Author: admin

ಬಂಟರ ಸಂಘ ಮುಂಬಯಿ ಸಂಚಾಲಿತ ಎಸ್.ಎಮ್. ಶೆಟ್ಟಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಗೌರವ್ ಜಗನ್ನಾಥ ಶೆಟ್ಟಿ ಐ.ಪಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಉನ್ನತ ವಿದ್ಯಾಭ್ಯಾಸವನ್ನು ನೆರೂಲ್ ನ ಡಿ.ವೈ.ಪಾಟೀಲ್ ವಿದ್ಯಾ ಸಂಕುಲದಲ್ಲಿ ಪೂರೈಸಿದ್ದರು. ಈತ ಮೂಲತಃ ಪೆರ್ನ ದೊಡ್ಡಮನೆ ಸುಬ್ಬಯ್ಯ ಶೆಟ್ಟಿಯವರ ಮೊಮ್ಮಗ, ಎರ್ಮಾಳು ಲೋಕನಾಡು ಮನೆ ಸುರೇಶ ಚೌಟ ಅವರ ಅಳಿಯ, ಬಾಂಡುಪ್ ನ ಹನುಮಾನ್ ಹೊಟೇಲಿನ ಮಾಲೀಕ ಸಿದ್ಧಕಟ್ಟೆ ಕೊನರೆ ಗುತ್ತು ಜಗನ್ನಾಥ ಸೀತಾರಾಮ ಶೆಟ್ಟಿ ಹಾಗೂ ಎರ್ಮಾಳು ಲೋಕನಾಡು ಮನೆ ಆಶಾ ಜಗನ್ನಾಥ ಶೆಟ್ಟಿ ದಂಪತಿಯ ಪುತ್ರ ಹಾಗೂ ಸ್ವಾತಿ ಜೆ ಶೆಟ್ಟಿಯ ಸಹೋದರ. ಬಂಟ ಸಮುದಾಯದ ಕೀರ್ತಿ ಕಲಶಕ್ಕೆ ಗರಿಯ ತೊಡಿಸುವಂತಹ ಯಶಸ್ವೀ ವೃತ್ತಿ ಬದುಕು ತಮ್ಮದಾಗಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.

Read More

ದುಬೈ : ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಅಬುಧಾಬಿ ಕರ್ನಾಟಕ ಸಂಘದ 41 ನೇ ವರ್ಷದ ಕರ್ನಾಟಕ ರಾಜ್ಯೋತ್ಸವವು ಅಬುಧಾಬಿ ನಗರದ ಇಂಡಿಯನ್ ಸೋಷಿಯಲ್ ಅಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿತ್ತು. ಕರ್ನಾಟಕ ಸಂಘದ ಸದಸ್ಯೆಯರು ಕರ್ನಾಟಕದ ನಾಡಗೀತೆ ಹಾಡುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯ, ಗಾಯನ, ಕಿರು ನಾಟಕ ಜರುಗಿದುವು. ಭಾರತೀಯ ರಾಯಭಾರಿಯವರಿಂದ ಉದ್ಘಾಟನೆಯ ವಿಶೇಷತೆ ಯು.ಎ.ಇ.ಯ ಭಾರತೀಯ ದೂತವಾಸದ ರಾಯಭಾರಿಗಳಾದ ಗೌರವಾನ್ವಿತ ಸಂಜಯ್ ಸುಧೀರ್ ರವರು ದೀಪವನ್ನು ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಇಂಡಿಯನ್ ಸೋಷಿಯಲ್ ಅಂಡ್ ಕಲ್ಚರಲ್ ಸೆಂಟರ್ (ISC) ಅಬುಧಾಬಿಯ ಅಧ್ಯಕ್ಷರಾದ ಶ್ರೀಯುತರಾದ ಡಾ. ನಟರಾಜನ್,ಇಂಡಿಯನ್ ಎಂಬೆಸಿ ಕಮ್ಯೂನಿಟಿ ಅಫೇರ್ಸ್ ಮುಖ್ಯಸ್ಥೆ ಶ್ರೀಮತಿ ರೀಶಾ ಒಬೆರಾಯ್ , ಹಾಸ್ಯ ಕಲಾವಿದೆ ಶ್ರೀಮತಿ ಸುಧ ಬರಗೂರು, ಕನ್ನಡಿಗರು ದುಬೈಯ ಸಾದನ್ ದಾಸ್,ಅಲ್ ಐನ್ ಕನ್ನಡ ಸಂಘದ ವಿಮಲ್ ಕುಮಾರ್,ಪದ್ಮನಾಭ ಆಚಾರ್ಯ, ಉದ್ಯಮಿ ಸುಂದರ ಶೆಟ್ಟಿ,ಸಂಘದ ಅಧ್ಯಕ್ಷರಾದ ಸರ್ವೋತ್ತಮ…

Read More

ಯಶಸ್ವಿ ಉದ್ಯಮಿ ಗಳಾಗಿರುವ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ ಮತ್ತು ಶಶಿ ಹೆಗ್ಡೆ ದಂಪತಿ ಹಾಗೂ ಲೈಫ್‌ಲೈನ್ ಫೀಡ್ಸ್ ಇಂಡಿಯಾ ಪೈ. ಲಿ.ಯ ಅಧ್ಯಕ್ಷರು. ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೈಲ್ಕೆರೆ ಕಿಶೋರ್ ಕುಮಾರ್ ಹೆಗ್ಡೆ ಮತ್ತು ಸುರೇಖಾ ಹೆಗ್ಡೆ ದಂಪತಿಗಳಿಗೆ ಹುಟ್ಟೂರ ಸಮಾನವು ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿ ಡಾ. ಎಂ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆಯಲ್ಲಿ ರವಿವಾರ ಮೊಳಹಳ್ಳಿಯ ಮಲ್ನಾಡ್ ಟೈಲ್ಸ್ ಆವರಣದಲ್ಲಿ ನಡೆಯಿತು. ಮೂಡಬಿದಿರೆಯ ಎಜುಕೇಶನ್ ಆಳ್ವಾಸ್ ಫೌಂಡೇಶನ್‌ನ ಪ್ರವರ್ತಕ ಡಾ. ಎಂ. ಮೋಹನ ಆಳ್ವ ಸನ್ಮಾನಿತರನ್ನು ಗೌರವಿಸಿದರು. ಅವರು ಮಾತನಾಡಿ ಸಾಧನೆ ಮಾಡಿದ ಸಾಧಕರಲ್ಲಿ ಎರಡು ಬಗೆಯ ಸಾಧಕರು ಇದ್ದಾರೆ. ಅವರಲ್ಲಿ ಮೊದಲನೇ ವರ್ಗ ಇತಿಹಾಸ ಫಲದಿಂದ ಸಾಧನೆ ಮಾಡಿಕೊಂಡು ಬಂದವರು. ಎರಡನೇ ವರ್ಗದವರು ಶೂನ್ಯದಿಂದ ಹೊರಟು ಸಾಧನೆಯ ಗೌರಿಶಂಕರ ಶಿಖರವನ್ನು ಏರಿದವರು. ಇಂದು ನಾವು ಮಾಡಿದ ಸನ್ಮಾನಿತರು ಈ ಎರಡನೇ ವರ್ಗಕ್ಕೆ ಸೇರಿದವರು ಎಂದರು. ಪ್ರಪಂಚದಲ್ಲಿ ಇಂದು ಇಂತಹ ಸಾಧಕರೇ ಜಾಸ್ತಿ ಇರುವುದನ್ನು…

Read More

ಸಣ್ಣ ಪ್ರಾಯದಲ್ಲೇ ಸಾಯಿ ಪ್ರೊಡಕ್ಷನ್ ಎಂಬ ಈವೆಂಟ್ ಸಂಸ್ಥೆಯನ್ನು ಹುಟ್ಟುಹಾಕಿ ಯಶಸ್ವಿಯಾಗಿ, ತನ್ನ ಸ್ವರ ಮಾಧುರ್ಯದಿಂದ ಕಾರ್ಯಕ್ರಮ ನಿರೂಪಕನಾಗಿ ದೇಶ ವಿದೇಶದಲ್ಲಿ ಪ್ರಸಿದ್ದಿ ಪಡೆದು, ಕನ್ನಡ ಚಲನಚಿತ್ರದಲ್ಲಿ ನಾಯಕನಾಗಿ ನಟಿಸಿದ ಸಾಹಿಲ್ ರೈ ಅವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇವೆ.

Read More

ಮನುಷ್ಯನಾದವನು ತನ್ನ ಭವಿಷ್ಯ, ಜೀವನ ಸುಖ, ಸಂತಸ, ಸಮೃದ್ಧಿಯಿಂದ ತುಂಬಿರಬೇಕು. ಸಮಾಜದಲ್ಲಿ ಉತ್ತಮ ಸ್ಥಾನಮಾನಗಳು ಲಭಿಸಬೇಕು. ಸಮಾಜಕ್ಕೆ ತನ್ನಿಂದ ಉಪಕಾರವಾಗಬೇಕು ಎಂಬ ಕನಸು ಕಾಣುವುದು ತಪ್ಪಲ್ಲ. ಆದರೆ ಕನಸ್ಸನ್ನು ನನಸಾಗಿಸುವ ಛಲ, ಪ್ರಾಮಾಣಿಕ ಪ್ರಯತ್ನ, ಅದರ ಬೆನ್ನು ಹಿಡಿದು ತನ್ನದಾಗಿಸುವ ಇಚ್ಛಾಶಕ್ತಿ, ಸಂಕಲ್ಪ ಶಕ್ತಿ ಹಾಗೂ ಕ್ರಿಯಾಶಕ್ತಿಗಳು ಇರಬೇಕಾಗುತ್ತದೆ. ಈ ಎಲ್ಲಾ ಗುಣಗಳು ಮೈದಾಳಿ ತನ್ನ ಜೀವನ ಲಕ್ಷ್ಯವನ್ನು ಸಾಧಿಸಿದ ಇಂದು ಓರ್ವ ಪ್ರಖ್ಯಾತ ಕಟ್ಟಡ ನಿರ್ಮಾಣ ಅಭಿವೃದ್ಧಿ ಕ್ಷೇತ್ರದಲ್ಲಿ ಅಪೂರ್ವ ಯಶಸ್ಸು ಗಳಿಸಿದವರು ಬ್ರಹ್ಮಾವರ ಮೂಲದ ಉದ್ಯಮಿ ಚೇತನ್ ಕುಮಾರ್ ಶೆಟ್ಟಿ. ಶ್ರೀಯುತರು ಇಂದು ಉಡುಪಿ ಜಿಲ್ಲೆಯಲ್ಲಷ್ಟೇ ಅಲ್ಲದೇ ರಾಜ್ಯ ಮಟ್ಟದಲ್ಲಿ ತನ್ನ ಅತ್ಯುತ್ತಮ ಗುಣಮಟ್ಟದ ನಿರ್ಮಾಣ ಕಾರ್ಯ, ಪಾರದರ್ಶಕತೆ, ಪ್ರಾಮಾಣಿಕತೆಗಳಿಂದ ಪ್ರಸಿದ್ಧರಾಗಿದ್ದಾರೆ. ಚೇತನ್ ಕುಮಾರ್ ಶೆಟ್ಟಿ ಅವರು ಪ್ರತಿಷ್ಠಿತ ಹಾಗೂ ಸುಶಿಕ್ಷಿತ ಕುಟುಂಬದ ಹಿನ್ನೆಲೆ ಉಳ್ಳವರು. ಎಚ್ ದಯಾನಂದ ಶೆಟ್ಟಿ ಹಾಗೂ ಶ್ರೀಮತಿ ನಾಗರತ್ನ ಶೆಟ್ಟಿ ದಂಪತಿಯರಿಗೆ ಪುತ್ರರಾಗಿ ಜನಿಸಿದ ಚೇತನ್ ಕುಮಾರ್ ಶೆಟ್ಟಿ ಅವರು ತನ್ನ ಶಾಲಾ…

Read More

‘ನಂಬಿಕೆ ಇರಲಿ, ಮೌಢ್ಯಕ್ಕೆ ಬಲಿಯಾಗಬೇಡಿ’ ವಿದ್ಯಾಗಿರಿ: ಬದುಕಿನಲ್ಲಿ ನಂಬಿಕೆ ಇರಬೇಕು. ಆದರೆ, ಮೂಢನಂಬಿಕೆಗೆ ಬಲಿಯಾಗದಂತಹ ವೈಜ್ಞಾನಿಕ ಹಾಗೂ ವೈಚಾರಿಕ ಎಚ್ಚರಿಕೆ ಅವಶ್ಯ’ಎಂದು ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಬಂಟ್ವಾಳ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಂಗಳವಾರ ಅವರು ‘ಮಾನಸಿಕ ಆರೋಗ್ಯ’ ಕುರಿತು ಮಾತನಾಡಿದರು. ಬದುಕಿಗೆ ನಂಬಿಕೆ ಬೇಕಾಗುತ್ತದೆ. ಆದರೆ, ಅದೇ ನಂಬಿಕೆಯನ್ನು ವ್ಯಾವಹಾರಿಕವಾಗಿ ಬಳಸುವ, ದುರುಪಯೋಗ ಪಡಿಸುವ ಮೂಢನಂಬಿಕೆಗಳಿಗೆ ಬಲಿಯಾಗಬೇಡಿ. ಎಲ್ಲವನ್ನೂ ತಾರ್ಕಿಕವಾಗಿ ಯೋಚಿಸಿ ಎಂದರು. ದೇವರು ಯಾವತ್ತೂ ಲಂಚ ಕೇಳುವುದಿಲ್ಲ. ಕೆಡುಕನ್ನು ಬೋಧಿಸುವುದಿಲ್ಲ. ವೈಭೋಗ ಬಯಸುವುದಿಲ್ಲ. ದೇವರ ಹೆಸರಲ್ಲಿ ಮೋಸ ಮಾಡುವವರ ಬಗ್ಗೆ ಸದಾ ಎಚ್ಚರಿಕೆ ಇರಲಿ ಎಂದರು. ಬದುಕಿನಲ್ಲಿ ಆತ್ಮವಿಶ್ವಾಸ ಇರಬೇಕು. ಕೀಳರಿಮೆಯನ್ನು ದೂರ ಮಾಡಬೇಕು. ಒತ್ತಡ ಮುಕ್ತ ಬದುಕು ಜೀವಿಸಲು ಉತ್ತಮ ಜೀವನಶೈಲಿ ಹೊಂದಬೇಕು ಎಂದು ಅವರು ಸಲಹೆ ನೀಡಿದರು. ವಾಸ್ತವಿಕವನ್ನು ಒಪ್ಪಿಕೊಳ್ಳಬೇಕು. ಭವಿಷ್ಯದ ಬಗ್ಗೆ ಭರವಸೆ ಬೇಕು. ಯಾರದೇ ಜೊತೆ ಹೋಲಿಕೆಯ ಅಥವಾ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 – 29 ರಂದು ಜರಗುವ ವಿಶ್ವ ಬಂಟರ ಸಮ್ಮೇಳನ -2023 ಕ್ಕೆ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಸಮರ್ಪಣೆ ವಿಜೃಂಭಣೆಯಿಂದ ನಡೆಯಿತು. ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸಿರು ಹೊರೆಕಾಣಿಕೆಯಲ್ಲಿ ಭಾಗವಹಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉಡುಪಿಯ ಜೋಡುಕಟ್ಟೆಯಲ್ಲಿ ಹೊರೆಕಾಣಿಕೆ ಸಮರ್ಪಣೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದವರೆಗೆ ಹಸಿರು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಸಾಗಿತು. ಮೂರು ಜಿಲ್ಲೆಗಳಿಂದ ಸಾವಿರಾರು ಮಂದಿ ಬಂಟ ಸಮುದಾಯದ ಬಂಧುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ, ವಿಶ್ವ ಬಂಟರ ಕ್ರೀಡಾಕೂಟದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರು, ಸಹ ಸಂಚಾಲಕ ಡಾ. ರೋಶನ್ ಕುಮಾರ್ ಶೆಟ್ಟಿ,…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇಂದು ದಿನಾಂಕ 02-10-2023 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಲಾದ” ಜನಜಾಗೃತಿ ಜಾಥಾ ಮತ್ತು ಸಮಾವೇಶ – 2023″ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ…

