Author: admin
ಕಳತ್ತೂರು ಗುರ್ಮೆ ಪದ್ಮಾವತಿ ಪಿ ಶೆಟ್ಟಿಯವರ ನಾಲ್ಕನೇಯ ಪುಣ್ಯತಿಥಿಯ ಪ್ರಯುಕ್ತ ಸಮಾಜಸೇವಕ, ರಾಜಕೀಯ ಮುಂದಾಳು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅವರ ಸಹೋದರರ ಸಾರಥ್ಯದಲ್ಲಿ ಕಾಪು ತಾಲೂಕಿನ ಗುರ್ಮೆ ಫೌಂಡೇಶನ್ ವತಿಯಿಂದ ಫೆಬ್ರವರಿ 20 ರಂದು ಸಂಜೆ 4 ಗಂಟೆಗೆ ಗುರ್ಮೆ ಗೋ ವಿಹಾರ ಲೋಕಾರ್ಪಣೆಯು ಜರಗಲಿದೆ. ಉದ್ಘಾಟನೆಯನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಸ್ವಾಮೀಜಿ, ಪೇಜಾವರ ಮಠದ ಸ್ವಾಮೀಜಿ, ಗೌರಿ ಗದ್ದೆಯ ವಿನಯ್ ಗುರೂಜಿ, ಸಚಿವರಾದ ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ, ವಿ ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಎಂ ಆರ್ ಜೆ ಗ್ರೂಪ್ ಛೇರ್ಮನ್ ಕೆ ಪ್ರಕಾಶ್ ಶೆಟ್ಟಿ, ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಡಾ ಮೋಹನ್ ಆಳ್ವ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನ ಹಾಗೂ ನೊಂದವರಿಗೆ ಸಾಂತ್ವನವೂ ನಡೆಯಲಿದೆ. ಶ್ರೀಕಾಂತ್ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ್ ನೀರುಮಾರ್ಗ ಮತ್ತು…
ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಜನವರಿ ತಿಂಗಳ 17 ನೇ ತಾರೀಕಿನಿಂದ 23 ರವರೆಗೆ ನಡೆಯಲಿದೆ. ಆ ಪ್ರಯುಕ್ತ ಮುಂಬಯಿಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು, ಹಿತೈಷಿಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲು ಸಮಯಾವಕಾಶ ಸಿಗದ ಕಾರಣ, ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜನವರಿ 3 ರಂದು ಬುಧವಾರ ಮುಂಬಯಿ ಗೋರೆಗಾವ್ ಪೂರ್ವದ ಸಿಟಿ ಫಿಲಂ ರಸ್ತೆಯ ಒಬೆರಾಯ್ ಮಾಲ್ ಬಳಿಯ ಹೋಟೆಲ್ ‘ಬಾಂಬೆ 63’ ಇಲ್ಲಿ ಸಂಜೆ 4 ಗಂಟೆಗೆ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ. ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವಾಧ್ಯಕ್ಷ ರವೀಂದ್ರ ಸಾಧು ಶೆಟ್ಟಿ ಹೊಸಮನೆ, ಕಾರ್ಯಧ್ಯಕ್ಷ ಹರಿಶ್ಚಂದ್ರ ಶೆಟ್ಟಿ ಕರ್ನಿರೆ…
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21 ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಮ್ಮೇಳನ ಬೆಳಗ್ಗೆ 9 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ರಿಂದ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮ್ಮೇಳನದಲ್ಲಿ ‘ಪತ್ರಿಕೋದ್ಯಮದ ಹೊಸ ಆಯಾಮಗಳು’ ಎಂಬ ವಿಷಯದಲ್ಲಿ ಸಮ್ಮೇಳನದ ಪ್ರಮುಖ ಗೋಷ್ಠಿ ನಡೆಯಲಿದೆ. ಈ ಗೋಷ್ಠಿ ಉದಯವಾಣಿ ದೈನಿಕದ ಸಂಪಾದಕ ಅರವಿಂದ ನಾವುಡರ ಅಧ್ಯಕ್ಷತೆಯಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ, ಡೆಕ್ಕನ್ ಹೆರಾಲ್ಡ್…
