Author: admin

ರೈತಾಪಿ ವರ್ಗ ಭಗವಂತನ ಮೇಲೆ ಇರಿಸಿದ ನಂಬಿಕೆ ಮತ್ತು ಭಕ್ತಿ ಭಾವದ ಪ್ರತೀಕವೇ ಕಂಬಳ ಎಂದು ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಬೈಂದೂರು ತಾಲೂಕಿನ ಮುಳ್ಳಿಕಟ್ಟೆಯ ನಗುಸಿಟಿಯಲ್ಲಿ ರೈತ ಸಂಘ ಬೈಂದೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ಬೈಂದೂರು ತಾಲೂಕು ಕಂಬಳ ಸಮಿತಿ ಮರಾಠಿ ಹಾಗೂ ಗೊಂಡ ಸಮಾಜದ ಸಹಯೋಗದಲ್ಲಿ ನಡೆಯುವ ರಾಜ್ಯಮಟ್ಟದ ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕತೆಯ ಹೊಡೆತಕ್ಕೆ ಅನೇಕ ಪಾರಂಪರಿಕ ಹಾಗೂ ಸಾಂಸ್ಕೃತಿಕ ಆಚರಣೆಗಳು ಮರೆಯಾಗುತ್ತಿವೆ. ಇಂತಹ ಸಂದರ್ಭದಲ್ಲೂ ಕಂಬಳ ಆಧುನಿಕತೆಗೆ ತೆರೆದುಕೊಂಡಿರುವುದು ಸಂತೋಷದ ಸಂಗತಿ ಬೇಸಾಯ ಉತ್ತಮವಾಗಿರಲಿ, ಮನೆ ವ್ಯವಸ್ಥೆ ಚೆನ್ನಾಗಿರಲಿ ಎಂದು ಪ್ರಾರ್ಥಿಸಿ ಕಂಬಳ ನಡೆಸುವುದು ಸಂಪ್ರದಾಯ. ದಕ್ಷಿಣ ಕನ್ನಡ ಹಾಗೂ ಉಡುಪಿ, ಕಾರ್ಕಳ ಭಾಗದಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ಜೋಡುಕರೆ ಕಂಬಳ, ದೀಪಕ್ ಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ಈ ಭಾಗದಲ್ಲಿಯೂ ಆಯೋಜನೆಗೊಂಡಿರುವುದು ಕಮಲದ ಉಳಿವಿನ ದೃಷ್ಟಿಯಿಂದ ಉತ್ತಮ ಬೆಳವಣಿಗೆ…

Read More

ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024- 25 ನೇ ಸಾಲಿನ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ. ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ 1961 ಸಪ್ಟೆಂಬರ್ 25 ರಂದು ಜನಿಸಿದ ಸಚ್ಚಿದಾನಂದ ಶೆಟ್ಟರು ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆ ಮತ್ತು ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ, ಬಂಟ್ವಾಳದ ಎಸ್‌.ವಿ.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು. ಮುಂಬೈ ಮಹಾನಗರದಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು ಭಾರತೀಯ ವಿಮಾನಯಾನ ಹಾಗೂ ವಿವಿಧ ಕಂಪನಿಗಳ ಲೆಕ್ಕಪತ್ರ ವಿಭಾಗದಲ್ಲಿ ಸುಮಾರು 14 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ಊರಿಗೆ ಹಿಂತಿರುಗಿ ದುರ್ಗಾ ಫೆಸಿಲಿಟೀಸ್ ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ. ಲಿ. ಎಂಬ ಸಂಸ್ಥೆಯನ್ನು 2007 ರಲ್ಲಿ…

Read More

ಬಂಟರ ಸಂಘ ಪೈವಳಿಕೆ ಮಂಜೇಶ್ವರ ಇದರ ಆಶ್ರಯದಲ್ಲಿ ಮಹಿಳೆಯರ ಅಂತರ್ ರಾಜ್ಯ ಮಟ್ಟದ ಬಂಟರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡವು 25 ಸಾವಿರ ನಗದಿನೊಂದಿಗೆ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದೆ. ಕಯ್ಯಾರು ಎಸ್.ಆರ್.ಎ.ಎಲ್.ಪಿ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದೆ. ಫೈನಲ್ ಪಂದ್ಯಾಟದಲ್ಲಿ ಸುರತ್ಕಲ್ ಬಂಟರ ಮಹಿಳಾ ತಂಡವು ಕುಂಜತ್ತೂರು ಮಹಿಳಾ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಜಯಿಸಿತ್ತು‌. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಂಬೈ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿ ವಿತರಿಸಿದರು. ಮಾಜಿ ಸಚಿವ ಬಿ ರಮಾನಾಥ ರೈ, ಪೈವಳಿಕೆ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುರತ್ಕಲ್ ತಂಡದ ನಾಯಕಿ ಬಬಿತಾ ಶೆಟ್ಟಿ ಮತ್ತು ಸದಸ್ಯರು ಪ್ರಶಸ್ತಿ ಸ್ವೀಕರಿಸಿದರು. ಬೆಸ್ಟ್ ಲಾಕರ್ ಪ್ರಶಸ್ತಿಯನ್ನು ವೈಷ್ಣವಿ ಅಡಪ ಪಡೆದರು. ತಂಡದ ಕೋಚ್ ನಿನಾದ್ ಜಯರಾಮ ಶೆಟ್ಟಿ ಮತ್ತು ಸಂತೋಷ್…

Read More

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜು ಶೈಕ್ಷಣಿಕವಾಗಿ ಪ್ರಗತಿಯ ಶಿಖರವನ್ನೇರಿ ಸಾಧನೆಗಳ ಮೇಲೆ ಸಾಧನೆಗಳನ್ನು ಸಾಧಿಸುತ್ತಾ ಬಂದಿರುವುದು ಗಮನಾರ್ಹ ವಿಷಯವಾಗಿದೆ. ಈ ಶೈಕ್ಷಣಿಕ ವಿಷಯದಲ್ಲಿ ಸಾಧನೆಗಳ ಮಹಾಪೂರವನ್ನೇ ಮಾಡಿ ‘ಸಾಧನೆಗಳ ಸರದಾರ’ ಎನ್ನುವ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ಬೋರ್ಡ್, ಜೆಇಇ, ಸಿಇಟಿ, ನೀಟ್, ಸಿಎ, ಸಿಎಸ್ ಎನ್ನುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದೇಶ ಹಾಗೂ ರಾಜ್ಯದಲ್ಲಿಯೇ ಅತ್ಯುತ್ತಮ ರ್ಯಾಂಕ್ ಹಾಗೂ ಉತ್ತೀರ್ಣತೆಯ ಪ್ರಮಾಣವನ್ನು ಪಡೆದುದಲ್ಲದೇ ದಿನಾಂಕ 13-04-2025ರಂದು ಪುಣೆಯ ಖಡಕ್ ವಾಸ್ಲಾದಲ್ಲಿರುವ ಎನ್.ಡಿ.ಎ, ಎನ್.ಎ ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್ಸಿ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಸುವ ಎನ್ ಡಿ ಎ ಮತ್ತು ಎನ್ ಎ ಪರೀಕ್ಷೆ ಬಲು ಕಠಿಣವಾಗಿದ್ದು, ಇಂತಹ ಕಠಿಣ ಪರೀಕ್ಷೆ ಬರೆದ 6 ಲಕ್ಷ ವಿದ್ಯಾರ್ಥಿಗಳಲ್ಲಿ 7,800 ವಿದ್ಯಾರ್ಥಿಗಳು ಮಾತ್ರ ಎಸ್.ಎಸ್.ಬಿ ಸುತ್ತಿಗೆ ತೇರ್ಗಡೆಯಾಗಿದ್ದಾರೆ. ಅದರಲ್ಲಿ ನಮ್ಮ ಸಂಸ್ಥೆಯ ಶ್ರೀಹರ್ಷ ಪಿ.ಎನ್ ಎನ್ನುವ ವಿದ್ಯಾರ್ಥಿಯು ಉತ್ತೀರ್ಣತೆಯನ್ನು ಹೊಂದುವ ಮೂಲಕ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಸಾಧನೆಯ…

Read More

ಮೂಡುಬಿದಿರೆ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನವರು ನಡೆಸಿದ ನ್ಯಾಷನಲ್ ಅಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ನಾಟಾ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಚಿತಾ ಆರ್ ರಾವ್, ರಾಜ್ ಬಂಗೇರ, ಪಾರ್ಥ ಎಲ್ಲಪ್ಪಾ ಚಿಕಲ್ಕರ್, ದೇವಾನಂದ, ರೇಣುಕಾ, ಕಲೇಬ್ ಜೇಶ್ರುನ್, ಅಭಿಷೇಕ್ ಶೆಟ್ಟಿ, ಪವನ್ ಬಿಡಿ, ಭಾನುಪ್ರಕಾಶ್, ನಿಖಿಲ್ ಗೌಡ, ಲೈಶುನ್ ಬೆನ್ಡಿಕ್ಟ್ ಫೆರ್ನಾಂಡೀಸ್, ಪ್ರತೀಕ್, ರಿಶಭ್, ಪೂಜಿತಾ ಗೌಡ, ನಾಗರಾಜ್, ನಿಖಿತಾ, ಶ್ರೀ ಸುರೇಶ್ ಪಾಟೀಲ್, ವಿಭಾ ವಿ, ಆಕಾಶ್ ಜಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದರೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆ ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು. ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಮಂಥನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡುತ್ತಾ, ಪ್ರತಿಯೊಂದು ಮಗುವು ಪ್ರತಿಭೆಯ ಕಣಜದಂತೆ. ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ ಪ್ರೋತ್ಸಾಹಿಸಿದರೆ ಆ ಪ್ರತಿಭೆ ಬೆಳಕನ್ನು ಕಂಡು ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಆಸಕ್ತಿಯ ವಿಷಯವನ್ನು ಆಯ್ಕೆ ಮಾಡಿಕೊಂಡು ನಿರಂತರ ಅಭ್ಯಾಸ ಮತ್ತು ಪರಿಶ್ರಮದಿಂದ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಇಂದು ಯಕ್ಷಗಾನ ಮುಂತಾದ ಕಲೆಯಲ್ಲಿ ಆಸಕ್ತಿಯನ್ನು ಹೊಂದಿರುವವರು ಸಾಕಷ್ಟು ಸಾಧನೆ ಮಾಡಿ ಯಶಸ್ಸನ್ನು ಆರ್ಥಿಕ ಸದೃಢತೆಯನ್ನು ಹೊಂದುತ್ತಿದ್ದಾರೆ. ಹಾಗಾಗಿ ಕಲಾ ಪ್ರಕಾರಗಳು ಕೂಡ ಬದುಕನ್ನು ಕಟ್ಟಿಕೊಡುತ್ತವೆ ಎಂದರೆ ತಪ್ಪಾಗಲಾರದು. ಕಲೆ ಮತ್ತು ಕಲಾವಿದರನ್ನು ಗುರುತಿಸುವ,…

Read More

ಪಯ್ಯನೂರಿನ ನವಪುರಂನಲ್ಲಿರುವ ಮತಾತೀತ ಪುಸ್ತಕ ದೇವಾಲಯದಲ್ಲಿ ನಡೆದ ನವಪುರಂ ನವರಸಂ ಸಾಹಿತ್ಯ ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ನವಪುರಂ ದೇವಾಲಯದ ಸಂಚಾಲಕರಾದ ಪ್ರೋಪಿಲ್ ನಾರಾಯಣ ಮಾಸ್ಟರ್, ಸವಿಹೃದಯದ ಕವಿಮಿತ್ರರು ವೇದಿಕೆಯ ಸಂಚಾಲಕರಾದ ಸುಭಾಷ್ ಪೆರ್ಲ ಮತ್ತಿತರರು ಉಪಸ್ಥಿತಿತರಿದ್ದರು.

Read More

ವಿದ್ಯಾಗಿರಿ: ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ 2025ರ ಎಪ್ರಿಲ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಷ್ಟ್ರ ಮಟ್ಟದ ಗಮನವನ್ನು ಆಳ್ವಾಸ್ ಕಾಲೇಜಿನೆಡೆಗೆ ಸೆಳೆದಿದ್ದಾರೆ. ಬಾಬು ಸಿದ್ದಲಿಂಗಪ್ಪ ಗೌರೀ, ಬಸವರಾಜ ಕರೆಪ್ಪ ಪೂಜೇರಿ, ಪುನೀತ್ ಕುಮಾರ್ ಬಿಜಿ, ಸಿದ್ಧಾಂತ್ ಎಸ್ ಮಠಪತಿ, ಆದಿತ್ಯ, ನಿಖಿಲ್ ಭಾಸ್ಕರ್ ಭಟ್, ಆಕಾಶ್ ಪೂಜಾರ್, ಕೇಶವ ಬೂಬ್, ರೋಷನ್, ವೈಭವ್ ಪಿವಿ, ಮೋಹಿತ್ ಕುಮಾರ್, ಪ್ರಣವ್ ವಿ ಪಂಡಿತ್, ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್, ಪಿಯೂಷ್ ಹೆಚ್, ವಿಸ್ಮಯ ನಾರಾಯಣ್, ಮೆಲ್ರೊಯ್ ಕ್ಯಾಸ್ಟೆಲಿನೊ, ಇಶಾನ್, ಪುನರ್ವ, ಸುಮನ್ ಭಟ್, ದುಷ್ಯಂತ್, ಅಖಿಲ್ ಜೆ.ಎಚ್, ವಿಶ್ವವಿಜಿತ್, ದಿಗಂತ್ ಮತ್ತು ಅಭಿಷೇಕ್ ಜೋಗಿ, ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯು ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ರಾಷ್ಟೀಯ ರಕ್ಷಣಾ…

