Author: admin
ಯಾರಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದು ಇಷ್ಟವಿಲ್ಲ ಹೇಳಿ? ಈ ದಿನ, ಪುಟ್ಟ ಮಕ್ಕಳಿಗಂತೂ ಸಂಭ್ರಮ ಹೇಳತೀರದು! ಹುಟ್ಟಿದ ದಿನವನ್ನು ಹಬ್ಬವನ್ನಾಗಿ ಆಚರಿಸುವುದು ಮೊದಲಿನಿಂದಲೂ ರೂಢಿಯಲ್ಲಿದೆ. ಹಿಂದೂ ಸಂಸ್ಕೃತಿಯಲ್ಲಿ ಈ ಆಚರಣೆಯು ಧಾರ್ಮಿಕ ಪದ್ಧತಿಯಲ್ಲಿ ಆಚರಿಸಲ್ಪಡುತ್ತಿತ್ತು. ಆದರೆ ಇತ್ತೀಚೆಗೆ ಎಲ್ಲದರಂತೆ ಅದರ ಮೇಲೂ ಆಂಗ್ಲ ಸಂಸ್ಕೃತಿಯ ಹಾವಳಿ ತೀವ್ರವಾಗಿ ಆಗಿರುವುದನ್ನು ಕಾಣಬಹುದು. “ಹೆಪ್ಪಿ ಬರ್ತ್ ಡೇ..” ಎಂದು ಶುಭಾಶಯ ಹೇಳುವುದು ಸಾರ್ವತ್ರಿಕವಾಗಿ ನಡೆಯುತ್ತಿದೆ. ಕೇಕ್ ಕತ್ತರಿಸಿ, ಉರಿಯುವ ಮೇಣದ ಬತ್ತಿಯನ್ನು ಆರಿಸಿ ಸಂಭ್ರಮಿಸುವುದೇ ಹುಟ್ಟುಹಬ್ಬದ ನಿಜವಾದ ಆಚರಣೆ ಎನ್ನುವಷ್ಟು ಎಲ್ಲರ ಜೀವನದಲ್ಲಿ ಇದು ಹಾಸುಹೊಕ್ಕಾಗಿದೆ. ಹಿಂದೂ ಪದ್ಧತಿಯಲ್ಲಿ ಹಿರಿಯರ ಜನ್ಮದಿನದ ಆಚರಣೆಯು ಬಹಳ ಅರ್ಥವತ್ತಾಗಿ ನಡೆಯುತ್ತದೆ. ಆ ದಿನ ಕಿರಿಯರೆಲ್ಲರೂ ಅವರ ಆಶೀರ್ವಾದ ಪಡೆದು, ಮನೆಯವರೆಲ್ಲರೂ ಸಿಹಿಯೂಟ ಉಂಡು ಸಂಭ್ರಮಿಸುವರು. ಕಿರಿಯರಾದರೆ, ಹೊಸಬಟ್ಟೆ ಧರಿಸಿ, ದೀಪ ಬೆಳಗಿದ ದೇವರೆದುರು ಕುಳಿತಾಗ ಆ ಮಗುವಿನ ಹೆತ್ತವರು ಆರತಿ ಬೆಳಗುವರು. ಆ ಬಳಿಕ ಹಿರಿಯರ ಆಶೀರ್ವಾದದೊಂದಿಗೆ ತಮ್ಮಿಷ್ಟದ ಉಡುಗೊರೆಗಳನ್ನು ಪಡೆದು ಸಿಹಿಯುಂಡು ನಲಿಯುವರು. ಇಂದು ಸಮಾಜ…
ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್ರ ಬಗ್ಗೆಯೂ ಕೇಳಿದ್ದೆವು. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ. ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ. ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈವರೆಗೆ ಪ್ರಚಾರ ಮಾಡಿದ್ದೂ ಇಲ್ಲ. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ. ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ…
