Author: admin

ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್‌ ಮುರಳೀಧರ್‌ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರು ಮುರಳೀಧರ್‌ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್‌ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್‌ ಮೂಲಕ ಪತ್ನಿ ಜತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ್ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ| ಕುಮಾರ್‌, ಸಹಾಯಕ ಆಯುಕ್ತ ಮದನ್‌ ಮೋಹನ್‌…

Read More

ಸುರತ್ಕಲ್ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಸಂಸ್ಥೆ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ವಿಜಯ್ ಪಾಲಿಕ್ಲಿನಿಕ್ ಆ್ಯಂಡ್ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ವಿಜಯ್ ಮೆಡಿಕಲ್ಸ್ ಸುರತ್ಕಲ್ ಇವರ ಸಹಯೋಗದಲ್ಲಿ ಮೇ 1 ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ಸುರತ್ಕಲ್ ಬಂಟರ ಭವನದಲ್ಲಿ ಖ್ಯಾತ 17 ಮಂದಿ ವೈದ್ಯರುಗಳ ನೇತೃತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ ವಿಜಯ್ ಎಂ ಬುದ್ನಾರ್, ಡಾ ರಾಹುಲ್ ರಾವ್ ಭಾಗವಹಿಸಲಿದ್ದಾರೆ. ವಿಜಯ ಮೆಡಿಕಲ್ಸ್ ನ ಮಾಲಕರಾದ ದಯಾನಂದ ಡಿ ಶೆಟ್ಟಿ, ವೈದ್ಯಕೀಯ ಸಮಿತಿಯ ಸಂಚಾಲಕ ಪ್ರತಾಪ್ ಶೆಟ್ಟಿ ಉಪಸ್ಥಿತರಿರುವರು. ರಕ್ತದೊತ್ತಡ, ಮಧುಮೇಹ, ಸ್ತ್ರೀರೋಗ, ಚರ್ಮರೋಗ, ಎಲುಬು, ಜಠರ,…

Read More

ಮುಂಬಯಿಯಲ್ಲಿ ಕೇಟರಿಂಗ್ ಉದ್ಯಮಿಯಾಗಿದ್ದುಕೊಂಡು ಸಾಹಿತ್ಯದ ಕಂಪನ್ನು ಮೈಗೂಡಿಸಿ ಸಮಾಜಸೇವೆ ಮಾಡುತ್ತಿರುವ ಲೇಖಕ, ಸಂಘಟಕ ವಿಶ್ವನಾಥ್ ಶೆಟ್ಟಿ ಪೇತ್ರಿ ಹಾಗೂ ತಂದೆಯ ದಾರಿಯಲ್ಲೇ ಸಾಗುತ್ತಿದ್ದು, ಎಳವೆಯಲ್ಲಿಯೇ ಸಾಹಿತ್ಯದ ಕಂಪನ್ನು ಹೊರಸೂಸುತ್ತಿರುವ ಮಗಳು ಜೀವಿಕಾ ವಿಶ್ವನಾಥ್ ಶೆಟ್ಟಿ ಅವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳು.

