Author: admin

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಲಿ., ಮಂಗಳೂರುರವರು ತಮ್ಮ ಮಾನವೀಯ ಕಳಕಳಿಯ ಸೇವೆಗಳ ಅಂಗವಾಗಿ, ಲಯನ್ಸ್ ಕ್ಲಬ್ ಇಂಟರ್‍ನೇಶನಲ್, ಡಿಸ್ಟ್ರಿಕ್ಟ್ 317ಡಿನ ಲಯನ್ಸ್ ಆರ್ಟಿಫೀಶಿಯಲ್ ಲಿಂಬ್ ಸೆಂಟರ್‍ನಲ್ಲಿ ದೈಹಿಕ ವಿಕಲ ಚೇತನರಿಗೆ ಕೃತಕ ಅಂಗ ವಿತರಣೆಗೆ ಸಹಾಯ ಧನವನ್ನು ನೀಡಿದರು. ಇತ್ತೀಚೆಗೆ ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಆರ್ಟಿಫೀಶಿಯಲ್ ಲಿಂಬ್ ಸೆಂಟರ್‍ನಲ್ಲಿ ಜರಗಿದ ಕಾರ್ಯಕ್ರಮದಲ್ಲಿ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು, ಲಯನ್ಸ್ ಸೆಂಟರ್ ಫಾರ್ ದಿ ಫಿಸಿಕಲ್ ಹ್ಯಾಂಡಿಕ್ಯಾಪ್ಡ್ ಇದರ ಅಧ್ಯಕ್ಷರಾದ ಖ್ಯಾತ ಎಲುಬು ತಜ್ಞ ಡಾ. ಎಂ. ಶಾಂತಾರಾಮ ಶೆಟ್ಟಿ, ಲಯನ್ಸ್ ಕ್ಲಬ್‍ನ ಪ್ರಾದೇಶಿಕ ಅಧ್ಯಕ್ಷರಾದ ಶ್ರೀ ಚಂದ್ರಹಾಸ ರೈ, ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳಾದ ಎಡ್ವಕೇಟ್ ಶ್ರೀ ಅರುಣ್ ಕುಮಾರ್ ಶೆಟ್ಟಿ, ಶ್ರೀಮತಿ ರಮ್ಯಾ ಸಿ. ರೈ, ಶ್ರೀ ವಿಜಯವಿಷ್ಣು ಮಯ್ಯ, ಶ್ರೀ ಎಚ್. ಗುರುಪ್ರೀತ್ ಆಳ್ವ ಮುಂತಾದ ಗಣ್ಯರ ಉಪಸ್ಥಿತಿಯಲ್ಲಿ ದೈಹಿಕ ವಿಕಲಚೇತನರಿಗೆ ಕೃತಕ ಅಂಗ ವಿತರಣೆಯನ್ನು ಮಾಡಿದರು.

Read More

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 20ರಂದು ಮೂಡುಬಿದಿರೆಯ ಸ್ಕೌಟ್ಸ್‍ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ. ಅನನ್ಯ ರಂಗಕರ್ಮಿ, ಪುಸ್ತಕ ಪ್ರೇಮಿ, ಕಿರುತೆರೆ-ಹಿರಿತೆರೆ ಕಲಾವಿದ ಶ್ರೀಪತಿ ಮಂಜನಬೈಲ್ ಅವರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಗೊಂಡಿದ್ದು ತಾಲೂಕಿನ ಪ್ರಥಮ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಲ್ಲುತ್ತಿದೆ. ವಿವಿಧ ಉಪನ್ಯಾಸಗಳು, ಸಾಂಸ್ಕøತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮಗಳೊಂದಿಗೆ ಸಮ್ಮೇಳನವು ಅರ್ಥಪೂರ್ಣವಾಗಿ ನಡೆಯಲಿರುವುದೆಂದು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೇಣುಗೋಪಾಲ ಶೆಟ್ಟಿ ಕೆ, ಅಧ್ಯಕ್ಷರು.

Read More

ಜ್ಞಾನದ ಮೂಲಕ ಸಭ್ಯತೆಯ ನಿರ್ಮಾಣವಾಗುವುದು. ಅದರ ಮುಖಾಂತರ ಸದಾಚಾರ ಮತ್ತು  ಪರಿವರ್ತನೆ ಆಗುವುದು. ಜ್ಞಾನ ನಮ್ಮನ್ನು ಸಶಕ್ತರನ್ನಾಗಿಸುವುದು. ವ್ಯಕ್ತಿಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಕ್ಷಮತೆಯನ್ನು ನೀಡಿ,  ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಧೈರ್ಯವನ್ನು ತುಂಬುವುದು. ನಮ್ಮ ದೇಶದ  ಪ್ರಧಾನಮಂತ್ರಿಯವರು ವಾಯ್ಸ್ ಆಫ್ ಯೂತ್ @2047 ಎಂಬ ಕಾರ್ಯಕ್ರಮವನ್ನು  ಘೋಷಿಸಿದ್ದಾರೆ. ನಮ್ಮ ದೇಶದ ವಿಕಾಸದ ದೃಷ್ಟಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಇದು 21ನೆಯ ಶತಮಾನದ ಮೊದಲ ಶೈಕ್ಷಣಿಕ ನೀತಿಯಾಗಿದೆ ಎಂದು ಮಹಾರಾಷ್ಟ್ರದ ರಾಜ್ಯಪಾಲರೂ, ಕುಲಪತಿಗಳೂ ಆದ ಶ್ರೀ ರಮೇಶ್ ಬೈಸ್ ಅವರು ಅಭಿಪ್ರಾಯ ಪಟ್ಟರು. ದೇಶದ ವಿಕಾಸದಲ್ಲಿ ಪುರುಷರಷ್ಟೇ ಮಹಿಳೆಯರ ಯೋಗದಾನವೂ ಇದೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿನಿಯರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಅವರು ಮುಂಬಯಿ ವಿಶ್ವ ವಿದ್ಯಾಲಯದ ವಾರ್ಷಿಕ ಘಟಿಕೋತ್ಸವ 2023 ರಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ  ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗಳಿಗೆ ಪದಕ ಪ್ರದಾನಿಸಿ, ಪದವೀಧರರಿಗೆ ಸರ್ಟಿಫಿಕೇಟ್ ನೀಡಿ…

Read More

ಬ್ರಹ್ಮಾವರ ಫೆ. 09: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಹಾಗೂ ಉಡುಪಿ ಜಿಲ್ಲಾ ಆಟೋ ಮೊಬೈಲ್ ಡೀಲರ್ಸ್ ಅಸೋಸಿಯೇಶನ್ ಸಹಯೋಗದೊಂದಿಗೆ ಶಾಲಾ ಬಸ್ ಚಾಲಕರಿಗೆ, ನಿರ್ವಾಹಕರಿಗೆ ರಸ್ತೆ ಸುರಕ್ಷತೆ-ರಕ್ಷಣೆಯ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಚಾಲಕರು ಕಾರ್ಯ ನಿರ್ವಹಿಸುವಾಗ ಯಾವುದೇ ಕಾರಣಕ್ಕೂ ಮೈಮರೆಯಬಾರದು. ಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿರಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ರಸ್ತೆ ಸುರಕ್ಷತೆಯ ಪ್ರಾಮುಖ್ಯತೆಯನ್ನು ತಿಳಿಸಿ, ಎಲ್ಲಾ ಚಾಲಕರಿಗೂ, ನಿರ್ವಾಹಕರಿಗೂ ಸಂಚಾರಿ ನಿಯಮಗಳ ಅರಿವಿರಬೇಕೆಂದರು. ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಜಿಲ್ಲಾ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್‍ನ ಕಾರ್ಯದರ್ಶಿ ಕಾಶೀನಾಥ್ ನಾಯಕ್, ಅರವಿಂದ ಮೋಟಾರ್ಸ್ ಪ್ರೈ.ಲಿ.ನ ಮ್ಯಾನೇಜರ್ಸ್ ಮೋಹನ್ ಕೋಡಿಕಲ್, ರಾಜಶೇಖರ್, ರಾಘವೇಂದ್ರ ಪಿ.ಎ. ಆಗಮಿಸಿದ್ದರು. ಅವರು ಸಂಚಾರಿ ನಿಯಮಗಳು, ಸುರಕ್ಷಿತ ವಾಹನ ಚಾಲನೆ, ವಾಹನಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ, ಉತ್ತಮ ಇಂಧನಗಳ ಬಳಕೆ, ವಾಹನಗಳ ನಿಯಂತ್ರಣ, ಬಿ ಎಸ್ 6 ವಾಹನಗಳ…

