Author: admin
ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಇಲ್ಲಿ ಬಾಹ್ಯಕಾಶವೇ ಮಿತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ, ವಕೀಲ ವೃತ್ತಿಯಲ್ಲಿ ದೊರೆಯುವ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸು ಬೇರೆ ಯಾವ ಕ್ಷೇತ್ರಗಳಲ್ಲೂ ಸಿಗಲಾರದು. ಇಲ್ಲಿ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ ಎಂದರು. ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ನಾಯಕತ್ವ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಬಳಿಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎದುರಿಸಿದ್ದೆ. ಇದೀಗ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಮೂರನೇ ಪ್ರಮುಖ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದೇನೆ. ತಾನು ಮೂಲತಃ ವೈದ್ಯನಾಗುವ ಕನಸು ಕಂಡಿದ್ದೆ. ಆದರೆ ಪಿಸಿಎಂಬಿ ವಿಭಾಗದಲ್ಲಿ ಅನುತ್ತೀರ್ಣನಾದ ಬಳಿಕ ಕಲಾ ವಿಭಾಗಕ್ಕೆ ಸೇರ್ಪಡೆಗೊಂಡೆ. ಜೀವನದ ಸೋಲುಗಳೇ ನನ್ನ ಯಶಸ್ಸಿನ ದಾರಿಯನ್ನು…
ರಾಮಾಭಿವಂದ್ಯ ಯಕ್ಷ ಸೇವಾ ಬಳಗ, ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಜಂಟಿ ಆಯೋಜನೆಯಲ್ಲಿ ಪ್ರಭು ಶ್ರೀರಾಮಚಂದ್ರ ದೇವರ ಅವತಾರದ ಆರಂಭದಿಂದ ನಿರ್ಯಾಣದವರೆಗಿನ ಸಂಪೂರ್ಣ ಶ್ರೀರಾಮ ಚರಿತ್ರೆ, ಶ್ರೀರಾಮಕಥಾ ಹೃದಯಂ ಪುಣ್ಯಪ್ರದ ಇಪ್ಪತ್ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ 9ನೇ ಪ್ರಸ್ತುತಿ ವಾಲಿ ಮೋಕ್ಷ ಮತ್ತು ಸನ್ಮಾನ ಕಾರ್ಯಕ್ರಮವು ಜೂನ್ 14 ರಂದು ಅಪರಾಹ್ನ 2.15ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ವೇದಮೂರ್ತಿ ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿಯವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಈ ಸಮಾರಂಭದಲ್ಲಿ ಕಳೆದ 5 ದಶಕಗಳಿಂದ ಮುಂಬಯಿ ಮಹಾನಗರದಲ್ಲಿ ಕಲಾ ಸೇವೆಗೈಯ್ಯುತ್ತಿರುವ ಆನಂದ ಶೆಟ್ಟಿ ಇನ್ನಾ ಅವರನ್ನು ಗೌರವಿಸಲಾಗುವುದು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವೇದಮೂರ್ತಿ ಹರಿದಾಸ ಭಟ್ ಪೆರ್ಣಂಕಿಲ ಅವರು ವಹಿಸಲಿದ್ದು, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿಯವರ ಗೌರವ ಉಪಸ್ಥಿತಿಯಿರಲಿದೆ. ಮುಖ್ಯ…
