Author: admin

ಹೊಟೇಲ್ ಬಾರ್ ಎಂಡ್ ರೆಸ್ಟೋರೆಂಟ್ ಗಳ 2023-2024 ರ ಸಾಲಿನ ಶೇ 15 ರಷ್ಟು ಅಬಕಾರಿ ಸುಂಕ ಹೆಚ್ಚಳವನ್ನು ಕಡಿತ ಮಾಡುವಂತೆ ಫೆಡರೇಶನ್ ಆಫ್ ಹೊಟೇಲ್ ಹಾಗೂ ರೆಸ್ಟೋರೆಂಟ್ ಅಸೋಸಿಯೇಶನ್ ನಿಯೋಗವು ವಿರಾರ್ ಶಂಕರ್ ಶೆಟ್ಟಿಯವರ ನೇತೃತ್ವದಲ್ಲಿ ಮೀರಾ ಭಯಂಧರ್ ಶಾಸಕಿ ಗೀತಾ ಜೈನ್ ರವರ ಮುಂದಾಳತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರನ್ಮು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಈಗಾಗಲೇ ಕೊರೊನಾ ಹಾವಳಿಯಿಂದ ಕಂಗೆಟ್ಟಿರುವ ಹೊಟೇಲ್ ಉದ್ಯಮ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುವ ಸಮಯದಲ್ಲಿಯೇ ಸುಂಕ ಹೆಚ್ಚಳವು ಉದ್ಯಮಕ್ಕೆ ಮಾರಕ ಹೊಡೆತ ಬಿದ್ದಂತಾಗಿದೆ. ಮಾತ್ರವಲ್ಲದೆ ಸರಕಾರದ ನಿಯಮಾವಳಿಗಳ ಪ್ರಕಾರ ಕ್ರಮಬದ್ದವಾಗಿ ಉದ್ಯಮವು ಮುಂದುವರಿಯುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಉದ್ಯಮಕ್ಕೆ ಅಬಕಾರಿ ಸುಂಕ ಹೆಚ್ಚಳದಿಂದ ತುಂಬಲಾರದ ನಷ್ಟವಾಗುತ್ತಿದೆ ಎಂದು ನಿಯೋಗವು ಮುಖ್ಯಮಂತ್ರಿಯವರಿಗೆ ಪೂರ್ಣ ಮಾಹಿತಿಯೊಂದಿಗೆ ಮನವರಿಕೆ ಮಾಡಲಾಯಿತು. ನಿಯೋಗದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಯವರು ವಿಮರ್ಷಾತ್ಮಕವಾಗಿ ನಿಯೋಗದೊಂದಿಗೆ ಚರ್ಚಿಸಿದರು. ಹೊಟೇಲ್ ಉದ್ಯಮದ ಸಂಕಷ್ಟಗಳನ್ನು ಆಲಿಸಿದ ಮುಖ್ಯಮಂತ್ರಿಯವರು ಸರಕಾರದ ಅಬಕಾರಿ ಮಂತ್ರಿ ಶಂಭುರಾಜ್ ದೇಸಾಯಿಯವರಿಗೆ ಪೋನಾಯಿಸಿ ಸುಂಕ ಹೆಚ್ಚಳವನ್ನು…

Read More

ತುಳುನಾಡ ಸೃಷ್ಟಿಕರ್ತನ ಕಂಚಿನ ಪ್ರತಿಮೆಯನ್ನು ಹೊಂದಿರುವ “ಪರಶುರಾಮ ಥೀಂ ಪಾರ್ಕ್‌’ 15 ಕೋ.ರೂ. ವೆಚ್ಚದಲ್ಲಿ ಕಾರ್ಕಳ ಸಮೀಪದ ಉಮ್ಮಿಕ್ಕಳ ಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿದೆ. 57 ಅಡಿ ಎತ್ತರದಲ್ಲಿ 33 ಅಡಿಯ ಸುಂದರ ಕಂಚಿನ ಮೂರ್ತಿ ಸ್ಥಾಪನೆಯಾಗಲಿದೆ. 2 ಕೋಟಿ ರೂ. ವೆಚ್ಚದ ಈ ಮೂರ್ತಿ ರಚನೆಗೆ 15 ಟನ್‌ ಕಂಚು ಮತ್ತು ಉಕ್ಕು ಬಳಸಲಾಗಿದೆ.ಪ್ರತಿಮೆಯ ನಿರ್ಮಾಣ ಕಾರ್ಯವು ಬೆಂಗಳೂರಿ ನಲ್ಲಿ 7 ತಿಂಗಳ ಹಿಂದೆ ಆರಂಭ ಗೊಂಡಿದ್ದು, ಅಂತಿಮ ಹಂತಕ್ಕೆ ತಲುಪಿದೆ. ಉಮ್ಮಿಕ್ಕಳ ಬೆಟ್ಟಕ್ಕೆ ಪ್ರತಿಮೆಯ ತಳಭಾಗ ಬಂದಿದ್ದು ಅಳವಡಿಸುವ ಕಾರ್ಯ ನಡೆಯುತ್ತಿದೆ. ಸೊಂಟದ ಪಟ್ಟಿ, ಮೂರ್ತಿ ಹಾಗೂ ಪರಶುರಾಮನ ಕೊಡಲಿ ಬರಲು ಬಾಕಿಯಿದೆ. 10 ದಿನಗಳಲ್ಲಿ ಮೂರ್ತಿ ಜೋಡಣೆ ಕಾರ್ಯ ಪೂರ್ಣಗೊಳ್ಳಲಿವೆ. ಜನವರಿ 10ರ ವೇಳೆಗೆ ಬೆಟ್ಟದ ಮೇಲೆ ಪರಶುರಾಮ ಮೂಡಿಬರಲಿದ್ದಾನೆ. ಪಾರ್ಕ್‌ನಲ್ಲಿ ಆಡಿಯೋ ವಿಶುವಲ್‌ ಕೊಠಡಿ, ಸುಸಜ್ಜಿತ ಆರ್ಟ್‌ ಮ್ಯೂಸಿಯಂ, ನೇಯ್ಗೆ ಡೆಕ್‌ ಗ್ಯಾಲರಿ, ಸಾವಿರ ಮಂದಿ ಆಸನ ಸಾಮರ್ಥ್ಯದ ಬಯಲು ಮಂದಿರ, ಭಜನ ಮಂದಿರ, ಹಸುರು ಕೋಣೆಗಳ ಪಾಪ್‌ ಸಂಗ್ರಹಣೆ, ಪೂರಕ…

Read More

ಸಮಾಜಸೇವಕ, ನೇರ ನಡೆ ನುಡಿಯ ಪ್ರಖ್ಯಾತ್ ಶೆಟ್ಟಿಯವರು ಉದ್ಯಮಿಯಾಗಿದ್ದುಕೊಂಡು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದಾ ಹಸನ್ಮುಖಿಯಾಗಿರುವ ಪ್ರಖ್ಯಾತ್ ಶೆಟ್ಟಿಯವರು ತೆಂಕನಿಡಿಯೂರು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿದ್ದು ಇವರ ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಕೋರುತ್ತಿದ್ದೇವೆ.

Read More

ಕ್ಯಾಪ್ಟನ್ ಬ್ರಜೇಶ್ ಚೌಟ ಸಾರಥ್ಯದಲ್ಲಿ 7 ನೇ ವರ್ಷದ ಮಂಗಳೂರು ಕಂಬಳ ಡಿ. 30 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕೆರೆಯಲ್ಲಿ ನಡೆಯಲಿದ್ದು ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ಶುಕ್ರವಾರ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗರಾದ ಪ್ರಸಾದ್ ಕುಮಾರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಶೆಟ್ಟಿ ಮಾತನಾಡಿ 7 ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ಮಾತನಾಡಿ, ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ…

Read More

ಆರ್ಥಿಕ ಸ್ವಾವಲಂಬನೆಯಿಂದ ಮಹಿಳೆಯರಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡುತ್ತದೆ. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದ್ದು, ಸಂಘ ಸಂಸ್ಥೆಗಳು ಕೂಡ ಪ್ರೋತ್ಸಾಹ ನೀಡುವುದು ಅವಶ್ಯ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕ ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವತಿಯಿಂದ ಯೆಯ್ಯಾಡಿಯ ಡಿಐಸಿಎಂ ಸಭಾಂಗಣದಲ್ಲಿ ಮಹಿಳೆಯರಿಗೆ ಆಯೋಜಿಸಿದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಅಧ್ಯಕ್ಷೆ ಚಂದ್ರಕಲಾ ಡಿ.ರಾವ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯದರ್ಶಿ ಸುಮತಿ ದೇವದಾಸ್, ರೆಡ್ ಕ್ರಾಸ್ ಸೊಸೈಟಿ ನಿರ್ದೇಶಕ ಪಿ.ಬಿ.ಹರೀಶ್ ರೈ, ಸಂಪನ್ಮೂಲ ವ್ಯಕ್ತಿಗಳಾದ ಶಾಂತಿ ಆಚಾರ್ಯ, ರೇಖಲತಾ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿಯ ಪದಾಧಿಕಾರಿಗಳು ಇದ್ದರು. ರೆಡ್ ಕ್ರಾಸ್ ಸೊಸೈಟಿ ಮಹಿಳಾ ಮತ್ತು ಮಕ್ಕಳ ಸುರಕ್ಷಾ ಉಪ ಸಮಿತಿ ನಿರ್ದೇಶಕಿ ಡಾ.ಸುಮನಾ ಬೋಳಾರ್ ಸ್ವಾಗತಿಸಿ, ಕಾರ್ಯದರ್ಶಿ…

Read More

ಪುತ್ತೂರು ಯುವ ಬಂಟರ ಸಂಘದ ನೇತೃತ್ವದಲ್ಲಿ ಜರಗಿದ ಅದ್ದೂರಿ ಕಾರ್‍ಯಕ್ರಮ ಬಂಟೆರೆ ಪರ್ಬ ನೋಡಿ ಅತೀ ಸಂತೋಷವಾಯಿತು. ಯುವ ಬಂಟರು ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಜುಲೈ 23 ರಂದು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಪುತ್ತೂರು ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿದ ‘ತುಳುನಾಡ ಬಂಟೆರೆ ಪರ್ಬ’ ಕಾರ್‍ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಬಂಟ ಸಮಾಜದ ಸಮಗ್ರ ಅಭಿವೃದ್ಧಿ ಆಗಬೇಕೆಂಬ ಉದ್ದೇಶ ನನ್ನದು. ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಬೇಕೆಂದು ನಾನು ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತಿದೇನೆ. ಪುತ್ತೂರು ಬಂಟ ಸಮಾಜದಿಂದ ಎಲ್‌ಕೆಜಿಯಿಂದ ಪ್ರಾಥಮಿಕ ಹಂತ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಸಂಸ್ಥೆ ಆಗಬೇಕೆಂಬ ಕಲ್ಪನೆ ಇದೆ. ಬಂಟ ಸಮಾಜದ ಅಭಿವೃದ್ಧಿಗೆ ಪೂರ್ಣ ರೀತಿಯ ಸಹಕಾರ ನೀಡುತ್ತೇನೆ. ಜೊತೆಗೆ ಬಂಟರ ಸಂಘದಿಂದ ಹೊಸ ಜಾಗ ಖರೀದಿಗೂ ಸಹಕಾರ ನೀಡುತ್ತೇನೆ ಎಂದು…

Read More

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಮತ್ತು ಯಕ್ಷದ್ರುವ ಪಟ್ಲ ಪೌಂಡೇಷನ್ ದುಬೈ ಘಟಕದ ವತಿಯಿಂದ “ದುಬೈ ಯಕ್ಷೋತ್ಸವ-2023 – ವಿಶ್ವ ಪಟ್ಲ ಸಂಭ್ರಮ” ಜೂನ್‌ 11 ರಂದು ದುಬೈನಲ್ಲಿ ಜರಗಲಿದೆ. ನಗರದ ಕರಾಮ ಇಂಡಿಯನ್ ಸ್ಕೂಲ್ನ ಶೇಖ್ ರಷೀದ್ ಸಭಾಂಗಣದಲ್ಲಿ ಜೂನ್ 11 ರಂದು ಮಧ್ಯಾಹ್ನ 2 ಗಂಟೆಯಿಂದ ವಿಶ್ವದಲ್ಲಿ ಇರುವ ಪಟ್ಲ ಪೌಂಡೇಷನ್ ನ 38 ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ “ವಿಶ್ವ ಪಟ್ಲ ಸಂಭ್ರಮ” ಜರಗಲಿದೆ. ಯಕ್ಷಶ್ರೀ ರಕ್ಷ ಗೌರವ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರು ದುಬೈ ಮತ್ತು ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ ನೀಡುವ “ಯಕ್ಷಶ್ರೀ ರಕ್ಷಾ ಗೌರವ” ಪ್ರಶಸ್ತಿಯನ್ನು ಕಲಾವಿದರಾದ ಪಟ್ಲ ಗುತ್ತು ಮಹಾಬಲ ಶೆಟ್ಟಿಯವರಿಗೆ ಗಣ್ಯತಿ ಗಣ್ಯರ ಸಮ್ಮುಖದಲ್ಲಿ ನೀಡಲಾಗುವುದು. ಮುಖ್ಯ ಅತಿಥಿಗಳಾಗಿ ಪಟ್ಲ ಪೌಂಡೇಷನ್ ಕೇಂದ್ರ ಘಟಕದ ಗೌರವಾಧ್ಯಕ್ಷರಾದ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ, ಘಟಕದ ಪ್ರದಾನ ಸಂಚಾಲಕರಾದ ಶಶಿಧರ ಶೆಟ್ಟಿ ಬರೋಡ, ಐಕಳ ಹರೀಶ್ ಶೆಟ್ಟಿ, ಪಟ್ಲ…