ಚಿಣ್ಣರ ಬಿಂಬ ಮುಂಬಯಿಯ ಇದರ ಮೀರಾರೋಡ್ ಶಿಬಿರದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ವರ್ಧೆ ಆ. 13 ರಂದು ಅಪರಾಹ್ನ 1 ರಿಂದ ಭಾಯಂದರ್ ಪೂರ್ವ, ಶಕ್ತಿ ನಗರ ಎಸ್ ಎನ್ ಕಾಲೇಜಿನ ಸಮೀಪದ ನ್ಯೂ ಸೈಂಟ್ ಆಗ್ನೇಸ್ ಹೈಸ್ಕೂಲ್ ಸಭಾಗೃಹದಲ್ಲಿ ನಡೆಯಲಿದೆ. ಪ್ರತಿಭಾ ಸ್ವರ್ಧೆ ಕಾರ್ಯಕ್ರಮವನ್ನು ಸುಮತಿ ಎಜುಕೇಶನಲ್ ಟ್ರಸ್ಟ್, ಸೈಂಟ್ ಅಗ್ನೇಸ್ ಇಂಗ್ಲಿಷ್ ಹೈಸ್ಕೂಲ್, ಮೆಹ್ತಾ ಸ್ಕೂಲ್ ಮತ್ತು ಜೂನಿಯರ್ ಕಾಲೇಜಿನ ಕಾರ್ಯಧ್ಯಕ್ಷ ಡಾ. ಅರುಣೋದಯ ರೈ ಬಿಳಿಯೂರು ಗುತ್ತು ಇವರು ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಮುಂಬಯಿ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಜತೆ ಕೋಶಾಧಿಕಾರಿ ರಮೇಶ್ ಎಂ. ಶೆಟ್ಟಿ ಸಿದ್ಧಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೀರಾರೋಡ್ ಶುಭಂ ಹೊಟೇಲ್ ನ ಮಾಲಕ ಉದಯ್ ಎಂ ಶೆಟ್ಟಿ ಮಲಾರಬೀಡು, ಸಾಯಿ ಬಾಲಾಜಿ ಹೌಸಿಂಗ್ ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಯೋಗೇಂದ್ರ ಎಸ್. ಗಾಣಿಗ ಹಾಗೂ ನಿತ್ಯಾನಂದ ಸೇವಾ ಸಂಸ್ಥೆಯ ಮಹಿಳಾ ವಿಭಾಗದ ಅಧ್ಯಕ್ಷೆ ಜಯಶ್ರೀ ಬಾಲಕೃಷ್ಣ ಶೆಟ್ಟಿ…
ಬೆಂಗಳೂರು ಪ್ರಾದೇಶಿಕ ಕಛೇರಿ ವ್ಯಾಪ್ತಿಯ ತುಮಕೂರು ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯು ತುಮಕೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ಸಭೆಯನ್ನು ಉಪಾಧ್ಯಕ್ಷರಾದ ಶ್ರೀ ಅಮರನಾಥ ಶೆಟ್ಟಿ ಕೆಂಜೂರು ಮನೆಯವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಭೆಗೆ ಆಗಮಿಸಿದ ಎಲ್ಲಾ ಗಣ್ಯರನ್ನು ಜಿಲ್ಲಾ ನಿರ್ದೇಶಕರಾದ ಶ್ರೀಮತಿ ದಯಾಶೀಲ ಇವರು ಸ್ವಾಗತ ಮಾಡಿದರು. ಇದುವರೆಗೂ ತುಮಕೂರು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಇತ್ತೀಚಿಗೆ ನಿಧನರಾದ ಶ್ರೀ ಪ್ರೆಸ್ ರಾಜಣ್ಣ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಪ್ರಾದೇಶಿಕ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಶೀನಪ್ಪ ಸರ್ ಇವರು ಕ್ರಿಯಾ ಯೋಜನೆ ಅನುಷ್ಠಾನದ ಕುರಿತು ಜನಜಾಗೃತಿ ಕಾರ್ಯಕ್ರಮಗಳಾದ ಮಧ್ಯವರ್ಜನ ಶಿಬಿರ, ನವ ಜೀವನ ಸಮಿತಿ ಬಲಪಡಿಸುವಿಕೆ, ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಗಾಂಧಿ ಜಯಂತಿ ಕಾರ್ಯಕ್ರಮ, ಇನ್ನಿತರ ಜನಜಾಗೃತಿ ಕಾರ್ಯಕ್ರಮವನ್ನು…
ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ, ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಭಾಷ್ಯೆಯನ್ನು ಬರೆದಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ತಿಳಿಸಿದರು. ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2023 ರ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಲ ಭಾಗವತರ ಜನಪ್ರಿಯತೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಮೂಲಕ ತಿಳಿಯಬಹುದು. ಪ್ರಸ್ತಾವಿಕವಾಗಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಯಕ್ಷಗಾನದ ಪಾರಂಪರಿಕೆ, ಸೊಗಡನ್ನು ಉಳಿಸುವ ಪ್ರಯತ್ನವೇ ಯಕ್ಷಗಾನ ಸ್ಪರ್ಧೆಯ ಉದ್ದೇಶವಾಗಿದೆ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಕೂರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಹೇಶ್ ಮೋಟರ್ಸ್ ಸಂಸ್ಥೆಯ ಮಾಲಕ ಜಯರಾಮ ಶೇಖ, ಬಹರೈನ್ – ಸೌದಿ ಘಟಕದ ಅಧ್ಯಕ್ಷ ವಿ…
ಕೃಷಿ ಸಂಸ್ಕೃತಿಯ ತುಳುನಾಡಿನಲ್ಲಿ ಪಶು ಪಕ್ಷಿಗಳಿಗೆ ಆಚರಣೆ ಆರಾಧನೆಯಲ್ಲೂ ಮಹತ್ತರ ಸ್ಥಾನಮಾನ. ದೇವಸ್ಥಾನದ ಬಸವ ಎನ್ನುವ ಒಂದು ಗುರುತಿಸುವಿಕೆ ಕೂಡ ಇದೇ ರೀತಿಯದ್ದು. ಹೀಗೆ ಒಂದು ಹೋರಿ ಆಯ್ಕೆಯ ಪ್ರಕ್ರಿಯೆಗೆ ಹಲವು ಹಂತಗಳಿವೆ. ಹೋರಿಯ ಭುಜ, ಬಣ್ಣ, ನಿಲುವು, ತಳಿ ಇತ್ಯಾದಿಗಳಿಗೆ ವಿಶೇಷ ಮಹತ್ವ ಇದೆ. ಅವುಗಳನ್ನು ಸಾಕುವ ಜವಾಬ್ದಾರಿ ಕೂಡ ದೊಡ್ಡದು. ಹಿಂದೆ ಅವುಗಳನ್ನು ಸಾಕುವುದಕ್ಕಾಗಿ ಗದ್ದೆಗಳನ್ನು ನಿರ್ಧಿಷ್ಟ ಮನೆತನಕ್ಕೆ ಉಂಬಲಿಯಾಗಿ ನೀಡುತ್ತಿದ್ದರು. ಇತ್ತೀಚೆಗೆ ಆ ವಿಚಾರ ಬಹಳಷ್ಟು ಬದಲಾವಣೆಗಳನ್ನು ಕಂಡಿವೆ. ಕೇರಳ ದೇವಸ್ವಂ ಬೋರ್ಡಿನ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳಲ್ಲಿ ಬಸವನ ಆರೈಕೆ ಮಾಡುವ ವ್ಯಕ್ತಿಗೆ ಸರಕಾರ ಸಂಬಳವನ್ನು ನೀಡುತ್ತಿದೆ. ನಮ್ಮೂರಿನ ಕೆಲವು ಕಡೆ ದೈವಗಳಿಗೂ ಬಸವ ಇದೆ. ಇತ್ತೀಚೆಗೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನಕ್ಕೆ ಪುಟ್ಟ ಕರುವೊಂದನ್ನು ಬಸವನಾಗಿ ಆಯ್ಕೆ ಮಾಡಲಾಯಿತು. ಬಹಳಷ್ಟು ಕಡೆಯಲ್ಲಿ ಹಲವು ಭಕ್ತರು ತಮ್ಮ ಕರುಗಳನ್ನು ದೇವಸ್ಥಾನಕ್ಕೆ ಒಪ್ಪಿಸಲು ಆಸಕ್ತರಾಗಿದ್ದರೂ ಕೂಡಾ ಅಂತಿಮ ಆಯ್ಕೆಯಲ್ಲಿ ಭಾಗ್ಯ ಒಲಿದದ್ದು ‘ಶಂಭು’ ಎನ್ನುವ ಕರುವಿಗೆ ( ಸಂಜೀವ…
ಡಿಸೆಂಬರ್ 25 ರಂದು ಭಾನುವಾರ ಸಂಜೆ 3 ಗಂಟೆಗೆ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ಕಾರ್ಯಕ್ರಮ ನಡೆಯಲಿದ್ದು, ಸಹಾಯ ಹಸ್ತ ಯೋಜನೆಯಲ್ಲಿ ಸುಮಾರು 1,250 ಕುಟುಂಬಗಳಿಗೆ ಸುಮಾರು 2.50 ಕೋಟಿ ರೂಪಾಯಿ ಸಹಾಯ ಧನವನ್ನು ವಿತರಿಸಲಾಗುವುದು ಎಂದು ಎಂಆರ್ ಜಿ ಗ್ರೂಪ್ ನ ಚೇರ್ಮೆನ್ ಕೆ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಈ ಬಾರಿ ಸಹಾಯ ಹಸ್ತ ಯೋಜನೆಗೆ ಸಂಬಂಧಿಸಿ ಅರ್ಜಿಗಳನ್ನು ವಿತರಣೆ ಮಾಡಿ ಬಳಿಕ ಅವುಗಳನ್ನು ಸ್ಥಳೀಯ ಸಂಘ ಸಂಸ್ಥೆಗಳ ಮೂಲಕ ಪರಿಶೀಲಿಸಿ, ಅವಶ್ಯವೆನಿಸಿದಲ್ಲಿ ಅರ್ಜಿದಾರರ ಮನೆಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ ಬಳಿಕ ಅವರನ್ನು ಆಯ್ಕೆ ಮಾಡಲಾಗಿದೆ. ತೀರಾ ಅವಶ್ಯಕತೆ ಇರುವವರನ್ನು ಗುರುತಿಸಿದ್ದೇವೆ ಎಂಬ ತೃಪ್ತಿ ನಮಗಿದೆ” ಎಂದು ಸಹಾಯ ಹಸ್ತ ಯೋಜನೆಯ ಕುರಿತಂತೆ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ವಿವರಿಸಿದರು. ಸಮಾಜ ಸೇವೆ, ಸೇವಾ ಕಾರ್ಯಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳನ್ನೂ ನೆರವಿಗೆ ಆಯ್ಕೆ ಮಾಡಲಾಗಿದೆ. ಜಾತಿ, ಧರ್ಮಗಳನ್ನು ಪರಿಗಣಿಸದೆ ಸಹಾಯವನ್ನು ವಿತರಿಸಲಾಗುತ್ತಿದೆ.…
ಬಂಟರ ಸಂಘ ಮುಂಬಯಿ ಪ್ರಾಯೋಜಿತ ಉನ್ನತ ಶಿಕ್ಷಣ ಸಂಸ್ಥೆಗಳಾದ ಅಣ್ಣಲೀಲಾ ಕಾಲೇಜು ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ಹಾಗೂ ಶೋಭಾ ಜಯರಾಮ್ ಶೆಟ್ಟಿ ಬಿಎಂಎಸ್ ಕಾಲೇಜು ಕುರ್ಲಾ ಇದಕ್ಕೆ ಶಿಕ್ಷಣ ಕ್ಷೇತ್ರದ ಪ್ರತಿಷ್ಠಿತ ನ್ಯಾಕ್ (NAAC) ಮಾನ್ಯತೆ ಯು ದೊರೆತಿದ್ದು ಇದರ ಅಂಗವಾಗಿ ಉನ್ನತ ಶಿಕ್ಷಣ ಸಮಿತಿಯ ಮಾಜಿ ಕಾರ್ಯಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿಯವರ ನೇತ್ರತ್ವದಲ್ಲಿ ಅಭಿನಂದನೆ ಹಾಗೂ ಶಿಕ್ಷಣ ಸಂಸ್ಥೆಯ ಶಿಕ್ಷಕ ವೃಂದದವರಿಗೆ ಸಂತೋಷಕೂಟವನ್ನು ನವಿ ಮುಂಬಯಿ ಪ್ರಸಿದ್ಧ ತಾರ ಹೋಟೆಲ್ ಕಂಟ್ರಿ ಇನ್ ಆಂಡ್ ಸೂಟ್ಸ್ ಬೈ ರೆಡಿಸನ್ ಇಲ್ಲಿ ಆಯೋಜಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಚಂದ್ರಹಾಸ ಕೆ ಶೆಟ್ಟಿ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಉದ್ದೇಶ ಒಂದು ಅತ್ತ್ಯುತ್ತಮ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ಸಮಾಜಕ್ಕೆ ನೀಡಬೇಕು ಎಂಬುದಾಗಿದ್ದು ಹೊರತು ಹಣ ಮಾಡುವ ಉದ್ದೇಶವಿಲ್ಲ. ಕರ್ಮಭೂಮಿಯಾದ ಮುಂಬಯಿ ನಮಗೆ ತುಂಬಾ ಕೊಟ್ಟಿದೆ ನಾವು ಈ ನಾಡಿಗೆ ಏನನ್ನಾದರೂ ಕೊಡಬೇಕು…
ಸುರತ್ಕಲ್ ಬಂಟರ ಸಂಘದ ಕ್ರೀಡೊತ್ಸವ ಸುರತ್ಕಲ್ : ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಸಂಸ್ಥೆ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ಬಂಟರ ಕ್ರೀಡೋತ್ಸವ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪಥಸಂಚಲನದಲ್ಲಿ ಭಾಗವಹಿಸಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಮಾಜ ಸೇವೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕ್ರೀಡಾಳುಗಳಿಗೆ ಒಕ್ಕೂಟ ನಿರಂತರ ಸಹಾಯ ಮಾಡುತ್ತಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘ ನಿರಂತರ ಕಾರ್ಯಚಟುವಟಿಕೆಯಲ್ಲಿ ತೊಡಗಿದ್ದು, ಇದಕ್ಕೆ ಜಾಗತಿಕ ಬಂಟರ ಸಂಘಗಳ…