Author: admin
ಮೈಸೂರಿನ ಪ್ರತಿಷ್ಠಿತ ಬಂಟರ ಸಂಘದ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ನ ನೂತನ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಪಿ. ಸುರೇಶ್ ಆಳ್ವರವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೈಸೂರು ಬಂಟರ ಸಂಘದಲ್ಲಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಯಶಸ್ವೀ ಸಂಘಟಕ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಹೋಟೆಲ್ ಉದ್ಯಮಿಯಾಗಿದ್ದುಕೊಂಡು ಅನಾರೋಗ್ಯ ಪೀಡಿತರಿಗೆ, ಬಡ ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಸಹಕಾರ ನೀಡುತ್ತಾ ಬರುತ್ತಿದ್ದಾರೆ.
ತುಳುನಾಡಿನ ಸಂಸ್ಕೃತಿ, ಭಾಷೆ ಮತ್ತು ಮಾತೃಮೂಲ ಪರಂಪರೆಯ ಪುನರುಜ್ಜೀವನಕ್ಕಾಗಿ ಆಯೋಜಿಸಲಾಗುತ್ತಿರುವ ಮಹತ್ವದ ‘ಅಪ್ಪೆ ಬೇರ್ ದ ತುಳುನಾಡ್’ ಕಾರ್ಯಕ್ರಮಕ್ಕೆ ಖ್ಯಾತ ಲೇಖಕಿ ಹಾಗೂ ಜಾನಪದ ತಜ್ಞೆ ಡಾ| ಇಂದಿರಾ ಹೆಗ್ಡೆ ಅವರನ್ನು ಸಮ್ಮೇಳನ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ. ಡಾ| ಇಂದಿರಾ ಹೆಗ್ಡೆ ಅವರು ತುಳುನಾಡಿನ ಜಾನಪದ ಆಚರಣೆಗಳು, ನಂಬಿಕೆಗಳು ಮತ್ತು ಸಂಸ್ಕೃತಿಯ ಕುರಿತಾಗಿ ದೀರ್ಘಕಾಲದಿಂದ ಆಳವಾದ ಅಧ್ಯಯನ ನಡೆಸುತ್ತಿರುವ ಪ್ರಮುಖ ವಿದ್ವಾಂಸರು. ಕಿನ್ನಿಗೋಳಿ ಮೂಲದ ಅವರು ತುಳು ಮತ್ತು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಅವರು ರಚಿಸಿರುವ ಕೃತಿಗಳಲ್ಲಿ ‘ತುಳುವರ ಮೂಲತಾನ ಆದಿ ಆಲಡೆ ಪರಂಪರೆ ಮತ್ತು ಪರಿವರ್ತನೆ’, ‘ಬಂಟರು – ಒಂದು ಸಮಾಜೋ ಸಾಂಸ್ಕೃತಿಕ ಅಧ್ಯಯನ’, ‘ಕರಾವಳಿ ಸಂಸ್ಕೃತಿ ಸಮೀಕ್ಷೆ’ ತುಳುನಾಡಿನ ಗ್ರಾಮಾಡಳಿತ ಮತ್ತು ಅಜಲು ಮೊದಲಾದ ಗ್ರಂಥಗಳು ತುಳುನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ಜೀವನದ ಅಧ್ಯಯನಕ್ಕೆ ಮಹತ್ವದ ಆಧಾರವಾಗಿವೆ. ತುಳುನಾಡಿನ ನಾಗಾರಾಧನೆ, ಭೂತಾರಾಧನೆ, ದೈವಾರಾಧನೆ, ಕುಟುಂಬ ವ್ಯವಸ್ಥೆ, ಸಮಾಜ ವ್ಯವಸ್ಥೆ, ಜಾನಪದ ಆಚರಣೆಗಳು ಮತ್ತು…
ಬ್ರಹ್ಮಾವರ ತಾಲೂಕು ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಮಹೇಶ್ ಭೋಜ ಶೆಟ್ಟಿ ಅವರನ್ನು ನೇಮಕಗೊಳಿಸಿ ಉಡುಪಿ ಜಿಲ್ಲಾ ಧಾರ್ಮಿಕ ಇಲಾಖೆ ಸಹಾಯಕ ಆಯುಕ್ತೆ ಟಿ.ಎನ್ ಮಂಜುಳ ಆದೇಶ ಹೊರಡಿಸಿದ್ದಾರೆ. ಮುಂದಿನ 3 ವರ್ಷಗಳ ಅವಧಿಗೆ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೈಸೂರಿನ ಪ್ರತಿಷ್ಠಿತ ಬಂಟರ ಸಂಘದ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ನ ನೂತನ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ನಿಡ್ಡೋಡಿ ಚಾವಡಿಮನೆ ಡಾ| ಜಗನ್ನಾಥ ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಹಲವಾರು ವರ್ಷಗಳಿಂದ ಕಿನ್ನಿಗೋಳಿಯಲ್ಲಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜಪರ ಕೆಲಸಗಳನ್ನು ನಿರ್ವಹಿಸುತ್ತಾ ಬರುತ್ತಿದ್ದಾರೆ. ಅನಾರೋಗ್ಯ ಪೀಡಿತರಿಗೆ, ಬಡ ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಸಹಕಾರ ನೀಡುತ್ತಿದ್ದಾರೆ.
