Author: admin
ಅದು 1919 ರ ಎಪ್ರಿಲ್ 13. ಪಂಜಾಬಿನ ನೆತ್ತಿಯ ಮೇಲೆ ಸುಡು ಬಿಸಿಲು. ಆದರೆ ಜಲಿಯನ್ ವಾಲಾಬಾಗ್ ಮೈದಾನದಲ್ಲಿ ಬ್ರಿಟಿಷ್ ದಬ್ಬಾಳಿಕೆಯ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದವರಿಗೆ ಬಿಸಿಲ ಬೇಗೆಗಿಂತಲೂ ದೇಶ ಪ್ರೇಮದ ಕಿಚ್ಚು ಉಕ್ಕಿ ಹರಿಯುತ್ತಿತ್ತು. ಜನರಲ್ ಡಯರ್ ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆಗೆ ದೊಡ್ಡ ಸೈನ್ಯವನ್ನು ತಂದು ಮನಸೋ ಇಚ್ಚೆ ಗುಂಡಿನ ಮಳೆಯನ್ನೇ ಗೆರೆದು, ಭಾರತಾಂಬೆಯ ಸಹಸ್ರಾರು ಮಕ್ಕಳ ಪ್ರಾಣಪಕ್ಷಿಯನ್ನು ಕಿತ್ತುಕೊಂಡನು. ಪ್ರಿಯ ಓದುಗ ಮಿತ್ರರೇ, ವಕೀಲ ದಿನಾಚರಣೆಯ ಈ ಶುಭವಸರಕ್ಕೂ, ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೂ ಏನು ಸಂಬಂಧ ಎಂದು ಯೋಚಿಸುತ್ತಿದ್ದೀರಾ…? ಈ ಲೇಖನವನ್ನು ಸಂಪೂರ್ಣವಾಗಿ ಓದಿ ಮುಗಿಸುವ ವೇಳೆಗೆ ನ್ಯಾಯವಾದಿಗಳಾಗಿ ರಾಷ್ಟ್ರಭಕ್ತಿ ಇರದೇ ಇದ್ದಲ್ಲಿ ಏನೆಲ್ಲಾ ಅನಾಹುತಗಳಾಗುತ್ತವೇ ಎಂಬುದು ನಿಮಗೆ ತಿಳಿಯಲಿದೆ. ಇತ್ತೀಚೆಗೆ ತೆರೆಕಂಡ “ಕೇಸರಿ – 2” ಜಲಿಯನ್ವಾಲಾ ಬಾಗ್ ಅಥವಾ ಅಮೃತಸರ ಹತ್ಯಾಕಾಂಡ ಕೇಸರಿ ಚಾಪ್ಟರ್ 2’ನ ಮೂಲ. ಬ್ರಿಟಿಷರ ವಿರುದ್ಧ ಶಾಂತಿಯುತ ಹೋರಾಟ ಮಾಡುವುದಕ್ಕೆ ಜಲಿಯನ್ವಾಲಾ ಬಾಗ್ನಲ್ಲಿ ಜನರು ಸೇರಿರುತ್ತಾರೆ. ಕರ್ಫ್ಯೂ ವಿಧಿಸಿದ್ದ ಕಾರಣ ಬ್ರಿಟಿಷರ…
ಕ್ರಿಯೇಟಿವ್ ಕಾಲೇಜು ಕಾರ್ಕಳ : ಡಿ. 4ರಿಂದ 6ರವರೆಗೆ ಸಾಂಸ್ಕೃತಿಕ ವೈಭವ, ‘ಕ್ರಿಯೇಟಿವ್ ಆವಿರ್ಭವ – ಸಿಂದೂರ ಸಂಭ್ರಮ’
ಕರ್ನಾಟಕದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಭೂಮಿಕೆಯನ್ನು ಶ್ರೀಮಂತಗೊಳಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಮಹೋತ್ಸವ ‘ಕ್ರಿಯೇಟಿವ್ ಆವಿರ್ಭವ – 2025’ ಡಿಸೆಂಬರ್ 4, 5 ಮತ್ತು 6, 2025 ರಂದು ವೈಭವದೊಂದಿಗೆ ನಡೆಯಲಿದೆ. ಈ ಮೂರು ದಿನಗಳ ಸಂಭ್ರಮವು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ನಲ್ಲಿ ವಿವಿಧ ಸಾಂಸ್ಕೃತಿಕ, ವಿದ್ಯಾಭ್ಯಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಡಿಸೆಂಬರ್ 4 ರಂದು ಸಂಜೆ 6.00 ಗಂಟೆಗೆ ಕಾರ್ಯಕ್ರಮಕ್ಕೆ ಭವ್ಯ ಚಾಲನೆ ನೀಡಲಿದ್ದು, ಸಾಂಸ್ಕೃತಿಕ ಸಂಭ್ರಮದ ಉದ್ಘಾಟನೆ ನಡೆಯಲಿದೆ. ಕರಾವಳಿಯ ಸಾಂಪ್ರದಾಯಿಕ ಕಲಾ ವೈಭವ, ಯಕ್ಷಗಾನ, ನೃತ್ಯ, ನಾಟಕ ಹಾಗೂ ಜಾನಪದ ಕಲಾಪ್ರದರ್ಶನಗಳು ಮುಖ್ಯ ಆಕರ್ಷಣೆಯಾಗಿವೆ. ಡಿಸೆಂಬರ್ 5 ರಂದು ಮಧ್ಯಾಹ್ನ 2.30 ರಿಂದ ವಿವಿಧ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ಹಾಗೂ ವಿಶೇಷ ಅತಿಥಿ ಉಪನ್ಯಾಸಗಳು ನಡೆಯಲಿವೆ. ಡಿಸೆಂಬರ್ 6 ರಂದು ಬೆಳಗ್ಗೆ 10.30 ಕ್ಕೆ ಸಾಧಕರಿಗೆ ಗೌರವ…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳ ಪ್ರಾಂಶುಪಾಲರಿಗೆ “ಭವಿಷ್ಯದ ಶಾಲೆಗಳಲ್ಲಿ-ಮಕ್ಕಳಲ್ಲಿ ಮೌಲ್ಯಾಧಾರಿತ ಕೌಶಲ್ಯಗಳನ್ನು ಪೆÇೀಷಿಸುವುದು” ವಿಷಯದ ಕುರಿತು ಐಕ್ಸ್ ವಾರ್ಷಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಬ್ರಹ್ಮಾವರದ ಲಿಟ್ಲ್ರಾಕ್ ಇಂಡಿಯನ್ ಸ್ಕೂಲ್ನ ನಿರ್ದೇಶಕ ಫೆÇ್ರೀ. ಮ್ಯಾಥಿವ್ ಸಿ ನೈನನ್ ದೀಪ ಬೆಳಗಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಕೇವಲ ಬೋಧನೆಯ ಮೂಲಕ ಮೌಲ್ಯಗಳನ್ನು ಕಲಿಸಲು ಸಾಧ್ಯವಿಲ್ಲ. ಇಂದಿನ ಮಕ್ಕಳು ಅರ್ಥ ರಹಿತವಾದ ಕೆಟ್ಟ ಪದಗಳ ಬಳಕೆಯನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುವ ಮಹತ್ತರ ಜವಾಬ್ದಾರಿಯನ್ನು ಪ್ರಾಂಶುಪಾಲರು ನಿರ್ವಹಿಸಬೇಕು. ಎಲ್ಲರೂ ಮಕ್ಕಳಲ್ಲಿ ಸಹಾನುಭೂತಿಯ ಪ್ರಜ್ಞೆಯನ್ನು ಸೃಷ್ಟಿಸಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮಕ್ಕಳ ಕಲಿಕಾ ವಾತಾವರಣವು ಅತ್ಯುತ್ತಮ ಶಿಕ್ಷಣದ ಜೊತೆಗೆ ಶ್ರೇಷ್ಠ ವ್ಯಕ್ತಿತ್ವವನ್ನು ರೂಪಿಸುವಂತಿರಬೇಕು. ಉತ್ತಮ ಮೌಲ್ಯಗಳನ್ನು ನೀಡಿ ಮಕ್ಕಳ ಭವಿಷ್ಯವನ್ನು ಕಟ್ಟಬೇಕೆಂದರು. ಐಕ್ಸ್ ಅಧ್ಯಕ್ಷೆ ಅಭಿಲಾಷ ಎಸ್ ಮಾತನಾಡಿ ಸುಖದ…
ಯುಎಇ ಬಂಟ್ಸ್ ನ 48 ನೇ ವರ್ಷದ “ಭಾವೈಕ್ಯ” ಬಂಟರ ಮಹಾ ಸಮಾಗಮವು ಡಿಸೆಂಬರ್ 14ರಂದು ನಗರದ ಶೇಖ್ ಝಯೀದ್ ರಸ್ತೆಯ ಮಿಲೆನಿಯಂ ಪ್ಲಾಜಾ ಹೋಟೆಲ್ ಡೌನ್ ಟೌನ್ ಹೋಟೆಲ್ (ಹಳೆಯ ಕ್ರೌನ್ ಪ್ಲಾಜಾ) ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯುಎಇ ಬಂಟರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಯುಎಇ ಬಂಟ ಬಾಂಧವರಿಂದ ತುಳುನಾಡ ಮಣ್ಣ್ ದ ಮಹಿಮೆ, ಭಾರತದ ಸಂಸ್ಕೃತಿಯ ಪಯಣ, ಬಂಟೆರ್ನ ಐಸಿರ, ಕಿರುಚಿತ್ರ ಸ್ಪರ್ಧೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಬಂಟ ವಿಭೂಷಣ ಪ್ರಶಸ್ತಿ ಪ್ರದಾನ : ವರ್ಷಂಪ್ರತಿ ಕೊಡಮಾಡುವ ಯುಎಇ ಬಂಟರ ಪ್ರತಿಷ್ಠಿತ ಬಂಟ ವಿಭೂಷಣ ಪ್ರಶಸ್ತಿಯನ್ನು ಮಂಗಳೂರು ಕಂಬಳದ ರೂವಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ನೀಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ನಟ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ, ಬಾಲಿವುಡ್…
ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನದ ಹಿನ್ನೆಲೆಯಲ್ಲಿ ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ, ಜಿಡಿಪಿಯಲ್ಲಿ ಭಾರತ ಮುಂದಿದ್ದರೂ ಮಾನವ ಹಕ್ಕುಗಳಲ್ಲಿ ಹಿಂದಿನ ಸ್ಥಾನ ಪಡೆಯಲು ಕಾರಣವೇನು? ಕುರಿತ ಸಂವಾದವನ್ನು ಡಿಸೆಂಬರ್ 9 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಯು.ಆರ್ ಉಪೇಂದ್ರ ಶೆಟ್ಟಿ ವಹಿಸಲ್ಲಿದ್ದಾರೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ. ಅಶೋಕ್ ಬಿ ಹಿಂಚಿಗೇರಿ ಉಪಸ್ಥಿತರಿರುವರು. ಅತಿಥಿ ವಕ್ತಾರರಾಗಿ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸೀನಿಯರ್ ಫೆಲೋ, ಮಿತ್ತಲ್ ದಕ್ಷಿಣ ಏಷ್ಯಾ ಸಂಸ್ಥೆಯ ನಿವೃತ್ತ ಮಹಾ ಕಾರ್ಯದರ್ಶಿ ಅಮ್ನೆಸ್ಟಿ ಸಲೀಲ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕಿ ಡಾ| ಮೀರಾ ಕೃಷ್ಣಪ್ಪ ಉಪಸ್ಥಿತರಿರುವರು.
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪ್ರಾಂತೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ ನವೆಂಬರ್ 25 ರಂದು ಮಂಗಳವಾರ ಸಂಜೆ 7.00 ಗಂಟೆಗೆ ಕುಂದಾಪುರದ ಜೆ.ಸಿ ಭವನದ ಸಭಾಂಗಣದಲ್ಲಿ ನಡೆಯಿತು. ಪ್ರಾಂತೀಯ ಅಧ್ಯಕ್ಷ ರಜತ್ ಕುಮಾರ್ ಹೆಗ್ಡೆ ಮಾತನಾಡಿ, 2019 ರಲ್ಲಿ ಸ್ಥಾಪಿತಗೊಂಡ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ 317c ಜಿಲ್ಲೆಯಲ್ಲೇ ಅತ್ಯದ್ಭುತ ಕ್ಲಬ್ ಆಗಿ ಮೂಡಿ ಬಂದಿದೆ. ಇಲ್ಲಿಯ ತನಕ ಸಾರಥ್ಯ ವಹಿಸಿದ ಕ್ಲಬ್ ನ ಎಲ್ಲಾ ಅಧ್ಯಕ್ಷರಿಗೆ ನನ್ನ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇನೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲೆಯ ಮಾಜಿ ಜಿಲ್ಲಾ ಗವರ್ನರ್ ಲಯನ್ ವಿ.ಜಿ ಶೆಟ್ಟಿ ಮಾತನಾಡಿ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಕಾರ್ಯವೈಕರಿಯನ್ನು ಪ್ರಶಂಶಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಲಯನ್ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ವರದಿ ವಾಚಿಸಿದರು. ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್,…
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮೂರನೆಯ ಅಧ್ಯಕ್ಷರಾಗಿದ್ದ ವಿಶ್ವನಾಥ ಯು. ಮಾಡ ಅವರ ನಿಧನಕ್ಕೆ ಸಮಿತಿಯ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು. ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಯಶಸ್ವಿಯಾಗಿ ಹೋರಾಟ ನಡೆಸುತ್ತಿರುವ ಏಕೈಕ ಸರ್ಕಾರೇತರ ಸಂಘಟನೆ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಾಜಿ ಅಧ್ಯಕ್ಷ ವಿಶ್ವನಾಥ ಯು. ಮಾಡ ಅವರ ಸಂತಾಪ ಸಭೆಯಲ್ಲಿ ಗಣ್ಯರು ಮಾತನಾಡಿದರು. ತೋನ್ಸೆ ಜಯಕೃಷ್ಣ ಎ. ಶೆಟ್ಟಿ (ಸಮಿತಿಯ ಸಂಸ್ಥಾಪಕರು) ಮಾತನಾಡಿ, ಮಾಡ ಅವರ ಶಿಸ್ತಿನ ಜೀವನ ಪದ್ಧತಿ, ಕಠಿಣ ಪರಿಶ್ರಮ ಮತ್ತು ಅವರ ವ್ಯಕ್ತಿತ್ವವು ತಮ್ಮ ಸಾಧನೆಗೆ ಪ್ರೇರಣೆ ನೀಡಿದೆ. ಅವರಿಂದ ನಾವು ಬಹಳಷ್ಟು ಶಿಸ್ತಿನ ಅನುಭವ ಪಡೆದಿದ್ದೇವೆ. ಸಮಿತಿಗೆ ಅವರು ಮಾಡಿದ ಸೇವೆ ಪ್ರಯೋಜನಕಾರಿಯಾಗಿದೆ. ಅವರು ನಡೆದು ಬಂದ ದಾರಿ ಇತರರಿಗೂ ಮಾರ್ಗದರ್ಶನವಾಗಲಿ ಹಾಗೂ ಸಮಿತಿಯಲ್ಲಿ ಅವರ ಹೆಸರು ಸದಾ ಕಾಲ ಉಳಿಯುವಂತಾಗಲಿ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ…
ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಕಾರ್ಕಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ – 2025ರ ಅಂಗವಾಗಿ ಜನಜಾಗ್ರತಿ ಜಾಥಾ ಕಾರ್ಕಳದಲ್ಲಿ ಜರುಗಿತು. ಕಾರ್ಯಕ್ರಮದ ಭಾಗವಾಗಿ ಜಾಥಾ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳದಿಂದ ಪ್ರಾರಂಭವಾಗಿ ಬಸ್ ಸ್ಟ್ಯಾಂಡ್ ಸರ್ಕಲ್ ನಂತರ ಅನಂತಶಯನ ಸರ್ಕಲ್ ಮೂಲಕ ಸಾಗುತ್ತಾ ಪುನಃ ಆಸ್ಪತ್ರೆ ಆವರಣಕ್ಕೆ ತಲುಪಿತು. ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಶರ್ಮಿಳಾ ಸಿ.ಎಸ್., ಗೌರವಾನ್ವಿತ ಹಿರಿಯ…
ಬಂಟರ ಸಂಘ ಕುವೈಟ್ ಆಯೋಜನೆಯಲ್ಲಿ ನಡೆದ ಬಂಟಾಯನ -2025 ಕಲಾ ಸಾಂಸ್ಕೃತಿಕ ಮಹೋತ್ಸವವು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಜರುಗಿತು. ಇಂಡಿಯನ್ ಸೆಂಟ್ರಲ್ ಸ್ಕೂಲ್ ಅಬ್ಬಾಸಿಯಾದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವು ಕಲೆ, ನೃತ್ಯ ಮತ್ತು ಸಾಂಸ್ಕೃತಿಕ ವೈಭವದಿಂದ ಜನರ ಮನಗೆದ್ದಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕತಾರ್ ಬಂಟರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಇರುವೈಲು ವಿಶೇಷ ಆಹ್ವಾನಿತ ಅತಿಥಿಯಾಗಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಶೋಧನ್ ಶೆಟ್ಟಿ ನೆರೆದ ಗಣ್ಯರನ್ನು ಮತ್ತು ಅತಿಥಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು. ಬಂಟರ ಸಂಘ ಕುವೈಟ್ ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ನವೀನ್ ಶೆಟ್ಟಿ ಇರುವೈಲು ಅವರನ್ನು ಸಾಂಪ್ರದಾಯಿಕ ಗೌರವ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಭಾಷಣದಲ್ಲಿ ವಚನ ಸಾಹಿತ್ಯ ಮತ್ತು ಕಗ್ಗಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು. ಭಾರತೀಯ ಕುಟುಂಬ ವ್ಯವಸ್ಥೆಯ ಉದ್ದೇಶ ಮತ್ತು ಉಪಯೋಗಗಳ ಬಗ್ಗೆ ವಿವರಿಸಿ,…
ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿಣ್ಣರ ಬಿಂಬ ಚಾರಿಟೇಬಲ್ ಟ್ರಸ್ಟ್ನ ಡೊಂಬಿವಲಿ, ಕಲ್ವಾ, ಘೋಡಬಂದರ್, ನವಿ ಮುಂಬೈ ಪ್ರಾದೇಶಿಕ ಸಮಿತಿಗಳನ್ನೊಳಗೊಂಡ ಈಶಾನ್ಯ ವಲಯದ ಮಕ್ಕಳ ಉತ್ಸವದ ಸಮಾರೋಪ ಸಮಾರಂಭವು ನವೆಂಬರ್ 16 ರಂದು ಐರೋಲಿಯ ಜ್ಞಾನ ವಿಕಾಸ್ ಮಂಡಲ ಮೆಹ್ತಾ ಕಾಲೇಜ್ ನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘ ಮಾಹಾರಾಷ್ಟ್ರ ಘಟಕದ ಅಧ್ಯಕ್ಷರಾದ ಡಾ| ಶಿವ ಮೂಡಿಗೆರೆಯವರು ಮಾತನಾಡುತ್ತಾ, ಚಿಣ್ಣರ ಬಿಂಬದಲ್ಲಿ ಕಲಿತ ಮಕ್ಕಳು ಉನ್ನತ ಹುದ್ದೆಯಲ್ಲಿ ಇರುವುದನ್ನು ಕಂಡು ತುಂಬಾ ಸಂತೋಷವಾಗುತ್ತದೆ. ಮಹಾರಾಷ್ಟ್ರ ಸರಕಾರವು ಚಿಣ್ಣರ ಬಿಂಬದ ಸಾಧನೆ ಗುರುತಿಸಿ ಗೌರವಿಸಿ ಸಹಕಾರ ನೀಡುವಂತಾಗಲಿ. ಹಾಗೆಯೇ ಸಂಸ್ಥೆಗೆ ಇನ್ನಷ್ಟು ಪ್ರಶಸ್ತಿ, ಪುರಸ್ಕಾರಗಳು ಲಭಿಸುತ್ತಿರಲಿ. ಅದಷ್ಟು ಬೇಗ ಮುಂಬಯಿಯಲ್ಲಿ ಚಿಣ್ಣರ ಭವನ ನಿರ್ಮಾಣವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನವಿ ಮುಂಬಯಿಯ ಮಾಜಿ ನಗರ ಸೇವಕ ಸಂತೋಷ್ ಡಿ. ಶೆಟ್ಟಿ ಮಾತನಾಡುತ್ತಾ, ಕಳೆದ 23 ವರ್ಷಗಳಿಂದ…