ಹೆತ್ತವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಸೇವಾ ದುರೀಣ ಆನಂದ ಎಂ ಶೆಟ್ಟಿ ಅವರು ಇಂದು ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಜಾಗತಿಕ ಮಟ್ಟದಲ್ಲಿ ಜನಪ್ರಿಯರಾಗಿದ್ದಾರೆ. ದಿವಂಗತ ಮೋನಪ್ಪ ಶೆಟ್ಟಿ ಹಾಗೂ ದಿವಂಗತ ಲಕ್ಷ್ಮಿ ಶೆಟ್ಟಿ ದಂಪತಿಗಳ ಸುಪುತ್ರರಾಗಿ ತೋನ್ಸೆಯ ಪ್ರತಿಷ್ಠಿತ ಬಂಟ ಕುಟುಂಬದಲ್ಲಿ ಜನಿಸಿದ ಆನಂದ ಶೆಟ್ಟಿಯವರು ಯಶಸ್ವೀ ಉದ್ಯಮಿಯಾಗಿ ವ್ಯವಹಾರದಲ್ಲಿ ಬಂದ ಲಾಭದಲ್ಲಿ ಸಮಾಜಕ್ಕೆ ಏನಾದರೂ ಮರಳಿ ನೀಡಬೇಕು ಎಂಬ ಉದ್ದೇಶದೊಂದಿಗೆ ಮುನ್ನಡೆಯುತ್ತಿರುವ ಅವರ ಚಿಂತನೆ ಅನೇಕರಿಗೆ ಮಾದರಿಯಾಗಿದೆ. ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಾ, ಸಾವಿರಾರು ಕುಟುಂಬಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿರುವ ಆನಂದ ಎಂ ಶೆಟ್ಟಿ ಅವರು ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು, ಬಡ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದನೆ, ಸಾಮಾಜಿಕ ಸಂಘಟನೆಗಳಿಗೆ ಪ್ರೋತ್ಸಾಹ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಮೂಲಕ ಜನಸಾಮಾನ್ಯರ…
ಖ್ಯಾತ ಕವಿ ಡಾ| ಕಯ್ಯಾರ ಕಿಂಞಣ್ಣ ರೈ ಅವರ ಜನ್ಮದಿನಾಚರಣೆ ಸಂದರ್ಭದಲ್ಲಿ ನೀಡಲ್ಪಡುವ ಕಯ್ಯಾರ ಪ್ರಶಸ್ತಿಗೆ ಉದ್ಯಮಿ, ಸಮಾಜ ಸೇವಕ, ಎಟಿಎಸ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ| ರವಿ ಶೆಟ್ಟಿ ದೋಣಿಂಜೆ ಗುತ್ತು ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಜೂನ್ 21ರಂದು ಬೆಳಗ್ಗೆ 9ರಿಂದ ಕಯ್ಯಾರು ಕಾಮಿಲ್ ಕೊಕ್ಕೆಚಾಲು ಶಾಲಾ ವಠಾರದಲ್ಲಿ ನಡೆಯುವ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಪ್ರಶಸ್ತಿ ಪ್ರದಾನ ಮಾಡುವರು. ಇದೇ ವೇಳೆ ಕೃತಿ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಕರಾವಳಿಯ ನಗುಮೊಗದ ಹೀರೋ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ವಿನ್ನರ್ ಆದ ಬಳಿಕ ಬಹುಬೇಡಿಕೆಯ ನಟ, ನಿರೂಪಕರಾಗಿ ಗುರುತಿಸಿಕೊಂಡಿದ್ದು, ತಾನು ಕೈಯಾಡಿಸಿದ ಪ್ರತಿಯೊಂದರಲ್ಲೂ ಸಕ್ಸಸ್ ಆಗುತ್ತಿರುವುದು ಅವರ ಪ್ರತಿಭೆಗೆ ಸಾಕ್ಷಿ. ಐಪಿಎಲ್ ಸಂದರ್ಭದಲ್ಲೂ ಟೀವಿ ಚಾನೆಲ್ನಲ್ಲಿ ಕಾಮೆಂಟರರ್ ಆಗಿ ಬ್ಯುಸಿಯಾಗಿದ್ದ ರೂಪೇಶ್ ಶೆಟ್ಟಿ ಈಗ ಸುಲಭದಲ್ಲಿ ಯಾರ ಕೈಗೂ ಸಿಗದಷ್ಟು ಕೆಲಸ ಕಾರ್ಯಗಳಲ್ಲಿ ವ್ಯಸ್ತರಾಗಿದ್ದಾರೆ. ಅವರ ನಟನೆಯ ‘ಜೈ’ ಸಿನಿಮಾವಂತೂ ಸೂಪರ್ ಹಿಟ್ ಆಗಿ, ನೂರು ದಿನಗಳನ್ನು ಪೂರೈಸಿ ನಿರ್ಮಾಪಕರಿಗೆ ಖುಷಿ ಕೊಟ್ಟಿದೆ. ಒಂದು ಹೊಸ ರೂಪದ ಸಿನೆಮಾ ಎಂದು ಜನಮನ್ನಣೆಯನ್ನೂ ಗಳಿಸಿದೆ. ಜೊತೆಗೆ ಹೊಸ ತುಳು ಸಿನಿಮಾ ‘ಬ್ರೋ’ ಘೋಷಣೆಯಾಗಿದೆ. ಈಗ ರೂಪೇಶ್ ನಟಿಸಿರುವ ಮೊದಲ ತಮಿಳು ಸಿನೆಮಾ ಸನ್ನಿಧಾನಂ ಪಿ.ಒ. ತಮಿಳುನಾಡಿನಾದ್ಯಂತ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇವರ ನಟನೆಗೆ ತಮಿಳರು ಕೂಡಾ ಫಿದಾ ಆಗಿದ್ದು, ರೂಪೇಶ್ ಶೆಟ್ಟಿಗೆ ಅಲ್ಲೂ ಭಾರೀ ಬೇಡಿಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ನಡುವೆ ಇವರು ಮತ್ತೊಂದು ಕನ್ನಡ ಸಿನೆಮಾದಲ್ಲೂ…
