Author: admin
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅತ್ತೂರು ಕೆಮ್ರಾಲ್ ಕಿಲೆಂಜೂರು ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ದೇವಸ್ಥಾನದ ಮಹಾದ್ವಾರ ಹಾಗೂ ನವೀಕೃತಗೊಂಡ ಹವಾನಿಯಂತ್ರಿತ ಆಶಾಲತಾ ನಾರಾಯಣ ಶೆಟ್ಟಿ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ, ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷರಾದ ಡಾ. ಪದ್ಮನಾಭ ವಿ ಶೆಟ್ಟಿಯವರನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂಧರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ದೇವಸ್ಥಾನದ ಮೊಕ್ತೇಸರ ಅತ್ತೂರು ಬಾಳಿಕೆ ಭಂಡಾರ ಮನೆ ರಾಜೇಶ್ ಶೆಟ್ಟಿ, ಕೃಷ್ಣ ಪ್ಯಾಲೇಸ್ ನ ಸಿಎಂಡಿ ಕೃಷ್ಣ ವೈ ಶೆಟ್ಟಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯವರು ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಬಂಟ ಸಮುದಾಯವು ಶಿಕ್ಷಣ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂತಹ ಕ್ರೀಡಾ ಕಾರ್ಯಕ್ರಮಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು. ಈ ಕ್ರೀಡೋತ್ಸವದಲ್ಲಿ ವಿವಿಧ ವಯೋಮಾನದವರಿಗೆ ತಕ್ಕಂತೆ ಹಲವು ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳೂ ಸಹ ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ವಿಠಲ್ ಹೆಗ್ಡೆ, ಅಧ್ಯಕ್ಷ ವಿಜಯ ಶೆಟ್ಟಿ, ಬಂಟ…
ಕಂಪ್ಯೂಟರ್ ಜ್ಞಾನ ಇಂದು ನಿತ್ಯ ಜೀವನಕ್ಕೆ ಅವಶ್ಯವಾಗಿದೆ. ಕಂಪ್ಯೂಟರ್ ಸಾಕ್ಷರರಿಗೆ ನಾನಾ ಕ್ಷೇತ್ರಗಳಲ್ಲಿ ವಿಪುಲ ಅವಕಾಶವಿದ್ದು, ಮಹಿಳಾ ಸಬಲೀಕರಣಕ್ಕೂ ಇದು ದಾರಿಯಾಗಿದೆ. ಆದರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ ಅಗತ್ಯವಿದ್ದು, ಆ ಬಗ್ಗೆ ವಿಶೇಷ ಮುತುವರ್ಜಿ ವಹಿಸಬೇಕು. ನಮ್ಮ ಕೌಶಲ್ಯವನ್ನು ಸಮಯಕ್ಕೆ ಸರಿಯಾಗಿ ಉನ್ನತೀಕರಿಸಿಕೊಳ್ಳಬೇಕು ಎಂದು ಬಹರೈನ್ ಔಮಾ ಮಿಡಲ್ ಈಸ್ಟ್ ಸಂಸ್ಥೆಯ ಆಡಳಿತ ನಿರ್ದೇಶಕ ನವೀನ್ ಶೆಟ್ಟಿ ಹೇಳಿದರು. ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುವ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮದ 21ನೇ ಬ್ಯಾಚ್ ಉದ್ಘಾಟಿಸಿ ಮಾತನಾಡಿದರು. ದೆಂದೂರು ಕಟ್ಟೆ ಭಾರತಿ ಸಾಫ್ಟ್ ವೇರ್ ಆಡಳಿತ ನಿರ್ದೇಶಕ ಕಿರಣ್ ನಾಯಕ್ ಮಾತನಾಡಿ, ಕಂಪ್ಯೂಟರ್ ಬಳಿಕ ಬಂದಿರುವ ಕೃತಕ ಬುದ್ಧಿಮತ್ತೆ ಇಂದಿನ ಯುವ ಜನತೆಗೆ ಸವಲಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ವಿರುದ್ಧ ಹೋರಾಡುವ ಕ್ಷಮತೆ ಬೆಳೆಸಿಕೊಳ್ಳಬೇಕು. ಅಡ್ವಾನ್ಸ್ ತರಬೇತಿ ಪಡೆಯುವ ಮೂಲಕ ಅದು…
ಶ್ರೀ ತುಳುವೇಶ್ವರ ದೇವಸ್ಥಾನ ಬಸ್ರೂರಿನಲ್ಲಿ ಮೇ 2ರಿಂದ ನಡೆಯಬೇಕಿದ್ದ ಅಷ್ಟಮಂಗಲ ಪ್ರಶ್ನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಎಚ್.ಕೆ ದೇವಾನಂದ ಶೆಟ್ಟಿಯವರು ತಿಳಿಸಿದ್ದಾರೆ. ಈ ಕುರಿತು ಜ್ಯೋತಿಷ್ಯರ ಸಮ್ಮುಖದಲ್ಲಿ ನಡೆದ ಪ್ರಶ್ನೆ ಚಿಂತನೆ ಪ್ರಕಾರ, ಶ್ರೀ ಚಕ್ರ ಸಾನಿಧ್ಯ ಹೊಂದಿರುವ ದೇವಿ ತುಳುವೇಶ್ವರಿ ಸಾನಿಧ್ಯದ ಅಭಿವೃದ್ಧಿ ನಡೆದ ನಂತರವೇ ತುಳುವೇಶ್ವರನ ಸಾನಿಧ್ಯದ ಪೂರ್ಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ದೈವಜ್ಞರ ಸಂದೇಶ ಲಭಿಸಿದೆ. ಆದ್ದರಿಂದ ಮೊದಲಿಗೆ ತುಳುವೇಶ್ವರಿ ಸಾನಿಧ್ಯದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಪ್ರಕ್ರಿಯೆಗಳನ್ನು ಪ್ರಾರಂಭಿಸಿ, ಆ ಕಾರ್ಯಗಳು ಪೂರ್ಣಗೊಂಡ ನಂತರವೇ ತುಳುವೇಶ್ವರ ದೇವರ ಮುಂದಿನ ಕಾರ್ಯಗಳನ್ನು ಕೈಗೊಳ್ಳಬೇಕೆಂದು, ಹಾಗೆಯೇ ಭೂದಾನ ಸೇವೆಯನ್ನು ಪ್ರಾರಂಭಿಸಿ ತುಳುವೇಶ್ವರನ ಸುತ್ತಮುತ್ತಲಿನ ಭೂಮಿಯನ್ನು ಮರಳಿ ಪಡೆಯುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಮೇ 2ರಂದು ನಿಗದಿಯಾಗಿದ್ದ ಅಷ್ಟಮಂಗಲ ಪ್ರಶ್ನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತುಳುವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಸಂಚಾಲಕರಾದ ಬೇಲೂರು ದಿನಕರ ಶೆಟ್ಟಿ, ತುಳುವರ್ಲ್ಡ್ ಫೌಂಡೇಶನ್…
ಉಡುಪಿ ಗ್ರಾಮೀಣ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಸಖಾರಾಮ ಶೆಟ್ಟಿಯವರ ಗೌರವಾರ್ಥ ನುಡಿ ನಮನ ಕಾರ್ಯಕ್ರಮವು ಹಾಲಿ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್ ಸಭಾಭವನದಲ್ಲಿ ಏಪ್ರಿಲ್ 24 ರಂದು ನಡೆಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮಾತನಾಡಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಟ್ಟಡ ನಿರ್ಮಾಣ ಸಹಿತ ಸಮಗ್ರ ಅಭ್ಯುದಯಕ್ಕೆ ತೊಡಗಿಸಿಕೊಂಡಿದ್ದ ಸಖಾರಾಮ ಶೆಟ್ಟಿಯವರ ನಾಯಕತ್ವದ ಗುಣದಿಂದ ಊರಿನ ಅಭಿವೃದ್ಧಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದು, ಗ್ರಾಮೀಣ, ಪಟ್ಟಣ, ನಗರ ವ್ಯಾಪ್ತಿಯಲ್ಲಿ ಯಶಸ್ವಿ ಉದ್ಯಮಿಯಾಗಿ ಉದ್ಯೋಗದಾತರಾಗಿದ್ದರು ಎಂದರು. ಸಂಘದ ಕೋಶಾಧಿಕಾರಿ ವಿಜೀತ್ ಶೆಟ್ಟಿ, ಪ್ರಮುಖರಾದ ದಯಾನಂದ ಶೆಟ್ಟಿ ಕಲ್ಮಂಜೆ, ಗೋಪಾಲ ಶೆಟ್ಟಿ ಮೊದಲಾದವರು ನುಡಿ ನಮನ ಸಲ್ಲಿಸಿ ಪುಷ್ಪಾಂಜಲಿ ಸಮರ್ಪಿಸಿದರು. ಈ ಸಂದರ್ಭ ಬಹರೈನ್ ಔಮಾ ಮಿಡ್ಲ್ ಈಸ್ಟ್ ಸಂಸ್ಥೆಯ ಎಂಡಿ ನವೀನ್ ಶೆಟ್ಟಿ ದೆಂದೂರುಕಟ್ಟೆ, ಭಾರತಿ ಸಾಫ್ಟ್…
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಕೆ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಹೇಳಿದರು. ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಟೆಕ್ನಾಲಜಿ ಸೆಂಟರ್ನ ಆಶ್ರಯದಲ್ಲಿ ಹೊರ ತರಲಾದ ನವೋದ್ಯಮಿಗಳ ಪ್ರೇರಣಾದಾಯಕ ಕಥೆಗಳ ವೀಡಿಯೋ ಪಾಡ್ಕಾಸ್ಟ್ ಸರಣಿ ‘ಸಿಲಿಕಾನ್ ಬೀಚ್ ಸ್ಟೋರೀಸ್’ನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕರಾವಳಿ ಕರ್ನಾಟಕವು ವ್ಯಾಪಾರ, ಶಿಕ್ಷಣ ಮತ್ತು ಉದ್ಯಮಶೀಲತೆಯ ಸಮೃದ್ಧ ಪರಂಪರೆಯನ್ನು ಹೊಂದಿದೆ. ಈ ಪರಂಪರೆಯನ್ನು ಹೊಸ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರೂಪುಗೊಂಡಿರುವ ವಿಶಿಷ್ಟ ಉಪಕ್ರಮವೇ ಸಿಲಿಕಾನ್ ಬೀಚ್ ಸ್ಟೋರೀಸ್. ಇದು ಉದಯೋನ್ಮುಖ ಉದ್ಯಮಿಗಳ ಯಶೋಗಾಥೆಗಳನ್ನು ವಿಡಿಯೋ ಮತ್ತು ಪಾಡ್ಕಾಸ್ಟ್ ರೂಪದಲ್ಲಿ ದಾಖಲಿಸಿ ಹಂಚಿಕೊಳ್ಳುವ ಸೃಜನಾತ್ಮಕ ವೇದಿಕೆಯಾಗಿದೆ. ಈ ಯೋಜನೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯಮಶೀಲತಾ ಅಭಿವೃದ್ಧಿ ಘಟಕದ ಮಾರ್ಗದರ್ಶನದಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ನಿರ್ವಹಿಸುತ್ತಿದ್ದಾರೆ. ದೊಡ್ಡ ಕನಸುಗಳನ್ನು ಸಾಧಿಸಲು ಕಠಿಣ ಪರಿಶ್ರಮ, ತಾಳ್ಮೆ ಮತ್ತು ನಿರಂತರ ಪ್ರಯತ್ನ ಅಗತ್ಯ. ಯಾವ ಕೋರ್ಸ್ ಓದುತ್ತೀರಿ ಅಥವಾ ಎಲ್ಲಿ ಓದುತ್ತೀರಿ ಎಂಬುದಕ್ಕಿಂತ ನಿಮ್ಮ ಮನೋಭಾವ, ಶ್ರಮ ಮತ್ತು ಸ್ಥಿರತೆ ಮುಖ್ಯ ಎಂದರು. ಆಳ್ವಾಸ್…
ಎಳೆಯ ಮಕ್ಕಳು ಮನೆ ಮತ್ತು ಶಾಲೆಗಳಲ್ಲಿ ದೊರೆಯುವ ಸಂಸ್ಕಾರ ಹಾಗೂ ಶಿಕ್ಷಣಕ್ಕೆ ಹೊರತಾಗಿ ಸಮಾಜದಿಂದಲೂ ಕಲಿಯುವುದು ಬಹಳಷ್ಟಿದೆ. ರಜಾದಿನಗಳಲ್ಲಿ ಅಲ್ಲಲ್ಲಿ ನಡೆಯುವ ವಿವಿಧ ಶಿಬಿರಗಳಲ್ಲಿ ಸೇರಿಕೊಳ್ಳುವುದರಿಂದ ಮಕ್ಕಳಿಗೆ ಜೀವನ ಕೌಶಲ್ಯದ ಪಾಠ ಲಭಿಸುತ್ತದೆ. ಸೌಹಾರ್ದ ಕಲಾವಿದರಂತಹ ಯುವ ಸಂಘಟನೆಗಳು ಇಂತಹ ಶಿಬಿರಗಳನ್ನು ಸಂಘಟಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿವೆ ಎಂದು ವಿಶ್ರಾಂತ ಪ್ರಾಚಾರ್ಯರು ಹಾಗೂ ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಸೌಹಾರ್ದ ಕಲಾವಿದರು ಕುತ್ತಾರು ಇದರ ವತಿಯಿಂದ ಮುನ್ನೂರು ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ದಿನಗಳ ಕಾಲ ನಡೆಯುವ ‘ಚಿಣ್ಣರ ಚಿಗುರು’ ಮಕ್ಕಳ ಸಂತಸ ಕಲಿಕಾ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮುದಾಯ ಕರ್ನಾಟಕದ ರಾಜ್ಯ ಕಾರ್ಯದರ್ಶಿಯಾದ ಮನೋಜ್ ವಾಮಂಜೂರ್, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಮುನ್ನೂರು ಮುಖ್ಯ ಶಿಕ್ಷಕಿ ಶಕುಂತಲಾ ಎಸ್ ಉಳ್ಳಾಲ್, ವಾಮಂಜೂರು ವಿದ್ಯಾ ಜ್ಯೋತಿ ಶಾಲೆಯ ಶಿಕ್ಷಕಿ ಚಂಚಲಾಕ್ಷಿ ಪದವಿನಂಗಡಿ, ಮುನ್ನೂರು ದ.