Author: admin
ಹೆಬ್ರಿಯಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ (8 ರಿಂದ 12ನೇ ತರಗತಿ) ‘ಪ್ರತಿಭಾ ಕಾರಂಜಿ’ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ‘ಕನ್ನಡ ಕವನ ವಾಚನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶ್ರೀಶಾಂತ್ ಮತ್ತು ‘ಸಂಸ್ಕೃತ ಧಾರ್ಮಿಕ ಪಠಣ’ದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ಕಾರಂತ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು. ʼಕನ್ನಡ ಭಾಷಣʼ ಸ್ಪರ್ಧೆಯಲ್ಲಿ ಸ್ಪೂರ್ತಿ ದ್ವಿತೀಯ ಸ್ಥಾನ ʼಮಿಮಿಕ್ರಿʼಯಲ್ಲಿ ಮಿಥಿಲ್ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ…
ಬಜಪೆ ಬಂಟರ ಸಂಘದ ಯುವಕರ ಹಾಗೂ ಹಿರಿಯರ ನಿರಂತರ ಪ್ರಯತ್ನ ಪರಿಶ್ರಮ ಇಂದಿನ ಈ ಕಾರ್ಯಕ್ರಮವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು. ಅವರು ರವಿವಾರ ಮುಂಡಾರು ತಾರಿಕಂಬ್ಳದ ಬಂಟರ ಸಂಘ ಬಜಪೆ ವಲಯದ ಮೈದಾನದಲ್ಲಿ ಬಂಟರ ಸಂಘ ಬಜಪೆ ವಲಯದ ಆಶಯದಲ್ಲಿ ನಡೆದ ರಾಷ್ಟ್ರೀಯ ಬಂಟರ ಕಲಾ ವೈಭವ, ನೂತನ ಅಧ್ಯಕ್ಷ ಕರಂಬಾರು ಪಡುಮನೆ ವೇಣುಗೋಪಾಲ ಎಲ್ ಶೆಟ್ಟಿ ಅವರ ಪದಗ್ರಹಣ ಸಮಾರಂಭ, ರಾಷ್ಟ್ರೀಯ ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ ಪಾಲ್ದಟ್ಟೆಡ್ ಬಂಟೆರೆ ಪರ್ಬ 2025 ಕಾರ್ಯಕ್ರಮದಲ್ಲಿ ಮಾತನಾಡಿದರು. ವೇಣುಗೋಪಾಲ್ ಎಲ್ ಶೆಟ್ಟಿ ಅವರನ್ನು ಅಧ್ಯಕ್ಷ ಮಾಡುವ ಇಲ್ಲಿನ ಬಂಟರ ಪ್ರಯತ್ನ ಇಂದು ಸಾಕಾರಗೊಂಡಿದೆ. ಸಂಘ ಸಂಸ್ಥೆಯಲ್ಲಿ ಸಣ್ಣ ಸಣ್ಣ ಭಿನ್ನಮತ ಇದ್ದದ್ದೆ. ಅವುಗಳನ್ನು ಪರಿಹಾರ ಮಾಡಿ ಸಹಮತ ಏಕತೆಯ ಮೂಲಕ ಕಾರ್ಯವೆಸಗಬೇಕು ಎಂದು ಅವರು ಹೇಳಿದರು. ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರು ಗುತ್ತು, ಮುಡಾರೆ…
ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ ಎಂದರು. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದೆಂದು ಹೇಳಿದರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು ಈ ಸಂದರ್ಭಗಳಲ್ಲಿ…
ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್, ಜಿ ಎಮ್ ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಮತ್ತು ಚೇರ್ಕಾಡಿ ಅಥ್ಲೆಟಿಕ್ಸ್ ಫಿಟ್ನೆಸ್ ಸೆಂಟರ್ ನ ಸಹಯೋಗದಲ್ಲಿ ಅಂತರ್ ಜಿಲ್ಲಾ ಮಕ್ಕಳ ಅಥ್ಲೆಟಿಕ್ಸ್ ಡಿಸೆಂಬರ್ 28, 2025 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀ ಚಂದ್ರಶೇಖರ ಶೆಟ್ಟಿ ಆಗಮಿಸಿ ದೀಪ ಬೆಳಗಿಸಿ ದೈಹಿಕ ಚಟುವಟಿಕೆ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಶರೀರದ ದೃಢತೆಯನ್ನು ಕಾಪಾಡಿಕೊಳ್ಳಬಹುದು. ಒಬ್ಬ ಸಮರ್ಥ ಕ್ರೀಡಾಪಟುವಿನಲ್ಲಿ ಕೌಶಲ, ತಂತ್ರ ಮತ್ತು ಯುಕ್ತಿ ಎಂಬ ಮೂರು ಅಂಶಗಳಿರುತ್ತವೆ. ನಮ್ಮ ಶರೀರದಲ್ಲಿರುವ ಔಷದೀಯ ಕಾರ್ಖಾನೆಗಳನ್ನು ಉತ್ಪಾದಕ ಘಟಕಗಳನ್ನಾಗಿ ಪರಿವರ್ತಿಸಲು ಕ್ರೀಡಾ ಚಟುವಟಿಕೆ ಅತ್ಯಗತ್ಯ ಎಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಮಾತನಾಡಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು, ತರಬೇತುದಾರರು ಮತ್ತು ಪೆÇೀಷಕರ ಸಹಭಾಗಿತ್ವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ 25ಕ್ಕೂ ಅಧಿಕ ವಿವಿಧ ಜಿಲ್ಲೆಗಳ ಕ್ರೀಡಾ ಕೇಂದ್ರಗಳಿಂದ 8…
ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರ ಇಲ್ಲಿ ಗಣಿತ ತಜ್ಞ ಶ್ರೀನಿವಾಸ್ ರಾಮಾನುಜನ್ ಜನ್ಮದಿನವಾದ ರಾಷ್ಟ್ರೀಯ ಗಣಿತ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭ ನಿವೃತ್ತ ಯೋಧ ಶ್ರೀ ಪ್ರವೀಣ್ ಶೆಟ್ಟಿ ಮತ್ತು ಭಾರತದ ವಾಲಿಬಾಲ್ ತಂಡದ ನಾಯಕಿ ಕು.ಶಗುನ್ ವರ್ಮ ಹೆಗ್ಡೆಯವರನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪರವಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಗೌರವಿಸಲಾಯಿತು. ನಿವೃತ್ತ ಯೋಧ ಪ್ರವೀಣ್ ಶೆಟ್ಟಿ ಮಾತನಾಡಿ ಯಾರು ತಂದೆ–ತಾಯಿ, ಗುರು-ಹಿರಿಯರನ್ನು ಗೌರವಿಸುವವರು ದೇಶವನ್ನು, ವೀರಯೋಧರನ್ನು ಗೌರವಿಸುತ್ತಾರೆ. ವಿದ್ಯಾರ್ಥಿದೆಸೆಯಲ್ಲಿಯೇ ದೇಶಾಭಿಮಾನ ಬೆಳೆಸಬೇಕೆಂದು ಕರೆಕೊಟ್ಟರು. ಗಣಿತದಿನಾಚರಣೆಯ ಶುಭಸಂದರ್ಭ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಬಿ ಪದ್ಮನಾಭ ಗೌಡರವರು ಮಾತನಾಡಿ, ಭಾರತದ ಖ್ಯಾತ ಗಣಿತಶಾಸ್ತ್ರಜ್ಞರಾದ ಆರ್ಯಭಟ, ಬ್ರಹ್ಮಗುಪ್ತ, ಶ್ರೀಧರ, ಭಾಸ್ಕರ- 2, ಸಿ.ಆರ್ ರಾವ್, ಡಾ.ಕಪ್ರೇಕರ್, ಹರಿಶ್ಚಂದ್ರ, ನರೇಂದ್ರ ಕರ್ಮರ್ಕರ್ ಇವರು ಗಣಿತಶಾಸ್ತ್ರಕ್ಕೆ ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಶ್ರೀನಿವಾಸ ರಾಮಾನುಜನ್ ಭಾರತದ ಮಹಾನ್ ಗಣಿತ ಶಾಸ್ತ್ರಜ್ಞರಾಗಿದ್ದು ಸಂಖ್ಯಾ…