ಎಚ್ಚಿನಗುಲು ಪಿನಯೆರ್, ಬೊಂದೆ ಪಂಡ ದಾದ ಪಂದ್. ಬೂತಾಯಿದ ನನಾತ್ ಸಸಾರದ ಪುದರೇ ಬೊಂದೆ. ಜೋರ್ದ ಪೊನ್ನುಲೆಗ್ ‘ನಿನನ್ ಆಲ್ ಒಂಜಿ ಬೊಂದೆಗ್ ಅಡವು ದೀವೊಲು’ ಇಂಚ ಪನುವೆರ್ ಪೊಂಜೋವುಲು ತನ್ಕ್ಲೆನ (ಪಾಪದ) ಆನ್ ಜೋಕುಲೆಗ್. ಒವುಲ ಒಂಜಿ ಪಿರಿಯದ ವಸ್ತುನು ಸರಿಟ್ ತೂವಂದೆ ಪತ್ತಂದೆ ಕನತಡ, ಆ ವಸ್ತ್ ಬಿಲೆಕ್ ತಕ್ಕಂತಿನ ಅತ್ತ್ಡ, ‘ಪೋಯೆರ್, ಬೂತಾಯಿ ಕಂತಿಲಕ್ಕ ಕನತೆರ್’ ಪಂದ್ ಇಲ್ಲದ ಬಾಕಿದಗುಲು (ಎಚ್ಚಾದ್ ಬುಡೆದಿ) ಅಂಗ್ಸಾವೆರ್. ಪಂಡ ಬೊಂದೆಗ್ ದಾಲ ಬಿಲೆನೇ ಇಜ್ಜಿ. ದುಂಬು ನಮ್ಮೂರ್ದ ಕಡಲ್ಡ್ ಬಾರಿ ಬೂತಾಯಿದ ಚೊಪ್ಪ. ಸಂತೆಡ್ ಪಲ್ಲಾಯಿಡ್ ಗೋರುದು ಮಾರುನು ಬೂತಾಯಿ, ಚಕ್ರೊಗು (25 ನಯಾ ಪೈಸೆ) ಒಂಜಿ ಪಲ್ಲಾಯಿ ನಿಲ್ಕೆ. ಲೆಕ್ಕ ಮಲ್ತ್ ಏರ್ ಕುಲ್ಲುನು, ರಡ್ಡ್ ರಡ್ಡ್ ನಾಲ್, ನಾಲ್ ನಾಲ್ ಆಜಿ, ಆಜಿ ಆಜಿ.. ಪನೊಂದು. ಒರೊರಾ ರಂಪೊನಿಗ್ ಮಸ್ತ್ ಬೂತಾಯಿ ಬೂರ್ದು, ಮಾರ್ದ್ ಪೋವಂದೆ, ಮರಿಯೊಲೊಡು ನುಂಗಾವರೆಲಾ ಆವಂದೆ, ಕಡೆಕ್ ಕುಟ್ಟೆ ಮಲ್ಪುನು. ಪಂಡ ಲಾರಿಗಟ್ಟಲೆ…
ಗ್ರಾಮೀಣ ಪ್ರದೇಶದ ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಬೇಕು. ಈ ಮೂಲಕ ಗ್ರಾಮದ ಅಭಿವೃದ್ದಿ ಆಗಬೇಕು ಎಂದು ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಕರ್ನಿರೆ ಇಲ್ಲಿನ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಿಸಿ ಮಾತನಾಡಿ, ಕಳೆದ 30 ವರ್ಷಗಳಿಂದ ಇಲ್ಲಿನ ಮಕ್ಕಳಿಗೆ ಪುಸ್ತಕ ಕೊಡುತ್ತಿದ್ದೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಆಗಬಾರದು ಎಂಬುದೇ ನನ್ನ ಮೂಲ ಉದ್ದೇಶವಾಗಿದೆ ಎಂದರು. ಕನ್ನಡ ಉಳಿಸಿ ಬೆಳೆಸಿ ಸಂಘಟನೆಯ ದ.ಕ, ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಮಾತನಾಡಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರ ಸಮಾಜಮುಖಿ ಚಿಂತನೆಗಳು ಅಭಿನಂದನೀಯವಾದುದು. ಕಳೆದ ಕೆಲ ವರ್ಷಗಳಿಂದ ಅವರ ಸಾಮಾಜಿಕ ಚಟುವಟಿಕೆಗಳನ್ನು ಕಂಡಿದ್ದೇನೆ. ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದವರಾಗಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆ ಉಳಿಸಿ ಬೆಳೆಸಲು ಅವರ ಕೊಡುಗೆ ಅಭಿನಂದನೀಯ ಎಂದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ ಇಲ್ಲಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಾಗಾರವನ್ನು ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸಿ ಯಕ್ಷಗಾನ ಶಿಕ್ಷಕರ ಕಾರ್ಯಾಗಾರದ ಪ್ರಾಮುಖ್ಯತೆಯನ್ನು ವಿವರಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಯಕ್ಷಗಾನ ಶಿಕ್ಷಕರರ ತರಬೇತಿ ಕಾರ್ಯಾಗಾರವು ಪ್ರಾರಂಭವಾಯಿತು. ಪ್ರಸಕ್ತ ಕಾರ್ಯಾಗಾರದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತೆಂಕುತಿಟ್ಟು ಯಕ್ಷಗಾನ ತಂತ್ರಜ್ಞಾನಾಧಾರಿತ ಪಠ್ಯಪುಸ್ತಕದ ಬಗ್ಗೆ ಪರಿಚಯಾತ್ಮಕ ತರಗತಿಯನ್ನು ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ನಡೆಸಿದರು. ಈ ಪಠ್ಯ ಪುಸ್ತಕದಲ್ಲಿರುವ ಕ್ಯೂ ಆರ್ ಕೋಡನ್ನು ಬಳಸಿ ಅದರಲ್ಲಿರುವ ನಾಟ್ಯಗಳ ಹೆಜ್ಜೆಗಾರಿಕೆಯ ಬಗ್ಗೆ ಪ್ರಾಯೋಗಿಕ ತರಗತಿಯನ್ನು ನಡೆಸಲಾಯಿತು. ತಾಳ, ಕಾಲ, ತತ್ಕಾರ, ಬಿಡಿತ, ಮುಕ್ತಾಯ ಇವುಗಳ ಶಾಸ್ತ್ರೀಯ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ…
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ : ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ, ಉಚಿತ ನೋಟ್ ಪುಸ್ತಕ ವಿತರಣೆ
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ) ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ನ ಸಂಸ್ಥಾಪಕರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು. ಉದ್ಘಾಟಕರಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ನೀಡುವ ಮೂಲಕ ಟ್ರಸ್ಟ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂಬ ಸಂದೇಶವನ್ನು ಟ್ರಸ್ಟ್ ನೀಡುತ್ತಿದೆ ಎಂದು ಹೇಳಿದರು. ಟ್ರಸ್ಟಿ ಸಂತೋಷ ಕಾಂಚನ್…
ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾ ಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ ನೀಡಿರುವ ಐಶ್ವರ್ಯ, ಆರೋಗ್ಯ ಮತ್ತು ಪ್ರಕೃತಿಯ ಕೊಡುಗೆಗಳಿಗೆ ಪ್ರತಿಯಾಗಿ ನಾವು ಕೃತಜ್ಞತೆ ಸಲ್ಲಿಸಬೇಕು. ಆರತಿ ತಟ್ಟೆಗೆ ನಾಣ್ಯವನ್ನು ಹಾಕುವುದು ಎಂದರೆ ನಮ್ಮಲ್ಲಿರುವ ‘ಮಮಕಾರ’ ಮತ್ತು ‘ಅಹಂಕಾರ’ವನ್ನು ದೇವರ ಪಾದಕ್ಕೆ ಅರ್ಪಿಸುವುದು ಎಂದರ್ಥ. ದೇವಸ್ಥಾನಕ್ಕೆ ಹೋದಾಗ ಬರಿಗೈಯಲ್ಲಿ ಹೋಗಬಾರದು ಮತ್ತು ಬರಿಗೈಯಲ್ಲಿ ವಾಪಸು ಬರಬಾರದು ಎಂಬ ನಿಯಮವಿದೆ. ಭಕ್ತಿಪೂರ್ವಕವಾಗಿ ನೀಡುವ ಈ ಕಾಣಿಕೆ ಮನುಷ್ಯನಲ್ಲಿ ಕಂಜೂಸು ಗುಣವನ್ನು ದೂರ ಮಾಡಿ, ತ್ಯಾಗ ಮನೋಭಾವನೆಯನ್ನು ಬೆಳೆಸುತ್ತದೆ. ಪ್ರಾಚೀನ ಇತಿಹಾಸವನ್ನು ಗಮನಿಸಿದರೆ, ದೇವಸ್ಥಾನಗಳು…















