕೈಯಲ್ಲಿ “ರಸ್ತೆಯಲ್ಲಿ ಕಸ ಬಿಸಾಡಬೇಡಿ” ಎಂಬ ಒಂದು ಬೋರ್ಡ್ ಹಿಡಿದುಕೊಂಡು ನಿಂತಿದ್ದಾನೆ. ಯಾರಾದರೂ ಇವನ ಬಗ್ಗೆ ಯೋಚಿಸಿದ್ದೀರಾ? ಎಲ್ಲರೂ ಬದಲಾಗುತ್ತಾರೆ ಎಂಬುದು ಅವನ ಕನಸು. ಆದರೆ “ಕೆಲವರಾದರೂ ಬದಲಾಗಬಹುದು” ಎಂಬ ನಂಬಿಕೆಯೇ ಅವನ ತಾಳ್ಮೆಯ ಶಕ್ತಿ, ಅವನ ನಿಲ್ಲುವ ಉದ್ದೇಶ. ಅವನು ನಾಯಕನೂ ಅಲ್ಲ, ನಟನೂ ಅಲ್ಲ ಪ್ರಖ್ಯಾತ ವ್ಯಕ್ತಿಯು ಅಲ್ಲ. ಆದರೆ ಆತ ಪರಿಸರದ ಬದಲಾವಣೆಗೆ ಹೊಸದೊಂದು ಹೆಜ್ಜೆ ಹಾಕುತ್ತಿರುವ ಸಾಮಾನ್ಯ ನಾಗರಿಕ.! ಈತನ ಹೆಸರು ನಾಗರಾಜ್. ಆದರೆ ಆತನು ತೋರಿಸುತ್ತಿರುವ ರಸ್ತೆ ಬದಿಯ ಹೋರಾಟ, ಸಾವಿರ ಸಂಕಷ್ಟದ ವೀರಗಾಥೆಗೂ ಕಡಿಮೆಯಲ್ಲ. ಹೆಸರು ಮಾತ್ರ ಸಾಮಾನ್ಯ. ಆದರೆ ಹೃದಯ ಸರ್ವಜ್ಞನಷ್ಟು ಗಂಭೀರ. ಅಡ್ಯಾರಿನಿಂದ ಫರಂಗಿಪೇಟೆಯ ನಡುವೆ ಆತ ರಸ್ತೆ ಬದಿಯಲ್ಲಿ ನಿಂತಿದ್ದನ್ನು ಕಂಡರೂ ಕಾಣದಂತೆ ಹೋಗಬೇಡಿ. ಒಂದು ನಿಮಿಷ ಅವನನ್ನು ಮಾತನಾಡಿಸಿ ಅವನ ಕಾಳಜಿಗೆ ಧನ್ಯವಾದ ತಿಳಿಸಿ. ಪ್ರತಿಯೊಂದು ದಿನವೂ ನಾವು ನೋಡುತ್ತೇವೆ. ನೋಡಿದರೂ ನೋಡದಂತೆ ಸಾಗುತ್ತೇವೆ. ಒಬ್ಬ ರಸ್ತೆಯ ಬದಿಯಲ್ಲಿ…

Read More

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ಜರಗಲಿರುವುದು ಎಂದು ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕರಾದ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸುತ್ತಾ, ಜೂನ್ 29 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಡೆಯುವ ಕಾರ್ಯಕ್ರಮಗಳಲ್ಲಿ ದಶಮ ಸಂಭ್ರಮದ ಪ್ರಯುಕ್ತ ಯುಎಇಯ ಏಳು ಮಂದಿ ಸಾಧಕರಿಗೆ ಮತ್ತು ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಇತ್ತೀಚಿಗೆ ನಗರದ ಫಾರ್ಚೂನ್ ಪ್ಲಾಜಾದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಯುತ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಯಕ್ಷಗಾನ ಅಭ್ಯಾಸ ಕೇಂದ್ರದ ವತಿಯಿಂದ ಅದ್ದೂರಿಯ ಸಂಮಾನಕ್ಕೆ ಪಾತ್ರರಾಗಲಿರುವ ಸಾಧಕರ ವಿವರವನ್ನು ಮಾಧ್ಯಮದ ಮುಂದೆ ಇಟ್ಟರು. ವಿವರ ಹೀಗಿದೆ. ಸಂಘಟನೆ ಕ್ಷೇತ್ರ : ಸರ್ವೋತ್ತಮ ಶೆಟ್ಟಿಯವರು ಯುಎಇಯಲ್ಲಿ ತುಳು ಕನ್ನಡ ಸಂಘ ಸಂಸ್ಥೆಗಳ…

