Author: admin

ವಿದ್ಯಾಗಿರಿ(ಮೂಡುಬಿದಿರೆ): ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 29ನೇ ವಿರಾಸತ್ ಗೆ ಭಾನುವಾರ ರಾತ್ರಿ ತೆರೆ ಬಿತ್ತು. ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು. ಇದಕ್ಕೂ ಮೊದಲು ಕಿರು ರಥದಲ್ಲಿ ಗಣಫತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ಧ್ಯೋತಕವಾದ ಮಹಾಲಕ್ಷ್ಮಿ ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಮೂರ್ತಿಗಳನ್ನು ಕರೆ ತರಲಾಯಿತು. ರಥಯಾತ್ರೆಯಲ್ಲಿ ಮೈಸೂರು, ಪಂಡರಾಪುರ ಹಾಗೂ ಮಂಗಳೂರು ಹರೇಕೃಷ್ಣ ಪಂಥದ ಭಜನಾ ತಂಡಗಳ ಭಜನೆ ಹಾಡಿನ ಮೂಲಕ ಭಕ್ತಿ ಪ್ರಭಾವಳಿ ಮೂಡಿಸಿದರು. 15 ಅರ್ಚಕರು ಮಂತ್ರ ಘೋಷ ಮಾಡಿದರು. ತಟ್ಟಿರಾಯ, ಅಪ್ಸರೆಯರು, ಕಳಶ ಹಿಡಿದ ಯುವತಿಯರು, ಹುಲಿರಾಯ, ಕೊಂಬು, ಕಹಳೆ…

Read More

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ  ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದ ೩೬ನೆಯ ಕೃತಿ ಬಿಡುಗಡೆಯಾಯಿತು. ಕನ್ನಡ ಸಹಾಯಕ ಪ್ರಾಧ್ಯಾಪಕ, ಲೇಖಕ ಡಾ. ಎನ್. ಪ್ರವೀಣ್‌ಚಂದ್ರ ಇವರ ಲೇಖನ ಸಂಕಲನ ಸ್ಪೂರ್ತಿಯ ಚಿಲುಮೆಗಳು ಕೃತಿ ಬಿಡುಗಡೆ ಕಾರ್ಯ ಕ್ರಮವು ಮಂಗಳೂರು ಪತ್ರಿಕಾ ಭವನದಲ್ಲಿ ಅಕ್ಟೋಬರ್ ೧೭ರಂದು ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ನೆರವೇರಿತು. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಹಾಗೂ ಸೂರಜ್ ಎಜುಕೇಶನ್ ಟ್ರಸ್ಟ್ ಮುಡಿಪು ಇದರ ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣಕರ್‌ರವರು ಕೃತಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಕಾಲೇಜ್ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗೀಶ್ ಕೈರೋಡಿ ಕೃತಿ ಪರಿಚಯ ಮಾಡುತ್ತಾ ಇಂದಿನ ಆಧುನಿಕ ಸಂದರ್ಭದಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಚಿತ್ರಿಸುವ ಈ ರೀತಿಯ ಕೃತಿಗಳ ಅಗತ್ಯ ಹೆಚ್ಚು ಇದೆ. ಎಲೆಮರೆಯ ಕಾಯಿಗಳ ಹಾಗೆ ಕೆಲಸ ಮಾಡಿ ಅಪೂರ್ವ ಸಾಧನೆಗೈದ ಮಹನೀಯರುಗಳ ದಾರಿ…