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಬಂಟರ ಸಂಘಟನೆ ಬಜಪೆ ವಲಯ ಬಂಟರ ಸಂಘವು ಹಮ್ಮಿಕೊಂಡ ರಾಷ್ಟ್ರೀಯ ಬಂಟರ ಕಲಾ ವೈಭವ ಸಾಂಸ್ಕೃತಿಕ ಸ್ಫರ್ಧೆ ಜೊತೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ವೇಣುಗೋಪಾಲ ಎಲ್ ಶೆಟ್ಟಿ ಅವರ ಪದಗ್ರಹಣ ಸಮಾರಂಭವು ಡಿಸೆಂಬರ್ 28ರ ಬೆಳಿಗ್ಗೆ ಆರಂಭಗೊಂಡು, ಕಾರ್ಯಕ್ರಮವು ದಿನಪೂರ್ತಿ ನಡೆಯಲಿದ್ದು, ಬಂಟ ಸಮಾಜದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ದೀಪ ಪ್ರಜ್ವಲನೆಗೈಯ್ಯುವರು. ಜಾಗತಿಕ ಬಂಟರ ಒಕ್ಕೂಟಗಳ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಗೌರವಾಧ್ಯಕ್ಷ ವಿಜಯನಾಥ್ ವಿಠ್ಠಲ್ ಶೆಟ್ಟಿಯವರು ಧ್ವಜಾರೋಹನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಂಟರ ಸಂಘ ಬಜಪೆ ವಲಯಾಧ್ಯಕ್ಷ ಶ್ರೀ ಬಾಬು ಶೆಟ್ಟಿ ಪೆರಾರ ಸಭಾಧ್ಯಕ್ಷತೆ ವಹಿಸಿಕೊಳ್ಳುತ್ತಾರೆ. ಇದೇ ಘನಸಿರಿ ಸಭೆಯಲ್ಲಿ ಥಾಣೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಬಹುಶ್ರುತ ಹೊಟೇಲ್ ಉದ್ಯಮಿ, ಸಮಾಜಮುಖಿ ಸಂಘಟಕ ಶ್ರೀ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಆಳ್ವಾಸ್ ಕಾನೂನು ಕಾಲೇಜು ಹಾಗೂ ಆಳ್ವಾಸ್ ಮಾನವಿಕ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕ್ಯಾಂಪಸ್ ಪಾರ್ಲಿಮೆಂಟ್ – 2025 (ಸಂಸತ್ ಶೈಲಿಯಲ್ಲಿ ಚರ್ಚಿಸುವ ಪ್ರಜಾತಾಂತ್ರಿಕ ವ್ಯವಸ್ಥೆಯ ಚಟುವಟಿಕೆ) ಕಾರ್ಯಕ್ರಮ ಆಳ್ವಾಸ್ ಆವರಣದ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧಿಯಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಕ್ಕು ಮತ್ತು ಕರ್ತವ್ಯಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಹಕ್ಕುಗಳನ್ನು ಅನುಭವಿಸಲು ಅವಕಾಶ ದೊರಕುವಾಗ, ಸಮಾಜದ ಹಿತಕ್ಕಾಗಿ ಕರ್ತವ್ಯ ನಿರ್ವಹಿಸುವ ಹೊಣೆಗಾರಿಕೆಯೂ ನಮ್ಮ ಮೇಲಿದೆ. ಹಕ್ಕುಗಳನ್ನು ಮಾತ್ರ ಒತ್ತಾಯಿಸಿ, ಕರ್ತವ್ಯಗಳನ್ನು ನಿರ್ಲಕ್ಷಿಸಿದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತದೆ. ಆದ್ದರಿಂದಲೇ ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಗೆ ಸಾಗಬೇಕು. ಹಕ್ಕಿನಿಂದಾಗಿ ನಾವು ಏನು ಪಡೆಯುತ್ತೇವೋ, ಕರ್ತವ್ಯಗಳಿಂದಾಗಿ ದೇಶ ಏನು ಪಡೆಯುತ್ತದೆ ಎಂಬ ಅರಿವು ಮೂಡಿದಾಗ ನಾವು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುತ್ತೇವೆ ಎಂದರು. ನಮ್ಮ ದೇಶ ಅಭಿವೃದ್ಧಿಯ ಪಥದಲ್ಲೇ ಸಾಗುತ್ತಿದೆ. ಈ ಪಯಣದಲ್ಲಿ ಪ್ರಜಾಪ್ರಭುತ್ವವು ನಮ್ಮನ್ನು ಒಗ್ಗೂಡಿಸಿ,…
ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಂತರಿಕ ಸಮಿತಿಯಿಂದ ‘ಮಹಿಳಾ ಸಬಲೀಕರಣ ಮತ್ತು ವೈಚಾರಿಕ ಪ್ರಜ್ಞೆ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಉಡುಪಿ ಅಜ್ಜರಕಾಡಿನ ಡಾ| ಜಿ ಶಂಕರ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ಪ್ರಾಧ್ಯಾಪಕಿ ಡಾ. ನಿಕೇತನ ಮಾತನಾಡಿ, ವೈಚಾರಿಕ ಪ್ರಜ್ಞೆಗೂ ವೈಜ್ಞಾನಿಕ ಮನೋಭಾವಕ್ಕೂ ಪರಸ್ಪರ ಸಂಬಂಧವಿದೆ. ವೈಚಾರಿಕ ಪ್ರಜ್ಞೆಯಿಂದ ಸತ್ಯದ ಶೋಧನೆಯಾಗುತ್ತದೆ. ಪ್ರಶ್ನಿಸುವ ಗುಣ ನಮ್ಮನ್ನು ವೈಚಾರಿಕತೆಯತ್ತಾ ಕೊಂಡೊಯ್ಯುತ್ತದೆ. ಮಹಿಳಾ ಸಬಲೀಕರಣ ಎಂದರೆ ಗಂಡು ಮತ್ತು ಹೆಣ್ಣು ಪರಸ್ಪರ ಪೂರಕವಾಗಿ ಬದುಕುವುದು. ಹಿಂದಿನ ಪೀಳಿಗೆಯ ಸಬಲೀಕರಣದ ಕುರಿತಾದ ಹೋರಾಟದ ಫಲವಾಗಿ ಇಂದು ಮಹಿಳೆಯರಿಗೆ ಸಮಾನತೆ ಸಿಗುತ್ತಿದೆ. ಹೆಣ್ಣು ಮತ್ತು ಗಂಡಿನ ನಡುವೆ ಜೈವಿಕ ವ್ಯತ್ಯಾಸ ಸಹಜ. ಆದರೆ ಸಾಂಸ್ಕೃತಿಕ ಭೇದ ಸಮಾಜ ಮಾಡಿದ್ದು. ಹೆಣ್ಣನ್ನು ದ್ವಿತೀಯ ದರ್ಜೆಯ ವ್ಯಕ್ತಿಯನ್ನಾಗಿ ನೋಡುವ ದೃಷ್ಠಿ ಅತ್ಯಂತ ಹೀನ ಪ್ರವೃತ್ತಿ. ಇಂತಹ ಸಂದರ್ಭದಲ್ಲಿ ವೈಚಾರಿಕ ಪ್ರಜ್ಞೆಯಿಂದ ಸಮಾಜದ ಸಮಸ್ಯೆಗಳ ಸುಧಾರಣೆ…
ನಮ್ಮ ನೆಲದ ಅಸ್ಮಿತೆ, ತುಳುನಾಡಿನ ಸಾಂಸ್ಕೃತಿಕ ಜನಪದ ವೈಭವದ ಸಂಕೇತವಾದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದ ‘ಮಂಗಳೂರು ಕಂಬಳ’ಕ್ಕೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ‘ರಾಮ-ಲಕ್ಷ್ಮಣ’ ಜೋಡುಕರೆಯಲ್ಲಿ ಭವ್ಯ ಚಾಲನೆ ದೊರೆಯಿತು. ಈ ಬಾರಿಯ ಕಂಬಳವು ಕೇವಲ ಕ್ರೀಡೆಯಾಗಿ ಉಳಿಯದೆ, ‘ನವ ವೈವಿಧ್ಯ’ ಎಂಬ ಪರಿಕಲ್ಪನೆಯಡಿ ಸಂಪ್ರದಾಯ ಮತ್ತು ಆಧುನಿಕತೆಯ ಅದ್ಭುತ ಸಂಗಮಕ್ಕೆ ವೇದಿಕೆಯಾಯಿತು. ಕೆಸರು ಗದ್ದೆಯ ವೀರ ಕ್ರೀಡೆಯ ಜೊತೆಗೆ ಈ ಬಾರಿ ಹಮ್ಮಿಕೊಳ್ಳಲಾದ ವಿನೂತನ ಚಟುವಟಿಕೆಗಳು ಕಂಬಳದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿವೆ.
ಮುಲುಂಡ್ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ 40 ಅಂತಿಮ ಸ್ಪರ್ಧಿಗಳು ಭಾಗವಹಿಸಿದ್ದ ಈ ನಾಲ್ಕು ದಿನಗಳ ಸ್ಪರ್ಧೆಯಲ್ಲಿ ಪ್ರತಿಭಾ ಸುತ್ತು, ಪ್ರೇರಣಾದಾಯಕ ಜೀವನ ಕಥೆ, ವೈಯಕ್ತಿಕ ಸಂದರ್ಶನ, ರ್ಯಾಂಪ್ ವಾಕ್, ರಾಷ್ಟ್ರೀಯ ವೇಷಭೂಷಣ, ಸಾಂಪ್ರದಾಯಿಕ ಸುತ್ತು ಹಾಗೂ ಈವಿನಿಂಗ್ ಗೌನ್ ಸುತ್ತುಗಳ ಮೂಲಕ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು. ರಾಷ್ಟ್ರಮಟ್ಟದ ವೇದಿಕೆಯಲ್ಲಿ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ತೋರಿದ ಆತ್ಮವಿಶ್ವಾಸ, ಸಮರ್ಪಣೆ ಮತ್ತು ಸರ್ವತೋಮುಖ ಶ್ರೇಷ್ಠತೆ ಈ ಗೌರವಕ್ಕೆ ಕಾರಣವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.…