Read More

ಬಂಟರ ಸಂಘ ಮುಂಬಯಿ ತನ್ನ ಪ್ರಾದೇಶಿಕ ಸಮಿತಿಗಳ ಮೂಲಕ ಪ್ರತೀ ವರ್ಷ ಸಹಸ್ರಾರು ಯೂನಿಟ್ ರಕ್ತ ಸಂಗ್ರಹಿಸಿ ಬ್ಲಡ್ ಬ್ಯಾಂಕ್ ಗೆ ನೀಡಿ ಸಹಸ್ರಾರು ರೋಗಿಗಳನ್ನು ರೋಗದಿಂದ ಮುಕ್ತಿ ಪಡೆಯಲು ಸಹಕಾರವನ್ನು ನೀಡುತ್ತಿದೆ. ಸದ್ಯ ಮಳೆಗಾಲ ಪ್ರಾರಂಭವಾಗಿದ್ದು, ಆಸ್ಪತ್ರೆಗಳಲ್ಲಿ ಮಲೇರಿಯಾ, ಡೆಂಗ್ಯೂ ಜ್ವರದ ರೋಗಿಗಳ ಸಂಖ್ಯೆ ವಿಪರೀತ ಹೆಚ್ಚುತ್ತಿದೆ. ನಾವೆಲ್ಲರೂ ಮೊದಲು ನಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಬೇಕು. ಇಂದಿನ ಆಧುನಿಕ ಯುಗದಲ್ಲಿ ಎಲ್ಲರೂ ಹಣ ಸಂಪಾದನೆಯ ಹಿಂದೆ ಹೋಗಿ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಿ ಬ್ಲಡ್ ಪ್ರಶರ್, ಸಕ್ಕರೆ ಖಾಯಿಲೆಗಳಂತಹ ರೋಗಗಳನ್ನು ಆಹ್ವಾನಿಸುತ್ತಿದ್ದಾರೆ. ಯಾವುದೇ ರೋಗಗಳು ಬಂದಾಗ ನಮಗೆ ರಕ್ತದ ಅವಶ್ಯಕತೆ ಬಹಳಷ್ಟು ಇರುತ್ತದೆ. ಪ್ರತಿಯೊಬ್ಬರು 18 ವರ್ಷದಿಂದ ಮೇಲ್ಪಟ್ಟು 65 ವರ್ಷದವರೆಗೆ ವರ್ಷದಲ್ಲಿ ಎರಡು ಸಲ ರಕ್ತದಾನವನ್ನು ಮಾಡಿದಾಗ ನಮ್ಮ ಆರೋಗ್ಯ ಸಮತೋಲನವನ್ನು ಕಾಪಾಡುತ್ತದೆ. ನಾವು ರಕ್ತದಾನ ಮಾಡಿದಾಗ ಕೆಲವೇ ಗಂಟೆಗಳಲ್ಲಿ ನಮ್ಮ ಮೂಲೆ ಮಜ್ಜೆಗಳು ಪುನಃ ರಕ್ತವನ್ನು ಉತ್ಪಾದಿಸುತ್ತದೆ. ನಮ್ಮ ಹಿರಿಯರು ಯುವ ಪೀಳಿಗೆಗೆ ರಕ್ತದಾನ ಮಾಡುವಂತೆ…

Read More

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೌಹಾರ್ದತೆ, ಶಾಂತಿಯ ವಾತಾವರಣ ಮರುಸ್ಥಾಪನೆ ಕಾರ್ಯದಲ್ಲಿ ಸಂಬಂಧಿಸಿದ ಜಿಲ್ಲಾಡಳಿತ ಜತೆ ಸಹಕರಿಸಲು ಪ್ರತೀ ತಾಲೂಕುಗಳಲ್ಲಿ ತಲಾ 8, 10 ಸದಸ್ಯರ ಸಮಿತಿ ರಚಿಸಲು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತೀರ್ಮಾನಿಸಿದೆ. ಮುಂದಿನ ಆರು ತಿಂಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಪೂರ್ಣ ಸ್ವರೂಪ ಪಡೆದುಕೊಳ್ಳಲಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್‌ಎಎಫ್) ಸ್ಥಾಪಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪರಿಸರ ಪ್ರೇಮಿ ಸಮಿತಿ ಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಹೇಳಿದರು. ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಯುವ ಜನಾಂಗದ ಉಜ್ವಲ ಭವಿಷ್ಯ ರೂಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆ, ಶಾಂತಿಯ ವಾತಾವರಣ ಮರು ಸ್ಥಾಪಿಸುವಂತೆ ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಅವರು ಒತ್ತಾಯಿಸಿದರು. ಕಳೆದ…

