Author: admin

ಮುಂಬಯಿಯ ಖ್ಯಾತ ಇಂಡಸ್ಟ್ರೀಯಲಿಸ್ಟ್ ಅಲ್ಲದೇ ಮುಂಬೈ ನ ಬಂಟರ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಕಾರ್ಯ ನಿರ್ವಹಿಸಿ ಯಶಸ್ವಿಯಾದ ಸಮಾಜಸೇವಕ ಶ್ರೀ ಮಹೇಶ್ ಎಸ್.ಶೆಟ್ಟಿ ( ಬಾಬಾ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕರು ) ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಇವರು ಈ ಹಿಂದೆ ಒಕ್ಕೂಟದ ಪೋಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Read More

ಬಂಟರ ಸಂಘ (ರಿ.) ಸುರತ್ಕಲ್, ಲಯನ್ಸ್ ಕ್ಲಬ್ ಹಳೆಯಂಗಡಿ, ಜೆಸಿಐ ಸುರತ್ಕಲ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವು ಆದಿತ್ಯವಾರ ಸುರತ್ಕಲ್ ಬಂಟರ ಭವನದಲ್ಲಿ ನೆರವೇರಿತು. ಉದ್ಘಾಟನೆಯನ್ನು ಸುರತ್ಕಲ್ ನ ಹಿರಿಯ ವೈದ್ಯರಾದ ಡಾ.ಟಿ. ಆರ್. ಶೆಟ್ಟಿ ನೆರವೇರಿಸಿದರು. ಬಳಿಕ ಮಾತಾಡಿದ ಅವರು, “ಉದಕ ದಾನ, ಅನ್ನದಾನ, ಗೋ ದಾನ, ಭೂದಾನ ದಂತೆಯೇ ರಕ್ತದಾನ ಕೂಡಾ ಮಹಾದಾನವಾಗಿದ್ದು ಜನರಲ್ಲಿ ರಕ್ತದಾನದ ಕುರಿತು ಹೆಚ್ಚಿನ ತಿಳುವಳಿಕೆ ಮೂಡಿಸಬೇಕಿದೆ. ರಕ್ತದಾನ ಇನ್ನೊಬ್ಬರ ಜೀವ ಉಳಿಸುತ್ತದೆ. 18 ವರ್ಷದಿಂದ 60 ವರ್ಷದೊಳಗಿನ ಪ್ರತಿಯೊಬ್ಬ ವ್ಯಕ್ತಿಯೂ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನದಿಂದ ಆತ್ಮತೃಪ್ತಿ ಸಿಗುತ್ತದೆ. ರಕ್ತದಾನದಿಂದ ಅರೋಗ್ಯ ವೃದ್ಧಿಸುತ್ತದೆ. ಮಾನಸಿಕ, ಭಾವನಾತ್ಮಕ ಆರೋಗ್ಯಕ್ಕೆ ಪೂರಕವಾಗಿರುತ್ತದೆ. ಆದ್ದರಿಂದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು” ಎಂದು ಕರೆ ನೀಡಿದರು. ಲಯನ್ ನಾಗೇಶ್ ಕುಮಾರ್ ಎನ್. ಜೆ., ಜೆ ಎಫ್ ಎಂ ರಾಜೇಶ್ವರಿ ಡಿ. ಶೆಟ್ಟಿ, ಕೆಎಂಸಿ ಆಸ್ಪತ್ರೆಯ ಡಾ. ಕೇಸಿಯಾ, ಹಳೆಯಂಗಡಿ…

Read More

ಕಾಯಕವೇ ಕೈಲಾಸ ಎಂದು ನಂಬಿರುವ ರಾಜೇಂದ್ರ ವಿ ಶೆಟ್ಟಿಯವರು ಹುಬ್ಬಳ್ಳಿಯಲ್ಲಿ ನೆಲೆಸಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ನ ಸಂಸ್ಥಾಪಕರಾಗಿ ಸಮಾಜಸೇವೆ ಮಾಡುತ್ತಾ ಬರುತ್ತಿದ್ದಾರೆ. ಸಾವಿರಾರು ನೌಕರ ವೃಂದಕ್ಕೆ ಅನ್ನದಾತರಾಗಿ, ಓರ್ವ ಅಪ್ಪಟ ದೇಶಪ್ರೇಮಿಯಾಗಿ, ನಮ್ಮ ಸಂಸ್ಕೃತಿ ಆಚಾರ ವಿಚಾರ ಬೆಳೆಸುವಲ್ಲಿ ಕಿರಿಯರಿಗೆ ಮಾರ್ಗದರ್ಶಕರಾಗಿ, ಹಿರಿಯರಿಗೆ ಸದಾ ಗೌರವ ಕೊಡುವ ರಾಜೇಂದ್ರ ಶೆಟ್ಟರಿಗೆ ಭಗವಂತ ಸುಖ, ಶಾಂತಿ, ನೆಮ್ಮದಿ, ಐಶ್ವರ್ಯ, ಆರೋಗ್ಯ, ಸಕಲ ಸಂಪತ್ತನ್ನು ನೀಡಿ ಹರಸಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಕೋರುತ್ತಿದ್ದೇವೆ.