Read More

ವಿದ್ಯಾಗಿರಿ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. 2023-24 ಡಿಸೆಂಬರ್- ಜನವರಿಯಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡ 29.99 ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ 69% ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 74 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಶಿವಪ್ರಸಾದ್, ಕನ್ಯಾ ಪ್ರಭು, ಆಕಾಶ್ ಜೆ. ಭಟ್, ಹಿತೇಶ್ ಎಂ.ಎಸ್, ವೈಷ್ಣವಿ ಯು.ಕೆ., ನಿಧಿ ಆರ್.ಕೆ., ಅನಿಷಾ ಮತ್ತು ತಿಲಕ್ ರಾಜ್ ಒಟ್ಟು 400ರಲ್ಲಿ 250ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. ಶ್ರೆಜಾ ಎಸ್., ಜ್ಞಾನೇಶ್ ಆರ್., ಐಶ್ವರ್ಯ, ಫಾಹಿಮ್, ಆದಿಶಾ, ಡಿಯೋನಾ ವಾಸ್, ಸಾಕ್ಷಿ ಹೆಗ್ಡೆ, ಸುಮೇಧ್, ರಕ್ಷಿತಾ ಜಿ, ಅಮೃತಾ, ಲಲಿತಾ, ಸನ್ನಿಧಿ ಎಸ್., ವೈಷ್ಣವಿ ಎ.ಎಂ, ಅನ್ವಿತಾ, ವೃಂದಾ ವಿ.ವಿ., ವರ್ಷಾ, ದೀಕ್ಷಾ ಎಸ್., ಸಂಜನಾ ಎಸ್.ವಿ., ಹರ್ಷಿತಾ ಎಸ್., ಸುಜ್ಞಾನ್, ಲೆನಿಷಾ, ಗಗನ್‍ದೀಪ್, ಸ್ವಾತಿ, ಸಾವಿತ್ರಿ ಹೆಗ್ಡೆ, ಇಸ್ಮಾಯಿಲ್ ಅರ್ಫಾನ್, ಅಪೂರ್ವ ಎಸ್.ಎಚ್, ಚೇತಲಿ, ಚಿರಂತ್…

Read More

ಮೀರಾರೋಡ್ ನಿಂದ ದಹಾಣೂ ತನಕದ ಬಂಟ ಸಮಾಜ ಬಾಂಧವರನ್ನು ಒಗ್ಗೂಡಿಸಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಕ್ರೀಡೆ ಮುಂತಾದ ಹತ್ತು ಹಲವಾರು ಸಮಾಜಮುಖಿ ಸೇವೆಗಳನ್ನು ಸಮಾಜಕ್ಕೆ ತಲುಪಿಸುವಲ್ಲಿ ಹಲವಾರು ವರ್ಷಗಳ ಹಿಂದೆ ವಿರಾರ್ ಶಂಕರ್ ಶೆಟ್ಟಿಯವರ ನೇತೃತ್ವದಲ್ಲಿ ಸ್ಥಾಪನೆಗೊಂಡ ಮೀರಾ ದಹಾಣೂ ಬಂಟ್ಸ್ ಇದರ ವಾರ್ಷಿಕ ಕ್ರೀಡೋತ್ಸವ ಇದೇ ಬರುವ ಫೆಬ್ರವರಿ 10 ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ. ವಿರಾರ್ ನ ಹಳೇ ವಿವಾ ಕಾಲೇಜಿನ ಮೈದಾನ, ವಿರಾರ್ ಇಲ್ಲಿ ನಡೆಯಲಿರುವ ಈ ಕ್ರೀಡೋತ್ಸವವು ಬೆಳಿಗ್ಗೆ ಗಂಟೆ 7 ರಿಂದ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಆರಂಭಗೊಳ್ಳಲಿದೆ. ಹತ್ತು ಹಲವಾರು ಕ್ರೀಡೆಗಳು ಜರುಗಿ ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭವು ನಡೆಯಲಿದೆ. ವಿವಿಧ ವೈವಿಧ್ಯತೆಗಳಿಂದ ಕೂಡಿದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮೀರಾ ದಹಾಣೂ ಬಂಟ್ಸ್ ಇದರ ಅಧ್ಯಕ್ಷರಾದ ವಸಾಯಿಯ ಪ್ರಕಾಶ್ ಎಂ ಹೆಗ್ಡೆಯವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ…

Read More

ಮೂಡುಬಿದಿರೆ: ‘ಉದ್ಯೋಗ ಪಡೆಯಲು ಬುದ್ಧಿಮತ್ತೆಯ ಪ್ರಮಾಣ (ಐಕ್ಯು) ಮುಖ್ಯವಾದರೆ, ಯಶಸ್ವಿಯಾಗಲು ಭಾವನಾತ್ಮಕ ಪ್ರಮಾಣ ಬಹುಮುಖ್ಯ(ಇಕ್ಯೂ)’ ಎಂದು ಸೇಂಟ್ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ.ಆಲ್ವಿನ್ ವಿ. ಡೇಸಾ ಹೇಳಿದರು. ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಬುಧವಾರ 2023-25ನೇ ಸಾಲಿನ ಎಂಬಿಎ ತಂಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನಿಮ್ಮ ಕೌಶಲ ವೃದ್ಧಿಸಲು ಬಹುಭಾಷೆಗಳನ್ನು ಕಲಿಯಿರಿ ಎಂದ ಅವರು, ವೃತ್ತಿಯಲ್ಲಿ ಯಶಸ್ಸು ಸಾಧಿಸುವ ಮಾರ್ಗಗಳ ಕುರಿತು ತಿಳಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿನಿ, ಥಾಮ್ಸನ್ ರಾಯಿಟರ್ಸ್ (ಪರೋಕ್ಷ ತೆರಿಗೆ) ಪ್ರಬಂಧಕಿ, ರೂಪಶ್ರೀ ಹೆಗ್ಡೆ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಕೃತಕ ಬುದ್ಧಿಮತ್ತೆ(ಎಐ) ಎಂದಿಗೂ ಮನುಷ್ಯನ ಉದ್ಯೋಗವನ್ನು ನಿಭಾಯಿಸಲು ಸಾಧ್ಯವಿಲ್ಲ. ಅದು ಮಿತಿಮೀರಿದ ಹಾಗೂ ಪುನರಾವರ್ತಿತ ಕೆಲಸವನ್ನು ಕಡಿಮೆ ಮಾಡಬಹುದಷ್ಟೇ ಎಂದು ಅವರು ಅಭಿಪ್ರಾಯ ಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಸಂಪೂರ್ಣ ಪರಿಶ್ರಮದ ಮೂಲಕ ಯಶಸ್ಸು…

