Author: admin
ಪರೋಪಕಾರ ಬಂಟ ಸಮುದಾಯದ ದೊಡ್ಡ ಗುಣ, ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿರುವುದರಿಂದಲೇ ಇಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗಿರುವುದು, ಹಾಗಾಗಿ ಈ ಸಮುದಾಯವು ಗುರುಪೀಠದ ಗೋಜಿಗೆ ಹೋಗದೆ ಹಿರಿಯರು ತೋರಿದ ಹಾದಿಯಲ್ಲೇ ಮುಂದೆ ಸಾಗಬೇಕು, ದೇವರನ್ನೇ ಗುರುವನ್ನಾಗಿ ಕಾಣಬೇಕು, ಈ ನಿಟ್ಟಿನಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಕೆಲಸಗಳಾಗಬೇಕೆಂದು ಕೇಮಾರು ಸಾಂದೀಪನೀ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿಯವರು ಹೇಳಿದರು. ಮೂಡುಬಿದಿರೆ ಯುವ ಬಂಟರ ಸಂಘದ ವತಿಯಿಂದ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು ಸಂಸ್ಕøತಿ, ಶಿಕ್ಷಣ, ಉದ್ಯಮ, ಧಾರ್ಮಿಕ, ಸಾಮಾಜಿಕ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಬಂಟ ಸಮುದಾಯದ ಕೊಡುಗೆ ದೊಡ್ಡದು, ಇದು ಬಂಟ ಸಮುದಾಯದ ಹೆಮ್ಮೆ ಎಂದರು. ಆಧ್ಯಾತ್ಮವೆಂದರೆ ಕೇವಲ ಗುಡಿ ಗೋಪುರಗಳನ್ನು ಕಟ್ಟುವುದಲ್ಲ, ಯಾರು ಹಸಿದವರಿರುತ್ತಾರೋ, ಯಾರು ಕಷ್ಟದಲ್ಲಿರುತ್ತಾರೋ ಅಂತವರಿಗೆ ನೆರವಾಗುವುದೇ ಶ್ರೇಷ್ಠವಾದ ಆಧ್ಯಾತ್ಮವೆಂದು ಹೇಳಿದ…
ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾನಸಿಕ ನೆಮ್ಮದಿಯೂ ಲಭಿಸುತ್ತದೆ. ಪ್ರತೀನಿತ್ಯ ವ್ಯಾಯಾಮಗಳು, ಯೋಗ ಪ್ರಾಣಾಯಾಮ, ದೈಹಿಕ ಚಟುವಟಿಕೆಗಳಿಂದ ಮಾತ್ರ ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ನ ಉಳ್ಳಾಲ ತಾಲೂಕು ಘಟಕದ ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ ಅಭಿಪ್ರಾಯಪಟ್ಟರು.ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪಾವೂರು ಹರೇಕಳ ಇವುಗಳ ಜಂಟಿ ಆಶಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ “ಕ್ರೀಡಾ ಸಂಭ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಕಡೆಂಜ ಸೋಮಶೇಖರ್ ಚೌಟ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಬಹುಮಾನಗಳನ್ನು ಪಡೆದ ಕ್ರೀಡಾಪಟುಗಳನ್ನು, ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆದ ಸ್ಕೌಟ್ಸ್ ಮತ್ತು ಗೈಡ್ಸ್ ