Author: admin
ಇಂದಿನ ಹೆಸರುವಾಸಿ ಕಲಾವಿದರ ಹಿಂದೆ ಒಂದು ದಿನ ಕಳೆಯುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಯಕ್ಷಗಾನ ಕ್ಷೇತ್ರದಲ್ಲಿ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಕಲಾವಿದರ ಕಷ್ಟವನ್ನು ಬಹಳ ಹತ್ತಿರದಿಂದ ಗಮನಿಸಿದವ ನಾನು. ಕಲಾವಿದರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಿಸಲಾಯಿತು. ಟ್ರಸ್ಟ್ ನ ಕಾರ್ಯವೈಖರಿಯಲ್ಲಿ ನಾನು ಕೇವಲ ನಿಮಿತ್ತ. ಎಲ್ಲವೂ ಕಟೀಲು ಅಮ್ಮನವರ ಕೃಪೆ. ಹೃದಯ ಶ್ರೀಮಂತ ದಾನಿಗಳಿಂದ ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾಸೇವೆಯಲ್ಲಿ ಮುಂದುವರಿಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಅಭಿಪ್ರಾಯಪಟ್ಟರು. ಅವರು ನವೆಂಬರ್ 2 ರಂದು ಗೋವಾ ಪಣಜಿ ಇನ್ಸ್ಟಿಟ್ಯೂಟ್ ಮೆನೇಜಸ್ ಬ್ರಗಾನ್ಸ ಸಭಾಗೃಹದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಯಕ್ಷಗಾನ ನಮ್ಮ ಕರಾವಳಿಗೆ ದೇವರು ನೀಡಿದ ಕಾಣಿಕೆ. ಯಕ್ಷಗಾನ ಸಂಸ್ಕಾರವನ್ನು ಕಲಿಸುತ್ತವೆ. ಇದು ಒಳಿತು…
‘ತಾರಾ’ ಭಾರತೀಯ ಸಮಾಜದ ಹೆಣ್ಣಿನ ಬಿಂಬ’ ವಿದ್ಯಾಗಿರಿ : ಪಿತೃ ಪ್ರಧಾನ ಸಮಾಜವು ಮಹಿಳೆಯನ್ನು ಹೇಗೆ ಬಿಂಬಿಸಿದೆ ಎನ್ನುವುದೇ ‘ತಾರಾ’ ನಾಟಕದ ಅಂತಸತ್ವ ಎಂದು ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಷ್ಣು ಮೂರ್ತಿ ಪ್ರಭು ಹೇಳಿದರು. ಆಳ್ವಾಸ್ ಕಾಲೇಜು ಪದವಿ ಇಂಗ್ಲಿಷ್ ವಿಭಾಗವು ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ಮಹೇಶ್ ದತ್ತಣಿ ಅವರ ಕೃತಿ ‘ತಾರಾ’ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಂಪ್ರದಾಯಿಕ ಸಮಾಜವು ಪುರಷನೇ ಎಲ್ಲದಕ್ಕೂ ಆಧಾರ. ಹೆಣ್ಣು ಪರಾವಲಂಬಿ ಎಂಬಂತೆ ಬದುಕನ್ನು ರೂಪಿಸಿತ್ತು. ಆದರೆ, ಕೈಗಾರೀಕರಣದ ಬಳಿಕ ಮಹಿಳೆಗೆ ತನ್ನ ಸಾಮಥ್ರ್ಯ ಪ್ರದರ್ಶನದ ಜೊತೆ ಕುಟುಂಬ ಹಾಗೂ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯವಾಯಿತು ಎಂದರು. ಮಹೇಶ್ ದತ್ತಣಿ ಅವರು ‘ತಾರಾ’ ಕೃತಿ ಮೂಲಕ ಭಾರತೀಯ ಸಮಕಾಲೀನ ಸಮಾಜದಲ್ಲಿನ ಲಿಂಗ ತಾರತಮ್ಯದ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಆಳ್ವಾಸ್ ಕಾಲೇಜು ಪದವಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆ…