Read More

ಬಂಟರ ಸಮುದಾಯದ ಪ್ರತೀ ವ್ಯಕ್ತಿಯಲ್ಲಿ ಕಾಣಬಹುದಾದ ವಿಶೇಷ ಗುಣಗಳೆಂದರೆ ಸ್ವಪರಿಶ್ರಮದಲ್ಲಿ ವಿಶ್ವಾಸ ಮತ್ತು ಅನನ್ಯ ಆತ್ಮಗೌರವ. ಅವರ ಈ ವಿಶೇಷಗಳು ಇಂದು ಅವರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದೆ. ತಾವು ಸುಶಿಕ್ಷಿತರಾದರೂ ಬೆವರಿಳಿಸಿ ದುಡಿಯುವುದಕ್ಕೆ ಹಿಂಜರಿಯಲಾರರು. ಕಾರಣ ಅವರು ಪರಿಶ್ರಮಕ್ಕೆ ಪರ್ಯಾಯ ಇಲ್ಲವೆಂಬ ಮೂಲಮಂತ್ರದ ಅರ್ಥ ಬಲ್ಲರು. ಬೆಳ್ಳಾರೆ ತಂಬಿನಮಕ್ಕಿ ಮೂಲದ ರಾಕೇಶ್ ಶೆಟ್ಟಿ ಅವರು ಇಂದು ಪುಣೆ ನಗರದ ಓರ್ವ ಯಶಸ್ವಿ ಯುವ ಉದ್ಯಮಿ ಜೊತೆಗೆ ಪ್ರಭಾವಿ ಜನನಾಯಕನಾಗಿ ಗುರುತಿಸಲ್ಪಡುತ್ತಿದ್ದಾರೆ. ಭಾಗೀರಥಿ ರೈ ಅಮ್ಮು ರೈ ದಂಪತಿಯ ಕಿರಿಯ ಪುತ್ರ ರಾಕೇಶ್ ಪದವೀಧರ ಯುವಕ. ಭವಿಷ್ಯದ ಬಗ್ಗೆ ಭವ್ಯ ಕಲ್ಪನೆಗಳನ್ನು ಹೊಂದಿದ ಕನಸುಗಾರ. ಉದ್ಯಮಶೀಲನಾಗಿ ಕಸುವು ತೋರಿಸಿದ ಸಮರ್ಥ. ಮಹಾರಾಷ್ಟ್ರದ ಸಾಂಸ್ಕೃತಿಕ ರಾಜಧಾನಿ ಎಂಬ ಖ್ಯಾತಿಯ ಪುಣೆ ನಗರಕ್ಕಾಗಮಿಸಿದ ರಾಕೇಶ್ ಶೆಟ್ಟರು ಹತ್ತಾರು ಕ್ಷೇತ್ರಗಳಲ್ಲಿ ದುಡಿದು ಸ್ವಯಂ ಉದ್ಯೋಗ ಸೃಷ್ಟಿಸಿಕೊಂಡು ತನ್ನ ಅದೃಷ್ಟ ಪರೀಕ್ಷೆ ಮಾಡಿಕೊಂಡು ನಂತರದ ದಿನಗಳಲ್ಲಿ ಹೊಟೇಲ್ ಉದ್ಯಮ ಪ್ರಾರಂಭಿಸಿದರು. ತನ್ನ ಕಠಿಣ ಪರಿಶ್ರಮ, ಅಚಲ ವಿಶ್ವಾಸ,…