Read More

ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ನವೆಂಬರ್ 2 ರಂದು ಚಿಣ್ಣರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಜಿ ಎಮ್ ಛತ್ರಛಾಯದಲ್ಲಿ ಪ್ರಿ ನರ್ಸರಿಯಿಂದ ಎರಡನೇ ತರಗತಿಯವರೆಗಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡು ಕ್ರೀಡಾಸ್ಫೂರ್ತಿಯನ್ನು ಮೆರೆದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬೆಂಗಳೂರಿನಲ್ಲಿ ಕಾರ್ಯಕ್ರಮ ಅರಿವಿನ ವಿಶ್ಲೇಷಕ ವೃತ್ತಿಯನ್ನು ನಿರ್ವಹಿಸುತ್ತಿರುವ ಜಿ ಎಮ್ ನ ಹಳೆ ವಿಧ್ಯಾರ್ಥಿ ಮನೋಜ್ ಯು ಆಗಮಿಸಿದ್ದರು. ಅವರು ಜ್ಯೋತಿಯನ್ನು ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಮಕ್ಕಳು ಬಾಲ್ಯದಲ್ಲಿ ಕೋಣೆಯ ಒಳಗೆ ಕುಳಿತು ಮೊಬೈಲ್ ನೋಡುವುದನ್ನು ಬಿಟ್ಟು ಹೊರಗಡೆ ಆಟ ಆಡುವುದಕ್ಕೆ ಸಮಯವನ್ನು ಮೀಸಲಿಡಬೇಕು. ಪೋಷಕರು ಮಕ್ಕಳು ಬಾಲ್ಯವನ್ನು ಸವಿಯಲು ಕಲಿಕೆಯ ಜೊತೆಗೆ ಕ್ರೀಡೆಗಳಲ್ಲಿ ತೊಡಗಿಸಲು ಉತ್ತೇಜಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಶಾಲಾ ಧ್ವಜವನ್ನು ಅರಳಿಸಿ ಮಾತನಾಡಿ ಮಕ್ಕಳು ಜೀವನದ ಪಾಠಗಳನ್ನು ತರಗತಿಯ ಹೊರಗೆ ಕಲಿಯುತ್ತಾರೆ. ಕ್ರೀಡೆಗಳಿಂದ ಸಾಮಾಜಿಕ, ನೈತಿಕ ಮೌಲ್ಯಗಳ ಕಲಿಕೆಯಾಗುತ್ತದೆ ಜೊತೆಗೆ ಶಾರೀರಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು. ಶಾಲಾ ಆಡಳಿತ…