Read More

ಒಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ಸಿನ ಮೆಟ್ಟಿಲೇರಬೇಕು ಎಂಬ ಉದ್ದೇಶದಿಂದ ಅನೇಕ ಕೆಲಸ ಕಾರ್ಯಗಳನ್ನು ಹುಡುಕಾಟದಲ್ಲಿಯೇ ಸಮಯ ಕಳೆಯುತ್ತಾನೆ. ಆದರೂ ಯಾವುದೇ ಕೆಲಸವೂ ದೊರೆಯುವುದಿಲ್ಲ. ಕೊನೆಗೆ ಜೀವನದ ದಾರಿ ತಿಳಿಯಲಾರದೆ ತಾನು ನಂಬಿದ ಒಬ್ಬ ಗುರೂಜಿ ಬಳಿ ಬಂದು ತನ್ನ ಕಷ್ಟವನ್ನು ಹೇಳುತ್ತಾನೆ. ಆತನ ಕಷ್ಟಗಳನ್ನು ಆಲಿಸಿದ ಗುರೂಜಿ ಅವನಿಗೆ ಒಂದು ಹೂವಿನ ತೋಟಕ್ಕೆ ಹೋಗಿ ಒಂದು ಸುಂದರ ಪುಷ್ಪ ಕಿತ್ತುಕೊಂಡು ಬಾ, ಆದರೆ ಒಂದು ಷರತ್ತು. ಒಂದು ಪುಷ್ಪವನ್ನು ತಿರಸ್ಕರಿಸಿ ಮುಂದೆ ಸಾಗಿದರೆ ಅದನ್ನು ಮರಳಿ ಆಯ್ಕೆ ಮಾಡಕೂಡದು ಎಂಬ ಚಟುವಟಿಕೆ ನೀಡುತ್ತಾನೆ. ಗುರೂಜಿಯ ಮಾತಿನಂತೆ ವ್ಯಕ್ತಿ ತೋಟಕ್ಕೆ ಹೋಗುತ್ತಾನೆ. ಆಯ್ದುಕೊಳ್ಳಲು ತೋಟದ ತುಂಬಾ ಸೊಗಸಾದ ಪುಷ್ಪಗಳನ್ನು ನೋಡಿ ಹಿಗ್ಗಿದ. ಅನಂತರ ಪುಷ್ಪವನ್ನು ಆಯ್ದುಕೊಳ್ಳಲು ಹೋದಾಗ ಸ್ವಲ್ಪ ದೂರ ಸಾಗಿದಾಗ ಒಂದು ಸುಂದರ ಪುಷ್ಪದ ತುಂಬಾ ದುಂಬಿಗಳು ತುಂಬಿರುತ್ತವೆ. ಅದನ್ನು ತಿರಸ್ಕರಿಸಿ ಮುಂದೆ ಸಾಗಿದಾಗ ಮತ್ತೊಂದು ಪುಷ್ಪ ನೋಡಿದ. ದಳಗಳು ಉದುರಿದ ಹಾಗೆ ಕಾಣಿಸಿತು. ಮುಂಚೆ ನೋಡಿದ ಪುಷ್ಪಕ್ಕೆ ಹೋಲಿಸಿ…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮೂಡುಬಿದಿರೆಯ ಸಹಕಾರಿ ಸೇವಾ ಸಂಘ ಸಹಯೋಗದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾಮಂದಿರ ಬಳಿ ಫೆಬ್ರುವರಿ 10ರಂದು ಶನಿವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಸ್ಥೂಲಕಾಯ ಮಾಹಿತಿ ಹಾಗೂ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಲಿದೆ. ತಜ್ಞ ವೈದ್ಯಕೀಯ ವೃತ್ತಿಪರರಿಂದ ಸಮಗ್ರ ಮೌಲ್ಯಮಾಪನ, ತಜ್ಞರೊಂದಿಗೆ ಸಮಾಲೋಚನೆ, ಸ್ಥೂಲಕಾಯ ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ತಿಳಿವಳಿಕೆ ಮತ್ತು ಪರಿಣಿತರೊಂದಿಗೆ ಸಂವಾದಾತ್ಮಕ ಪ್ರಶ್ನೋತ್ತರ ಶಿಬಿರ ಇದಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಮೂಡುಬಿದಿರೆಯ ಸಹಕಾರಿ ಸೇವಾ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು (ಮೊ. 9742473545) ಸಂಪರ್ಕಿಸಬಹುದು.

Read More

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂಹವನ ವಿಭಾಗದ Advertising and PR  ಮುಕ್ತ ಆಯ್ಕೆಯ (ಓಪನ್ ಇಲೆಕ್ಟಿವ್) ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯದ ಭಾಗವಾಗಿ ಕಸ ವಿಲೇವಾರಿ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಹಮ್ಮಿಕೊಂಡಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕಿ ಸುಚಿತಾ ಎಂ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮೂಡುಬಿದಿರೆಯ ಪುರಸಭೆಯ ಸಹಯೋಗದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವನ್ನು ಸ್ವರಾಜ್ಯ ಮೈದಾನದಲ್ಲಿ ಫೆಬ್ರವರಿ 09 ಸಂಜೆ 03:30ಕ್ಕೆ ಪುರಸಭಾ ಮುಖ್ಯಾಧಿಕಾರಿ ಇಂದು ಎಂ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುರಸಭೆಯ ಪರಿಸರ ಇಂಜಿನಿಯರ್ ಶಿಲ್ಪಾ ಎಸ್, ಹಿರಿಯ ಹೆಲ್ತ್ ಇನ್ಸ್ಪೆಕ್ಟರ್ ಶಶಿರೇಖಾ, ಕೌನ್ಸಿಲರ್‍ಗಳಾದ ರಾಜೇಶ್ ನಾಯ್ಕ್, ಶಕುಂತಲಾ ಹರೀಶ್ ದೇವಾಡಿಗ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಕುರಿಯನ್ ಭಾಗವಹಿಸಲಿದ್ದಾರೆ. ಬೀದಿ ನಾಟಕವನ್ನು ಆಳ್ವಾಸ್ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುಧೀಂದ್ರ ಶಾಂತಿ ನಿರ್ದೇಶಿಸಲಿದ್ದಾರೆ. ವಿದ್ಯಾರ್ಥಿಗಳ ತಂಡವು ನಗರದ ಮಾರ್ಕೆಟ್ ರೋಡ್…

Read More