Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಮಹಿಳಾ ಕೇಂದ್ರೀಯ ಘಟಕದ ಅಧ್ಯಕ್ಷೆ…
ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ ; ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ
ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ ಹೇಳಿದರು. ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರೀಲ್ 26 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಶಿಬರೂರು ದೈವಸ್ಥಾನದಲ್ಲಿ ನಡೆದ ಪೂರ್ವಭಾವಿಯಾಗಿ ಸಭೆಯಲ್ಲಿ ಮಾತನಾಡಿದರು. ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ ಎಸ್ ಶೆಟ್ಟಿ ಕೋಂಜಾಲಗುತ್ತು ಮಾತನಾಡಿ ಶಿಬರೂರು ಬ್ರಹ್ಮಕಲಶೋತ್ಸವಕ್ಕೆ ಮುಂಬಯಿ ಭಕ್ತರು ಕೈ ಜೋಡಿಸುತ್ತಿದ್ದು, ಉದ್ಯಮಿಗಳ ಸಹಕಾರ ಹರಿದು ಬರುತ್ತಿದೆ. ಕೊಡಮಣಿತ್ತಾಯನ ಶಕ್ತಿ ಏನೆಂಬುದು ಭಕ್ತರಿಗೆ ತಿಳಿದಿದೆ. ಕೊಡಮಣಿತ್ತಾಯನಿಗೆ ಈಗಾಗಲೇ ಚಿನ್ನದ ಪಲಕ್ಕಿ ಅರ್ಪಿಸುವ ನಿರ್ಧಾರ ಮಾಡಿದ್ದು, ದಾನಿಗಳ ಸಹಕಾರದಿಂದ ಅದು ಕೂಡ ಪೂರ್ಣಗೊಳ್ಳಲಿದೆ ಎಂದರು. ಸಮಿತಿಯ ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್ ಕೈಯೂರುಗುತ್ತು ಮಾತನಾಡಿ ಶಿಬರೂರಿನಲ್ಲಿ ನಡೆಯಲಿರುವ ಉತ್ಸವ ವಿಜೃಂಭಣೆಯಿಂದ…
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್ನ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಆಧುನಿಕ ಕಾಲಘಟ್ಟದಲ್ಲಿ ಎಲ್ಲವೂ ವ್ಯಾಪಾರೀಕರಣಗೊಳ್ಳುತ್ತಿದ್ದು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರವೂ ಇದರಿಂದ ಹೊರತಾಗಿಲ್ಲ. ಕಳೆದ ದಿನಗಳು ಒಳ್ಳೆಯ ಸಮಯಗಳಾಗಿ ಸಂತಸ ಉಂಟು ಮಾಡಿದೆ. ಭವಿಷ್ಯದಲ್ಲಿ ಆಧುನಿಕ ಜಗತ್ತಿಗೆ ನಾನು ಎಷ್ಟರ ಮಟ್ಟಿಗೆ ಒಗ್ಗಿಕೊಳ್ಳುತ್ತೇನೆ ಎಂಬುದು ಬದುಕಿನ ಸವಾಲು ಎಂದರು. ಹಾಸ್ಟೆಲ್ ಶಿಕ್ಷಣಕ್ಕೆ ಆದ್ಯತೆ ಬದುಕಿನಲ್ಲಿ ಕೆಲವೊಂದು ಕಾರ್ಯಗಳು ಹುಚ್ಚು ಮನಸ್ಸಿನ ಸಾಹಸ ಎಂದು ಅನಿಸಿದರೂ ಯಶಸ್ಸಿಗೆ ಅದೇ ಮುಖ್ಯ ಕಾರಣವಾಯಿತು. ಬಾಲ್ಯ, ವಿದ್ಯಾಭ್ಯಾಸ, ವೃತ್ತಿ ಜೀವನ ಹೀಗೆ 72 ವರ್ಷ ಕಳೆದರೂ ಹುಚ್ಚು ಮನಸ್ಸು ಕಡಿಮೆ ಆಗಲೇ…
ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಮಾ.20 ರಂದು ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೆನಪೋಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಪತ್ತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಆರ್. ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುಣವತಿ ಕೊಲ್ಲಂತಡ್ಕ, ಸವಿತಾ ಗಿರೀಶ್, ರೂಪಶ್ರೀ ಜೆ ರೈ, ನಿವೃತ್ತ ಶಿಕ್ಷಕಿ ಕಮಲಾಕ್ಷಿ ಶೆಟ್ಟಿ, ಶ್ರದ್ಧಾ ಎಲ್ ರೈ, ಉಷಾ ಬಿ ರೈ ಪಾಜೆಪಲ್ಲ ಹಾಗೂ ಯೆನಪೋಯ ಮಹಿಳಾ ಕ್ಲಿನಿಕ್ ನ ವೈದ್ಯಾಧಿಕಾರಿ, ಶ್ರೀಮತಿ ಶಶಿಕಲಾ ಹರಿಪ್ರಸಾದ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಸುಳ್ಯ ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ, ಮತ್ತಿತರ ನಿರ್ದೇಶಕರು, ಸದಸ್ಯರು ಭಾಗವಹಿಸಿದ್ದರು. ವೇದಾ ಶೆಟ್ಟಿ ಸ್ವಾಗತಿಸಿ ಉಷಾ ಶೆಟ್ಟಿ ಮತ್ತು ಮೀರಾ ಎಂ ರೈ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ತಾಲೂಕಿನ…
ಮಹಿಳೆಯು ಮನೆ ಕೆಲಸದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿದಾಗ ಎಲ್ಲವನ್ನೂ ಎದುರಿಸುವ ಶಕ್ತಿವಂತಳಾಗುತ್ತಾಳೆ : ವಿನೋದ ಡಿ ಶೆಟ್ಟಿ.
