Author: admin
ಬಹುನಿರೀಕ್ಷಿತ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ “45” ಸಿನಿಮಾದ ಆಫ್ರೋ ಟಪಂಗ್ ಹಾಡಿನ ಪ್ರಮೋಷನ್ ಗಾಗಿ ಆಗಮಿಸಿದ್ದ ಚಿತ್ರತಂಡ ಫೋರಂ ಫಿಜಾ ಮಾಲ್ ನಲ್ಲಿ ನೆರೆದಿದ್ದ ಸಿನಿಮಾ ಪ್ರೇಮಿಗಳು ಮತ್ತು ಅಭಿಮಾನಿಗಳನ್ನು ಮೋಡಿ ಮಾಡಿತು. ನಿರ್ದೇಶಕ ಅರ್ಜುನ್ ಜನ್ಯ, ರಾಜ್ ಬಿ ಶೆಟ್ಟಿ, ಗಾಯಕರಾದ ನಿಶಾನ್ ರೈ, ಎಂ.ಸಿ.ಬಿಜು ಅವರಿಗೆ ಅನುಶ್ರೀ ಸಾಥ್ ನೀಡಿದ್ದರು. ಕಾರ್ಯಕ್ರಮಕ್ಕೂ ಮುನ್ನ ಹಾಡಿನ ನೃತ್ಯ ಪ್ರದರ್ಶನ ನೆರೆದಿದ್ದವರ ಮನಸೂರೆಗೊಂಡಿತು. ಹಾಡಿಗೆ ರಾಜ್ ಬಿ ಶೆಟ್ಟಿ ಟಪಾಂಗುಚ್ಚಿ ಕುಣಿಯುವ ಮೂಲಕ ಆಕರ್ಷಣೆ ಹೆಚ್ಚಿಸಿದ್ದು ವಿಶೇಷವಾಗಿತ್ತು. ಬಳಿಕ ಮಾಧ್ಯಮಗಳ ಜೊತೆಗೆ ಮಾತಾಡಿದ ಅರ್ಜುನ್ ಜನ್ಯ ಅವರು, ಮಂಗಳೂರಿನ ಜನ ಬಹಳ ಒಳ್ಳೆಯವರು. ಇಲ್ಲಿಗೆ ಪ್ರತೀ ಬಾರಿ ಬಂದಾಗಲೂ ಒಳ್ಳೆಯ ಫೀಲ್ ಉಂಟಾಗುತ್ತೆ. ಹಾಗಾಗಿ ಸಿನಿಮಾದಲ್ಲಿ ನಿಶಾನ್ ರೈ ಬರೆದಿರುವ ತುಳು ಸಾಹಿತ್ಯವಿರುವ ಹಾಡನ್ನು ಅಳವಡಿಸಲಾಗಿದೆ. ಈಗಾಗಲೇ ಹಾಡು 25 ಮಿಲಿಯನ್ ವೀಕ್ಷಣೆ ಪಡೆಯುವ ಸನಿಹದಲ್ಲಿಯುವುದು ಖುಷಿ ಎನಿಸುತ್ತಿದೆ. ಚಿತ್ರವು ಡಿಸೆಂಬರ್ 25ರಂದು ಬಿಡುಗಡಯಾಗುತ್ತಿದೆ…
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ವಿದ್ಯೋದಯ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪೂರ್ವಜ್ ಗೌಡ ವಿ ಹಾಗೂ ದೃತಿ.ಡಿ.ಎಲ್, ರಿದಮಿಕ್ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ವಿಶ್ರುತ್ರಾಜ್ ಟಿ.ಬಿ ಹಾಗೂ ಪೂರ್ವಜ್ ಗೌಡ ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮಣಿಪಾಲ್ ಟೌನ್ ಹಾಗೂ ಐ.ಎಪ್.ಎಂ.ಆರ್. ಉಡುಪಿ ಇವರ ಸಹಯೋಗದೊಂದಿಗೆ ಅಂಗ ಮತ್ತು ಚರ್ಮದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬುಲೆಟ್ ಬೈಕ್ ರ್ಯಾಲಿ ನಡೆಯಿತು. ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಿಂದ ಪ್ರಾರಂಭವಾದ ಜಾಥಾಕ್ಕೆ Rtn. ಸತೀಶ್ ನಾಯಕ್ ಶ್ರೀನಿಧಿ ಲ್ಯಾಬೋರೇಟರಿ ಕಾರ್ಕಳ ಇವರು ಚಾಲನೆ ನೀಡಿದರು. ಸುಮಾರು 30 ಬುಲೆಟ್ ಗಳು ಅಂಗ ದಾನ ಬಗೆಗಿನ ಜಾಗೃತಿ ಫಲಕಗಳೊಂದಿಗೆ ಕಾರ್ಕಳ ಪೇಟೆಯ ಮೂಲಕ ಸಾಗಿ ಅನಂತಶಯನ ರೋಟರಿ ಬಾಲಭವನದಲ್ಲಿ ಸಮಾಪ್ತಿಗೊಂಡಿತು. ಬಳಿಕ ನಡೆದ 2 ಕ್ಲಬ್ ಗಳ ಜಂಟಿ ಸಭೆ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿ ಮಣಿಪಾಲ ಕೆಎಂಸಿಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಹರ್ಷವರ್ಧನ್ ಕೆ ಶೆಟ್ಟಿ ಚರ್ಮದ ಮತ್ತು ಚರ್ಮದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಅನಾಟಮಿ ವಿಭಾಗದ ಡಾ.…
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು । ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ ।। ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ । ಎಲ್ಲರೊಳಗೊಂದಾಗು – ಮಂಕುತಿಮ್ಮ ।। ಡಿ.ವಿ.ಜಿ.ಯವರ ಈ ಕಗ್ಗದ ಸಾಲುಗಳು ನಮ್ಮ ಬದುಕಿನ ಸಾರ್ಥಕತೆಯನ್ನು ಬಲು ಅರ್ಥಪೂರ್ಣವಾಗಿ ತಿಳಿಸಿದೆಯಾದರೂ ಅದನ್ನು ಜೀವನದುದ್ದಕ್ಕೂ ಪಾಲಿಸಿ ಬದುಕು ಕಟ್ಟಿಕೊಂಡಿರುವ ಬಲು ವಿರಳ ಸಜ್ಜನರಲ್ಲಿ ಒಬ್ಬರೆನಿಸಿಕೊಂಡಿರುವ ಚೆಲ್ಲಡ್ಕ ಕುಸುಮೋದರ ದೇರಣ್ಣ ಶೆಟ್ಟಿ (ಕೆ.ಡಿ ಶೆಟ್ಟಿ)ಯವರ ಪರಿಕಲ್ಪನೆಯ ಮಾತೃ ವಾತ್ಸಲ್ಯದ ಪ್ರತೀಕದ ಸೇವಾ ಸಂಸ್ಥೆ ಭವಾನಿ ಫೌಂಡೇಶನ್ ಗೆ ಇದೀಗ ಹತ್ತರ ಹರೆಯ. ಅಂಬೆಗಾಲಿಡುತ್ತಾ ಇದೀಗ ತನ್ನ ಹೆಜ್ಜೆಗಳನ್ನು ತನ್ನ ಸೇವಾ ಕೈಂಕರ್ಯದ ಮುಖೇನ ರಾಜ್ಯ ಮಾತ್ರವಲ್ಲದೇ ರಾಷ್ಟ್ರವ್ಯಾಪಿಯಾಗಿ ಗುರುತಿಸಿಕೊಂಡಿರುವುದರ ಹಿಂದೆ ಭವಾನಿ ಫೌಂಡೇಶನ್ ಸ್ಥಾಪನೆಯ ಒಂದು ರೋಚಕ ಕಥೆಯಿದೆ. ಹೌದು ಹತ್ತು ವರುಷದ ಹಿಂದೆ ಭವಾನಿ ಶಿಪ್ಪಿಂಗ್ ಸರ್ವಿಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ವೃತ್ತಿ ಮಾಡುತ್ತಿದ್ದ ಸಿಬ್ಬಂದಿಯಾದ ಸಂದೀಪ್ ಉದನೆ ಎಂಬುವರು ಭೀಕರ ವಾಹನ ಅಪಘಾತಕ್ಕೀಡಾಗಿ ಅಂಗಾಂಗ ಕಳೆದುಕೊಂಡು ನಿಷ್ಕ್ರಿಯವಾಗಿ ಕೋಮಾವಸ್ಥೆಗೆ ತಲುಪಿದಾಗ…
ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಯುವಜನತೆ ಪ್ರತಿಭಾವಂತರು. ಪ್ರತಿಭಾನ್ವಿತರಿಗೆ ಉದ್ಯೋಗ ಒದಗಿಸುವ ಜೊತೆಗೆ ಕೇಂದ್ರ, ರಾಜ್ಯ ಸರಕಾರವು ಕೌಶಲ ಅಭಿವೃದ್ಧಿಗೆ ಹೆಚ್ಚು ಆಸಕ್ತಿ ಹೊಂದಿದ್ದು, ಇವೆಲ್ಲವನ್ನೂ ಒಂದೇ ಸೂರಿನಡಿ ಅಶೋಕ್ ಕುಮಾರ್ ಶೆಟ್ಟಿ ನೇತೃತ್ವದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ ಯೋಜನೆಯು ಸಮಾಜಕ್ಕೆ ಮಾರ್ಗದರ್ಶಕವಾಗಿದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ ಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಮಣಿಪುರ ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ನಾಲ್ಕನೇ ಬಾರಿ ನಡೆದ ಉಚಿತ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂಎ ಗಫೂರ್ ಮಾತನಾಡಿ, ನಿರುದ್ಯೋಗವನ್ನು ಹೋಗಲಾಡಿಸುವ ಕೌಶಲ ಅಭಿವೃದ್ಧಿ ತರಬೇತಿಯೊಂದಿಗೆ ಉದ್ಯೋಗ ಮೇಳ ಆಯೋಜನೆ ಮೂಲಕ ಉದ್ಯೋಗವಕಾಶವನ್ನು ಯುವಜನತೆಗೆ…
ಪುತ್ತೂರು ತಾಲೂಕು ಬಂಟರ ಸಂಘ : ಬಂಟೆರೆ ಸೇರಿಗೆ -2025, ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ
ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದಲ್ಲಿ ನವೆಂಬರ್ 22 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಬಂಟೆರೆ ಸೇರಿಗೆ -2025, ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ ನವೆಂಬರ್ 10 ರಂದು ಜರಗಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತೃದಲ್ಲಿ ಪ್ರಾರ್ಥನೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವಸಂತ ಕೆದಿಲಾಯರವರು ಕಾರ್ಯಕ್ರಮ ಸಾಂಗವಾಗಿ ನಡೆಯಲಿ, ಕಾರ್ಯಕ್ರಮದ ಯಶಸ್ಸಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಸದಾ ಇದೆ ಎಂದು ಪ್ರಾರ್ಥನೆಗೈದರು. ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಬಂಟರ ಯಾನೆ ನಾಡವರ ಮಾತೃ…
ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ : ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ
ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಗದಗ, ಕೆ.ಹೆಚ್ ಪಾಟೇಲ್ ಜಿಲ್ಲಾ ಕ್ರೀಡಾಂಗಣ ಕೆಸಿ ರಾಣಿ ರಸ್ತೆ ಗದಗ, ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 14 ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಮುಂದಿನ ತಿಂಗಳು ನಡೆಯುವ ರಾಷ್ಟ್ರೀಯ ಮಲ್ಲಕಂಬ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಒಟ್ಟು 09 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಫಲಿತಾಂಶ: 14 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಗೌರೀಶ್ ಎಂ ಕೆ – ದ್ವಿತೀಯ ಸ್ಥಾನ, ಭೀಮಪ್ಪ ಎಂ ಜಿ ತೃತೀಯ ಸ್ಥಾನ, ಪ್ರೀತಮ್ ಜಿ -…
ಮಂಗಳೂರಿನ ಬೋಳಾರದ ಉದ್ಯಮಿ ಮಂಜರಿ ಫುಡ್ಸ್, ಎಸ್.ಆರ್ ಎಂಟರ್ಪ್ರೈಸಸ್ ಮಾಲಕ ರಮೇಶ್ ಶೆಟ್ಟಿ ಕಲ್ಕಾರು ಅವರ ತಾಯಿ ಹರಿಣಾಕ್ಷಿ ಎಂ ಶೆಟ್ಟಿ ಅವರಿಗೆ ನುಡಿನಮನ ರವಿವಾರ ಕದ್ರಿ ಶ್ರೀ ಮಂಜುನಾಥೇಶ್ವರ ಕ್ಷೇತ್ರದ ಮಂಜುಶ್ರೀ ಹಾಲ್ ನಲ್ಲಿ ನೆರವೇರಿತು. ಸವಣೂರು ವಿದ್ಯಾರಶ್ಮಿ ಸಂಸ್ಥೆಗಳ ಮುಖ್ಯಸ್ಥ ಕೆ ಸೀತಾರಾಮ ರೈ ಸವಣೂರು ಅವರು ಮಾತನಾಡಿ, ಹರಿಣಾಕ್ಷಿ ಎಂ ಶೆಟ್ಟಿಯವರು ನಾಲ್ಕು ಜನ ಗಂಡು ಮಕ್ಕಳನ್ನು ಸಲಹಿ ಒಳ್ಳೆ ವಿದ್ಯಾವಂತರನ್ನಾಗಿ ಮಾಡಿ ಧರ್ಮ ನಿಷ್ಠರಾಗಿ ಬೆಳೆಸಿದ್ದಾರೆ. ಸಮಾಜಕ್ಕೆ ದಾನ ಧರ್ಮ ಮಾಡುವ ಮೂಲಕ ದೊಡ್ಡ ಶಕ್ತಿಯಾಗಿಸಿದ್ದು ಅವರು ಹಾಕಿಕೊಟ್ಟ ಹಾದಿಯನ್ನು ಮಕ್ಕಳು ಮುನ್ನಡೆಸಲಿ ಎಂದರು. ಕಂಬಳ ಪ್ರೇಮಿ, ಚಲನಚಿತ್ರ ನಟ ಎಡ್ತೂರು ರಾಜೀವ ಶೆಟ್ಟಿ ಅವರು ನುಡಿ ನಮನ ಸಲ್ಲಿಸಿದರು. ಭಾಗವತ ಪಟ್ಟ ಸತೀಶ್ ಶೆಟ್ಟಿ, ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಶಾಂತ್ ಕಾಜವ ಮಿತ್ತಕೋಡಿ, ಜಗದೀಶ ಶೆಟ್ಟಿಕುವೆತ್ತ ಬೈಲ್, ಎ ಸಿ ಭಂಡಾರಿ, ಸುಧಾಕರ ರೈ ಮೈಸೂರು, ವಸಂತ ಶೆಟ್ಟಿ ಜೆಪ್ಪು, ಲಯನ್ ಮನೋಜ್…
