Author: admin

ವಯೋ ಸಮ್ಮಾನ್ ಪುರಸ್ಕೃತ ಸಾಹಿತಿ ಭೋಜ ಸುವರ್ಣ ಅವರ ಸಾಹಿತ್ಯದ 1971 ಫೆಬ್ರವರಿ 19 ರಂದು ಇತಿಹಾಸದಲ್ಲಿ ಮೊದಲ ತುಳು ಚಿತ್ರವಾಗಿ ಎನ್ನ ತಂಗಡಿ ಬಿಡುಗಡೆ ಕಂಡಿತ್ತು. ಆದರೆ ಆರ್ಥಿಕ ಕಾರಣಗಳಿಂದ ಅಂದಿನ ಗ್ರಾಮೋಪೋನ್ ನಲ್ಲಿ ಅದರ ಹಾಡುಗಳು ಬಿಡುಗಡೆಯಾಗದೆ ಜನ ಸಾಮಾನ್ಯರನ್ನು ಈ ಹಾಡುಗಳು ತಲುಪಲು ಸಾಧ್ಯವಾಗಲಿಲ್ಲ. ಈ ಕೊರಗು ಸಾಹಿತಿ ಭೋಜ ಸುವರ್ಣರನ್ನು ಸದಾ ಕೊರೆಯುತ್ತಿತ್ತು. ವಯೋ ಸಮ್ಮಾನ್ ಸಮಯದಲ್ಲಿ ಇದನ್ನು ಮನಗಂಡ ಐಲೇಸಾ ಆ ಹಾಡಿನ ಪುನರ್ ಸೃಷ್ಟಿಗೆ ಸಂಕಲ್ಪ ಮಾಡಿತ್ತು. ಅದೀಗ ನನಸಾಗುತ್ತಿದೆ. ‘ಮನಸ್ಸ್ ನ್ ನಿರ್ಮಲ ದೀದ್ ಬಾಳ್ಂಡ ಅವ್ವೇ ಒಂಜಿ ಮಂದಿರಾ’ ಎನ್ನುವ ಸಮಾಜಮುಖಿ ಸಂದೇಶದ ಆ ಹಾಡನ್ನು ವಿ. ಮನೋಹರ್ ಭೋಜ ಸುವರ್ಣ ಅವರ ಧ್ವನಿಯಲ್ಲೇ ಹಾಡಿಸಿ ಧ್ವನಿ ಮುದ್ರಿಸಿದ್ದಾರೆ. ಮೂಲ ಹಾಡಿನ ರಾಗ ಸಂಯೋಜನೆಯಲ್ಲಿಯೇ ಹಾಡು ಮೂಡಿ ಬಂದಿದ್ದು ಎಂಭತ್ತೈದರ ಹರೆಯದ ಭೋಜ ಸುವರ್ಣ ಶಕ್ತಿಮೀರಿ ಹಾಡಿ ಅದಕ್ಕೊಂದು ನ್ಯಾಯ ಒದಗಿಸಿದ್ದಾರೆ. ಇದರ ಜೊತೆಗೆ ಅವರೇ ಸಾಹಿತ್ಯ ನೀಡಿದ ‘ಎನ್ನ…

Read More

ಮೂಡುಬಿದಿರೆ: ಇಂದಿನ ಶಿಕ್ಷಣದಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಾತ್ರ ಅವಕಾಶಗಳಿವೆ ಎಂಬ ತಪ್ಪು ಕಲ್ಪನೆ ಬೆಳೆಯುತ್ತಿದೆ. ಆದರೆ ವಿದ್ಯಾರ್ಥಿಯೂ ತನ್ನ ಆಸಕ್ತಿ, ಸಾಮರ್ಥ್ಯ ಮತ್ತು ಕನಸುಗಳಿಗೆ ತಕ್ಕಂತೆ ವಿಭಿನ್ನ ವೃತ್ತಿ ಕ್ಷೇತ್ರಗಳನ್ನು ಆರಿಸಿಕೊಳ್ಳಬಹುದು ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಸಕ್ಷಮ್ ಜೈನ್ ನುಡಿದರು. ಅವರು ಆಳ್ವಾಸ್ ಪದವಿಪೂರ್ವ ಕಾಲೇಜು ಆಯೋಜಿಸಿದ್ದ “ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಚಿತ್ರಕಲೆ ಮುಂತಾದ ಅನೇಕ ಸೃಜನಾತ್ಮಕ ಕ್ಷೇತ್ರಗಳು ವಿದ್ಯಾರ್ಥಿಗಳಿಗೆ ದೊಡ್ಡ ಯಶಸ್ಸನ್ನು ನೀಡಬಲ್ಲವು. ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವುದು, ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ವಿದ್ಯಾರ್ಥಿಗಳಿಗೆ ಲಭ್ಯವಿರುವ ಇನ್ನೊಂದು ದೊಡ್ಡ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಆಸಕ್ತಿ ಮತ್ತು ಕನಸುಗಳಿಗೆ ತಕ್ಕಂತೆ ಶಿಕ್ಷಣದ ಅನೇಕ ದಾರಿಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕು ಎಂದರು. ರಾಷ್ಟç ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ CAT, BITSAT, UCEED, VITEEE,…

