Author: admin
ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾಗಿ ಮೂರನೇ ಅವಧಿಗೆ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ಪುನರಾಯ್ಕೆಗೊಂಡಿದ್ದಾರೆ. ಸಂಘದ ಅಧ್ಯಕ್ಷರಾಗಿ ಈ ಹಿಂದಿನ ಅವಧಿಗಳಲ್ಲಿ ಇವರು ಸಂಘದ ಸಭಾಭವನಗಳಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಸಿರಿಮುಡಿ ಕೋ ಆಪರೇಟಿವ್ ಸೊಸೈಟಿ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿದ್ದರು. ಈ ಅವಧಿಯಲ್ಲಿ ಸಂಘದ 15 ಕೋಟಿಗಳ ಮಹತ್ವಾಕಾಂಕ್ಷೆಯ ಬಂಟಾಶ್ರಯ ಯೋಜನೆಗೆ ಮುಂದಿನ ತಿಂಗಳಿನಲ್ಲಿ ಭೂಮಿ ಪೂಜೆ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಡಾ| ಶೆಟ್ಟಿ ಅವರು ರಾಜಕೀಯ, ಸಹಕಾರಿ, ಕಂಬಳ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನೂತನ ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪಲ್ಲವಿ, ಶ್ರೀನಾಥ ಹೆಗ್ಡೆ ನಡ್ಸಾಲು ಗುತ್ತು, ಅನಿತ ವಿಶುಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿಯಾಗಿ ರವಿ ಶೆಟ್ಟಿ ಗುಂಡ್ಲಾಡಿ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಪಲಿಮಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನವೀನ್ ಎನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಿವಿಧ ಉಪ ಸಮಿತಿಗಳನ್ನು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಸಂಘದ…
ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ : ಭಾರತ GDP ಯಲ್ಲಿ ಮುಂದಿರುವಾಗ ಮಾನವ ಹಕ್ಕುಗಳಲ್ಲಿ ಹಿಂದುಳಿಯುವುದೇಕೆ? ವಿಚಾರ ಸಂಕಿರಣ
ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಸಹ ಘಟಕವಾದ ಯುನಿವರ್ಸಲ್ ಸ್ಕೂಲ್ ಆಫ್ ಲಾ ವತಿಯಿಂದ ಭಾರತ GDP ಯಲ್ಲಿ ಮುಂದಿರುವಾಗ ಮಾನವ ಹಕ್ಕುಗಳಲ್ಲಿ ಹಿಂದುಳಿಯುವುದೇಕೆ? ಎಂಬ ವಿಷಯದ ಮೇಲೆ ವಿಶೇಷ ಕಾರ್ಯಕ್ರಮವನ್ನು 9 ಡಿಸೆಂಬರ್ 2025 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ನ ಕರ್ನಾಟಕ ಸರ್ಕಾರ ನೌಕರರ ಸಂಘ ಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ಡಾ. ಜಸ್ಟಿಸ್ ಅಶೋಕ್ ಬಿ. ಹಿಂಚಿಗೇರಿ, ಅಧ್ಯಕ್ಷರು ಕರ್ನಾಟಕ ಕಾನೂನು ಆಯೋಗ ಹಾಗೂ ಮಾಜಿ ನ್ಯಾಯಮೂರ್ತಿ ಕರ್ನಾಟಕ ಹೈಕೋರ್ಟ್ ಅವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು, ಆರ್ಥಿಕ ಬೆಳವಣಿಗೆ ಮತ್ತು ಮಾನವ ಹಕ್ಕುಗಳ ಜಾರಿಯ ನಡುವೆ ಸಮತೋಲನ ತರಲು ಬಲವಾದ ಸಂಸ್ಥಾ ಸಂರಚನೆ ಹಾಗೂ ಜನಜಾಗೃತಿ ಅತ್ಯವಶ್ಯಕ ಎಂದು ಹೇಳಿದರು. ಅವರು ಭಾರತದ 40% ಸಂಪತ್ತನ್ನು ಕೇವಲ 1% ಭಾರತೀಯರು ಹೊಂದಿದ್ದಾರೆ ಎಂಬ ಅಸಮಾನತೆಯನ್ನು ಉಲ್ಲೇಖಿಸಿದರು. ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳು ಒಟ್ಟಿಗೆ ಸಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಮಾನವ ಹಕ್ಕುಗಳು ಮೂಲ…
ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮೂರನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ರಾಜ್ ಬಿ ಶೆಟ್ಟಿ ನಟನೆಯ ʻಲ್ಯಾಂಡ್ಲಾರ್ಡ್ʼ ಸಿನಿಮಾವು ಜನವರಿ 23 ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ‘ರೂಲರ್’ ಎಂಬ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಲ್ಯಾಂಡ್ಲಾರ್ಡ್’ ನಿರ್ದೇಶಕ ಜಡೇಶ್ ಕೆ ಹಂಪಿ ಅವರೊಂದಿಗೆ ಕೆಲಸ ಮಾಡಿದ್ದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ ರಾಜ್. ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಬಹಳ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೂಡ ನಟಿಸುತ್ತಿರುವುದು ಈಗ ನಿರೀಕ್ಷೆ ಡಬಲ್ ಆಗಲು ಕಾರಣವಾಗಿದೆ. ಹೌದು, ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ರೂಲರ್ ಆಗಿ ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ಮಿಂಚಲಿದ್ದಾರೆ. ಈಚೆಗೆ ರಾಜ್ ಬಿ ಶೆಟ್ಟಿ ಅವರ ಪಾತ್ರದ ಟೀಸರ್ ರಿಲೀಸ್ ಆಗಿದೆ. ಈ ಬಾರಿ ವಿಗ್ ಧರಿಸಿ, ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ ರಾಜ್ ಬಿ ಶೆಟ್ಟಿ. ರಾಜ್ ಬಿ ಶೆಟ್ಟಿ ಹೇಳಿದ್ದೇನು? “ನಾನು ಈ ಚಿತ್ರ ಒಪ್ಪಿಕೊಳ್ಳಲು ಮೊದಲ ಕಾರಣ ನಿರ್ದೇಶಕ ಜಡೇಶ್. ಒಬ್ಬ ನಿರ್ದೇಶಕ ಗೆಲ್ಲಲ್ಲೇಬೇಕು ಎಂದು ಬಯಸುವವನು ನಾನು. ಈ…
ಹುಟ್ಟು ನಿಶ್ಚಿತ ಸಾವು ಖಚಿತ ಆದರೆ ಅದಕ್ಕೊಂದು ಕರುಣೆ ಇಲ್ಲ. ವಯಸ್ಸಿನ ಲೆಕ್ಕಾಚಾರವನ್ನು ಹಾಕಲ್ಲ. ಬೈಕಾಡಿ ಜೀವನ್ ಶೆಟ್ರು ಉಡುಪಿ ಜಿಲ್ಲೆಯ ಪ್ರಸಿದ್ಧ ಪಿಡಬ್ಲ್ಯೂಡಿ ಗುತ್ತಿಗೆದಾರರು. ಅದೆಷ್ಟೋ ಜನರು ತಮ್ಮೂರಿಗೊಂದು ರಸ್ತೆ ಸ್ಯಾಂಕ್ಷನ್ ಆದಾಗ ಅದರ ಗುತ್ತಿಗೆ ಬೈಕಾಡಿ ಜೀವನಣ್ಣನಿಗೆ ಸಿಗಲಿ ಅಂತ ಪ್ರಾರ್ಥಿಸಿದವರಿದ್ದಾರೆ. ಎಲ್ಲೇ ರಸ್ತೆ ನಿರ್ಮಾಣ ಕಾಮಗಾರಿ ಆದರೂ ಕೂಡ ಎಲ್ಲಾ ಗುತ್ತಿಗೆದಾರರಿಗಿಂತ ಹೆಚ್ಚು ಹಣವನ್ನು ರಸ್ತೆಗೆ ಹಾಕಿ ಗುಣಮಟ್ಟದ ಕಾಮಗಾರಿಯನ್ನು ಮಾಡಿ ಎಲ್ಲಾ ಸ್ಥರದ ಜನರಿಂದಲೂ ಸೈ ಅನಿಸಿಕೊಂಡವರು. ನೀಳಕಾಯದ ನಗುಮೊಗದ ಶುಭ್ರ ವಸ್ತ್ರಧಾರಿಯಾಗಿರುತ್ತಿದ್ದ ಜೀವನಣ್ಣನನ್ನು ನೋಡುವಾಗಲೇ ಎಂಥವರಲ್ಲೂ ಗೌರವ ಹೊರ ಹೊಮ್ಮುತ್ತಿತ್ತು. ಎಳ್ಳಂಪಳ್ಳಿ ರಸ್ತೆ ಕಾಮಗಾರಿಯಾಗುವಾಗ ಮುಂಜಾನೆ ಬಂದು ಅರ್ಧ ತೋಳಿನ ಬಿಳಿಯಂಗಿಯನ್ನು ತೊಟ್ಟು ಕೆಲಸಗಾರರಿಗೆ ಸೂಚನೆಯನ್ನು ಕೊಡುತ್ತಿದ್ದ ಅವರಿಗೊಂದು ನಮಸ್ಕಾರ ಮಾಡಿ ನಾನು ಶಾಲಾ ಕರ್ತವ್ಯಕ್ಕೆ ಮುಂದುವರಿಯುತ್ತಿದ್ದೆ. ಅವರಿಗೆ ನಮಸ್ಕರಿಸುವುದೇ ನಮ್ಮಂಥವರಿಗೆ ಹೆಮ್ಮೆಯ ವಿಷಯವಾಗಿತ್ತು ಮುರಳಿ ಕೃಷ್ಣ ನಾಮಾಂಕಿತದೊಂದಿಗೆ ಕರಾವಳಿಯಲ್ಲಿ ಮಿಂಚಿದ ಪ್ರಸಿದ್ಧ ಕನ್ಸ್ಟ್ರಕ್ಷನ್ ಕಂಪೆನಿ ಇವರದ್ದು. ತಮ್ಮ ಸಂಸ್ಥೆಯ ಮುಖಾಂತರವಾಗಿ ಅದೆಷ್ಟೋ ಜನರಿಗೆ…
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ. ಹರೀಶ್ ಶೆಟ್ಟಿ ಬಂಡ್ಸಾಲೆ ಹಾರಾಡಿ ಗ್ರಾಮದ ಕೆಳಬಣಸಾಲೆ ಮನೆ ರತ್ನಾವತಿ ಶೆಟ್ಟಿ ಹಾಗೂ ಹಳುವಳ್ಳಿ- ಕೋಂಟಿಬೈಲು ಲಕ್ಷಣ ಶೆಟ್ಟಿ ಅವರ ಮಗನಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಹೊನ್ನಾಳ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ಪಡೆದು ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಬ್ರಹ್ಮಾವರದ ಎಸ್ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಪಡೆದಿದ್ದರು. ಹಾರಾಡಿಯ ಡಾ.ಎ.ವಿ ಬಾಳಿಗಾ ಕಾಲೇಜಿನಲ್ಲಿ ಬಿಎಸ್ಡಬ್ಲ್ಯೂ ಮುಗಿಸಿ ಮಂಗಳೂರಿನ ಡಾ. ಎಂ.ವಿ ಶೆಟ್ಟಿ ಕಾಲೇಜಿನಲ್ಲಿ ಎಂ.ಎಸ್.ಡಬ್ಲ್ಯೂ ಪದವಿ ಪಡೆದಿದ್ದರು. ಅಹಮ್ಮದಾಬಾದ್ನ ಐಐಎಂನಲ್ಲಿ ಪಿಎಚ್ಡಿಯನ್ನು ಪ್ರಾರಂಬಿಸಿ ಅಲ್ಲಿಂದ ಇಂಗ್ಲೆಂಡ್ನ ಪ್ರತಿಷ್ಠಿತ ಯೂನಿವರ್ಸಿಟಿ ಆಫ್ ಬಾತ್ನಿಂದ ಸ್ಕಾಲರ್ಶಿಪ್ ಪಡೆದು ಕಟ್ಟಡ ಕಾರ್ಮಿಕರ ಬಗ್ಗೆ ಆಳವಾದ ಅಧ್ಯಯನ ಮಾಡಿ ತಮ್ಮ ಪ್ರಬಂಧವನ್ನು ಮಂಡಿಸಿ, ಯಾವುದೇ ತಿದ್ದುಪಡಿ ಇಲ್ಲದೆ ಮೊದಲ ಹಂತದಲ್ಲೇ ಉತ್ತೀರ್ಣರಾಗಿ…
ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನೊಳಗೊಂಡ ಪ್ರಜಾವಾಣಿ ದಿನಪತ್ರಿಕೆಯನ್ನು ಸರಕಾರಿ ಪ್ರೌಢಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಅಂತಿಮ ಪರೀಕ್ಷೆಯವರೆಗೆ ಪ್ರತಿದಿನ ಪ್ರತಿ ವಿದ್ಯಾರ್ಥಿಗಳಿಗೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ದಿನಪತ್ರಿಕೆಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ರೋಟರಿಯ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯ ಭಾಗವಾಗಿ ಈ ಸವಲತ್ತುಗಳನ್ನು ನೀಡುತ್ತಿದ್ದೇವೆ. ಒಳ್ಳೆಯ ಶಿಕ್ಷಣ ಪಡೆದು ಮುಂದೆ ಉತ್ತಮ ಸಮಾಜ ಸೇವೆ ಮಾಡುವ ಅವಕಾಶ ನಿಮಗೆ ಸಿಗಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಉಪನ್ಯಾಸಕರು, ಪ್ರಜಾವಾಣಿ ಪತ್ರಿಕೆಯ ವರದಿಗಾರರಾದ ಸಿದ್ದಾಪುರ ವಾಸುದೇವ ಭಟ್ ಮಾತನಾಡುತ್ತಾ, ವಿದ್ಯಾರ್ಥಿಗಳು ಮಾತನಾಡಬೇಕು, ಬರೆಯಬೇಕು, ಓದಬೇಕು ಈ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಇಂಟರ್ಯಾಕ್ಟ್ ಕ್ಲಬ್ಬಿನ ಅಧ್ಯಕ್ಷೆ ಸಾಕ್ಷಿ, ಸಮುದಾಯ ಸೇವೆಗಳ ಚೇರ್ಮನ್ ವಸಂತ್ ಎಂ,…
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು ನಿಧನ
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು, ತನ್ನ ನೇರ ನಡೆ- ನುಡಿಗಳಿಂದ ಜನಾನುರಾಗಿಯಾಗಿದ್ದು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರ ಸಹಿತ ಬಂಧು ವರ್ಗ ಮತ್ತು ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.
ಆಳ್ವಾಸ್ ಕಾಲೇಜಿನ ನಿರ್ವಹಣಾ ವಿಭಾಗವು (ಬಿಬಿಎ) ಕಾಲೇಜಿನ ಐಕ್ಯೂಎಸಿ ಅಡಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವುವನ್ನು ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು. ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ವರುಣ್ರಾಜು ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಶೂನ್ಯ ಅನುಭವದಿಂದ ಆರಂಭಿಸುವುದು ಸಹಜ. ಆದರೆ ಶೂನ್ಯದಿಂದ ಆರಂಭಿಸುವುದು ಮುಖ್ಯವಲ್ಲ, ಮೌಲ್ಯಯುತ ಅನುಭವಗಳಿಂದ ಜೀವನ ರೂಪಿಸಿಕೊಳ್ಳುವುದು ಅಗತ್ಯ. 2015ರಲ್ಲಿ ನಾನು ಈ ಸಂಸ್ಥೆಗೆ ಸೇರಿದಾಗ ಸಂವಹನ ಕೌಶಲ್ಯವೂ ಸೇರಿದಂತೆ ಅನೇಕ ವಿಷಯಗಳಲ್ಲಿ ಆತ್ಮವಿಶ್ವಾಸದ ಕೊರತೆ ಇತ್ತು. ಆದರೆ ಅವಕಾಶಗಳನ್ನು ಸ್ವೀಕರಿಸಿ, ತೊಡಗಿಸಿಕೊಳ್ಳುವುದರ ಮೂಲಕ ಜೀವನಕ್ಕೆ ದೊಡ್ಡ ತಿರುವು ಲಭಿಸಿತು. ಅವಕಾಶಗಳನ್ನು ಕೈಬಿಟ್ಟರೆ, ನಾವು ಅದೇ ಸ್ಥಾನದಲ್ಲೇ ಉಳಿಯುತ್ತೇವೆ. ಆದರೆ ಅವಕಾಶಗಳನ್ನು ಸ್ವೀಕರಿಸಿ ತೊಡಗಿಸಿಕೊಂಡಾಗ, ಜೀವನಕ್ಕೆ ಹೊಸ ಅರ್ಥ ದೊರೆಯುತ್ತದೆ. ಅಲ್ಲಿ ಸವಾಲುಗಳಿರುತ್ತವೆ, ವೈಫಲ್ಯಗಳಿರುತ್ತವೆ, ಆದರೆ ಆ ವೈಫಲ್ಯಗಳೇ ಜೀವನಕ್ಕೆಅನುಭವ, ಅನುಭವವೇ ಜ್ಞಾನ, ಮತ್ತು ಜ್ಞಾನವೇ ಯಶಸ್ಸಿನ ಮಾರ್ಗ ತೋರಿಸುತ್ತದೆ ಎಂದರು. ಜರ್ಮನಿಯಲ್ಲಿ ಉದ್ಯೋಗದಲ್ಲಿರುವ ಇನ್ನೊರ್ವ ಹಿರಿಯ ವಿದ್ಯಾರ್ಥಿನಿ ವಂದನಾ ಮಾತನಾಡಿ, ಕಾರ್ಪೊರೇಟ್ ಜೀವನಕ್ಕೂ ವಿದ್ಯಾರ್ಥಿ ಜೀವನಕ್ಕೂ ಬಹಳಷ್ಟು…
ಯಕ್ಷಗಾನ ಕಲೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಂರಕ್ಷಣೆ, ಸಂವರ್ಧನೆ ಮತ್ತು ವಿಸ್ತರಣೆ ಮಾಡಿ ಮುಂದಿನ ಜನಾಂಗಕ್ಕೆ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಯಕ್ಷಗಾನದ ಗುಣಮಟ್ಟ ಮತ್ತು ಸೌಂದರ್ಯವನ್ನು ವರ್ಧಿಸುವ ಕೆಲಸವನ್ನು ತಿರುಗಾಟಕ್ಕೆ ಹೊರಟ ಸೂಡ ಮೇಳ ನಡೆಸುತ್ತಿದ್ದು, ಕಲಾವಿದರಿಗೆ ಉತ್ತಮ ವೇದಿಕೆ ಒದಗಿಸಿ, ಜನರಿಗೆ ಕಲಾ ಸಂಸ್ಕಾರ ನೀಡುವ ಪ್ರಯತ್ನ ಮಾಡಿದೆ ಎಂದು ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಮತ್ತು ಬಹುಶ್ರುತ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದರು. ಸೂಡ ಮಯೂರ ವಾಹನ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ದಶಮ ಸಂಭ್ರಮ, ಸಪ್ತಾಹ ಮತ್ತು 10ನೇ ವರ್ಷದ ತಿರುಗಾಟ ಶುಭಾರಂಭ ಸಂದರ್ಭ ಸೂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ ಮೇಳದ ಸಂಚಾಲಕ ಮತ್ತು ಭಾಗವತ ಸೂಡ ಹರೀಶ್…















