Author: admin

ತುಳುವರ ಹೊಸ ವರ್ಷಾರಂಭ ಬಿಸು ಹಾಗೂ ಚಂದ್ರಮಾನ ಪದ್ದತಿಯ ಯುಗಾದಿಯನ್ನು ನೈಜೀರಿಯ ದೇಶದಲ್ಲಿನ ನಮ್ಮ ತುಳು ಕನ್ನಡದ ಬಂಧುಗಳು ಅಚ್ಚುಕಟ್ಟಾಗಿ ಆಚರಿಸಿ ಸನಾತನ ಸಂಸ್ಕೃತಿಯನ್ನು ಮೆರೆದರು. ನಮ್ಮ ದೇಶದಿಂದ ಬಹಳಷ್ಟು ದೂರ ಸಪ್ತಸಾಗರದಾಚೆಯ ನೈಜೀರಿಯ ಪಶ್ಚಿಮದ ‘ಕಾನೋ’ ಎಂಬ ರಾಜ್ಯದಲ್ಲಿ ‘ಕರ್ನಾಟಕ ಸಂಘ ಕಾನೋ’ದ ಎಲ್ಲಾ ತೌಳವರು ಮತ್ತು ಕನ್ನಡಿಗರು ಒಟ್ಟಾಗಿ ಉಲ್ಲಾಸ ಉತ್ಸಾಹದಿಂದ (ಬಿಸು) ಯುಗಾದಿಯನ್ನು ಆಚರಿಸಿದರು. ಪ್ರತೀ ಮನೆಯವರು ತಯಾರಿಸಿ ತಂದ ತಾರಾವರಿಯ ತರಕಾರಿ ವ್ಯಂಜನಗಳು, ಪಾಯಸ, ಹೋಳಿಗೆಯ ಪಕ್ವಾನ್ನ ಸಹಿತ ಸಾಮೂಹಿಕ ಭೋಜನವನ್ನು ಸಂಪ್ರದಾಯಿಕ ಬಾಳೆ ಎಲೆಯಲ್ಲಿ ಎಲ್ಲರೂ ಒಟ್ಟಾಗಿ ನೆಲದಲ್ಲಿ ಕುಳಿತು ಸವಿದರು. ಮಕ್ಕಳಿಗೆ ಇದೊಂದು ಹೊಸ ಅನುಭವವಾದರೆ ಕೆಲವು ಹಿರಿಯರೂ ಮರೆತು ಹೋದ ಸಂಪ್ರದಾಯವನ್ನು ಈ ಕಾರ್ಯಕ್ರಮ ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿತ್ತು. ಸಂಘದ ಸ್ಥಾಪಕರಾದ ಮಂಗಳೂರಿನ ಪ್ರಖ್ಯಾತ ಹರಿದಾಸರಾದ ಶರತ್ ಶೆಟ್ಟಿ ಪಡುಪಳ್ಳಿಯವರ ಮನೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಶರತ್ ಶೆಟ್ಟಿಯವರು ತರಕಾರಿ ಮತ್ತು ಹಣ್ಣುಗಳಿಂದ ರಚಿಸಿದ ಬಿಸುಕಣಿಗೆ ಪೂಜಿಸಿ, ಮಕ್ಕಳಿಗೆ ಬಿಸು ಆಚರೆಣೆಯ ಮಹತ್ವವನ್ನು…

Read More

ಪ್ರತಿಷ್ಠಿತ ಮೈಸೂರು ಬಂಟರ ಸಂಘದ ಅಧ್ಯಕ್ಷರಾದ ಶ್ರೀಯುತ ಕೊಳ್ಕೆಬೈಲು ಗಣೇಶ್ ನಾರಾಯಣ ಹೆಗ್ಡೆಯವರ 70 ನೇ ವರ್ಷದ ಹುಟ್ಟುಹಬ್ಬ ಸಮಾರಂಭ ಏಪ್ರಿಲ್ 16 ರಂದು ಮೈಸೂರು ರೇಸ್ ಕ್ಲಬ್, ಕ್ಲಬ್ ಹೌಸ್ ನಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ ಶೆಟ್ಟಿ, ಉಪಾಧ್ಯಕ್ಷ ಮಧುಕರ್ ಶೆಟ್ಟಿ, ಕರ್ನಾಟಕ ರಾಜ್ಯ ಹೋಟೆಲ್ ಮಾಲಕರ ಸಂಘದ ಸದಸ್ಯತ್ವ ಛೇರ್ಮನ್ ಶ್ರೀನಿವಾಸ್ ಶೆಟ್ಟಿ, ಮಹೇಶ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ಪಾಲುದಾರ ಕೆ ಪ್ರಕಾಶ್ ಶೆಟ್ಟಿ, ನಾರಾಯಣ್ ವಿ ಹೆಗ್ಡೆ, ಕೆ ಭಾಸ್ಕರ್ ಶೆಟ್ಟಿ, ಆನಂದ ಶೆಟ್ಟಿ ಮುಂತಾದವರು ಈ ಅದ್ದೂರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

2026 ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾಳ ಮುಂದಿನ ವಿದ್ಯಾಭ್ಯಾಸಕ್ಕೆ ಮಹತ್ವದ ಬೆಂಬಲ ಲಭಿಸಿದೆ. ವಿಶ್ವ ಬಂಟರ ಪ್ರತಿಷ್ಠಾನದ ಮಹಾಪೋಷಕರಾದ ಡಾ. ಬಿ. ಆರ್ ಶೆಟ್ಟಿಯವರು ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರ ಕಚೇರಿಯಲ್ಲಿ ವಿಶ್ವ ಬಂಟರ ಪ್ರತಿಷ್ಠಾನದ ವತಿಯಿಂದ ದಿಶಾ ಅವರನ್ನು ಗೌರವಿಸಲಾಯಿತು. ಅವಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಬಿ. ಆರ್. ಶೆಟ್ಟಿ, ದೂರವಾಣಿ ಮೂಲಕ ದಿಶಾಳೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದರು. ಜೊತೆಗೆ, ದಿಶಾಳ ಆಯ್ಕೆಯಂತೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಬಿ.ಕಾಂ ಶಿಕ್ಷಣ ಹಾಗೂ ನಂತರದ ಕನಸಾದ ಚಾರ್ಟರ್ಡ್ ಅಕೌಂಟೆಂಟ್ ಆಗುವವರೆಗಿನ ಶಿಕ್ಷಣ, ಊಟ ಮತ್ತು ವಸತಿಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಘೋಷಿಸಿದರು. ಇದೇ ವೇಳೆ ದಿಶಾ ಪಿಯು ಶಿಕ್ಷಣ ಪಡೆದ ಆಳ್ವಾಸ್ ಆವರಣದಲ್ಲಿರುವ…

Read More

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರೊಡಕ್ಷನ್ಸ್ ಹೌಸ್ ‘ಜನ್ಮ ಕ್ರಿಯೇಷನ್ಸ್ ಪುತ್ತೂರು’ ಅರ್ಪಿಸುವ ಡಾ| ಹರ್ಷ ಕುಮಾರ್ ರೈ ಮಾಡಾವು ನಿರ್ಮಾಣದಲ್ಲಿ ಮೂಡಿ ಬಂದಿರುವ ಚಾರ್ವಿ ಆಡಿಯೋಸ್ ರವರ ಚೊಚ್ಚಲ ಕಾಣಿಕೆ ‘ಪುತ್ತೂರ್ದ ಲಿಂಗನಾಥ’ ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವರ ಭಕ್ತಿ ಪ್ರಧಾನ ತುಳು ವಿಡಿಯೋ ಭಕ್ತಿ ಗೀತೆ ಏಪ್ರಿಲ್ 16ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಬಿಡುಗಡೆಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವರಿಗೆ ತುಪ್ಪದ ದೀಪದ ಪ್ರಾರ್ಥನೆಯೊಂದಿಗೆ ದೇವಳದ ಅರ್ಚಕರಾದ ಜಯರಾಮ ಜೋಯಿಸರವರು ಪ್ರಾರ್ಥನೆ ನೆರವೇರಿಸುವ ಮೂಲಕ ವಿಡಿಯೋ ಸಾಂಗ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜನ್ಮ ಕ್ರಿಯೇಷನ್ಸ್ ನ ಡಾ| ಹರ್ಷ ಕುಮಾರ್ ರೈ ಮಾಡಾವು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಈಶ್ವರ ಬೆಡೆಕಾರ್, ಕರುನಾಡ ಗಾನ ಗಂಧರ್ವ ಮಿಥುನ್ ರಾಜ್ ವಿದ್ಯಾಪುರ, ಪತ್ರಕರ್ತ ಸಿಶೇ ಕಜೆಮಾರ್, ಪುಣಚ ಪಂಚಾಯತ್ ಉದ್ಯೋಗಿ ಮಮತಾ ಕಜೆಮಾರ್, ಚಾರ್ವಿ ಕಜೆಮಾರ್ ಮತ್ತಿತರರು ಉಪಸ್ಥಿತರಿದ್ದರು. ಜನ್ಮ ಕ್ರಿಯೇಷನ್ಸ್…

Read More

ಮೂಡಬಿದಿರೆ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಎಂ.ಡಿ ಇನ್ ಕ್ಲಿನಿಕಲ್ ನ್ಯಾಚುರೋಪತಿ ವಿಭಾಗದ ವಿದ್ಯಾರ್ಥಿನಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಅವರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 2022 -25 ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ದ್ವಿತೀಯ ರ‌್ಯಾಂಕ್ ಲಭಿಸಿದೆ. ಮೂಲತಃ ಪುತ್ತೂರು ತಾಲೂಕಿನ ಬಾಲ್ಯೊಟ್ಟು ಗುತ್ತು ಶ್ರೀಮತಿ ಶಶಿಕಲ ರೈ ಕುಕ್ಕುವಳ್ಳಿ ಮತ್ತು ದಿ| ಮಲಾರ ಬೀಡು ಗಣೇಶ್ ರೈ ಪಲ್ಲಮಜಲು ಅವರ ಪುತ್ರಿಯಾಗಿರುವ ಡಾ. ಗ್ರೀಷ್ಮಾ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರ ಸೊಸೆ, ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವರ ಧರ್ಮಪತ್ನಿ ಹಾಗೂ ಯಕ್ಷಗಾನ ವಿದ್ವಾಂಸ, ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಸೋದರ ಸೊಸೆ. ವೃತ್ತಿಯಲ್ಲಿ ನ್ಯಾಚುರೋಪತಿ ವೈದ್ಯರಾಗಿರುವ ಡಾ. ಗ್ರೀಷ್ಮಾ ಪುತ್ತೂರು ತೆಂಕಿಲದ ವಿವೇಕಾನಂದ ಶಾಲೆಯಲ್ಲಿ ಆರಂಭಿಕ ಶಿಕ್ಷಣ ಪೂರೈಸಿ ಮೂಡಬಿದ್ರಿ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನಲ್ಲಿ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ನಲ್ಲಿ…

Read More

ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಸ್ಟೀರಿಂಗ್ ಕನ್ಸೋರ್ಟಿಯಂ (ಕೆಪಿಸಿಇ – ಎಸ್.ಸಿ) ಸಂಸ್ಥೆಯ 2026-28 ರ ಅವಧಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು, ರಾಜ್ಯದ ನಾನಾ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮೂಲ್ಕಿ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಅಧ್ಯಕ್ಷ ಹಾಗೂ ಮೂಲ್ಕಿ ಶಾರದಾ ಗ್ರೂಪ್ ನ ಸಿಎಂಡಿ ಮೂಲ್ಕಿ ಜೀವನ್ ಕೆ ಶೆಟ್ಟಿ ಅವರು ಮೈಸೂರು ರೆವೆನ್ಯೂ ಡಿವಿಜನ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯು ರಾಜ್ಯದಲ್ಲಿ ಸಿವಿಲ್ ಇಂಜಿನಿಯರ್ ಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮಾರ್ಗದರ್ಶನ ನೀಡುವ ಪ್ರಮುಖ ವೇದಿಕೆ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ವೃತ್ತಿಪರ ಮಾನದಂಡಗಳನ್ನು ಉತ್ತೇಜಿಸುವುದು, ಇಂಜಿನಿಯರ್ ಗಳ ನೋಂದಣಿ ಮತ್ತು ಜವಾಬ್ದಾರಿತ್ವವನ್ನು ವ್ಯವಸ್ಥಿತಗೊಳಿಸುವುದು, ನೈತಿಕ ಮೌಲ್ಯಗಳು ಮತ್ತು ಗುಣಮಟ್ಟದ ನಿರ್ಮಾಣವನ್ನು ಉತ್ತೇಜಿಸುವುದು, ಸರಕಾರ ಶಿಕ್ಷಣ ಸಂಸ್ಥೆಗಳು ಮತ್ತು ಇಂಜಿನಿಯರ್ ಗಳ ನಡುವೆ ಸಮನ್ವಯ ಸಾಧಿಸುವುದು, ದೇಶದಲ್ಲಿ ಸಿವಿಲ್ ಇಂಜಿನಿಯರ್ ಕೌನ್ಸಿಲ್ ರಚನೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು, ದೇಶದಲ್ಲಿ ಸಿವಿಲ್ ಪಠ್ಯ ವಿಷಯದಲ್ಲಿ ಪರಿವರ್ತನೆ ಮಾಡುವಲ್ಲಿ ಪ್ರಯತ್ನ ಮಾಡುವುದು,…

