Author: admin
ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ವಿಶ್ವ ಬಂಟ ಸಮ್ಮೇಳನದ ಸಮಾರೋಪ ಸಮಾರಂಭ ಅಮ್ಮಣ್ಣಿ ರಾಮಣ್ಣ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ರವಿವಾರ ಸಂಜೆ ನೆರವೇರಿತು. ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನಾನು ಬಹಳ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಆಡು ಮುಟ್ಟದ ಸೊಪ್ಪಿಲ್ಲ, ಬಂಟರು ಮುಟ್ಟದ ಕ್ಷೇತ್ರವೇ ಇಲ್ಲ. ಕೈಗಾರಿಕೋದ್ಯಮ, ಬ್ಯಾಂಕಿಂಗ್ ಕ್ಷೇತ್ರ, ಸಿನಿಮಾ, ಕಲೆ, ಕೃಷಿ, ಹೋಟೆಲ್ ಹೀಗೆ ಎಲ್ಲದರಲ್ಲೂ ಬಂಟರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ನಮ್ಮ ದೇಶಕ್ಕೆ ಕೀರ್ತಿಯನ್ನು ತಂದವರು ಬಂಟರು. ಅವರನ್ನು ಎಷ್ಟು ಹೊಗಳಿದರೂ ಅತಿಶಯವಾಗಲಾರದು. ಎಲ್ಲರನ್ನು ಪ್ರೀತಿಸಿ ಗೌರವಿಸುವ ಬಂಟರ ಸಮ್ಮೇಳನ ಯಶಸ್ವಿಯಾಗಲಿ” ಎಂದರು. “ಮಂಗಳೂರು ಬೆಂಗಳೂರು ಕಾರಿಡಾರ್ ಆದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ವೇಗವಾಗಿ ಅಭಿವೃದ್ಧಿಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಟ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ನಾವು ಕೊಟ್ಟ ಮಾತಿನಂತೆ…
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಸೆಪ್ಟೆಂಬರ್ 10 ಬೆಳಿಗ್ಗೆ ಗಂಟೆ 10.00ಕ್ಕೆ ಮೂಡಬಿದಿರೆಯ ಸೃಷ್ಠಿ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ನೂತನ ಕಂಬಳ ಜಿಲ್ಲಾ ಸಮಿತಿ ರಚನೆ ಹಾಗೂ 2023-24 ನೇ ಋತುವಿನ ವಿವಿಧ ಕಂಬಳದ ದಿನಾಂಕಗಳನ್ನು ಅದೇ ದಿನ ನಿರ್ಧರಿಸಲಾಗುವುದು. ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.೧೩ ರಂದು ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆಟಿದ ಕೂಟ ಹಾಗೂ ಚಿನ್ನದ ಪದಕ ನೀಡಿ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಜು. ೧೮ ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿದ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಬಂಟರ ಸಂಘದ ಆಶ್ರಯದಲ್ಲಿ ಜರಗಿದ ಶಾಸಕ ಆಶೋಕ್ ರೈ ಅವರ ಅಭಿನಂದನಾ ಸಮಾರಂಭವು ಅಭೂತ ಪೂರ್ವ ಯಶಸ್ಸು ಕಂಡಿದ್ದು, ಇದೇ ರೀತಿಯಲ್ಲಿ ಮಂದೆಯೂ ಬಂಟ ಸಮಾಜ ಬಾಂಧವರು ಹೆಚ್ಚಿನ ಪ್ರೋತ್ಸಾಹವನ್ನು ನೀಡುವಂತೆ ವಿನಂತಿಸಿದರು. ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈರವರು ಮಾತನಾಡಿ ಬಂಟರ ಸಂಘದಿಂದ ಸಮಾಜದಲ್ಲಿ ಸಾಧನೆ ಮಾಡಿದವರು ತುಂಬಾ ಮಂದಿ ಇದ್ದಾರೆ ಅವರನ್ನು ಗುರುತಿಸಲು ಇನ್ನೂ ಹೆಚ್ಚಿನ ಮಂದಿ ದಾನಿಗಳು ಮುಂದೆ ಬರುವಂತೆ ವಿನಂತಿಸಿದರು. ಬಂಟರ ಯಾನೆ…
ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇಲ್ಲಿ ಪದಗ್ರಹಣ ಸಮಾರಂಭ ಮತ್ತು ಮಹಿಳಾ ವೇದಿಕೆಗೆ 25 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಮಾಜಿ ಅಧ್ಯಕ್ಷರುಗಳನ್ನು ಅಭಿನಂದಿಸುವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಚಿತ್ರಾ ಜೆ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ದಿವಂಗತ ಮಾಜಿ ಅಧ್ಯಕ್ಷೆ ಪುಷ್ಪಾ ಶೇಣವ ಅವರು ಮಹಿಳಾ ವೇದಿಕೆಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷರುಗಳಾದ ಅಂಜನಾ ಶೆಟ್ಟಿ, ಮಮತಾ ಶೆಟ್ಟಿ, ಆಶಾ ಆರ್ ಶೆಟ್ಟಿ, ಚಂದ್ರಕಲಾ ಬಿ ಶೆಟ್ಟಿ, ಬೇಬಿ ಎನ್ ಶೆಟ್ಟಿ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪುಷ್ಪ ಶೇಣವ ಅವರ ಸ್ಮರಣಿಕೆಯನ್ನು ಅವರ ಪುತ್ರಿ ಸರಾಯು ಶೆಟ್ಟಿ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ 2021-23 ನೇ ಸಾಲಿನಲ್ಲಿ ಅಧ್ಯಕ್ಷೆಯಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿರುವ ಚಿತ್ರಾ ಜೆ ಶೆಟ್ಟಿ ಅವರ ಸಂಘಟನಾ ಕಾರ್ಯವನ್ನು ಶ್ಲಾಘಿಸಿ ಸನ್ಮಾನಿಸಲಾಯಿತು. 2023-25 ನೇ ಸಾಲಿನ ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಅಧ್ಯಕ್ಷೆ ಭವ್ಯಾ…
ಈಗಾಗಲೇ ಹಲವಾರು ಚಿತ್ರೋತ್ಸವದಲ್ಲಿ ಪ್ರಶಂಸೆಗೆ ಒಳಗಾದ ಬಹ್ಮಕಮಲ ಸಿನಿಮಾಕ್ಕೆ ಮತ್ತೊಂದು ಗರಿ ಬಂದಿದೆ. ಹೌದು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಬ್ರಹ್ಮಕಮಲ ಚಿತ್ರ ಮಾಡಿದ್ದಾರೆ. ಬ್ರಹ್ಮಕಮಲ ಚಿತ್ರ ಬಿಡುಗಡೆಗೂ ಮುಂಚೆ ಸಾಕಷ್ಟು ಫಿಲ್ಮ್ ಫೆಸ್ಟಿವಲ್ಗಳಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸಿನಿ ವಿಮರ್ಶಕರ ಮೆಚ್ಚುಗಗೆ ಪಾತ್ರವಾಗಿದೆ. ಈಗಾಗಲೇ ಫ್ರಾನ್ಸ್ನಲ್ಲಿ ನಡೆದ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ, ಸಿಡ್ನಿಯ ವಂಡರ್ ಲ್ಯಾಂಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ, ನೇಪಾಳದ ಓಲ್ಡ್ ಮಂಕ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲೂ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಕೂಡ ಲಭಿಸಿದೆ. ಇಂಡೋ ಸಿಂಗಪುರ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅದ್ವಿತಿ ಶೆಟ್ಟಿಗೂ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ. ದಾದಾ ಸಾಹೇಬ್ ಫಾಲ್ಕೆ, ಅರುಣೋದಯ, ಕಲಕರಿ, ಚಲನಚಿತ್ರೋತ್ಸವಗಳನ್ನು…
ಈ ಬಾರಿ ಮಾತ್ರ ಚುನಾವಣೆಗೆ ನೀವೆಲ್ಲರೂ ಮತ ಕೇಳಲು ಜನರ ಬಳಿ ಹೋಗಿ ನನಗೆ ಜನರ ಸೇವೆ ಮಾಡಲು ಅವಕಾಶ ಮಾಡಿಕೊಡಿ. ಸತ್ಯದ ಹಾದಿಯಲ್ಲಿ ಅಭಿವೃದ್ಧಿ ಏನು ಎಂಬುವನ್ನು ಮಾಡಿ ತೋರಿಸುತ್ತೇನೆ. ಮುಂದಿನ 5 ವರ್ಷ ಬಿಟ್ಟು ಯಾರೂ ಕೂಡಾ ಮತ ಕೇಳಲು ಹೋಗುವುದು ಬೇಡ. ಜನ ಅಭಿವೃದ್ಧಿ ನೋಡಿ ಅವರೇ ಸ್ವಯಂ ಪ್ರೇರಿತವಾಗಿ ಮತದಾನ ಮಾಡುವಂತೆ ಕರ್ನಾಟಕದಲ್ಲಿ ಕಾರ್ಕಳದ ಚರಿತ್ರೆ ನಿರ್ಮಾಣ ಮಾಡುತ್ತೇನೆ ಎಂದು ಕಾರ್ಕಳ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು. ಅವರು ಪಳ್ಳಿ – ನಿಂಜೂರಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅಭಿನಂದನ್ ಶೆಟ್ಟಿ ಹಾಗೂ ಜಗದೀಶ್ ಪೂಜಾರಿ ಇವರ ಮುಂದಾಳತ್ವದಲ್ಲಿ 106 ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ಕಾರ್ಕಳ ಜನ ಬದಲಾವಣೆ ಬಯಸಿದ್ದಾರೆ ಎನ್ನುವುದು ಜನ ಬೆಂಬಲದಿಂದ ಗೊತ್ತಾಗುತ್ತಿದೆ. ಈಗಾಗಲೇ ಕಾರ್ಕಳ ಹಾಗೂ ಹೆಬ್ರಿ ಭಾಗದಲ್ಲಿ ನೂರಾರು ಬಿಜೆಪಿ…
ಬಂಟ ಸಮಾಜದ ಸಂಪ್ರದಾಯವನ್ನು ಉಳಿಸಿಕೊಂಡು ಹೋಗುವ ಕಾರ್ಯ ಅತಿ ಅಗತ್ಯವಾಗಿದ್ದು, ಗುತ್ತು ಮನೆತನದ ಗೌರವವನ್ನು ಉಳಿಸಿಕೊಂಡು ಬರುವ ಜವಾಬ್ದಾರಿ ಇದೆ. ಜಾಗತಿಕ ಬಂಟರ ಸಂಘದ ವತಿಯಿಂದ ಮನೆ ಕೊಡುವ ಕಾರ್ಯ, ಮಕ್ಕಳ ಶಿಕ್ಷಣ, ಆರೋಗ್ಯ, ವಿವಾಹಕ್ಕೆ ನೆರವು ನೀಡುವ ಕಾರ್ಯ ನಡೆಯುತ್ತಿದೆ ಎಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ತುಂಬೆ ವಳವೂರಿನ ಬಂಟವಾಳದ ಬಂಟರ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ್ವಾಳ ಬಂಟರ ಭವನದ ನಮ್ಮ ದೊಡ್ಡ ಶಕ್ತಿಯಾಗಿ ಕಂಗೊಳಿಸುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಉದ್ಯಮಿ ಏರ್ಯ ಬಾಲಕೃಷ್ಣ ಹೆಗ್ಡೆ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಅರಿಯುವ ಕಾರ್ಯ ಅಗತ್ಯವಾಗಿದ್ದು, ಮಕ್ಕಳಿಗೆ ಅದನ್ನು ಕಲಿಸುವ ಕಾರ್ಯ ಅತಿ ಅಗತ್ಯ ಎಂದರು. ಹುಬ್ಬಳ್ಳಿ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿ, ಬಂಟ್ವಾಳ ಬಂಟರ ಸಂಘ ಶಿಸ್ತಿನ ಮೂಲಕ ಖ್ಯಾತಿ…
‘ಪ್ರಪಂಚ ಇರುವುದು ಹೇಡಿಗಳಿಗಲ್ಲ; ಜೀವನದಲ್ಲಿ ಎದುರಾಗುವ ಸಕಲ ಸೋಲು – ಗೆಲುವುಗಳಿಗೆ ಬಗ್ಗದಿರಿ, ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳದೆ ಸ್ವಾರ್ಥ ರಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಯುವಕರಿಗೆ ಕರೆಕೊಟ್ಟ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಇಂದಿಗೂ ಯುವ ಜನಾಂಗದ ಸ್ಫೂರ್ತಿಯ ಚಿಲುಮೆಯಾಗಿ ಉಳಿದಿದ್ದಾರೆ. ಹಿಂದೂ ಧರ್ಮದ ಪುನರುಜ್ಜೀವನಕ್ಕೆ ಕಾರಣೀಭೂತರಾದ ಅವರು ರಾಷ್ಟ್ರೀಯತೆಗೆ ನೀಡಿದ ಕೊಡುಗೆ ಬಹುದೊಡ್ಡದು. ಸನ್ಯಾಸ ಧರ್ಮದ ವ್ಯಾಪ್ತಿಯನ್ನು ವಿಶೇಷವಾಗಿ ವ್ಯಾಖ್ಯಾನಿಸಿದ ವಿವೇಕಾನಂದರು, ಧರ್ಮ ಪಾಲನೆ ಎಂದರೆ ಏಕಾಂತದಲ್ಲಿ ಕುಳಿತು ಮಾಡುವ ತಪಸ್ಸಲ್ಲ; ಜನರ ನಡುವೆ ಇದ್ದುಕೊಂಡು ಜನರಿಗಾಗಿ ಸಮಸ್ತ ಶಕ್ತಿಯನ್ನು ವಿನಿಯೋಗಿಸುವುದು ಎಂದು ಸಾರಿದರು.ಈ ಸಮಾಜ ಯಜ್ಞಕ್ಕೆ ಅವರು ವಿಶೇಷ ಆಹ್ವಾನ ನೀಡಿದ್ದು ಯುವಕರಿಗೆ. ಆದ್ದರಿಂದಲೇ ಅವರು ಇಂದಿಗೂ ಯುವಕರಿಗೆ ಆದರ್ಶ ವ್ಯಕ್ತಿ..! ಬೆಳ್ತಂಗಡಿ ತಾಲೂಕಿಗೆ ಹರೀಶ್ ಪೂಂಜರ ಅನಿವಾರ್ಯತೆ ಮುಂದಿನ ಬಾರಿಗೆ ಅನಿವಾರ್ಯತೆಯ ಅನಿವಾರ್ಯತೆ ಖಂಡಿತ ಇದೆ. ಅವರ ಗೆಲುವು ಕೂಡ ಶತಸಿದ್ಧ. ಅವರ ಗೆಲುವಲ್ಲಿ ಎಲ್ಲರಂತೆಯೇ ನಾನು ಪಾಲುದಾರನಾಗಿರುತ್ತೀನಿ ಎನ್ನುವುದು ನನ್ನ ಮನಃಪೂರ್ವಕ ಧನ್ಯತೆಯು ಹೌದು.…
ಚೆಳ್ಯಾರು ಖಂಡಿಗೆಬೀಡು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಗಡಿಪ್ರಧಾನರಾದ ಆದಿತ್ಯ ಮುಕ್ಕಾಲ್ದಿ ಅವರು ಗಡಿ ಪ್ರಧಾನರಾಗಿ 30 ವರ್ಷಗಳಾಗಿದ್ದು ಅದರ ಬಗ್ಗೆ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಮೇ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಯಿತು. ಚೇಳ್ಯಾರು ಖಂಡಿಗೆಯಲ್ಲಿ ನಡೆದ ಸಭೆಯಲ್ಲಿ ಅಭಿನಂದನೆ ಸಮಿತಿ ಗೌರವಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿಯವರು ಸಮಾರಂಭದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ಅಭಿನಂದನ ಸಮಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಪಣಿಯೂರು ಅವರು ಮಾತನಾಡಿ ಅಭಿನಂದನ ಸಮಿತಿ ಕೈಗೊಂಡ ನಿರ್ಣಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಗಡಿ ಪ್ರಧಾನರಾದ ಆದಿತ್ಯ ಮುಕ್ಕಾಲ್ದಿ, ದೈವಸ್ಥಾನದ ಆಡಳಿತ ಸಮಿತಿ ಗೌರವಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಅಧ್ಯಕ್ಷರಾದ ದಯಾನಂದ ಶೆಟ್ಟಿ ಖಂಡಿಗೆ, ವಿಶುಕುಮಾರ್ ಪಡುಬಿದ್ರೆ ಸಮಿತಿ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಚೇಳ್ಯಾರು, ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಮುಂತಾದವರು ಉಪಸ್ಥಿತರಿದ್ದರು.
ಕಂಬಳ ಕ್ಷೇತ್ರದ ತಾರಾ ಓಟಗಾರ ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಅವರು ಮತ್ತೆ ಮಂಗಳೂರು ಕಂಬಳದಲ್ಲಿ ತಮ್ಮ ಪಾರಪತ್ಯ ಮೆರೆದಿದ್ದಾರೆ. ಮಂಗಳೂರು ಕಂಬಳದಲ್ಲಿ ಸತತ ಆರನೇ ಬಾರಿ ಫೈನಲ್ ಪ್ರವೇಶ ಮಾಡಿದ ನಿಶಾಂತ್ ಶೆಟ್ಟಿ ಸಾಧನೆ ಮೆರೆದರು. ಈ ಬಾರಿ ನಿಶಾಂತ್ ಅವರು ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ ಅವರ ಕೋಣಗಳನ್ನು ಓಡಿಸಿ ಪ್ರಥಮ ಸ್ಥಾನ ಬಾಚಿಕೊಂಡರು.ಇದು ಆರನೇ ವರ್ಷದ ಮಂಗಳೂರು ರಾಮ – ಲಕ್ಷ್ಮಣ ಕಂಬಳ ಕೂಟವಾಗಿದ್ದು, ಆರು ವರ್ಷವೂ ನಿಶಾಂತ್ ಶೆಟ್ಟಿ ಅವರು ಪದಕ ಗೆದ್ದಿರುವುದು ಹೆಚ್ಚುಗಾರಿಕೆ. ಬಂಗ್ರಕೂಳೂರಿನಲ್ಲಿ ನಡೆಯುವ ಕೂಟದಲ್ಲಿ ಅವರು ಮೂರು ಪ್ರಥಮ, ಮೂರು ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 29 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19…