ಹೈಕೋರ್ಟು ನ್ಯಾಯಮೂರ್ತಿಯಾಗಿ ರಾಜೇಶ್ ರೈ ಕಲ್ಲಂಗಳ ಅವರು ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯ ಪಾಲರಿಂದ ಮುಖ್ಯಮಂತ್ರಿಗಳ ಮತ್ತು ಮುಖ್ಯ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟು ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಅವರಿಗೆ ಜಯಕರ್ನಾಟಕ ಸಂಘಟನೆಯ ಕೃಷ್ಣಾನಂದ ಶೆಟ್ಟಿ ಅವರು ಅವರ ಕಚೇರಿಗೆ ತೆರಳಿ ಶುಭ ಹಾರೈಸಿದರು. ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕಲ್ಲಂಗಳ ನಿವಾಸಿಯಾಗಿರುವ ರಾಜೇಶ್ ರೈ ಕಲ್ಲಂಗಳ (48) ಅವರು ಹೈಕೋರ್ಟು ನ್ಯಾಯಮೂರ್ತಿಯಾಗಿ ಅತೀ ಸಣ್ಣ ವಯಸ್ಸಿನಲ್ಲಿ ಆಯ್ಕೆಗೊಂಡು, ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರಥಮ ಹಾಗೂ ಅತೀ ಚಿಕ್ಕ ವಯಸ್ಸಿನ ಹೈಕೋರ್ಟು ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ನೇರವಾಗಿ ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಮೊದಲಿಗರಾಗಿದ್ದಾರೆ. ರಾಜೇಶ್ ರೈ ಕಲ್ಲಂಗಳ ಅವರು ಬಾಲ್ಯದಿಂದಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಮಾಜಪರ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡವರು. ಕಲಾಪೋಷಕರಾಗಿರುವ ಇವರು ಯಕ್ಷಗಾನ ಮತ್ತು…
ಇಂದು ಎಲ್ಲರ ಮನೆಯಲ್ಲೂ ಸಕ್ಕರೆ ಕಾಯಿಲೆ ತಳ ಊರಿದೆ. ಹೊತ್ತು ಹೊತ್ತಿಗೆ ಮಾತ್ರೆ, ವ್ಯಾಯಾಮ, ಪಥ್ಯ- ಇವು ಶುಗರ್ ಪೇಷೆಂಟ್ಗಳನ್ನು ಹೈರಾಣಗೊಳಿಸಿದೆ. ಒಮ್ಮೆ ಶುಗರ್ ಬಂದ್ರೆ ಜೀವ ಇರುವ ತನಕ ಹೋಗೋದೇ ಇಲ್ಲ ಎಂಂದು ಎಲ್ಲರೂ ನಂಬಿದ್ದಾರೆ. ಆದರೆ, ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಅವರು ಮಧುಮೇಹವನ್ನು ಸಂಪೂರ್ಣವಾಗಿ ಗೆದ್ದಿದ್ದಾರೆ. ತಮ್ಮ ದೇಹವನ್ನೇ ಪ್ರಯೋಗಕ್ಕೆ ಗುರಿಪಡಿಸಿ, ‘ರಿವರ್ಸ್ ಡಯಾಬಿಟಿಸ್’ ಅಳವಡಿಸಿಕೊಂಡು ಈ ಸಾಧನೆ ಮಾಡಿದ್ದಾರೆ. ಶೆಟ್ಟರು ಆ ರಹಸ್ಯವನ್ನು ಇಲ್ಲಿ ತೆರೆದಿಟ್ಟಿದ್ದಾರೆ… ಇಂದು ಎಲ್ಲರ ಮನೆಯಲ್ಲೂ ಸಕ್ಕರೆ ಕಾಯಿಲೆ ತಳ ಊರಿದೆ. ಹೊತ್ತು ಹೊತ್ತಿಗೆ ಮಾತ್ರೆ, ವ್ಯಾಯಾಮ, ಪಥ್ಯ- ಇವು ಶುಗರ್ ಪೇಷೆಂಟ್ಗಳನ್ನು ಹೈರಾಣಗೊಳಿಸಿದೆ. ಒಮ್ಮೆ ಶುಗರ್ ಬಂದ್ರೆ ಮತ್ತೆ ಹೋಗೋದೇ ಇಲ್ಲ ಎಂದು ಎಲ್ಲರೂ ನಂಬಿದ್ದಾರೆ. ಆದರೆ, ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಅವರು ಮಧುಮೇಹವನ್ನು ಸಂಪೂರ್ಣವಾಗಿ ಗೆದ್ದಿದ್ದಾರೆ. ತಮ್ಮ ದೇಹವನ್ನೇ ಪ್ರಯೋಗಕ್ಕೆ ಗುರಿಪಡಿಸಿ, ‘ರಿವರ್ಸ್ ಡಯಾಬಿಟಿಸ್’ ಅಳವಡಿಸಿಕೊಂಡು ಈ ಸಾಧನೆ ಮಾಡಿದ್ದಾರೆ. ಶೆಟ್ಟರು…
ಪುರಾಣ ಪ್ರಸಿದ್ಧ ಐತಿಹಾಸಿಕ ಹಿನ್ನಲ್ಲೆಯುಳ್ಳ ಕೋಟದ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಇದರ ವಾರ್ಷಿಕ ಮನ್ಮಹಾರಥೋತ್ಸವ ಕಾರ್ಯಕ್ರಮ ಇದೇ ಬರುವ ಫೆ.5 ಮತ್ತು 6 ರಂದು ನಡೆಯಲಿದ್ದು ಆ ಪ್ರಯುಕ್ತ ಜಾತ್ರೋತ್ಸವಕ್ಕೆ ವಿಶೇಷ ಮೆರುಗು ನೀಡಯವ ಉದ್ದೇಶದಿಂದ ಹಿರೇಮಹಾಲಿಂಗೇಶ್ವರ ಮಿತ್ರ ವೃಂದದ ವತಿಯಿಂದ 4ದಿನಗಳ ಕಾಲ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಿತ್ರ ವೃಂದದ ವತಿಯಿಂದ ನಡೆಯುವ 47ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ ಫೆ.3 ಶುಕ್ರವಾರ ಸಂಜೆ 6.00ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ ದೊರಕಲಿದ್ದು ಅದೇ ದಿನ ಸೇವಾ ಸಂಗಮ ಶಿಶು ಮಂದಿರ ಕೋಟ ಬಾಲ ಗೋಕುಲ ಪುಟಾಣಿಗಳಿಂದ ಕಾರ್ಯಕ್ರಮ ವೈವಿದ್ಯ ,ರಾತ್ರಿ 9.00ಕ್ಕೆ ಶಿವಾನಿ ಮ್ಯುಸಿಕಲ್ ಇವರಿಂದ ಸಂಗೀತ ರಸಮಂಜರಿ, ಫೆ.4ರಂದು ಶನಿವಾರ ಸಂಜೆ 7ಗ ಹಿರೇಮಹಾಲಿಂಗೇಶ್ಚರ ಮಿತ್ರವೃಂದ ಮಕ್ಕಳಿಂದ ನೃತ್ಯ ಸಿಂಚನ,ರಾತ್ರಿ 9ಕ್ಕೆ ಓಂಕಾರ್ ಕಲಾವಿದರು ಕನ್ನುಕೆರೆ ತೆಕ್ಕಟ್ಟೆ ಇವರಿಂದ ಹಾಸ್ಯಮಯ ನಗೆ ನಾಟಕ ಅಗೋಚರ, ಫೆ.5ರಂದು ರಥೋತ್ಸವದ ಅಂಗವಾಗಿ ಮಹಾ ಅನ್ನಸಂತರ್ಪಣೆ ಹಾಗೂ ರಥೋತ್ಸವದಲ್ಲಿ ವಿಶೇಷ ಆಕರ್ಷಕ…