ಕಡಲ ತೀರ, ಅಲ್ಲೊಂದು ಮುದ್ದಾದ ಪ್ರೇಮ, ಹಿತವಾದ ಅಲೆಗಳ ಹಿಂದಿನ ಕ್ರೂರತೆ. ರಕ್ತ, ಜೈಲು, ಪ್ರೀತಿ ಮತ್ತು ಆ ಕಣ್ಣುಗಳು ಇದು ಹೇಮಂತ್ ರಾವ್ ಅವರ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ತುಣುಕಿನಲ್ಲಿ ಕಂಡಿದ್ದು. ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ ಅವರ ಪರವಂ ಪಿಕ್ಷರ್ ನಲ್ಲಿ ನಿರ್ಮಾಣ ಮಾಡಿರುವ ಚಿತ್ರದ ರಚನೆ ಮತ್ತು ನಿರ್ದೇಶನ ಹೇಮಂತ್ ರಾವ್ ಅವರದ್ದು. ಈ ಹಿಂದೆ ಗೋದಿ ಬಣ್ಣ ಸಾಧಾರಣ ಮೈಕಟ್ಟು ಮತ್ತು ಕವಲುದಾರಿ ಚಿತ್ರ ಮಾಡಿ, ನವ ನಿರ್ದೇಶಕರ ಸಾಲಿನಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದ ಹೇಮಂತ್ ಅವರು ಇದೀಗ ಮನು ಮತ್ತು ಪ್ರಿಯಾರ ಲವ್ ಸ್ಟೋರಿ ಹೇಳಲು ಹೊರಟಿದ್ದಾರೆ. ಮನುವಿನ (ರಕ್ಷಿತ್ ಪಾತ್ರ) ಲವ್ ಸ್ಟೋರಿ ಮತ್ತು ಲೈಫ್ ಸ್ಟೋರಿಯನ್ನು ಕಡಲ ಅಲೆಗಳ ನಡುವೆ ಹೇಳುತ್ತಿದ್ದಾರೆ. ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗವು ಸೆಪ್ಟೆಂಬರ್ 1ರಂದು ಬಿಡುಗಡೆ…
ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ ‘ಪದವುಡು ಆಟಿದ ಕೂಟ’ ಅದ್ದೂರಿ ಕಾರ್ಯಕ್ರಮ 23-07-2023ರ ರವಿವಾರ ನಡೆಯಿತು. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ ಬಳಿಯ ಸಂಘದ ನಿವೇಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಿದರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಿದರು. ಮಾಣಿ ವಲಯ ಬಂಟರ ಸಂಘದ ಉಪಾಧ್ಯಕ್ಷರು, ಕವಯತ್ರಿ ಹಾಗೂ ಬರಹಗಾರ್ತಿ ವಿಂದ್ಯಾ ಎಸ್. ರೈಯವರು ಮುಖ್ಯ ಭಾಷಣಕಾರರಾಗಿ ಉಪನ್ಯಾಸ ನೀಡಿದರು. ಮಾಜಿ ಸಚಿವ ಬಿ, ರಮಾನಾಥ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸೀತಾರಾಮ್ ರೈ ಸವಣೂರು, ಬೆಳ್ತಂಗಡಿಯ ವಿಜಯ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ್ ಶೆಟ್ಟಿ, ವಾಮದಪದವು ಟಿಎಸ್ಎನ್ ಇಂಡಸ್ಟ್ರೀಸ್ ಮಾಲಕ ಧೀರಜ್ ನಾಯ್ಕ್, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಮಾಜಿ…
ರಾಜ್ಯದಲ್ಲಿ ಪದವಿ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿ ಎರಡು ವರ್ಷಗಳು ಸಂದಿವೆ. ಜಾರಿಯಾದ ಮೊದಲ ವರ್ಷದಲ್ಲಿ ಒಂದಿಷ್ಟು ಗೊಂದಲ ಗಳು ಸೃಷ್ಟಿಯಾಗಿ ಕಾಲೇಜುಗಳೂ ಇದರ ಅನುಷ್ಠಾನಕ್ಕೆ ಹಿಂಜರಿದುದು ಸಹಜ. ಆದರೆ ಈಗ ಬಹುತೇಕ ಕಾಲೇಜುಗಳು ಹೊಸ ಶಿಕ್ಷಣ ನೀತಿಯ ಆಶಯವನ್ನು ಅರ್ಥೈಸಿಕೊಂಡು, ಹೊಸ ಪಠ್ಯ ಕ್ರಮಕ್ಕನುಗುಣವಾದ ಅಗತ್ಯ ಸೌಲಭ್ಯಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸಫಲವಾಗಿವೆ. ಆದರೆ ಎನ್ಇಪಿ ಜಾರಿಯ ಬಳಿಕ ವಿಜ್ಞಾನ ಮತ್ತು ಕಲಾ ಪದವಿಗೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರು ವುದು ಜಿಜ್ಞಾಸೆ ಹುಟ್ಟುಹಾಕಿದೆ. ವಾಸ್ತವದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಈ ಎರಡೂ ಪದವಿಗಳಿಗೆ ಹೆಚ್ಚಿನ ಮಹತ್ವ ಲಭಿಸಿದ್ದು ಇದನ್ನು ವಿದ್ಯಾರ್ಥಿ ಗಳು ಮತ್ತವರ ಹೆತ್ತವರು ಮನಗಾಣಬೇಕು. ಕೊರೊನಾದಿಂದಾಗಿ ಪದವಿ ಶಿಕ್ಷಣದ ವೇಳಾ ಪಟ್ಟಿಯಲ್ಲಿ ಆಗಿರುವ ಏರುಪೇರು ಇನ್ನೂ ಸರಿಯಾಗಿಲ್ಲ. ಹಿಂದಿನ ಪ್ರಕಾರ ಈಗ ಸೆಮ್ ಎಂಡ್ ಪರೀಕ್ಷೆ ಮುಗಿದು ವಿದ್ಯಾರ್ಥಿಗಳಿಗೆ ರಜಾದಿನಗಳಾಗಬೇಕಿತ್ತು. ಆದರೆ ಉರಿ ಬೇಸಗೆಯ ಈ ದಿನಗಳಲ್ಲೂ ಈಗ ಎರಡನೆಯ ಸೆಮ್ನ ಪಾಠಪ್ರವಚನಗಳು…
ಯುವ ಬಂಟರ ಸಂಘ (ರಿ.) ಕಂಬಳಕಟ್ಟ-ಕೊಡವೂರು ಇದರ ದಶಮ ಸಂಭ್ರಮವು ಕಂಬಳಕಟ್ಟ ಕಂಬಳಮನೆ ವಠಾರದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡಿತು. ದಶಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭವು ಮಜಲುಮನೆ ಶ್ರೀಮತಿ ವನಜ ನಾರಾಯಣ ಶೆಟ್ಟಿ ವೇದಿಕೆಯಲ್ಲಿ ಸಮಾರಂಭದ ಅತಿಥಿ ಅಭ್ಯಾಗತರೊಡಗೂಡಿ ದೀಪ ಪ್ರಜ್ವಲನೆ ಮಾಡವುದರ ಮೂಲಕ ನೆರವೇರಿಸಿದರು. ಸಮಾರಂಭದ ಮುಖ್ಯ ಅತಿಥಿ ತುಳುನಾಡಿನ ಸಂಸೃತಿಯ ವಿಮರ್ಶಕರು,ನಟ -ನಿರ್ಮಾಪಕ ಶ್ರೀ ತಮ್ಮಣ್ಣ ಶೆಟ್ಟಿ ಮಾತನಾಡಿ ದೈವಾರಾಧನೆಯು ಮೂಲ ಸ್ವರೂಪ ಕಳಕೊಂಡಿದೆ, ತುಳುನಾಡ ಆಚಾರ ವಿಚಾರಗಳು ಈಗ ಶೋಕಿ ಹಾಗೂ ಶೋಪೀಸ್ ವಸ್ತುಗಳಾಗಿ ಬಿಟ್ಟಿವೆ.ಇವುಗಳನ್ನು ಸುವ್ಯವಸ್ಥಿತಗೊಳಿಸಲು ಬಂಟಸಮಾಜದ ಪ್ರತಿಯೋರ್ವನು ಚಿಂತಿಸುವಂತಾಗಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿ ನಮ್ಮ ಕುಡ್ಲ ವಾಹಿನಿಯ ವಾರ್ತಾವಾಚಕಿ ಡಾl ಪ್ರಿಯಾ ಹರೀಶ್ ಶೆಟ್ಟಿ ಮಾತಾನಾಡಿ ವೈವಿದ್ಯತೆಯಿಂದ ಕೂಡಿದ ಬಂಟರು ಎಲ್ಲಾ ಕ್ಷೇತ್ರಗಳಲ್ಲಿನ ಸಾಧಕರು. ನಮ್ಮ ಸಮಾಜದ ಅಭಿಮಾನ, ಆಚಾರವಿಚಾರಗಳನ್ನು ಇಂದಿನ ಮಕ್ಕಳಲ್ಲಿ ತಿಳಿಯಪಡಿಸಬೇಕಾಗಿದೆ ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ…
ನಾವು ನಿಂತ ತುಂಡು ನೆಲ ನಮ್ಮದಾಗಬೇಕು ಎನ್ನುವುದು ಪ್ರತಿಯೊಬ್ಬರ ಕನಸು ಅದು ಆತ್ಮಕಂಟಿದ ತಪನೆ! ಆ ಕನಸುಗಳು ನಸಾಗುವಾಗ ಆ ಕುಟುಂಬದವರ ಕಣ್ಣಲ್ಲಿ ಆನಂದ ಭಾಷ್ಪ! ಅವರ ನೆಮ್ಮದಿಯ ನಿಟ್ಟುಸಿರು ಹೊರ ಹಾಕುವ ಆಶಿರ್ವಾದದ ಭಾವವೇ ನಮ್ಮ ನೆತ್ತಿಕಾಯುತ್ತದೆ. ಕೋಡಿ ಕನ್ಯಾನ ಮತ್ತು ಹೊಸಬೆಂಗ್ರೆಯ ಜನರ ಭೂಮಿ ಹಕ್ಕಿನ ಕನಸು ಮೊನ್ನೆ ನನಸಾಯಿತು. ಒಟ್ಟು ನೂರಾ ಎಪ್ಪತ್ತೆರಡು ಕುಟುಂಬದ ಕೈಗೆ ಹಕ್ಕು ಪತ್ರಗಳು ದಕ್ಕಿದವು. ಆ ನೆಲದ ಪಹಣಿಯಲ್ಲಿ ಮೊನ್ನೆ ಮೊನ್ನೆ ತನಕ ಸರ್ಕಾರ ಎಂದಿದ್ದರೆ ನಾಳೆಯಿಂದ ಆಯಾ ಕುಟುಂಬದ ಸದಸ್ಯರ ಹೆಸರಿರುತ್ತದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿ. ಅದೆಲ್ಲದಕ್ಕೂ ಕಾರಣವಾದದ್ದು ಕುಂದಾಪುರದ ಶಾಸಕ ಹಾಲಾಡಿ. ಮತ್ತು ಸಚಿವ ಕೋಟ. ಈ ಶ್ರೀನಿವಾಸ ಧ್ವಯರಿಗೆ ಅಭಿಮಾನದ ನಮಸ್ಕಾರಗಳು. ಹಿಂದೆ 1993 ರಲ್ಲೇ ಉಡುಪಿ ಪಡುಕರೆಯ ಜನತೆಯ ಬೂಮಿ ಹಕ್ಕಿನ ಬಗ್ಗೆ ಕಾರ್ಯನಿರತರಾಗಿ ಅದರಲ್ಲಿ ಯಶ ಕಂಡವರು ಉಡುಪಿ ಜಿಲ್ಲೆ ಕಂಡ ಮತ್ತೊಬ್ಬ ಅದ್ಭುತ ರಾಜಕಾರಣಿ ಯು.ಆರ್.ಸಭಾಪತಿ. ಮುಂದೆ ಸಭಾಪತಿಯವರನ್ನ ಜಿಲ್ಲೆಯೇ ಮರೆತು…
ಫೆ. 19ರಂದು ಮುಂಬಯಿಯಲ್ಲಿ ಚಿಣ್ಣರಬಿಂಬದ ಇಪ್ಪತ್ತನೆಯ ವಾರ್ಷಿಕ ಮಕ್ಕಳ ಉತ್ಸವ ಪ್ರತಿಭಾ ಸ್ಪರ್ಧೆ, ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ
ಮುಂಬಯಿ:- ಚಿಣ್ಣರಬಿಂಬದ ಇಪ್ಪತ್ತನೆಯ ವರ್ಷದ ಮಕ್ಕಳ ಉತ್ಸವವು ದಿನಾಂಕ 19/2/2023ರ ಭಾನುವಾರದಂದು ಬೆಳಿಗ್ಗೆ 10ರಿಂದ ಕುರ್ಲಾ ಪೂರ್ವದ ಬಂಟರ ಭವನದ ರಾಧಾಬಾಯಿ.ಟಿ.ಭಂಡಾರಿ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿದ್ದು ಚಿಣ್ಣರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅಂದು 3 ಗಂಟೆಯಿಂದ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು ಆಲ್ ಕಾರ್ಗೋ ಲಾಜಿಸ್ಟಿಕ್ಸ್ನ ಆಡಳಿತ ನಿರ್ದೇಶಕರಾಗಿರುವ ಶ್ರೀ ಶಶಿಕಿರಣ್ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ. ವಿ. ಸುನಿಲ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೇರಂಬ ಇಂಡಸ್ಟ್ರೀಸ್ನ ಆಡಳಿತ ನಿರ್ದೇಶಕರಾದ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಅವರು ಆಗಮಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಬಂಟರ ಸಂಘದ ಅಧ್ಯಕ್ಷರಾಗಿರುವ ಶ್ರೀ ಚಂದ್ರಹಾಸ.ಕೆ.ಶೆಟ್ಟಿ, ಬಂಟರ ಸಂಘದ ಗೌ.ಪ್ರಧಾನ ಕಾರ್ಯದರ್ಶಿಗಳಾಗಿರುವ ಡಾ.ಆರ್.ಕೆ.ಶೆಟ್ಟಿ, ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲೆತ್ತಾಡಿ, ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ನ ಆಡಳಿತ ನಿರ್ದೇಶಕರಾಗಿರುವ ಶ್ರಿ ಮಹೇಶ್ ಎಸ್.ಶೆಟ್ಟಿ…
ಗಣರಾಜ್ಯೋತ್ಸವದ ಪ್ರಯುಕ್ತ 2023 ರ ಜನವರಿ 26 ರಂದು ರಾಷ್ಟ್ರರಾಜಧಾನಿ ದೆಹಲಿಯ ಇಂಡಿಯಾ ಗೇಟ್ ಮತ್ತು ರಾಷ್ಟ್ರಪತಿ ಭವನದ ನಡುವಿನ ಕರ್ತವ್ಯ ಪಥದಲ್ಲಿ ನಡೆದ ಕರ್ನಾಟಕದ ಮೂವರು ಮಾತೆಯರ ಕಥನ ಬಿಂಬಿಸುವ ಮನ ಮುಟ್ಟುವ ಮನಸ್ಸು ಅರಳುವ, ಸ್ಪೂರ್ತಿ ತುಂಬುವ ನಾರಿ ಶಕ್ತಿ ಸ್ತಬ್ಧ ಚಿತ್ರ ಪಥಸಂಚಲನದ ಭವ್ಯ ಮೆರವಣಿಗೆಯ ಪೆರೇಡ್ ಗೆ ಆಯ್ಕೆ ಆಗಿರುವುದನ್ನು