Author: admin
ಮೂಡುಬಿದಿರೆ ಜನಸಾಮಾನ್ಯರ ಆರೋಗ್ಯ ಕಾಳಜಿಯನ್ನು ಮನಗಂಡು ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಆರೋಗ್ಯ ಕೇಂದ್ರವು ಮತ್ತೊಂದು ಮಹತ್ವದ ಹೆಜ್ಜೆಯಾಗಿ ಹೃದಯ ಚಿಕಿತ್ಸಾ ಕೇಂದ್ರ (ಕಾರ್ಡಿಯಾಕ್ ಸೆಂಟರ್)ವನ್ನು ಆರಂಭಿಸಿರುವುದು ಅತ್ಯಂತ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್ ವಿನಯ್ ಹೆಗ್ಡೆ ನುಡಿದರು. ಅವರು ಬುಧವಾರ ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ನೂತನವಾಗಿ ಪ್ರಾರಂಭಗೊಂಡ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೂಡುಬಿದಿರೆ, ಮುಲ್ಕಿ, ಕಾರ್ಕಳ ಹಾಗೂ ಬೆಳ್ತಂಗಡಿ ಪ್ರದೇಶಗಳಲ್ಲಿಯೇ ಮೊದಲ ಬಾರಿಗೆ ಸ್ಥಾಪನೆಯಾದ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಈ ಭಾಗದ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು. ಹೃದಯ ಸಂಬಂಧಿತ ರೋಗಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದ್ದು, ಸಮಯೋಚಿತ ಚಿಕಿತ್ಸೆ ದೊರಕದಿದ್ದರೆ ಅವು ಜೀವಕ್ಕೆ ಅಪಾಯಕಾರಿಯಾಗುತ್ತವೆ. ಇಂತಹ ಸಂದರ್ಭದಲ್ಲಿ ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆಯಾಗಿರುವುದು ಈ ಪ್ರದೇಶದ ಜನರಿಗೆ ದೊಡ್ಡ ವರದಾನವಾಗಿದೆ. ಇದರಿಂದಾಗಿ ಈಗ ಚಿಕಿತ್ಸೆಗಾಗಿ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ…
ಯುಎಇ ಬಂಟ್ಸ್ : ಬಂಟ ಬ್ರಹ್ಮ (ಸರ್ವೋತ್ತಮ ಶೆಟ್ಟಿ), ಬಂಟ ಕಲಾ ಮಾಣಿಕ್ಯ (ದಿನೇಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ) ಮತ್ತು ಬಂಟ ಸೇವಾ ರತ್ನ (ಬಾಲಕೃಷ್ಣ ಶೆಟ್ಟಿ, ವಸಂತ ಶೆಟ್ಟಿ) ಪ್ರಶಸ್ತಿ ಪ್ರದಾನ
ಯುಎಇ ಬಂಟ್ಸ್ ನ 48 ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಬಂಟರ ಸಮಾಗಮ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ಗಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಂಟರಿಗೆ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ಪರಿಕಲ್ಪನೆಯ ಬಂಟ ಬ್ರಹ್ಮ, ಬಂಟ ಕಲಾ ಮಾಣಿಕ್ಯ ಮತ್ತು ಬಂಟ ಸೇವಾ ರತ್ನ ಪ್ರಶಸ್ತಿಯನ್ನು ಐದು ಮಂದಿ ಸಾಧಕರಿಗೆ ನೀಡಿ ಗೌರವಿಸಲಾಯಿತು. ಈ ಮರಳು ಭೂಮಿಯಲ್ಲಿ ಕಳೆದ ನಲವತ್ತ ನಾಲ್ಕು ವರ್ಷಗಳಿಂದ ಯುಎಇ ಬಂಟ್ಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಸರ್ವೋತ್ತಮ ಶೆಟ್ಟಿ ದಂಪತಿಗಳಿಗೆ “ಬಂಟ ಬ್ರಹ್ಮ” ಪ್ರಶಸ್ತಿ ನೀಡಿ ಗೌರವಿಸಲಾಯಿತು.”ಬಂಟ ಕಲಾ ಮಾಣಿಕ್ಯ” ಪ್ರಶಸ್ತಿಯನ್ನು ಮರಳು ಭೂಮಿಯಲ್ಲಿ ಯಕ್ಷಗಾನವನ್ನು ಪೋಷಿಸಿಕೊಂಡು ಬರುತ್ತಿರುವ ದಿನೇಶ್ ಶೆಟ್ಟಿ ಕೊಟ್ಟಿಂಜ ದಂಪತಿ ಮತ್ತು ನಾಟಕ ರಂಗದ ನಿರ್ದೇಶಕ ವಿಶ್ವನಾಥ ಶೆಟ್ಟಿ ದಂಪತಿಗಳಿಗೆ ನೀಡಿ ಗೌರವಿಸಲಾಯಿತು.”ಬಂಟ ಸೇವಾ ರತ್ನ” ಪ್ರಶಸ್ತಿಯನ್ನು ಬಾಲಕೃಷ್ಣ ಶೆಟ್ಟಿ ಮಾಡೂರು ಗುತ್ತು ದಂಪತಿ ಮತ್ತು ವಸಂತ ಶೆಟ್ಟಿಯವರಿಗೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಧ್ಯಕ್ಷರಾದ ಪ್ರವೀಣ್…