Read More

ಐತಿಹಾಸಿಕ ಪ್ರಸಿದ್ಧ 400 ವರ್ಷದ ದಂತಕತೆಯನ್ನು ಹೊಂದಿರುವ ತೂಗುಯ್ಯಾಲೆಯ ತೊಟ್ಟಿಲ ಮಾತೆ ಶ್ರೀ ಯಕ್ಷಮ್ಮ ದೇಗುಲದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. “400 ವರುಷ ಇತಿಹಾಸ ಇರುವ ಕರಗುಡಿ ಶ್ರೀ ವರಬ್ರಹ್ಮ, ಶ್ರೀ ಸ್ವರ್ಣ ಯಕ್ಷಿ ಮತ್ತು ನಾಗ ದೇವತೆ ಸ-ಪರಿವಾರ ದೇವರುಗಳ ವಾರ್ಷಿಕ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ, ಸರಿ ಸುಮಾರು 400 ವರ್ಷಗಳ ಇತಿಹಾಸಿಯಾಗಿರುವ ಐತಿಹಾಸಿಕ ಪುರಾಣ ಪ್ರಸಿದ್ಧ ಮೊಳಹಳ್ಳಿ ಕರಗುಡಿ ಶ್ರೀ ವರಬ್ರಹ್ಮ, ಶ್ರೀ ಸ್ವರ್ಣ ಯಕ್ಷಿ, ನಾಗದೇವತೆ ಸಹ ಪರಿವಾರ ಗಣಗಳ ವಾರ್ಷಿಕ ಜಾತ್ರಾ ಮಹೋತ್ಸವ (ಹಾಲು ಹಬ್ಬ ಸೇವೆ) ಕಲಾ ಹೋಮ, ಮಹಾ ಅನ್ನ ಸಂತರ್ಪಣೆ, ಗಂಡಸೇವೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಫೆಬ್ರವರಿ 28/02/2023 ಮಂಗಳವಾರ ಮತ್ತು ಮಾರ್ಚ್- 01/03 /2023 ಬುಧವಾರ ವರೆಗೂ ಧಾರ್ಮಿಕ ವಿವಿಧ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ವಿಧಿ ವಿಧಾನಗಳು ಸಂಪನ್ನಗೊಂಡಿದೆ. ಕಾರ್ಯಕ್ರಮದಲ್ಲಿ ಅರ್ಚಕರೊಂದದವರು ವಿಶೇಷವಾದಂತಹ ಕಲಾ…

Read More

ಅನಾದಿ ಕಾಲದಿಂದಲೂ ದಕ್ಷಿಣ ಭಾರತದ ಜನರು ಪ್ರಕೃತಿಯ ಅರಾಧಕರಾಗಿದ್ದರು. ಪ್ರಾಚೀನ ಪರಂಪರೆಯ ಹಲವಾರು ಕ್ಷೇತ್ರಗಳು, ಭೂಮಿ ತಾಣಗಳು, ಹರಿಯುವ ನದಿಗಳು ಮುಂತಾದ ಹತ್ತು ಹಲವಾರು ಪ್ರಕೃತಿದತ್ತವಾದ ಪರಿಸರಗಳು ವಿವಿಧತೆಯಿಂದ ಪಾವಿತ್ರ್ಯತೆಯನ್ನು ಯಾ ಪರಂಪರೆಯನ್ನು ಹೊಂದಿತ್ತು. ಇಲ್ಲಿರುವ ವಿವಿಧ ಧರ್ಮಕ್ಷೇತ್ರಗಳು ತಮ್ಮದೇ ಆದ ವರ್ಚಸ್ಸಿನಲ್ಲಿ ಮೆರೆಯುತ್ತಿದೆ. ಧಾರ್ಮಿಕ ಪರಂಪರೆಯನ್ನು ಅವಲೋಕಿಸುವಾಗ ಆಚರಣೆಯ ದೇವರ ಪೂಜಾ ವಿಧಿ-ವಿಧಾನಗಳಲ್ಲಿ ಕಾಲ ಚಕ್ರದಂತೆ ಯಾವುದೇ ಒಂದು ಸೀಮಿತ ಸಮುದಾಯಕ್ಕೆ ಅಂಟಿಕೊಳ್ಳದೆ ತಮ್ಮದೇ ಆದ ಬದಲಾವಣೆಯ ಆಚರಣೆಯ ರೀತಿಯನ್ನು ಅನುಸರಿಸುತ್ತಿರುವುದು ಇಂದಿನ ಶೈಲಿಯ ಪದ್ದತಿಯಾಗಿದೆ. ಇದರಂತೆ ಕಳೆದ 17 ವರ್ಷಗಳ ಹಿಂದೆ ಮೀರಾರೋಡ್ ಸೆಕ್ಟರ್ 4ರ ಸಿ 19, ನಂ. 002 ನ ಪ್ರೇಮ್ ಜ್ಯೋತ್ ಸೊಸೈಟಿ ಮೀರಾರೋಡ್ ಇಲ್ಲಿ ಪ್ರತಿಷ್ಟಾಪಿಸಲ್ಪಟ್ಟ ಶ್ರೀ ಚಾಮುಂಡೇಶ್ವರೀ ಪ್ರಸನ್ನ ಎಂಬ ಸಾನಿಧ್ಯವು ಇದೀಗ ಭಕ್ತರಾಲಯವಾಗಿದೆ. ದಿನದಿಂದ ದಿನಕ್ಕೆ ಶ್ರೀ ಕ್ಷೇತ್ರವು ಶ್ರೀ ಚಾಮುಂಡೇಶ್ವರಿ ಅಮ್ಮನವರ ಕೃಪಾಕಟಾಕ್ಷದ ಅನುಗ್ರಹ ಭಕ್ತಾಧಿಗಳಿಗೆ ಲಭ್ಯವಾಗುತ್ತಿದೆ. ಯಾವುದೇ ಪಂಗಡ ಯಾ ಜಾತೀಯತೆಯನ್ನು ಅನುಸರಿಸದೆ ಕ್ಷೇತ್ರದ ಅಭಯ ಹಸ್ತ…

Read More

ರೈನ್ ಬೋ ಬುಡಾಕಾನ್ ಕರಾಟೆ ಅಕಾಡೆಮಿ ಯಡ್ ತ್ತೆರೆ ಬೈಂದೂರು ಇಲ್ಲಿ ನಡೆದ 9ನೇ ರೈನ್ ಬೋ “ಕಪ್ 22-23ರ ಕಪ್ ಕರಾಟೆ ಸ್ಪರ್ಧೆಯಲ್ಲಿ ಕಟ ಮತ್ತು ಕುಮೆಟೆ ಎರಡು ವಿಭಾಗಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು 5ನೇಯ ಬಾರಿ ರಾಷ್ಟ ಮಟ್ಟದಲ್ಲಿ ನಡೆದ ಕರಾಟೆ ಸ್ಪರ್ಧೆ ಯಲ್ಲಿ ಪ್ರಶಸ್ತಿ ಪಡೆಯುವಲ್ಲಿ ಹಾವಂಜೆ ಗ್ರಾಮದ ಕೀಳಂಜೆಯ ರಿಯಾ ಜಿ, ಶೆಟ್ಟಿ. ಯಶಸ್ವಿಯಾಗಿದ್ದಾರೆ. ಉಡುಪಿಯ ವಳಕಾಡು ಶಾಲೆಯ ಎಂಟನೆ ತರಗತಿಯ ವಿದ್ಯಾರ್ಥಿನಿಯಾಗಿದ್ದು ಹಾವಂಜೆಯ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಹಾಗು ಜಯಲಕ್ಷ್ಮಿ ಜಿ,ಶೆಟ್ಟಿಯವರ ಪುತ್ರಿ ಯಾಗಿದ್ದು ಪರ್ಕಳದ ಕರಾಟೆ ಪಟು ಪ್ರವೀಣ್ ರವರ ಶಿಷ್ಯೆಯಾಗಿದ್ದು ಪರ್ಕಳದ ಪಿಕೆಸಿ ತಂಡದ ಸದಸ್ಯೆ ಆಗಿದ್ದಾರೆ.

Read More