ವಾರ್ತಾ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಟ್ಯಾಬ್ಲೊ ತಯಾರಾಗಿಸಿದೆ. ನಾರಿ ಶಕ್ತಿಯ ಪರಿಚಯ= ಅಜಾದಿಕಾ ಅಮೃತ ಮಹೋತ್ಸವದ ಹೊತ್ತಲ್ಲಿ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಪದ್ಮ ಶ್ರೀ ಪುರಸ್ಕೃತ ನಾರಿ ಶಕ್ತಿ ಪರಿಕಲ್ಪನೆಯಲ್ಲಿ ಸ್ತಬ್ಧ ಚಿತ್ರಸಿದ್ದಗೊಳಿಸಿ ಈ ಮೂಲಕ ಭಾರತದ ನಾರಿ ಅದರಲ್ಲೂ ಕರ್ನಾಟಕದ ನಾರಿ ಶಕ್ತಿಯ ಮೂಲಬೇರನ್ನು ಪ್ರಪಂಚಕ್ಕೆ ತೋರಿಸುವ ಕೆಲಸ ಆಗಿದೆ. ಈ ಸಲ ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಿಶಕ್ತಿ ಮುಖ್ಯ ಥಿಮ್ ಆಗಿದ್ದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರ ಕುರಿತು ಟ್ಯಾಬೋಗಳ ಗಮನಸೆಳೆದಿದೆ. ಸ್ತಬ್ಧ ಚಿತ್ರದಲ್ಲಿ ಮುಖ್ಯವಾಗಿ 3 ಭಾಗಗಳಿದ್ದು…
ಮೀರಾ ಭಯಂಧರ್ ಪರಿಸರದ ಹೆಸರಾಂತ ಸಮಾಜ ಸೇವಕಿ, ವಿಧ್ಯಾಧರ ಕನ್ನಡ ಪ್ರತಿಷ್ಠಾನ ಜಯದೇವಿ ತಾಯಿ ಲಿಗಾಡೆ ಪ್ರಶಸ್ತಿ ಪುರಸ್ಕ್ರತೆ, ಬಂಟರ ಸಂಘ ಮುಂಬೈ ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ, ಶ್ರೀ ಶಕ್ತಿ ಫೌಂಡೇಶನ್ ಮಹಾರಾಷ್ಟ್ರದ ಅಧ್ಯಕ್ಷೆ , ಕನ್ನಡ ಜಾನಪದ ಪರಿಷತ್ ನ ಮಹಾರಾಷ್ಟ್ರದ ಮಹಿಳಾ ಕಾರ್ಯಾಧ್ಯಕ್ಷೆಯಾಗಿ ಮಾತ್ರವಲ್ಲದೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಪುರಸ್ಕೃತೆಯಾಗಿ ಸಕ್ರೀಯವಾಗಿ ನಿರಂತರ ಸಮಾಜ ಸೇವೆಗೈಯ್ಯುತ್ತಿರುವ ಸಚ್ಚೇರಿಗುತ್ತು ಶಾಲಿನಿ ಎಸ್. ಶೆಟ್ಟಿಯವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಅವಾರ್ಡ್ ನ್ನು ಪಡೆದಿದ್ದಾರೆ. ಅಂಧೇರಿ ಕಂಟ್ರಿ ಕ್ಲಬ್ ಇಲ್ಲಿ ನಡೆದ ಸಮಾರಂಭದಲ್ಲಿ ದಾದಾ ಸಾಹೇಬ್ ಪಾಲ್ಕೆ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಈ ಪ್ರಶಸ್ತಿಯನ್ನು ಇದರ ಉನ್ನತ ಅಧಿಕಾರಿಗಳು ಪ್ರಶಸ್ತಿಯನ್ನು ಪ್ರಧಾನಿಸಿದರು. ಮಹಾರಾಷ್ಟ್ರದಲ್ಲಿ ತುಳು – ಕನ್ನಡಿಗರ ಪರವಾಗಿ ಬಂಟ ಮಹಿಳೆಯೋರ್ವರು ಇಂತಹ ಮಹಾನ್ ಪ್ರಶಸ್ತಿಗೆ ಭಾಜನರಾಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ.