Author: admin

ದುಬೈನಲ್ಲಿ ಡಿ.10 ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯು.ಎ.ಇ. ದುಬೈ ಘಟಕದ ವತಿಯಿಂದ ಅದ್ದೂರಿಯಾಗಿ ನಡೆಯಲಿರುವ “ದುಬೈ ಗಡಿನಾಡ ಉತ್ಸವ-2023” ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬಂದು ಕಾರ್ಯಕ್ರಮದ ಘನತೆಯನ್ನು ಹೆಚ್ಚಿಸಿದ ಕೆ.ಎನ್.ಆರ್.ಐ ಫಾರಂನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಮಾತನಾಡುತ್ತಾ, ಗಡಿನಾಡಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೋಡಿ ತುಂಬ ಸಂತೋಷವಾಯಿತು. ಯುಎಇಯಲ್ಲಿ ಇರುವ ಗಡಿನಾಡಿನ ಕನ್ನಡಿಗರ ತಾಕತ್ತು ಏನೆಂಬುದನ್ನು ಕಳೆದ ವರ್ಷದಿಂದ ಯುಎಇಯ ಕನ್ನಡಿಗರಿಗೆ ತೋರಿಸಿಕೊಟ್ಟಿದ್ದೀರಿ. ಯುಎಇಯಲ್ಲಿ ಇರುವ ಕನ್ನಡಿಗರ ಒಂದೇ ಒಂದು‌ ಆಶಯ ದುಬೈನಲ್ಲಿ ಕನ್ನಡ ಭವನ ನಿರ್ಮಾಣ ಮಾಡೋದು ಹಾಗೂ ಗಡಿನಾಡಿನ ಅನಿವಾಸಿ ಕನ್ನಡಿಗರ ಕಷ್ಟ ಕಾರ್ಪಣ್ಯ ಬಗ್ಗೆ ‌ಸರಕಾರ ಎಚ್ಚೆತ್ತುಕೊಳ್ಳುವಂತಹ ಕಾರ್ಯಕ್ರಮ ಮಾಡುತಿದ್ದೀರಿ. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಹಾಗೂ ಈ ವರ್ಷ ಹಾಗೂ ಮುಂದೆಯೂ ನಡೆಯುವ ಗಡಿನಾಡಿನ ಕಾರ್ಯಕ್ರಮಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ ಮತ್ತು ನನ್ನ ಸಂಸ್ಥೆಯ ಸಭಾಂಗಣದಲ್ಲಿ ಗಡಿನಾಡಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ…

Read More

ವಿದ್ಯಾಗಿರಿ: ಆರು ನೂತನ ಕೂಟ ದಾಖಲೆಗಳು, 440ಕ್ಕೂ ಅಧಿಕ ಅಂಕಗಳ ಅಂತರದ ಜಯದೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್ ಚಾಂಪಿಯನ್‍ಷಿಪ್ ಸಮಗ್ರ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಮುಡಿಗೇರಿಸಿಕೊಂಡಿದ್ದು, ಸತತ 21ನೇ ಬಾರಿಗೆ ಚಾಂಪಿಯನ್‍ಶಿಪ್ ಪಡೆದ ಕೀರ್ತಿಗೆ ಪಾತ್ರವಾಯಿತು. ಉಡುಪಿಯ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಮುಕ್ತಾಯಗೊಂಡ ಚಾಂಪಿಯನ್‍ಷಿಪ್‍ನ ಪುರುಷರ ವಿಭಾಗದಲ್ಲಿ 259 ಹಾಗೂ ಮಹಿಳೆಯರ ವಿಭಾಗದಲ್ಲಿ 247 ಅಂಕ ಪಡೆದ ಆಳ್ವಾಸ್ ಒಟ್ಟು 506 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆಯಿತು. ಪುರುಷರ ವಿಭಾಗದಲ್ಲಿ 50 ಅಂಕ ಪಡೆದ ಉಜಿರೆಯ ಎಸ್‍ಡಿಎಂ ಕಾಲೇಜು ಹಾಗೂ ಮಹಿಳೆಯರವಿಭಾಗದಲ್ಲಿ 56 ಅಂಕ ಪಡೆದ ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮದರ್ಜೆಕಾಲೇಜು ರನ್ನರ್‍ಅಫ್ ಪ್ರಶಸ್ತಿಗಳನ್ನು ಪಡೆದವು. ಆಳ್ವಾಸ್ ಕಾಲೇಜು ಪುರುಷರ ವಿಭಾಗದಲ್ಲಿ 22 ಚಿನ್ನ 15 ಬೆಳ್ಳಿ ಹಾಗೂ 3 ಕಂಚಿನ ಪದಕ ಸೇರಿ ಒಟ್ಟು 40 ಹಾಗೂ ಮಹಿಳಾ ವಿಭಾಗದಲ್ಲಿ 22 ಚಿನ್ನ, 13 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ 37…

Read More

ವಿಶ್ವ ಖ್ಯಾತಿಯ ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾದ ಹೆಸರಾಂತ ಸಂಘಟಕಿ, ಬಹುಮುಖ ಪ್ರತಿಭೆಯ ಸಾಧಕಿ ಶ್ರೀಮತಿ ಚಿತ್ರಾ ರವಿರಾಜ್ ಶೆಟ್ಟಿ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪಾಂಗಾಳ ಆದಿ ಆಲಡೆಗೆ ಸಂಬಂಧ ಪಟ್ಟ ಪ್ರತಿಷ್ಠಿತ ಪಾಂಗಾಳ ಮೇಲ್ಮನೆ ಮನೆತನದ ಮುದ್ದಿನ ಮಗಳಾಗಿ ಬಾಲ್ಯದ ದಿನಗಳಿಂದಲೇ ವಿಚಕ್ಷಣ ಪ್ರತಿಭೆಯ ಬಾಲಕಿಯಾಗಿ ಗುರುತಿಸಿಕೊಂಡವರು. ಪಾಂಗಾಳ ಮೇಲ್ಮನೆ ರಾಧಾ ಡಿ ಶೆಟ್ಟಿ ಮತ್ತು ನಂದಳಿಕೆ ಐಸ್ರಬೆಟ್ಟು ದುಗ್ಗಪ್ಪ ಶೆಟ್ಟಿ ದಂಪತಿಗೆ ಮಗಳಾಗಿ ಹುಟ್ಟಿದ ಚಿತ್ರಾ ಅವರು ಪಾಂಗಾಳದಲ್ಲಿ ಪ್ರಾಥಮಿಕ, ಇನ್ನಂಜೆಯಲ್ಲಿ ಹೈಸ್ಕೂಲು, ಕಟಪಾಡಿಯಲ್ಲಿ ಪದವಿಪೂರ್ವ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು. ಇವರು ಪ್ರತೀ ತರಗತಿಗಳಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಸರಕಾರಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದರು. ನೃತ್ಯ, ನಟನೆ, ಭಜನೆ, ಯಕ್ಷಗಾನ, ನಾಟಕ ಇವರ ಆಸಕ್ತಿಯ ವಿಷಯಗಳಾಗಿದ್ದವು. ಶಾಲಾ ಕಾಲೇಜು ದಿನಗಳ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದರು. ಸುಲಕ್ಷಣೆ ಹಾಗೂ ಸ್ಫುರದ್ರೂಪಿಯಾಗಿದ್ದ…

