Author: admin
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಂಸ್ಥೆಯು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ರಂಗದಲ್ಲಿ ಅನೇಕ ಕಾರ್ಯ ಚಟುವಟಿಕೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವ ಸಂಸ್ಥೆಯು ಇದೀಗ ಸಹಕಾರ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಹೊಸ ಮೈಲುಗಲ್ಲೊಂದನ್ನು ನಿರ್ಮಿಸಿದೆ. ಸಪ್ತ ಸಂಸ್ಥಾಪಕರ ಕನಸಿನ ಕೂಸಾದ ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ. ಕಾರ್ಕಳದ ಕುಕ್ಕುದಕಟ್ಟೆ ಸರ್ಕಲ್ ನಲ್ಲಿರುವ ಪಿಂಟೋ ಟವರ್ಸ್ ನ ಮೊದಲ ಮಹಡಿಯಲ್ಲಿ ವಿದ್ಯುಕ್ತವಾಗಿ ಲೋಕಾರ್ಪಣೆಗೊಂಡಿತು. ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ಲೋಕಾರ್ಪಣೆ ನಿಮಿತ್ತ ಸಭಾ ಕಾರ್ಯಕ್ರಮ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ರವರು ಸೊಸೈಟಿಯನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ, ಕ್ರಿಯೇಟಿವ್ ಸಂಸ್ಥೆಯು ಕೇವಲ ಕ್ಯಾಂಪಸ್ ನ ಒಳಗಡೆ ತನ್ನ ಕಾರ್ಯ ಚಟುವಟಿಕೆಗಳನ್ನು ಸೀಮಿತಗೊಳಿಸದೆ ಕ್ಯಾಂಪಸ್ ನ ಹೊರಗಡೆ ಅಂದರೆ ಹತ್ತಾರು ಮಂದಿಗೆ…
ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಾಸಿಕ ಸಭೆಯು ಇತ್ತೀಚಿಗೆ ಹೋಟೆಲ್ ಚಂದ್ರಭಾಗ ಸಭಾಂಗಣದಲ್ಲಿ ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ್ ಸಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂಧರ್ಭ ಕತ್ರಾಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಅಯ್ಕೆಯದ ಜಗದೀಶ್ ಬಿ ಶೆಟ್ಟಿಯವರನ್ನು ದಕ್ಷಿಣ ಪ್ರಾದೇಶಿಕ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಸುಧಾಕರ ಸಿ ಶೆಟ್ಟಿಯವರು ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಇದೀಗ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೆಟ್ಟಿಯವರಿಗೆ ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಎಲ್ಲಾ ಸದಸ್ಯರು ಸಂಪೂರ್ಣ ಸಹಕಾರ ನೀಡಲಿದ್ದು, ಅವರ ಆಡಳಿತ ಅವಧಿಯಲ್ಲಿ ದೇವಸ್ಥಾನ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ವಿನೋದ ಎಸ್ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪ್ರತಿಷ್ಠಿತ ಬಂಟರ ಸಂಘ ಬೆಂಗಳೂರು ವರ್ಷಂಪ್ರತಿ ಬಿಸು (ಯುಗಾದಿ) ಹಬ್ಬ ಆಚರಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಏಪ್ರಿಲ್ 14 ರಂದು ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿಯವರ ಸಾರಥ್ಯದಲ್ಲಿ ರಾಧಾಭಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಮುಖ್ಯ ಅತಿಥಿಯಾಗಿ ಚಾರ್ಟೆಡ್ ಗ್ರೂಪ್ ನ ಸಿಎಂಡಿ ಏರ್ಯ ಬಾಲಕೃಷ್ಣ ಹೆಗ್ಡೆ ಹಾಗೂ ಗೌರವ ಅತಿಥಿಯಾಗಿ ಕರ್ನಾಟಕ ಮಹಿಳಾ ದಕ್ಷತಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶರಣ್ಯ ಎಸ್ ಹೆಗ್ಡೆ ಆಗಮಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಕ್ರೀಡೆ ಹಾಗೂ ಸೌಂದರ್ಯ ಸ್ಪರ್ಧೆಯಲ್ಲಿ ಗಣನೀಯ ಸಾಧನೆ ಮಾಡಿದ್ದಲ್ಲದೇ, 2026 ರ ಸಾಲಿನ ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಕುಮಾರಿ ಲೇಖನ ಮಲ್ಲಿಕಾರ್ಜುನ ಹೆಗ್ಡೆಯವರನ್ನು ಗೌರವಿಸಿ ಸನ್ಮಾನಿಸಿದರು. ಈ ಸಂಧರ್ಭ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ ಎಂ, ಮಹಿಳಾ ಉಪಾಧ್ಯಕ್ಷೆ ಶ್ರೀಮತಿ ಕಾಂತಿ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಹಾಲಾಡಿ ವಿಜಯ್ ಜೆ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ ಹಾಗೂ ಕಾರ್ಯಕಾರಿ…
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತುಳು ಕನ್ನಡಿಗರು ಹುಟ್ಟಿನಿಂದಲೇ ಆಸ್ತಿಕರು, ದೈವಭಕ್ತರು, ಶಕ್ತಿಯ ಆರಾಧಕರು. ಈ ಮಾತಿಗೆ ನಮ್ಮ ಅಣ್ಣಿ ಶೆಟ್ಟಿಯವರು ಹೊರತಾಗಿಲ್ಲ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗುಂಡ್ಯಡ್ಕ ದೇವಕಿ ಶೆಟ್ಟಿ ಮತ್ತು ಸಾಂತೂರು ಬೈಲುಮನೆ ಚಿನ್ಮಯ್ಯ ಶೆಟ್ಟಿ ಅವರ ಸುಪುತ್ರರಾಗಿ ಜನಿಸಿರುವ ಅಣ್ಣಿ ಶೆಟ್ಟರು ಜೀವನ ನಿರ್ವಹಣೆಗೆ ಜ್ಞಾನ ನೀಡುವಷ್ಟು ಶಿಕ್ಷಣವನ್ನು ಹುಟ್ಟೂರಿನಲ್ಲಿ ಪೂರೈಸಿ ಮುಂಬಯಿ ಸೇರಿದವರು ಅನೇಕ ಕಡೆ ಕಷ್ಟಪಟ್ಟು ದುಡಿದು ನಂತರ ತನ್ನದೇ ಆದ ಕ್ಯಾಂಟೀನ್ ಉದ್ಯಮ ಆರಂಭಿಸಿ ಅದರಲ್ಲಿ ಯಶಸ್ಸು ಕಂಡವರು ಮತ್ತೆ ಹಿಂದಿರುಗಿ ನೋಡಲಿಲ್ಲ. ಕಲ್ಯಾಣ್ ಮತ್ತು ನವಿ ಮುಂಬಯಿ ಪರಿಸರದಲ್ಲಿ ಹೊಟೇಲ್ ಮತ್ತು ಕ್ಯಾಂಟೀನ್ ಉದ್ಯಮದಲ್ಲಿ ಯಶಸ್ಸು ಕಾಣುವುದಕ್ಕೆ ಕಾರಣ ಮಾತೆ ದುರ್ಗಾಂಬೆ ಎಂದು ಬಲವಾಗಿ ನಂಬುವ ಅಣ್ಣಿ ಶೆಟ್ಟಿಯವರು ಶ್ರೀ ದೇವಿಯನ್ನು ಅನವರತವೂ ಆರಾಧಿಸಿಕೊಂಡು ಬಂದಿರುವ ದೇವಿ ಉಪಾಸಕರು. ಘನ್ಸೋಲಿ ಮೂಕಾಂಬಿಕಾ ಸನ್ನಿಧಿ ಎಂದರೆ ಹಬ್ಬ ಹರಿದಿನಗಳಲ್ಲಿ ಸಂಭ್ರಮ ಸಡಗರ ಸಾಂಸ್ಕೃತಿಕ ಸುಗ್ಗಿ. ಇದರ ಹಿಂದಿನ ರೂವಾರಿ…
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ : ಏಪ್ರಿಲ್ 26 ರಂದು ಮಹಾದ್ವಾರ ಹಾಗೂ ಶ್ರೀಮತಿ ಆಶಾಲತಾ ನಾರಾಯಣ ಶೆಟ್ಟಿ ಸಭಾಭವನ ಲೋಕಾರ್ಪಣೆ
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇಲ್ಲಿ ಅತ್ತೂರು ಭಂಡಾರ ಮನೆ ರಾಜೇಶ್ ಶೆಟ್ಟಿಯವರಿಂದ ಸೇವಾ ರೂಪವಾಗಿ ಪಕ್ಷಿಕೆರೆ ಪೇಟೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ಹಾಗೂ ದೇವಸ್ಥಾನದ ನವೀಕೃತಗೊಂಡ ಹವಾನಿಯಂತ್ರಿತ ಆಶಾಲತಾ ನಾರಾಯಣ ಶೆಟ್ಟಿ ಸಭಾಭವನದ ಉದ್ಘಾಟನಾ ಸಮಾರಂಭವು ಏಪ್ರಿಲ್ 26ರ ರವಿವಾರದಂದು ಸಾಯಂಕಾಲ 4 ಗಂಟೆಗೆ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥರ ಉಪಸ್ಥಿತಿಯಲ್ಲಿ ನಡೆಯಲಿರುವುದು. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ಜರಗಲಿದ್ದು, ಪರಮಪೂಜ್ಯ ಉಡುಪಿ ಪೇಜಾವರ ಅಧೋಕ್ಷಜ ಮಠ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಸುರಗಿರಿ ಆಡಳಿತ ಮೊಕ್ತೇಸರ ರಾಜೇಶ್ ಶೆಟ್ಟಿ ಅತ್ತೂರು ಭಂಡಾರ ಮನೆ ವಹಿಸಿಕೊಳ್ಳಲಿದ್ದಾರೆ. ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಅರ್ಚಕ ವೇದಮೂರ್ತಿ ಅನಂತ ಪದ್ಮನಾಭ ಆಸ್ರಣ್ಣ ಶುಭಾಶಂಸನೆಗೈಯಲಿದ್ದಾರೆ. ಶಿಬರೂರು ಕ್ಷೇತ್ರದ ತಂತ್ರಿ ವೇದಮೂರ್ತಿ ವೇದವ್ಯಾಸ ತಂತ್ರಿ ಆಶೀರ್ವಚನ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಎಂ.ಆರ್.ಜಿ ಗ್ರೂಪ್ ಮುಖ್ಯಸ್ಥ ಡಾ| ಪ್ರಕಾಶ್ ಶೆಟ್ಟಿ ಆಗಮಿಸಲಿದ್ದಾರೆ. ಜಾಗತಿಕ…
ಕತಾರ್ನಲ್ಲಿರುವ ಬಂಟ್ಸ್ ಕತಾರ್ (Bunts Qatar) ಸಂಘಟನೆಯು ಸಮಾಜ ಸೇವಾ ಚಟುವಟಿಕೆಗಳ ಭಾಗವಾಗಿ ರಕ್ತದಾನ ಹಾಗೂ ವೈದ್ಯಕೀಯ ಅರೋಗ್ಯ ತಪಾಸಣಾ ಶಿಬಿರವನ್ನು ಏಪ್ರಿಲ್ 17, 2026 ರಂದು ‘Donate Blood, Save Lives’ (ರಕ್ತದಾನ ಮಾಡಿ, ಜೀವ ಉಳಿಸಿ) ಎಂಬ ಅಭಿಯಾನದಡಿ ರೇಯಧಾ ವೈದ್ಯಕೀಯ ಕೇಂದ್ರದಲ್ಲಿ ದೋಹಾದ ಹಮದ್ ಮೆಡಿಕಲ್ ಕಾರ್ಪೊರೇಶನ್ (HMC) ನ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದ ಸಹಯೋಗದೊಂದಿಗೆ ಅಧ್ಯಕ್ಷ ಸುಖರಾಮ್ ಶೆಟ್ಟಿಯವರ ಸಾರಥ್ಯದಲ್ಲಿ ಆಯೋಜಿಸಲಾಗಿತ್ತು. ಸಂಘಟನೆಯು ಹಿಂದೆ ಕೂಡ ಯಶಸ್ವಿ ರಕ್ತದಾನ ಶಿಬಿರಗಳನ್ನು ಆಯೋಜಿಸಿದ್ದು, 215ಕ್ಕೂ ಹೆಚ್ಚು ನೋಂದಾಯಿತ ಸ್ವಯಂಸೇವಕರಲ್ಲಿ 111 ಮಂದಿ ರಕ್ತದಾನ ಮಾಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತದ ರಾಯಭಾರ ಕಚೇರಿಯ ಚಾನ್ಸೆರಿ ಮತ್ತು ಕಾನ್ಸುಲರ್ ಮುಖ್ಯಸ್ಥರಾದ ಡಾ. ವೈಭವ್ ತಂಡಲೆ, ಗೌರವ ಅತಿಥಿಗಳಾಗಿ ಮನ್ಸೂರ್ ಅಬ್ದುಲ್ಲ ಕೆ.ಎ ಅಲ್ ಕಾಬಿ ಹಾಗೂ ಜಮ್ಮಿರ್ ಹಂಝ ಆಗಮಿಸಿದ್ದರು. ಡಾ. ಅರ್ಜುನ್ ಶೆಟ್ಟಿಯವರು ಮುಖ್ಯ ಅತಿಥಿ ಭಾಷಣಕಾರರಾಗಿ ಆಗಮಿಸಿ ಪ್ರಮುಖ ಆರೋಗ್ಯ ಒಳನೋಟಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣಗೊಳ್ಳಲಿರುವ ಹವಾನಿಯಂತ್ರಿತ ಸಭಾಭವನದ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ವೇದಿಕೆ ನಿರ್ಮಾಣ ಹಂತದಲ್ಲಿದ್ದು, ಈ ಸಂಬಂಧ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿಯವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ನಂತರ ಒಕ್ಕೂಟದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಸಭಾಭವನದ ನಕ್ಷೆ ಮತ್ತು ಇತರ ಮಾಹಿತಿಯನ್ನು ನಿರ್ಮಾಣ ಕಾಮಗಾರಿಯ ಶಿವಪ್ರಸಾದ್ ರೈ ಹಾಗೂ ಸಹಾಯಕ ಇಂಜಿನಿಯರ್ ಉಡುಪಿ ಎ.ಜಿ ಅಸೋಸಿಯೇಟ್ಸ್ ಧೀರಜ್ ಅವರಿಂದ ಪಡೆದುಕೊಂಡರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿ, ಗೌರವ ಕಾರ್ಯದರ್ಶಿಗಳಾದ ಇಂದ್ರಾಳಿ ಜಯಕರ ಶೆಟ್ಟಿಯವರು ತೋನ್ಸೆ ಆನಂದ ಶೆಟ್ಟಿಯವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ…
ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಿರಿಯ ವಿದ್ಯಾರ್ಥಿಗಳ ಸಂಘ (APJAA)ವನ್ನು ರಚಿಸಲಾಗಿದ್ದು, ಟಿವಿ ಹಿರಿಯ ವರದಿಗಾರ ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ನಾಡಿನ ಪ್ರಮುಖ ಪತ್ರಿಕೆ, ಟಿವಿ, ನವಮಾಧ್ಯಮ, ಶಿಕ್ಷಣ ಮತ್ತಿತರ ಸಂಸ್ಥೆಗಳಲ್ಲಿ ವೃತ್ತಿ ನಿರ್ವಹಿಸುತ್ತಿರುವ ಹಿರಿಯ ವಿದ್ಯಾರ್ಥಿಗಳು ಪದಾಧಿಕಾರಿಗಳಾದರು. ಇದಕ್ಕೂ ಮೊದಲು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ‘ಯಾವುದೇ ಕ್ಷೇತ್ರದ ಬೆಳವಣಿಗೆಯ ದೃಷ್ಟಿಯಿಂದ ಹಿರಿಯ ಹಾಗೂ ಪ್ರಸ್ತುತ ವಿದ್ಯಾರ್ಥಿಗಳ ಸಂಪರ್ಕವು ಅತೀ ಅವಶ್ಯ’ ಎಂದು ಹೇಳಿದರು. ಪ್ರಸ್ತುತ ಪತ್ರಿಕೋದ್ಯಮದ ಅವಶ್ಯಕತೆ ಸಮಾಜಕ್ಕೆ ಹೆಚ್ಚಿದೆ. ವೃತಿ ಸ್ವರೂಪ ಬದಲಾಗಿದ್ದು, ಸಮರ್ಥ ಅಭ್ಯರ್ಥಿಗಳಿಗೆ ಬೇಡಿಕೆ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ವೃತ್ತಿ ನಿರತ ಹಿರಿಯ ವಿದ್ಯಾರ್ಥಿಗಳ ಪಾತ್ರವು ಪ್ರಮುಖವಾಗಿದೆ. ಹಿರಿಯ ಹಾಗೂ ಪ್ರಸ್ತುತ ವಿದ್ಯಾರ್ಥಿಗಳೇ ‘ಆಳ್ವಾಸ್ ಆಸ್ತಿ’.…
ವಸಾಯಿ ಕರ್ನಾಟಕ ಸಂಘದ ಯುವ ವಿಭಾಗದ ವತಿಯಿಂದ ‘ಫ್ರೆಶ್ ಫಿಶ್ ವಸೈ’ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ವಸಾಯಿ ಪರಿಸರದ ತುಳು ಕನ್ನಡಿಗರಿಗಾಗಿ ಆಯೋಜಿಸಲಾದ ವಿಶೇಷ ಕ್ರೀಡಾಕೂಟವು ಏಪ್ರಿಲ್ 12 ರಂದು ಮಧ್ಯಾಹ್ನದಿಂದ ಮುಸ್ಸಂಜೆಯವರೆಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ವಸಾಯಿ ಕರ್ನಾಟಕ ಸಂಘದ ಗೌರವಾಧ್ಯಕ್ಷರಾದ ವಿಶ್ವನಾಥ್ ಪಿ ಶೆಟ್ಟಿಯವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಎಲ್ಲಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಸಂಘದ ಅಧ್ಯಕ್ಷ ಕರ್ನೂರು ಶಂಕರ್ ಆಳ್ವ ಅವರು, ‘ಕ್ರೀಡೆ ಕೇವಲ ಮನರಂಜನೆಯ ಸಾಧನವಲ್ಲ, ಅದು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಅಭಿವೃದ್ಧಿಗೆ ಅತ್ಯಗತ್ಯ. ಇಲ್ಲಿ ತುಳು ಕನ್ನಡಿಗರು ಪರಸ್ಪರ ಬಾಂಧವ್ಯದಿಂದ ಬೆರೆತು, ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಸಂತೋಷದ ಸಂಗತಿ’ ಎಂದು ನುಡಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ರವೀಂದ್ರ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಎಸ್. ಶೆಟ್ಟಿ, ಗೌರವ ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜೊತೆ ಸಲಹೆಗಾರ ಓ.ಪಿ ಪೂಜಾರಿ, ಜೊತೆ ಕೋಶಾಧಿಕಾರಿ ಗಂಗಾಧರ್ ಟಿ. ಶೆಟ್ಟಿ…
ತುಳುವರ ಹೊಸ ವರ್ಷಾರಂಭ ಬಿಸು ಹಾಗೂ ಚಂದ್ರಮಾನ ಪದ್ದತಿಯ ಯುಗಾದಿಯನ್ನು ನೈಜೀರಿಯ ದೇಶದಲ್ಲಿನ ನಮ್ಮ ತುಳು ಕನ್ನಡದ ಬಂಧುಗಳು ಅಚ್ಚುಕಟ್ಟಾಗಿ ಆಚರಿಸಿ ಸನಾತನ ಸಂಸ್ಕೃತಿಯನ್ನು ಮೆರೆದರು. ನಮ್ಮ ದೇಶದಿಂದ ಬಹಳಷ್ಟು ದೂರ ಸಪ್ತಸಾಗರದಾಚೆಯ ನೈಜೀರಿಯ ಪಶ್ಚಿಮದ ‘ಕಾನೋ’ ಎಂಬ ರಾಜ್ಯದಲ್ಲಿ ‘ಕರ್ನಾಟಕ ಸಂಘ ಕಾನೋ’ದ ಎಲ್ಲಾ ತೌಳವರು ಮತ್ತು ಕನ್ನಡಿಗರು ಒಟ್ಟಾಗಿ ಉಲ್ಲಾಸ ಉತ್ಸಾಹದಿಂದ (ಬಿಸು) ಯುಗಾದಿಯನ್ನು ಆಚರಿಸಿದರು. ಪ್ರತೀ ಮನೆಯವರು ತಯಾರಿಸಿ ತಂದ ತಾರಾವರಿಯ ತರಕಾರಿ ವ್ಯಂಜನಗಳು, ಪಾಯಸ, ಹೋಳಿಗೆಯ ಪಕ್ವಾನ್ನ ಸಹಿತ ಸಾಮೂಹಿಕ ಭೋಜನವನ್ನು ಸಂಪ್ರದಾಯಿಕ ಬಾಳೆ ಎಲೆಯಲ್ಲಿ ಎಲ್ಲರೂ ಒಟ್ಟಾಗಿ ನೆಲದಲ್ಲಿ ಕುಳಿತು ಸವಿದರು. ಮಕ್ಕಳಿಗೆ ಇದೊಂದು ಹೊಸ ಅನುಭವವಾದರೆ ಕೆಲವು ಹಿರಿಯರೂ ಮರೆತು ಹೋದ ಸಂಪ್ರದಾಯವನ್ನು ಈ ಕಾರ್ಯಕ್ರಮ ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿತ್ತು. ಸಂಘದ ಸ್ಥಾಪಕರಾದ ಮಂಗಳೂರಿನ ಪ್ರಖ್ಯಾತ ಹರಿದಾಸರಾದ ಶರತ್ ಶೆಟ್ಟಿ ಪಡುಪಳ್ಳಿಯವರ ಮನೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಶರತ್ ಶೆಟ್ಟಿಯವರು ತರಕಾರಿ ಮತ್ತು ಹಣ್ಣುಗಳಿಂದ ರಚಿಸಿದ ಬಿಸುಕಣಿಗೆ ಪೂಜಿಸಿ, ಮಕ್ಕಳಿಗೆ ಬಿಸು ಆಚರೆಣೆಯ ಮಹತ್ವವನ್ನು…