Read More

ಶ್ರೀ ಮಾತಾ ವೈಷ್ಞೋದೇವಿ ಶ್ರೈನ್ ಬೋರ್ಡ್ ಕಟ್ರಾ ಜಮ್ಮು ಕಾಶ್ಮೀರ ಪ್ರತಿ ವರ್ಷ ನವರಾತ್ರಿಯಲ್ಲಿ ಆಯೋಜಿಸುವ ಒಂಭತ್ತು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದ ರಾಷ್ಟ್ರೀಯ ಭಕ್ತಿ ಗೀತೆಗಳ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಅವರ ಶ್ರೀ ದೇವಿಮಹಾತ್ಮೆ ಯಕ್ಷಗಾನ ಮತ್ತು ಕಳಂಜದ ನಿನಾದ ಸಾಂಸ್ಕೃತಿಕ ಕೇಂದ್ರದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ತಾಯಿ ವೈಷ್ಞೋದೇವಿಯ ಪದತಳ ಜಮ್ಮುವಿನ ಕಟ್ರಾದಲ್ಲಿ ಮೊದಲ ಬಾರಿಗೆ ನವರಾತ್ರಿ ಉತ್ಸವದ ಪ್ರಥಮ ದಿನ ಜಮ್ಮುವಿನ ಸಾಂಸ್ಕೃತಿಕ ಸಚಿವಾಲಯದ ಸಹಯೋಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮಂಗಳೂರಿನ ವತಿಯಿಂದ ಪಾವಂಜೆ ಮೇಳದ ಕಲಾವಿದರಿಂದ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಿತು. ಜಮ್ಮುವಿನ ವಿದ್ಯುತ್ ಸಚಿವಾಲಯದ ಪ್ರಿನ್ಸಿಪಲ್ ಸೆಕ್ರೆಟರಿ ರಾಜೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಅಕ್ಟೋಬರ್ 2ರಂದು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಯಕ್ಷಗಾನ ಪ್ರದರ್ಶನ ಕಂಡು ಪುಲಕಿತರಾದ ಮಾನ್ಯ ಗವರ್ನರ್ ಮನೋಜ್ ಸಿನ್ಹಾ ಅವರು ವೈಷ್ಞೋದೇವಿ ಸನ್ನಿಧಾನದಲ್ಲಿ ಯಕ್ಷಗಾನ ಪ್ರದರ್ಶನ ನಡೆಸಿಕೊಡುವಂತೆ ಆಗ್ರಹಿಸಿದರು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ…

Read More

ದೈವಾರಾಧನೆಯನ್ನು ಉಸಿರಾಗಿಸಿಕೊಂಡಿರುವ ತುಳುನಾಡಿನಲ್ಲಿ ಅನೇಕ ಕಾರ್ಣಿಕ ಕ್ಷೇತ್ರಗಳು ಕಾಣ ಸಿಗುತ್ತವೆ. ಅಂತಹ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕ್ಷೇತ್ರ ತಾರಾಬರಿ (ಸಾರಬಳಿ) ಜುಮಾದಿ ಬಂಟ ಕ್ಷೇತ್ರ, ಕೆಂಜಾರು. ತಾರಾಬರಿ ತುಳುನಾಡಿನಲ್ಲಿ ಆರಾಧಿಸಲ್ಪಡುವ ಜುಮಾದಿ ಬಂಟ ದೈವಗಳ ಬಂಡಿ ಉತ್ಸವಗಳಲ್ಲಿ ವಿಶೇಷವಾಗಿ ಕಾಣಿಸಲ್ಪಡುತ್ತದೆ. ಪಶ್ಚಿಮ ಘಟ್ಟದಿಂದ ಕಡಲ ತಟಿಯವರಗಿನ ಸಾವಿರಾರು ಭಕ್ತರು ಇಲ್ಲಿಯ ಬಂಡಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ತಾರಾಬರಿ ಕ್ಷೇತ್ರದ ಕಾರಣಿಕದ ಇತಿಹಾಸವನ್ನು ನೋಡಿದಾಗ ಸೂಮಾರು ೯೦೦ ವರ್ಷಗಳ ಹಿಂದೆ “ಭೂತ ಮಂಜು” ಎಂಬವರನ್ನು ಬೆನ್ನು ಹಿಡಿದು ಬಂದ ದೈವಗಳು ತಾರಾ ಬರಿಯಲ್ಲಿ ನೆಲೆಯೂರಿ ಪೇಜಾವರ ಮಾಗಣೆಯವರಿಂದ ಆರಾಧಿಸಲ್ಪಡುತ್ತಾ ಕಾರಣಿಕ ಮೆರೆಯುತ್ತಿದ್ದಾರೆ. ದೈವದ ನುಡಿಕಟ್ಟಿನನುಸಾರ “ಭೂತ ಮಂಜುವಿನ” ಬೆನ್ನು ಹಿಡಿದು ಬಂದ ದೈವವು ಮಾಗಣೆ ಸಮಸ್ತರ ಕೂಡುವಿಕೆಯೊಂದಿಗೆ ಚಿಕ್ಕಪರಾರಿ “ಮಂಜೊಟ್ಟಿ ಮಾರ್ಲ” ಕೈಯಿಂದ ಕೆಸರುಕಲ್ಲು ಹಾಕಿಸಿಕೊಂಡು ದೈವಸ್ಥಾನ ನಿರ್ಮಿಸಲ್ಪಟ್ಟು ಶ್ರೀ ಕ್ಷೇತ್ರದಲ್ಲಿ ನೆಲೆಯೂರಿರುತ್ತಾರೆ. ಮುಂದೆ ಮಂಜೊಟ್ಟಿ ಮಾರ್ಲರಿಂದ ಪಾಪೆ ಬಂಡಿಯನ್ನು ಅರ್ಪಿಸಿಕೊಂಡು ಕೀರ್ತಿ ಪಡೆದರು ಎಂದು ಪ್ರತೀತಿ. ಶ್ರೀ ಕ್ಷೇತ್ರ ಜುಮಾದಿಯ ಕಂಗಿನ ಹಾಳೆಯ…