Read More

ಬಹರೈನಿನಲ್ಲಿ ನಡೆದ ಬಂಟ್ಸ್ ಬಹರೈನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಡಾ. ಭರತ್ ಶೆಟ್ಟಿ (ಶಾಸಕರು, ಮಂಗಳೂರು ನಗರ ಉತ್ತರ), ಕಿಶೋರ್ ಆಳ್ವ (ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಅದಾನಿ ಗ್ರೂಪ್) ಮತ್ತು ಚಲನಚಿತ್ರ ನಟ ವಜ್ರಾಂಗ್ ಶೆಟ್ಟಿ ಅವರು ಕನ್ನಡ ಸಂಘ ಬಹರೈನ್‌ನ ಆಹ್ವಾನವನ್ನು ಸ್ವೀಕರಿಸಿ ಕನ್ನಡ ಭವನಕ್ಕೆ ಸಂದರ್ಶನ ನೀಡಿದರು. ಅತಿಥಿಗಳನ್ನು ಸಂಘದ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಪದಾಧಿಕಾರಿಗಳು ಹೂಗುಚ್ಛ, ಶಾಲು ಮತ್ತು “ಕಾವೇರಿ” ಸ್ಮರಣ ಸಂಚಿಕೆ ನೀಡಿ ಗೌರವಿಸಿದರು. ಕನ್ನಡ ಸಂಘ ಬಹರೈನ್‌ನ ಸಾಧನೆ ಹಾಗೂ ವಿದೇಶಿ ನೆಲದಲ್ಲೂ ಕನ್ನಡ ಸಂಸ್ಕೃತಿಯ ಪೋಷಣೆಗಾಗಿ ಅತಿಥಿಗಳು ಸಂತೋಷ ವ್ಯಕ್ತಪಡಿಸಿದರು. ಡಾ. ಭರತ್ ಶೆಟ್ಟಿ, ಕಿಶೋರ್ ಆಳ್ವ ಮತ್ತು ವಜ್ರಾಂಗ್ ಶೆಟ್ಟಿ ಅವರು ಸ್ಥಳೀಯ ಕನ್ನಡಿಗರ ಭಾಷಾಭಿಮಾನಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಅಮರನಾಥ್ ರೈ, ಮಾಜಿ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಬಂಟ್ಸ್ ಬಹರೈನ್ ಉಪಾಧ್ಯಕ್ಷ ಅಜೇಯ್ ಶೆಟ್ಟಿ ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು. ಸಂಘದ…

Read More

ಭಾರತೀಯ ಬ್ಯಾಡ್ಮಿಂಟನ್ ಆಟಗಾರ, ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಆರ್ಚಕ ವೇ. ಶ್ರೀನಿವಾಸ ತಂತ್ರಿ ಕಲ್ಯ ಅವರು ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಶೇರಿಗಾರ್ ಉಪಸ್ಥಿತರಿದ್ದರು. ಚಂದ್ರಶೇಖರ ಶೆಟ್ಟಿ ಮತ್ತು ಸುಜಾತಾ ಶೆಟ್ಟಿ ದಂಪತಿಯ ಪುತ್ರನಾಗಿರುವ 27 ವರ್ಷದ ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ನಲ್ಲಿ (ಸಾತ್ವಿಕ್ ರಾಜ್ ರಾಂಕಿ ರೆಡ್ಡಿ ಜತೆ) ಏಷ್ಯಾನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯಾನ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

Read More

ಉಡುಪಿ ಎಂಜಿಎಂ ಪದವಿಪೂರ್ವ ಕಾಲೇಜಿನ ರೊನಾಕ್ ಆರ್ ಶೆಟ್ಟಿಯವರು 2025 ರ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ 646/720 ಗಳಿಸುವುದರೊಂದಿಗೆ ರಾಷ್ಟ್ರ ಮಟ್ಟದಲ್ಲಿ 107 ನೇ ಸ್ಥಾನ, ರಾಜ್ಯ ಮಟ್ಟದಲ್ಲಿ 8ನೇ ಸ್ಥಾನ, ಅವಿಭಜಿತ ದ.ಕ ಜಿಲ್ಲಾ ಮಟ್ಟದಲ್ಲಿ 3ನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದಿದ್ದಾರೆ. ಉಡುಪಿ ಜಿಲ್ಲೆಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೇೂಷನ್ ಕುಮಾರ್ ಶೆಟ್ಟಿ ಹಾಗೂ ಉಡುಪಿ ಎಂಜಿಎಂ ಕಾಲೇಜಿನ ಜೀವ ಶಾಸ್ತ್ರ ವಿಭಾಗದ ಉಪನ್ಯಾಸಕಿ ಅನಿತಾ ಆರ್ ಶೆಟ್ಟಿಯವರ ಸುಪುತ್ರ ರೊನಾಕ್ ಆರ್ ಶೆಟ್ಟಿಯವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಶಿಕ್ಷಕೇತರ ವರ್ಗದವರು ಶ್ಲಾಘಿಸಿದ್ದಾರೆ.

Read More