Author: admin

ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಗೆ ಪ್ರತಿಷ್ಠಿತ ಗೌರವ ಪುರಸ್ಕಾರ ಅವಾರ್ಡ್ ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಗೆ ಖಾನ್ ಎಜ್ಯುಕೇಶನ್ ಫೌಂಡೇಶನ್ ವತಿಯಿಂದ ಪ್ರತಿಷ್ಠಿತ ಗೌರವ ಪುರಸ್ಕಾರ ಪ್ರಶಸ್ತಿ 2021-22 ಲಭಿಸಿದೆ. ಖಾನ್ ಎಜ್ಯುಕೇಶನ್ ಫೌಂಡೇಶನ್‌ನ ವಾರ್ಷಿಕ ಪ್ರಶಸ್ತಿಗಳಲ್ಲಿ 2021-22ಸಾಲಿನ ಪ್ರತಿಷ್ಠಿತ ಗೌರವ ಪುರಸ್ಕಾರ ಅವಾರ್ಡನ್ನು ಖ್ಯಾತ ಸಮಾಜಸೇವಕ, ಕೋವಿಡ್ ವಾರಿಯರ್ ಡಾ. ಸುಧಾಕರ್ ಶೆಟ್ಟಿಯವರಿಗೆ ಮೌಲನಾ ಅಬ್ದುಲ್ ಕಲಾಂ ಅಜಾದ್ ಮೆಮೋರಿಯಲ್ ಹಾಲ್, ಪುಣೆ ಮುನ್ಸಿಪಾಲ್ ಕಾರ್ಪೊರೇಷನ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಪುಣೆಯ ಬೇಬಿ ಫ್ರೆಂಡ್ಸ್ ಮಕ್ಕಳ ಆಸ್ಪತ್ರೆಯ ಮಾಲಕರಾಗಿರುವ ಡಾ. ಸುಧಾಕರ ಶೆಟ್ಟಿಯವರು ಕಟೀಲ್‌ನಲ್ಲಿ ಸಂಚಾರಿ ಮಕ್ಕಳ ಕ್ಲಿನಿಕ್ ಅನ್ನು ಆರಂಭಿಸುವ ಯೋಜನೆ ಹೊಂದಿದ್ದು, ಪುಣೆಯಲ್ಲಿ ಪೊಲೀಸ್ ಆಸ್ಪತ್ರೆ, ಎಸ್‌ಆರ್‌ಪಿಎಫ್ ಹಾಸ್ಪಿಟಲ್, ಆರ್ಮಿಯಿಂದ ನಡೆಸಲ್ಪಡುವ ಕಂಟೋನ್ಮೆಂಟ್ ಆಸ್ಪತ್ರೆಗಳಲ್ಲಿ ಕೂಡಾ ಗೌರವ ತಜ್ಞರಾಗಿ ಕರ್ತವ್ಯ ನಿರತರಾಗಿದ್ದಾರೆ. ಸತತ 3 ವರ್ಷಗಳ ಕಾಲ 10 ಸಾವಿರಕ್ಕೂ ಮಿಕ್ಕಿ ಕೋವಿಡ್ ರೋಗಿಗಗಳಿಗೆ ಡಾ. ಸುಧಾಕರ…

