Author: admin
ಗೌರವಾನ್ವಿತ ಜಿಲ್ಲಾ ಗವರ್ನರ್ ಲಯನ್ ಡಾ. ಎಮ್ ಕೆ ಭಟ್ ರವರು ಲಯನ್ ಜಿಲ್ಲಾ ಪ್ರಥಮ ಮಹಿಳೆ, ಅವರ ಪತ್ನಿ ಲಯನ್ ಸವಿತಾ ಎಮ್ ಕೆ ಭಟ್ ರವರೊಂದಿಗೆ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಗೆ ಅಧೀಕೃತ ಭೇಟಿ ನೀಡಿದರು. ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನ ದಲ್ಲಿ ಜರುಗಿದ ಕಾರ್ಯಕ್ರಮಕ್ಕೆ, ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷರಾದ ಲಯನ್ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ ಹಾಗೂ ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡರು. ಲಯನ್ ಜಿಲ್ಲಾ ಗವರ್ನರ್ ಡಾ. ಎಮ್ ಕೆ ಭಟ್ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ B.O.D ಸಭೆ ನಡೆಸಿದರು. ಲಯನ್ ಬನ್ನಾಡಿ ಪ್ರಭಾಕರ್ ಶೆಟ್ಟಿಯವರ ಪ್ರಾರ್ಥನೆ ಮೂಲಕ, ಸಮಯಕ್ಕೆ ಸರಿಯಾಗಿ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಲಯನ್ ಜಿಲ್ಲಾ ಪ್ರಥಮ ಮಹಿಳೆ ಲಯನ್ ಸವಿತಾ ಎಮ್ ಕೆ ಭಟ್ ರವರನ್ನು ಶ್ರೀಮತಿ…
ಪುಣೆ ಬಂಟರ ಸಂಘದ ವಾರ್ಷಿಕ ಸ್ನೇಹಸಮ್ಮಿಲನವು ಜನವರಿ 26 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆಯಲಿದ್ದು ಈ ಬಗ್ಗೆ ಚರ್ಚಿಸಲು ಪೂರ್ವಭಾವಿ ಸಭೆಯನ್ನು ಸ್ವಾರ್ಗೆಟ್ ನಲ್ಲಿರುವ ಹೋಟೆಲ್ ಅಣ್ಣಾಚಿ ಚಾವಡಿಯಲ್ಲಿ ನಡೆಸಲಾಯಿತು. ಈ ಸಂದರ್ಭ ಸಭೆಯ ಅಧ್ಯಕ್ಷತೆ ವಹಿಸಿದ್ದ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಸ್ವಾಗತಿಸಿ ಮಾತನಾಡಿ ಪ್ರತೀವರ್ಷ ನಮ್ಮ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಸಮಾರಂಭವು ಜ 26 ಕ್ಕೆ ನಡೆಯುತ್ತಿದ್ದು ಈ ವರ್ಷದ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವಲ್ಲಿ ವಿಶೇಷ ರೀತಿಯಲ್ಲಿ ಶಿಸ್ತುಬದ್ಧವಾಗಿ ಆಯೋಜಿಸುವಲ್ಲಿ ನಾವು ಸಾಕಷ್ಟು ಪೂರ್ವತಯಾರಿಯನ್ನು