Read More

ವಿದ್ಯಾಗಿರಿ (ಮೂಡುಬಿದಿರೆ): ಸಂಗೀತ ಲೋಕದ ದಿಗ್ಗಜರಾದ ವಯೋಲಿನ್ ವಾದಕ ಮೈಸೂರು ಮಂಜುನಾಥ, ಕೊಳಲು ವಾದಕ ಗೋಡ್ಖಿಂಡಿ ಹಾಗೂ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರಿಗೆ ಭಾನುವಾರ ‘ಆಳ್ವಾಸ್ವಿರಾಸತ್-2023’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದ ವಿಶಾಲ ವೈಭವದ ವೇದಿಕೆಯಲ್ಲಿ ಆಸೀನರಾದ ಮೂವರು ಸಾಧಕರಿಗೆ ಅವರದ್ದೇ ರಾಗ ಸಂಯೋಜನೆಯ ವಯೋಲಿನ್, ಬಾನ್ಸುರಿ ಹಾಗೂ ಸಂಗೀತದ(ಜೈ ಹೋ) ಮೂಲಕ ಅಭಿಮಾನದ ಪ್ರೀತಿಯನ್ನು ಧಾರೆ ಎರೆಯಲಾಯಿತು. ಶಾಲು, ಹೂಹಾರ, ಸ್ಮರಣಿಕೆ, ಪ್ರಶಸ್ತಿ ಪತ್ರದ ಜೊತೆಗೆ 1 ಲಕ್ಷ ರೂಪಾಯಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪನ್ನೀರು, ತಿಲಕ, ಪುಷ್ಪಾರ್ಚನೆ ಹಾಗೂ ಆರತಿ ಮೂಲಕ ಗೌರವಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ತಂಡವು  ಸ್ವರ ಗಾನದ ಆರತಿ ಗಾನಸುಧೆ ಹರಿಸಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿ ವಿನಮ್ರತೆಯಿಂದ ಮಾತನಾಡಿದ ಮೈಸೂರು ಮಂಜುನಾಥ, ನನ್ನ ಲೋಕದ ಸಮಸ್ತ ಸಂಭ್ರಮ ಮೂಡುಬಿದಿರೆಗೆ ಆಳ್ವರು ತಂದಿದ್ದಾರೆ ಎಂದು ದೇವೇಂದ್ರ ನಾಚುವ ಹಾಗೆ…

Read More

ಮುಂಬಯಿ, ಅ.14: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕಳೆದ ರಾತ್ರಿ ನಡೆಸಲಾದ ಹತ್ಯೆಯತ್ನವನ್ನು ಬಿಜೆಪಿ ಉತ್ತರ ಮುಂಬಯಿ ಕ್ಷೇತ್ರದ ಉಪಾಧ್ಯಕ್ಷ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕ ರಾಜ್ಯದ ಗೃಹ ಇಲಾಖೆ ಮತ್ತು ದ.ಕ ಜಿಲ್ಲಾ ಪೊಲೀಸ್ ಉನ್ನತಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಘಟನೆಗೆ ಕಾರಣಕರ್ತನಾದ ಅಪರಿಚಿತನ ಪತ್ತೆಹಚ್ಚಿ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಎರ್ಮಾಳ್ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ. ಓರ್ವ ಯುವನಾಯಕನಾಗಿದ್ದ ಜವಾಬ್ದಾರಿಯುತ ಜನಪ್ರತಿನಿಧಿಯ ಶಾಸಕರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿ ನಡೆಸಿದ ಹತ್ಯಾಯತ್ನವು ಸಹಿಸುವಂತಹದ್ದಲ್ಲ. ಇಂತಹ ದುಷ್ಕೃತ್ಯಕ್ಕೆ ಮುಂದಾದ ಯಾವನೇ ವ್ಯಕ್ತಿಯಾಗಲಿ, ಸಂಘಟನೆಯನ್ನಾಗಲಿ ಕ್ಷಮಿಸುವ ಮಾತೇ ಇಲ್ಲ. ಸಾಹಸಕ್ಕೆ ಮುಂದಾಗುವವರು ಎದುರು ಬಂದು ತಮ್ಮ ಎದೆಗಾರಿಕೆಯನ್ನು ಸಾರ್ವಜನಿಕವಾಗಿ ತೋರಿಸಲಿ ಎಂದೇಳುವೆ. ಒಂದೇ ಸಮಾಜದಲ್ಲಿದ್ದು ದ್ರೋಹ ಬಗೆಯುವ ಇಂತಹ ಯಾವ ದುಷ್ಕರ್ಮಿಗಳಿಗೂ ಮನ್ನಿಸುವ ಪ್ರೆಶ್ನೆಯೇ ಬಾರದು ಎಂದೂ ಎರ್ಮಾಳ್ ಹರೀಶ್ ತಿಳಿಸಿದ್ದಾರೆ.

Read More

ಬಂಟರ ಸಂಘ ಮುಂಬಯಿ ಇದರ 9 ಪ್ರಾದೇಶಿಕ ಸಮಿತಿಗಳಲ್ಲೊಂದಾದ ಡೊಂಬಿವಲಿ ಪ್ರಾದೇಶಿಕ ಸಮಿತಿಯ 2023-2026ರ ಅವಧಿಯ ಕಾರ್ಯಾಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆಬ್ರವರಿ 7ರಂದು ಸಂಜೆ 5 ಗಂಟೆಗೆ ಸರಿಯಾಗಿ ಡೊಂಬಿವಲಿ ಪೂರ್ವದ, ಕಟೈ ನಾಕ ಪರಿಸರದಲ್ಲಿರುವ ಕುಶಲ ಗ್ರೀನ್ ಲಾನ್ಸ್ ಹೋಟೆಲ್ ನ ಸಭಾಗೃಹದಲ್ಲಿ ನಡೆಯಲಿದೆ. ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟರ ಅಧ್ಯಕ್ಷತೆಯಲ್ಲಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟರ ಗೌರವಾನ್ವಿತ ಉಪಸ್ಥಿತಿ ಹಾಗೂ ಸಂಘದ ಇತರ ಪದಾಧಿಕಾರಿಗಳಾದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಗೌ.ಪ್ರ. ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಕೋಶಾಧಿಕಾರಿ ರಮೇಶ್ ಬಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಶಶಿಧರ್ ಕೆ. ಶೆಟ್ಟಿ ಇನ್ನಂಜೆ, ಪೂರ್ವ ವಲಯ ಸಮನ್ವಯಕ ಸುಕುಮಾರ್ ಎನ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಶೆಟ್ಟಿಯವರ ಸಮ್ಮುಖದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ…

Read More

ವಿದ್ಯಾಗಿರಿ (ಮೂಡುಬಿದಿರೆ): ಮುಸ್ಸಂಜೆ ಇನ್ನೂ ಕವಿದಿಲ್ಲ, ನೇಸರ ಇನ್ನೂ ಜಾರಿಲ್ಲ, ಆಗಲೇ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಪ್ರೇಕ್ಷಕರು ತುಂಬಿ ತುಳುಕಿದ್ದು, ಹಾಡಿನ ಹೊನಲಿಗಾಗಿ ಕಾದು ನಿಂತಿದ್ದರು. ಎಲ್ಲೆಡೆ ಒಂದೇ ಝೇಂಕಾರ ಶ್ರೇಯಾ, ಶ್ರೇಯಾ, ಶ್ರೇಯಾ. ಅದು `ಶ್ರೇಯಾ’ ಸ್ವರದ ಪವಾಡ. ಶನಿವಾರದ ಸಂಜೆಯ ಬಿಸಿಲು ಆರುವ ಮುನ್ನವೇ ಶ್ರೇಯಾ ಶ್ರೇಯಾ ಘೋಷಾಲ್ ನಾದ ನಿನಾದದ ತಂಪಿಗೆ-ಕಂಪಿಗೆ ಹಂಬಲಿಸಿ ಚಾತಕ ಪಕ್ಷಿಯಂತೆ ಬಿದಿರೆ ಜನ ಕುಳಿತ್ತಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ಆಳ್ವಾಸ್ ವಿರಾಸತ್ ಮೂರನೇ ದಿನವಾದ ಶನಿವಾರ ಚಿತ್ರಣ. ಪಶ್ಚಿಮ ಬಂಗಾಳದ ಬೆಹರಾಂಪುರದ ಹಾಲುಗೆನ್ನೆಯ ಹುಡುಗಿ ಶ್ರೇಯಾ ಘೋಷಾಲ್ ‘ ನಮಸ್ಕಾರ ಮೂಡುಬಿದಿರಿ…’ ಎನ್ನುತ್ತಲೇ… `ಯಾರಾ ಮುಜುಕೋ ಇರಾದೆ ದೇ… ಸುನ್ ರಹಾ ಹೇ ನಾ ತೂ.’. ಹಾಡುತ್ತಲೇ ವೇದಿಕೆ ಪ್ರವೇಶಸುತ್ತಿದ್ದಂತೆಯೇ ಸಡಗರದ ಅಲೆ ಉಕ್ಕಿ ಬಂದ ಸಾಗರದಂತೆ ಸಭಾಂಗಣವೇ ರಂಗೇರಿತು. ಎಲ್ಲ ದಿಕ್ಕಿನಲ್ಲೂ `ಸುನ್ ರಹಾ…