ಕಾಂದಿವಲಿ ಪಶ್ಚಿಮದಲ್ಲಿ ಬಹಳಷ್ಟು ವರ್ಷಗಳಿಂದ ಈ ಭಾಗದಲ್ಲಿ ವಾಸ್ತವ್ಯವಿರುವ ಎಲ್ಲಾ ತುಳು ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿ ಸದಾ ಕ್ರಿಯಾಶೀಲವಾಗಿದ್ದುಕೊಂಡ ಕಾಂದಿವಲಿ ಕನ್ನಡ ಸಂಘ (ರಿ), ದಹಾನುಕರ್ ವಾಡಿ, ತನ್ನ ಸ್ವಂತ ಕಛೇರಿಯನ್ನು ಹೊಂದಿದ್ದು , ಬಹಳಷ್ಟು ಸದಸ್ಯ ಸಂಪತ್ತಿನೊಂದಿಗೆ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ನೆಲೆಯಲ್ಲಿ ತುಳು ಕನ್ನಡಿಗರ ಸೇವೆಯನ್ನು ಗೈಯುತ್ತಾ ಬಂದಿರುತ್ತದೆ. ಈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಜರಗಿದ್ದು, ನಿಕಟಪೂರ್ವ ಅಧ್ಯಕ್ಷರಾದ ಪೊಲ್ಯ ಜಯಪಾಲ ಶೆಟ್ಟಿಯವರು ಅಧ್ಯಕ್ಷರಾಗಿ ಪುನರಾಯ್ಕೆಗೊಂಡರೆ, ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದು ಅಪಾರ ಅನುಭವವನ್ನು ಹೊಂದಿದ, ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ವಿನೋದ ದೇವದಾಸ್ ಶೆಟ್ಟಿಯವರು ಆಯ್ಕೆಗೊಂಡರು. ವಿನೋದ ಶೆಟ್ಟಿಯವರು ಪುನರಾಯ್ಕೆಗೊಂಡ ಬಳಿಕದ ಪ್ರಪ್ರಥಮ ಕಾರ್ಯಕ್ರಮವಾಗಿ ಇತ್ತೀಚೆಗೆ, ವಸಾಯಿಯಲ್ಲಿರುವ ಶ್ರದ್ಧಾನಂದ ಮಹಿಳಾ ಆಶ್ರಮ (ವಸಾಯಿ ವೃದ್ಧಾಶ್ರಮ)ಕ್ಕೆ ಭೇಟಿ ನೀಡಿ, ಒಂದು ದಿನವನ್ನು ಆಶ್ರಮ ವಾಸಿಗಳ ಜತೆ ಕಳೆದರು. ಆಶ್ರಮದ ಆ ದಿನದ…
ವಿದ್ಯಾಗಿರಿ: ‘ಉದ್ಯೋಗದಲ್ಲಿ ಯಶಸ್ವಿಯಾಗಲು ಕೇವಲ ಕೌಶಲ ಮತ್ತು ತಾಂತ್ರಿಕತೆ ಮಾತ್ರವಲ್ಲ, ಮೌಲ್ಯ ಅತಿ ಮುಖ್ಯ’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಡೆಲಾಯಿಟ್ ಕಂಪೆನಿಯಲ್ಲಿ ಅತ್ಯುತ್ತಮ ವೇತನದ ಉದ್ಯೋಗಕ್ಕೆ ಆಯ್ಕೆಯಾದ ವಿಭಾಗದ ವಿದ್ಯಾರ್ಥಿನಿ ಸುಚಿತಾ ಎಂ. ಅವರಿಗೆ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಮಂಗಳವಾರ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪೋಷಕರು ಮಕ್ಕಳ ಪದವಿಪೂರ್ವ ಶಿಕ್ಷಣದವರೆಗೆ ತೀವ್ರ ಅಸ್ಥೆ ವಹಿಸುತ್ತಾರೆ. ಆದರೆ, ವಿದ್ಯಾರ್ಥಿಗಳ ಪದವಿ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಒತ್ತು ನೀಡುವುದು ಅಗತ್ಯವಾಗಿದೆ ಎಂದರು. ನಾವು ಶಿಕ್ಷಣ ಪಡೆಯುವುದು ಯಾಕೆ? ಎಂಬ ಸ್ಪಷ್ಟತೆ ಇದ್ದರೆ, ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯ. ಕೇವಲ ಯಶಸ್ಸು ಕಾಣುವುದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಏನನ್ನು ಕೊಡುಗೆ ನೀಡುತ್ತೇವೆ ಎಂಬುದು ಕೂಡ ಮುಖ್ಯ ಎಂದರು . ಉದ್ಯೋಗ ಮಾಡಲು ಅರ್ಹತೆ ಇದೆ ಎಂಬುದನ್ನು ಎದುರಿನ ವ್ಯಕ್ತಿಗಳಿಗೆ ಸಾಬೀತುಪಡಿಸುವುದಕ್ಕಿಂತ ತನ್ನೊಳಗೆ ಆತ್ಮವಿಶ್ವಾಸ ವೃದ್ಧಿಸುವುದು ಮುಖ್ಯ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ…
ಮೂಡುಬಿದಿರೆ: ಸುಸ್ಥಿರ ತಂತ್ರಜ್ಞಾನದಲ್ಲಿ ಮಹತ್ತರ ಸಾಧನೆ ಮಾಡಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ‘ಎ ಪ್ರೊಸೆಸ್ ಫಾರ್ ಫ್ಯಾಬ್ರಿಕೇಷನ್ ಆಫ್ ಪಿ(ವಿಡಿಎಫ್-ಟಿಆರ್ಎಫ್ಇ) ಪೈಸೊಲೆಕ್ಟ್ರಿಕ್ ಬೀಮ್ಸ್ ಆಂಡ್ ಕ್ಯಾಂಟಿಲೆವರ್ಸ್ ಯಾಸ್ ವೈಬ್ರೇಷನ್ ಸೆನ್ಸಾರ್ಸ್ ಆಂಡ್ ಎನರ್ಜಿ ಹಾರ್ವೆಸ್ಟರ್ಸ್’ ಗೆ ಪೇಟೆಂಟ್ ಸಂಖ್ಯೆ 525988 ಪಡೆದುಕೊಂಡಿದೆ. ಆ ಮೂಲಕ ಸುಸ್ಥಿರ ಇಂಧನ ಪರಿಹಾರ ಮತ್ತು ರಚನಾತ್ಮಕ ಉಸ್ತುವಾರಿ ತಂತ್ರಗಳಲ್ಲಿ ಮುಂದಡಿ ಇಟ್ಟಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸಂಶೋಧನಾ ಡೀನ್ ಡಾ. ರಿಚರ್ಡ್ ಪಿಂಟೊ ಅವರ ನಾಯಕತ್ವದಲ್ಲಿ ಈ ಸಾಧನೆ ಮಾಡಿದೆ. ಈ ಸಾಧನೆಯು ಕೈಗಾರಿಕೆ ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸುವಲ್ಲಿ ಕ್ರಾಂತಿಕಾರಿಯಾಗಿದೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಡಾ. ರಶ್ಮಿ ಕೆ.ಆರ್., ಡಾ. ಜಯರಾಮ ಎ., ಐಐಟಿ ಬಾಂಬೆಯ ಡಾ. ಸಿದ್ಧಾರ್ಥ ಪಿ. ದತ್ತಗುಪ್ತ ಮತ್ತು ಡಾ. ಗಣೇಶ್ ಪ್ರಭು(ಟಿಐಎಫ್ ಆರ್, ಮುಂಬೈ) ಸಹಯೋಗದಲ್ಲಿ ಡಾ. ರಿಚರ್ಡ್ ಪಿಂಟೋ ಅವರ ಸಹಕಾರದಲ್ಲಿ ಅಭಿವೃದ್ಧಿ ಹೊಂದಿದ ಪ್ರಮುಖ…