Read More

ಬೆಂಗಳೂರು ಬಂಟರ ಸಂಘವು ನಮ್ಮ ಸಮಾಜದ ಬಡ ಕುಟುಂಬಗಳ ವಧು-ವರರಿಗೆ ಉಚಿತ ಕಂಕಣ ಭಾಗ್ಯ (ಸಾಮೂಹಿಕ ವಿವಾಹ) ಯೋಜನೆಯನ್ನು ಬೆಂಗಳೂರು ಬಂಟರ ಸಂಘದಲ್ಲಿ ಹಮ್ಮಿಕೊಂಡಿದ್ದಾರೆ. ಈ ಸೌಕರ್ಯದ ಸದುಪಯೋಗ ಪಡೆಯಲು ಇಚ್ಚಿಸುವವರು ತಮ್ಮ ಹೆಸರುಗಳನ್ನು ಕೂಡಲೇ ಬೆಂಗಳೂರು ಬಂಟರ ಸಂಘದಲ್ಲಿ ನೋಂದಾಯಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ. ಈ ಮದುವೆಗೆ ಬೆಂಗಳೂರು ಬಂಟರ ಸಂಘದ ಕಡೆಯಿಂದ ಒಂದು ವಧು-ವರರ ಜೋಡಿಗೆ 8+8 (16) ಜನರಿಗೆ ಬೆಂಗಳೂರಿಗೆ ಬಂದು ಹೋಗಲು ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಒದಗಿಸಿಕೊಡಲಿದ್ದಾರೆ. ವಧುವಿಗೆ ಕರಿಮಣಿ, ಸೀರೆ, ವಧುವಿನ ಅಲಂಕಾರ ಮತ್ತು ವರನಿಗೆ ಮದುವೆಯ ಉಡುಗೆಯನ್ನು ಕೂಡಾ ಕೊಡಲಿದ್ದಾರೆ. ವಧು-ವರರಿಗೆ ಮತ್ತು ಅವರ ಸಂಬಂಧಿಕರಿಗೆ ಊಟ, ಉಳಿದುಕೊಳ್ಳಲು ವ್ಯವಸ್ಥೆಯನ್ನೂ ಮಾಡಿ, ಪೂಜೆ, ಮಂಟಪ, ಛತ್ರ , ಹೂವಿನ ಅಲಂಕಾರ, ವಾದ್ಯ ಮತ್ತು ಮದುವೆಗೆ ಬೇಕಾಗುವ ಎಲ್ಲಾ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಿ ಬಂಟರ ಪದ್ಧತಿಯಂತೆ ಅದ್ದೂರಿಯಾಗಿ ಬೆಂಗಳೂರು ಬಂಟರ ಸಂಘದಲ್ಲಿ ವಿವಾಹ ವೇದಿಕೆಯ ವತಿಯಿಂದ ಮದುವೆ ಮಾಡಿಕೊಡಲಾಗುವುದು ಎಂದು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ…

Read More

ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀ ದತ್ತಾಂಜನೆಯ ಕ್ಷೇತ್ರ ದಕ್ಷಿಣ ಗಾಣಗಾಪುರದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಸಂಕಲ್ಪದಂತೆ ತಾಯ್ನಾಡಿನ ಭಾಷೆ ಕಲೆ, ಸಂಸ್ಕೃತಿ, ಆಚಾರ, ವಿಚಾರಗಳಿಗೆ ಮಹತ್ವ ನೀಡುತ್ತಿರುವುದಲ್ಲದೆ ಸಮಾಜಮುಖಿ ಸೇವಾ ಚಿಂತನೆಯೊಂದಿಗೆ ಸೇವೆ ಮಾಡುತ್ತಿದೆ ಎಂದು ಪುಣೆ ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಹೇಳಿದರು. ಸ್ವರ್ಗೇಟ್‍ನ ಚಂದನ್ ಹೊಟೇಲ್‍ನ ಸಭಾಗೃಹದಲ್ಲಿ ನಡೆದ ಪುಣೆ ಶ್ರೀ ಗುರುದೇವಾ ಸೇವಾ ಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ 19ನೇ ವಾರ್ಷಿಕೋತ್ಸವದ ಪೂರ್ವ ತಯಾರಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧ್ಯಾತ್ಮಿಕ ಚಿಂತನೆಯೊಂದಿಗೆ ತಮ್ಮನ್ನು ತೊಡಗಿಸಿಕೊಂಡಿರುವ ಸ್ವಾಮೀಜಿಯವರಿಂದ ಸ್ಥಾಪನೆಗೊಂಡ ಸಂಸ್ಥೆ ಗುರುದೇವಾ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಸುಮಾರು 22 ವರ್ಷಗಳಿಂದ ಮಹತ್ತರವಾದ ಕೆಲಸಗಳನ್ನು ಮಾಡುತ್ತಿದ್ದು ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ…

Read More

ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜ್ಯ ಸಹಕಾರ ಮಂಡಳ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ಅಧ್ಯಕ್ಷ ರವಿರಾಜ ಹೆಗ್ಡೆಯವರು ಆಯ್ಕೆಯಾಗಿದ್ದಾರೆ. ಸೀತಾರಾಮ ರೈ ಅವರು ಸ್ಥಾಪಿಸಿದ ಆದರ್ಶ ವಿವಿದೋದ್ಧೇಶ ಸಹಕಾರಿ ಸಂಘವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಶಾಖೆಗಳನ್ನು ಹೊಂದಿ ಮುನ್ನಡೆಯುತ್ತಿದೆ. ಇವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

Read More

ಮುಂಬಯಿಯಲ್ಲಿ ನೆಲೆಸಿ ಡೊಂಬಿವಲಿ ಬಂಟರ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ, ಓರ್ವ ಉತ್ತಮ ಸಂಘಟಕಿಯಾಗಿ, ಸಮಾಜಸೇವೆ ಮಾಡುತ್ತಿರುವ ಸದಾ ಹಸನ್ಮುಖಿ, ಮುಗ್ದ ಮನಸ್ಸಿನ ಶ್ರೀಮತಿ ಉದಯಾ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

Read More

ಮೀರಾ ಭಾಯಂದರ್ ಅವಳಿ ನಗರ ಮಹಾರಾಷ್ಟ್ರದಲ್ಲೊಂದು ಪುಟ್ಟ ಮಂಗಳೂರು ಎಂದೂ, ಥಾಣೆ ಜಿಲ್ಲೆಯ ಸಾಂಸ್ಕೃತಿಕ ನಗರವೆಂದೂ ಪ್ರಸಿದ್ಧಿ ಪಡೆದಿದೆ. ಇಲ್ಲಿ ನಮ್ಮೂರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸ್ತವ್ಯ ಹೂಡಿದ್ದು, ಸಂಬಂಧಿಸಿದ ಸಂಘ ಸಂಸ್ಥೆಗಳ ಸಂಖ್ಯೆಯೂ ಇನ್ನೂರು ಮೀರುತ್ತಿದೆ. ನಮ್ಮ ಸಮುದಾಯದ ಹೆಚ್ಚಿನ ಸಂಘಟಕರು, ಸಮಾಜ ಸೇವಕರು, ರಾಜಕೀಯ ನಾಯಕರು, ಧಾರ್ಮಿಕ ಸಾಂಸ್ಕೃತಿಕ ಕ್ಷೇತ್ರದ ಮುಂದಾಳುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಹಾಗೂ ಸಾಕಷ್ಟು ಪ್ರಭಾವಿಗಳೂ ಇರುವುದರಿಂದ ಇಲ್ಲಿ ನಾಯಕತ್ವಕ್ಕೆ ಸ್ಫರ್ಧಿಗಳೂ ಹೆಚ್ಚು. ಒಂದಕ್ಕಿಂತ ಹೆಚ್ಚು ಸಮಾನ ಯೋಗ್ಯತೆ ಇರುವ ಈ ಪ್ರದೇಶದಲ್ಲಿ ಹೆಚ್ಚಿನ ಸಂದರ್ಭಗಳಲ್ಲಿ ನಮ್ಮ ಕೇಂದ್ರ ಸಮಿತಿಯ ಮುಖ್ಯಸ್ಥರು ಹಾಗೂ ಸ್ಥಾನೀಯ ಮುಖ್ಯಸ್ಥರೊಂದಿಗೆ ಸೌಹಾರ್ದದ ಸಮಾಲೋಚನೆ ನಡೆಸಿ ನಾಯಕತ್ವದ ಆಯ್ಕೆಯಾಗುತ್ತದೆ. ಹಾಗೆ ತುಸು ವಿಳಂಬವಾದರೂ ಕೊನೆಗೂ ಸಮಿತಿಗೆ ಸಮರ್ಥ ನಾಯಕತ್ವದ ಆಯ್ಕೆಯಾಗಿದೆ. ಬಂಟರ ಸಂಘ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಈ ಸಾಲಿನ ಮೂರು ವರ್ಷಗಳ ಅವಧಿಗೆ ಗುತ್ತಿನಾರ್ ರವೀಂದ್ರ ಶೆಟ್ಟಿ ಬಳ್ಕುಂಜೆ ಗುತ್ತು ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯದ ಉಡುಪಿ…

Read More

ಅಗೋಳಿ ಮಂಜಣ್ಣ ತುಳುನಾಡಿನ ಭೀಮನೆಂದು ಪ್ರಸಿದ್ಧನಾದ ಐತಿಹಾಸಿಕ ಪುರುಷ. ಅಪ್ರತಿಮ ಶಕ್ತಿ ಸಾಹಸಗಳಿಗೆ ಹೆಸರಾದ ವ್ಯಕ್ತಿ. ಅದ್ಭುತ ಜೀರ್ಣಶಕ್ತಿಯುಳ್ಳ ತಿನಿಸಿಗ. ‘ಅಗೋಳಿ’ ಎಂಬ ತುಳು ಶಬ್ದಕ್ಕೆ ಅರ್ಥ ಗುಡಾಣ, ಹಂಡೆ ಅಥವಾ ಅಂತಹದೇ ಭಾರಿ ಗಾತ್ರದ ಪಾತ್ರೆ ಎಂದು. ಆ ಪಾತ್ರೆಯಲ್ಲಿ ಊಟ ಮಾಡುವವನು ಅಗೋಳಿ ಮಂಜಣ್ಣ. ಮಂಗಳೂರು ಆಕಾಶವಾಣಿಯ ಕೃಷಿರಂಗ ಕಾರ್ಯಕ್ರಮದಲ್ಲಿ ಅಗೋಳಿ ಮಂಜಣ್ಣನ ಕಥಾನಕವನ್ನು ತುಳು-ಕಬಿತೆ ರೂಪದಲ್ಲಿ ಅಪರೂಪಕ್ಕೊಮ್ಮೆ ಪ್ರಸಾರಮಾಡುತ್ತಾರೆ. ಅದರಲ್ಲಿ ಮಂಜಣ್ಣನ ಅಪೆಟೈಟ್‌ ಹೇಗಿತ್ತು ಎಂಬ ವರ್ಣನೆಯ ಸಾಲುಗಳನ್ನು ನೋಡಿ: ಬಜಿಲ್‌ ಒಂಜಿ ಕಳಾಸೆ ಆಂಡಾಲಾ ಒರೊರೊ ಅರಾ ಅರಾ ಆಪುಂಡ್‌ ಗೋಂಟ್‌ ತಾರಾಯಿ ಇರ್ವತ್ತೈನ್‌ಲಾ ಬಾಯಿಡೆ ಗಾಣ ಪಾಡುಂಡ್‌… ಅವಲಕ್ಕಿ ಒಂದು ಕಳಸಿಗೆಯಷ್ಟಿದ್ದರೂ (1 ಕಳಸಿಗೆ ಅಂದರೆ 14 ಸೇರು; 3 ಕಳಸಿಗೆ ಅಂದರೆ 1 ಮುಡಿ) ಕೆಲವೊಮ್ಮೆ ಕಡಿಮೆಯೇ ಆಗುತ್ತದೆ. ಒಣತೆಂಗಿನಕಾಯಿ ಇಪ್ಪತ್ತೈದು ಇದ್ದರೂ ಬಾಯಿಯಲ್ಲೇ ಗಾಣಹಾಕುತ್ತಾನೆ. ಸುಮಾರು ನಾಲ್ಕೈದು ತಲೆಮಾರುಗಳ ಹಿಂದೆ ಮಂಗಳೂರಿನ (ತುಳುವಿನಲ್ಲಿ ‘ಕುಡ್ಲ’ ಎನ್ನುವುದು) ಹತ್ತಿರದ ತೊರ್ತಲ್ತ್‌ ಎಂಬ ಹೆಸರಿನ…

Read More

ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ ತೋಕೂರು ರಾಮಣ್ಣ ಶೆಟ್ಟಿ ಮೆಮೋರಿಯಲ್ ಶಾಲೆಯಲ್ಲಿ ನಡೆದ ಯಕ್ಷದ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಈ ಸಂದರ್ಭ ಶಾಲೆಯ ಪ್ರಾಂಶುಪಾಲರನ್ನು ಪಟ್ಲ ಫೌಂಡೇಶನ್ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ್, ಮೀನಾಕ್ಷಿ ಐತಾಳ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಶಾಲಾ ಪ್ರಾಂಶುಪಾಲೆ ಶ್ರೀ ಲತಾ ರಾವ್, ಸತೀಶ್ ಶೆಟ್ಟಿ ಎಕ್ಕಾರು, ಉಪಸ್ಥಿತರಿದ್ದರು. ಅಜಿತ್ ಕೆರೆಕಾಡು ಸ್ವಾಗತಿಸಿ ಶಿಕ್ಷಕಿ ವಾಣಿ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಸುರೇಖ ನಿರೂಪಿಸಿದರು.

Read More

ಸ್ವಾವಲಂಬಿ ಮಕ್ಕಳನ್ನು ನಾವು ಹೇಗೆ ಬೆಳೆಸಬಹುದು? ಅಂದರೆ ಯಾವುದೇ ಕೆಲಸಗಳಾದರೂ ಮುಂಚೂಣಿಯಲ್ಲಿ ನಿಲ್ಲುವ, ಗಟ್ಟಿತನ ಹೊಂದಿರುವ ಮತ್ತು ಯಾವುದೇ ಸಮಸ್ಯೆಗಳನ್ನು ಬಗೆಹರಿಸುವಂಥ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ? ಸೇಫ್ ಝೋನ್‌ನಿಂದ ಹೊರಗೆ ನೋಡುವ ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳಲು ಮುಂದೆ ಬರುವಂಥ ಧೈರ್ಯವನ್ನು ನಾವು ಮಕ್ಕಳಲ್ಲಿ ಬೆಳೆಸಬೇಕಲ್ಲವೇ? ನಾನು ಮೂರು ಮಕ್ಕಳ ತಾಯಿ. ನನ್ನಂತೆಯೇ ನೀವು ಕೂಡ ಪೋಷಕರಾಗಿದ್ದರೆ ಇದೇ ರೀತಿಯ ಪ್ರಶ್ನೆಗಳನ್ನು ಕೇಳುತ್ತಿದ್ದೀರಿ. ನನಗೆ ಗೊತ್ತಿದೆ; ಎಲ್ಲ ತಂದೆ-ತಾಯಂದಿರು ತಮ್ಮ ಮಕ್ಕಳನ್ನು ಹೀಗೆಯೇ ಬೆಳೆಸಬೇಕು ಅಂದುಕೊಂಡಿರುತ್ತಾರೆ. ಆದರೆ ಎಲ್ಲೋ ಒಂದು ಕಡೆ ನಾವು ಇದಕ್ಕೆ ವಿರುದ್ಧವಾಗಿ ಹೋಗುತ್ತಿದ್ದೇವೆ ಎಂದೆನಿಸುತ್ತಿದೆ. ನಮ್ಮ ಮಕ್ಕಳು ಖುಷಿಯಾಗಿ ಮತ್ತು ಯಶಸ್ವಿಯಾಗಿ ಬೆಳೆಯಲಿ ಎಂದು ಆಶಿಸುತ್ತೇವೆ. ಹೀಗಾಗಿಯೇ ನಾವು ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗುರಾಣಿಯಾಗಿ ನಿಂತು ಬೆಳೆಸುತ್ತೇವೆ. ಅವರ ಆತ್ಮಗೌರವದ ಬಗ್ಗೆ ಆತಂಕವಿದ್ದು, ಅವರು ಏನು ಮಾಡಿದರೂ ನಾವು ಹೊಗಳಲು ಶುರು ಮಾಡುತ್ತೇವೆ. ಕೆಲವೊಂದಕ್ಕೆ ಅವರು ಸಮರ್ಥರಿದ್ದಾರೋ ಇಲ್ಲವೋ ಎಂಬುದನ್ನೂ ನೋಡುವುದಿಲ್ಲ. ನಾವು ಅಂಥ ಕೆಲಸ…

Read More

ಮುಂಬಯಿ (ಆರ್‌ಬಿಐ), ಜೂ.28: ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐ-ಲೇಸಾ ದಿ ವಾಯ್ಸ್  ಆಫ್ ಓಷನ್ ಸಂಸ್ಥೆ ಈ ಸಾರಿ ಮಳೆ ನೀರು ಕೊಯ್ಲು, ಸಂಗ್ರಹಣೆ ಮತ್ತು ನೀರನ್ನು ಭೂಮಿಗೆ ಇಂಗಿಸುವ ಬಗ್ಗೆ ಗಮನ ಹರಿಸಿದೆ. ಐ-ಲೇಸಾವು ಜು.೦2, ಭಾನುವಾರ ಸಂಜೆ 7:30 ಗಂಟೆಗೆ ಝೂಮ್ ವಸ್ತುತಃ ವೇದಿಕೆಯಲ್ಲಿ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಆಯೋಜಿಸಿದೆ. ಶಿರಸಿಯ ಸಂರಕ್ಷಣಾ ಜೀವನ ಶಾಸ್ತ್ರ ಮತ್ತು ಸುಸ್ಥಿರ ಅಭಿವೃದ್ಧಿ ಅಧ್ಯಯನ ಕೇಂದ್ರದ ನಿರ್ದೇಶಕ, ಪರಿಸರ ಪ್ರೇಮಿಸಸ್ಯ ಮತ್ತು ಜೈವಿಕ ವಿಜ್ಞಾನಿ ಡಾ| ಕೇಶವ ಹೆಗ್ಡೆ ಕೊರ್ಸೆ ಇವರು ನೀರಿನ ಕೊಯ್ಲಿನ ಪ್ರಾಮುಖ್ಯತೆ, ಮನೆ ಮನೆಗಳಲ್ಲಿ ಮಳೆ ನೀರಿನ ಸಂಗ್ರಹಣೆ ಮತ್ತು ಬಳಕೆ ಹಾಗೂ ಮಳೆಯ ನೀರನ್ನು ಅಂತರ್ಜಲವಾಗಿ ಭೂಮಿಗಿಳಿಸುವ ವೈಜ್ಞಾನಿಕ ಪ್ರಕ್ರಿಯೆಗಳ ಬಗ್ಗೆ ತಿಳಿಸಿ ಕೊಡಲಿದ್ದಾರೆ. ಐ-ಲೇಸಾದ ಅನಂತ್ ರಾವ್ ನಡೆಸಲಿದ್ದಾರೆ. ಆಸಕ್ತ ನಾಗರೀಕರು,…

Read More