Author: admin
ಸಾಗರ ಬಂಟರ ಸಂಘದ ಆರ್ಥಿಕ ಅಶಕ್ತ ಬಂಟ ಕುಟುಂಬಕ್ಕೆ ಬೆಂಗಳೂರು ಬಂಟರ ಸಂಘದ ವತಿಯಿಂದ ಮಾಂಗಲ್ಯ ಸರವನ್ನು (ಕರಿಮಣಿ) ಆನಂದ್ಪುರ ಭಾಗದ ಎಡೆಹಳ್ಳಿ ಗ್ರಾಮದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ಸಹ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಅಮರ್ ಶೆಟ್ಟಿ, ಶ್ರೀಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಸದಾನಂದ ಶೆಟ್ಟಿ ಸುರೇಶ್ ಶೆಟ್ಟಿ, ಸುನಿಲ್ ಶೆಟ್ಟಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬೆಂಗಳೂರು ಬಂಟರ ಸಂಘದಿಂದ ಮಾಡಲಾಗುವ ಎಲ್ಲಾ ಸಮಾಜ ಕಲ್ಯಾಣ ಚಟುವಟಿಕೆಗಳಿಗೆ ಸಾಗರ ಬಂಟರ ಸಂಘ ಕೃತಜ್ಞತೆಯನ್ನು ಸಲ್ಲಿಸಿತು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಿಗೆ , ಕಾರ್ಯದರ್ಶಿಗಳಿಗೆ , ಉಪಾಧ್ಯಕ್ಷರಿಗೆ , ಖಜಾಂಚಿಗಳಿಗೆ , ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಹಾಗೂ ಸರ್ವ ಸದಸ್ಯರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಕೊಡಗು ಜಿಲ್ಲಾ ಬಂಟ್ಸ್ ಸಂಘದ ವಾರ್ಷಿಕ ಮಹಾಸಭೆ ನಗರದ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿ.ಡಿ.ಜಗದೀಶ ರೈ ಅವಿರೋಧವಾಗಿ ಆಯ್ಕೆಯಾದರು. ಮುಖ್ಯ ಕಾರ್ಯದರ್ಶಿಯಾಗಿ ಕುಶಾಲನಗರದ ಉದ್ಯಮಿ ವಿ ರವೀಂದ್ರ ರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಬಿ.ಕೆ.ರವೀಂದ್ರ ರೈ ಸಂಘ ಮತ್ತು ಟ್ರಸ್ಟ್ ನ ಆಸ್ತಿ ವಿವರ ನೀಡಿದರು. ಸಂಘದ ಆಸ್ತಿಗೆ ಸಂಬಂಧಿಸಿದಂತೆ ಕೆಲವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದರು. ಆ ಹೇಳಿಕೆಗಳಲ್ಲಿ ಸತ್ಯಾಂಶವಿಲ್ಲ. ಸ್ವತ್ತುಗಳ ನಿಖರವಾದ ದಾಖಲೆಗಳು ಸಂಘದ ಬಳಿ ಇವೆ ಮತ್ತು ಯಾರಾದರೂ ಅದನ್ನು ಯಾವಾಗ ಬೇಕಾದರೂ ಪರಿಶೀಲಿಸಬಹುದು ಎಂದರು. ರವೀಂದ್ರ ರೈ ಮಾತನಾಡಿ, ‘ಹಲವು ವರ್ಷಗಳ ನಂತರ ನಾವು ಒಂದಾಗಿದ್ದೇವೆ. ಮಾಜಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಜನರಿಗೆ ಸುಳ್ಳು ಮಾಹಿತಿ ರವಾನಿಸುತ್ತಿದ್ದಾರೆ. ಕೆಲವರು ತಾವಾಗಿಯೇ ಸಂಘವನ್ನು ಘೋಷಿಸಿಕೊಂಡಿದ್ದಾರೆ. ಈ ಹಿಂದೆ ಅವರು ಆಡಳಿತ ಸಮಿತಿಯ ಸಭೆಯನ್ನು ಕೂಡಾ ಕರೆಯಲು ಆಸಕ್ತಿ ತೋರಿಸಿರಲಿಲ್ಲ ಎಂದರು. ನೂತನ ಅಧ್ಯಕ್ಷ ಜಗದೀಶ ರೈ ಮಾತನಾಡಿ, ‘ಭವಿಷ್ಯದಲ್ಲಿ…
ಬಂಟರ ಸಂಘದ ಮಾಜಿ ಅಧ್ಯಕ್ಷರು, ದಕ್ಷ ಆಡಳಿತಗಾರ, ಉತ್ತಮ ನಾಯಕತ್ವ ಹಾಗೂ ಸೇವಾ ಮನೋಭಾವನೆಯುಳ್ಳವರಾಗಿದ್ದ ಡಾ. ಎಂ. ತಿಮ್ಮಪ್ಪ ರೈ ಯವರು ದಿನಾಂಕ 21.02.2023ರಂದು ದೈವಾಧೀನರಾದರು. ಶ್ರೀಯುತರ ಗೌರವಾರ್ಥವಾಗಿ ನುಡಿನಮನ ಕಾರ್ಯಕ್ರಮವನ್ನು ದಿನಾಂಕ 03.03.2023 ಶುಕ್ರವಾರ ಸಂಜೆ 5.30 ಕ್ಕೆ ಸಂಘದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ಸಂಘದ ವತಿಯಿಂದ ಏರ್ಪಡಿಸಲಾಗಿತ್ತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಡಾ. ಎಂ. ತಿಮ್ಮಪ್ಪ ರೈ ಯವರ ಕುಟುಂಬ ವರ್ಗದವರು, ಸಂಘದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಅಧ್ಯಕ್ಷರಾದ ಶ್ರೀ. ಡಿ. ಚಂದ್ರಹಾಸ ರೈಯವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ಬಿ.ಆನಂದರಾಮ ಶೆಟ್ಟಿಯವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಮಾಜಿ ಅಧ್ಯಕ್ಷರುಗಳಾದ ಶ್ರೀ ಬಿ. ಎಲ್. ಎನ್. ಹೆಗ್ಡೆ, ಶ್ರೀ ಹರೀಶ್ ಕುಮಾರ್ ಶೆಟ್ಟಿ, ಶ್ರೀ ಭಗವಾನ್ ದಾಸ್ ರೈ, ಡಾ. ನರೇಶ್ ಶೆಟ್ಟಿ, ಶ್ರೀ ಆರ್. ಉಪೇಂದ್ರ ಶೆಟ್ಟಿ ಹಾಗೂ ಮಾಜಿ ಗೌರವ ಕಾರ್ಯದರ್ಶಿಗಳಾದ ಶ್ರೀ ಶ್ರೀಧರ್ ಹೆಗ್ಡೆಯವರು ನುಡಿನಮನ…
ಕುವೆಂಪು, ಶಿವರಾಮ ಕಾರಂತರು ನನ್ನ ಊರಿನ ಸೊಗಡಿಗೆ ಬರಹದ ರೂಪ ಕೊಟ್ಟಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲ ಪ್ರದೇಶಗಳಲ್ಲಿಯೂ ಆಯಾಯ ಊರಿನ, ನೆಲದ ಸೊಗಡು ಬಿಂಬಿಸುವ ಕಥೆಗಾರರು ಮೂಡಿಬರಬೇಕು ಎಂದು “ಕಾಂತಾರ’ ಖ್ಯಾತಿಯ ನಟ, ನಿರ್ದೇಶಕ ರಿಷಭ್ ಶೆಟ್ಟಿ ಹೇಳಿದರು. ಮಂಗಳೂರು ಸಾಹಿತ್ಯ ಉತ್ಸವ ದಲ್ಲಿ ರವಿವಾರ ಮಾತನಾಡಿದ ಅವರು, ಕಾಂತಾರ ದೈವರಾಧನೆಯ ಸಿನೆಮಾವಲ್ಲ. ಅಲ್ಲಿ ಹಿಂದುಳಿದ ವರ್ಗದ ಧ್ವನಿ, ಕಾಡಂಚಿನ ಮಕ್ಕಳ ಕಥೆಯಿದೆ. ಕಾಂತಾರದ ಗೆಲುವು ನಿರೀಕ್ಷೆ ಮಾಡಿರಲಿಲ್ಲ. ರೀಜನಲ್ ವಿಚಾರದಿಂದ ಗ್ಲೋಬಲ್ ಮಟ್ಟದಲ್ಲಿ ಕನೆಕ್ಟ್ ಆಗಿದ್ದೇವೆ ಎನ್ನುವುದಕ್ಕೆ ಈ ಸಿನೆಮಾ ಉದಾಹರಣೆ ಎಂದರು. ಮಂಗಳೂರು ಕನ್ನಡ ಭಾಷೆಯನ್ನು ಈ ಹಿಂದೆ ಸಿನೆಮಾದ ಹಾಸ್ಯದ ವಿಚಾರದಲ್ಲಿ ಮಾತ್ರ ಬಳಸಲಾಗುತ್ತಿತ್ತು. ಆದರೆ ನನ್ನ ಸಿನೆಮಾದಲ್ಲಿ ಕಾಸರಗೋಡಿನಿಂದ ಕುಂದಾಪುರದ ತನಕದ ಕನ್ನಡವನ್ನು ಬಳಕೆ ಮಾಡಿದ್ದೇನೆ. ಅದು ಮಣ್ಣಿನ ಸೊಗಡನ್ನು ಹೊಂದಿದೆ ಎಂದರು. ಬರಲಿದೆ ಕಾಂತಾರ 1 ಈಗ ಬಂದಿರುವುದು ಕಾಂತಾರ-2. ಇನ್ನು ಬರಬೇಕಾಗಿರುವುದು ಕಾಂತಾರ-1. ಇದಕ್ಕಾಗಿ ಸಂಶೋಧನೆ ಸಾಗುತ್ತಿದೆ. ದೊಡ್ಡ ಬಜೆಟ್ ಸಿನೆಮಾ,…
ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಬಸ್ ನಿಲ್ದಾಣದಿಂದ ರಾಬಿನ್ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ಹಲವಾರು ಅಪಘಾತಗಳು ನಡೆದು ಜೀವಬಲಿ ಪಡೆಯುತ್ತಿದ್ದು,ಅಪಘಾತ ವಲಯವಾಗಿ ಪರಿಣಮಿಸಿದೆ. ದಿನವೊಂದಕ್ಕೆ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ವಾಹನ ದಟ್ಟಣೆಯಿರುವ ರಸ್ತೆಯ ರಾಬಿನ್ ಬಸ್ ನಿಲ್ದಾಣದ ತಿರುವು ಮತ್ತು ಪಂಜಿಮಾರು ಬಸ್ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ಆಗಾಗ್ಗೆ ರಸ್ತೆ ಅಪಘಾತಗಳು ನಡೆಯುತ್ತಿದ್ದು ವಾಹನ ಸವಾರರ ಜೀವಕ್ಕೆ ಸಂಚಕಾರವಿದೆ. ವೇಗವಾಗಿ ಬರುವ ವಾಹನಗಳು ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸುತ್ತಿರುತ್ತಿದೆ. ದ್ವಿಪಥ ರಸ್ತೆ ವಿಸ್ತರಣೆ ಯಾವಾಗ? ಕಟಪಾಡಿ-ಶಿರ್ವ 10.5 ಕಿ.ಮೀ. ರಾಜ್ಯ ಹೆದ್ದಾರಿಯ 8.5 ಕಿ.ಮೀ. ರಸ್ತೆ ಕಾಪು ಶಾಸಕರ ಅನುದಾನದ ಸುಮಾರು 7 ಕೋ.ರೂ. ವೆಚ್ಚದಲ್ಲಿ ಪಂಜಿಮಾರು ಫಲ್ಕೆಯವರೆಗೆ 2018ರಲ್ಲಿ ದ್ವಿಪಥಗೊಂಡು ವಿಸ್ತರಣೆಯಾಗಿತ್ತು. ಮಾಣಿಪ್ಪಾಡಿ ಫಲ್ಕೆಯಿಂದ ಶಿರ್ವ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದವರೆಗಿನ ಸುಮಾರು 2 ಕಿ.ಮಿ. ರಸ್ತೆಯು ಅಂಕುಡೊಂಕಾಗಿದ್ದು 4 ವರ್ಷ…
ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 27ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕೇ¤ಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು.ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಶಿರ್ವ ನಡಿಬೆಟ್ಟು ಕಂಬಳವು ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಯಿತು. ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್ಜೂನಿಯರ್ ವಿಭಾಗದಲ್ಲಿ 48 ಜತೆ ಒಟ್ಟು 78 ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಗೊಂಡಿತು.ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಶಿರ್ವ ಗ್ರಾ.ಪಂ. ಅಧ್ಯಕ್ಷ ರತನ್ ಕುಮಾರ್ ಶೆಟ್ಟಿ,…