ಬೋಂಬೆ ಬಂಟ್ಸ್ ಅಸೋಸಿಯೇಷನ್ ಇದರ 42 ನೇ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 16ರಂದು ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ನವಿ ಮುಂಬಯಿ ಜೂಹಿ ನಗರ ಪಶ್ಚಿಮದಲ್ಲಿರುವ ಬಂಟ್ಸ್ ಸೆಂಟರ್ ನಲ್ಲಿ ಜರಗಲಿದೆ. ಈ ಸಭೆಯಲ್ಲಿ ವಾರ್ಷಿಕ ವರದಿಯ ಮಂಡನೆ, ವಾರ್ಷಿಕ ಲೆಕ್ಕ ಪತ್ರಗಳ ಮಂಡನೆ, 2025-26 ರ ಸಾಲಿನ ಲೆಕ್ಕ ಪರಿಶೋಧಕರ ನೇಮಕ ಮತ್ತು ಇನ್ನಿತರ ವಿಷಯಗಳ ಬಗ್ಗೆ ಸದಸ್ಯರ ಜತೆ ಸಮಾಲೋಚನೆ, ಬಹಿರಂಗ ಅಧಿವೇಶನ ನಡೆಯಲಿದೆ. ಅಡ್ವೋಕೇಟ್ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ, ಸಂಪೂರ್ಣ ಹೊಟೇಲ್ಸ್ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ ಪದ್ಮನಾಭ ಎಸ್ ಪಯ್ಯಡೆಯವರು ಉದ್ಘಾಟಿಸಲಿದ್ದು ಭವಾನಿ ಸಮೂಹ ಸಂಸ್ಥೆಗಳ ಸಿಎಂಡಿ ಕುಸುಮೋಧರ ಡಿ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಬಂಟ ಸಮಾಜದ ಶಿಕ್ಷಣ ಕ್ಷೇತ್ರದ ಸಾಧಕ ಲ| ಸಂತೋಷ ಆರ್ ಶೆಟ್ಟಿ, ವೈದ್ಯಕೀಯ ಕ್ಷೇತ್ರದ ಸಾಧಕ ಡಾ. ಸ್ವರೂಪ್…
ಕೆಲಸದ “ಬಾಂಡ್”ಗಳಿಗಿಂತ ಮನಸ್ಸು ಮನಸ್ಸುಗಳ ಭಾಂಧವ್ಯ ಮುಖ್ಯ. ತಂದೆ ತಾಯಿ ಕಷ್ಟದಿಂದ ಮುತ್ತಿಕ್ಕಿ ತುತ್ತಿಕ್ಕಿ ಸಾಕಿ, ಸಲಹಿ ವಿದ್ಯೆ ಕಲಿಸಿದರೂ ಯಾವುದೇ ಕಾನೂನಿನ ಕರಾರು ಮಾಡಿಸುವುದಿಲ್ಲ. ಆದರೆ ಅವರು ಲಕ್ಷಗಟ್ಟಲೆ ಹಣ ಸುರಿದು ಕಲಿಸಿದ ಅವರ ಮಕ್ಕಳ ಶ್ರಮದ ವಿದ್ಯಾ ಸರ್ಟಿಫಿಕೇಟ್ ಗಳನ್ನು ಯಾವುದೇ ಕಂಪನಿ ತೆಗೆದಿರಿಸುವ ಹಕ್ಕು ಯಾರು ಕೊಟ್ಟರು? ಪ್ರಸ್ತುತ ಎಲ್ಲಾ ಮನೆಯ ಮಕ್ಕಳೂ ಇಂಜಿನಿಯರ್, ಡಾಕ್ಟರ್ ಲಾಯರ್, ಪೈಲೆಟ್, ಐ.ಎ.ಎಸ್ ಇತ್ಯಾದಿ ಡಿಗ್ರಿ ಪಡೆದವರೇ. ಆದರೆ ಅವರ ಕಲಿತಾದ ಮೇಲೆ ಸರಿಯಾದ ಕೆಲಸಗಳಿಲ್ಲ. ಬೆಟ್ಟದಷ್ಟು ಆಸೆ ತುಂಬಿದ ಮುಖ ಮನಸ್ಸುಗಳ ಆಸೆಗಳನ್ನು ವರ್ಷಗಟ್ಟಲೆ ಕಸಿಯುವ ಕೆಲ ಸ್ವಾರ್ಥಿ ಖದೀಮರಿದ್ದಾರೆ ಎಚ್ಚರ!. ಸಾಕಷ್ಟು ಸಂಪಾದನೆ ಇದ್ದು ಸ್ಥಿತಿವಂತರಾದವರು ಏನೂ ಸಮಸ್ಯೆ ಇಲ್ಲದೆ ಕಲಿಯುತ್ತಾರೆ. ಕಲಿಸುತ್ತಾರೆ. ಈಗಿನ ಹೆಚ್ಚಿನ ಮಕ್ಕಳು ಹಿಂದಿನಂತೆ ಕಿಮೀ ಗಟ್ಟಲೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಕಷ್ಟದಿಂದ ಶಾಲೆ ಕಾಲೇಜು ಕಲಿತವರಲ್ಲ. ಅದರಲ್ಲೂ ಮಧ್ಯಮ ವರ್ಗದ ಮತ್ತು ಕೆಳ ಮಧ್ಯಮ ವರ್ಗದ ಮನೆಯ ಹೊಸ ತಲೆಮಾರಿನ ಮಕ್ಕಳದ್ದು ಹೊಸತನದ…