Read More

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ‘ಬಂಟ ಕಲಾ ಸಂಭ್ರಮ” ಆದಿತ್ಯವಾರ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದ ಗಣೇಶೋತ್ಸವದ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸಮಾಜದ ಸಂಘಟನೆಗೆ ಬಂಟ ಕಲಾ ಸಂಭ್ರಮದಂತಹ ಕಾರ್ಯಕ್ರಮ ಪೂರಕವಾಗಿರುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಸುಮಾರು 16 ತಂಡಗಳು ಭಾಗವಹಿಸುತ್ತಿದೆ. ಇಂತಹ ಸ್ಪರ್ಧೆಯಿಂದ ಎಲ್ಲಾ ಸಂಘಗಳು ಸಕ್ರಿಯವಾಗುತ್ತದೆ. ಪ್ರತಿಭಾ ಪ್ರದರ್ಶನಕ್ಕೆ ಇದೊಂದು ಒಳ್ಳೆಯ ವೇದಿಕೆ. ಬಂಟ ಕಲಾ ಸಂಭ್ರಮ ಶಿಸ್ತುಬದ್ಧವಾಗಿ ಆಯೋಜನೆಗೊಂಡಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಮಾಡಿರುವುದು ಬಂಟರ ಸಂಘದ ಹಿರಿಮೆಯಾಗಿದೆ. ಬಂಟರ ಮಾತೃ ಸಂಘದ ಅಡಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅತೀವ ಸಂತಸ ತಂದಿದೆ.…

Read More

ತುಳುವ ತಿರಿತ ಸಿರಿ ಪಜಿತೊಂದು ಪೋಯಿಲೆಕೊನೇ ಒಂಜೆತ ಬೆರಿಕ್ಕೊಂಜಿ ದಿಂಜಿ ಪೊಸತನ ಅರಲೊಂದು ನೆಗತೊಂದು ಬರ್ಪುಂಡು. ಅರಲಿ ಸಿರಿಮುಡಿತುಲಯಿಡ್ದ್ ಪಸರು ಕಮ್ಮೆನ ನಾಲೂರ ಮೂಂಕುಗೆಡ್ತ್‌ದ್, ಕೆಬಿ ಅರಲಾದ್, ತುಳುವ ಸೀಮೆದಂಚೊರ ಕಣ್ಣ್ ಹಾಸ್‌ದ್, ಕಾರ್ ಒಯ್ತೊಂದು ಬರ್ಪಿಲೆಕ ಮಲ್ಪುಂಡು. ಅತ್ತಂದೆ ಮರಪಂದಿ ನೆಂಪುದ ಮಾಲೆನ್ ಕೋತ್ ಕಡಪುಡುಂಡು ಪನ್ಪಿನೆಕ್ ಸಾಕ್ಷಿಯಾದ್ ಪಿದಯಿ ಊರುದಕ್ಲ್ ನಮ್ಮಾಡೆ ಬಿನ್ನೆರಾದ್ ಬತ್ತ್, ಬಿಕ್ಕೆರಾದ್ ಇತ್ತ್, ಮುಲ್ತ ಸಿರಿ ಸೊಬಗ್‌ನ್ ಅನುಭವಿತ್, ನೆಲಮೂಲೊದ ಐಸ್ರೊನು ತೆರಿದ್, ಅಕ್ಲೆಕ್ಲೆನ ದೇಸೊಡು, ಅಕ್ಲಕ್ಲೆನ ಬಾಸೆಡ್ ಮುಲ್ತ ಐಸಿರಿ ಐಭೋಗೊನು ಪುಗರ್‌ದ್ ವರ್ಣಿತ್‌ದ್ ಬರೆದ್ ಒರಿತ್‌ನವೇ ನೆಗತ್ ತೋಜುಂಡು. ಪರದೇಸೊ ಪರ ಊರುದಕ್ಲೆನ್ ಮರ್ಲ್ ಮಲ್ಪಿ ತುಳುವ ಪೋಕುಡು ಒಂಜಾತ್ ಆಚರಿಪುಲು, ಒಂಜಾತ್ ಪರ್ಬೊಲುಲಾ ಉಲ್ಲೊ. ಪಗ್ಗುದ ಬಿಸುಕಣಿಡ್ದ್ ಸುಗ್ಗಿದ ಕಡೆಮುಟ್ಟ ಒಂಜೆಕ್ಕೊಂಜಿ ಒತ್ತು ಕೊರೊಂದು ಬರ್ಪಿ ಪರ್ಬೊಲೆನ ಆಚರಿಪುದೊಟ್ಟು ಅಯಿಕ್ಕ್ ಸರಿಯಾಯಿ ತೆನಸಮಾಲಿಕೆಲಾ ಉಂಡು. ಪತ್ತನಾಜೆ ಪರ್ಬೊಲೆಗ್ ಗಿಡ್ಕ್ ಅಡೆತ್ತ್ ಬೆನ್ನಿ ಬೇಲೆದಂಚಿ ಮೋನೆ ಪಾಡ್ದ್ ಬೆನ್ನಿದ ಒಂಜಿ ಮೊಟ್ಟುದ…

