Author: admin

ಸಿನಿಮಾದ ಟ್ರೇಲರ್ ನಂತೆ ಕೃತಿಯ ಸಮೀಕ್ಷೆ ಇರಬೇಕು. ಸಮೀಕ್ಷೆಯಿಂದ ಕೃತಿಯನ್ನು ಓದುವ ಕೂತೂಹಲ, ಇಡೀ ಪುಸ್ತಕವನ್ನು ಓದಿಯೇ ಬಿಡಬೇಕೆಂದು ಅನಿಸಬೇಕು. ಕೃತಿಯ ಭವಿಷ್ಯ ಪತ್ರಕರ್ತರ ಕೈಯಲ್ಲಿರುತ್ತದೆ. ಇಂತಹ ಕೃತಿ ಸಮೀಕ್ಷೆಗಳಿಂದ ಸಾಹಿತಿಗಳಿಗೆ ಪ್ರೊತ್ಸಾಹ ಕೊಟ್ಟಂತಾಗುತ್ತದೆ. ಅವರಿಂದ ಹೊಸ ಕೃತಿಗಳು ಬರಲು ಸಹಾಯಕವಾಗುತ್ತದೆ ಎಂದು ಸೃಜನಾ ಮುಂಬಯಿ ಕನ್ನಡ ಲೇಖಕಿಯರ ಬಳಗದ ಸಂಚಾಲಕಿ ಪದ್ಮಜಾ ಮಣ್ಣೂರ ಅವರು ಅಭಿಪ್ರಾಯ ಪಟ್ಟರು. ಅವರು ಸೃಜನಾ ಬಳಗದ ಆಶ್ರಯದಲ್ಲಿ ನವೆಂಬರ್ 29 ರಂದು ಮೈಸೂರು ಅಸೊಸಿಯೇಷನ್ ನ ಸಭಾಗೃಹದಲ್ಲಿ ಸಂಜೆ 5.30 ಕ್ಕೆ ಜರುಗಿದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಕಟಿಸಿದ ಒಂಬತ್ತು ಕೃತಿಗಳ ಸಮೀಕ್ಷಾ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಒಂಬತ್ತು ಲೇಖಕಿಯರು ಉತ್ತಮ ರೀತಿಯಲ್ಲಿ ಕೃತಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವು ಸಾರ್ಥಕವಾದಂತೆ ಎನಿಸಿತು ಎಂದು ಸಂತೋಷ ಪಟ್ಟರು. ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನದ ಗೌ. ಕಾರ್ಯದರ್ಶಿ ವಿಶ್ವನಾಥ್ ದೊಡ್ಡಮನೆ ಮಾತನಾಡುತ್ತಾ, 23 ವರ್ಷದ ಸೃಜನಾ ಬಳಗ ಹಾಗೂ 16 ವರ್ಷದ ಮಯೂರವರ್ಮ ಪ್ರತಿಷ್ಠನಾ ಒಟ್ಟಾಗಿ ಮಾಡಿದ…

Read More

ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದು ಹೋಗದೇ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳು ತಮ್ಮ ಪ್ರತಿಭೆಯನ್ನು ಹೊರ ಹಾಕಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಶಾಸಕ ಎ. ಕಿರಣ್ ಕುಮಾರ್‌ ಕೊಡ್ಗಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ, ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಇದನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರದ…

Read More

ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ, ಬಹರೈನ್ ಇದರ ವತಿಯಿಂದ ನವೆಂಬರ್ 28ರಂದು ಬಹರೈನ್ ನ ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ – 2025ರ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಇದರ ಅಧ್ಯಕ್ಷ ಹರಿಪ್ರಸಾದ್ ರೈ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಎಚ್ ಇ ವಿನೋದ್ ಕೆ ಜೇಕಬ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ, ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉದ್ಯಮಿ ಮಹೇಶ್ ಹೆಗ್ಡೆ ಮೊಳಹಳ್ಳಿ, ಬಹರೈನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಉಪಾಧ್ಯಕ್ಷ ಮಹಮ್ಮದ್ ಅಬ್ದುಲ್ ಜಬ್ಬಾರ್ ಆಲ್ ಕೂಹೇಜಿ, ಜಿ ಬಾಬು ರಾಜನ್, ದಿ ಇಂಡಿಯನ್ ಕ್ಲಬ್ ಅಧ್ಯಕ್ಷ ಜೋಸೆಫ್ ಜ್ವಾಯಿ, ಬಹರೈನ್ ಕ್ರಿಕೆಟ್ ಫೆಡರೇಶನ್ ಸಮಿತಿಯ ಅಧ್ಯಕ್ಷ ಮಹಮ್ಮದ್ ಮಾನ್ಸೂರ್ ಕನ್ನಂಗಾರ್, ಬಹರೈನ್ ಕರ್ನಾಟಕ ಅನಿವಾಸಿ…

Read More

ಬಂಟರ ಸಂಘ ಮುಂಬಯಿಯ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದಿಂದ 7 ದಿನದ ಪ್ರವಾಸವನ್ನು ಆಯೋಜಿಸಲಾಗಿತ್ತು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್ ಹೆಗ್ಡೆಯವರ ನೇತೃತ್ವದಲ್ಲಿ ಹಾಗೂ ಅವರ ತಂಡದ ಸುಲತಾ ಶೆಟ್ಟಿ ಮತ್ತು ಮಮತಾ ಶೆಟ್ಟಿ ಇವರು ಆಯೋಜಿಸಲ್ಪಟ್ಟ ಈ ಪ್ರವಾಸದಲ್ಲಿ 20 ಜನ ಮಹಿಳಾ ಸದಸ್ಯೆಯರು ಹಾಜರಿದ್ದರು. ಹರಿದ್ವಾರ, ಋಷಿಕೇಶ, ಮಸ್ಸೂರಿ, ನೈನಿತಾಲ್ ಮತ್ತು ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಮೂಲಕ ಇತ್ತೀಚಿನ ಪ್ರವಾಸವು ಸ್ಮರಣೀಯ ಮತ್ತು ಶ್ರೀಮಂತ ಅನುಭವವಾಗಿತ್ತು. ಪ್ರಯಾಣವು ಆಧ್ಯಾತ್ಮಿಕತೆ, ನೈಸರ್ಗಿಕ ಸೌಂದರ್ಯ, ಸಾಹಸ ಮತ್ತು ವಿಶ್ರಾಂತಿಯನ್ನು ಸುಂದರವಾಗಿ ಸಂಯೋಜಿಸಿತು. ಹರಿದ್ವಾರದಲ್ಲಿ ಪ್ರಾರಂಭಿಸಿ ಪ್ರಶಾಂತವಾದ ಗಂಗಾ ಆರತಿಯನ್ನು ವೀಕ್ಷಿಸುತ್ತಾ ಮತ್ತು ಘಾಟ್‌ಗಳ ಆಧ್ಯಾತ್ಮಿಕ ವಾತಾವರಣದಲ್ಲಿ ಮುಳುಗುತ್ತಾ, ಋಷಿಕೇಶದಲ್ಲಿ ಗಂಗೆಯ ರಮಣೀಯ ಮೋಡಿ, ಸಾಂಪ್ರದಾಯಿಕ ಸೇತುವೆಗಳು ಮತ್ತು ಶಾಂತಿಯುತ ಸುತ್ತಮುತ್ತಲಿನ ಪ್ರದೇಶಗಳು ಪ್ರವಾಸಕ್ಕೆ ಉಲ್ಲಾಸಕರ ಸ್ಪರ್ಶವನ್ನು ನೀಡಿತು. ಅಲ್ಲಿಂದ ಮಸ್ಸೂರಿಯ ಮಂಜಿನ ಬೆಟ್ಟಗಳಿಗೆ ತೆರಳಿ, ಅದರ ಆಹ್ಲಾದಕರ ಹವಾಮಾನ, ವಿಹಂಗಮ ದೃಷ್ಟಿಕೋನಗಳು ಮತ್ತು ನಿಧಾನವಾದ ನಡಿಗೆಗಳನ್ನು…

Read More

ಯಕ್ಷಗಾನದಲ್ಲಿ ಹಾಡು, ಕುಣಿತ, ಮಾತು, ಬಣ್ಣಗಾರಿಕೆ ಮತ್ತು ವೇಷಭೂಷಣಗಳಂತಹ ರಂಜನೀಯ ಅಂಶಗಳಿವೆ. ಆದರೆ ಕೇವಲ ಮಾತಿನಲ್ಲೇ ವಿವಿಧ ಪಾತ್ರಗಳಿಗೆ ಜೀವ ತುಂಬುವ ಒಂದು ಕಲೆಯಿದ್ದರೆ ಅದು ಯಕ್ಷಗಾನದ ಇನ್ನೊಂದು ಪ್ರಕಾರವಾದ ತಾಳಮದ್ದಳೆ ಮಾತ್ರ. ಇದರಲ್ಲಿ ಭಾಗವಹಿಸುವ ಕಲಾವಿದರಿಗೆ ಅಪಾರ ಪುರಾಣ ಜ್ಞಾನ ಮತ್ತು ಪಾತ್ರಗಳ ಒಳ ಹೊರಗು ತಿಳಿದಿರಬೇಕು ಎಂದು ನಗರದ ಪ್ರಸಿದ್ಧ ಲೆಕ್ಕ ಪರಿಶೋಧಕರಾದ ಸಿಎ ಎಸ್.ಎಸ್. ನಾಯಕ್ ಹೇಳಿದರು. ಮಂಗಳೂರು ವಿವಿ ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ, ಮಂಗಳೂರು ವಿವಿಯ ಡಾ| ಪಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ (ರಿ) ಪುತ್ತೂರು ಇವರ ಸಹಯೋಗದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿಹಬ್ಬ ತ್ರಯೋದಶ ಸರಣಿಯ ಮೂರನೇ ದಿನ ಕೀರ್ತಿಶೇಷ ಅರ್ಥಧಾರಿಗಳಾದ ದಿ|ಎ.ಕೆ ನಾರಾಯಣ ಶೆಟ್ಟಿ ಮತ್ತು…

Read More

ಕೊಣಾಜೆ ಮಂಗಳ ಗಂಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ -2025’ರಲ್ಲಿ ಸಂಗೀತ, ರಂಗಕಲೆ, ನೃತ್ಯ ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು ಗಳಿಸಿ ಈ ಸಾಧನೆ ಮೆರೆದಿದೆ. ಸಾಧನೆ ಮೆರೆದ ವಿದ್ಯಾರ್ಥಿಗಳಿಗೆ ಡಾ. ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಮಕ್ಕಳ ಬಾಲ್ಯ ಎಂದರೆ ಕುತೂಹಲದ ಜಗತ್ತು. ಏಕೆ? ಹೇಗೆ? ಸಾಧ್ಯವೇ? ಎಂಬ ಅನೇಕ ಪ್ರಶ್ನೆಗಳೆ ಅವರ ಮನದಲ್ಲಿ ಮೂಡುತ್ತಿರುತ್ತವೆ. ಹೊಸದನ್ನು ಮಾಡಬೇಕು, ಕಂಡು ಹಿಡಿಯಬೇಕು ಎನ್ನುವ ಕಾತರ. ಆದರೆ ತರಗತಿಗಳು ಮೇಲಕ್ಕೆ ಏರಿದಂತೆ ಈ ಗುಣಗಳು ನಿಧಾನವಾಗಿ ಕ್ಷೀಣಿಸುತ್ತಾ ಸಾಗುತ್ತವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನುಡಿದರು. ಅವರು ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ ಎಂಟನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. ಈ ಪರಿವರ್ತನೆಗೆ ನಮ್ಮ ಶಿಕ್ಷಣ ಪದ್ಧತಿ, ಶಿಕ್ಷಕರು ಹಾಗೂ ಪೋಷಕರು ಮುಖ್ಯ ಕಾರಣವಾಗಿದ್ದಾರೆ. ಮಕ್ಕಳ ಕುತೂಹಲ ಬೆಳೆಯುವುದು ಅವರ ಪ್ರಶ್ನೆಯನ್ನು ಜೀವಂತವಾಗಿಡುವ ಮೂಲಕ. ಶಿಕ್ಷಕರು ಎಲ್ಲವನ್ನೂ ಬೋಧಿಸಬೇಕಾಗಿಲ್ಲ, ಬದಲಿಗೆ ತಿಳಿಯುವ ಆಸೆ ಉಳಿಯುವಂತೆ ಬೆಂಬಲಿಸಬೇಕು. ಪೋಷಕರು ಪಾಠವನ್ನು ಕೇವಲ ಪುಸ್ತಕದಲ್ಲಿ ಅಲ್ಲ, ಜೀವನದಲ್ಲೂ ಕಂಡುಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು. ಪೋಷಕರು ಪ್ರೋತ್ಸಾಹಿಸಿದರೆ ಕುತೂಹಲದಿಂದ ಕಲಿಯುವ ಮಗು ನಾಳೆ ಸಮಾಜಕ್ಕೆ ಜವಾಬ್ದಾರಿಯುತ, ವಿಚಾರಶೀಲ, ಮೌಲ್ಯಯುತ ನಾಗರೀಕನಾಗುತ್ತಾನೆ. ಇದೇ ನಿಜವಾದ ಶಿಕ್ಷಣದ ಗುರಿ…

Read More

ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಪಟ್ಟಣ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಹಿರಿಯ ಅನುಭವಿ ರಾಜಕಾರಣಿಯಾಗಿದ್ದು, ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ನ ಚುನಾಯಿತ ಮಂಡಳಿಯ ಮೊದಲ ವರ್ಷದ ಸ್ಥಾಯಿ ಸಮಿತಿಯ ಅವಧಿ ಮುಗಿದಿರುವುದರಿಂದ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಮಿತಿಯ ಸದಸ್ಯರ ಸಭೆಯು ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೊಟ್ಟುರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಸಮಿತಿಯ ಸದಸ್ಯರಾದ ಅರುಣ್ ರವರ ಸೂಚನೆಯಂತೆ ಸರ್ವಾನುಮತದಿಂದ ಅಶೋಕ್ ಶೆಟ್ಟಿಯವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

Read More

ಗುರು ಹಿರಿಯರ ಅನುಭವದ ಮಾತುಗಳು ನಮ್ಮ ಬದುಕಿಗೆ ಸ್ಪೂರ್ತಿ. ಶ್ರದ್ಧೆ, ಪ್ರಾಮಾಣಿಕತೆಯೇ ಯಶಸ್ಸಿನ ಗುಟ್ಟು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು. ಅವರು ನವೆಂಬರ್ 29ರಂದು ಕಾರ್ಕಳ ಜ್ಞಾನಸುಧ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ‘ಜ್ಞಾನ ಸಂಭ್ರಮ’ದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಮನನ ಮಾಡಿಕೊಂಡರೆ ಸದಾ ಕ್ರೀಯಾಶೀಲರಾಗಲು ಸಾಧ್ಯ ಎಂದು ಹೇಳಿದ ಅವರು ಇಂದಿನ ಜ್ಞಾನ ಯುಗದಲ್ಲಿ ಜ್ಞಾನಸುಧ ಶಿಕ್ಷಣ ಸಂಸ್ಥೆಯು ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಬಗ್ಗೆ ಹೆಮ್ಮೆಯಿದೆ ಎಂದರು. ಸಹಶಿಕ್ಷಕಿ ವಿಜೇತರಾಣಿ ವಾರ್ಷಿಕ ವರದಿ ವಾಚಿಸಿದರು. ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ, ಟ್ರಸ್ಟಿಗಳಾದ ಕೆ ನಿತ್ಯಾನಂದ ಪ್ರಭು, ಜ್ಞಾನಸುಧ ಸಮೂಹ ಶಿಕ್ಷಣ ಸಂಸ್ಥೆಗಳ ದಿನೇಶ್ ಎಂ ಕೊಡವೂರು, ಸಾರ್ವಜನಿಕ ಸಂಪರ್ಕ ಅಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು, ಹಿತೈಷಿಗಳಾದ ದೇವೇಂದ್ರ ನಾಯಕ್,…

Read More

ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನ 21ನೇ ವರ್ಷದ ವಾರ್ಷಿಕೋತ್ಸವವು ನವೆಂಬರ್ 27 ಹಾಗೂ 28ರಂದು ಅತ್ಯಂತ ಸಂಭ್ರಮದಿಂದ ನೆರವೇರಿತು. ಮೊದಲನೆಯ ದಿನದ ಕಾರ್ಯಕ್ರಮದ ಮುಖ್ಯ ಅತಿಥಿ ಉಡುಪಿ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಮಾತನಾಡಿ ಶಾಲಾ ವಾರ್ಷಿಕೋತ್ಸವವು ನಮ್ಮ ಮಕ್ಕಳ ಸಾಧನೆ, ಬೆಳವಣಿಗೆ ಮತ್ತು ಪ್ರತಿಭೆಯನ್ನು ಆಚರಿಸುವ ವಿಶೇಷ ಸಂದರ್ಭವಾಗಿದೆ. ಜಿ ಎಮ್‍ನ ವೇದಿಕೆ ಇಲ್ಲಿನ ಮಕ್ಕಳ ಆತ್ಮಸ್ಥೈರ್ಯ ನಗುವನ್ನು ನೋಡುವಾಗ ರಿಯಾಲಿಟಿ ಶೋ ನೋಡಿದ ಅನುಭವವಾಗುತ್ತಿದೆ. ಮಕ್ಕಳು ಮುಂದೆ ಉತ್ತಮ ಸಾಧನೆಯನ್ನು ಮಾಡಿದ ನಂತರ ತಾನು ಕಲಿತ ವಿದ್ಯಾ ದೇಗುಲವನ್ನು, ಗುರುಗಳನ್ನು, ಪೋಷಕರನ್ನು ನೆನಪು ಮಾಡಿಕೊಳ್ಳಬೇಕೆಂದರು. ಅಪರಾಹ್ನದ ಕಾರ್ಯಕ್ರಮದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಕುಡ್ಲು ಮಾತನಾಡಿ ಜಿ ಎಮ್ ನಾನು ಕಂಡಂತಹ ಅತ್ಯಂತ ಶಿಸ್ತುಬದ್ಧ ಶಾಲೆ. ಇಲ್ಲಿ ಜ್ಞಾನ, ಶೃದ್ಧೆ, ಶಿಸ್ತು ಮತ್ತು ವ್ಯಕ್ತಿತ್ವಕ್ಕೆ ಪ್ರಾಮುಖ್ಯತೆಯನ್ನು ಕೊಡಲಾಗುತ್ತಿದೆ. ಮಕ್ಕಳಿಗೆ ಜೀವನದಲ್ಲಿ ಸಾಧನೆಗೆ ಕಠಿಣಶ್ರಮ, ಬದ್ಧತೆ ಅತೀ ಅವಶ್ಯಕ.…

Read More