ಮೂಲತಃ ಮೃದು ಸ್ವಭಾವದ ವ್ಯಕ್ತಿ, ಯಶ್ ಶೆಟ್ಟಿ ಜ್ವಲಂತಂನಲ್ಲಿ ಅಘೋರ ಪಾತ್ರದ ನಂತರ ಪ್ರಸಿದ್ಧಿಯಾದರು. ಅಂದಿನಿಂದ ಅವರು 30 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹೆಚ್ಚಾಗಿ ನೆಗೆಟಿವ್ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಯಶ್ ಶೆಟ್ಟಿ ತಮ್ಮ ನಿಜ ಜೀವನದ ವ್ಯಕ್ತಿತ್ವಕ್ಕೆ ವ್ಯತಿರಿಕ್ತವಾಗಿ ಪಾತ್ರಗಳನ್ನು ಚಿತ್ರಿಸಲು ಇಷ್ಟಪಡುತ್ತಾರಂತೆ. ಸೂಜಿದಾರ, ಮತ್ತು ಧರಣಿ ಮಂಡಲ ಮದ್ಯದೊಳಗೆ ಚಲನಚಿತ್ರಗಳಲ್ಲಿ ಪೋಷಕ ನಟನೆಗಳಿಗೆ ಹೆಸರುವಾಸಿಯಾಗಿದ್ದಾರೆ. ನಾನು ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಓದಿದಾಗ ನೆಗೆಟಿವ್ ಪಾತ್ರಗಳತ್ತ ನನ್ನ ಒಲವು ಶುರುವಾಯಿತು. ನಾಟಕಗಳಲ್ಲಿ ನಟಿಸುವಾಗ, ಸಕಾರಾತ್ಮಕ ಪಾತ್ರಗಳಿಗಿಂತ ಭಿನ್ನವಾಗಿ, ನಕಾರಾತ್ಮಕ ಪಾತ್ರಗಳು ವೈವಿಧ್ಯಮಯ ಭಾವನೆಗಳನ್ನು ಹೊರಹಾಕಲು ನಿಮಗೆ ಅನುವು ಮಾಡಿಕೊಡುತ್ತದೆ ಎಂದು ನಾನು ಭಾವಿಸಿದೆ ಎನ್ನುತ್ತಾರೆ ಯಶ್ ಶೆಟ್ಟಿ. ವಜ್ರಮುನಿ ಮತ್ತು ಪ್ರಕಾಶ್ ರಾಜ್ ಅವರಂತಹ ಬಹುಮುಖ ನಟರ ದೊಡ್ಡ ಅಭಿಮಾನಿ ಯಶ್ ಶೆಟ್ಟಿ. ಕೆರಿಯರ್ನಲ್ಲಿ ನಾನು ಪ್ರಕಾಶ್ ರಾಜ್ ಅವರನ್ನು ಅನುಸರಿಸುತ್ತೇನೆ. ಅವರು ಕೇವಲ ಖಳನಾಯಕನ ಪಾತ್ರದಲ್ಲಿ ಪ್ರಸಿದ್ಧರಾಗಿರುವ ನಟನ ಅತ್ಯುತ್ತಮ ಉದಾಹರಣೆಯಾಗಿದ್ದಾರೆ, ಆದರೆ ಕುಟುಂಬದ ಸದಸ್ಯ ಮತ್ತು ಸ್ನೇಹಿತ…
ಪುಣೆ ಬಂಟರ ಸಂಘದ ಮಹಾಸಭೆಯು ಇತ್ತೀಚಿಗೆ ಮಾ 21 ರಂದು ಬಂಟರ ಭವನದಲ್ಲಿ ನಡೆದಿದ್ದು ಸಂಘದ ಮುಂದಿನ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಗಾಗಿ 25 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು . ಏಪ್ರಿಲ್ 1 ರಂದು ಈ ಬಗ್ಗೆ ವಿಶೇಷ ಸಭೆಯೊಂದನ್ನು ಬಂಟರ ಭವನದಲ್ಲಿ ಆಯೋಜಿಸಲಾಗಿತ್ತು . ಕಳೆದೆರಡು ವರ್ಷಗಳ ಕಾಲ ಕೊರೋನಾ ಮಹಾಮಾರಿಯಿಂದಾಗಿ ಸಂಘದ ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಸಂಘದ ಹೆಚ್ಚಿನ ಕೆಲಸ ಕಾರ್ಯಗಳು ನಡೆದಿರಲಿಲ್ಲ . ಅದಕ್ಕಾಗಿ ಮುಂದಿನ ಅವಧಿಗೆ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಅವರನ್ನು ಸದಸ್ಯರು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು . ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್ ಶೆಟ್ಟಿಯವರನ್ನು ಪುನರಾಯ್ಕೆ ಗೊಳಿಸಲಾಯಿತು .ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಉದಯ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು . ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಗಣೇಶ್ ಪೂಂಜಾ ಪುನರಾಯ್ಕೆಗೊಂಡರೆ ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಶೇಖರ್ ಸಿ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು . ಈ ಸಂದರ್ಭ ಸಂತೋಷ್ ಶೆಟ್ಟಿಯವರು…
ಮನೋನಿಶ್ಚಯ ಉಳ್ಳವರಿಗೆ, ಪ್ರಯತ್ನಶೀಲರಿಗೆ ದುಸ್ತರವಾದುದು ಈ ಲೋಕದಲ್ಲಿ ಯಾವುದೂ ಇಲ್ಲ. ಈ ಸಂಸಾರದಲ್ಲಿ ನಿಶ್ಚಿತವೆಂಬುದು ಯಾವುದೂ ಇಲ್ಲ. ಜೀವನ ಚಕ್ರ ಉರುಳುತ್ತಲೇ ಇರುತ್ತದೆ. ಕರ್ಮಫಲವನ್ನು ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಶರ ಮಂಚದಲ್ಲಿ ಮಲಗಿರುವಾಗ ಹೇಳುತ್ತಾನೆ, ಮನುಷ್ಯನಿಗೆ ಗ್ರಹಸ್ಥಾಶ್ರಮವೇ ಬೇರೆಲ್ಲಾ ಆಶ್ರಮಗಳಿಗಿಂತ ಪುಣ್ಯತಮವಾದ ಸಿದ್ಧಿಕ್ಷೇತ್ರ. ಕಾಲಚಕ್ರದ ಸುಳಿಯಲ್ಲಿ ಮಾನವನ ಸುಖ, ಅಧಿಕಾರ, ಧನ, ಕಷ್ಟ, ನಷ್ಟ, ಬಡತನ, ಸಿರಿತನ ಯಾವುದೂ ಸ್ಥಿರವಲ್ಲ. ಮನುಷ್ಯ ಸುಖ ಬಂದಾಗ ಸೊಕ್ಕಿ ಮೆರೆಯುತ್ತಾನೆ. ಕಷ್ಟ ಬಂದಾಗ ಅರಗಿನಂತೆ ಕರಗಿ ಹೋಗುತ್ತಾನೆ. ಹಗಲು, ರಾತ್ರಿಗಳಂತೆ ನಮ್ಮ ಜೀವನದಲ್ಲಿ ಬಂದು ಹೋಗತಕ್ಕ ಇವನ್ನು ನಾವು ಹಗಲು ರಾತ್ರಿ ಸಂತೊಗ್ಗಿಸಿಕೊಂಡಂತೆ ಒಗ್ಗಿಸಿಕೊಳ್ಳಲಾಗದು. ಗಾಡಿಯ ಎರಡು ಚಕ್ರಗಳಂತೆ ಮಾನವನ ಭಾಗ್ಯ – ದುರ್ಭಾಗ್ಯಗಳೆರಡೂ ಉರುಳುತ್ತಿರುತ್ತದೆ. ಈ ಉರುಳಾಟ ಯಾರೊಬ್ಬ ವ್ಯಕ್ತಿಯನ್ನೂ ಬಿಟ್ಟಿಲ್ಲ. ಆದರೆ ಮನಸಿದ್ದರೆ ಮಾರ್ಗವೂ ಇದೆ. ಮಾರ್ಗದರ್ಶಕರೂ ಇದ್ದಾರೆ. ಸೃಷ್ಟಿಕರ್ತನಾದ ದೇವರು ನಮಗೆ ಈ ಅಮೂಲ್ಯವಾದ ಮಾನವ ಬದುಕನ್ನು ಕೊಟ್ಟು ಅದರೊಟ್ಟಿಗೆ ಮಾನವನಿಗೆ ಚಿಂತನೆ, ಮಂಥನ…
ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ 19ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಶಾಲೆಯ ಸುಸಜ್ಜಿತ ಕ್ರೀಡಾಂಗಣ ಜಿ ಎಮ್ ಅರೆನಾದಲ್ಲಿ ನವೆಂಬರ್ 4ರಂದು ನಡೆಯಿತು. ಕ್ರೀಡಾಕೂಟದ ಮುಖ್ಯ ಅತಿಥಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜೀವನ್ ಕುಮಾರ್ ಶೆಟ್ಟಿ ಕ್ರೀಡಾಜ್ಯೋತಿಯನ್ನು ಬೆಳಗಿ, ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಜಿ ಎಮ್ ಸಂಸ್ಥೆಯ ಹೊರಾಂಗಣ ವ್ಯವಸ್ಥೆಯನ್ನು ನೋಡುವಾಗ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟದ ಅನುಭವವಾಗುತ್ತಿದೆ. ಕ್ರೀಡೆ ಎಂದರೆ ಒಂದು ವಿಜ್ಞಾನ. ಕ್ರೀಡಾಪಟುಗಳು ಸೈನಿಕರಿದ್ದಂತೆ ಎಂದು ಹೇಳಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿ ಶಂಕರನಾರಾಯಣ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟರ್ ಸುದೀಪ್ ಶೆಟ್ಟಿ, ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ ಜಿ ಎಮ್ ಕರಾವಳಿಯ ಬಹುದೊಡ್ಡ ವಿದ್ಯಾಸಂಸ್ಥೆ, ಇದು ಶಿಕ್ಷಣ ಕ್ರಾಂತಿಯ ಜೊತೆಗೆ ಕ್ರೀಡೆಗೆ ಒತ್ತು ನೀಡುತ್ತಿದೆ, ಕ್ರೀಡೆಯಿಂದ ಬದುಕನ್ನು ಕಟ್ಟಿಕೊಳ್ಳಬಹುದು ಜೊತೆಗೆ ಆಸ್ಪತ್ರೆಯನ್ನು ನಮ್ಮಿಂದ ದೂರ ಇಡಬಹುದು ಎಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಕ್ರೀಡೆಗಳಿಂದ ಕೌಶಲ್ಯಗಳ ಅಭಿವೃದ್ಧಿ,…
ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ ತುಳು ಸಿನಿಮಾ ಯಾವಾಗ ಮಾಡುತ್ತೀರಿ ಎಂದು ಪ್ರಶ್ನಿಸುತ್ತಿದ್ದರು. ಈಗ ನಾನು ನಟಿಸಿರುವ ಯಾನ್ ಸೂಪರ್ ಸ್ಟಾರ್ ತುಳು ಸಿನಿಮಾ ಬಿಡುಗಡೆಗೆ ತಯಾರಾಗಿದ್ದು ಶುಕ್ರವಾರ ಬಿಡುಗಡೆಯಾಗಲಿದೆ. ಮೇಕಿಂಗ್, ನಿರ್ದೇಶನ ಎಲ್ಲದರಲ್ಲೂ ಗ್ರ್ಯಾಂಡ್ ಆಗಿರುವ ಸಿನಿಮಾವನ್ನು ಖಂಡಿತಾ ತುಳುವರು ಇಷ್ಟಪಡುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಬಳಿಕ ಮಾತಾಡಿದ ನಟ ಹರೀಶ್ ವಾಸು ಶೆಟ್ಟಿ ಅವರು, “ಯಾನ್ ಸೂಪರ್ ಸ್ಟಾರ್ ಸಿನಿಮಾ ಮಂಗಳೂರಿನ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್,…