ಉದ್ಯೋಗ ಅರಸಿಕೊಂಡು ಇಲ್ಲವೇ ಇನ್ನಿತರ ಯಾವುದೇ ಕಾರಣದಿಂದ ಮುಂಬೈ ಮಹಾನಗರಕ್ಕೆ ಬಂದು ಏನನ್ನಾದರೂ ಸಾಧಿಸಿಬೇಕೆಂಬ ಛಲ, ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಸಮಯ ಪ್ರಜ್ಞೆ, ವಿದ್ಯೆ,ವಿನಯ ಇದ್ದು ಬುದ್ಧಿವಂತಿಕೆಯಿಂದ ದುಡಿದವರನ್ನು ಮುಂಬೈಯ ಮಹಾಲಕ್ಷ್ಮೀ ಮಾತೆಯು ಉದ್ದರಿಸದೆ ಎಂದೂ ಕೈ ಬಿಡುವುದಿಲ್ಲ ಎಂಬುದಕ್ಕೆ ಹಲವಾರು ಮಂದಿ ಉನ್ನತ ಉದ್ಯೋಗಿಗಳಾಗಿ, ಹೋಟೆಲ್ ಮಾಲೀಕರಾಗಿ, ಕಂಪನಿಗಳ ನಿರ್ದೇಶಕರಾಗಿ ಮೆರೆಯುತ್ತಾ ತಮಗೆ ಸಾಧ್ಯವಾದಷ್ಟು ಸಮಾಜ ಸೇವೆ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂಬುದು ಸಂತೋಷದ ಸಂಗತಿ. ಇಂತಹ ಸಮಾಜ ಸೇವಕರಲ್ಲಿ ಸರಳ ಸಜ್ಜನಿಕೆಯ ರಮೇಶ್ ಶೆಟ್ಟಿ, ಸಿದ್ಧಕಟ್ಟೆ ಪ್ರಮುಖರು. ಇವರ ಕಿರು ಪರಿಚಯವನ್ನು ಸಮಾಜ ಬಾಂಧವರಾದ ಬಂಧುಗಳೊಂದಿಗೆ ಹಂಚಿಕೊಳ್ಳಲು ಸಂತೋಷ ಪಡುತ್ತೇನೆ. ಸಿದ್ಧಕಟ್ಟೆ ಉಗ್ರೋಡಿ ಮನೆ ದಿ. ಮಹಾಬಲ ಶೆಟ್ಟಿ ಮತ್ತು ಕಲ್ಲಬೆಟ್ಟು ಮನೆ ದಿ.ಸೇಸಿ ಶೆಟ್ಟಿ ದಂಪತಿಗಳ ಸುಪುತ್ರನಾಗಿ 1968 ಜೂನ್ 4 ರಂದು ಜನಿಸಿದ ರಮೇಶ್ ಶೆಟ್ಟಿಯವರು ಪ್ರಾಥಮಿಕ ಶಿಕ್ಷಣವನ್ನು ಆರಂಬೋಡಿ ಶಾಲೆಯಲ್ಲೂ ಹೈಸ್ಕೂಲ್ ಶಿಕ್ಷಣವನ್ನು ಸಿದ್ಧಕಟ್ಟೆಯ “ಸೈಂಟ್ ಪ್ಯಾಟ್ರಿಕ್ ಹೈಸ್ಕೂಲ್”ನಲ್ಲಿ ಪೂರೈಸಿದ ನಂತರ ಭವಿಷ್ಯವನ್ನು ಅರಸಿಕೊಂಡು ಮುಂಬೈ…
ಹಲವಾರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸೇವೆಗೈದಿದ್ದರೂ ಇಲ್ಲಿನ ಮಂತ್ರಮೂರ್ತಿ ಗುಳಿಗನ ಸನ್ನಿಧಿಯ ವಿಶೇಷ ಶಕ್ತಿಯನ್ನು ಮನಸಾರೆ ಅನುಭವಿಸುತ್ತಿದ್ದೇನೆ. ಪ್ರಾರ್ಥನೆ ಮೂಲಕ ದೈವಿಕ ಶಕ್ತಿಯನ್ನು ಒಳಿಸಿಕೊಳ್ಳಲು ಸಾಧ್ಯ ಎಂಬುದು ಇಲ್ಲಿ ಸಾಕಾರಗೊಂಡಿದೆ ಎಂದು ಕೊಡುಗೈ ದಾನಿ, ಹೇರಂಭ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಉಪ್ಲೇರಿ ವಾಂತಿಚ್ಚಾಲು ಶ್ರೀ ಮಂತ್ರಮೂರ್ತಿ ಗುಳಿಗ ಸನ್ನಿದಿಯಲ್ಲಿ ಜರುಗಿದ ವಿಶೇಷ ತಂಬಿಲ ಸೇವೆ ಮತ್ತು ನೂತನ ಟ್ರಸ್ಟ್ ನ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ ಜನರಿಗೆ ದೈವದ ಮೇಲೆ ಅಪಾರ ಭಕ್ತಿ ಇದೆ. ಮಂತ್ರ ಮೂರ್ತಿ ಗುಳಿಗ ಸನ್ನಿಧಿಯು ಪ್ರಸಿದ್ಧ ಕ್ಷೇತ್ರವಾಗಿ ಬೆಳಗಲಿ ಎಂದು ಹಾರೈಸಿದರು. ಉದ್ಯಮಿ ದಾನಿ ಗೋಪಾಲಕೃಷ್ಣ ಪೈ ಬರಿಯಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರ ತಾರಾನಾಥ ರೈ, ತುಳುವೆರ್ ಚಾವಡಿಯ ಮಧು ಕುಮಾರ್ ಬೆಂಗಳೂರು, ಕುಂಬ್ಡಾಜೆ…
ಕಳೆದ ಐದು ದಶಕಗಳಿಂದ ತೆಂಕುತಿಟ್ಟಿನ ಡೇರೆ ಹಾಗೂ ಬಯಲಾಟ ಮೇಳಗಳಲ್ಲಿ ಕಲಾ ಸೇವೆಗೈದಿರುವ, ಕಟೀಲು ಮೇಳದಲ್ಲಿ ಎರಡು ದಶಕಗಳಿಂದ ವೇಷಧಾರಿಯಾಗಿ ಹಾಗೂ ಪ್ರಬಂಧಕರಾಗಿ ದುಡಿಯುತ್ತಿರುವ ಖ್ಯಾತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಅವರಿಗೆ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ ನೀಡಲಾಯಿತು. ಕದ್ರಿ ಕಂಬಳಗುತ್ತು ವಾಸವಿ ಬಾಲಕೃಷ್ಣ ಶೆಟ್ಟಿ ಮತ್ತು ಮಕ್ಕಳು ಸಂಯೋಜನೆ ಮಾಡಿದ್ದ ಶ್ರೀ ಕಟೀಲು ಮೇಳದ ಸೇವೆ ಆಟ ಸಂಧರ್ಭದಲ್ಲಿ ಕದ್ರಿ ಕಂಬಳ ಸಂಯೋಜಕರಾಗಿ, ಹವ್ಯಾಸಿ ತಾಳಮದ್ದಳೆ ಕಲಾವಿದರಾಗಿ, ಸಂಘ ಪರಿವಾರದ ಹಿರಿಯ ನಾಯಕನಾಗಿದ್ದ ಬಾಲಕೃಷ್ಣ ಶೆಟ್ಟಿ ಅವರ ನೆನಪಿನಲ್ಲಿ ಪ್ರಶಸ್ತಿ ನೀಡಲಾಯಿತು. ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣರು ಕದ್ರಿ ಕಂಬಳ ಗುತ್ತು ಪರಿವಾರದ ಕಲಾಪ್ರೀತಿಯನ್ನು ಶ್ಲಾಘಿಸಿದರು. ಹಿರಿಯ ವಿದ್ವಾಂಸ ಡಾ. ಎಮ್ ಪ್ರಭಾಕರ ಜೋಶಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ ಕಲ್ಕೂರ, ಡಾ. ಬಿ.ನಿಶಾಕಾಂತ್ ಶೆಟ್ಟಿ ಬೆಂಗಳೂರು, ಸುರೇಶ ಹೆಗ್ಡೆ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಿವರಾಮ್ ಶೆಟ್ಟಿ ಇಂದ್ರಾಳಿ, ಸಿದ್ಧಾರ್ಥ್ ಶೆಟ್ಟಿ, ಅರ್ಜುನ್ ಹೆಗ್ಡೆ, ಸಾಕೇತ್ ಶೆಟ್ಟಿ…