Read More

ಮೂಡುಬಿದಿರೆ: ಕರಾವಳಿಗೆ ಶಿಕ್ಷಣವನ್ನು ಅರಸಿ ಬಂದ ಮಣಿಪುರಿ ವಿದ್ಯಾರ್ಥಿಗಳು ,ಇಲ್ಲಿನ ವಿವಿಧತೆಯನ್ನು, ಸಮೃದ್ಧ ಸಂಸ್ಕೃತಿಯನ್ನು ಗೌರವಿಸುವ ಜೊತೆಗೆ ಕರಾವಳಿಯ ಭಾಗವಾಗಿ ಎಲ್ಲರೊಂದಿಗೆ ಸಹೋದರತ್ವ, ಭಾತೃತ್ವದೊಂದಿಗೆ ಬೆಳೆಯಿರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ ‘ಶಜೀಬೂ ಚೆರೋಬಾ’ ಆಚರಣೆಯಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಮಣಿಪುರಕ್ಕೆ ಕಾರ್ಯಕ್ರಮಕ್ಕೆಂದು ಹೋದ ಸಂದರ್ಭದಲ್ಲಿ ಅಲ್ಲಿನ ಸಂಸ್ಕೃತಿ, ಊಟೋಪಚಾರ ಮತ್ತು ಅಲ್ಲಿನ ಭಾಷೆ, ಆಚರಣೆ ಮನಸ್ಸಿಗೆ ಹೆಚ್ಚು ಆಪ್ತವಾಗಿತ್ತು ಎಂದು ಭೇಟಿ ನೀಡಿದ ಅನುಭವ ಹಂಚಿಕೊAಡರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ನರ್ತಿಸುವ ವಿಶೇಷ ಸಾಹಸಮಯ ಸ್ಟಿಕ್ ಡ್ಯಾನ್ಸ್ ನನ್ನನ್ನು ಇನ್ನಷ್ಟು ಮಣಿಪುರದ ಸಂಸ್ಕೃತಿ, ನೃತ್ಯ ಪ್ರಕಾರಕ್ಕೆ ಹತ್ತಿರ ಮಾಡಿದೆ. ಕಾಲೇಜು ವಿದ್ಯಾರ್ಥಿಗಳು ಈ ರೀತಿಯ ಸಾಹಸಮಯ ನೃತ್ಯ ಪ್ರದರ್ಶನ ನೀಡುವುದು ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.ಫಾದರ್ ಮುಲ್ಲರ್…

Read More

ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ NDA&NA ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಒಂಬತ್ತು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಟಿ. ಪ್ರದೀಪ್, ಸಾಚಿ ಶಿವಕುಮಾರ್ ಕಡಿ., ಸಮೃದ್ದ್ ಕೆ., ಚೇತನ್ ಗೌಡ ಎನ್. ಎಸ್., ತ್ರಿಶ್ಲಾ ಗಾಂಧಿ, ತನಿಷಾ, ಸಂಗೀತಾ ಬಿ. ಎಮ್., ಮೊನಿಷಾ ಡಿ. ಮತ್ತು ಅಭಿಷೇಕ್ ಜೊಯಲ್ ಜಿ. ಯು. ಎಪ್ರಿಲ್ 13ರಂದು ನಡೆದ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದಲ್ಲಿ ನಡೆಯುವ ಸರ್ವಿಸ್ ಸೆಲೆಕ್ಷನ್ ಬೋರ್ಡ್(SSD) ಸುತ್ತಿಗೆ ಅರ್ಹತೆ ಪಡೆದಿದ್ದಾರೆ. ಪುಣೆಯ ಖಡಕ್ ವಾಸ್ಲಾದಲ್ಲಿರುವ NDA&NA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್ಸಿ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ NDA&NA ಪರೀಕ್ಷೆ ಬಲು ಕಠಿಣ ಪರೀಕ್ಷೆ ಯಾಗಿದ್ದು ಪರೀಕ್ಷೆಗೆ ಕುಳಿತ 6 ಲಕ್ಷ ವಿದ್ಯಾರ್ಥಿಗಳಲ್ಲಿ 7800 ವಿದ್ಯಾರ್ಥಿ ಎಸ್. ಎಸ್. ಬಿ ಸುತ್ತಿಗೆ ತೇರ್ಗಡೆಯಾಗಿದ್ದಾರೆ. 900 ಅಂಕಗಳಿಗೆ ನಡೆಯುವ ಈ ಪರೀಕ್ಷೆಯಲ್ಲಿ 300 ಅಂಕಗಳಿಗೆ ಗಣಿತದ ಪ್ರಶ್ನೆಗಳೇ ಬರುವುದು ವಿದ್ಯಾರ್ಥಿಗಳಿಗಿರುವ…

Read More