Author: admin
ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ಶಿಕ್ಷಣ ಖಾಸಗಿ ಸಂಸ್ಥೆ ಕೊಡುಗೆ ಅಪಾರ
ವಿದ್ಯಾಗಿರಿ: ‘ದೇಶದಲ್ಲಿ ಉತ್ತಮ ವಿದ್ಯಾರ್ಥಿಗಳನ್ನು ಬೆಳೆಸುವಲ್ಲಿ ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ಆಳ್ವಾಸ್ ಕಾಲೇಜಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಂಡ ‘ಪದವಿ ಪೂರ್ವ ಶಿಕ್ಷಣ- ಮುಕ್ತ ಸಮ್ಮೇಳನ 2024’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಯ ಮೂಲಭೂತ ಹಕ್ಕು. ಅದನ್ನು ಜಾರಿಗೆ ತರಲು ಸರ್ಕಾರದ ಜೊತೆ ಖಾಸಗಿ ಸಂಸ್ಥೆಗಳು ಕೈ ಜೋಡಿಸಿವೆ. ವಿದ್ಯಾರ್ಥಿಗಳು ಬಲಿಷ್ಠವಾದರೆ, ದೇಶ ಬಲಿಷ್ಠವಾಗಲು ಸಾಧ್ಯ. ವ್ಯಕ್ತಿತ್ವ ರೂಪಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ’ ಎಂದರು. ‘ಶಿಕ್ಷಣ ನೀಡುವುದು ನಿಜವಾದ ದೇಶಪ್ರೇಮ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಕಾರ್ಯ ಶ್ಲಾಘನೀಯ. ‘ಕುಪ್ಮಾ’ ಶಿಕ್ಷಣ ಸಂಸ್ಥೆಗಳ ಕಷ್ಟ-ಸುಖ ಹಂಚಿಕೊಳ್ಳುವ ಸಂಘಟನೆಯಾಗಬೇಕು’ ಎಂದರು. ‘ಕೇವಲ ವೈದ್ಯರು ಅಥವಾ ಎಂಜಿನಿಯರ್ಗಳನ್ನು ಮಾತ್ರವಲ್ಲ, ಉತ್ತಮ ರಾಜಕಾರಣಿಗಳನ್ನೂ ರೂಪಿಸಿ’ ಎಂದು ಅವರು ಮನವಿ ಮಾಡಿದರು. ಆಳ್ವಾಸ್ ಶಿಕ್ಷಣ…
ಪ್ರಗತಿ ಗ್ರಾಫಿಕ್ಸ್ ಮತ್ತು ಶ್ರೀನಿವಾಸ ಪುಸ್ತಕ ಪ್ರಕಾಶನ ಅರ್ಪಿಸುವ ಪರಂಪರಾ ಕಲ್ಚರಲ್ ಫೌಂಡೇಷನ್ ಅವರ ಸಹಯೋಗದಲ್ಲಿ ಸಾಹಿತಿ ರಾಜೇಂದ್ರ ಬಿ. ಶೆಟ್ಟಿಯವರ ಅಮ್ಮ ಹಚ್ಚಿದ ದೀಪ, ಕಥೆಯೊಂದಿಗೆ ಗಣಿತ, ದೆವ್ವಗಳ ನಾಡಿನಲ್ಲಿ ಎಂಬ ಮೂರು ಪುಸ್ತಕಗಳು ಲೋಕಾರ್ಪಣೆಗೊಂಡಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಡಾ. ಎಂ. ಭೈರೇಗೌಡ ಅವರು, ಸೂಜಿಗಲ್ಲಿನ ವ್ಯಕ್ತಿತ್ವ ಇರುವವರು ರಾಜೇಂದ್ರ ಬಿ. ಶೆಟ್ಟಿ. ಅಧ್ಯಯನ ಮತ್ತು ಆಸಕ್ತಿಗಳಿಗೆ ಸಂಬಂಧ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ಕೆಲಸ ಇವರು ಮಾಡಿದ್ದಾರೆ ಎಂದರು. ಹಾಗೆಯೇ ಸದ್ಯದ ಪತ್ರಿಕೋದ್ಯಮದ ಸ್ಥಿತಿಗತಿ ಬಗೆಗೂ ಸಂತಾಪ ವ್ಯಕ್ತಪಡಿಸಿದರು. ಅಮ್ಮ ಹಚ್ಚಿದ ದೀಪ ಪುಸ್ತಕ ಪರಿಚಯವನ್ನು ಮಾಡುತ್ತಾ ಡಾ. ನಾ. ದಾಮೋದರ ಶೆಟ್ಟಿ, ಕಥೆಗಾರರು ಸಾಮಾನ್ಯವಾಗಿ ತಮ್ಮ ಕಥೆಗಳಿಗೆ ಒಂದೊಳ್ಳೆ ಆದಿ, ಮಧ್ಯ, ಹಾಗೂ ಒಂದೊಳ್ಳೆ ಮುಕ್ತಾಯ ಇರುವಂತಹ ಕಥಗಳನ್ನು ಬರೆಯುತ್ತಾರೆ ಆದರೆ ಇವೆಲ್ಲಕ್ಕಿಂತ ಭಿನ್ನವಾಗಿ ಬರೆಯುವವರು ರಾಜೇಂದ್ರ ಅವರು, ಹಾಗೆ ಈ ಕೃತಿಯಲ್ಲೂ ಇವರು ಯಾವುದೇ ಅತಿಶಯೋಕ್ತಿ ಇಲ್ಲದೆ ಅತ್ಯಂತ ಸೂಕ್ಷ್ಮವಾಗಿ ಚಿತ್ರಿಸಿದ್ದಾರೆ. ಈ ಸಂಕಲನದಲ್ಲಿ ಬರುವಂತಹ ಒಂದು…
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರ ಪ್ರಾಯೋಜಕತ್ವದಲ್ಲಿ ದುಬಾಯಿ ಮತ್ತು ತಾಯ್ನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2022-2023 ರ ಸಾಲಿನ ಪ್ರಶಸ್ತಿಗೆ ಯಕ್ಷಗಾನ ಕಲಾವಿದರೂ, ಸಂಘಟಕರಾಗಿಯೂ ಗುರುತಿಸಿಕೊಂಡ, ಪಟ್ಲ ಗುತ್ತು ಶ್ರೀಯುತ ಮಹಾಬಲ ಶೆಟ್ಟಿಯವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ಶ್ರೀಯುತ ಮಹಾಬಲ ಶೆಟ್ಟರದ್ದು ಬಹುಮುಖ-ಬಹುಶ್ರುತ ಬದುಕು. ಕಲಾವಿದರಾಗಿ, ಸಂಘಟಕರಾಗಿ, ಸಾಂಸ್ಕೃತಿಕ ನೇತಾರರಾಗಿ ಮತ್ತು ವಗೆನಾಡು ದೇವಸ್ಥಾನವನ್ನು ಮುನ್ನಡೆಸಿದ ಭಗವದ್ಭಕ್ತರಾಗಿ ಸಾರ್ಥಕ ಬದುಕು ಸಾಗಿಸಿದವರು. ಮಾಂಬಾಡಿ ನಾರಾಯಣ ಭಾಗವತರ ಶಿಷ್ಯರಾಗಿ, ಭಾಗವತಿಗೆ, ಚೆಂಡೆ-ಮದ್ದಳೆ ಅಭ್ಯಾಸ ಮಾಡಿ ಕುಂಡಾವು, ಸುಂಕದಕಟ್ಟೆ ಮೇಳಗಳಲ್ಲಿ ಕಲಾ ವ್ಯವಸಾಯ ಮಾಡಿದ ಅನುಭವಿ ಕಲಾವಿದ. ಮಲ್ಲ ಶ್ರೀ ದುರ್ಗಾಪರಮೇಶ್ವರೀ ಮೇಳವನ್ನು 4 ವರ್ಷ ಕಾಲ ಸಂಚಾಲಕರಾಗಿ ಮುನ್ನಡೆಸಿದ ಸಮರ್ಥ ಸಂಘಟಕ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪಟ್ಲಗುತ್ತು ಮಹಾಬಲ ಶೆಟ್ಟರ ಜನ್ಮಭೂಮಿ. ವಗೆನಾಡಿನ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕರಾಗಿ ಹಲವು ವರ್ಷಗಳಿಂದ ಶ್ರಾವಣ ಮಾಸ ಪೂರ್ತಿಯ…
ಮುಂಬಾಯಿ ವಿವಿ ಕನ್ನಡ ವಿಭಾಗ -ಐಲೇಸ ಆಯೋಜಿಸಿದ ವಾಚನ -ಅಭಿನಯ-ಕಮ್ಮಟ ಅಭಿನಯ ಅನ್ನೋದು ಪ್ರತಿಭೆ ಅಲ್ಲ ಕೌಶಲ್ಯ ಆಗಿದೆ : ಮೋಹನ್ ಮಾರ್ನಾಡ್ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಾಯಿ, ಆ.05: ನಟನೆ ಪ್ರಾಕೃತಿಕ ಸಹಜವಾಗಿದೆ . ಆದರೆ ಅಭಿನಯ ಅನ್ನೋದು ಪ್ರತಿಭೆ ಅಲ್ಲ ಕೌಶಲ್ಯವಾಗಿದೆ. ಬದುಕು ಅನ್ನುವುದೇ ರಂಗಭೂಮಿ ಆಗಿದ್ದು ಇಲ್ಲಿ ಎಲ್ಲರೊಂದಿಗೆ ಸಹನೆಯಿಂದ ಮಾತನಾಡುವುದೇ ಅಭಿನಯವಾಗಿದೆ. ನಟನೆಯಲ್ಲಿ ಧ್ವನಿ, ಉಚ್ಚಾರ ಸ್ಪಷ್ಟವಾಗಿರಬೇಕು . ಇಲ್ಲಿನ ಸಂವಹನೆಗೆ ತರಬೇತಿಯ ಅಗತ್ಯವಿದ್ದು ನಾಟಕದಲ್ಲಿ ಕೊಡುಕೊಳ್ಳುವಿಕೆ ಮುಖ್ಯವಾಗಿದೆ . ನಟನೆಯು ಜವಾಬ್ದಾರಿಯುತವಾಗಿದ್ದು , ಇದಕ್ಕೆ ಓದಿನ ಅವಶ್ಯಕತೆಯಿದ್ದು ನಾಟಕ ಬದುಕು ಕಟ್ಟಿಕೊಳ್ಳುವ ಪಾಠವಾಗಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗ ಕಲಾವಿದ ಮೋಹನ್ ಮಾರ್ನಾಡ್ ತಿಳಿಸಿದರು. ಮುಂಬಾಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮತ್ತು ಐಲೇಸ ದಿ ವಾಯ್ಸ್ ಆಫ್ ಓಷನ್ (ರಿ.) ಮುಂಬಾಯಿ ಇಂದಿಲ್ಲಿ ಶುಕ್ರವಾರ ಅಪರಾಹ್ನ ಸಾಂತಾಕ್ರೂಜ್ ಪೂರ್ವದ ಕಲೀನಾ ಇಲ್ಲಿನ ವಿದ್ಯಾನಗರಿಯ ತಿಲಕ್ ಭವನದ ಭೂಗೋಳ ವಿಭಾಗದ ಸಭಾ ಗೃಹದಲ್ಲಿ ಆಯೋಜಿಸಿದ್ದ ವಾಚನ ಅಭಿನಯ ಮತ್ತು ಕಮ್ಮಟ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಅಭಿನಯ ಕಲೆ ಕುರಿತು ಮೋಹನ್ ಮಾರ್ನಾಡ್ ಮಾತನಾಡಿ ತಾನು ಅಭಿನಯಿಸಿದ ನಾಟಕಗಳ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಮೂಲ್ಕಿ ಬಂಟರ ಸಂಘ ವ್ಯಾಪ್ತಿಯ ಕೆಮ್ರಾಲ್ ಪಂಚಾಯತ್ ನ ಕೊಯಿಕುಡೆ ಗ್ರಾಮದ ಸುಂದರ ಅಮೀನ್ ಮತ್ತು ಲಲಿತ ಅಮೀನ್ ಅವರ ಮನೆಗೆ ಭೇಟಿ ನೀಡಿದ್ದು, ಲಲಿತಾ ಅಮೀನ್ ಅವರಿಗೆ ಕೆಲ ವರ್ಷಗಳ ಹಿಂದೆ ಬೆಂಕಿ ಅಘಾತದಿಂದ ಕಾಲು ಸುಟ್ಟುಹೊಗಿದ್ದು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಂದರ ಅಮೀನ್ ಅವರೂ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಮಕ್ಕಳು ಇಲ್ಲದ ಕಾರಣ ಜೀವನ ಸಾಗಿಸುವುದು ಕಷ್ಟಕರವಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಕಣ್ಣಾರೆ ಕಂಡ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ವತಿಯಿಂದ ಪ್ರತೀ ತಿಂಗಳು ಅರ್ಥಿಕ ಸಹಕಾರ ನೀಡುವುದೆಂದು ತಿಳಿಸಿದರು. ಈ ಸಂದರ್ಭ ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಚಂದ್ರಕಲಾ ಶೆಟ್ಟಿ, ಪತ್ರಿಕಾ ಮತ್ತು ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು ಸಂತೋಷ್ ಶೆಟ್ಟಿ, ಗೀತಾ ಶೆಟ್ಟಿ, ರಾಮದಾಸ್ ಶೆಟ್ಟಿ ಮತ್ತಿತರರು ಇದ್ದರು.
