Author: admin
ಗುರುಪುರ ಬಂಟರ ಮಾತೃ ಸಂಘದ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಬಂಟ ಯುವ ಸಮಾಜವನ್ನು ಸಂಘಟಿಸುವ ದೃಷ್ಟಿಯಿಂದ ಯುವ ಬಂಟರ ಸಭೆಯು ಕುಳವೂರು, ಕಿಲೆಂಜಾರು, ಮುತ್ತೂರು ಗ್ರಾಮಗಳಲ್ಲಿ ದಿನಾಂಕ 12-06-2022 ರವಿವಾರ ಯುವ ವಿಭಾಗದ ಅಧ್ಯಕ್ಷರಾದ ದೀಪಕ್ ಶೆಟ್ಟಿ ಲಿಂಗ ಮಾರ್ ಗುತ್ತು ಇವರ ನೇತ್ರತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ಗ್ರಾಮದ ಹೆಚ್ಚಿನ ಯುವಕರು ಆಸಕ್ತಿಯಿಂದ ಭಾಗವಹಿಸಿದರು. ಈ ಸಭೆಯಲ್ಲಿ ಸಂಘದ ವಾರ್ಷಿಕ ಸಮಾವೇಶ ವಿದ್ಯಾರ್ಥಿ ವೇತನ ಹಾಗೂ ಸಂಘದ ನಿವೇಶನ ಖರೀದಿ ಹಾಗೂ ಸಂಪನ್ಮೂಲ ಕ್ರೂಡಿಕರಣ ಬಗ್ಗೆ ಮಾಹಿತಿನೀಡಲಾಯಿತು. ಎಲ್ಲಾ ಯುವಕರು ಸಕಾರಾತ್ಮಕವಾಗಿ ಸ್ಪಂದಿಸಿದ ಸಭೆಯ ಯಶಸ್ವಿಗೆ ಕೈಜೋಡಿಸಿದರು. ಯುವ ವಿಭಾಗದ ಗ್ರಾಮದ ಸಂಚಾಲಕರನ್ನು ಹಿರಿಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ,ಸಂಚಾಲಕರಾದ ಚಂದ್ರಹಾಸ್ ಶೆಟ್ಟಿ ನಾರಳ,ಕಾರ್ಯದರ್ಶಿ ಹರೀಶ್ ಶೆಟ್ಟಿ, ಕೃಷ್ಣಕಾಂತ್ ಸೇನವ, ಪ್ರಖ್ಯಾತ್ ಶೆಟ್ಟಿ, ಶ್ರವಣ್ ಶೆಟ್ಟಿ,ಗ್ರಾಮಗಳ ಹಿರಿಯರು,ಯುವಕರು, ಉಪಸ್ಥಿತರಿದ್ದರು
ಪ್ರತಿಷ್ಠಿತ ಬಂಟ ಸಮಾಜದ ಕೃಷಿಕ ಮನೆತನದಲ್ಲಿ ಜನಿಸಿದ ಇನ್ನಾ ಕುರ್ಕಿಲ್ ಬೆಟ್ಟು ಸಂತೋಷ್ ಶೆಟ್ಟಿ ಅವರು ಹೋಟೆಲ್ ಉದ್ಯಮ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದವರು. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಿಗೆ ಸಹಾಯ ಹಸ್ತ ನೀಡುತ್ತಾ ಬಂದಿರುವ ಸಂತೋಷ್ ಶೆಟ್ಟರು ಪ್ರಸ್ತುತ ಪುಣೆ ಬಂಟರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಗವಂತ ಸಂತೋಷ್ ಶೆಟ್ಟಿ ಹಾಗೂ ಕುಟುಂಬಸ್ಥರಿಗೆ ಸುಖ, ಶಾಂತಿ, ನೆಮ್ಮದಿ, ಐಶ್ವರ್ಯ, ಆರೋಗ್ಯ ಸಕಲ ಸಂಪತ್ತನ್ನು ನೀಡಿ ಹರಸಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ. ಬಂಟ್ಸ್ ನೌ ಪೇಜ್ ಲೈಕ್ ಮಾಡಿ ಪ್ರೋತ್ಸಾಹಿಸಿ ಆಶೀರ್ವದಿಸಿ https://www.facebook.com/buntsnow/
ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ “ನೆರವು” ಕಾರ್ಯಕ್ರಮ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, “ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಕೆ ಪ್ರಕಾಶ್ ಶೆಟ್ಟಿ ಅವರು ಪ್ರಾರಂಭಿಸಿರುವ ನೆರವು ಕಾರ್ಯಕ್ರಮ 5 ವರ್ಷದಿಂದ ನಡೆಯುತ್ತಿದೆ. ನೂರು ಕೈಗಳಿಂದ ದುಡಿದಿದ್ದನ್ನು ಸಾವಿರ ಕೈಗಳಲ್ಲಿ ದಾನ ಮಾಡು, ಅದರ ಫಲ ನಿನಗೆ ಸಾವಿರ ಸಾವಿರ ಕೈಗಳಲ್ಲಿ ಮರಳಿ ಸಿಗುತ್ತದೆ ಎಂಬ ಮಾತಿನಂತೆ ಕೆ ಪ್ರಕಾಶ್ ಶೆಟ್ಟಿ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಕೈಗೊಂಡಿದ್ದಾರೆ. ಬಾಲ್ಯದಲ್ಲಿ ಅವರಿಗೆ ಸಿಕ್ಕ ಸಂಸ್ಕಾರದಿಂದ ಅವರಿಂದು ಸಮಾಜದ ಮನ್ನಣೆಗೆ ಪಾತ್ರರಾಗಿದ್ದಾರೆ. ಬದುಕು ದೇವರು ಕೊಟ್ಟ ವರ. ಬದುಕು ಸುಂದರವಾಗಲು ಗಳಿಸಿದ್ದರಲ್ಲಿ ಅಲ್ಪಭಾಗ ದಾನ ಮಾಡಬೇಕು ಎಂಬ ನುಡಿಯಂತೆ ಇಂತಹ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ”…
ಪುಣೆ : ಪುಣೆ ತುಳುಕೂಟದ ಸಭೆಯು ನ 5ರಂದು ಕರ್ವೆ ರೋಡ್ ನಲ್ಲಿಯ ರತ್ನ ಹೋಟೆಲ್ ನ ಬ್ಯಾಂಕ್ವೆಟ್ ಹಾಲ್ ನಲ್ಲಿ ತುಳುಕೂಟದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರು ರವರ ಅಧ್ಯಕ್ಷತೆಯಲ್ಲಿ ಜರಗಿತು .ವೇದಿಕೆಯಲ್ಲಿ ತುಳುಕೂಟದ ಸ್ಥಾಪಕ ಅಧ್ಯಕ್ಷ ಜಯ ಕೆ .ಶೆಟ್ಟಿ ,ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು , ತುಳುಕೂಟದ ನಿಕಟ ಪೂರ್ವ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ ,ಸಲಹೆಗಾರರಾದ ಮಾಧವ್ ಶೆಟ್ಟಿಯವರು ಉಪಸ್ಥಿತರಿದ್ದರು . ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು ರವರು ಪುಣೆ ತುಳುಕೂಟದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಿ ಸಭೆಯಲ್ಲಿ ಪ್ರಕಟಿಸಿದರು ..ಗೌರವ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಎಣ್ಣೆಹೊಳೆ ,ಉಪಾಧ್ಯಕ್ಷರುಗಳಾಗಿ ಮಾಧವ್ ಶೆಟ್ಟಿ ಆಶಿರ್ವಾದ್ ,ಉದಯ್ ಶೆಟ್ಟಿ ಕಳತ್ತೂರು ,ಶೇಖರ್ ಪೂಜಾರಿ ಅಂಬಿಕಾ ,ಪ್ರಧಾನ ಕಾರ್ಯದರ್ಶಿಯಾಗಿ ರಾಜಾರಾಮ್ ಶೆಟ್ಟಿ ,ಜೊತೆ ಕಾರ್ಯದರ್ಶಿಯಾಗಿ ಶರತ್ ಎಂ .ಭಟ್ ,ಕೋಶಾಧಿಕಾರಿಯಾಗಿ ಸಿ.ಎ.ಮನೋಹರ್ ಶೆಟ್ಟಿ ,ಜೊತೆ ಕೋಶಾಧಿಕರಿಯಾಗಿ ಪ್ರಕಾಶ್ ಪೂಜಾರಿ ಪಂಚಮಿ ,ಕಾನೂನು ಸಲಹೆಗಾರರಾಗಿ…
ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು. ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ ಅವರು ಅತಿಥಿಗಳ ಜೊತೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಬಂಟರು ಜಾತ್ಯತೀತರು. ಎಲ್ಲ ಜಾತಿ, ಸಮುದಾಯದ ಜನರನ್ನು ತಮ್ಮವರೆಂದು ಕಾಣುವ ಮೂಲಕ ಮನುಷ್ಯತ್ವವನ್ನು ಗೌರವಿಸುವ ಬಂಟರು ನಾಡಿಗೆ ಮಾದರಿಯಾಗಿದ್ದಾರೆ. ಇಡೀ ವಿಶ್ವದೆಲ್ಲೆಡೆಯಿಂದ ಇಂದು ಬಂಟ ಸಮಾಜದ ಜನರು ಒಗ್ಗಟ್ಟಾಗಿ ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆಲ್ಲರಿಗೂ ನನ್ನ ಅಭಿನಂದನೆಗಳು. ಬಹಳ ಸಂತೋಷವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಬಂಟರು ಇತ್ತೀಚಿನ ವರ್ಷಗಳಲ್ಲಿ ಜಗತ್ತಿನ ಅನೇಕ ಪ್ರದೇಶಗಳಿಗೆ ಉದ್ಯೋಗ, ವ್ಯವಹಾರ ನಿಮಿತ್ತ ವಲಸೆ ಹೋಗಿದ್ದಾರೆ. ಬಂಟರೆಂದರೆ ಸಾಹಸ ಪ್ರವೃತ್ತಿ ಉಳ್ಳವರು. ಉದ್ಯೋಗ ಗಳಿಸಲು, ಜೀವನ ನಿರ್ವಹಣೆ ಉದ್ದೇಶದಿಂದ ಪ್ರಪಂಚದ ಎಲ್ಲ ಕಡೆಗಳಲ್ಲಿ ಬಂಟರನ್ನು ಇವತ್ತು ಕಾಣಬಹುದಾಗಿದೆ. ಕರ್ನಾಟಕ ರಾಜ್ಯಕ್ಕೆ ಅವರ ಕೊಡುಗೆ ಅಪಾರವಾದುದು. ಶಿಕ್ಷಣ, ಕ್ರೀಡೆ,…
ಚಿಣ್ಣರಬಿಂಬ ಮುಂಬಯಿ ಇದರ ಶಿಬಿರಗಳಲ್ಲಿ ಒಂದಾದ ಭಯಂದರ್ ಶಿಬಿರದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆಯು ಅಗಸ್ಟ್ 27 ರಂದು ರವಿವಾರ ಬೆಳಿಗ್ಗೆ 9.30 ರಿಂದ ನ್ಯೂ ಸೈಂಟ್ ಆಗ್ನೆಸ್ ಹೈಸ್ಕೂಲ್ ಶಕ್ತಿನಗರ ಎಸ್ ಎನ್ ಕಾಲೇಜ್ ನ ಹತ್ತಿರ ಭಯಂದರ್ ಪೂರ್ವದಲ್ಲಿ ಚಿಣ್ಣರ ಬಿಂಬದ ರೂವಾರಿ ಶ್ರೀಯುತ ಪ್ರಕಾಶ್ ಭಂಡಾರಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಶಿಬಿರದ ಮಕ್ಕಳ ಭಜನೆ, ಶಾರದ ಪೂಜೆ, ಗಣಪತಿ ಸ್ತುತಿಯೊಂದಿಗೆ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮ ಆರಂಭಗೊಂಡಿತು. ಭಾಷಣ, ಭಾವಗೀತೆ, ಜಾನಪದ ಗೀತೆ, ಏಕಪಾತ್ರಾಭಿನಯ, ಛದ್ಮವೇಷ, ಪಾಲಕರಿಗಾಗಿ ದೇಶಭಕ್ತಿ ಗೀತೆ ಸ್ಪರ್ಧೆ ನಡೆಯಿತು. ಶಿಬಿರದ ಮುಖ್ಯಸ್ಥೆ ಜಯಲಕ್ಷ್ಮಿ ಪಿ ಶೆಟ್ಟಿ ಎಲ್ಲರನ್ನೂ ಸ್ವಾಗತಿಸಿದರು. ಮಕ್ಕಳ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮವನ್ನು ಹೋಟೆಲ್ ಉದ್ಯಮಿ ಶ್ರೀ ಜೈ ಕಿರಣ್ ಅರುಣೋದಯ ರೈಯವರು ಉದ್ಘಾಟಿಸಿದರು. ಶಿಬಿರದ ಚಿಣ್ಣರಿಂದ ಪ್ರಾರ್ಥನೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಚಿಣ್ಣರ ಬಿಂಬದ ತನ್ನ ವಿದ್ಯಾರ್ಥಿ ಜೀವನದ ದಿನವನ್ನು ಮೆಲುಕು ಹಾಕುತ್ತಾ, ನಾನು ಇಲ್ಲಿ…
ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಿ, ಮಾತನಾಡಿ ಆ. ೧೩ ರಂದು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜರಗಲಿರುವ ಆಟಿಡೊಂಜಿ ದಿನ, ಸಾಧಕರಿಗೆ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಬಂಟ ಸಮಾಜ ಭಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ವಿನಂತಿಸಿ, ಸಮಾಜದಲ್ಲಿ ಬಂಟ ಸಮುದಾಯದ ಸಾಧಕರು ತುಂಬಾ ಮಂದಿ ವಿವಿಧ ಕ್ಷೇತ್ರದಲ್ಲಿ ಇದ್ದಾರೆ, ಅವರನ್ನು ಹಂತ ಹಂತವಾಗಿ ಗುರುತಿಸಿ, ಗೌರವಿಸುವ ಕಾರ್ಯವನ್ನು ಬಂಟರ ಸಂಘ ಮಾಡುತ್ತಿದೆ ಎಂದು ಹೇಳಿದರು. ಸಮಾಜಕ್ಕೆ ಗೌರವ – ಸವಣೂರು ಕೆ.ಸೀತಾರಾಮ ರೈ : ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈರವರು ಮಾತನಾಡಿ ಬಂಟರ ಸಂಘದ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆದು ಸಮಾಜಕ್ಕೆ ಗೌರವ ತರುವ ಕಾರ್ಯ ನಿರಂತರವಾಗಿ ನಡೆಯಲಿ. ಶಶಿಕುಮಾರ್ ರೈ…
ಬ್ರಹ್ಮಾವರದಲ್ಲಿರುವ ಫಾರ್ಚ್ಯೂನ್ ಅಕಾಡೆಮಿಕ್ ಆಂಡ್ ಚಾರಿಟೆಬಲ್ ಟ್ರಸ್ಟ್ ನ ಆಡಳಿತಕ್ಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಮಾಬುಕಳ ಬಿ.ಡಿ. ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜರಗಿತು. ಅತಿಥಿಗಳಾಗಿ ಹಂಗಾರಕಟ್ಟೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಬಿ. ಭರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಎಚ್. ಇಬ್ರಾಹಿಂ ಸಾಹೇಬ್, ಚೇತನಾ ಪ್ರೌಢಶಾಲೆಯ ಕಲ್ಪನ ಶೆಟ್ಟಿ ಉಪಸ್ಥಿತರಿದ್ದರು. ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನ ಅಧ್ಯಕ್ಷ ಡಾ. ದೈವಿಕ್ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಪ್ರಾವೀಣ್ಯತ ಪ್ರಶಸ್ತಿ ವಿತರಿಸಿದರು. ಕಾಲೇಜಿನ ಚೇರ್ ಮೆನ್ ತಾರನಾಥ್ ಶೆಟ್ಟಿ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ರತ್ನಾಕರ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ನಾಯಕರಾದ ಧ್ರುವ ಧನುಷ್ ಇದ್ದರು. ಪ್ರಾಂಶುಪಾಲ ಪ್ರೊ.ಸ್ಮಿತಾಮೊಲ್ ಎಂ. ಸ್ವಾಗತಿಸಿ, ಉಪನ್ಯಾಸಕರಾದ ಸುಪ್ರೀತಾ, ಪೂರ್ಣಿಮಾ, ಸುಕುಮಾರ್ ಶೆಟ್ಟಿಗಾರ್ ಬಹುಮಾನ ವಿಜೇತರ ವಿವರ ವಾಚಿಸಿದರು. ಅಶ್ವಿನಿ ನಿರೂಪಿಸಿ, ಜೆರಿಕ್ ಡಿ…
ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡುವಿನಲ್ಲಿ ಅಳಿಯ ಕಟ್ಟು ಪರಂಪರೆಯ ಮೂಲ ಅರಸ ಭೂತಾಳ ಪಾಂಡ್ಯ ರಾಜನ ಕುಂಡೋಧರ ದೈವಸ್ಥಾನದಲ್ಲಿ ಮೂರು ವರ್ಷಕೊಮ್ಮೆ ನಡೆಯುವ ರಾಜನ್ ದೈವಗಳ ನಡಾವಳಿ ಮತ್ತು ನೇಮೋತ್ಸವ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಚಲನಚಿತ್ರ ನಟ, ನಿರ್ದೇಶಕ ರಿಷಬ್ ಶೆಟ್ಟಿ ನೇಮೋತ್ಸವದಲ್ಲಿ ಭಾಗಿಯಾದರು. ಸಂಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು. ಸಂಸ್ಥಾನದ ಅಧ್ಯಕ್ಷ ಕೆ. ಎಂ. ಶೆಟ್ಟಿ, ಪದಾಧಿಕಾರಿಗಳಾದ ಮನೋಹರ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ನಾಗರಾಜ್ ನಾಯ್ಕ್, ರಾಘವೇಂದ್ರ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನಾ ಬಾಳಿಕೆ ಕುರ್ಕಿಲ್ ಬೆಟ್ಟು ಇದ್ದರು. ಸಾವಿರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ದೊಂದಿ ಬೆಳಕಿನಲ್ಲಿ ನೇಮೋತ್ಸವ ನಡೆದದ್ದು ವಿಶೇಷವಾಗಿತ್ತು.
ಸಾಮಾಜಿಕ ನ್ಯಾಯ ಎಂದು ಹೇಳುತ್ತಾ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ (Kundapura Assembly Constituency) ಐದು ಬಾರಿ ಗೆದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ (Haladi Srinivas Shetty) ಕರಾವಳಿಯ ರಾಜಕೀಯದಲ್ಲೇ ಒಬ್ಬ ವಿಭಿನ್ನ ಜನಪ್ರತಿನಿಧಿ. ಜನ ಪ್ರೀತಿಯಿಂದ ಇವರಿಗೆ ʼಕರಾವಳಿಯ ವಾಜಪೇಯಿʼ ಎಂದು ಹೆಸರನ್ನಿಟ್ಟಿದ್ದಾರೆ. ಕ್ಷೇತ್ರದಲ್ಲಿ ಆಗುವ ಯಾವುದೇ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಗುದ್ದಲಿ ಪೂಜೆ ಮಾಡುವುದಿಲ್ಲ. ಉದ್ಘಾಟನೆ ನಡೆಸುವುದಿಲ್ಲ. 25 ವರ್ಷಗಳಿಂದ ಎಲ್ಲವೂ ಸರ್ಕಾರಿ ಅಧಿಕಾರಿಗಳ ಕೈಯಲ್ಲೇ ಮಾಡಿಸುತ್ತಿದ್ದಾರೆ. 1999 ರಿಂದ ಆರಂಭಗೊಂಡು ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎಂದೇ ಎನಿಸಿಕೊಂಡಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ, ಜಾತಿಯನ್ನು ಮೀರಿ ಹಾಲಾಡಿ ನಿರಂತರವಾಗಿ ಗೆದ್ದುಕೊಂಡು ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಹಾಲಾಡಿಯವರ ಗೆಲುವಿನ ಅಂತರ ದೊಡ್ಡದಾಗುತ್ತಾ ಹೋಗುತ್ತಿರುವುದು ವಿಶೇಷ. ಹಿಂದೆ 2,500 ಮತಗಳ ಅಂತರ ಈಗ 50 ಸಾವಿರಕ್ಕೆ ಏರಿಕೆಯಾಗಿದೆ. ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂದು ಜನ ನಂಬಿದ್ದಾರೆ. ಕಷ್ಟ ಅಂತ ಮನೆಗೆ ಬಂದ ಜನರನ್ನು ಹಾಲಾಡಿ ಬರಿಗೈಯಲ್ಲಿ ವಾಪಸ್…