Read More

ಬ್ರಹ್ಮಶ್ರೀ ನಾರಾಯಣ ಗುರುಗಳು ಜನಿಸಿದ ಶಿವಗಿರಿಯ ಹೆಸರಿನಲ್ಲಿ, ಮತ್ತವರ ತತ್ವದಂತೆ ಬದುಕಿ ಬಾಳಿದ ಜಯ ಸುವರ್ಣರ ನೆನಪಿನಲ್ಲಿ ನೀಡಿದ ಈ ಸನ್ಮಾನ ನನ್ನ ಬದುಕಿನಲ್ಲಿ ಅಮೂಲ್ಯವಾಗಿದೆ. ಕರ್ನಾಟಕ ಸರಕಾರ, ನಾನು ಹುಟ್ಟಿರುವ ಸಮಾಜ ಹಾಗೂ ನೂರಾರು ಸನ್ಮಾನಗಳನ್ನು ಸ್ವೀಕರಿಸಿಕೊಂಡಿದ್ದೇನೆ. ಆದರೆ ಬಿಲ್ಲವ ಸಮಾಜ ನೀಡಿರುವ ಈ ಸನ್ಮಾನಕ್ಕೆ ನಾನು ಋಣಿಯಾಗಿದ್ದೇನೆ. ಬಿಲ್ಲವ ಸಮಾಜ ಇಂದು ಈ ಮಟ್ಟದಲ್ಲಿ ಬಲಿಷ್ಠವಾಗಲು ಕಾರಣ ಜಯ ಸುವರ್ಣರು ಮತ್ತು ಜನಾರ್ಧನ ಪೂಜಾರಿ ಅವರು ಕಾರಣರಾಗಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನುಡಿದರು. ಅವರು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವರು ಆಯೋಜನೆಯಲ್ಲಿ ಸೆಪ್ಟೆಂಬರ್ 7 ರಂದು ಆದಿತ್ಯವಾರ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಜಯ ಸಿ ಸುವರ್ಣ ಮಾರ್ಗ ಗೋರೆಗಾಂವ್ ಪೂರ್ವ ಇಲ್ಲಿ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯಲ್ಲಿ ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ…

Read More

ಮುಂಬಯಿಯ ಪ್ರತಿಷ್ಟಿತ ಸಂಸ್ಥೆಗಳಲ್ಲೊಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಮುಂಬಯಿಯ ಕಲಾ ರಸಿಕರಿಗೆ ಹಾಗೂ ಯುವ ಪೀಳಿಗೆಗೆ ಧರ್ಮ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವರ್ಷಂಪ್ರತಿ ಹಲವು ಯಕ್ಷಗಾನ ತಾಳಮದ್ದಲೆ, ಯಕ್ಷಗಾನ ಬಯಲಾಟಗಳನ್ನು ನಡೆಸುತ್ತಾ ಬಂದಿದೆ. ಅದೇ ರೀತಿ, ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಮುಂದಾಳತ್ವದಲ್ಲಿ, ಪ್ರಕಾಶ ಶೆಟ್ಟಿ ಇವರ ಕಲಾಪ್ರಕಾಶ ಪ್ರತಿಷ್ಠಾನ (ರಿ) ಮುಂಬಯಿ ಇದರ ಸಂಯೋಜನೆಯಲ್ಲಿ, ಸೆಪ್ಟೆಂಬರ್ 06 ರಂದು ‘ಭೃಗು ಶಾಪ’ ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಎಲ್ಲಾ ಪಧಾದಿಕಾರಿಗಳ ಮತ್ತು ಮಾಜಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬಾಂಬೆ ಬಂಟ್ಸ್ ಅಸೋಸಿಯೇಷನ್ ನಿರಂತರವಾಗಿ ಮೊದಲಿನಿಂದಲೂ ತಾಳಮದ್ದಲೆ, ಯಕ್ಷಗಾನದಂತಹ ಕಾರ್ಯಕ್ರಮಗಳಿಗೆ ಆಧ್ಯತೆ ನೀಡುತ್ತಾ ಬಂದಿದೆ. ಮುಂದೆಯೂ ಇದೇ ರೀತಿಯಲ್ಲಿ ನಡೆಸುತ್ತಾ ಬರುತ್ತದೆ. ಆದರೆ, ಇದಕ್ಕೆ ಸದಸ್ಯರ ಮತ್ತು ಅಭಿಮಾನಿಗಳ ಪ್ರೋತ್ಸಾಹ, ಸಹಕಾರ ಅಗತ್ಯ ಎಂದು ಹೇಳಿದರು.…