Read More

ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಗಾಗಿ ರಚಿಸಿದ ಪುಣೆ ಸಮಿತಿಯ ಉದ್ಘಾಟನಾ ಸಮಾರಂಭ ಹಾಗೂ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಪಾವಂಜೆ ಮೇಳದ ಕಲಾವಿದರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಸಂಭ್ರಮದಿಂದ ನಡೆಯಿತು. ಪುಣೆ ಬಂಟರ ಸಂಘದ ಅಧ್ಯಕ್ಷ ಹಾಗೂ ಕಾಪು ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಕೆ ಪ್ರಕಾಶ್ ಶೆಟ್ಟಿ,ಕಾಪು ಮಾರಿಗುಡಿ ಅಭಿವೃದ್ಹಿ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಮುಂಬಯಿ ಸಮಿತಿಯ ಅಧ್ಯಕ್ಷರಾದ ಸುಧಾಕರ ಹೆಗ್ಡೆ, ಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಕಾಪು ಮಾರಿಗುಡಿ ಅಭಿವೃದ್ಹಿ ಪ್ರಚಾರ ಸಮಿತಿ ಅಧ್ಯಕ್ಷರಾದ ಯೋಗೇಶ್ ಶೆಟ್ಟಿ, ಆರ್ಥಿಕ ಸಮಿತಿಯ ಮುಖ್ಯ ಪ್ರಧಾನ ಸಂಚಾಲಕರಾಗಿರುವ ಉದಯ್ ಸುಂದರ್ ಶೆಟ್ಟಿ, ಸಂದೀಪ್ ಶೆಟ್ಟಿ, ರವಿರಾಜ್ ಶೆಟ್ಟಿ,…

Read More

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಎಸೋಸಿಯೇಷನ್ ನೇತ್ರತ್ವದಲ್ಲಿ, ಬಂಟ್ವಾಳ ತಾಲೂಕು ವಾಲಿಬಾಲ್ ಎಸೋಸಿಯೇಷನ್, ಯೂತ್ ಬಂಟ್ಸ್ ಬಂಟ್ವಾಳ ತಾಲೂಕು ಹಾಗೂ ಯೂತ್ ಬಂಟ್ಸ್ ಬಿ.ಸಿ ರೋಡು ಇದರ ಸಂಯುಕ್ತ ಆಶ್ರಯದಲ್ಲಿ ಬಿ.ಸಿ ರೋಡು, ಬ್ರಹ್ಮರ ಕೋಟ್ಲು ಬಳಿ ಇರುವ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದಿನಾಂಕ 30. 01. 2024 ನೇ ಮಂಗಳವಾರ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯಿತು. ಖ್ಯಾತ ಉದ್ಯಮಿ, ಹೋಟೆಲ್ ರಂಗೋಲಿಯ ಮಾಲಕರಾದ ಶ್ರೀಯುತ ಸದಾನಂದ ಶೆಟ್ಟಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಜಿಲ್ಲಾ ವಾಲಿಬಾಲ್ ಎಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಸತೀಶ್ ಬಪ್ಪಲಿಗೆ, ತಾಲೂಕು ವಾಲಿಬಾಲ್ ಎಸೋಸಿಯೇಷನ್ ನ ಗೌರವಾಧ್ಯಕ್ಷರಾದ ಶ್ರೀ ಶ್ರೀಕಾಂತ ಶೆಟ್ಟಿ ಸಂಕೇಶ ಉಪಸ್ಥಿತರಿದ್ದರು. ಜಿಲ್ಲಾ ವಾಲಿಬಾಲ್ ಎಸೋಸಿಯೇಷನ್ ಕಾರ್ಯದರ್ಶಿ ಶ್ರೀ ಶಂಕರ್ ಶೆಟ್ಟಿ ಪರಾರಿ ಗುತ್ತು, ಯೂತ್ ಬಂಟ್ಸ್ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರಾದ ಶ್ರೀ ನಿಶಾನ್ ಆಳ್ವ, ಯೂತ್ ಬಂಟ್ಸ್ ಬಿ.ಸಿ ರೋಡ್ ಇದರ ಅಧ್ಯಕ್ಷರಾದ…