Read More

ಪೂಜ್ಯ ಪದ್ಮವಿಭೂಷಣ ಡಾl ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನ ಪರಿಕಾ ಪರ್ಕಳದಲ್ಲಿ ಆಯೋಜಿಸಲಾದ “9ನೇ ವಿಶ್ವ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಶ್ರೀ ಧರ್ಮಸ್ಥಳ ಶಾಂತಿವನ ಟ್ರಸ್ಟ್ (ರಿ.) ಕಾರ್ಯದರ್ಶಿಗಳಾದ ಬಿ. ಸೀತಾರಾಮ್ ತೋಳ್ಪಡಿತ್ತಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನದ ಮುಖ್ಯ ವೈದ್ಯಕೀಯ ಅಧಿಕಾರಿಗಳಾದ ಗೋಪಾಲ್ ಪೂಜಾರಿ, ರೆಸಿಡೆಂಟಲ್ ವೈದ್ಯಕೀಯ ಅಧಿಕಾರಿಗಳಾದ ಶೋಭಿತ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾ. 21 ಮತ್ತು 22ರಂದು ಜರಗಲಿರುವ ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲಿ ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯ ಗರ್ಭಗುಡಿ ನಿರ್ಮಾಣಕ್ಕೆ ಬಳಸುವ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ಒದಗಿಸಲಾಗಿದೆ. ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹಂತದಲ್ಲಿ ನಡೆಯುತ್ತಿರುವ ಗರ್ಭಗುಡಿ ಮತ್ತು ಸುತ್ತುಪೌಳಿ ನಿರ್ಮಾಣ ಸಹಿತ ವಿವಿಧ ಜೀರ್ಣೋದ್ದಾರ ಕಾರ್ಯಗಳಿಗೆ ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಎರಡು ವರ್ಷಗಳಿಂದ ಭಕ್ತರಿಂದ ನಿರಂತರ ಶಿಲಾ ಸೇವೆ – ಶಿಲಾ ಪುಷ್ಪ ಸಮರ್ಪಣ ಕಾರ್ಯಕ್ರಮ ನಡೆಯುತ್ತಿದೆ. ಒಂದು ಶಿಲಾ ಸೇವೆಗೆ 999 ರೂ., 9 ಶಿಲಾ ಸೇವೆಗೆ 9,999 ರೂ., 99 ಶಿಲಾಸೇವೆಗೆ 99,999 ರೂ., 999 ಶಿಲಾ ಸೇವೆಗೆ 9,99,999 ರೂ., 9,999 ಶಿಲಾ ಸೇವೆಗೆ 99,99,999 ರೂ. ನಿಗದಿ ಪಡಿಸಲಾಗಿದ್ದು 9ಕ್ಕಿಂತ ಹೆಚ್ಚಿನ ಶಿಲಾ ಸೇವೆ ಸಮರ್ಪಿಸುವ ಭಕ್ತರನ್ನು ಕಾಪುವಿನ ಅಮ್ಮನ ಭಕ್ತರು ತಂಡದಲ್ಲಿ ಸೇರಿಸಿಕೊಳ್ಳಲಾಗುತ್ತಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶಿಲಾ…

Read More