Read More

ಬಂಟರ ಸಂಘ (ರಿ) ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ಪಡುಬಿದ್ರಿ, ಬಂಟರ ಮಹಿಳಾ ವಿಭಾಗ ಪಡುಬಿದ್ರಿ ಇವರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ದಂಪತಿಗಳನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ನಿವೃತ ಶಿಕ್ಷಕ ನಾರಾಯಣ ಶೆಟ್ಟಿ ದಂಪತಿಗಳನ್ನು ಅವರ ಮನೆಗೆ ತೆರಳಿ ಗೌರವಿಸಲಾಯಿತು. ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ಶಶಿಧರ ಶೆಟ್ಟಿ ಎರ್ಮಾಳು, ಸಂಘದ ಉಪಾಧ್ಯಕ್ಷೆ ಅನಿತಾ ವಿಶು ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಕಾರ್ಯದರ್ಶಿ ವಾಣಿ ರವಿ ಶೆಟ್ಟಿ, ಕೋಶಾಧಿಕಾರಿ ರಶ್ಮಿ ಸುಧಾಕರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಮಾಜಿ ಅಧ್ಯಕ್ಷೆ ಶೋಭಾ ಜೆ ಶೆಟ್ಟಿ, ಉಪಾಧ್ಯಕ್ಷೆ ಭಾರತಿ ಬಿ ಶೆಟ್ಟಿ,…

Read More

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮವು ವೇಗ ಪಡೆದುಕೊಂಡಿದ್ದು, ಒಂದರ ಮೇಲೊಂದರಂತೆ ವಿವಿಧ ಅಭಿವೃದ್ಧಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇತ್ತೀಚೆಗಷ್ಟೇ ದೇಶದ ಅತಿದೊಡ್ಡ ಸಭಾಂಗಣವಾದ ಭಾರತ ಮಂಠಪವನ್ನು ದೇಶಕ್ಕೆ ಸಮರ್ಪಿಸುವ ವೇಳೆ ಮತ್ತೊಂದು ಮಹತ್ತರ ಯೋಜನೆಯನ್ನು ಪ್ರಧಾನಿ ಮೋದಿ ಘೋಷಿಸಿದ್ದರು. ಅದುವೇ ‘ಯುಗೇ ಯುಗೀನ ಭಾರತ’. ವಿಶ್ವದ ಅತಿದೊಡ್ಡ ವಸ್ತು ಸಂಗ್ರಹಾಲಯ ನಿರ್ಮಾಣದ ಈ ಯೋಜನೆಗೆ ಸಂಬಂಧಿಸಿದ ಕೆಲ ವಿವರ ಹೀಗಿದೆ.. ರಾಷ್ಟ್ರಕಥೆ ಸಾರಲು ಸಾರಥ್ಯ : ಪ್ರಸಕ್ತ ವಸ್ತು ಸಂಗ್ರಹಾಲಯವು ದೆಹಲಿಯ ಕರ್ತವ್ಯ ಪಥದ ಸಮೀಪದಲ್ಲಿದ್ದು, ನಿರ್ಮಾಣಗೊಳ್ಳಲಿರುವ ನೂತನ ವಸ್ತು ಸಂಗ್ರಹಾಲಯವು ರಾಷ್ಟ್ರಪತಿ ಭವನಕ್ಕೆ ಸಮೀಪವಾಗಿರಲಿದೆ. ಭಾರತದ ತಲಾತಲಾಂತರದ ಕಥನವನ್ನು ಸಾರುವ ಸಾಕ್ಷ್ಯಗಳಿಗೆ ಸಾರಥಿಯಾಗಿರಲಿದೆ. ಅಂದರೆ, ಪ್ರಾಚೀನ ಭಾರತದಿಂದ, ಮಧ್ಯಕಾಲೀನ ಹಾಗೂ ಆಧುನಿಕ ಭಾರತದ ಸಂಪೂರ್ಣ ಇತಿಹಾಸ, ವೈಭವ ಮತ್ತು ವಾಸ್ತವವನ್ನು ಇಲ್ಲಿ ತೆರೆದಿಡಲಾಗುತ್ತಿದೆ. ವಿಶೇಷವಾಗಿ ಡಚ್‌, ಬ್ರಿಟಿಷ್‌, ಪೋರ್ಚುಗೀಸರು ಸೇರಿದಂತೆ ವಸಹಾತುಶಾಹಿಗಳ ಆಡಳಿತ ಹಾಗೂ ಆ ನಂತರದ ಸ್ವಾತಂತ್ರ್ಯ ಹೋರಾಟ ಮತ್ತು ನಂತರದ 100…

Read More