Author: admin

ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ. ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ತೆರಿಗೆ ಹಣಕಾಸು ನಿರ್ಧರಣೆ ಸ್ಥಾಯಿ ಸಮಿತಿಯ ಅಧ್ಯಕ್ಷ…

Read More

ವಿದ್ಯಾಗಿರಿ: ‘ಜೀವನದಲ್ಲಿ ಎಲ್ಲವೂ ಯಶಸ್ವಿ ಆಗಬೇಕಾಗಿಲ್ಲ ಸೋಲನ್ನೂ ಧೈರ್ಯದಿಂದ ಎದುರಿಸುವ ಛಲವನ್ನು ಬೆಳಸಿಕೊಳ್ಳಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ವಿದ್ಯಾಗಿರಿಯ ಮುಂಡ್ರೆದೆಗುತ್ತು ಕೆ. ಅಮರನಾಥ ಶೆಟ್ಟಿ – ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಾರ್ಷಿಕೋತ್ಸವವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ವಿಧ್ಯಾರ್ಥಿಗಳ ಏಳಿಗೆಗೆ ಶ್ರಮಪಡುವ ಶಿಕ್ಷಕರೇ ನಿಜವಾದ ಶಿಕ್ಷಕರು. ಶಾಲೆಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಏನು ಕಲಿಯುತ್ತೀರೋ, ಅಷ್ಟೇ ಮುಖ್ಯ ಅದರ ಬಳಿಕ ನೀವು ಏನನ್ನು ಕಲಿಯುತ್ತೀರಿ ಎಂಬುದು ಎಂದು ಹೇಳಿದರು. ಆಳ್ವಾಸ್‍ನ ರಾಜ್ಯ ಪಠ್ಯಕ್ರಮದಡಿಯ ಒಂದೇ ಶಾಲೆಯಲ್ಲಿ 1800 ವಿದ್ಯಾರ್ಥಿಗಳು ಕಲಿಯುತ್ತಿರುವುದು ನಮ್ಮ ಗುಣಮಟ್ಟವನ್ನು ತಿಳಿಸುತ್ತದೆ. ನಮ್ಮ ವಿದ್ಯಾರ್ಥಿಗಳ ಸಾಧನೆಯೇ ಆಳ್ವಾಸ್‍ನ ಸಾಧನೆ. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಆಳ್ವಾಸ್ ವಿದ್ಯಾರ್ಥಿಗಳ ಬಹುಭಾಷಾ ಅಭಿವೃದ್ಧಿಗೆ ಪೂರಕವಾದ ವಾತವರಣವನ್ನು ಶಾಲೆಯ ಆವರಣದಲ್ಲಿ ಬಹುಮುಖಿ ಆಯಾಮದಲ್ಲಿ ಸೃಷ್ಠಿಲಾಗಿದೆ. ಇದು ವಿದ್ಯಾರ್ಥಿಗಳ ಬೌದ್ಧಿಕ, ಸಾಮಾಜಿಕ, ಭಾವನಾತ್ಮಕ…

Read More

ಕುಂದ ವರ್ಮನೆಂಬ ಅರಸ ಪಂಚ ಗಂಗಾವಳಿಯ ಹತ್ತಿರ ಕುಂದೇಶ್ವರ ದೇವಾಲಯವನ್ನು ಕಟ್ಟಿಸಿದ್ದು, ಅದರಿಂದಾಗಿ ಕುಂದಾಪುರವೆಂದು ಹೆಸರು ಬಂತು ಎನ್ನಲಾಗುವ ಪರಂಪರೆಯನ್ನು ಮೈಗೂಡಿಸಿಕೊಂಡ ದೇವಸ್ಥಾನ ದೈವಸ್ಥಾನಗಳ ನೆಲೆ ಬೀಡು. ಕಡಲು ನದಿಗಳ ಸುಂದರ ಸಂಗಮ, ಆಕಾಶಕ್ಕೆ ಸಡ್ಡು ಹೊಡೆದು ನಿಂತ ಗುಡ್ಡ ಬೆಟ್ಟಗಳಿಂದ ಆವೃತವಾದ ನಯನ ಮನೋಹರ ಪಶ್ಚಿಮ ಘಟ್ಟಗಳ ದಟ್ಟ ಹಸಿರ ನಿಸರ್ಗದ ಮಡಿಲಲ್ಲಿ ಜಲಧಾರೆಯಾಗಿ ಹರಿವ ನದಿ ತೊರೆಗಳ‌ ನಾಡು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನರ್ಘ ರತ್ನಗಳನ್ನು ನೀಡಿದ ವಿಶಿಷ್ಟತೆಯ ತವರು ಕುಂದಾಪುರ. ನಾಟಕ, ಯಕ್ಷಗಾನ, ಸಾಹಿತ್ಯ, ಶಿಕ್ಷಣ, ಹೀಗೆ ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಕಂಗೊಳಿಸುವ ಕುಂದಾಪುರದ ಆಡು ಭಾಷೆ ‌ಕುಂದಾಪ್ರ‌ ಕನ್ನಡ. ಆಷಾಢ ಅಮಾವಾಸ್ಯೆ ಅಂದರೆ ಕರ್ಕಾಟಕ ಅಮಾವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಸಂಭ್ರಮ. ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಸಂಭ್ರಮದಲ್ಲಿ ಮನದಂಗಳದ ಭಾಷೆ ಕುಂದ ಕನ್ನಡದ ಸೊಬಗು. ಕುಂದಾಪ್ರ ಕನ್ನಡ ಭಾಷಿ ಅಲ್ಲ ಬದ್ಕ್ ಎಂಬ ಘೋಷ ವಾಕ್ಯವೇ ಇಲ್ಲಿನ ಜನರ ಭಾಷಾ ಪ್ರೀತಿಯನ್ನು ತೋರುತ್ತದೆ.…

Read More

ಹಳ್ಳಿಯ ಸೊಗಡು ಪಚ್ಚೆ ಪೈರಿನ ಪರಿಸರ. ದಿನನಿತ್ಯ ಶಿವನ ಧ್ಯಾನ, ಕೈ ಮುಗಿದು ಮುನ್ನಡೆದರೆ ಯಶಸ್ಸಿನ ಸಿಂಚನ. ಅರ್ಜುನಾಪುರದಲ್ಲಿ ನಿತ್ಯ ಜನಜಾತ್ರೆ. ಊರಿನಲ್ಲಿ ಕಳೆಗಟ್ಟಿದೆ ಸಂಭ್ರಮ. ದೇವರುಗಳ ನಾಡು ಮುಡುಬಿದಿರೆಯ ಹೃದಯ ಭಾಗದಿಂದ ಹನ್ನೊಂದೂವರೆ ಕಿ.ಮೀ ದೂರದ ಅರ್ಜುನಾಪುರದಲ್ಲಿ ನೆಲೆನಿಂತು ನಂಬಿ ಬಂದ ಭಕ್ತರ ಮೊಗದಲ್ಲಿ ನಗೆಯ ಅಲೆ ತೋರ್ಪಡಿಸುವ ಶ್ರೀ ಮಹಾಲಿಂಗೇಶ್ವರನ ಸಾನಿಧ್ಯ ತುಳುನಾಡಿನ ಜನರ ಚಿತ್ತದಲ್ಲಿ ನಾಟಿ ನಿಂತಿದೆ. ಶಿರ್ತಾಡಿ ಗ್ರಾಮದ ಗಡಿಭಾಗದಲ್ಲಿ ವಾಲ್ಪಾಡಿ ಗ್ರಾಮಕ್ಕೆ ತಾಗಿಕೊಂಡು ಬೆಳೆದು ನಿಂತಿರುವ ಸಂಪೂರ್ಣ ಶಿಲಾಮಯ ದೇಗುಲ ಆಸ್ತಿಕ ಭಕ್ತರ ಕೇಂದ್ರ ಬಿಂದು. ಅರ್ಜುನಾಪುರದ ಈ ಕ್ಷೇತ್ರದಲ್ಲಿ ಮಧ್ಯಮ ಪಾಂಡವ ಅರ್ಜುನ ತಪಸ್ಸು ಮಾಡಿರುವನೆಂಬುದು ಪ್ರತೀತಿ. ಐದು ಸಾವಿರ ವರ್ಷಗಳ ಹಿಂದೆಯೂ ಜನವಸತಿ ಪ್ರದೇಶವಾಗಿ ಈ ಭಾಗ ಗುರುತಿಸಲ್ಪಟ್ಟಿತ್ತು ಎಂಬುದು ಇತಿಹಾಸ ತಜ್ಞರ ಅಭಿಪ್ರಾಯ. ಲಿಂಗರೂಪಿಯಾಗಿ ಆರಾಧನೆಗೊಳ್ಳುತ್ತಾ ನಂಬಿದವರಿಗೆ ಇಷ್ಟಾರ್ಥ ಸಿದ್ಧಿಯನ್ನು ಕಲ್ಪಿಸುತ್ತಾ ಬಂದಿರುವ ಅರ್ಜುನಾಪುರದ ಮಹಾಲಿಂಗೇಶ್ವರನಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ವಿಜಯನಗರದ ಶ್ರೀ ಕೃಷ್ಣದೇವರಾಯ ವೈಭವದಿಂದ ಆಡಳಿತ ನಡೆಸುತ್ತಿದ್ದ 1529…

