Author: admin
ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಂತರಿಕ ಸಮಿತಿಯಿಂದ ‘ಮಹಿಳಾ ಸಬಲೀಕರಣ ಮತ್ತು ವೈಚಾರಿಕ ಪ್ರಜ್ಞೆ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಉಡುಪಿ ಅಜ್ಜರಕಾಡಿನ ಡಾ| ಜಿ ಶಂಕರ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ಪ್ರಾಧ್ಯಾಪಕಿ ಡಾ. ನಿಕೇತನ ಮಾತನಾಡಿ, ವೈಚಾರಿಕ ಪ್ರಜ್ಞೆಗೂ ವೈಜ್ಞಾನಿಕ ಮನೋಭಾವಕ್ಕೂ ಪರಸ್ಪರ ಸಂಬಂಧವಿದೆ. ವೈಚಾರಿಕ ಪ್ರಜ್ಞೆಯಿಂದ ಸತ್ಯದ ಶೋಧನೆಯಾಗುತ್ತದೆ. ಪ್ರಶ್ನಿಸುವ ಗುಣ ನಮ್ಮನ್ನು ವೈಚಾರಿಕತೆಯತ್ತಾ ಕೊಂಡೊಯ್ಯುತ್ತದೆ. ಮಹಿಳಾ ಸಬಲೀಕರಣ ಎಂದರೆ ಗಂಡು ಮತ್ತು ಹೆಣ್ಣು ಪರಸ್ಪರ ಪೂರಕವಾಗಿ ಬದುಕುವುದು. ಹಿಂದಿನ ಪೀಳಿಗೆಯ ಸಬಲೀಕರಣದ ಕುರಿತಾದ ಹೋರಾಟದ ಫಲವಾಗಿ ಇಂದು ಮಹಿಳೆಯರಿಗೆ ಸಮಾನತೆ ಸಿಗುತ್ತಿದೆ. ಹೆಣ್ಣು ಮತ್ತು ಗಂಡಿನ ನಡುವೆ ಜೈವಿಕ ವ್ಯತ್ಯಾಸ ಸಹಜ. ಆದರೆ ಸಾಂಸ್ಕೃತಿಕ ಭೇದ ಸಮಾಜ ಮಾಡಿದ್ದು. ಹೆಣ್ಣನ್ನು ದ್ವಿತೀಯ ದರ್ಜೆಯ ವ್ಯಕ್ತಿಯನ್ನಾಗಿ ನೋಡುವ ದೃಷ್ಠಿ ಅತ್ಯಂತ ಹೀನ ಪ್ರವೃತ್ತಿ. ಇಂತಹ ಸಂದರ್ಭದಲ್ಲಿ ವೈಚಾರಿಕ ಪ್ರಜ್ಞೆಯಿಂದ ಸಮಾಜದ ಸಮಸ್ಯೆಗಳ ಸುಧಾರಣೆ…
ನಮ್ಮ ನೆಲದ ಅಸ್ಮಿತೆ, ತುಳುನಾಡಿನ ಸಾಂಸ್ಕೃತಿಕ ಜನಪದ ವೈಭವದ ಸಂಕೇತವಾದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದ ‘ಮಂಗಳೂರು ಕಂಬಳ’ಕ್ಕೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ‘ರಾಮ-ಲಕ್ಷ್ಮಣ’ ಜೋಡುಕರೆಯಲ್ಲಿ ಭವ್ಯ ಚಾಲನೆ ದೊರೆಯಿತು. ಈ ಬಾರಿಯ ಕಂಬಳವು ಕೇವಲ ಕ್ರೀಡೆಯಾಗಿ ಉಳಿಯದೆ, ‘ನವ ವೈವಿಧ್ಯ’ ಎಂಬ ಪರಿಕಲ್ಪನೆಯಡಿ ಸಂಪ್ರದಾಯ ಮತ್ತು ಆಧುನಿಕತೆಯ ಅದ್ಭುತ ಸಂಗಮಕ್ಕೆ ವೇದಿಕೆಯಾಯಿತು. ಕೆಸರು ಗದ್ದೆಯ ವೀರ ಕ್ರೀಡೆಯ ಜೊತೆಗೆ ಈ ಬಾರಿ ಹಮ್ಮಿಕೊಳ್ಳಲಾದ ವಿನೂತನ ಚಟುವಟಿಕೆಗಳು ಕಂಬಳದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿವೆ.
ಮುಲುಂಡ್ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ 40 ಅಂತಿಮ ಸ್ಪರ್ಧಿಗಳು ಭಾಗವಹಿಸಿದ್ದ ಈ ನಾಲ್ಕು ದಿನಗಳ ಸ್ಪರ್ಧೆಯಲ್ಲಿ ಪ್ರತಿಭಾ ಸುತ್ತು, ಪ್ರೇರಣಾದಾಯಕ ಜೀವನ ಕಥೆ, ವೈಯಕ್ತಿಕ ಸಂದರ್ಶನ, ರ್ಯಾಂಪ್ ವಾಕ್, ರಾಷ್ಟ್ರೀಯ ವೇಷಭೂಷಣ, ಸಾಂಪ್ರದಾಯಿಕ ಸುತ್ತು ಹಾಗೂ ಈವಿನಿಂಗ್ ಗೌನ್ ಸುತ್ತುಗಳ ಮೂಲಕ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು. ರಾಷ್ಟ್ರಮಟ್ಟದ ವೇದಿಕೆಯಲ್ಲಿ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ತೋರಿದ ಆತ್ಮವಿಶ್ವಾಸ, ಸಮರ್ಪಣೆ ಮತ್ತು ಸರ್ವತೋಮುಖ ಶ್ರೇಷ್ಠತೆ ಈ ಗೌರವಕ್ಕೆ ಕಾರಣವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.…
ಮುಲುಂಡ್ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿಸೆಂಬರ್ 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ -2025 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ 40 ಅಂತಿಮ ಸ್ಪರ್ಧಿಗಳು ಭಾಗವಹಿಸಿದ್ದ ಈ ನಾಲ್ಕು ದಿನಗಳ ಸ್ಪರ್ಧೆಯಲ್ಲಿ ಪ್ರತಿಭಾ ಸುತ್ತು, ಪ್ರೇರಣಾದಾಯಕ ಜೀವನ ಕಥೆ, ವೈಯಕ್ತಿಕ ಸಂದರ್ಶನ, ರ್ಯಾಂಪ್ ವಾಕ್, ರಾಷ್ಟ್ರೀಯ ವೇಷಭೂಷಣ, ಸಾಂಪ್ರದಾಯಿಕ ಸುತ್ತು ಹಾಗೂ ಈವಿನಿಂಗ್ ಗೌನ್ ಸುತ್ತುಗಳ ಮೂಲಕ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು. ರಾಷ್ಟ್ರಮಟ್ಟದ ವೇದಿಕೆಯಲ್ಲಿ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ತೋರಿದ ಆತ್ಮವಿಶ್ವಾಸ, ಸಮರ್ಪಣೆ ಮತ್ತು ಸರ್ವತೋಮುಖ ಶ್ರೇಷ್ಠತೆ ಈ ಗೌರವಕ್ಕೆ ಕಾರಣವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಮಿಸೆಸ್ ಇಂಡಿಯಾ…
ಎಂ.ಆರ್.ಜಿ ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ ಪ್ರದಾನ ಸಮಾರಂಭ ‘ನೆರವು-2025’ ಗುರುವಾರ ಸಂಜೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಎಂ.ಆರ್.ಜಿ ಗ್ರೂಪಿನ ಛೇರ್ಮನ್ ಡಾ| ಕೆ ಪ್ರಕಾಶ್ ಶೆಟ್ಟಿ ಅವರು, ನಾನೊಬ್ಬ ಸಾಮಾನ್ಯ ಕುಟುಂಬದಲ್ಲಿ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದೆ. ತಂದೆ ಮಾಧವ ಶೆಟ್ಟಿ, ತಾಯಿ ರತ್ನ ಶೆಟ್ಟಿ ಅವರೊಂದಿಗೆ ಕಷ್ಟದ ಜೀವನ ನಡೆಸಿ ಶಾಲಾ ದಿನಗಳಲ್ಲಿ ಜಾತಿ, ಧರ್ಮ ಯಾವುದನ್ನು ನೋಡದೆ ಎಲ್ಲರ ಮನೆಗಳಲ್ಲಿ ತಿಂದು ಅವರ ಅಂಗಳದಲ್ಲಿ ಆಡಿದ ನೆನಪು ಇನ್ನೂ ಇದೆ. ಅಮ್ಮನಿಗಿಂತ ಶ್ರೇಷ್ಠವಾದುದು ಜಗತ್ತಿನಲ್ಲಿ ಯಾವುದೂ ಇಲ್ಲ. ನಮ್ಮ ಮುಂದಿನ ಬದುಕನ್ನು ರೂಪಿಸುವುದು ನಮ್ಮ ಅಮ್ಮ ಮಾತ್ರ. ಅಮ್ಮನ ಮಮತೆ, ತಂದೆಯ ಪ್ರೀತಿ, ತುಳುನಾಡಿನ ಸಂಸ್ಕೃತಿ ಜೊತೆಗಿನ ಬದುಕು ನನ್ನನ್ನು ಇಂದು ಈ ಮಟ್ಟಕ್ಕೆ ಬೆಳೆಸಿದೆ. 1983ರಲ್ಲಿ ಬದುಕು ಕಟ್ಟಿಕೊಳ್ಳಲು ಬೆಂಗಳೂರು ತಲುಪಿ 15 ವರ್ಷಗಳ ಕಾಲ ಅವಮಾನ, ಕಷ್ಟ…