ಮಾಡಬೇಕಾಗಿದೆ. ಈ ವರ್ಷ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿರುವ ಈ ಉತ್ಸವದಲ್ಲಿ ಸಮಾಜದ ಗಣ್ಯ ಅತಿಥಿಗಳೂ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 2:30 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈ ಆಗಮಿಸಲಿದ್ದಾರೆ. ಗೌರವ…
ಕರಾವಳಿಯ ತುಳು ಕನ್ನಡಿಗರು ಉದರ ಪೋಷಣೆಗಾಗಿ ಜಗತ್ತಿನ ನಾನಾ ಕಡೆಗಳಲ್ಲಿ ವಲಸೆ ಹೋದರು. ತಾವು ಹೆಜ್ಜೆಯೂರಿದ ಪ್ರತಿಯೊಂದು ಕಡೆಗಳಲ್ಲೂ ತಮ್ಮ ಬದುಕು ಕಟ್ಟಿಕೊಳ್ಳುವ ಮುಂಚೆ ನಾಡಿನ ಸಂಸ್ಕೃತಿ, ಕಲೆ, ಧರ್ಮ, ಭಾಷೆಯನ್ನು ಬೆಳೆಸುವುದಕ್ಕೆ ಮೊದಲ ಪ್ರಾಶಸ್ತ್ಯ ಕೊಟ್ಟರು. ತುಳು ಮಣ್ಣಿನ ಸಂಸ್ಕ್ರತಿಯ ಆರಾಧಕರಾದ ಅವರುಗಳು ತಾವು ನೆಲೆಯೂರಿದ ಸ್ಥಳಗಳಲ್ಲಿ ನಮ್ಮ ಸಂಸ್ಕೃತಿಯನ್ನು ಆ ರಾಜ್ಯದ, ಆ ದೇಶದ ಜನರಿಗೆ ಪರಿಚಯಿಸಿದರು ಮಾತ್ರವಲ್ಲ, ನಮ್ಮ ಕಲೆಯನ್ನು ನಮ್ಮ ಸಂಸ್ಕ್ರತಿಯನ್ನು ಅಲ್ಲಿನವರೂ ಗೌರವಿಸುವಂತೆ ನೋಡಿಕೊಂಡರು. ಜಗದಗಲ ಇಂದು ತುಳುನಾಡಿನ ಸಂಸ್ಕ್ರತಿ ಮತ್ತು ಇಲ್ಲಿನ ಜನರು ರಾರಾಜಿಸುತ್ತಿದ್ದಾರೆ ಎಂದರೆ ಅಲ್ಲಿ ಅವರ ಛಲ, ಪರಿಶ್ರಮ ಎದ್ದು ಕಾಣುತ್ತದೆ.ಹಾಗೆಯೇ ಶತಮಾನದ ಹಿಂದೆ ಮುಂಬಯಿ ನಗರಕ್ಕೆ ಬದುಕನ್ನು ಅರಸಿಕೊಂಡು ಬಂದ ನಮ್ಮವರು ಬೆಳೆದ ಎತ್ತರದ ಕಡೆ ಗಮನ ಹರಿಸಿದರೆ ಸೋಜಿಗವಾಗದೆ ಇರಲಾರದು. ಶ್ರಮ ಸಂಸ್ಕ್ರತಿಯ ಈ ನಗರದಲ್ಲಿ ತುಳುನಾಡಿನ ಸಂಸ್ಕೃತಿ ಇಂದು ನಳನಳಿಸುತ್ತಿದೆ ಅನ್ನುವಾಗ ಆ ನಾಡಿನಿಂದ ಬಂದ ನಾವುಗಳು ಭಾಗ್ಯವಂತರಲ್ಲದೆ ಮತ್ತಿನ್ನೇನು?? ಇಲ್ಲಿ ನೆಲೆಸಿದ ತುಳುವರು ಯಾವತ್ತಿಗೂ…
ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ
ವಿಶ್ವಮಾನವ ಕುವೆಂಪು ಕಲಾನಿಕೇತನ ರಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ಜು.06ರಂದು ಬುಧವಾರ ಸಂಜೆ 5.30 ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಟಿ. ಎಸ್ ನಾಗಾಭರಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ನಾಡೋಜ ಜೋಶಿ ಜಂಟಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು. ಉದಾರ ಮನಸ್ಸಿನಿಂದ ಸರ್ವೊತ್ತಮ್ ಶೆಟ್ಟಿ ಯವರು ಸಿಕ್ಕಿದ ಗೌರವ ಧನವನ್ನು ಬೆಳಕು ಅಕಾಡೆಮಿಯ ಅಶ್ವಿನಿ ಅಂಗಡಿ ಯವರಿಗೆ ಹಸ್ತಾಂತರ ಮಾಡಿದರು.ಮತ್ತು…
*ಕನ್ನಡ ಸೇವಾ ಸಂಘ ಪೊವಾಯಿ ಇದರ ಮಹಿಳಾ ವಿಭಾಗದ ವತಿಯಿಂದ ಪರಿಸರದ ತುಳು ಮತ್ತು ಕನ್ನಡದ ಮಕ್ಕಳು ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಕಾರ್ಯಕ್ರಮ* ಕನ್ನಡ ಸೇವಾ ಸಂಘ ಪೊವಾಯಿ ಇದರ ಮಹಿಳಾ ವಿಭಾಗದ ವತಿಯಿಂದ ಪರಿಸರದ ತುಳು ಮತ್ತು ಕನ್ನಡ ಮಕ್ಕಳಿಗೆ ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮವನ್ನು ಜನವರಿ 30 ಭಾನುವಾರದಂದು ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಸಂಘದ ಕಛೇರಿಯಲ್ಲಿ ಆಯೋಜಿಸಲಾಗಿತ್ತು. ಅಧ್ಯಕ್ಷರಾದ ನ್ಯಾಯವಾದಿ ಆರ್.ಜಿ.ಶೆಟ್ಟಿ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ.ಆರ್.ರೈ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷೆ ಪ್ರಶಾಂತಿ.ಡಿ.ಶೆಟ್ಟಿ, ಕಾರ್ಯದರ್ಶಿ ನಾಗರಾಜ ಗುರುಪುರ ಅವರೆಲ್ಲರೂ ಸೇರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವರುಷ ನಮ್ಮ ಸಂಘದ ಬೆಳ್ಳಿ ಹಬ್ಬದ ಸಂಭ್ರಮ.ಆ ಸಂಭ್ರಮವನ್ನು ಸಂಭ್ರಮಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.ಅದರಲ್ಲಿ ಈ ರಂಗೋಲಿ ಸ್ಪರ್ಧೆ ಒಂದಾಗಿದೆ. ಪೊವಾಯಿ ಪರಿಸರದ 15 ರಿಂದ 20 ಪ್ರಾಯದ ಮಕ್ಕಳು ಮತ್ತು 21 ರಿಂದ ಮೇಲ್ಪಟ್ಟ ಮಹಿಳೆಯರು ರಂಗೋಲಿ ಸ್ಪರ್ಧೆಯಲ್ಲಿ ಹೆಚ್ಚಿನ…
ಏಣಗುಡ್ಡೆಯ ಬಹು ಕಾರಣಿಕದ ಕ್ಷೇತ್ರವೆನಿಸಿದ ದುರ್ಗಾ ನಗರ ಚೌಡೇಶ್ವರಿ ದೇವಸ್ಥಾನದಲ್ಲಿ ಇದೇ ಬರುವ 30.12.2023 ರ ಶನಿವಾರದಂದು ಚೌಡೇಶ್ವರಿ ದೇವಿಗೆ ಹೂವಿನ ಪೂಜೆ ಹಾಗೂ ದರ್ಶನ ಸೇವೆ ವಿಜೃಂಭಣೆಯಿಂದ ಊರ ಹಾಗೂ ಪರವೂರ ಭಕ್ತಾದಿಗಳ ಸಮಕ್ಷಮದಲ್ಲಿ 11 ಫಂಟೆಯ ಶುಭಮುಹೂರ್ತದಲ್ಲಿ ಜರಗಲಿದ್ದು, ಆ ಪ್ರಯುಕ್ತ 12.00 ಘಂಟೆಗೆ ಚಪ್ಪರ ಮುಹೂರ್ತ 12.30 ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಬಳಿಕ ಸಂಜೆ 5.00ಘಂಟೆಗೆ ಭಂಡಾರ ಇಳಿಯುವುದು. ತದ ನಂತರ 6.00 ಘಂಟೆಗೆ ಕುಣಿತ ಭಜನೆ ಕಾರ್ಯಕ್ರಮ ನಡೆಯಲಿದೆ. ಅದೇದಿನ ರಾತ್ರಿ 8.00 ಗಂಟೆಗೆ ಕಲ್ಕುಡ ವರ್ತೆ ಕಾಳಮ್ಮ ದೈವಗಳಿಗೆ ನೇಮೋತ್ಸವ ಜರುಗಲಿದೆ. ಮತ್ತು ಮರುದಿನ ದಿನಾಂಕ 31.12.2023 ರ ಭಾನುವಾರ ಬೆಳಿಗ್ಗೆ 9.00 ಘಂಟೆಗೆ ಗುಳಿಗ ದೈವಕ್ಕೆ ನೇಮೋತ್ಸವ ಜರಗಲಿರುವುದು. ಅದೇ ರೀತಿ 3.1.2024 ರ ಬುಧವಾರ ದೈವಗಳಿಗೆ ತಂಬಿಲ ಸೇವೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪ ನಡೆಯಲಿದ್ದು, ಆಸ್ತಿಕ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೈವಗಳ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕೆಂದು ಶ್ರೀ…
ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಜನರ ಬದುಕು ಭಾವನೆಗಳ ನಡುವೆ ಗತಕಾಲದಿಂದಲೂ ಗ್ರಾಮೀಣ ಕೃಷಿಕರು ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ ಪರಿಕಗಳು ನೇಪಥ್ಯಕ್ಕೆ ವಾಲುತ್ತಿದೆ. ನಮ್ಮ ನಾಡಿನ ಮುಖ್ಯ ಆಹಾರ ಬೆಳೆಗಳಲ್ಲೊಂದಾಗಿರುವ ಭತ್ತವನ್ನು ಮನೆಯ ಮುಂದಿರುವ ಅಂಗಳದಲ್ಲಿ ಶ್ರೀಮಂತಿಕೆಗೆ ಸಾಕ್ಷಿ ಎಂಬಂತೆ ಬೃಹತ್ ಆಕಾರದ ದೇಶಿ ಸೊಗಡಿನ ತಿರಿ ಸಂಪತ್ತಿನ, ಸಿರಿತನದ ಮನೆತನದ ಗುತ್ತಿನ ಪ್ರತೀಕವಾಗಿದ್ದ ಕಾಲವೊಂದಿತ್ತು. ತಿರಿ ಕಟ್ಟುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಸಿಕೊಂಡು ಬಂದಿದ್ದಾರೆ. ವಿಧಾನವನ್ನು ಭತ್ತದ ಕಣಜ ಕಟ್ಟುವಿಕೆ ಅಥವಾ ಗ್ರಾಮ್ಯ ಭಾಷ್ಯೆಯಲ್ಲಿ ತಿರಿ ಕಟ್ಟುವುದು ಎಂದು ಕರೆಯುತ್ತಾರೆ. ಆದರೆ ಈ ಸಂಪ್ರದಾಯ ಈ ಕಾಲಘಟ್ಟದಲ್ಲಿ ನಿಧಾನವಾಗಿ ಕಣ್ಮರೆಯಾಗುತ್ತಿರುವುದು ವಿಷಾದನೀಯ. ಎರಡು ಮೂರು ವರ್ಷಗಳವರೆಗೆ ತಿರಿಯಲ್ಲಿ ಧಾನ್ಯ ಸಂಗ್ರಹಿಸಿಟ್ಟರೂ ಹಾಳಾಗುವುದಿಲ್ಲ. ಅಷ್ಟೇ ಅಲ್ಲದೆ ಬಹಳ ಹಿಂದೆ ಹೆಣ್ಣು ಕೊಟ್ಟು ಮದುವೆ ಮಾಡಿಸುವವರು ಮನೆಯೆದುರಿನ ತಿರಿ ನೋಡಿ ಅವರ ಶ್ರೀಮಂತಿಕೆ ಅಳೆಯುತ್ತಿದ್ದರಂತೆ. ತಿರಿಯೊಂದಿಗೆ ಸಂಪ್ರದಾಯಬದ್ಧ ಗೌರವದ ಶ್ರೀಮಂತಿಕೆಯ ಇತಿಹಾಸವಿತ್ತು. ಆದರೆ ಆಧುನೀಕರಣದ ಭರಾಟೆಯಲ್ಲಿ ಈ ನೈಸರ್ಗಿಕ ಹುಲ್ಲಿನ ತಿರಿ ತನ್ನ ಅಸ್ತಿತ್ವವನ್ನೇ…
ಪುಣೆ ;ಶ್ರೀ ಗುರುದೇವ ಸೇವಾಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ ಪ್ರತಿ ವರ್ಷದಂತೆ ನಡೆಯುವ ಪುಣ್ಯ ಜ್ಯೋತಿರ್ಲಿಂಗ ದರ್ಶನ ಮತ್ತು ಪುಣ್ಯ ಕ್ಷೇತ್ರಗಳ ದರ್ಶನದ ತೀರ್ಥಯಾತ್ರೆಯು ಈ ಬಾರಿ ಉತ್ತರಖಂಡದ ದೇವಭೂಮಿಯ ಹೃಷಿಕೇಶ್,ಹರಿದ್ವಾರ್ ,ಕೇದಾರನಾಥ್ ಜ್ಯೋತಿರ್ಲಿಂಗ ,ಬದ್ರಿನಾಥ್ ನರ ನಾರಾಯಣ ದೇವರ ದರ್ಶನದೊಂದಿಗೆ ಜರಗಿತು. ಒಡಿಯೂರಿನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜಿಯವರ ಶುಭಾಶಿರ್ವಾದದೊಂದಿಗೆ , ಪುಣೆ ಶ್ರೀ ಗುರುದೇವ ಸೇವಾ ಬಳಗದ ಅದ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ, ಪ್ರ ಕಾರ್ಯದರ್ಶಿ ರೋಹಿತ್ ಶೆಟ್ಟಿ ಯವರ ಮು೦ದಾಳತ್ವದಲ್ಲಿ ಸುಮಾರು 44 ಜನ ಯಾತ್ರಾರ್ಥಿಗಳು 8 ದಿನದ ಈ ಯಾತ್ರೆಯಲ್ಲಿ ಪಾಲ್ಗೊಂಡರು , ಈ ಬಾರಿ ಬಾರತದ ಪವಿತ್ರವಾದ 12 ಜ್ಯೋತಿರ್ಲಿಂಗಗಳ ಪೈಕಿ ಹಿಮಾಲಯ ಪರ್ವತ ತಪ್ಪಲಿನ ಕೇದಾರನಾಥ್ ಕೆಧಾರೆಶ್ವರನರ ದರ್ಶನ ಗೈದು ದೇವಾಲಯದಲ್ಲಿ ಭಕ್ತರು ಪೂಜೆ ಸಲ್ಲಿಸಿ ಪುನಿತರಾದರು ,ಪುಣೆ ಶ್ರೀ ಗುರುದೇವ ಸೇವಾ ಬಳಗವು ಈ ಬಾರಿ 12ನೆ ಜ್ಯೋತಿರ್ಲಿಂಗ ದರ್ಶನ ಮಾಡುವ…
‘ಆಳ್ವಾಸ್ನಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಪ್ರಯೋಗಾಲಯ’ ವಿದ್ಯಾಗಿರಿ: ‘ಇಲ್ಲಿನ ಕಂಪ್ಯೂಟರ್ ಪ್ರಯೋಗಾಲಯವು ನಾನು ನೋಡಿದ ಪಿಯು ಕಾಲೇಜುಗಳ ಪೈಕಿ ಅತ್ಯಾಧುನಿಕ ಸೌಲಭ್ಯ ಹೊಂದಿದ ‘ಹೈ ಎಂಡ್ ಕಂಪ್ಯೂಟರ್ ಪ್ರಯೋಗಾಲಯ’ ಎಂದು ಸುರತ್ಕಲ್ ಎನ್ಐಟಿಕೆ ಪ್ರಾಧ್ಯಾಪಕ ಡಾ.ಮೋಹಿತ್ ಪಿ. ಶ್ಲಾಘಿಸಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. ಸ್ಥಿರತೆ, ಸಮರ್ಪಕ ಯೋಜನೆ ಹಾಗೂ ಜೀವನ ಪರ್ಯಂತ ಕಲಿಕೆಯು ಯಶಸ್ಸಿನ ಸೂತ್ರ ಎಂದರು. ಬದುಕಿನಲ್ಲಿ ಸ್ಥಿರತೆಯು ಬಹುಮುಖ್ಯ. ನಾವು ಮಾಡುವ ಯಾವುದೇ ಕಾರ್ಯದಲ್ಲಿ ಸ್ಥಿರತೆ ಇದ್ದಾಗ ಮಾತ್ರ ಪರಿಪೂರ್ಣತೆ ಸಾಧಿಸಲು ಸಾಧ್ಯ. ವಾರದ ಕೊನೆಗೆ ಐದು ಗಂಟೆ ಕೆಲಸ ಮಾಡುವ ಬದಲು ಪ್ರತಿನಿತ್ಯ ಅರ್ಧಗಂಟೆ ಕೆಲಸ ಮಾಡಿ. ಡೆಡ್ಲೈನ್ ವೇಳೆಯಲ್ಲಿ ಕೆಲಸ ಮಾಡಲು ಯತ್ನಿಸಿದರೆ, ಒತ್ತಡ ಹೆಚ್ಚಾಗುತ್ತದೆ. ಅಲ್ಲದೇ, ಡೆಡ್ಲೈನ್ ತಪ್ಪಿದರೆ ತಪ್ಪು ದ್ವಿಗುಣಗೊಳ್ಳುತ್ತದೆ ಎಂದರು. ಅಂಕ ಕಡಿತಗೊಳಿಸುವಾಗ ಉಪನ್ಯಾಸಕರ ಮನಸ್ಸಿಗೂ ನೋವಾಗುತ್ತದೆ. ಆದರೆ, ನೀವುಇನ್ನಷ್ಟು ಪ್ರಗತಿ ಹೊಂದಬೇಕು ಎಂದು ಅಂಕ ಕಡಿತ ಮಾಡುತ್ತಾರೆ ಎಂದು ಸಮಜಾಯಿಷಿ…
ಮೀರಾ ಭಯಂದರ್ ಮಹಾನಗರ ಪಾಲಿಕೆಯು ಮೀರಾ ರೋಡಿನ ವಿದ್ಯಾ ನಗರಿಯ ಫಸ್ಟ್ ಸ್ಟೆಪ್ ಗ್ಲೋಬಲ್ ಶಾಲೆಯ ಬಳ್ಳಿ ಸೌತ್ ಇಂಡಿಯನ್ ಭವನ ನಿರ್ಮಾಣದ ಶಿಲಾನ್ಯಾಸವನ್ನು ಉತ್ತರ ಮುಂಬಯಿಯ ಸಂಸದ ಗೋಪಾಲ್ ಸಿ ಶೆಟ್ಟಿ ಮತ್ತು ಮೀರಾ ಭಯಂದರ್ ನ ಶಾಸಕ ಪ್ರತಾಪ್ ಸರ್ ನಾಯಕ್ ಅವರೊಂದಿಗೆ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ ಶೆಟ್ಟಿ ಯವರು ಜೂನ್ 28 ರಂದು ನೆರವೇರಿಸಿದರು. ಅನಂತರ ಧಾರ್ಮಿಕ ಪೂಜಾ ಕಾರ್ಯಗಳು ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಮಾಣಿ ಗುತ್ತು ಶಿವಪ್ರಸಾದ್ ಶೆಟ್ಟಿ ದಂಪತಿಯ ಯಜಮಾನಿಕೆಯಲ್ಲಿ ವೇದಮೂರ್ತಿ ಕೃಷ್ಣರಾಜ ತಂತ್ರಿಯವರು ನಡೆಸಿದರು. ಪೂಜಾ ಕಾರ್ಯಗಳು ನಡೆದ ಬಳಿಕ ಬಂಟರ ಸಂಘ ಮುಂಬಯಿಯ ಆಯೋಜನೆಯಲ್ಲಿ ತುಳು ಕನ್ನಡಿಗರ ಸಹಕಾರದೊಂದಿಗೆ ಮೀರಾ ರೋಡಿನ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಷನಲ್ ಹೋಟೆಲ್ ಬಳಿ ಇರುವ ಭಾರತರತ್ನ ಗಾನ ಸಾಮ್ರಾಟ ಲತಾ ಮಂಗೇಶ್ಕರ್ ನಾಟ್ಯ ಗೃಹ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು…