Author: admin
ಕಂಬಳ ಕ್ಷೇತ್ರದ ತಾರಾ ಓಟಗಾರ ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಅವರು ಮತ್ತೆ ಮಂಗಳೂರು ಕಂಬಳದಲ್ಲಿ ತಮ್ಮ ಪಾರಪತ್ಯ ಮೆರೆದಿದ್ದಾರೆ. ಮಂಗಳೂರು ಕಂಬಳದಲ್ಲಿ ಸತತ ಆರನೇ ಬಾರಿ ಫೈನಲ್ ಪ್ರವೇಶ ಮಾಡಿದ ನಿಶಾಂತ್ ಶೆಟ್ಟಿ ಸಾಧನೆ ಮೆರೆದರು. ಈ ಬಾರಿ ನಿಶಾಂತ್ ಅವರು ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ ಅವರ ಕೋಣಗಳನ್ನು ಓಡಿಸಿ ಪ್ರಥಮ ಸ್ಥಾನ ಬಾಚಿಕೊಂಡರು.ಇದು ಆರನೇ ವರ್ಷದ ಮಂಗಳೂರು ರಾಮ – ಲಕ್ಷ್ಮಣ ಕಂಬಳ ಕೂಟವಾಗಿದ್ದು, ಆರು ವರ್ಷವೂ ನಿಶಾಂತ್ ಶೆಟ್ಟಿ ಅವರು ಪದಕ ಗೆದ್ದಿರುವುದು ಹೆಚ್ಚುಗಾರಿಕೆ. ಬಂಗ್ರಕೂಳೂರಿನಲ್ಲಿ ನಡೆಯುವ ಕೂಟದಲ್ಲಿ ಅವರು ಮೂರು ಪ್ರಥಮ, ಮೂರು ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 29 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19…
ಉದ್ಯಮದೊಂದಿಗೆ ಸಮಾಜಜಸೇವೆ ಮಾಡುತ್ತಿರುವ ಸದಾ ಹಸನ್ಮುಖಿ, ಬಡವರ ಪಾಲಿನ ಆಶಾಕಿರಣ, ಸಾವಿರಾರು ಜನರಿಗೆ ಉದ್ಯೋಗದಾತರಾಗಿ, ಚಿಕ್ಕಮಂಗಳೂರಿನ ಪ್ರತಿಷ್ಠಿತ ಸಂಸ್ಥೆ ಲೈಫ್ ಲೈನ್ ಫೀಡ್ಸ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಕಿಶೋರ್ ಕುಮಾರ್ ಹೆಗ್ಡೆಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಬಂಟ ಸಮಾಜದ ಸಮಗ್ರ ಸುದ್ದಿಗಾಗಿ ನಮ್ಮ ಬಂಟ್ಸ್ ನೌ ಪೇಜನ್ನು ಲೈಕ್ ಮಾಡಿ ಫಾಲೋ ಮಾಡಿ. https://www.facebook.com/buntsnow/
ಭಾರತೀಯ ಸಂಸ್ಕೃತಿ, ಸಂಪ್ರದಾಯ, ಆಚಾರ- ವಿಚಾರಗಳಲ್ಲಿ ಸೀರೆಗೆ ಪ್ರತ್ಯೇಕವಾದ ಗೌರವಾದರವಿದೆ. ಕೈಮಗ್ಗದ ವೈಭವ, ಪರಂಪರೆ, ವಿಶಿಷ್ಟತೆ, ಉತ್ಕೃಷ್ಟ ಗುಣಮಟ್ಟ ಮತ್ತು ವೈವಿಧ್ಯತೆಯೊಂದಿಗೆ ಕರಾವಳಿಯ ನೇಕಾರರು ದೇಶೀ ಸಂಸ್ಕೃತಿ ಸಂಪ್ರದಾಯಗಳೊಂದಿಗೆ ಪರಂಪರೆಯ ಸಂಕೇತವಾಗಿರುವ ಪರಿಸರ ಸ್ನೇಹಿ ಉಡುಪಿ ಸೀರೆಯನ್ನು ನೇಯುವ ನೇಕಾರಿಕೆಗೆ ಮರು ಜೀವ ತುಂಬುತ್ತಿದ್ದಾರೆ. ಉಡುಪಿ ಸೀರೆ ನಮ್ಮ ಹೆಮ್ಮೆ. ಜಿ ಐ ಮಾನ್ಯತೆ ಪಡೆದ ಶತಮಾನದಷ್ಟು ಹಳೆಯ ಸೀರೆ. ಉಡುಪಿ ಸೀರೆ ಉಳಿಸಿ ಅಭಿಯಾನಕ್ಕೆ ಶ್ರಮಿಸುತ್ತಿದೆ ಕದಿಕೆ ಟ್ರಸ್ಟ್. ಹತ್ತು ಹಲವು ಬ್ರಾಂಡ್ ಗಳ ನಡುವೆಯೂ ಸರಿ ಸಾಟಿಯಾಗಿ ನಿಲ್ಲುವ ಕೈಮಗ್ಗದ ಕೊಡುಗೆ ನೇಪಥ್ಯಕ್ಕೆ ಸರಿದ ಉಡುಪಿ ಸೀರೆ ಈಗ ಮೆಲ್ಲಗೆ ತಲೆಯೆತ್ತಿದೆ. ಗ್ರಾಮೀಣ ಸೊಗಡಿನ ಸೀರೆಗೆ ಕಾಯಕಲ್ಪ ನೀಡುವ ಪ್ರಯತ್ನ ಭರದಿಂದ ಸಾಗುತ್ತಿದೆ. ವಿವಿಧ ಹಂತಗಳಲ್ಲಿ ತಯಾರುಗೊಳ್ಳುವ ಈ ಸೀರೆಯ ಹಿಂದೆ ನೇಕಾರರ ಶ್ರಮವಿದೆ. ದೇಶೀ ಕಲೆಯಾದ ನೇಕಾರಿಕೆ ಬದುಕಿನ ದಾರಿ, ಹೊಟ್ಟೆ ಪಾಡಿಗೆ ಮಾರ್ಗವಾದರೂ ನಮ್ಮ ಸಂಸ್ಕೃತಿ ಪರಂಪರೆಯ ಜೊತೆಗೆ ಪ್ರಕೃತಿಗೆ ಪೂರಕವಾದ ಉದ್ಯಮವಿದು. ಉಡುಪಿ ಸೀರೆ…
ಮಂಗಳೂರಿನ ರಥಬೀದಿಯ ಕಡಬ ಸಂಸ್ಮರಣಾ ಸಮಿತಿ ವತಿಯಿಂದ ನೀಡಲ್ಪಡುವ ಚತುರ್ಥ ವಾರ್ಷಿಕ ‘ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ -2023’ ಕ್ಕೆ ಹಿರಿಯ ಭಾಗವತರಾದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ. ಅ.29ರಂದು ಮಧ್ಯಾಹ್ನ 2ಕ್ಕೆ ಮುಂಬಯಿಯ ಗೋರೆಗಾಂವ್ (ಪಶ್ಚಿಮ) ಆರೇ ರೋಡ್, ಅಂಬಾಬಾಯಿ ದೇವಸ್ಥಾನದ ಬಳಿಯ ಕೇಶವ ಗೋರೆ ಸಭಾಗೃಹದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಂದರ್ಭ ಯಕ್ಷಗಾನ -ನಾಟ್ಯ ವೈಭವ ಹಾಗೂ ವಾಲಿಮೋಕ್ಷ ತಾಳಮದ್ದಳೆ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸುರತ್ಕಲ್ ಮೇಳದಲ್ಲಿ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯ ಅವರು 3 ದಶಕಗಳ ಕಾಲ ಕಲಾ ಸೇವೆಗೈದು 2008ರಲ್ಲಿ ತನ್ನ 51 ನೇ ವಯಸ್ಸಿನಲ್ಲಿ ಕಲಾಲೀನರಾಗಿದ್ದಾರೆ. ತಂದೆಯಷ್ಟೇ ಪ್ರತಿಭಾನ್ವಿತರಾಗಿದ್ದ ಅವರ ಪುತ್ರ ಕಡಬ ವಿನಯ ಆಚಾರ್ಯ ಅವರು ಅತೀ ಕಿರಿಯ ವಯಸ್ಸಿನಲ್ಲಿ ಸುಮಾರು 15 ವರ್ಷಗಳ ಕಾಲ ಹಿರಿಯ ಕಲಾವಿದರೊಡಗೂಡಿ ಉತ್ತಮ ಮದ್ದಳೆಗಾರನಾಗಿ ಜನಮೆಚ್ಚುಗೆ ಗಳಿಸುತ್ತಿರುವ ಸಂದರ್ಭ ತನ್ನ 34 ನೇ ವಯಸ್ಸಿನಲ್ಲಿ 2019 ರಲ್ಲಿ…
ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಇದರ ಸಹಯೋಗದೊಂದಿಗೆ ಸುಭಾಷಿತ ನಗರ ರೆಸಿಡೆಂಟ್ ಅಸೋಸಿಯೇಷನ್ (ರಿ) ಇವರ ಸಹಭಾಗಿತ್ವದಲ್ಲಿ ದೇಶದ 76ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಸಂಘದ ಆವರಣದಲ್ಲಿ ಧ್ವಜಾರೋಹಣದೊಂದಿಗೆ ನೆರವೇರಿತು. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಸುಬೇದಾರ್ ಮೇಜರ್ ಶಶಿಧರ್ ಆಳ್ವ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ನ ಅಧ್ಯಕ್ಷ ರಮೇಶ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಪದಾಧಿಕಾರಿಗಳಾದ ಪುಷ್ಪರಾಜ ಶೆಟ್ಟಿ ಕುಡುಂಬೂರು, ಲೀಲಾಧರ ಶೆಟ್ಟಿ ಕಟ್ಲ, ಸುಜೀರ್ ಶೆಟ್ಟಿ, ಜಯರಾಮ ಶೆಟ್ಟಿ, ಶಿಶಿರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಗುಣಶೇಖರ ಶೆಟ್ಟಿ, ರತ್ನಾಕರ ಶೆಟ್ಟಿ, ಪ್ರಹ್ಲಾದ್ ಶೆಟ್ಟಿ, ಸುಭಾಷಿತನಗರ ಅಸೋಸಿಯೇಷನ್ ನ ಪದಾಧಿಕಾರಿಗಳಾದ ನರಸಿಂಹ ಸುವರ್ಣ, ತಾರಾನಾಥ ಸಾಲ್ಯಾನ್, ಚಂದ್ರಶೇಖರ ಶೆಟ್ಟಿ, ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಸುಜಾತ ಶೆಟ್ಟಿ ಕೃಷ್ಣಾಪುರ, ಕೇಸರಿ ಪೂಂಜ,…
ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು. 23 ರಂದು ತುಳುನಾಡ ಬಂಟೆರೆ ಪರ್ಬ 2023 ಎನ್ನುವ ವಿಶಿಷ್ಟ ಸಾಂಸ್ಕೃತಿಕ ಸ್ವರ್ಧೆಗಳು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತುರವರು ತಿಳಿಸಿದರು. ಜು. 19 ರಂದು ಪುತ್ತೂರು ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದಲ್ಲಿ ತುಳುನಾಡು ಮತ್ತು ಬಂಟ ಸಂಸ್ಕೃತಿಯ ಪ್ರದರ್ಶನಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಕಳೆದ ವರ್ಷ ನನ್ನ ಅವಧಿಯಲ್ಲಿ ಹಿರಿಯ ಬಂಟ ಚೇತನಗಳ ಸ್ಮರಣೆ ಮಾಡುವ ಬಂಟ ಸ್ಮೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಈ ಬಾರಿ ಗಾಂಧಿವಾದಿಯಾಗಿ ಪುತ್ತೂರಿನ ಅಭಿವೃದ್ಧಿಗೆ ಬಹಳಷ್ಟು ಕೊಡುಗೆಯನ್ನು ನೀಡಿರುವ ನಿವೃತ್ತ ತಹಶೀಲ್ದಾರ್ ಚಿಲ್ಮೆತ್ತಾರು ಕೋಚಣ್ಣ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮರಥವನ್ನು ಸಮರ್ಪಿಸಿದ ಜಯಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ಹಾಗೂ ಬೆಂಗಳೂರು ಬಂಟರ ಸಂಘದ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಪದಾಧಿಕಾರಿಗಳೊಂದಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಅವರನ್ನು ಒಳಗೊಂಡ ಒಕ್ಕೂಟದ ನಿಯೋಗ ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು. ಬಂಟರ ಯಾನೆ ನಾಡವರ ನಿಗಮ ಸ್ಥಾಪನೆಗೆ ಮನವಿ ಮಾಡಿದರು. ಹಾಗೆಯೇ ಬಂಟರ ಮೀಸಲಾತಿಯ ಬಗ್ಗೆ ಕ್ರಮ ಕೈಗೊಂಡು ಬಂಟರ ಸಮುದಾಯ 3B ಯಿಂದ 2A ಗೆ ಸೇರ್ಪಡೆಗೊಳಿಸಬೇಕೆಂದು ವಿನಂತಿಸಿದರು. ಒಕ್ಕೂಟದ ಮನವಿಯನ್ನು ಪರಿಶೀಲಿಸಿ ಬೇಡಿಕೆಗಳ ಕುರಿತು ಸ್ಪಂದಿಸುವುದಾಗಿ ಭರವಸೆ ನೀಡಿದರು. ಈ ಸಂಧರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸಂಸದ ಡಿ ಕೆ ಸುರೇಶ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗ್ರಾಮೀಣ ಭಾಗದ ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಿಶೇಷ ಕಾರ್ಯಕ್ರಮ ಅನಾವರಣಗೊಂಡಿದೆ. ಇದರ ವಿಶೇಷತೆ ಸಮಾಜಕ್ಕೆ ಮಾದರಿಯಾಗುವುದರೊಂದಿಗೆ ಇಂದಿನ ದುಬಾರಿ ಕಾಲದಲ್ಲಿ ಇಂಧನವಿಲ್ಲದೆ ,ಅಡುಗೆ ತಯಾರಿ ಮಾಡುವ ವೈಶಿಷ್ಟ್ಯತೆಯನ್ನು ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು ಮನನ ಮಾಡಿದರು.ಇತ್ತೀಚಿಗೆ ಬಿದ್ಕಲ್ ಕಟ್ಟೆ ಸರ್ಕಾರಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ಇಂತಹ ಇಂಧನರಹಿತ ಪ್ರಾತ್ಯಕ್ಷಿಕೆಯನ್ನು ತಯಾರಿ ಮಾಡುವುದರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಈ ವೈಶಿಷ್ಟ್ಯತೆಯನ್ನು ನೋಡಿ ಫುಲ್ ಫಿದಾ ಆಗಿದ್ದಾರೆ. ಏನಿದು ಕಾರ್ಯಕ್ರಮ:- ಸುಂದರ ಪರಿಸರದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಸರ್ಕಾರಿ ಶಾಲೆ ಕಾರ್ಯನಿರ್ವಹಿಸುತ್ತಿದೆ. ಹತ್ತಾರು ಮುಗ್ಧ ಮನಸುಗಳು ಇಲ್ಲಿ ಕಲಿಯುವ ಚಿನ್ನಾರಿಗಳು. ಪುಟ್ಟ ಪುಟ್ಟ ಕೈಗಳ ನಡುವೆ ತಮ್ಮನ್ನ ವಿಶೇಷವಾಗಿ ತೊಡಗಿಸಿಕೊಳ್ಳುವ ಉತ್ಸಾಹ, ಇಂಧನ ದುಬಾರಿಯಾದಂತಹ ಇಂದಿನ ಜನಮಾನಸದಲ್ಲಿ ಇಂಧನವಿಲ್ಲದೆ ತುರ್ತಾಗಿ ತಯಾರಿಸಬಹುದಾದಂತಹ ಅಡುಗೆ ಪದಾರ್ಥಗಳ ಪ್ರಾತ್ಯಕ್ಷಿಕೆಯನ್ನು ಸ್ಥಳದಲ್ಲಿ ಸಿದ್ಧಪಡಿಸಲಾಯಿತು. ಅಂತಹ ಪ್ರಾತ್ಯಕ್ಷಿಕೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಫುಲ್ ಫಿದಾ ಆಗ್ಬಿಟ್ಟಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕರ…
ಅಲ್ಲಿರುವುದು ಕೃಷಿಯಾಧಾರಿತ ಭೂಮಿ, ಅದು ದೇವ ಭೂಮಿ, ಹಸಿರು ಉಡುಗೆ ತೊಟ್ಟು ನಿಂತಿರುವ ಭೂಮಾತೆಯ ಗರ್ಭದಲ್ಲಿ ಅದೆಷ್ಟೋ ಕಾಲವಿದ್ದ ಶ್ರೀ ಉಮಾಮಹೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನಗಳು ದೈವ ಪ್ರೇರಣೆಯಂತೆ ಸುಮಾರು 25 ವರ್ಷಗಳ ಹಿಂದೆ ಜೀರ್ಣೋದ್ಧಾರಗೊಂಡು ಇಂದು ಸಾವಿರಾರು ಭಕ್ತರನ್ನು ತನ್ನೆಡೆಗೆ ಸೆಳೆಯುತ್ತಿರುವುದರ ಹಿನ್ನೆಲೆಯೂ ರೋಚಕವಾಗಿದೆ. ಹೌದು ಭಕ್ತರೇ ನಾವು ನಿಮಗೆ ಹೇಳಲು ಹೊರಟಿರುವುದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಅಡಪಾಡಿ ಕೋಡಿ ಎಂಬಲ್ಲಿನ ಗ್ರಾಮೀಣ ಪ್ರಕೃತಿಯ ಮಡಿಲಲ್ಲಿರುವ ದೇವಸ್ಥಾನದ ಬಗ್ಗೆ ಶ್ರೀ ಉಮಾಮಹೇಶ್ವರ ದುರ್ಗಾಪರಮೇಶ್ವರಿ ಪ್ರಧಾನ ದೇವರುಗಳ ಜೊತೆಗೆ ಸುಮಾರು 36 ಪರಿವಾರ ಶಕ್ತಿಗಳನ್ನು ಹೊಂದಿರುವ ಈ ಕ್ಷೇತ್ರ ಇದೀಗ ಮತ್ತೊಮ್ಮೆ ಭಗವದ್ಭಕ್ತರ ಗಮನವನ್ನು ಸೆಳೆಯುತ್ತಿದೆ. ಇಲ್ಲಿಯ ವೈಶಿಷ್ಟ್ಯವೇನೆಂದರೆ ಎಲ್ಲಾ ವರ್ಗದ ಭಕ್ತರು ಇಲ್ಲಿ ವಿಶೇಷ ಹರಕೆ ಹೊತ್ತು ತಮ್ಮ ಮನದ ಕೋರಿಕೆಗಳನ್ನು ಈಡೇರಿಸಿಕೊಂಡು ನೆಮ್ಮದಿಯಿಂದ ಬಾಳುವುದು ಹಾಗೂ ಈ ಕ್ಷೇತ್ರದಲ್ಲಿ ವಿಶ್ವಾಸವನ್ನಿಟ್ಟುಕೊಂಡು ಪ್ರತಿ ವಿಶೇಷ ಆಚರಣೆಗಳಲ್ಲಿ ಪಾಲ್ಗೊಳ್ಳುತ್ತಾ ಬಂದಿರುವುದು. ದೇವಸ್ಥಾನದಲ್ಲಿ ಪ್ರತಿ ವರ್ಷವೂ ನವರಾತ್ರಿಯ ಹತ್ತು ದಿನಗಳಲ್ಲಿ…
ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದಲ್ಲಿ ವಿಶ್ವ ಮಹಿಳೆಯರ ದಿನಾಚರಣೆಯನ್ನು ಬಂಟ್ಸ್ ಫ್ರೆಂಡ್ಸ್ ಸಂಘ ಹಾವಂಜೆ ಇವರ ಸಂಘದ ವತಿಯಿಂದ ಹಾವಂಜೆ ಮಂಜುನಾಥ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಿತು. ವಿಶ್ವ ಮಹಿಳೆಯ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಸದಸ್ಯರು ಹಾಗೂ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯ ಶಿಕ್ಷಕರಾದ ಶಶಿಕಲಾ ಶೆಟ್ಟಿ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಜಾತ ಯು ಶೆಟ್ಟಿ ಹಾಗೂ ಶ್ರೀಮತಿ ಉಷಾ ಶೆಟ್ಟಿ ಶ್ರೀಮತಿ ಸುಗುಣ ಡಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತಿ ಇದ್ದರು. ಈ ಒಂದು ಶುಭ ಸಮಾರಂಭದ ಕಾರ್ಯಕ್ರಮದಲ್ಲಿ ಬಂಟ ಸಮುದಾಯದ ಹಿರಿಯ ಸಾಧಕರಾದ ಶ್ರೀಮತಿ ರಾಧಮ್ಮ ಶೆಟ್ಟಿ, ಶ್ರೀಮತಿ ಅಕ್ಕಯ್ಯ ಶೆಟ್ಟಿ, ಮೀನಕ್ಕಶೆಟ್ಟಿ, ಮೈರ ಶೆಟ್ಟಿ ಇವರನ್ನು ಶ್ರೀಯುತ ಸುಂದರ ಶೆಟ್ಟಿ ನಿವೃತ್ತ ಅಧ್ಯಾಪಕರು ಹಾವಂಜೆ ಇವರ ಸಹಕಾರದಿಂದ ಹಾಗೂ ನೇತೃತ್ವದಲ್ಲಿ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಗೌರವಿಸಲಾಯಿತು. ಈ ಒಂದು ಶುಭ ಸಂದರ್ಭದಲ್ಲಿ…