Author: admin
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇವರ ಮಾರ್ಗದರ್ಶನದಲ್ಲಿ ಬಂಟರ ಸಂಘ ನೆಲ್ಯಾಡಿ ವಲಯ ಇದರ ಆಶ್ರಯದಲ್ಲಿ ಸೋಣದ ಪೊರ್ಲು-2023, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ನೂತನ ಸಮಿತಿಯ ಪದ ಪ್ರಧಾನ ಸಮಾರಂಭ ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆ ಅವರ ಅಧ್ಯಕ್ಷತೆಯಲ್ಲಿ ಸೆ.9ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಪ್ರಧಾನ ಕಚೇರಿಯ ಕಲ್ಪವೃಕ್ಷ ಸೌಹಾರ್ದ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಿತು. ಸಾಧಕರನ್ನು ಸನ್ಮಾನಿಸಿದ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಮಾತನಾಡಿ, ತಾಲೂಕು ಬಂಟರ ಸಂಘದ ಮಾದರಿಯಲ್ಲಿಯೇ ನೆಲ್ಯಾಡಿ ವಲಯ ಬಂಟರ ಸಂಘವೂ ಕಾರ್ಯಕ್ರಮ ಆಯೋಜನೆ ಮಾಡಿದೆ. ತಾಲೂಕು ಬಂಟರ ಸಂಘದಿಂದ ನೆಲ್ಯಾಡಿ ವಲಯಕ್ಕೆ ಮನೆ ನಿರ್ಮಾಣ ಸೇರಿದಂತೆ ಇತರೇ ಹಲವು ರೀತಿಯ ನೆರವು ನೀಡಲಾಗಿದೆ. ಇನ್ನಷ್ಟೂ ಉತ್ತಮ ಕಾರ್ಯಗಳ ಮೂಲಕ ನೆಲ್ಯಾಡಿ ವಲಯ ಬಂಟರ…
ಇತ್ತೀಚೆಗೆ ಮಾರುಕಟ್ಟೆಗಳಲ್ಲಿ ಜಂಕ್ ಫುಡ್ ಅತಿದೊಡ್ಡ ಸಂಖ್ಯೆಯಲ್ಲಿ ಇದ್ದು ಈಗಿನ ಯುವಕ ಯುವತಿಯರು ಈ ಆಹಾರಕ್ಕೆ ಮಾರು ಹೋಗಿ ಅತೀ ಸಣ್ಣ ಪ್ರಾಯದಲ್ಲೇ ಮಾರಕ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಮನೆ ಮದ್ದು, ಮನೆ ಅಡಿಗೆ ಈಗಿನ ಯುವ ಜನಾಂಗಕ್ಕೆ ಒಗ್ಗುವುದಿಲ್ಲ ಎಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮಂಗಳೂರು ಪ್ರಾಧ್ಯಾಪಕಿ ಮತ್ತು ಬಜ್ಪೆ ಮಹಿಳಾ ಬಂಟ್ಸ್ ಸಂಘದ ಅಧ್ಯಕ್ಷೆ ಪ್ರೊ. ಅಕ್ಷಯ ಆರ್. ಶೆಟ್ಟಿ ಹೇಳಿದರು. ಇವರು ಬಂಟರ ಸಂಘ (ರಿ ) ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ ಪಡುಬಿದ್ರಿ ಇದರ ಆಶ್ರಯದಲ್ಲಿ ಆಟಿದ ಕೂಟ ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಇವರು ತಮ್ಮ ಆಟಿ ತಿಂಗಳ ಬಗ್ಗೆ ಮಾತನಾಡಿ ಈ ತಿಂಗಳಲ್ಲಿ ಹೆಚ್ಚು ರೋಗ ಹರಡಿ ಹೆಚ್ಚಿನ ಜನರು ರೋಗಗ್ರಸ್ತರಾಗುವ ದಿನ. ಅದಕ್ಕಾಗಿ ನಮ್ಮ ಹಿರಿಯರು ಈ ತಿಂಗಳಲ್ಲಿ ಆಟಿ ಅಮಾವಾಸ್ಯೆ ದಿನ ಕಷಾಯ, ಮೆತ್ತೆ ಗಂಜಿ ಅಲ್ಲದೆ ನಮ್ಮ ಪರಿಸರದಲ್ಲಿ…
ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಸಮಾಜ ಸೇವಕ ಸೀತಾನದಿ ವಿಠ್ಠಲ ಶೆಟ್ಟಿಯವರು ಹೆಬ್ರಿ ತಾಲೂಕು ಮೇಲ್ ಜಡ್ಡು ಮನೆ ಸೀತಾನದಿಯಲ್ಲಿ ಹುಟ್ಟಿದರು. ಕೆಂಜೂರು ಬಡಾ ಮನೆ ದಿ.ಮಂಜಯ್ಯ ಶೆಟ್ಟಿ ಮತ್ತು ಶಿರಿಯಾರ ಮೇಲ್ಮನೆ ದಿ. ಗಿರಿಜ ಶೆಟ್ಟಿ ದಂಪತಿಗಳ ಪುತ್ರನಾಗಿ ಜನಿಸಿದ ಇವರು ಸೀತಾನದಿ ಮತ್ತು ಹೆಬ್ರಿಯಲ್ಲಿ ತಮ್ಮ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಶಿಕ್ಷಣವನ್ನು ಪೂರೈಸಿದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪದವಿ ಶಿಕ್ಷಣವನ್ನು ಮುಗಿಸಿ ಬೆಂಗಳೂರಿನ ವೈ. ಎಂ ಸಿ. ಎ ಕಾಲೇಜಿನಲ್ಲಿ ಸಿ. ಪಿ.ಎಡ್ ಪದವಿಯನ್ನು ಬೆಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಬಿ. ಪಿ.ಎಡ್ ಮತ್ತು ಯಂ.ಪಿ.ಎಡ್ ಪದವಿಯನ್ನು ಪಡೆದರು. ನಂತರ 20 ವರ್ಷಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ನೂರಾರು ಕ್ರೀಡಾಪಟುಗಳನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪ್ರಶಸ್ತಿಗಳನ್ನು ಪಡೆಯುವಲ್ಲಿ ತರಬೇತಿ ನೀಡಿದರು. ತನ್ನ ವೃತ್ತಿಯಲ್ಲಿ ಹಂತ ಹಂತವಾಗಿ ಭಡ್ತಿ ಹೊಂದಿ 17 ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ತಾಲೂಕು ದೈಹಿಕ…
ಕುಂದಾಪುರ ಕ್ಷೇತ್ರ ಎಂದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಎನ್ನುವಷ್ಟರ ಮಟ್ಟಿಗೆ ರಾಜಕೀಯವಾಗಿ ಹೆಗ್ಗುರುತು ಮೂಡಿಸಿದೆ. ಇದಕ್ಕೆ ಕಾರಣ ಹಾಲಾಡಿ ಅವರು ಚುನಾವಣೆಗೆ ನಿಂತ ಎಲ್ಲ ಸಂದರ್ಭಗಳಲ್ಲಿಯೂ ಜಯ ಸಾಧಿಸಿರುವುದು. ಹಾಲಾಡಿ ಅವರು ಪಕ್ಷದ ಚಿಹ್ನೆ ಅಡಿ ಮತ್ತು ಪಕ್ಷೇತರರಾಗಿಯೂ ಸ್ಪರ್ಧಿಸಿ ಜಯ ಸಾಧಿಸಿರುವುದು ವಿಶೇಷ. ಸಚಿವರಾಗಲಿಲ್ಲ : 5 ಬಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟರನ್ನು ಯಾವುದೇ ಸರಕಾರ ಸಚಿವರ ನ್ನಾಗಿಸಲಿಲ್ಲ. ಕುಂದಾಪುರ ಕ್ಷೇತ್ರಕ್ಕೆ ಈವರೆಗೆ ಸಚಿವ ಪದವಿ ದೊರೆಯಲಿಲ್ಲ. ಹಾಲಾಡಿ ಯವರು ಸಚಿವರಾಗುತ್ತಾರೆ ಎಂದೇ ಜನ ನಂಬಿದ್ದರು. ಅದಕ್ಕಾಗಿ ಅವರನ್ನು ಬೆಂಗಳೂರಿಗೂ ಕರೆಸಲಾಗಿತ್ತು. ಆದರೆ ಸಚಿವ ಪದ ದೊರೆಯಲಿಲ್ಲ. ಅವರು ಪಕ್ಷದಲ್ಲಿ ಮುಂದುವರಿಯಲಿಲ್ಲ. ಪಕ್ಷೇತರನಾಗಿ ಸ್ಪರ್ಧಿಸಿ ಮತದಾರರ ಒಲವನ್ನು ತೋರಿಸಿಕೊಟ್ಟರು. ಮರಳಿ ಬಿಜೆಪಿ ಸೇರಿ ಗೆದ್ದರು. ಸ್ಪರ್ಧೆ : 1999ರಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್ನ ಪ್ರತಾಪಚಂದ್ರ ಶೆಟ್ಟಿ ಅವರಿಗೆ, 2004ರಲ್ಲಿ ಕಾಂಗ್ರೆಸ್ನ ಅಶೋಕ್ ಕುಮಾರ್ ಹೆಗ್ಡೆ, 2008ರಲ್ಲಿ ಕಾಂಗ್ರೆಸ್ನ ಕೆ. ಜಯಪ್ರಕಾಶ್ ಹೆಗ್ಡೆ, 2013ರಲ್ಲಿ ಪಕ್ಷೇತರರಾಗಿ…
ಪ್ರಕೃತಿಯ ಮಡಿಲಲ್ಲಿ ರಮಣೀಯವಾಗಿ ಕಂಗೊಳಿಸುವ ತಾಣ ಕಾಂಬೋಡಿ ಒಳಗುಡ್ಡೆ ದೈವಸ್ಥಾನ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಕಾಂಬೋಡಿ ಒಳಗುಡ್ಡೆ ದೈವಸ್ಥಾನದ ಎತ್ತರದ ಗುಡ್ಡದಲ್ಲಿ ನೆಲೆನಿಂತು, ಭಕ್ತರ ಇಷ್ಟಾರ್ಥವನ್ನು ಕರುಣಿಸುತ್ತಾ ಕೂರಿಯಾಳ ಗ್ರಾಮಕ್ಕೆ “ದೈವಲ ಯಾನೇ, ದೇವೆರ್ಲ ಯಾನೇ” ಎಂಬ ಅಭಯವನ್ನಿತ್ತು, ಗ್ರಾಮದ ಜನರನ್ನು ಪೊರೆಯುವ ದೈವ “ಶ್ರೀ ಉಗ್ಗೆದಲ್ತಾಯ”. ಜನಪದದ ಆಯ ಮತ್ತು ದೈವದ ಸಂಧಿ-ಪಾಡ್ದನದ ಆಯದಲ್ಲಿ ನೋಡಿದಾಗ, ಈ ದೈವ ಕೂರಿಯಾಳ ಗ್ರಾಮದಲ್ಲಿ ನೆಲೆಗೊಂಡ ಐತಿಹ್ಯ, ದೈವದ ಪ್ರಸರಣೆ ಮತ್ತು ದೈವದ ಕಲೆ ಕಾರಣಿಕಗಳು ಹೀಗಿವೆ. ಸುಮಾರು ೯೦೦ ವರ್ಷಗಳ ಹಿಂದಿನ ಕಥೆ. ಮೊಗರನಾಡು ಸೀಮೆಯ ಜತ್ತಣ್ಣ ಬಾರಿ ಬಲ್ಲಾಳ ಎಂಬ ಜೈನ ಅರಸರು ತಮ್ಮ ಬೀಡಿನಲ್ಲಿ, ತಾವು ನಿತ್ಯ ಆರಾಧಿಸುತ್ತಾ ಬಂದ ದೈವ-ದೇವರ ಕೃಪೆಯಿಂದ ಬಹಳ ಚೆನ್ನಾಗಿ ರಾಜ್ಯಭಾರ ಮಾಡಿಕೊಂಡು ಬರುತ್ತಿದ್ದರು. ಆದರೆ ಅವರಿಗೆ ಒಂದು ಕೊರಗಿತ್ತು. ಮದುವೆಯಾಗಿ ಅನೇಕ ವರ್ಷಗಳು ಉರುಳಿದರೂ, ಅವರಿಗೆ ಮಕ್ಕಳಾಗಳಿಲ್ಲ. ಆ ನೋವು ಅವರನ್ನು ಯಾವಾಗಲೂ ಕಾಡುತ್ತಿತ್ತು. ಒಂದು…
ಭೂಮಿಯ ತಾಪಮಾನ ಇತ್ತೀಚೆಗೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು ಅದರಲ್ಲೂ ದಕ್ಷಿಣ ಕನ್ನಡದ ತಾಪಮಾನ ದಾಖಲೆಯ ಗರಿಷ್ಠ ಉಷ್ಣತೆ 39.5 ಡಿಗ್ರಿ ಸೆಲ್ಸಿಯಸ್ ಮಾರ್ಚ್ ಒಂದರಂದು ದಾಖಲಾಗಿದೆ. ದಿನೆ ದಿನೆ ತಾಪಮಾನ ಏರಿಕೆ ಕಂಡು ಬರುತ್ತಿದ್ದು ಕರಾವಳಿಗರು ಬಿಸಿಗಾಳಿ, ನೆತ್ತಿ ಸುಡುವ ಬಿಸಿಲ ಹೊಡೆತ್ತಕ್ಕೆ ತತ್ತರಿಸಿ ಕಂಗಾಲಾಗಿದ್ದಾರೆ. ಈಗಿಂದಲೇ ಪ್ರಾಕೃತಿಕ ಸಮತೋಲನ ಕಾಯ್ದು ಕೊಳ್ಳುವತ್ತ ಚಿತ್ತಹರಿಸಬೇಕಾದ ಅಗತ್ಯವಿದೆ. ದಿನದಿಂದ ದಿನಕ್ಕೆ ಹವಾಮಾನ ವೈಪರೀತ್ಯವೂ ಜನಜೀವನದ ಮೇಲೆ ಅಡ್ಡ ಪರಿಣಾಮ ಬೀರಿದೆ. ತಾಪಮಾನ ಏರಿಕೆಯ ಹದಗೆಟ್ಟ ವಾತಾವರಣದ ಪರಿಣಾಮದಿಂದ ಪರಿಸರ ಸಂರಕ್ಷಿಸದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ. ಪ್ರಕೃತಿಯ ಸಮತೋಲನಕ್ಕೆ ಪರಿಸರ ರಕ್ಷಣೆ ಪೂರಕ. ಪರಿಸರವನ್ನು ನಾವು ಅವಲಂಬಿಸಿದ್ದೇವೆಯೆ ಹೊರತು ಅದು ನಮ್ಮನ್ನು ಅವಲಂಬಿಸಿಲ್ಲ ಎಂಬುದನ್ನು ಮೊದಲು ಗಮನಿಸಿಕೊಳ್ಳಬೇಕು. ಭೂರಮೆಯ ಒಡಲು ವಿಸ್ಮಯಗಳ ಆಗರ ಆದರೆ ಮಾನವನ ಅತಿ ಆಸೆಯಿಂದ ಪ್ರಕೃತಿಯ ಮೇಲಿನ ವಿಧ್ವಂಸಕ ಕೃತ್ಯಗಳು ಮಿತಿ ಮೀರಿ ಅಕ್ರಮಣವಾಗುತ್ತಿದ್ದು ಎಲ್ಲವನ್ನು ಸಹಿಸಿಕೊಂಡ ಭೂಮಿ ಜೀವರಾಶಿಗಳನ್ನು ಕಾಪಾಡಿಕೊಂಡು ಬರುತ್ತಿದೆಯಾದರೂ ಒಂದಲ್ಲ ಒಂದು ರೂಪದಲ್ಲಿ ಆಕ್ರಮಿಸಿ…
ಯಕ್ಷಗಾನ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ. ತೆಂಕು ಮತ್ತು ಬಡಗುತಿಟ್ಟಿಗೆ ಸಮಾನ ಪ್ರೇಕ್ಷಕರು ಇರುವ ಜಾಗ ಉಡುಪಿ. ಇಂತಹ ಕೇಂದ್ರ ಸ್ಥಾನದಲ್ಲಿ ಮೊದಲ ಸಮ್ಮೇಳನ ನಡೆಯುತ್ತಿರುವುದು ಅರ್ಥಪೂರ್ಣ. ಕಾಲಕ್ಕೆ ತಕ್ಕಂತೆ ಯಕ್ಷಗಾನ ಕ್ಷೇತ್ರದಲ್ಲೂ ಮಾರ್ಪಾಡು ಅವಶ್ಯ. ಆದರೆ ಬದಲಾವಣೆಗಳು ಯಕ್ಷಗಾನದ ಮೂಲಸತ್ವಕ್ಕೆ ಧಕ್ಕೆಯಾಗದೆ ರೀತಿಯಲ್ಲಿ ನಿರ್ದಿಷ್ಟ ಚೌಕಟ್ಟಿನಲ್ಲಿರಬೇಕು ಎಂದು ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು. ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದಲ್ಲಿ ಸಾಧಕರನ್ನು ಸಮ್ಮಾನಿಸಿ ಅವರು ಆಶೀರ್ವಚನ ನೀಡಿದರು. ವೇದ, ಪುರಾಣ, ಇತಿಹಾಸ ಭಾರತೀಯ ಸಂಸ್ಕೃತಿಯ ಜೀವಾಳ. ಇದು ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತಗೊಳ್ಳದೆ ಯಕ್ಷಗಾನ ಮಾಧ್ಯಮ ಜನಸಾಮನ್ಯರಿಗೆ ತಲುಪುವಂತಾಗಿದೆ. ಪೌರಾಣಿಕ ಪಾತ್ರಗಳ ಚಿತ್ರಣಗಳನ್ನು ಕಣ್ಣಿಗೆ ಕಟ್ಟುವಂತೆ ಮೂಡಿಸುವ ಜವಾಬ್ದಾರಿ ಕಲಾವಿದರಿಗಿದೆ ಎಂದರು. ಯಕ್ಷಗಾನ ಕಲಾವಿದರು ಶಿಲ್ಪಿಯಂತೆ ವಿಗ್ರಹ ಸುಂದರವಾಗಿ ಮೂಡಲು ಶಿಲ್ಪಿಯಲ್ಲಿ ಅಸಾಧಾರಣ ಪ್ರತಿಭೆ ಇರಬೇಕು. ಕಲಾವಿದರು ಎಷ್ಟು ಪಾತ್ರ ಮಾಡಿದರೂ ವಿಭಿನ್ನತೆ ಇರುತ್ತದೆ. ಹೀಗಾಗಿ ಯಕ್ಷಗಾನ ಜೀವಂತ ಕಲೆಯಾಗಿದೆ. ಸರಕಾರ, ಸಂಘ-ಸಂಸ್ಥೆಗಳ ವತಿಯಿಂದ ಕಲೆಗೆ…
ದೇಶದ ವಿವಿಧ ಭಾಷಿಕ ಸಮುದಾಯಗಳಿಗೆ ಹೋಲಿಸಿದರೆ ಕನ್ನಡ ಭಾಷಿಕ ಸಮುದಾಯದಲ್ಲಿ ಔದ್ಯಮಿಕ ಮನಸ್ಸುಗಳು ಕಡಿಮೆ ಎಂಬ ಮಾತು ಇದೆ. ಒಂದು ಹಂತದ ಮಟ್ಟಿಗೆ ಇದು ನಿಜವೂ ಹೌದು. ಆದರೆ, ಅಚ್ಚ ಕನ್ನಡದ ಪುಟ್ಟ ಹಳ್ಳಿಯೊಂದರಲ್ಲಿ ಜನಿಸಿ ನಾಡಿನ ದೊಡ್ಡ ಉದ್ಯಮಿಯಾಗಿ ಬೆಳೆದು ನಿಂತ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು ರಾಮ ನಾಗಪ್ಪ ಶೆಟ್ಟಿ. ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ, ಆರ್ ಎನ್ ಶೆಟ್ಟಿ ಅವರ ಹುಟ್ಟೂರು. ಇಂದು ಅದು ನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದಾದರೆ ಅದಕ್ಕೆ ಮುಖ್ಯ ಕಾರಣ ಆರ್ ಎನ್ ಶೆಟ್ಟಿ ಅವರ ಕರ್ತೃತ್ವ ಶಕ್ತಿ. ಆರ್.ಎನ್. ಶೆಟ್ಟಿ ಸಮೂಹದ ಮೂಲಕ ಆರ್ ಎನ್ ಶೆಟ್ಟಿ ಅವರು ಉದ್ಯೋಗವನ್ನೂ ನೀಡಿದರು, ಆ ಸಮೂಹದ ಮೂಲಕ ದುಡಿದ ಹಣವನ್ನು ಸಮಾಜಕ್ಕೆ ದಾನದ ರೂಪದಲ್ಲಿಯೂ ಕೊಟ್ಟರು. ಕನ್ನಡ ನಾಡಿನಲ್ಲಿ ಉದ್ಯಮಿಯಾಗಿ, ಉದ್ಯೋಗಶೀಲ ವ್ಯಕ್ತಿಯಾಗಿ, ಉದ್ಯೋಗದಾತರಾಗಿ, ಉದ್ಯೋಗಾರ್ಹತೆ ನೀಡಬಲ್ಲ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುವವರಾಗಿ, ವಾಸ್ತುಶಿಲ್ಪಿಯಾಗಿ ದೊಡ್ಡ ಹೆಸರು ಮಾಡಿದವರು ಆರ್ ಎನ್…