Read More

ರಾಷ್ಟ್ರಪ್ರಶಸ್ತಿ ಆಯ್ಕೆಯ ಹಿನ್ನೆಲೆಯಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ನ ಮೌಲ್ಯಮಾಪನದ ಅಂಗವಾಗಿ ಆಗಮಿಸಿದ್ದ ಕೇಂದ್ರ ಸರಕಾರದ ನಿಯೋಗವು ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಭೇಟಿ ನೀಡಿ ಸೆಂಟರ್ ನಲ್ಲಿ ನಡೆಯುತ್ತಿರುವ ನಾನಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ ಶೆಟ್ಟಿ ಅವರು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಐಟಿಐಗಳ 1,450 ವಿದ್ಯಾರ್ಥಿಗಳಿಗೆ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ, ಪಳ್ಳಿ ಬೆಳ್ಳೆ ಮಣಿಪುರ ಮತ್ತು ಅಲೆವೂರು ಗ್ರಾಮ ಪಂಚಾಯಿತಿಗಳಲ್ಲಿ 1450 ಮಹಿಳೆಯರಿಗೆ ಮಹಿಳಾ ಸಬಲೀಕರಣ ನಿಮಿತ್ತ ಉದ್ಯಮ ಅಭಿವೃದ್ಧಿ ಕಾರ್ಯಾಗಾರ, ಡಿಜಿಟಲ್ ಸಾಕ್ಷರತೆ ಅಂಗವಾಗಿ 400 ಮಂದಿಗೆ ಆಲ್ ಕಾರ್ಗೋ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಒಂದು ತಿಂಗಳ ಮೂಲ ಮತ್ತು…

Read More

ಥಾಣೆ ಬಂಟ್ಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಅಸೋಸಿಯೇಷನ್ ಆಫ್ ಬಂಟ್ಸ್ ಡಾಕ್ಟರ್ಸ್ ಸಹಯೋಗದಲ್ಲಿ ಏಪ್ರಿಲ್ 19 ರಂದು ಭಾನುವಾರ ಥಾಣೆ ಹರಿನಿವಾಸ್ ಬಳಿಯ ಥಾಣೆ ಬಂಟ್ಸ್ ಕಚೇರಿಯಲ್ಲಿ ಬೆಳಿಗ್ಗೆ 9.30 ರಿಂದ ಅಪರಾಹ್ನ 3 ಗಂಟೆಯವರೆಗೆ ನುರಿತ ವೈದ್ಯರ ತಂಡದಿಂದ ಬೃಹತ್‌ ರಕ್ತದಾನ ಶಿಬಿರವು ನಡೆಯಲಿದೆ. ಈ ರಕ್ತದಾನ ಶಿಬಿರದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಥಾಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ್ ಎಂ ಶೆಟ್ಟಿ, ಅಸೋಸಿಯೇಷನ್ ಆಫ್ ಬಂಟ್ಸ್ ಡಾಕ್ಟರ್ಸ್ ಅಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ, ಥಾಣೆ ಬಂಟ್ಸ್ ಅಸೋಸಿಯೇಷನ್ ವೈದ್ಯಕೀಯ ವಿಭಾಗದ ಕಾರ್ಯಾಧ್ಯಕ್ಷ ವಿನಯ್ ಪಿ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಿನೀತ್ ಆರ್ ಶೆಟ್ಟಿ ಹಾಗೂ ಎಲ್ಲಾ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಎಂ.ಆರ್.ಜಿ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ| ಕೆ ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಮಗ್ರ ಪುನರ್ ನಿರ್ಮಾಣಗೊಂಡು ಹೊಸ ರೂಪವನ್ನು ಹೊಂದಲಿರುವ ಪಡುಬಿದ್ರೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಬಹುರಾಷ್ಟ್ರೀಯ ಸಂಸ್ಥೆಯಾದ ಆಸ್ಪೆನ್ ಇನ್ಫ್ರಾದಿಂದ 25 ಲಕ್ಷ ರೂಪಾಯಿಗಳ ದೇಣಿಗೆ ಸಮರ್ಪಿತವಾಯಿತು. ಜೀರ್ಣೋದ್ಧಾರ ಹಾಗೂ ಪುನರ್ ನಿರ್ಮಾಣ ಕಾರ್ಯಗಳು ಅಂತಿಮ ಹಂತ ತಲುಪಿರುವ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಏಪ್ರಿಲ್ 23ರಿಂದ ಮೇ 4ರ ವರೆಗೆ ನಡೆಯಲಿದ್ದು, ಈ ಮಹಾನ್ ಕಾರ್ಯಗಳಿಗೆ ನೆರವು ನೀಡುವ ನೆಟ್ಟಿನಲ್ಲಿ ಪಡುಬಿದ್ರಿಯ ವಿಶೇಷ ವಿತ್ತ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪನಿಯ 25 ಲಕ್ಷ ರೂಪಾಯಿಗಳ ದೇಣಿಗೆಯನ್ನು ಪಡುಬಿದ್ರಿ ಶ್ರೀ ದೇಗುಳದ ಅನುವಂಶಿಕ ಮೊಕ್ತೇಸರ ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ ಅವರಿಗೆ ಕಂಪನಿಯ ಹಿರಿಯ ಮಹಾ ಪ್ರಬಂಧಕ ಹಾಗೂ ಮುಖ್ಯಸ್ಥ ಅಶೋಕ್ ಶೆಟ್ಟಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯಾಸ ಆಚಾರ್ಯ, ಕೇಶವ ತಂತ್ರಿ, ನವೀನ್ ಚಂದ್ರ ಜೆ ಶೆಟ್ಟಿ, ಸುರೇಶ್ ಶೆಟ್ಟಿ ಗುಂಡ್ಲಾಡಿ,…

Read More

ಮುಂಬಯಿಯ ಪ್ರತಿಷ್ಠಿತ ಬಂಟ ಬಾಂಧವರ ಸಂಸ್ಢೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ವಲಯ ಸಮಿತಿಯ ಉದ್ಘಾಟನಾ ಸಮಾರಂಭ ಅಸೋಸಿಯೇಶನ್ ನ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 12 ರವಿವಾರದಂದು ಅಪರಾಹ್ನ 2.30ಕ್ಕೆ ಸರಿಯಾಗಿ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹ ಬಂಟ್ಸ್ ಸೆಂಟರ್ ಜೂಯಿನಗರ ಇಲ್ಲಿ ಬಹಳ ಸಂಭ್ರಮ ಹಾಗೂ ವಿಜೃಂಭಣೆಯಿಂದ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರೆ, ಸಭಾ ಕಾರ್ಯಕ್ರಮದಲ್ಲಿ ನವಿಮುಂಬಯಿ ಮಹಾನಗರ ಪಾಲಿಕೆಯ ಮಹಾ ಪೌರರಾದ ಶ್ರೀಮತಿ ಸುಜಾತ ಸೂರಜ್ ಪಾಟೀಲ್ ಇವರು ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿದರು. ಮಾಜಿ ಅಧ್ಯಕ್ಷ ಜಯರಾಮ ಎಸ್ ಮಲ್ಲಿ ಮುಖ್ಯ ಅತಿಥಿಯಾಗಿ, ಮುಲುಂಡ್ ಬಂಟ್ಸ್ ಅಧ್ಯಕ್ಷ ಸಿ.ಎ ಕರುಣಾಕರ್ ಶೆಟ್ಟಿ ಹಾಗೂ ಥಾಣೆ ಬಂಟ್ಸ್ ಅಧ್ಯಕ್ಷ ಅಶೋಕ್‌ ಎಮ್ ಶೆಟ್ಟಿ ಗೌರವ ಅತಿಥಿಗಳಾಗಿ ಆಗಮಿಸಿದರು. ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮತ್ತು ಮಾರ್ಗದರ್ಶನದಲ್ಲಿ ಹಾಗೂ ವಲಯದ ಕಾರ್ಯಾಧ್ಯಕ್ಷರುಗಳಾದ…

Read More