Read More

ಮಾತೃ ಸಂಘ ತಾಲೂಕು ಸಮಿತಿ ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇವರ ಮಾರ್ಗದರ್ಶನದೊಂದಿಗೆ ನೆಲ್ಯಾಡಿ ವಲಯ ಬಂಟರ ಸಂಘ ಇದರ ಆಶ್ರಯದಲ್ಲಿ ಕಡಬ ತಾಲೂಕಿನ ಗೋಳಿತೋಟ್ಟು ಗ್ರಾಮದ ಶ್ರೀಮತಿ ಲೀಲಾವತಿ ವಿಠಲ ಶೆಟ್ಟಿ ಇವರ ಪುತ್ರಿ ಕು ಶ್ರುತಿ ಇವರ ವಿವಾಹಕ್ಕೆ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು ಇವರ ಮುಖಾಂತರ ಆರ್ಥಿಕ ಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಪ್ರತಾಪ್ ಚಂದ್ರ ರೈ, ಶ್ರೀ ಸತೀಶ ರೈ ಕೊಣಾಲು ಗುತ್ತು, ಶ್ರೀ ನಿತ್ಯಾನಂದ ಶೆಟ್ಟಿ ಮನವಳಿಕೆ, ತಾಲೂಕು ಮಹಿಳಾ ಬಂಟರ ಸಂಘದ ಕೋಶಾಧಿಕಾರಿ ಶ್ರೀಮತಿ ವಾಣಿ ಎಸ್ ಶೆಟ್ಟಿ, ರತ್ನಾಕರ ಶೆಟ್ಟಿ ಕೊಲ್ಯೊಟ್ಟು ಅಶ್ವಮೇಧ, ಸುಂದರ ಶೆಟ್ಟಿ ಉಪಸ್ಥಿತರಿದ್ದರು.

Read More

ಬಂಟರ ಸಂಘ ಬಂಟ್ವಾಳ ತಾಲೂಕಿನ ವತಿಯಿಂದ ದಿನಾಂಕ 07-01-2024ರಂದು ಜರಗಲಿರುವ ಜಿಲ್ಲಾ ಮಟ್ಟದ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರನ್ನು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷ ಹಾಗೂ ಪ್ರಸ್ತುತ ಒಕ್ಕೂಟದ ಜೊತೆ ಕಾರ್ಯದರ್ಶಿಯವರಾದ ಶ್ರೀ ಚಂದ್ರಹಾಸ್ ಡಿ. ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿ, ಬಂಟರ ಸಂಘ ಬಂಟ್ವಾಳ ತಾಲೂಕಿನ ಪದಾಧಿಕಾರಿಗಳಾದ ಶ್ರೀ ಜಗನ್ನಾಥ್ ಚೌಟ, ಶ್ರೀ ಲೋಕೇಶ್ ಶೆಟ್ಟಿ ಕೆ, ಶ್ರೀ ಪದ್ಮನಾಭ ಶೆಟ್ಟಿ, ಶ್ರೀ ರಂಜನ್ ಶೆಟ್ಟಿ, ಶ್ರೀ ಭಾಸ್ಕರ್ ಶೆಟ್ಟಿ, ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಮೂಡುಬಿದಿರೆ: ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಮ್ಮಿಕೊಂಡ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿಯ ವಿಭಾ ನಾಯಕ ಭಾವಗೀತೆ ಸ್ಪರ್ಧೆ ಹಾಗೂ ಯುವಿಕ ಎಲ್ ಮತ್ತು ತಿರುಪತಿ ವಿಟಿ ರಸಪ್ರಶ್ನೆಯಲ್ಲಿ ದ್ವಿತಿಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ, ಪ್ರಾಚಾರ್ಯರು ಅಭಿನಂದಿಸಿದ್ದಾರೆ.

Read More

ಕರ್ನಾಟಕ ಮಿಲ್ಕ್ ಫೆಡರೇಶನ್ (K.M.F) ಬೆಂಗಳೂರು ಕೇಂದ್ರ ಕಛೇರಿಗೆ ನಡೆಸಿದ ನೇಮಕಾತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಮೆರಿಟ್ ಅಂಕಗಳೊಂದಿಗೆ ಮೈಸೂರು ಜಿಲ್ಲೆಯ ವಿಜಯನಗರ ನಿವಾಸಿ ಶಿಲ್ಪಾ ಹೆಚ್.ಎಂ ರವರು ಆಯ್ಕೆ ಆಗಿದ್ದಾರೆ. ಈ ಮೂಲಕ ಭಾಗ್ಯೆಶ್ ರೈ ನೇತೃತ್ವದ ವಿದ್ಯಾಮಾತಾ ಅಕಾಡೆಮಿಯ ಸಾಧನೆಯ ಮುಕುಟಕ್ಕೆ ಇನ್ನೊಂದು ಗರಿ ಲಭಿಸಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ಸಹಕಾರ ಸಂಘಗಳ ಬಗ್ಗೆ ವಿದ್ಯಾಮಾತ ಅಕಾಡೆಮಿಯಲ್ಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು ರಾತ್ರಿ 8 ರಿಂದ 9 ಗಂಟೆವರೆಗಿನ ನಿತ್ಯ 1 ಗಂಟೆಗಳ ಆನ್ಲೈನ್ ತರಬೇತಿಯನ್ನು ಶಿಲ್ಪಾರವರಿಗೆ ನೀಡಲಾಗುತ್ತಿತ್ತು. ಅತ್ಯಧಿಕ ಮೆರಿಟ್ ನೊಂದಿಗೆ ಗ್ರೇಡ್ 2 ಹುದ್ದೆಗೆ ಆಗಿರುತ್ತಾರೆ. ಸಹಕಾರ ತತ್ವ, ಸಾಮಾನ್ಯ ಜ್ಞಾನ ಇತ್ಯಾದಿಗಳ ಬಗ್ಗೆ ವಿಶೇಷ ತರಬೇತಿಯನ್ನು ನೀಡುವುದರ ಮೂಲಕ ಸ್ಥಳೀಯ ಸಹಕಾರಿ ಬ್ಯಾಂಕ್, K.M.F ಇತ್ಯಾದಿ ಪರೀಕ್ಷೆಗಳನ್ನು ಪಾಸ್ ಮಾಡಲು ಉತ್ತೇಜಿಸಲಾಗುತ್ತಿದೆ. ಈ ಕಾರಣದಿಂದ ಕಳೆದ K.M.F ನ ಮಂಗಳೂರು ವಿಭಾಗಕ್ಕೂ 3 ಜನ ಅಭ್ಯರ್ಥಿಗಳು ಅತ್ಯಧಿಕ ಅಂಕಗಳೊಂದಿಗೆ ಆಯ್ಕೆಯಾಗಿದ್ದರು. ಇದೀಗ ಬೆಂಗಳೂರು ವಿಭಾಗಕ್ಕೆ ಆಯ್ಕೆ…

Read More

ಬಂಟರ ಸಂಘ ಮುಂಬಯಿ ಇಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅದರ ನೂತನ ಗೌರವ ಕೋಶಾಧಿಕಾರಿಯಾಗಿ ಮುಂಬಯಿಯ ಪ್ರತಿಷ್ಠಿತ ರಮೇಶ್ ಶೆಟ್ಟಿ ಎಂಡ್ ಕಂ. ಲೆಕ್ಕಪರಿಶೋಧಕ ಹಾಗೂ ವ್ಯಾಪಾರೋದ್ಯಮ ಸಂಬಂಧಿ ತೆರಿಗೆ ಸಲಹೆಗಾರ ಸಂಸ್ಥೆಯ ಸಿಎ ರಮೇಶ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಬಾಲ್ಯದ ದಿನಗಳಿಂದಲೇ ತೀಕ್ಷ್ಣ ಹಾಗೂ ಕುಶಾಗ್ರಮತಿಯಾಗಿದ್ದ ರಮೇಶ್ ಶೆಟ್ಟಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಕೈನಾಲ್ ಪ್ರಾಥಮಿಕ ಶಿಕ್ಷಣ ಸಂಸ್ಥೆ ಮತ್ತು ಮುಂಡ್ಕೂರು ಪ್ರಾಥಮಿಕ ಶಾಲೆಗಳಲ್ಲಿ ಪೂರೈಸಿದರು. ಹೈಸ್ಕೂಲು ಮತ್ತು ಪದವಿ ಪೂರ್ವ ಶಿಕ್ಷಣವನ್ನು ಮುಂಡ್ಕೂರಿನ ಪ್ರಸಿಧ್ಧ ವಿವಿಪಿಸಿಯಲ್ಲಿ ಮುಗಿಸಿದ ಬಳಿಕ ಮುಂದಿನ ಶಿಕ್ಷಣ ಪಡೆಯಲು ಮುಂಬಯಿಗೆ ಆಗಮಿಸಿದ ಯುವಕ ರಮೇಶ್ ಅವರು ವಡಲಾದ ಪ್ರತಿಷ್ಠಿತ ಎಸ್ ಐ ಡಬ್ಲ್ಯೂ ಎಸ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪೂರೈಸಿದವರು. ಅಲ್ಲಿಗೆ ತನ್ನ ಶಿಕ್ಷಣವನ್ನು ಕೊನೆಗೊಳಿಸದೆ ಉನ್ನತ ಶಿಕ್ಷಣ ಪಡೆಯುವ ಮಹತ್ವಾಕಾಂಕ್ಷೆಯಿಂದ ಐಸಿಎಐ ಮುಖಾಂತರ ವಿಶೇಷ ತರಬೇತಿ ಪಡೆದು ಸಿಎ ಪದವಿ ಮುಗಿಸಿದರು. ಬಳಿಕ ಆ ದಿನಗಳಲ್ಲಿ ಬಹಳ ಬೇಡಿಕೆಯಲ್ಲಿದ್ದ ಉದ್ಯಮದಲ್ಲಿ ತನ್ನನ್ನು…

Read More

ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮಾಜಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ 2023 – 26 ರ ಮೂರು ವರ್ಷಗಳ ಅವಧಿಗೆ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ನಿರ್ಗಮನ ಮತ್ತು ನೂತನ ಆಗಮನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಚಿತ್ರಾ ಆರ್ ಶೆಟ್ಟಿಯವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿದರು. ಡಿಸೆಂಬರ್ 2 ರಂದು ಸಂಜೆ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಎಲ್ಲಾ ವಿಶ್ವಸ್ಥರು, ಮಾಜಿ ಅಧ್ಯಕ್ಷರು, ನಿರ್ಗಮನ ಮತ್ತು ನೂತನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಚಿತ್ರಾ ಆರ್ ಶೆಟ್ಟಿಯವರನ್ನು ಸಂಘದ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದನ್ನು ಅನುಮೋದಿಸಿ ಪುಷ್ಪ ಗೌರವ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಜಾಗತಿಕ…

Read More

ಆಕರ್ಷಕ ಪಥಸಂಚಲನ, ಕ್ರೀಡಾ ಜ್ಯೋತಿ ಆಗಮನ, ಧ್ವಜಾರೋಹಣ, ಕ್ರೀಡಾ ಪ್ರತಿಜ್ಞೆ ಸ್ವೀಕಾರ – ಇತ್ಯಾದಿಗಳೊಂದಿಗೆ 2023 – 24 ನೇ ಸಾಲಿನ ಕರ್ನಾಟಕ ವಿದ್ಯಾಸಂಸ್ಥೆಗಳು ಮಾಣಿ ಇದರ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಕೆ. ಭಂಡಾರಿ ಮುಖ್ಯ ಅತಿಥಿಯಾಗಿ ಆಗಮಿಸಿ “ಪಾಠ ಮತ್ತು ಆಟ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಆಟಗಳಿಂದ ಆತ್ಮಸ್ಥೈರ್ಯ ಮತ್ತು ಮಾನಸಿಕ ಕ್ಷಮತೆ ಹೆಚ್ಚಾಗುತ್ತದೆ” ಎಂದರು. ಇನ್ನೋರ್ವ ಮುಖ್ಯ ಅತಿಥಿಯಾದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಲಯನ್ಸ್ ಕ್ಲಬ್ ಮಾಣಿ ಇದರ ಸ್ಥಾಪಕಾಧ್ಯಕ್ಷರಾದ ಲಯನ್ ಗಂಗಾಧರ್ ರೈ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಮಾಡಿದರು. ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ರೊ. ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಜಿ‌. ಇಬ್ರಾಹಿಂ, ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಿಕ್ಷಕ – ರಕ್ಷಕ ಸಂಘದ…

Read More