Read More

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಬೆಂಗಳೂರಿನ ವಿಶ್ವವಿದ್ಯಾಲಯ ಕಾನೂನು ಕಾಲೇಜಿನ ಅಧ್ಯಕ್ಷ ಡಾ. ವಿ. ಸುದೇಶ್, ಸಂವಿಧಾನವು ಒಂದು ದೇಶದ ಮೂಲಭೂತ ಕಾನೂನು. ಸಂವಿಧಾನವು ತಟಸ್ಥವಾಗಿದೆ ಮತ್ತು ರಾಷ್ಟ್ರದ ನ್ಯಾಯ ವ್ಯವಸ್ಥೆ, ಸ್ವಾತಂತ್ರ್ಯ ಮತ್ತು ಪ್ರಮುಖ ಮೌಲ್ಯಗಳನ್ನು ಸ್ಥಾಪಿಸಲು ನ್ಯಾಯಯುತ ಸಾಧನವಾಗಿದೆ. ಸಂವಿಧಾನವು ಹಕ್ಕುಗಳು ಮತ್ತು ಜವಾಬ್ದಾರಿಗಳು, ಆಡಳಿತ ಮಂಡಳಿ ಮತ್ತು ದೇಶದ ಮೌಲ್ಯಗಳು ಹಾಗೂ ಸಂವಿಧಾನದ ಮೂಲ ತತ್ವಗಳ ನಡುವಿನ ಸಂಬಂಧವನ್ನು ಸ್ಥಾಪಿಸುತ್ತದೆ ಎಂದರು. ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಆಕಾಶ್ ವೈ ರಾಜ್ ಮಾತನಾಡಿ, ಭಾರತೀಯ ಸಂವಿಧಾನವು ಭಾರತದ ನಾಗರಿಕರಿಗೆ ಮೂಲಭೂತ ಹಕ್ಕುಗಳ ವಿಸ್ತೃತ ಪಟ್ಟಿಯನ್ನು ಒದಗಿಸಿದೆ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಮಾರ್ಗಸೂಚಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು. ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ದೇಶದ ಸಂವಿಧಾನ ಜಗತ್ತಿನಲ್ಲೇ ಬಹಳ ಶ್ರೇಷ್ಠವಾದದ್ದು. ವಿಜ್ಞಾನ ತಂತ್ರಜ್ಞಾನಗಳ ಆವಿಷ್ಕಾರದ ಸಾಧನೆಗಳೆಷ್ಟೇ ಇದ್ದರೂ ಸಂವಿಧಾನದ ಉದ್ದೇಶಗಳು…

Read More

ಕತಾರ್ ರಾಷ್ಟ್ರದ ಖ್ಯಾತ ಕನ್ನಡಿಗ ಉದ್ಯಮಿ, ಸಮುದಾಯ ನಾಯಕ, ಸಾಮಾಜಿಕ ಚಟುವಟಿಕೆಗಳಲ್ಲಿನ ಕ್ರಿಯಾಶೀಲ, ಸಂಸ್ಕೃತಿ, ಪರಂಪರೆ, ನೆಲ, ಜಲ ಮತ್ತು ನಾಡ ಭಾಷೆಗಳ ಪ್ರತಿಪಾದಕ, ಡಾ.ಮೂಡಂಬೈಲು ರವಿಶೆಟ್ಟಿಯವರ ಬದುಕಿನ‌ ಚಿತ್ರಣದ “ರವಿತೇಜ” ಪುಸ್ತಕದ ಬಿಡುಗಡೆ ಸಮಾರಂಭ ದೋಹಾದಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಶೋಕ ಸಭಾಂಗಣದಲ್ಲಿ ಜರುಗಿತು. ಸಾಂಪ್ರದಾಯಿಕ ಜ್ಯೋತಿ ಬೆಳಗುವ ಕಾರ್ಯಕ್ರಮದೊಂದಿಗೆ ಚಾಲನೆಯಾದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಬಾಬುರಾಜನ್ ವಹಿಸಿದ್ದರು. ಭಾರತೀಯ ಸಮುದಾಯ ಸಹಾಯಾರ್ಥ ವೇದಿಕೆ (ICBF) ಸಂಸ್ಥೆಯ ಹಂಗಾಮಿ ಅಧ್ಯಕ್ಷ ವಿನೋದ್ ನಾಯರ್ ಅತಿಥಿಯಾಗಿ ಆಗಮಿಸಿದ್ದರು. ಕತಾರಿನ ಇನ್ನೋರ್ವ ಉದ್ಯಮಿ, DPS ಶಾಲೆಯ ನಿರ್ದೇಶಕ ರಾಕಿ ಫರ್ನಾಂಡೀಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕತಾರಿನ‌ ಉದ್ಯಮಿಗಳಾದ ಜೆರಾಲ್ಡ್ ಡಿಮೆಲ್ಲೊ,, ಅಬ್ದುಲ್ಲಾ ಮೋನು, ಭಾರತೀಯ ಸಾಂಸ್ಕೃತಿಕ ಕೇಂದ್ರದ ಮಾಜಿ ಅಧ್ಯಕ್ಷೆ ಮಿಲನ್ ಅರುಣ್, ಕತಾರ್ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಹೆಚ್.ಕೆ ಮಧು ಗೌರವಾನ್ವಿತ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾರತೀಯ ಸಾಂಸ್ಕೃತಿಕ ಕೇಂದ್ರದ ಮಾಜಿ ಅಧ್ಯಕ್ಷೆ,…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿಯವರನ್ನು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ‌, ಮಹಾ ನಿರ್ದೇಶಕರಾದ ತೋನ್ಸೆ ಆನಂದ್ ಎಂ ಶೆಟ್ಟಿ, ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ರವಿರಾಜ್ ಶೆಟ್ಟಿ, ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಪಾಲ್ಗೊಂಡಿದ್ದರು.

Read More

“ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ ಮಾಡಲಾಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಹೇರಂಭ ಇಂಡಸ್ಟ್ರೀಸ್ ಮುಂಬಯಿ ಇದರ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಅವರು, “ರಂಗಚಾವಡಿ ಸಂಘಟನೆ ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುವುದು ಶ್ಲಾಘನೀಯ ವಿಚಾರ. ಇಂದು ಸನ್ಮಾನಿಸಲ್ಪಟ್ಟಿರುವ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಸಾಧನೆ ಹಾಗೂ ಮಹಾ ವ್ಯಕ್ತಿತ್ವ ಮೆಚ್ಚುವಂತದ್ದು. ರಂಗಚಾವಡಿ ಮಂಗಳೂರು ಸಂಸ್ಥೆ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಿದೆ. ಅತ್ಯಂತ ಯೋಗ್ಯ ವ್ಯಕ್ತಿಯನ್ನು ಸನ್ಮಾನಿಸಿರುವುದು ಖುಷಿ ತಂದಿದೆ. ದೇವರು ಕೊಡಿಯಾಲ್ ಬೈಲ್ ರ ಕಲೆಯನ್ನು ಇನ್ನಷ್ಟು ಆಶೀರ್ವದಿಸಲಿ” ಎಂದರು. ಸನ್ಮಾನ ಸ್ವೀಕರಿಸಿ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮಂಗಳೂರು ಇದರ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನ -2023 ರ ಪ್ರಯುಕ್ತ ಅಕ್ಟೋಬರ್ 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅಕ್ಟೋಬರ್ 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರವನ್ನು ದುಬೈಯಲ್ಲಿ ಬಿಡುಗಡೆಗೊಳಿಸಲಾಯಿತು. ದುಬೈನಲ್ಲಿ ಅಕ್ಟೋಬರ್ 8 ರಂದು ನಡೆದ ತ್ರಿರಂಗ ಸಂಗಮ ಮುಂಬಯಿಯ ಪ್ರಥಮ ವಾರ್ಷಿಕೋತ್ಸವ ಮತ್ತು ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ “ತ್ರಿರಂಗ ಸುವರ್ಣ ಮೋಹನ ಸಂಭ್ರಮ”ದ ಶುಭ ಸಮಾರಂಭದ ವೇದಿಕೆಯಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಯು.ಎ.ಇ.ಬಂಟ್ಸ್ ನ ಅಧ್ಯಕ್ಷರಾದ ಸರ್ವೋತಮ ಶೆಟ್ಟಿ ಹಾಗೂ…

Read More

ಕುಡುಂಬೂರು ಗುತ್ತು ಪಿಲಿಚಾಮುಂಡಿ, ಧೂಮಾವತಿ ಜಾರಂದಾಯ ಮತ್ತು ಪರಿವಾರ ದೈವಗಳಿಗೆ ಜ.19 ರಂದು ಧರ್ಮ ನೇಮವು ಸುರತ್ಕಲ್ ಸಮೀಪದ ಕೋಡಿಕೆರೆಯ ಕುಡುಂಬೂರು ಗುತ್ತು ದೈವಸ್ಥಾನ ವಠಾರದಲ್ಲಿ ಜರಗಲಿದೆ. ಜ.17 ರಂದು ಬೆಳಿಗ್ಗೆ 8.30 ಕ್ಕೆ ಉಗ್ರಾಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ನಾಗದೇವರಿಗೆ ತಂಬಿಲ ಮತ್ತು ಆಶ್ಲೇಷಾ ಬಲಿ ನಡೆದಿದೆ. ಪಣಂಬೂರು ಮಾಗಣೆಯ ಕನಿಲ ದೈವಸ್ಥಾನದಲ್ಲಿ ನವಕ ಕಲಶ ಮತ್ತು ಕುಡುಂಬೂರು ಗುತ್ತು ದೈವದ ಚಾವಡಿಯಲ್ಲಿ ನವಕ ಕಲಶ ಹಾಗೂ ಶುದ್ಧ ಕಲಶ ಸೇವೆ ನಡೆಯಲಿದೆ. 18 ರಂದು ಭೋಜನ ಶಾಲೆಯಲ್ಲಿ ಶುದ್ಧ ಮುದ್ರಿಕೆ ಮಾಡಿ ಕೊಪ್ಪರಿಗೆ ಏರಿಸುವುದು, ಜ.19 ರಂದು ಬೆಳಗ್ಗೆ ಶುದ್ಧ ಕಳಶದ ಅನಂತರ 10 ಗಂಟೆಗೆ ಧರ್ಮದೈವಗಳ ಭಂಡಾರ ಏರಿಸುವುದು,12.30 ಕ್ಕೆ ಮಹಾ ಅನ್ನಸಂತರ್ಪಣೆ,1 ಗಂಟೆಗೆ ಹರಿಕಥೆ, ಸಂಜೆ 4 ಕ್ಕೆ ಮೂಲ ಮೈಸಂದಾಯ ದೈವದ ಧರ್ಮನೇಮ, ಸಂಜೆ 6.30 ಕ್ಕೆ ಕಾಂತೇರಿ ಧೂಮಾವತಿ ಬಂಟ, ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ ಮತ್ತು ಬಬ್ಬರ್ಯ…

Read More