ಕ.ಜಿ ಪಂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮದ ಮುಖ್ಯ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ – 2026 ಕಾರ್ಯಕ್ರಮ ಮೇ 30 ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ. ಯಕ್ಷಧ್ರುವ ಪಟ್ಲ ಸಂಭ್ರಮ – 2026 ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮಧರ್ಶಿಗಳಾದ ಡಾ| ಯಾಜಿ ನಿರಂಜನ ಭಟ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 8.30 ರಿಂದ 9 ರ ತನಕ ಚೌಕಿ ಪೂಜೆ ಮತ್ತು ಅಬ್ಬರ ತಾಳ, 9 ರಿಂದ 11 ರ ವರೆಗೆ ಭರತ ನಾಟ್ಯ ಪ್ರದರ್ಶನ, 11 ರಿಂದ 1.30 ರ ವರೆಗೆ ಸಭಾ ಕಾರ್ಯಕ್ರಮ, ಮಧ್ಯಾಹ್ನ 1.30 ರಿಂದ 2 ರ ವರೆಗೆ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ವಾಣಿ ಶಾಲಾ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ, ಮಧ್ಯಾಹ್ನ 2ರಿಂದ 3.30 ರ ವರೆಗೆ ಮಹಿಳಾ ಯಕ್ಷಗಾನ, ಸಂಜೆ 3.30 ರಿಂದ 5 ರವರೆಗೆ ಯಕ್ಷಗಾನ ಹಾಸ್ಯ ವೈಭವ ನಡೆಯಲಿದೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ…
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದ ಟೆಕ್ನಾಲಜಿ ಸೆಂಟರ್ನಲ್ಲಿ ಮೆಟಾಸಾಫ್ಟ್ ಐಟಿ ಸೊಲ್ಯೂಷನ್ಸ್ ಹಾಗೂ ಕಾಕುಂಜೆ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ಹೊಸ ಕಚೇರಿ ಹಾಗೂ ಸಂಶೋಧನೆ – ನವೀನತೆ ಕೇಂದ್ರವನ್ನು ಉದ್ಘಾಟಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೊಸ ಕಚೇರಿ ಉದ್ಘಾಟಿಸಿ ಮಾತನಾಡಿ, ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ತಂತ್ರಜ್ಞಾನ, ಸಂಶೋಧನೆ ಹಾಗೂ ಉದ್ಯೋಗಾವಕಾಶಗಳ ಸಮಗ್ರ ಪರಿಸರವನ್ನು ಒದಗಿಸುವ ವಿಶಿಷ್ಟ ಕ್ಯಾಂಪಸ್ ಆಗಿ ಹೊರಹೊಮ್ಮಿದೆ. ಇಲ್ಲಿ ಸ್ಥಾಪಿಸಿರುವ ವಿವಿಧ ಐಟಿ ಕಂಪನಿಗಳು ಮತ್ತು ಸ್ಟಾರ್ಟ್ಅಪ್ಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಈ ಕೇಂದ್ರವು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್, ಪ್ರಾಜೆಕ್ಟ್, ಉದ್ಯೋಗಾವಕಾಶಗಳು ಹಾಗೂ ಸಂಶೋಧನೆ -ನವೀನತೆ ಕ್ಷೇತ್ರಗಳಲ್ಲಿ ಪೂರಕ ವೇದಿಕೆಯಾಗಿ ಕಾರ್ಯ ನಿರ್ವಹಿಸಲಿದೆ ಎಂದರು. ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ನಲ್ಲಿ ಸಂಪೂರ್ಣ ಬ್ಲಾಕ್ವೊಂದನ್ನು ಟೆಕ್ ಸೆಂಟರ್ಗಳ ಸ್ಥಾಪನೆಗಾಗಿ ಮೀಸಲಿಟ್ಟಿದೆ. ಈ ವಿಶೇಷ ಬ್ಲಾಕ್ನಲ್ಲಿ ಕಚೇರಿ ಸ್ಥಳ, ಮೂಲಭೂತ ಸೌಲಭ್ಯಗಳು, ವಿದ್ಯುತ್,…