ದೀಪಾವಳಿ ಕೆಲವರಿಗೆ ಪಂಚ ದಿನಗಳ ಹಬ್ಬ. ಕೆಲವರಿಗೆ ನಾಲ್ಕಾದರೆ, ಉಳಿದವರಿಗೆ ಮೂರು ದಿನದ ವೈಭವ. ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಸಡಗರ ವಿಸ್ತರಿಸುತ್ತದೆ. ನವರಾತ್ರಿ ಉಕ್ಕಿಸಿದ ನವೋಲ್ಲಾಸ ಮನಸ್ಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆಯೇ ಮುಸ್ಸಂಜೆಯ ಮುದ್ದಾದ ಮಳೆ, ಚೂರುಚೂರೇ ಆವರಿಸಿಕೊಳ್ಳುತ್ತಾ ಖುಷಿ ಕೊಡುವ ಚಳಿಯ ನಡುವೆ ಮತ್ತೊಂದು ಸಂಭ್ರಮ ಮೈದಳೆದಿದೆ. ಅದು ಬೆಳಕಿನ ಹಬ್ಬ, ಬದುಕಿನ ಹಬ್ಬ, ಕುಟುಂಬದ ಹಬ್ಬ, ಊರ ಹಬ್ಬವಾದ ದೀಪಾವಳಿ. ನವರಾತ್ರಿಯ ವಿಜಯದಶಮಿಗೂ ದೀಪಾವಳಿ ಆರಂಭದ ಚತುರ್ದಶಿಗೂ ನಡುವೆ ಇರುವುದು ಹದಿನೆಂಟೇ ದಿನದ ಅಂತರ. ಅದರ ನಡುವೆಯೇ ಹಾಲು ಪೈರಿನ ಮೊಳಕೆ ಬೆಳೆದು ಭತ್ತವಾಗುತ್ತದೆ, ಪ್ರಕೃತಿಯಲ್ಲಿ ಹೊಸ ಹೂವು ಅರಳುತ್ತದೆ, ಬದುಕು ಸಡಗರದ ಮತ್ತೊಂದು ಶಿಖರದೆಡೆಗೆ ಹೊರಳುತ್ತದೆ. ದೀಪಾವಳಿ ಕೆಲವರಿಗೆ ಪಂಚ ದಿನಗಳ ಹಬ್ಬ. ಕೆಲವರಿಗೆ ನಾಲ್ಕಾದರೆ, ಉಳಿದವರಿಗೆ ಮೂರು ದಿನದ ವೈಭವ. ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಸಡಗರ ವಿಸ್ತರಿಸುತ್ತದೆ. ಈ ಎಲ್ಲ ದಿನಗಳಲ್ಲಿ ಮೆರೆಯವುದು ಭಕ್ತಿ, ಪ್ರೀತಿ ಮತ್ತು ಪ್ರಕೃತಿ.…
ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಡಾ ತಲ್ಲೂರು ಶಿವರಾಮ್ ಶೆಟ್ಟಿಯವರ ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು ಎಂಬ ಕೃತಿ ಆಯ್ಕೆಯಾಗಿವೆ. ಲಯನ್ಸ್ ಜಿಲ್ಲಾ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದ ಡಾ ತಲ್ಲೂರು ಶಿವರಾಮ್ ಶೆಟ್ಟಿ ಮೂಲತಃ ಕುಂದಾಪುರದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ನೆಲೆಸಿ ಹೊಟೇಲು ಉದ್ಯಮದ ಜೊತೆಗೆ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವರಾಮ್ ಶೆಟ್ಟರು ಬಿಎ ಪದವೀಧರರಾಗಿದ್ದು, ಯಕ್ಷಗಾನ ಪೋಷಕರಾಗಿ ಹವ್ಯಾಸಿ ಕಲಾವಿದರಾಗಿದ್ದಾರೆ. ಇವರು 8 ಕೃತಿಗಳನ್ನು ಬರೆದಿದ್ದಾರೆ. ಹೊಂಬೆಳಕು, ಮುಂಬೆಳಕು, ಕಲಾ ಸಂಚಯ, ಹೊಂಗಿರಣ, ಪಾಥೇಯ ಇವರ ಪ್ರಮುಖ ಕೃತಿಗಳು. ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷ, ಜಿಲ್ಲಾ ಹೊಟೇಲು ಮಾಲೀಕರ ಸಂಘ, ಉಡುಪಿ ರಂಗಭೂಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಐಕ್ಯತೆ, ಒಗ್ಗಟ್ಟು ಮತ್ತು ಏಕತೆಯಿಂದ ಕೂಡಿಕೊಂಡು ಸಂಘಟನೆಗಳು ಆಯೋಜಿಸುವ ಯಾವುದೇ ರೀತಿಯ ಕಾರ್ಯವಿರಲಿ ಅದರಲ್ಲಿ ಯಶಸನ್ನು ಗಳಿಸಲು ಸಾಧ್ಯ. ಪರಸ್ಪರ ಚರ್ಚಿಸಿ ವಿಮರ್ಶೆ ಮಾಡುವ ಮೂಲಕ ಸಂಘಟನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ಕೈಗೊಳ್ಳುವ ಕಾರ್ಯ ಯೋಜನೆಗಳು ಕೈಗೂಡಿದಾಗ ಸಂಘಟನೆಗಳು ಮತ್ತಷ್ಟು ಬಲಗೊಳ್ಳುತ್ತದೆ. ಸಮಾನ ಮತ್ತು ಸಶಕ್ತ ಸಮಾಜವನ್ನು ನಿರ್ಮಿಸಲು ಇಂತಹ ಮೌಲ್ಯಯುತವಾದ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಕ್ರೀಡೆ, ಕಲೆ, ಧಾರ್ಮಿಕ, ಸಾಮಾಜಿಕ, ಅಥವಾ ಇನ್ನಿತರ ಯಾವುದೇ ರೀತಿಯ ಕಾರ್ಯಕ್ರಮಗಳಲ್ಲಿ ಸಮೂಹವಾಗಿ ಮನಸ್ಸುಗಳು ಒಂದುಗೂಡಿದಾಗ ಬಲವರ್ಧನೆಯಾಗುತ್ತದೆ. ಕ್ರೀಡೆ ಅಥವಾ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮೂಲಕ ಸ್ವಾಭಿಮಾನ, ನೈತಿಕತೆ, ಧೈರ್ಯ, ಶಾಂತಿ, ಮತ್ತು ಸಂತೋಷವನ್ನು ಪ್ರಸಾರ ಮಾಡುವ ಮೂಲಕ ಸಹಬಾಳ್ವೆಯನ್ನು ಬೆಂಬಲಿಸಲು ಇಂತಹ ಕೂಟಗಳ ಆಯೋಜನೆ ಬಹಳ ಮುಖ್ಯ ಮತ್ತು ಮಾನವ ಸಂಪನ್ಮೂಲ ಕ್ರೋಡಿಕರಿಸುವಲ್ಲಿ ವೇದಿಕೆಗಳಾಗುತ್ತವೆ. ಪುಣೆ ತುಳುಕೂಟ ಸುಮಾರು 25 ವರ್ಷಗಳಿಂದ ಪುಣೆ ತುಳುವರ ಸಂಘಟನೆಯಾಗಿ ಉತ್ತಮ ಕಾರ್ಯ ಮಾಡುತ್ತಿದ್ದು, ಯುವ ವಿಭಾಗದ ವತಿಯಿಂದ ಆಯೋಜಿಸಿರುವ ಈ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ…
ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದಿಂದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಆಯೋಜನೆ
ಬಂಟರು ಹೋಟೆಲ್ ಉದ್ಯಮ ಜೊತೆಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನ ಸ್ವಂತ ಪರಿಶ್ರಮದಿಂದ ಯಶಸ್ವಿಯಾಗಿದ್ದಾರೆ. ಇಂತಹ ಕಾರ್ಯಕ್ರಮದಿಂದ ನಮ್ಮವರಿಗೆ ಅವಕಾಶ ಹಾಗೂ ಪ್ರೋತ್ಸಾಹದ ವೇದಿಕೆ ನಿರ್ಮಾಣವಾಗುತ್ತದೆ ಎಂದು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಹೇಳಿದರು. ಇವರು ಬಂಟರ ಸಂಘದ ಎಸ್. ಎಂ. ಶೆಟ್ಟಿ ಸಭಾಂಗಣದಲ್ಲಿ ಜರುಗಿದ ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಂಘದಿಂದ ಸಂಘಟನೆ, ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದರ್ಶನಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಎಲ್ಲಾ ಬಂಧುಗಳು ಸೇರಿ ಸದುಪಯೋಗ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ದಿನ ಪೂರ್ತಿ ಜರುಗಿದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿಯವರ ಪತ್ನಿ ಶುಭ ಸಿ. ಶೆಟ್ಟಿ ಬೆಳಗ್ಗೆ ರಿಬ್ಬನ್ ಕತ್ತರಿಸುವುದರೊಂದಿಗೆ…