ಮಂಗಳೂರು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕೆರೆಯಲ್ಲಿ ಡಿಸೆಂಬರ್ 27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, ‘ಡಿ.27 ರಂದು ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ಈ ಬಾರಿಯ ಮಂಗಳೂರು ಕಂಬಳವನ್ನು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಉದ್ಘಾಟಿಸಲಿದ್ದಾರೆ. ಕಂಬಳವು ಕರಾವಳಿಯ ಸಂಸ್ಕೃತಿಯ ವಿಶಿಷ್ಟತೆಯ ಪ್ರತೀಕ. ಆದರೆ ನಮ್ಮ ಕಂಬಳದ ಅಸ್ಮಿತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆದಾಗ ಅದರ ವಿರುದ್ದ ಸಿಡಿದೆದ್ದು ಆರಂಭವಾದ ಸಣ್ಣ ಪ್ರಯತ್ನವೇ ಮಂಗಳೂರು ಕಂಬಳವಾಗಿ ಕಳೆದ 9 ವರ್ಷಗಳಿಂದ ಸಂಭ್ರಮದ ಕೂಟವಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಡಿ. 27ರಂದು ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಆರ್.ಜಿ ಗ್ರೂಪ್…
ಡಾ| ಬಿ.ಎ ವಿವೇಕ ರೈ ಕನ್ನಡ ಮತ್ತು ತುಳು ಭಾಷೆಗಳ ಮಹತ್ವದ ಸಂಸ್ಕೃತಿ ಚಿಂತಕರು, ಸಂಶೋಧಕರು, ವಿಮರ್ಶಕರು, ಜಾನಪದ ವಿದ್ವಾಂಸರು ಮತ್ತು ಕನ್ನಡ ಪ್ರಾಧ್ಯಾಪಕರು. ವಿವೇಕ ರೈಯವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಅಗ್ರಾಳದಲ್ಲಿ 1946ರ ಡಿಸೆಂಬರ್ 8ರಂದು ಜನಿಸಿದರು. ತಂದೆ ಅಗ್ರಾಳ ಪುರಂದರ ರೈ ಸಾಹಿತಿ ಮತ್ತು ಪತ್ರಕರ್ತರಾಗಿದ್ದು, ಡಾ| ಶಿವರಾಮ ಕಾರಂತರಿಗೆ ಆಪ್ತರಾಗಿದ್ದರು. ವಿವೇಕ ರೈ ಅವರಿಗೆ ಚಿಕ್ಕ ವಯಸ್ಸಿನಲ್ಲೇ ತಂದೆಯವರ ಮೂಲಕ ಶಿವರಾಮ ಕಾರಂತರ ಪರಿಚಯವಾಯಿತು. ಈ ಪರಿಚಯ ಅವರನ್ನು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪೇರಿಸಿತು. ವಿವೇಕ ರೈ ಪುಣಚದ ಪರಿಯಾಲ್ತಡ್ಕ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಒಂದರಿಂದ ಎಂಟನೆಯ ತರಗತಿವರೆಗೆ ಅಭ್ಯಾಸ ಮಾಡಿದರು. ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಹತ್ತನೆಯ ತರಗತಿವರೆಗೆ ಕಲಿತರು. ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಬಿ.ಎಸ್ಸಿ ಪದವಿ ಪಡೆದು, ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರ ಕೇಂದ್ರದಲ್ಲಿ 1970 ವರ್ಷದಲ್ಲಿ ಕನ್ನಡ ಎಂ.ಎ. ಪದವಿ…
ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ವತಿಯಿಂದ ನೀಡಲಾಗುವ 2025 ರ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಸಾಣೂರಿನ ಉದನೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ. ಡಿಸೆಂಬರ್ 21ರಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ನೀಡಿ ಸನ್ಮಾನಿಸಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ ಶೆಟ್ಟಿಗೆ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು. ಕ್ರೀಡಾ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಯುಷ್ ಶೆಟ್ಟಿ ಸಾಣೂರಿನ ಮಿತ್ತಲ ಮನೆಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಿಲಿ ದಂಪತಿ ಪುತ್ರ. ತಮ್ಮ ಎಂಟನೇ ವಯಸ್ಸಿನಲ್ಲಿ ಬ್ಯಾಡ್ಮಿಂಟನ್ ಆಡಲು ಆರಂಭಿಸಿದ್ದು, ಯುಎಸ್ ಓಪನ್ BWF SUPER 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಆಯುಷ್ ಮೊದಲ ಬಿಡಬ್ಲೂಎಫ್ ಎಫ್ ಟೂರ್ ಪ್ರಶಸ್ತಿಯನ್ನು ಗೆದ್ದಿದ್ದರು. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲೂಎಫ್ ಟೂರ್ ಪ್ರಶಸ್ತಿ ಇದಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ – 2025 ಅಂಗವಾಗಿ ಡಿಸೆಂಬರ್ 21ರಂದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಿತು. ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಅವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್ , ಶ್ರೀಶ ರಾವ್ ನಿಡ್ಲೆ ಮತ್ತು ಕೀರ್ತನ್ ಹಿಮ್ಮೇಳದಲ್ಲಿ ಸಹಕರಿಸಿದರು. ಜಿಲ್ಲಾಡಳಿತದ ಪರವಾಗಿ ದ.ಕ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಅವರು ಕರ್ನಾಟಕ ಯಕ್ಷ ಭಾರತಿಯ ಸಂಚಾಲಕ…
ಬೆಂಗಳೂರಿನಲ್ಲಿ 2003ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಚಿತ್ರ ‘ಚಾರ್ಜ್ ಶೀಟ್ 03/08’. ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಜೀವನಾನುಭವ ಹಾಗೂ ಅವರು ಬರೆದ ಕಾದಂಬರಿಯೇ ಈ ಸಿನಿಮಾದ ಕಥಾಹಂದರ. ಸತ್ಯದ ಹುಡುಕಾಟ, ವ್ಯವಸ್ಥೆಯೊಳಗಿನ ಸಂಘರ್ಷ ಮತ್ತು ನ್ಯಾಯಕ್ಕಾಗಿ ನಡೆಯುವ ಹೋರಾಟವನ್ನು ಈ ಸಿನಿಮಾ ಚಿತ್ರಿಸುವುದರ ಜೊತೆಗೆ ಉತ್ತಮ ಸಂದೇಶವನ್ನೂ ನೀಡಲಿದೆ.ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ನೈಜ ಕಥೆಗೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, 2000ದ ದಶಕದ ಆರಂಭದ ಬೆಂಗಳೂರಿನ ವಾತಾವರಣವನ್ನು ಇಲ್ಲಿ ನೈಜವಾಗಿ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ಸುಂದರ್ ರಾಜ್, ಹರ್ಶ್ ಅರ್ಜುನ್, ಅಮರ್, ಸತೆಯಾ, ರಾಮ್, ಚೇತನ ಖೋಟ್, ಡಾ. ಪ್ರಮೋದ್, ಡಾ. ಸುಧಾಕರ್ ಶೆಟ್ಟಿ, ರೂಪೇಶ್ ಹಾಗೂ ವೆಂಕಟ್ ಭಾರದ್ವಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಡಾ. ಸುಧಾಕರ ಶೆಟ್ಟಿಯವರ ಮೊದಲ ಚಿತ್ರ ವೆಂಕಟ್ ಭಾರಧ್ವಜ್ ನಿರ್ದೇಶನದ ಹೇ ಪ್ರಭು, ಎರಡನೆ ಚಿತ್ರ ಚಾರ್ಜ್ ಶೀಟ್, ಮೂರನೇ ಚಿತ್ರ…