ಇತ್ತೀಚೆಗೆ ನವಿ ಮುಂಬಯಿಯ ಬಂಟ್ಸ್ ಸೆಂಟರ್ ನ ಸಭಾಗೃಹದಲ್ಲಿ ನಡೆದ ಶಿವಾಯ ಫೌಂಡೇಶನ್ ನ ಎಂಟನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಆಗಮಿಸಿದ ಮುಂಬಯಿಯ ಯಶಸ್ವೀ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ರಮೇಶ ಶೆಟ್ಟಿ ಸಿದ್ದಕಟ್ಟೆ ಅವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಈ ಸಂಧರ್ಭ ಶಿವಾಯ ಫೌಂಡೇಶನ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಪಲಿಮಾರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇತ್ತೀಚೆಗೆ ನಿಧನರಾದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಅಧಿಕಾರಿ, ಸಮಾಜಸೇವಕ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್ ಶೆಟ್ಟಿಯವರಿಗೆ ಶ್ರದ್ದಾಂಜಲಿ ಸಭೆ ಎಪ್ರಿಲ್ 4 ರಂದು ಶನಿವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ನಲ್ಲಿರುವ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ )2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದು, ಶೋಷಿತ ಸಮುದಾಯದ ಕುರಿತ ಅತ್ಯುತ್ತಮ ವರದಿಗೆ ನೀಡಲಾಗುವ ಬಿ.ಜಿ ತಿಮ್ಮಪ್ಪಯ್ಯ ಪ್ರಶಸ್ತಿಗೆ ವಿಜಯವಾಣಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯ ಉಪ ಸಂಪಾದಕ ರಾಜೇಶ್ ಶೆಟ್ಟಿ ದೋಟ ಭಾಜನರಾಗಿದ್ದಾರೆ. ಬೀದರ್ನಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನ ವಾಮದಪದವು ನಿವಾಸಿಯಾಗಿರುವ ರಾಜೇಶ್ ಶೆಟ್ಟಿ ದೋಟ ಅವರು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2024ನೇ ಸಾಲಿನ ಪ್ರತಿಷ್ಠಿತ ಪ.ಗೋ (ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ‘ಮುಗದಾರಗೆ’ ಎಂಬ ಕವನ ಸಂಕಲನಕ್ಕೆ 2022ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಅವರಿಗೆ ಸಂದಿದೆ.
ಅಂಬಲಪಾಡಿ ಕಪ್ಪೆಟ್ಟು ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ವಾರ್ಷಿಕ ನೇಮ ಏಪ್ರಿಲ್ 4ರಂದು ನಡೆಯಲಿದೆ. ಏಪ್ರಿಲ್ 3ರಂದು ರಾತ್ರಿ 8 ಗಂಟೆಗೆ ಅನ್ನ ನೈವೇದ್ಯ ಸೇವೆ, ಏಪ್ರಿಲ್ 4 ರಂದು ಮಧ್ಯಾಹ್ನ 12:30 ಕ್ಕೆ ಅನ್ನಸಂತರ್ಪಣೆ, ರಾತ್ರಿ 7:00 ಗಂಟೆಗೆ ಭಂಡಾರ ಇಳಿಯುವುದು, ಅನಂತರ ಶ್ರೀ ಬ್ರಹ್ಮಬೈದರ್ಕಳ ನೇಮ ಜರಗಲಿದೆ. ಏಪ್ರಿಲ್ 7 ರಂದು ರಾತ್ರಿ 10 ಗಂಟೆಗೆ ಪಡು ಗಡುವಾಡಿನಲ್ಲಿ, ಏಪ್ರಿಲ್ 16ರಂದು ರಾತ್ರಿ 10 ಗಂಟೆಗೆ ಮೂಡು ಗಡುವಾಡಿನಲ್ಲಿ (ಸರಕಾರಿ ಆಸ್ಪತ್ರೆ ಬಳಿ) ಶ್ರೀ ವ್ಯಾಘ್ರ ಚಾಮುಂಡಿ ದೈವದ ಕೋಲ ನಡೆಯಲಿದೆ ಎಂದು ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ತಿಳಿಸಿದ್ದಾರೆ.