Read More

ಸಮಾಜ ಬಾಂಧವ ಬಡವರ ಆಶಾಕಿರಣ ಆದರಣೀಯ ಶ್ರೀ ಕೆ.ಪ್ರಕಾಶ್ ಶೆಟ್ಟಿ ಅವರು ಡಿಸೆಂಬರ್ 25ರಂದು ಅಪರಾಹ್ನ 3 ಘಂಟೆಗೆ ಮಂಗಳೂರು ಗೋಲ್ಡ್ ಪಿಂಚ್ ಸಿಟಿ ಇಲ್ಲಿ ತನ್ನ ಧರ್ಮಪತ್ನಿಯ ಹೆಸರಿನಲ್ಲಿ ಆರಂಭಿಸಿದ ಬಡಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಉದಾತ್ತ ಮಾನವೀಯ ಕಾರ್ಯಕ್ರಮವೊಂದನ್ನು ಆಯೋಜಿಸಲಿದ್ದು ಪ್ರತಿ ವರ್ಷದಂತೆ ಈ ಸಲವೂ ಸಾವಿರ ಕುಟುಂಬಗಳಿಗೂ ಹೆಚ್ಚು ಫಲಾನುಭವಿಗಳು ಈ ಅರ್ಥ ಪೂರ್ಣ ಕಾರ್ಯಕ್ರಮದ ಲಾಭ ಪಡೆಯಲಿದ್ದಾರೆ. ಈ ಸಮಾಜಮುಖಿ ಕಾರ್ಯಕ್ರಮ ಸಂಭ್ರಮದಲ್ಲಿ ಹೆಸರಾಂತ ಚಿತ್ರ ನಟ ನಿರ್ದೇಶಕ ಹಾಗೂ ಜನಪರ ಚಿಂತನೆಯ ಕಾರ್ಯಕ್ರಮ ಸಂಯೋಜಕ ಶ್ರೀ ರಮೇಶ್ ಅರವಿಂದ್ ಅಧ್ಯಕ್ಷತೆ ವಹಿಸಿ ಕೊಳ್ಳಲಿದ್ದು ಉಳಿದಂತೆ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಮೋಹನ್ ಎಂ ಆಳ್ವ ಕಾಪು ಕ್ಷೇತ್ರದ ಜನಾನುರಾಗಿ ಶಾಸಕ ಶ್ರೀ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಎಂ.ಆರ್.ಜಿ ಗ್ರೂಪಿನ ಆಡಳಿತ ನಿರ್ದೇಶಕ ಶ್ರೀ ಗೌರವ್ ಪಿ ಶೆಟ್ಟಿ ಇವರು ಆಹ್ವಾನಿತ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವರ್ಷಂಪ್ರತಿ ನಡೆಯುವ ಈ ಸೇವಾಯಜ್ಞದಲ್ಲಿ ಪ್ರಕಾಶ್ ಶೆಟ್ಟಿ…

Read More

ಮಂಗಳೂರಿನ ಪ್ರತಿಷ್ಟಿತ ಸಹಕಾರಿ ಸಂಸ್ಥೆಯಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು2022-23ನೇ ಸಾಲಿನ ಶೈಕ್ಷಣಿಕ ವರ್ಷದಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಗಳಿಸಿ ಅತ್ಯುನ್ನತ ಸಾಧನೆ ಮಾಡಿದ ಸಂಘದ ಸದಸ್ಯರ ಮತ್ತು ಸಿಬ್ಬಂದಿಗಳ 92ಮಕ್ಕಳಿಗೆ ಸ್ಥಾಪಕಾಧ್ಯಕ್ಷ ಕೆ. ಬಿ. ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭವನ್ನು ದಿನಾ0ಕ 05.11.2023ರ0ದು ಮ0ಗಳೂರಿನ ಶ್ರೀಮತಿ ಗೀತಾ ಎಸ್. ಯಂ. ಶೆಟ್ಟಿ ಸಭಾಭವನದಲ್ಲಿ ಜರಗಿಸಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ಘಾಟಕರಾದ ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರುರವರನ್ನು ಮತ್ತು ಮುಖ್ಯ ಅತಿಥಿಯಾದ ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕರಾದ ಶ್ರೀ ಟಿ. ಪ್ರವೀಣ್‍ಚಂದ್ರ ಆಳ್ವರವರನ್ನು ಸನ್ಮಾನಿಸಲಾಯಿತುಮತ್ತು ಸಂಘದ ಮಂಗಳೂರು ಶಾಖೆಯ ಪಿಗ್ಮಿ ಸಂಗ್ರಾಹಕರಾದ ಖ್ಯಾತ ವೃಕ್ಷ ಪ್ರೇಮಿ ಶ್ರೀ ಮಾಧವ ಉಳ್ಳಾಲ್‍ರವರ ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ, ಸಂಘವು ಕಳೆದ 6 ವರ್ಷಗಳಿಂದ ಸಿಬ್ಬಂದಿಗಳ ಮಕ್ಕಳಿಗೆ…

Read More

ನಮ್ಮ ಧರ್ಮವನ್ನು ಪರಿಪಾಲನೆ ಮಾಡಿ ಹಿತವನ್ನು ಕಾಪಾಡಿ ಧರ್ಮ ರಕ್ಷಣೆ ಮಾಡಿದರೆ ದೇವರು ನಮ್ಮನ್ನು ಕಾಪಾಡುತ್ತಾರೆ .ನಾವು ಯಾವುದನ್ನೂ ಪವಿತ್ರ ಭಾವನೆಯಿಂದ ನೋಡುವೆವೋ ಮತ್ತು ಭಕ್ತಿಯ ಸಂಕೇತದ ಸಂಬಂದ ಇರುತ್ತದೋ ಅದುವೇ ಧರ್ಮ .ಹಾಗೆಯೇ ಪವಿತ್ರವಾದ ಸಂಬಂದಗಳು ಅನೇಕ ಬಗೆಯಲ್ಲಿರಬಹುದು ,ಅದು ಪ್ರಕ್ರತಿ, ಜಲ, ವಾಯು ,ಆಕಾಶ, ಭೂಮಿಯೊಂದಿಗೂ ಇರಬಹುದು ಅವುಗಳಲ್ಲಿ ಪೂಜೆ ಎಂಬುದು ಮುಖ್ಯವಾದುದು .ಇಂದು ಇಲ್ಲಿ ನಾವು ಆಚರಿಸುವ ತೆನೆ ಹಬ್ಬ ಎಂದರೆ ಕೂಡಾ ಇದು ನಾವು ಪ್ರಕೃತಿಯೊಂದಿಗಿನ ಪೂಜೆಗೆ ಸಂಬಂದ ಪಟ್ಟದ್ದು .ಸ್ತ್ರೀ ಪ್ರಧಾನವಾದ ಸಮಾಜದಲ್ಲಿ ನವರಾತ್ರಿಯ ಶುಭ ಪರ್ವದಲ್ಲಿ ಇದರ ಆಚರಣೆಗೆ ಪ್ರಾಮುಖ್ಯತೆ ಇದೆ .ನಾವು ತುಳುನಾಡಿಗರು ಎಲ್ಲಿ ಹೋದರು ನಮ್ಮ ಸಂಪ್ರದಾಯ ,ಸಂಸ್ಕ್ರತಿಯನ್ನು ಬಿಟ್ಟವರಲ್ಲ .ಇಲ್ಲಿ ತುಳುನಾಡಿನ ಭಕ್ತಿ ಭಾವದ ಮನೆ ತುಂಬಿಸುವ ತೆನೆ ಹಬ್ಬದ ವೈಭವ ಮೂಡಿ ಬಂದಿದೆ, ಇಂತಹ ಧರ್ಮದ ಚೌಕಟ್ಟಿನಲ್ಲಿ ನಡೆಯುವ ಆಚರಣೆಗಳಿಗೆ ಮಹತ್ವವಿದೆ ಎಂದು ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ನುಡಿದರು…

Read More

ನಾನು ನನ್ನದು ಎಂಬ ಸ್ವಾರ್ಥವಿಲ್ಲದೇ ನಾವು ನಮ್ಮದು ಎಂಬ ಭಾವನೆ ಮೂಡಿಸುವ ಸಂಸ್ಥೆ ಚಿಣ್ಣರಬಿಂಬ- ಶೇಖರ್ ಪೂಜಾರಿ ಮುಂಬಯಿ:- ಇನ್ನು ಮುಂದೆ ಚಿಣ್ಣರ ಬಿಂಬದ ಬಳಗದಲ್ಲಿ ನಾವೂ ಇರುತ್ತೇವೆ, ನಾವೂ ಕೂಡಾ ಚಿಣ್ಣರ ಬಿಂಬದ ಕುಟುಂಬದಂತೆ ನಾವೂ‌ ನಿಮ್ಮ ಜೊತೆಗೆ ಇರುತ್ತೇವೆ. ಚಿಣ್ಣರ ಬಿಂಬ ಇದರ 2023-2024ನೇ ಸಾಲಿನ ಸಾಕಿನಾಕ ಶಿಬಿರದ ಮಕ್ಕಳ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮವು    ಸೆಪ್ಟೆಂಬರ್ 3 ರಂದು ಭಾನುವಾರ ಮಧ್ಯಾಹ್ನ ಸಮತ ವಿದ್ಯಾ ಮಂದಿರ್ ಸಾಕಿನಾಕದಲ್ಲಿ ಸುಂದರವಾಗಿ ಜರುಗಿತು. ಉದ್ಘಾಟಕರಾದ ರಾಜು ಮೆಂಡನ್, ಚಿಣ್ಣರ ಬಿಂಬದ ರೂವಾರಿ ಪ್ರಕಾಶ್ ಭಂಡಾರಿ ಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜೊತೆಯಲ್ಲಿ ಅಧ್ಯಕ್ಷರಾದ ಶೇಖರ್ ಪೂಜಾರಿ, ಮುಖ್ಯ ಅತಿಥಿಯಾಗಿ ಆಗಮಿಸಿದ ದಿನೇಶ್ ದೇವಾಡಿಗ, ಕೇಂದ್ರ ಸಮಿತಿಯ ಸದಸ್ಯರಾದ ರಮೇಶ್ ರೈ, ಸವಿತಾ ಶೆಟ್ಟಿ, ಅನಿತಾ ಶೆಟ್ಟಿ, ವಲಯ ಮುಖ್ಯಸ್ಥೆ ದೇವಿಕಾ ಶೆಟ್ಟಿ, ರಾಜವರ್ಮ ಜೈನ್, ಶಿಬಿರ ಮುಖ್ಯಸ್ಥೆ ಉಷಾ ಶೇರುಗಾರ್ ವೇದಿಕೆಯಲ್ಲಿದ್ದರು. ಚಿಣ್ಣರ ಬಿಂಬಕ್ಕೆ ಈಗ ಇಪ್ಪತ್ತು ವರುಷ …

Read More

ಹಲವು ವರ್ಷಗಳಿಂದ ಸಮಾಜಮುಖಿಯಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಮೀರಾ ರೋಡಿನ ಹೆಸರಾಂತ ಸಂಸ್ಥೆ ನವತರುಣ ಮಿತ್ರ ಮಂಡಳಿಯ ಪದಗ್ರಹಣ ಕಾರ್ಯಕ್ರಮವು ಜು. 29ರ ಶನಿವಾರದಂದು ನಡೆಯಲಿದೆ. ಇಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಞೆ ಲತಾ ಮಂಗೇಶ್ಕರ್ ಸಭಾಂಗಣದಲ್ಲಿ ಸಂಜೆ 4 ರಿಂದ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಲಿದೆ. ಈ ಪ್ರಯುಕ್ತ ಹೇರಂಜಾಲು ಯಕ್ಷ ಬಳಗ ಹಾಗೂ ಟೀಮ್ ಉತ್ಸಾಹಿ ಬೆಂಗಳೂರು ಕಲಾವಿದರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಎಂಬ ಕನ್ನಡ ಯಕ್ಷಗಾನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಹೆರಂಜಾಲು ಗೋಪಾಲ್ ಗಾಣಿಗ, ಪಲ್ಲವ ಗಾಣಿಗ ಹೆರಂಜಾಲು, ಮದ್ದಳೆಯಲ್ಲಿ ಅನುರುದ್ಧ ಹೆಗಡೆ ವರ್ಗಾಸರ, ಚೆಂಡೆಯಲ್ಲಿ ಸುಜನ್ ಹಾಲಾಡಿ, ಮುಮ್ಮೇಳದಲ್ಲಿ ತೀರ್ಥಹಳ್ಳಿ ಗೋಪಾಲ ಆಚಾರ್ಯ, ಶ್ರೀಧರ ಭಟ್ ಕಾಸರಗೋಡು, ಪ್ರಕಾಶ್ ಮೊಗವೀರ ಕಿರಾಡಿ, ವೆಂಕಟೇಶ ಹೆಗಡೆ, ನಾಗಶ್ರೀ ಜಿ.ಎಸ್. ನಿಹಾರಿಕ ಭಟ್, ಶ್ರೀಕಾಂತ್ ರಟ್ಟಾಡಿ, ಸುಶಾಂತ್ ಶೆಟ್ಟಿ ಅಚ್ಲಾಡಿ, ನಾಗಭೂಷಣ್ ನಾಯ್ಕ್ ಮೊದಲಾದವರು ರಂಜಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ – ತುಳು…

Read More

ಬಂಟರ ಸಂಘ ಮುಂಬಯಿ ಇದರ ಮೀರಾ – ಭಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಜೂ.26 ರ ಬುಧವಾರ ಮಧ್ಯಾಹ್ನ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೋಟೆಲ್ ಸಮೀಪದ ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಞೆ ದಿ. ಲತಾ ಮಂಗೇಷ್ಕರ್ ನಾಟ್ಯ ಸಭಾಗೃಹದಲ್ಲಿ ಯಕ್ಷಗಾನ ವೇಷಧಾರಿ ಮಹಾಬಲೇಶ್ವರ ಭಟ್ ಕ್ಯಾದಗಿ ಅವರ ವಿನೂತನ ಶೈಲಿಯ ಪುಷ್ಪಕ ಯಾನ ‘ಏಕವ್ಯಕ್ತಿ ನವರಸಾಭಿವ್ಯಕ್ತಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನೀಡಿದ ಮಹಾಬಲೇಶ್ವರ ಭಟ್ ಕ್ಯಾದಗಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸನ್ಮಾನಿಸಿದರು. ಬಳಿಕ ಮಾತನಾಡಿ ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನು ಒಳಗೊಂಡ ಯಕ್ಷಗಾನ ಶಾಸ್ತ್ರೀಯ ಕಲೆ, ಭಾರತೀಯ ಸಂಸ್ಕೃತಿಯ ರೂಪಕಗಳನ್ನು ಸಾಕ್ಷಾತ್ಕರಿಸುವಲ್ಲಿ ಯಶಸ್ಸು ಕಂಡಿದೆ ಎಂದರು. ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿಯ ಪಶ್ಚಿಮ ವಲಯ ಸಮನ್ವಯಕಾರ ಶಶಿಧರ ಕೆ. ಶೆಟ್ಟಿ, ಕ್ರೀಡಾ ವಿಭಾಗದ ಕಾರ್ಯಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್, ವಸಾಯಿ…

Read More

ದಾನಶೀಲತೆಯಿಂದ ಸದೃಢ, ಸಮರ್ಥ, ನೆಮ್ಮದಿಯ ರಾಷ್ಟ್ರ ನಿರ್ಮಾಣ ಸಾಧ್ಯವೆಂದು ಲೈಫ್ ಲೈನ್ ಫೀಡ್ಸ್ ನ ಆಡಳಿತ ನಿರ್ದೇಶಕ ಕೆ. ಕಿಶೋರ್ ಕುಮಾರ್ ಹೆಗ್ಡೆ ತಿಳಿಸಿದರು. ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರ ಕಾಲೇಜಿಗೆ ಲೈಫ್ ಲೈನ್ ಸಂಸ್ಥೆ ವತಿಯಿಂದ 50 ಲಕ್ಷ ರೂ. ಗಳ ಪೀಟೋಪಕರಣ ಕೊಡುಗೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ದಾನ ನೀಡುವಲ್ಲಿ, ಜನಸೇವೆಯಲ್ಲಿ ಸಿಗುವ ಖುಷಿ ಬೇರೆ ಯಾವುದರಿಂದಲೂ ಸಿಗುವುದಿಲ್ಲ. ವಿದ್ಯಾಭ್ಯಾಸದ ನಂತರ ದುಡಿಮೆಯ ಸಂದರ್ಭದಲ್ಲಿ ಲಾಭದ ಸ್ವಲ್ಪ ಭಾಗವನ್ನಾದರೂ ದೇಶಕ್ಕಾಗಿ ಕೊಡುವುದರ ಮೂಲಕ ದೇಶವನ್ನು ಉಳಿಸಿಕೊಳ್ಳಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವೆಂದು ತಿಳಿಸಿದರು. ಈ ಕಾಲೇಜಿನ ಮುಂಭಾಗದಲ್ಲಿ ಓಡಾಡುವಾಗ ಕಾಂಪೌಂಡ್ ಒಳಗಿರುವುದಕ್ಕಿಂತ ರಸ್ತೆಯಲ್ಲಿ ಹೆಚ್ಚು ವಿದ್ಯಾರ್ಥಿಗಳಿರುವುದನ್ನು ಗಮನಿಸಿದ್ದು, ಕೊಠಡಿ ಹಾಗೂ ಪೀಟೋಪಕರಣಗಳ ಕೊರತೆಯಿಂದ ಎರಡು ಪಾಳಿಯಲ್ಲಿ ಕಾಲೇಜು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂತು. ಇಲ್ಲಿ ಬಂದು ನೋಡಿದಾಗ ಒಟ್ಟು 380 ಡೆಸ್ಕ್ ಗಳ ಅವಶ್ಯಕತೆ ಕಂಡು ಬಂತು. 30 ಲಕ್ಷ ರೂ. ಅಂದಾಜಿನಲ್ಲಿ ಡೆಸ್ಕ್ ವ್ಯವಸ್ಥೆ ಮಾಡಿಕೊಡುವ ಭರವಸೆ…

Read More