Read More

ವಿದ್ಯಾಗಿರಿ: ಇಲ್ಲಿ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ 29ನೇ ಆಳ್ವಾಸ್ ವಿರಾಸತ್‍ನ ಅಂತಿಮ ದಿನವಾದ ಭಾನುವಾರ ಆಳ್ವಾಸ್ ಸಾಂಸ್ಕೃತಿಕ ಹಾಗೂ ಕ್ರೀಡಾ ತಂಡದ ವಿದ್ಯಾರ್ಥಿಗಳು ರೋಚಕ ಅನುಭವ ನೀಡುವ ಪ್ರದರ್ಶನ ನೀಡಿ, ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಮಲ್ಲಕಂಬ: ಆಳ್ವಾಸ್ ಕಾಲೇಜಿನ ಸುಮಾರು 130 ವಿದ್ಯಾರ್ಥಿಗಳು ಏಕಕಾಲದಲ್ಲಿ ಮಲ್ಲಕಂಬ ಸಾಹಸ ಪ್ರದರ್ಶನ ನೀಡಿದರು. ಪ್ರೇಕ್ಷಕರು ಬೆಕ್ಕಸ ಬೆರಗಾದರು. ಮಲ್ಲಕಂಬವು ಅಪ್ಪಟ ದೇಶೀಯ ಕ್ರೀಡೆ. ದೇಶಿ ಸಂಸ್ಕೃತಿ ಹಾಗೂ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಿರುವ ಆಳ್ವಾಸ್, ಈ ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕ್ರೀಡೆಯಾಗಿದ್ದ ಮಲ್ಲಕಂಬಕ್ಕೆ ಪ್ರೇಕ್ಷಕರನ್ನು ಸೆಳೆಯಬೇಕು ಎಂಬ ದೂರದೃಷ್ಟಿಯನ್ನು ಇರಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು ಕಲಾ ರೂಪ ನೀಡಿದ್ದು, ಮಲ್ಲಕಂಬವು ವೇದಿಕೆ ಮೇಲೇರಿದೆ. ಎತ್ತರದ ಕಟ್ಟಿಗೆ ಕಂಬವನ್ನು ಕುಸ್ತಿ ಪಟ್ಟುಗಳ ಸಾಧನೆಗಾಗಿ ಬಳಸುತ್ತಿದ್ದರು. ಈ ಎತ್ತರದ ಕಂಬದ ಕುತ್ತಿಗೆ ಹಾಗೂ ಮೇಲಿನ ನಾಬ್‍ಗೆ ಎಣ್ಣೆಯನ್ನು ಸವರಿ ನಾಜೂಕುಗೊಳಿಸಲಾಗಿರುತ್ತದೆ. ಇನ್ನೊಂದೆಡೆ ಜೋತು ಬಿದ್ದ…

Read More