ಜೆಸಿಐ ಭಾರತ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿ ಔಟ್ ಸ್ಟ್ಯಾಂಡಿಂಗ್ ಡಿಜಿಟಲ್ ಇನ್ಫ್ಲುಯೆನ್ಸರ್ ಅವಾರ್ಡ್ ಗೆ (OUTSTANDING DIGITAL INFLUENCER AWARD) ಕಾರ್ಕಳದಿಂದ ಜೇಸಿಯೇತರ ವಿಭಾಗದಲ್ಲಿ ನಾಮಿನಿ ಆಗಿ ಜಿಸಿಐ ಶಾಲಾ ಶಿಕ್ಷಕಿ ವಂದನಾ ರೈ ಕಾರ್ಕಳ ಇವರು ಭಾಜನರಾಗಿದ್ದಾರೆ. ಜಿಸಿಐ ಭಾರತವು ರಾಷ್ಟ್ರಮಟ್ಟದಲ್ಲಿ ಐವರಿಗೆ ಈ ಪ್ರಶಸ್ತಿ ಘೋಷಿಸಿದ್ದು, ಅವರಲ್ಲಿ ವಂದನಾ ರೈಯವರು ಕೂಡಾ ಓರ್ವರು. ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳ ಪರಿಕಲ್ಪನೆಗಳು, ಅತೀ ಹೆಚ್ಚು ಫಾಲೋವರ್ಸ್ ಹಾಗೂ ವೀಡಿಯೋಗಳ ಅತೀ ಹೆಚ್ಚಿನ ವೀಕ್ಷಣೆ ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಡಿಸೆಂಬರ್ 27ರಿಂದ 29 ರವರೆಗೆ ಚೆನ್ನೈಯಲ್ಲಿ ನಡೆಯಲಿರುವ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಹಸ್ತಾಂತರ ಮಾಡಲಾಗುವುದು ಎಂದು ಜೆಸಿಐ ಭಾರತ ಪ್ರಕಟಣೆಯಲ್ಲಿ ತಿಳಿಸಿದೆ.
ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ದಾಮೋದರ ನಿಸರ್ಗರು ತಮ್ಮ ತಂದೆಯ ಹೆಸರಿನಲ್ಲಿ ನಡೆಸುತ್ತಿದ್ದ ಬೋಳೂರು ದೋಗ್ರ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರತಿವರ್ಷ ತಾಳಮದ್ದಳೆ ನಡೆಸುತ್ತಿದ್ದರು. ಅಲ್ಲದೆ ತುಳುಕೂಟದ ಆಶ್ರಯದಲ್ಲಿ ತುಳು ಸಂಸ್ಕೃತಿಗೆ ಸಂಬಂಧಿಸಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಇದೀಗ ತುಳು ಕೂಟವು ಗರೋಡಿಯ ಬ್ರಹ್ಮ ಬೈದ್ಯರ್ಕಳ ಪುಣ್ಯಸ್ಥಳದಲ್ಲಿ ನಿಸರ್ಗರ ನೆನಪಿನ ಸಪ್ತಾಹ ನಡೆಸುತ್ತಿರುವುದು ಒಂದು ಸಾರ್ಥಕ ಸಂಸ್ಮರಣೆಯೆನಿಸಿದೆ ಎಂದು ಹಿರಿಯ ವಿದ್ವಾಂಸರಾದ ಡಾ| ಎಂ. ಪ್ರಭಾಕರ ಜೋಷಿ ಹೇಳಿದರು. ಕುಡ್ಲ ತುಳುಕೂಟವು ದಿ| ದಾಮೋದರ ನಿಸರ್ಗರ ಸ್ಮರಣಾರ್ಥ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ನಡೆಸುತ್ತಿರುವ ‘ತುಳು ತಾಳಮದ್ದೊಲಿ’ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಅರ್ಥಧಾರಿ ಜಬ್ಬಾರ್ ಸಮೋ ಅವರನ್ನು ತುಳುಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ಶಾಲು, ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ನಾಗೇಶ ದೇವಾಡಿಗ, ಮಧುಸೂದನ ಅಲೆವೂರಾಯ, ಶಶಿಧರ ಪೊಯ್ಯತ್ತಬೈಲ್, ನ್ಯಾಯವಾದಿ…
ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಜಾನಪದ ವಿದ್ವಾಂಸರಾದ ಡಾ| ಕೆ.ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ’ – ಮಾಯದ ನಡೆ ಜೋಗದ ನುಡಿ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಡಿಸೆಂಬರ್ 20 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ. ಬಿ.ಎ ವಿವೇಕ್ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದು, ಸಾಹಿತಿ ಡಾ| ರಾಜಶೇಖರ್ ಹಳೆಮನೆ ಕೃತಿಯ ಕುರಿತು ಅವಲೋಕನ ಮಾಡಲಿದ್ದಾರೆ. ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ| ಪ್ರವೀಣ್ ಮಾರ್ಟಿಸ್ ಎಸ್ಜೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.]| ನಾಗಪ್ಪ ಗೌಡ, ಲೇಖಕರು, ಜಾನಪದ ವಿದ್ವಾಂಸರಾದ ಡಾ| ಕೆ ಚಿನ್ನಪ್ಪ ಗೌಡ ಅವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ…
ತುಮಕೂರು : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿಯಲ್ಲಿ ಕಾರ್ಕಳ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ದೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಬ್ಬನಿ ದ್ವಿತೀಯ ಸ್ಥಾನಿಯಾಗಿ ಉಡುಪಿ ಜಿಲ್ಲಾಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾರೆ.
ತುಮಕೂರು : ತುಮಕೂರಿನ ಎಂಪ್ರೈಸ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ನಡೆದ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ-2025ರ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪ್ರಜ್ಞಾಮೋಹನ್ ತೃತೀಯ ಸ್ಥಾನ ಪಡೆದಿರುತ್ತಾರೆ. ಈಕೆ ಹಾಸನದ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀಮತಿ ಶೀಲಾ ದಂಪತಿಗಳ ಸುಪುತ್ರಿಯಾಗಿದ್ದಾರೆ. ಇವರಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದರೆ.
ಒಬ್ಬ ವ್ಯಕ್ತಿ ಸುಮ್ಮನೆ ನಾಯಕನಾಗಿ ಗುರುತಿಸಲ್ಪಡುವುದಿಲ್ಲ. ನಾಯಕನಾಗಿ ಕಾಣಿಸಿಕೊಳ್ಳಬೇಕಾದರೆ ಮೂಲತಃ ಆತನಲ್ಲಿ ನಾಯಕತ್ವದ ಗುಣಗಳಿರಬೇಕು. ಅದನ್ನು ಪೋಷಿಸಿ ಬೆಳಕಿಗೆ ತರುವ ವಾತಾವರಣ ಇರಬೇಕು. ಜೊತೆಗೆ ಸದಾ ಪ್ರಯತ್ನಶೀಲತೆ, ದೃಢ ಸಂಕಲ್ಪ, ಛಲ, ಸವಾಲುಗಳನ್ನು ಎದುರಿಸಿ ಅದನ್ನು ಮೀರಿ ನಿಲ್ಲುವ ತಾಕತ್ತು, ಆಕರ್ಷಕ ವ್ಯಕ್ತಿತ್ವ, ನಿಷ್ಕಲ್ಮಶ ಭಾವಶುದ್ಧಿ, ನೇರ ನಡೆ ನುಡಿ, ಯೋಜನೆ ಯೋಚನೆಯ ಬಗ್ಗೆ ಖಚಿತತೆ ಇವೆಲ್ಲವೂ ಮೇಳೈಸಿದಾಗ ಒಬ್ಬ ಸಾಮಾನ್ಯ ಅಸಾಮಾನ್ಯನಾಗುತ್ತಾನೆ. ನಾಯಕನಾಗುತ್ತಾನೆ. ಮಹಾ ನಾಯಕನಾಗುತ್ತಾನೆ. ಇಂತಹ ಒಬ್ಬ ಮಹಾನಾಯಕ ನಮ್ಮೊಂದಿಗಿದ್ದಾರೆ. ಅವರೇ ಜಾಗತಿಕ ಬಂಟರ ಸಂಘಗಳ ಒಕ್ಕೂಟವೆಂಬ ಹೊನ್ನಿನ ತೇರನ್ನೇರಿ ಅದನ್ನು ಯಶಸ್ಸಿನ ಶಿಖರಾಗ್ರಕ್ಕೆ ಸಾಗಿಸುತ್ತಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ‘ಐಕಳದ ಮುತ್ತು ಬಂಟರ ಗತ್ತು ಹರೀಶ್ ಶೆಟ್ಟಿ ಎನ್ನುವ ಸೊತ್ತು’. ವಿಶ್ವದಾದ್ಯಂತ ವಿವಿದೆಡೆ ಸ್ಥಾಪಿಸಲ್ಪಟ್ಟ ಸುಮಾರು 150ಕ್ಕೂ ಹೆಚ್ಚು ಬಂಟರ ಸಂಘಗಳು ಒಂದಾಗಿ ಸೇರಿ ನಿರ್ಮಾಣಗೊಂಡ ತುಳುವ ನಾಡಿನ ಹೆಮ್ಮೆಯ ಬಂಟ ಸಮುದಾಯದ ಏಕೈಕ ಕೇಂದ್ರೀಯ ಪ್ರಧಾನ ಸಂಸ್ಥೆ ಅದು ಜಾಗತಿಕ ಬಂಟರ ಸಂಘಗಳ…
ದುಬೈನ ಶೇಖ್ ಝಯೀದ್ ರಸ್ತೆಯ ಮಿಲೇನಿಯಂ ಪ್ಲಾಝ ಹೋಟೆಲ್ ನ ಸಭಾಂಗಣದಲ್ಲಿ ಯುಎಇಯ ಒಂದು ಸಾವಿರದ ಐದು ನೂರಕ್ಕೂ ಅಧಿಕ ಬಂಟರು ಸೇರಿ ಯುಎಇ ಬಂಟ್ಸ್ ನ 48 ನೇ ವರ್ಷದ ಕೂಡುಕಟ್ಟ್ “ಭಾವೈಕ್ಯ” ಬಂಟರ ಸಮಾಗಮ ಅದ್ದೂರಿಯಾಗಿ ನಡೆಯಿತು. ಯುಎಇ ಬಂಟ್ಸ್ ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ, ಸಲಹಾ ಸಮಿತಿಯ ಸದಸ್ಯರ ಮತ್ತು 2025 ನೇ ಸಾಲಿನ ಸಂಘಟನಾ ಸಮಿತಿಯ ಸರ್ವ ಸದಸ್ಯರ ಕಳೆದ ನಾಲ್ಕು ತಿಂಗಳುಗಳ ಕಠಿಣ ಪರಿಶ್ರಮದ ಫಲವೇ ಅಷ್ಟೊಂದು ಸಂಖ್ಯೆಯ ಬಂಟರು ಸೇರಲು ಹಾಗೂ ಕಾರ್ಯಕ್ರಮದ ಯಶಸ್ವಿಗೆ ಕಾರಣವಾಯಿತು. ಬೆಳಿಗ್ಗೆ ಹತ್ತು ಗಂಟೆಗೆ 48ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ಪೋಷಕರಾದ ಸರ್ವೋತ್ತಮ ಶೆಟ್ಟಿ, ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಮತ್ತು ಸಂಘಟನಾ ಸಮಿತಿಯ ಮಹಿಳಾ ಸದಸ್ಯೆಯರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಲಹಾ ಸಮಿತಿಯ ಸದಸ್ಯರಾದ…
ಡಿಸೆಂಬರ್ 19 ರಿಂದ 21 ರವರೆಗೆ ಸುರತ್ಕಲ್ ಬಂಟರ ಭವನದಲ್ಲಿ ಜನ ಜಾತ್ರೆ, “ಪರ್ವ – 2025” : ಸೀರೆ, ಲೈಫ್ ಸ್ಟೈಲ್ ಮತ್ತು ಫುಡ್ ಫೆಸ್ಟಿವಲ್
ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ – 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಡ್ ಫೆಸ್ಟಿವಲ್ ನಡೆಯಲಿದೆ ಎಂದು ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಡಿಸೆಂಬರ್ 20 ರಂದು ಶನಿವಾರ ಸಂಜೆ 7 ಕ್ಕೆ ಪೆರ್ಮೆದ ಕಲಾವಿದೆರ್ ಚೇಳಾರ್ ತಂಡದಿಂದ “ಎನ್ನಿಲೆಕ್ಕ ಇಜ್ಜೆರ್” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 21 ರಂದು ಸಂಜೆ 6 ಗಂಟೆಗೆ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ತಂಡದಿಂದ “ಸಂಗೀತ ರಸ ಮಂಜರಿ” ಬಳಿಕ 7 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ಈ ವರ್ಷದ ಸೂಪರ್ ಹಿಟ್ ಹಾಸ್ಯ ನಾಟಕ “ವೈರಲ್ ವೈಶಾಲಿ” ಪ್ರದರ್ಶನ ಗೊಳ್ಳಲಿದೆ ಎಂದರು. ಡಿ. 20 ಮತ್ತು 21 ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ…