ವಿದ್ಯಾಗಿರಿ: ಸಂದರ್ಶನದ ಸಂದರ್ಭದಲ್ಲಿ ಸಂವಹನ ಮಾತ್ರವಲ್ಲ, ಜ್ಞಾನದ ಜೊತೆ ಹಾವಭಾವ, ನಡವಳಿಕೆ, ಕೌಶಲಗಳೂ ನಮ್ಮನ್ನು ನಿರೂಪಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬುಧವಾರ ರಾಜ್ಯ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯಮಶೀಲತಾ ಅಭಿವೃದ್ಧಿ ಘಟಕ ಹಾಗೂ ರೂಬಿಕಾನ್ ಸ್ಕಿಲ್ ಡೆವೆಲಪ್ಮೆಂಟ್ ಪ್ರೈ.ಲಿ. ಸಹಯೋಗದಲ್ಲಿ ಆಳ್ವಾಸ್ ಕಾಲೇಜು ಉದ್ಯಮಶೀಲತಾ ಅಭಿವೃದ್ಧಿ ಘಟಕ, ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ನಾಲ್ಕು ದಿನಗಳ ‘ಜೀವನ ಕೌಶಲ ತರಬೇತಿ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು. ನಿಮ್ಮ ಅರ್ಹತೆಯ ಜೊತೆಗೆ ನೀವು ಉದ್ಯೋಗ ನಿರ್ವಹಿಸಲು ಇಚ್ಛಿಸುವ ಉದ್ದೇಶ, ಉತ್ಸಾಹವೂ ಬಹುಮುಖ್ಯ. ನಿಮ್ಮ ಬಯೋಡೆಟಾ (ರೆಸ್ಯೂಮ್) ಕೇವಲ ಪದವಿಗಳನ್ನು ಮಾತ್ರ ಹೊಂದಿರಬಾರದು. ಅದರೊಂದಿಗೆ ನಿಮ್ಮ ಸಾಮಥ್ರ್ಯ, ಸಂವಹನ, ಕೌಶಲಗಳು ಇರಬೇಕು. ಆಗ ನಿಮ್ಮ ಮೌಲ್ಯ ಹೆಚ್ಚುತ್ತದೆ ಎಂದರು. ನಮ್ಮೊಳಗಿನ ಶಕ್ತಿಯನ್ನು ನಾವು ಮೊದಲು ಅರಿಯಬೇಕು. ಸ್ವಯಂ ಸಾಮಥ್ರ್ಯ ಆಧಾರದಲ್ಲಿ ಮುನ್ನಡೆಯಬೇಕು. ಆಗ ಯಶಸ್ಸು ಸಾಧ್ಯ…
ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 24, 25 ಹಾಗೂ 26ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಹಾಗೂ ಇತಿಹಾಸ ಪ್ರಸಿದ್ಧ ನಮ್ಮ ಕಂಬಳ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರಿನ ಶಾಸಕ ಶ್ರೀ ಅಶೋಕ್ ರೈ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಅಶೋಕ್ ರೈ ಅವರು ಮಾತನಾಡಿ, ಕರಾವಳಿ ಭಾಗದಲ್ಲಿ ಮಾತ್ರ ನಡೆಯುತ್ತಿದ್ದ ನಮ್ಮ ಕಂಬಳವನ್ನು ಪ್ರಪ್ರಥಮ ಬಾರಿಗೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಆಯೋಜನೆ ಮಾಡಿದ್ದೇವೆ. ಕಂಬಳವನ್ನು ಯಶಸ್ವಿಗೊಳಿಸೋಣ. ಸರ್ವರ ಸಹಕಾರ ಅತ್ಯಗತ್ಯ ಎಂದರು. ಈ ಸಂಧರ್ಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಶ್ರೀ ಎಂ ಮುರಳೀಧರ್ ಹೆಗ್ಡೆ, ಜಯಕರ್ನಾಟಕ ಸಂಘಟನೆಯ ಶ್ರೀ ಗುಣರಂಜನ್ ಶೆಟ್ಟಿ, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರ್ ರಾಜ್ ರೈ, ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಹಾಗೂ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಗುರುಕಿರಣ್ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಿರಿಯರು ಹಾಗೂ ಕಂಬಳದ ಅಭಿಮಾನಿಗಳು ಉಪಸ್ಥಿತರಿದ್ದರು.
ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮದ ಕರಪತ್ರವನ್ನು ಅನಾವರಣಗೊಳಿಸಲಾಯಿತು. ಸಭೆಯಲ್ಲಿ ತುಳುನಾಡಿನ ಪ್ರತಿಷ್ಠಿತ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನೂತನ ಪೋಷಕರಾಗಿ ಸೇರ್ಪಡೆಯಾದ ಶ್ರೀ ಸುಧಾಕರ್ ಪೂಂಜ, ಶ್ರೀ ಜಗನ್ನಾಥ್ ಚೌಟ, ಶ್ರೀ ಲೋಕೇಶ್ ಶೆಟ್ಟಿ ಮತ್ತು ಶ್ರೀ ಸುರೇಶ್ ರೈ ಮಕರಜ್ಯೋತಿ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿಯವರನ್ನು ಬಂಟರ ಸಂಘ ಬಂಟ್ವಾಳ ತಾಲೂಕಿನ ಅಧ್ಯಕ್ಷ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಹಾಗೂ ಕಾರ್ಯದರ್ಶಿ ಶ್ರೀ ಜಗನ್ನಾಥ್ ಚೌಟರು ಪ್ರಿತಿಪೂರ್ವಕವಾಗಿ ಸನ್ಮಾನಿಸಿದರು.…
ಕೆಲ ತಿಂಗಳುಗಳ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿದ್ದ ದೇಶದ ಪ್ರತಿಷ್ಠಿತ ಬಂಟ ಉದ್ಯಮಿಯೊಬ್ಬರು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನಿಸ್ವಾರ್ಥ ಸಮಾಜ ಸೇವೆಯನ್ನು ಶ್ಲಾಘಿಸಿ ಒಕ್ಕೂಟದ ಸಮಾಜಸೇವೆಗೆ 50 ಲಕ್ಷ ರೂ. ದೇಣಿಗೆ ನೀಡುವುದಾಗಿ ನೆರೆದ ಜನಸ್ತೋಮದ ಮುಂದೆ ಘೋಷಿಸಿ ನುಡಿದಂತೆ ನಡೆದಿದ್ದಾರೆ. ಅಷ್ಟೇ ಅಲ್ಲದೆ, ಪ್ರತಿ ವರ್ಷವೂ ಒಕ್ಕೂಟಕ್ಕೆ 50 ಲಕ್ಷ ರೂಪಾಯಿಯನ್ನು ನೀಡುವುದಾಗಿ ಹೃದಯ ತುಂಬಿ ಹೇಳಿದರು. ಮುಂದೆ, ಒಕ್ಕೂಟವು ಸ್ವಂತ ಜಾಗ ಖರೀದಿಸಿ ಬಹುಮಹಡಿ ಕಾಂಪ್ಲೆಕ್ಸ್ ಕಟ್ಟಿಸಿ ಲಾಭ ಗಳಿಕೆ ಮಾಡಿ ಬಂದ ಹಣದಲ್ಲಿ ಸಮಾಜಸೇವೆ ಮಾಡಬೇಕೆಂದು ಹೇಳಿದರು. ಅದಕ್ಕೆ ಕೂಡಾ ತಾನು ಗರಿಷ್ಠ ಮಟ್ಟದಲ್ಲಿ ಆರ್ಥಿಕ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಅವರೇ ಪ್ರಸಿದ್ಧ ಉದ್ಯಮಿ ದೇಶದ ಪ್ರತಿಷ್ಠಿತ ಹೇರಂಬಾ ಇಂಡಸ್ಟ್ರೀಸ್ ಲಿಮಿಟೆಡ್ನ ಚೇರ್ಮೆನ್ ಮಂಜೇಶ್ವರ ಮೂಲದ ಸದಾಶಿವ ಕೆ. ಶೆಟ್ಟಿ. ನಿಸ್ವಾರ್ಥ ಸಮಾಜಸೇವಕರಾಗಿರುವ ಸದಾಶಿವ ಕೆ. ಶೆಟ್ಟಿ ಅವರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿಯ ಕನ್ಯಾನದ ಕೂಳೂರಿನ ಫಕೀರ ಶೆಟ್ಟಿ…
2023 ರ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ, ಸಾಮಾಜಿಕ ಚಿಂತಕ ಶ್ರೀ ಶಶಿಕಿರಣ್ ಶೆಟ್ಟರ ಸಾಧನೆಯ ಪಥದ ಹೆಜ್ಜೆ ಗುರುತುಗಳು ಉದ್ಯಮ ಕ್ಷೇತ್ರದಲ್ಲಿ ಅಚ್ಚಳಿಯದ ಪಡಿಮೂಡಿಸಿ ಭವಿಷ್ಯದ ಉದ್ಯಮ ಕ್ಷೇತ್ರದ ಸಾಧನಾಶೀಲ ಯುವಕರಿಗೆ ದಾರಿದೀಪವಾಗಬಲ್ಲುದು. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಬಂಟ್ವಾಳದ ಪುಟ್ಟ ಹಳ್ಳಿಯಲ್ಲಿ ಹುಟ್ಟಿದ ಶಶಿಕಿರಣ್ ಶೆಟ್ಟಿ ಅವರು ಇಂದು ಅಂತಾರಾಷ್ಟ್ರೀಯ ಪ್ರಸಿದ್ಧಿ ಪಡೆದ ಕಾರ್ಗೋ ಸಂಬಂಧಿ ಜಾಗತಿಕ ವಿಸ್ತೃತ ವ್ಯವಹಾರಗಳನ್ನು ಹೊಂದಿದ ಸಂಸ್ಥೆಯನ್ನು ಹುಟ್ಟು ಹಾಕಿ ಫೌಂಡರ್ ಚೆಯರ್ ಮೆನ್ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವ ಪ್ರಸಿದ್ಧ ಉದ್ಯಮಿಯಾಗಿದ್ದಾರೆ. 1978 ರ ಸುಮಾರಿಗೆ ಇಂಟರ್ ಮೋಡಲ್ ಟ್ರಾನ್ಸ್ ಪೋರ್ಟ್ ಎಂಡ್ ಟ್ರೇಡಿಂಗ್ ಸಿಸ್ಟಮ್ಸ್ ಫ್ರೈ.ಲಿ. ಜೊತೆಗೆ ಸೇರಿಕೊಂಡು ಉದ್ಯಮದ ಅನುಭವಗಳನ್ನು ಪಡೆದು ಈ ಉದ್ಯಮ ವ್ಯವಹಾರದ ಯಶಸ್ಸಿನ ಸಾಧ್ಯಾ ಸಾಧ್ಯತೆಗಳನ್ನು ಅಧ್ಯಯನ ಮಾಡಿ ಇದಕ್ಕೆ ಪೂರಕವಾಗಬಲ್ಲ ತನ್ನದೇ ಉದ್ಯಮ ಸ್ಥಾಪನೆ ಕುರಿತು ಯೋಚಿಸತೊಡಗಿದರು. ನಂತರ ಫೋರ್ಬಸ್ ಗೋಕಾಕ್ ಜೊತೆ ಸೇರಿ ಇನ್ನಷ್ಟು ಅನುಭವ ಸಂಪಾದಿಸಿದ ಬಳಿಕ…