ಬ್ರಹ್ಮಾವರ ನ. 10: ಮಕ್ಕಳು ದೇವರ ಅದ್ಭುತ ಸೃಷ್ಟಿ. ನಮ್ಮ ಜೀವನದಲ್ಲಿ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶಿಸ್ತಿನಿಂದ ಪ್ರಯತ್ನಪಟ್ಟರೆ ಎಲ್ಲವನ್ನೂಸಾಧಿಸಬಹುದು. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಫಲಿತಾಂಶವು ಅತ್ಯುತ್ತಮವಾಗಿರುತ್ತದೆ ಎಂದು ದೀಪಾ ಭಂಡಾರಿಯವರು ಹೇಳಿದರು. ಅವರು ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಚಿಣ್ಣರ ಹಬ್ಬವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಈ ಜಗತ್ತಿನಲ್ಲಿ ಮಕ್ಕಳನ್ನು ಅವರ ನಗುವನ್ನು ಇಷ್ಟಪಡದವರು ಯಾರೂ ಇಲ್ಲ. ಇಂದು ಮಕ್ಕಳೆಲ್ಲರೂ ವರ್ಣ, ಚಿತ್ತಾರಗಳ ಬಟ್ಟೆಗಳಲ್ಲಿ ಕಾಮನಬಿಲ್ಲಿನಂತೆ ಪ್ರಕಾಶಿಸುತ್ತಿದ್ದಾರೆ ಎಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಕ್ಕಳಿಗೆಲ್ಲ ಶುಭ ಹಾರೈಸಿ ಪ್ರತಿಯೊಬ್ಬರಲ್ಲೂ ಒಂದು ಮಗುವಿನ ಮನಸ್ಸಿರುತ್ತದೆ ಆದರೆ ಕೆಲಸದ ಒತ್ತಡದಲ್ಲಿ ಅದನ್ನು ಅಭಿವ್ಯಕ್ತಿಪಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಮಕ್ಕಳೆಲ್ಲರೂ ತಮ್ಮ ಬಾಲ್ಯವನ್ನು ಅಹ್ಲಾದಿಸಬೇಕು. ಜೊತೆಯಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕೆಂದರು. ಶಾಲಾ ಶಿಕ್ಷಕರ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳ ಪ್ರತಿಭಾ ಪ್ರದರ್ಶನ…
ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಉದ್ಯಮಿ, ಪೂರ್ಣಶ್ರೀ ಫರ್ನಿಚರ್ಸ್ ಮಾಲೀಕ ರವೀಂದ್ರ ವಿ. ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ಅಮೃತರಾಜ್ ರವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ಕೆ. ಎಸ್. ನಾಗೇಶ್ ಆಯ್ಕೆಯಾಗಿದ್ದಾರೆ. ರವೀಂದ್ರ ರೈ ಅವರು ಈ ಮೊದಲು ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.