Read More

ಬ್ರಹ್ಮ ಜಗತ್ತನ್ನು ಸೃಷ್ಟಿಸುತ್ತಾನೆ. ನಂತರ ಗುರುವೆಂಬ ಪರಬ್ರಹ್ಮ ಮಕ್ಕಳ ಬದುಕಿಗೆ ದೀವಿಗೆಯಾಗುತ್ತಾನೆ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಮಾಧವಿ ಎಸ್. ಭಂಡಾರಿ ಶನಿವಾರ ನುಡಿದರು. ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಅವರು ಮಾತನಾಡಿದರು. ನಮ್ಮ ಬದುಕಿನಲ್ಲಿ ಹೆತ್ತ ತಾಯಿ ಮೊದಲ ಗುರು. ಸತ್ಯ, ಧರ್ಮ, ನ್ಯಾಯ ನೀತಿಯ ಬಗ್ಗೆ ಮನೆಯಲ್ಲಿ ಮಕ್ಕಳಿಗೆ ತಿಳಿಸಿ ಕೊಡುವವಳು ತಾಯಿ. ತದನಂತರ ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ. ಗುರುವು ತ್ರಿಮೂರ್ತಿಗಳ ಸ್ವರೂಪ ಎಂದು ವಿವರಿಸಿದರು. ಇನ್ನು ಶಿಕ್ಷಕರು ಕೂಡಾ ಮಕ್ಕಳ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಬೇಕು. ಮಕ್ಕಳಿಗೆ ಜೀವನದ ಮೌಲ್ಯ ಕಲಿಸಿಕೊಡಬೇಕು ಎಂದು ಕಿವಿಮಾತು ನುಡಿದರು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ‘ಶಿಕ್ಷಕರನ್ನು ಶಿಲ್ಪಿಗಳೆಂದು ಕರೆಯುತ್ತಾರೆ. ಸಮಾಜವನ್ನು ತಿದ್ದುವವರು ಶಿಕ್ಷಕರು. ತಾವು ಕಲಿಸಿದ ವಿದಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದಾಗ ಹೆತ್ತವರಿಗಿಂತ…

Read More

ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕಡಬ ತಾಲೂಕು ಘಟಕ ರಚನೆಯಾಗಿದ್ದು, ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ, ಅಧ್ಯಕ್ಷರಾಗಿ ದಯಾನಂದ ರೈ ಮನವಳಿಕೆ ಗುತ್ತು, ಪ್ರಧಾನ ಸಂಚಾಲಕರಾಗಿ ಡಾ| ಹೇಮಂತ್ ರೈ ಮನವಳಿಕೆ ಗುತ್ತು ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 5 ರಂದು ಅಲಂಕಾರಿನ ದುರ್ಗಾಂಬ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಪಟ್ಲ ಫೌಂಡೇಶನ್ ನ ಅಭಿಮಾನಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್‌ವಿ ಪ್ರಸಾದ್ ಕಣಿಪುರ, ಜೊತೆ ಕಾರ್ಯದರ್ಶಿಯಾಗಿ ಜನಾರ್ದನ ಗೌಡ ಕಯ್ಯಪೆ, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಅಂಬರಾಜೆ, ಉಪಾಧ್ಯಕ್ಷರಾಗಿ ವಿಟ್ಟಲ್ ರೈ ಕೊಣಾಲು ಗುತ್ತು, ಶ್ರೀಮತಿ ಬೇಬಿ ಪಾಟಾಲಿ, ಗೌರವ ಸಲಹೆಗಾರರಾಗಿ ಸುಬ್ರಹ್ಮಣ್ಯ ರಾವ್ ನಗ್ರಿ, ರಮೇಶ್ ಭಟ್ ಉಪ್ಪಂಗಳ, ಈಶ್ವರ ಗೌಡ ಪಜ್ಜಡ್ಕ, ರಾಧಾಕೃಷ್ಣ ರೈ ಪರಾರಿ ಗುತ್ತು, ಗೋಪಾಲ ಕಡಬ, ಮುತ್ತಪ್ಪ ಪೂಜಾರಿ ನೆಯ್ಯಲ್ಗ ಆಯ್ಕೆಯಾಗಿದ್ದಾರೆ. ಕಡಬ ತಾಲೂಕು ಘಟಕದ ಪದಗ್ರಹಣ ಸಮಾರಂಭವು ನವರಾತ್ರಿಯ ಸುಸಂದರ್ಭದಲ್ಲಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಿಯ ದಿವ್ಯ ಸನ್ನಿಧಿಯಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಹಾಗೂ ಕೇಂದ್ರ…

Read More

ಬಂಟರ ಸಂಘ ಬಂಟ್ವಾಳ ತಾಲೂಕು‌ ಇದರ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಜಾತ ಪಿ.ರೈ ಕಲ್ಲಡ್ಕ ಅವರು ಗೆಲುವು ಸಾಧಿಸಿದ್ದಾರೆ. ಬಂಟ್ವಾಳ ಮಹಿಳಾ ಬಂಟರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸುಜಾತ ಪಿ ರೈ ಕಲ್ಲಡ್ಕ ಹಾಗೂ ಸಂಧ್ಯಾ ರೈ ಬೆಳ್ಳೂರು ಅವರ ನಡುವೆ ಪ್ರಬಲ ಪೈಪೋಟಿ ನಡೆದಿದ್ದು, ಕೊನೆಗೆ ಚುನಾವಣೆಯ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ಸುಜಾತ ಪಿ ರೈ ಕಲ್ಲಡ್ಕ ಅವರು ಅಭೂತಪೂರ್ವ ಗೆಲುವು ಸಾಧಿಸಿ ನೂತನ ಅಧ್ಯಕ್ಷರಾಗಿ‌ ಆಯ್ಕೆಯಾಗಿದ್ದಾರೆ. ಈ ಹಿಂದೆ‌ ಇವರು‌ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಉಳಿದಂತೆ ಉಪಾಧ್ಯಕ್ಷರಾಗಿ ಜ್ಯೋತಿ ಎನ್ ಹೆಗ್ಡೆ ಮಾಣಿ, ಕಾರ್ಯದರ್ಶಿಯಾಗಿ ಮಂದಾರತಿ ಎಸ್ ಶೆಟ್ಟಿ ಸಿದ್ದಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರೂಪ‌ ಎಲ್ ಶೆಟ್ಟಿ ಅರಳ, ಜೊತೆ ಕಾರ್ಯದರ್ಶಿಯಾಗಿ ಸುಜಾತ ಭಂಡಾರಿ ಮುಡಿಪು ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಂಟರ ಸಂಘ ಬಂಟ್ವಾಳ ತಾಲೂಕು ಯುವ ವಿಭಾಗದ 2025 -28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ ಸಜೀಪ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ ಗುಭ್ಯ, ಕಾರ್ಯದರ್ಶಿಯಾಗಿ ಸುನಾದ್ ರಾಜ್ ಶೆಟ್ಟಿ ಬೊಂಡಾಲ, ಕೋಶಾಧಿಕಾರಿಯಾಗಿ ರತನ್ ರೈ ಸರಪಾಡಿ, ಜೊತೆ ಕಾರ್ಯದರ್ಶಿಯಾಗಿ ಕುಮಾರಿ ಸುವೀಕ್ಷ ಭಂಡಾರಿ ಮುಡಿಪು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಯುವ ವಿಭಾಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಬಂಟರ ಸಂಘ ಬಂಟ್ವಾಳ ತಾಲೂಕಿನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಇನ್ನಷ್ಟು ಮಹತ್ತರವಾಗಿದೆ. ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಸಂಸ್ಕಾರ, ಶಿಸ್ತು ಹಾಗೂ ಮಾನವೀಯತೆ ಬೆಳೆಸುವುದು ಶಿಕ್ಷಕರ ಮಹತ್ತರ ಜವಾಬ್ದಾರಿ ಎಂದು ನುಡಿದರು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಲಾಯಿ ಬಾಕ್ಯಾರು, ತೆಳ್ಳಾರುವಿನ ಶಿಕ್ಷಕ ಕೆ. ಯೋಗೀಶ್ ಕಿಣಿ ಯವರು ಮಾತನಾಡಿ ಇಂದಿನ ಪೀಳಿಗೆಗೆ ಶಿಕ್ಷಕರು ಕೇವಲ ಪಾಠ ಬೋಧಕರು ಮಾತ್ರವಲ್ಲ, ಬಾಳಿನ ದಾರಿ ತೋರಿಸುವ ದೀಪಸ್ತಂಭರೂ ಆಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅನನ್ಯಎಂದು ಹೇಳಿದರು.  ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಕಳ ಇಲ್ಲಿನ ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿಯವರು ಶಿಕ್ಷಕರ ಸೇವೆ ಶಾಶ್ವತ. ಅವರು…

Read More

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೆöಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More