Author: admin

ಬೆಳಪು, ಎಲ್ಲೂರು ಮತ್ತು ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಆರ್ಥಿಕ ಸಬಲೀಕರಣದ ಉದ್ದೇಶದೊಂದಿಗೆ 1948ರಲ್ಲಿ ಸ್ಥಾಪಿತವಾದ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಅಮೃತ ಮಹೋತ್ಸವದ ಸವಿನೆನಪಿಗಾಗಿ ‌ಉಚ್ಚಿಲದಲ್ಲಿ ನಿರ್ಮಿಸಲಾದ ನೂತನ ಸಹಕಾರಿ ಮಹಲ್ ನ ಉದ್ಘಾಟನೆ ಮತ್ತು ಸಹಕಾರಿ ಧುರೀಣ ಡಾ. ಎಂ.ಎನ್. ಆರ್ ಅವರಿಗೆ ಸಹಕಾರಿ ಧ್ರುವ ಪ್ರಶಸ್ತಿ ಪ್ರಧಾನ ಸಮಾರಂಭವು ಸೆ. 2 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ‌ ಈ ಬಗ್ಗೆ ಮಾಹಿತಿ ನೀಡಿದ ಅವರು, ಉಚ್ಚಿಲದಲ್ಲಿ ನಿರ್ಮಿಸಲಾಗಿರುವ ಸಂಘದ ನವೀಕೃತ ಶಾಖೆ ಮತ್ತು ನೂತನ ಸಹಕಾರಿ ಮಹಲ್ ಕಟ್ಟಡ ಹಾಗೂ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕಾನ್ಪರೆನ್ಸ್ ಹಾಲ್, ಸಮೃದ್ಧಿ ಸಭಾಂಗಣ, ರೈತ ಬಂಧು ಕೃಷಿ ಸಲಕರಣೆ ಕೇಂದ್ರ, ರೈತ ಮಾರುಕಟ್ಟೆ ಮತ್ತು ಗೋದಾಮು ಹಾಗೂ ಪಡಿತರ ವಿತರಣಾ…

Read More

ಇಂಧನ ಶಕ್ತಿಯು ಪ್ರತೀ ದೇಶದ ಅಭಿವೃದ್ಧಿಯಲ್ಲಿ ದೊಡ್ಡ ಪಾತ್ರವನ್ನು ನಿರ್ವ ಹಿಸುತ್ತಿದೆ. ವಿಶ್ವದ ಹಲವಾರು ದೇಶಗಳು ತಮ್ಮ ತಮ್ಮ ಇಂಧನ ಕ್ಷೇತ್ರವನ್ನು ಬಲಪಡಿಸುವಲ್ಲಿ ನಿರತವಾಗಿವೆ. ಅದರಲ್ಲೂ ಜೈವಿಕ ಇಂಧನಕ್ಕೆ ಹೆಚ್ಚು ಪ್ರಾಮುಖ್ಯ ನೀಡುತ್ತಿರುವ ದೇಶಗಳು ಹೊಸ ತಂತ್ರಜ್ಞಾನದ ಮೂಲಕ ಜೈವಿಕ ಇಂಧನವನ್ನು ವೃದ್ಧಿಸಲು ಯೋಜನೆಗಳನ್ನು ರೂಪಿಸಿವೆ. ಪ್ರಪಂಚದಾದ್ಯಂತ ಜೈವಿಕ ಇಂಧನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತೀ ವರ್ಷ ಆಗಸ್ಟ್‌ 10ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸ ಲಾಗುತ್ತದೆ. ಏನಿದು ಜೈವಿಕ ಇಂಧನ? ಏನಿದರ ಪ್ರಯೋಜನ? ಈ ನಿಟ್ಟಿನಲ್ಲಿ ಭಾರತದ ಯೋಜನೆಗಳೇನು? ಎನ್ನುವುದರ ಮಾಹಿತಿ ಇಲ್ಲಿದೆ. ಜೈವಿಕ ಇಂಧನ ಎಂದರೆ? ಸಸ್ಯ, ಕೃಷಿ ತ್ಯಾಜ್ಯ, ಪ್ರಾಣಿ ತ್ಯಾಜ್ಯ ಹಾಗೂ ಇತರ ಸಾವಯವ ಪರಿಕರಗಳಿಂದ ದೊರೆಯುವ ಇಂಧನವೇ ಜೈವಿಕ ಇಂಧನ. ಈ ಇಂಧನಗಳನ್ನು ಪಳೆಯುಳಿಕೆ ಇಂಧನಗಳ ಪರ್ಯಾಯವಾಗಿ ಬಳಸಬಹುದಾಗಿದೆ. ಯಾಕೆ ಮಹತ್ವ? ಆರೋಗ್ಯಯುತ ಪರಿಸರ ನಿರ್ಮಾಣದಲ್ಲಿ ಜೈವಿಕ ಇಂಧನ ಸಹಕಾರಿಯಾಗಿದೆ. ಇವು ನವೀಕರಿಸಬಹುದಾದ ಇಂಧನ ಮೂಲಗಳಾಗಿವೆ. ಇವುಗಳಿಂದ ಇಂಗಾಲದ ಹೊರಸೂಸುವಿಕೆ ಯನ್ನು…

Read More

ಪ್ರಕೃತಿಯ ಸಮತೋಲನಕ್ಕೆ ಪರಿಸರ ರಕ್ಷಣೆ ‌ಪೂರಕ. ಪರಿಸರವನ್ನು ನಾವು ಅವಲಂಬಿಸಿದ್ದೇವೆಯೇ ಹೊರತು ಅದು ನಮ್ಮನ್ನು ಅವಲಂಬಿಸಿಲ್ಲ ಎಂಬುದನ್ನು ಮೊದಲು ‌ಗಮನಿಸಿಕೊಳ್ಳಬೇಕು. ಭೂರಮೆಯ ಒಡಲು ವಿಸ್ಮಯಗಳ ಆಗರ ಆದರೆ ಮಾನವನ ಅತಿ ಆಸೆಯಿಂದ ಪ್ರಕೃತಿಯ ಮೇಲಿನ ವಿಧ್ವಂಸಕ ಕೃತ್ಯಗಳು ಮಿತಿ ಮೀರಿ ಅಕ್ರಮಣವಾಗುತ್ತಿದ್ದು ಎಲ್ಲವನ್ನೂ ಸಹಿಸಿಕೊಂಡ ಭೂಮಿ ಜೀವರಾಶಿಗಳನ್ನು ಕಾಪಾಡಿಕೊಂಡು‌ ಬರುತ್ತಿದೆಯಾದರೂ ಒಂದಲ್ಲ ಒಂದು ರೂಪದಲ್ಲಿ ಅವತರಿಸಿ ಬುದ್ದಿ ಕಲಿಸಿತು, ಈಗಿಂದಲೇ‌ ಪ್ರಾಕೃತಿಕ ಸಮತೋಲನ ಕಾಯ್ದುಕೊಳ್ಳುವತ್ತ ಚಿತ್ತಹರಿಸಬೇಕಾದ ಅಗತ್ಯವಿದೆ. ದಿನದಿಂದ ದಿನಕ್ಕೆ ಪರಿಸರ ಮಾಲಿನ್ಯವೂ ಹೆಚ್ಚಾಗುತ್ತಲೇ ಇದ್ದು ಅಭಿವೃದ್ಧಿಯ ಹೆಸರಿನಲ್ಲಿ ಸ್ವಾರ್ಥ ಸಾಧನೆಗೆ ಹೊರಟಿದ್ದೇವೆ ಎನ್ನುವುದರ ಅರಿವಿಲ್ಲದೆ ‌ ಇಡುತ್ತಿರುವ ಹೆಜ್ಜೆಗಳು ನಿಸರ್ಗದ ಪರಿಸ್ಥಿತಿ ಕೆಡಲು ಕಾರಣವಾಗಿದೆ. ಪ್ರಕೃತಿ ಮುನಿದಾಗ ಮಾನವ‌ ಬಹುದೊಡ್ಡ ಸವಾಲು ಎದುರಿಸಲೇ‌ಬೇಕಾಗುತ್ತದೆ. ಪ್ರಕೃತಿಯ ಸಮತೋಲನದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಪ್ರಾಕೃತಿಕ ಅನಾಹುತಗಳು ಖಂಡಿತ. ಇಂದು ಭೌತಿಕ, ಜೈವಿಕ ಹಾಗೂ ಭೌಗೋಳಿಕ ಪರಿಸರದ ಆರೋಗ್ಯ ಕೆಟ್ಟಿದ್ದು, ಕುಡಿವ ನೀರು ಸೇವಿಸುವ ಗಾಳಿ, ನಡೆದಾಡುವ ಭೂಮಿ ಮಲಿನಗೊಂಡಿದೆ. ಸಮತೋಲನ ತಪ್ಪಿದ ಪರಿಸರದಿಂದ ಮುಂದಾಗಬಹುದಾದ…

Read More

ಜನವರಿ 24 ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಈ ದಿನದ ‌ಸಂಭ್ರಮದಲ್ಲಿ ಯಾವ ಕಲ್ಪನೆಗೂ ಎಟುಕದಂತಹ ಕಾರ್ಯಸಿದ್ದಿಯ ತತ್ಪರತೆಯಲ್ಲೆ ಗೆಲುವು ಸಾಧಿಸುವಂತಹ ಹೆಣ್ಣು ಮಕ್ಕಳ ಬದುಕು ಭವಿಷ್ಯದ ಬಗ್ಗೆ ಯೋಚಿಸ‌‌ಬೇಕು.ಸರಕಾರ, ಸಮಾಜ, ಹಾಗೂ ಪಾಲಕರು ಹೆಚ್ಚಿನ ಮಹತ್ವ ಹೆಣ್ಣು ಮಕ್ಕಳ ಭವಿಷ್ಯದ ಬೆಳವಣಿಗೆಗೆ ಕೊಟ್ಟಲ್ಲಿ ಅವರ ಬದುಕು ಸುಖ ಶಾಂತಿ ಸಮೃದ್ದಿಯಿಂದ ತುಂಬಿ ಬಾಳು ಬಂಗಾರವಾಗಲಿದೆ. ಇಂದಿನ ‌ಮಕ್ಕಳೆ ಮುಂದಿನ ಜನಾಂಗ ಭವ್ಯ ಭಾರತ ಕಟ್ಟುವ ಸರದಾರರು ಇವರು . ” ಬೆಳೆವ‌ ಸಿರಿ ಮೊಳಕೆ ಯಲ್ಲಿ ನೋಡು” ಎಂಬಂತೆ ಶಿಸ್ತು, ಸರಳತೆ, ಶ್ರದ್ಧೆ, ಪ್ರಾಮಾಣಿಕತೆ, ಶೌರ್ಯ, ಧೈರ್ಯ, ವಿನಯ, ವಿಧೇಯತೆ ಯಂತಹ ಉತ್ತಮ ಗುಣಗಳು ಬಾಲ್ಯದಲ್ಲೇ‌ ಮಕ್ಕಳಿಗೆ ‌ ಕಲಿಸಿದರೆ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದಂತೆ . ಪಾಲಕರು ಕೆಲಸದ ಒತ್ತಡದಲ್ಲಿ ಮಕ್ಕಳ ‌ಲಾಲನೆಪಾಲನೆಗೆ ಹೆಚ್ಚಿನ ಗಮನ ಕೊಡಲು ಅಸಮರ್ಥರಾಗುತ್ತಿದ್ದಾರೆ. ಚಿಕ್ಕ ಮಕ್ಕಳು ಮೃದು ಹಾಗೂ ಅನುಕರಣೆಯ ಸ್ವಭಾವ ಹೊಂದಿದ್ದು ಹೆತ್ತವರ ‌ನಡೆ -ನುಡಿ ಆಚಾರ- ವಿಚಾರ ಉಡುಗೆ…

Read More

ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘ ಯುವ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಬಂಟವಾಳದ ಬಂಟರ ಭವನದಲ್ಲಿ ಜರುಗಿತು. ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರಂಗೋಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಯುವ ವಿಭಾಗದ ಕಾರ್ಯಕಾರಿಣಿ ಸದಸ್ಯರ‌ ಸಭೆಯಲ್ಲಿ ನಿಶಾನ್ ಆಳ್ವ, ಸುಜೀರುಗುತ್ತು ಇವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಮಾಡಲಾಯಿತು. ಉಪಾಧ್ಯಕ್ಷರಾಗಿ ಕರುಣ್ ಶೆಟ್ಟಿ, ಕಾರ್ಯದರ್ಶಿಯಾಗಿ ಗೋಕುಲ್ ಭಂಡಾರಿ, ಖಜಾಂಚಿಯಾಗಿ ಶುಭಕರ್ ಮಾರ್ಲ ಮತ್ತು ಜೊತೆ ಕಾರ್ಯದರ್ಶಿಯಾಗಿ ದೀಪಕ್ ಶೆಟ್ಟಿ ಸರ್ವಾನುಮತದಿಂದ ಆಯ್ಕೆಗೊಂಡರು.

Read More

ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ ತನ್ನದೇ ಆದ ವಿಶಿಷ್ಟ, ಶುಚಿ-ರುಚಿಯಾದ ಊಟ ಉಪಹಾರದ ಜೊತೆ, ದೇಶಪ್ರೇಮದ ಬೀಜ ಬಿತ್ತಿರುವ ಶ್ರೀ ಪಂಜುರ್ಲಿ ಎಲ್ಲರ ಮನೆಮಾತಾಗಿದೆ. ಇದೀಗ ಶ್ರೀ ಪಂಜುರ್ಲಿ ಬೆಣ್ಣೆ ನಗರಿ ಖ್ಯಾತಿಯ ದಾವಣಗೆರೆಗೆ ಹೆಜ್ಜೆಯಿಡುತ್ತಿದೆ. ದಾವಣಗೆರೆಯ ಗ್ರಾಹಕರಿಗೆ ತನ್ನದೇ ಆದ ವಿಶಿಷ್ಟವಾದ ಊಟ, ಉಪಹಾರದ ಜೊತೆ ದಾವಣಗೆರೆ ಜನತೆಗೆ ಒಂದು ಸುಂದರ, ವಿನೂತನವಾದ ಶ್ರೀ ಲೀಲಾವತಿ ಕಲ್ಯಾಣ ಮಂಟಪ ಅನ್ನದಾತ, ಸಮಾಜಸೇವಕ ರಾಜೇಂದ್ರ ವಿ ಶೆಟ್ಟಿ ಸಾರಥ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಫೆಬ್ರವರಿ 23ರಂದು ಬುಧವಾರ ಬೆಳಿಗ್ಗೆ 9.30 ಕ್ಕೆ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭಗೊಳ್ಳಲಿದೆ. ಶ್ರೀ ಪಂಜುರ್ಲಿ ಗ್ರೂಪ್ ನ ಮಾಲಕರಾದ ರಾಜೇಂದ್ರ ಶೆಟ್ಟಿ ಅವರ ಶ್ರಮ ನಿಜವಾಗಲೂ ಮೆಚ್ಚುವಂತದ್ದೇ, ತಾನು ಬೆಳೆದು ತಮ್ಮವರನ್ನು ಬೆಳೆಸಬೇಕೆಂಬ ಅವರ ದೊಡ್ಡ ಗುಣ, ಅವರನ್ನು ಆಕಾಶದೆತ್ತರಕ್ಕೆ ಕೊಂಡೊಯ್ಯುತ್ತಿದೆ. ಇದೆ 23ಕ್ಕೆ ಇದನ್ನೇ ಆಮಂತ್ರಣ ಎಂದು ಭಾವಿಸಿ, ಹೆಚ್ಚಿನ ಸಂಖ್ಯೆಯಲ್ಲಿ ದಾವಣಗೆರೆಗೆ ಆಗಮಿಸಿ, ಹೋಟೆಲ್ ಶ್ರೀ ಪಂಜುರ್ಲಿ ಪ್ಯಾಲೆಸ್ ಹಾಗೂ ಶ್ರೀ ಲೀಲಾವತಿ ಕಲ್ಯಾಣ ಮಂಟಪಕ್ಕೆ ಶುಭಾಶಯ ಕೋರಲು…

Read More

ಯುವ ಕ್ರಿಕೆಟಿಗ, ಕ್ರೀಡಾ ಸಂಘಟಕ ನಿತೇಶ್ ಶೆಟ್ಟಿ ಇವರ ಸಾರಥ್ಯದಲ್ಲಿ ರಾಷ್ಟ್ರೀಯ ಮಟ್ಟದ ಅದ್ಧೂರಿಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಪಾಂಚಜನ್ಯ ಟ್ರೋಫಿ-2023 ಇತ್ತೀಚಿಗೆ ಕೋಟ ಗಿಳಿಯಾರು ಶಾಂಭವಿ ಶಾಲಾ ಮೈದಾನದಲ್ಲಿ ಜರುಗಿತು. ಕುಂದಾಪುರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಶೆಟ್ಟಿ, “ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಬದುಕಿನಲ್ಲಿ ಎಂತಹ ಪರಿಸ್ಥಿತಿಯಲ್ಲೂ ಧೃತಿಗೆಡದೆ ಸಮರ್ಥವಾಗಿ ನಿಭಾಯಿಸುತ್ತಾರೆ‌. ಪಾಂಚಜನ್ಯದ ನಿತೇಶ್ ಶೆಟ್ಟಿ ಉತ್ತಮ ಸಂಘಟಕರು. ಕ್ರಿಕೆಟ್ ಗೆ ಹೊಸ ಆಯಾಮ ನೀಡುವುದರಲ್ಲಿ ನಿಸ್ಸೀಮರು. ಈ ಬಾರಿಯೂ ಪಂದ್ಯಾವಳಿಗೆ ಹೊಸ ಸ್ಪರ್ಶ ನೀಡಿದ್ದಾರೆ.” ಸಂಘಟಕರಾದ ನಿತೇಶ್ ಹಾಗೂ ಪಾಂಚಜನ್ಯದ ತಂಡವನ್ನು ಅಭಿನಂದಿಸಿ ಶುಭ ಹಾರೈಸಿದರು.

Read More

ವಿದ್ಯಾಗಿರಿ : ನಮ್ಮನ್ನು ನಾವು ಮೊದಲು ಬದಲಿಸಿಕೊಳ್ಳದೆ ಹೊರತು, ಸಮಾಜವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಆಳ್ವಾಸ್ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಪಕಿ ಡಾ. ಮೂಕಾಂಬಿಕಾ ಜಿ. ಎಸ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ವಿಭಾಗದ ವತಿಯಿಂದ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಗುರುವಾರ ಆಂತರಿಕ ಸಮಿತಿ ಆಯೋಜಿಸಿದ್ದ ‘ಮಹಿಳಾ ದೌರ್ಜನ್ಯ ತಡೆ ಅರಿವು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶದ ‘ಯತ್ರಾ ನಾರ್ಯಂತು ಪೂಜ್ಯಂತೆ’ ಶ್ಲೋಕವನ್ನು ನಾವು ಒಪ್ಪುತ್ತೇವೆ, ಆದರೆ ಪಾಲಿಸುವುದಿಲ್ಲವೇಕೆ? ಎಲ್ಲರಿಗೂ ದೌರ್ಜನ್ಯವಾಗುತ್ತದೆ, ಆದರೆ ಈ ತಕ್ಕಡಿಯಲ್ಲಿ ಮಹಿಳಾ ದೌರ್ಜನ್ಯದ ತಕ್ಕಡಿ ಮಾತ್ರ ನೆಲಮುಟ್ಟುವಷ್ಟು ತೂಕ ಹೊಂದಿದೆ. ಎಲ್ಲರನ್ನ ಗೌರವಿಸುವ ವ್ಯಕ್ತಿತ್ವ ಇದ್ದರೆ ಸಮಸ್ಯೆಗೆ ಪರಿಹಾರ ಸಾಧ್ಯ. ಪ್ರತಿ ಕಾನೂನುಗಳ ಹಿಂದೆ ಒಂದು ಇತಿಹಾಸವಿದೆ. ರಕ್ಷಣೆ ಕೊಡುವ ಕಾನೂನು ಇರುವಾಗ ಸಮಸ್ಯೆಗಳನ್ನು ತಿಳಿಸಲು ಹಿಂಜರಿಯುವುದು ಸೂಕ್ತವಲ್ಲ. ಪ್ರಕೃತಿಯ ಮುಂದೆ ಎಲ್ಲರೂ ಸಮಾನರು. ಅಸಮಾನತೆಯನ್ನು ನಮ್ಮಿಂದ ಮೊದಲು ದೂರ ತಳ್ಳಬೇಕು, ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ…

Read More

ದಶಮಾನೋತ್ಸವ ಆಚರಿಸಿರುವ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ನೂತನ ಕಾರ್ಯಾಧ್ಯಕ್ಷರಾಗಿ ಹೊಟೇಲು ಉದ್ಯಮಿ ಸುದೇಶ್ ಶೆಟ್ಟಿ ನೇಮಕಗೊಂಡಿದ್ದಾರೆ.

Read More

ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ದಿನಾಂಕ 15- 9 – 2023 ರಂದು ಪೋಷಕರ ಕ್ರೀಡಾಕೂಟವನ್ನು ಹಮ್ಮಿಕೊಂಡಿದ್ದು, ಬಹಳ ಉತ್ಸಾಹದಿಂದ ನಡೆಸಲಾಯಿತು. ಕಾರ್ಯಕ್ರಮವು ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಯಿತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉತ್ಸಾಹದಿಂದ ಪೋಷಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ ಎಸ್ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಪೋಷಕರ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಕುರಿತು ಸಹ ಪ್ರೇರಕ ಭಾಷಣವನ್ನು ಮಾಡಿದರು. ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಿದರು ಮತ್ತು ಕ್ರೀಡಾ ಚಟುವಟಿಕೆಗಳನ್ನು ಮಾಡುವುದರಿಂದ ಆಗುವ ಅನೇಕ ಪ್ರಯೋಜನಗಳನ್ನು ತಿಳಿಸಿದರು. ಮಕ್ಕಳಿಗೆ ಪಾಠ ಎಷ್ಟು ಮುಖ್ಯವೋ ಆಟವು ಅಷ್ಟೇ ಮುಖ್ಯ. ಕ್ರೀಡೆಯ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದವರೂ ಇದ್ದಾರೆ ಎಂದರು. ಶಾಲಾ ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪೋಷಕರು ತಮ್ಮ ಆಸಕ್ತಿಗೆ ಅನುಗುಣವಾಗಿ ಭಾಗವಹಿಸಿದರು. ಶಾಲೆಯ ಒಳ ಸಭಾಂಗಣದಲ್ಲಿ ಎಲ್ಲಾ ಆಟಗಳನ್ನು ಆಯೋಜಿಸಲಾಗಿತ್ತು. ಎಲ್ಲಾ…

Read More