ಮಾನವೀಯ ಸೇವೆಯೇ ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯವಾಗಿದ್ದು ರಕ್ತನಿಧಿ ಸೇವೆ, ಅಗತ್ಯ ಇರುವ ವಿಕಲ ಚೇತನರಿಗೆ ಗಾಲಿಕುರ್ಚಿ ವಿತರಣೆ, ಉಚಿತ ವೈದ್ಯಕೀಯ ಶಿಬಿರ ಮುಂತಾದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಅಶಕ್ತರ ಸೇವೆಗೆ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಸದಾ ಭದ್ದವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಮಿತಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಹೇಳಿದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪದವಿನಂಗಡಿಯ ಮಹಿಳೆಗೆ ರೆಡ್ ಕ್ರಾಸ್ ಸಮಿತಿ ವತಿಯಿಂದ ವಿಶೇಷ ಆರಾಮದಾಯಕ ಮಂಚ ವಿತರಿಸಿ ಮಾತನಾಡಿದರು. ಮಾಜಿ ಮೇಯರ್ ಜಯಾನಂದ ಅಂಚನ್, ರೆಡ್ ಕ್ರಾಸ್ ಜಿಲ್ಲಾ ಸಮಿತಿ ನಿರ್ದೇಶಕ ಪಿ.ಬಿ ಹರೀಶ್ ರೈ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ಪ್ರಮುಖರಾದ ಪ್ರಜ್ವಲ್ ಶೆಟ್ಟಿ, ಹರಿಪ್ರಸಾದ್, ಉಮೇಶ್ ಶೆಟ್ಟಿ, ರವೀಂದ್ರ ಅಮೀನ್, ಸಂಜೀತ್ ಶೆಟ್ಟಿ, ಸರೋಜಿನಿ, ದಿವ್ಯಾ, ಜಯ ಮೇರಿಹಿಲ್, ಮಾಧವ, ಫಲಾನುಭವಿಯ ತಾಯಿ ಮೀನಾಕ್ಷಿ, ರೆಡ್ ಕ್ರಾಸ್ ಸಿಬ್ಬಂದಿ ಗಿರೀಶ್ ಕುಮಾರ್, ಅನಿತಾ ಮೊದಲಾದವರು ಉಪಸ್ಥಿತರಿದ್ದರು.
ಈಗಿನ ಯುವ ಪೀಳಿಗೆಯ ಕೆಲವು ಹುಡುಗಿಯರಿಗೆ ಅತಿಯಾದ ಸ್ವೇಚ್ಛಾಚಾರ ಜಾಸ್ತಿಯಾಗಿ ಕೆಲವು ಹುಡುಗರ ಜೀವನ ಹಾಳಾಗ್ತಾ ಇದೆ. ಮುಖ್ಯವಾಗಿ ಈಗ ಇರುವುದೇ ತಂದೆ ತಾಯಿಗಳಿಗೆ ಒಬ್ಬಳೇ ಮಗಳು ಅಥವಾ ಒಬ್ಬನೇ ಮಗ. ಆದ್ದರಿಂದ ಅವರನ್ನು ಚಿಕ್ಕಂದಿನಿಂದಲೇ ಅತಿಯಾದ ಮುದ್ದು ಮಾಡಿ ಸಾಕಿರ್ತಾರೆ. ಅವುಗಳಿಗೆ ತಮ್ಮ ಹೆತ್ತವರು ತಮ್ಮನ್ನು ಸಾಕಿ ಸಲಹಲು, ಒಳ್ಳೆ ವಿದ್ಯಾಭ್ಯಾಸ ಕೊಡಿಸಲು ಎಷ್ಟು ಕಷ್ಟ ಪಟ್ಟಿದ್ದಾರೆ ಅನ್ನುವ ಅರಿವು ಇರುವುದಿಲ್ಲ. ಹೆತ್ತವರೂ ಹಾಗೆ ತಾವು ಪಡುವ ಕಷ್ಟ ಮಕ್ಕಳಿಗೆ ಗೊತ್ತಾಗಬಾರದೆಂದು ಅದನ್ನು ಮುಚ್ಚಿಡುತ್ತಾರೆ. ಇದರಿಂದ ಮಕ್ಕಳಿಗೂ ಹೆತ್ತವರ ಕಷ್ಟ ಗೊತ್ತಿರುವುದಿಲ್ಲ. ಅವರಿಗೆ ತಾವು ಕೇಳಿದ್ದನ್ನೆಲ್ಲಾ ಹೆತ್ತವರು ತೆಗೆದು ಕೊಡುತ್ತಾರೆ. ಎಲ್ಲಾ ಸುಲಭದಲ್ಲಿ ಸಿಕ್ಕಿದ ಕೂಡಲೇ ಅವುಗಳಿಗೆ ಸ್ವೇಚ್ಛಾಚಾರ ಬೆಳೆಯುತ್ತದೆ. ತಾನು ಏನು ಮಾಡಿದರೂ ಮನೆಯವರು ನಮ್ಮನ್ನು ಪ್ರಶ್ನೆ ಮಾಡುವುದಿಲ್ಲವೆಂಬ ಹುಂಬ ಧೈರ್ಯದಿಂದ ನಿಧಾನವಾಗಿ ದಾರಿ ತಪ್ಪಲು ಶುರು ಮಾಡುತ್ತಾರೆ. ಇದರಲ್ಲಿ ಹೆತ್ತವರ ತಪ್ಪು ತುಂಬಾ ಇದೆ. ಯಾರೇ ಆಗಲಿ ಮಕ್ಕಳಿಗೆ ಚಿಕ್ಕಂದಿನಿಂದಲೇ ಕಷ್ಟದ ಅರಿವು ಮೂಡಿಸಬೇಕು. ಮಕ್ಕಳಿಗೆ ಬರೀ…















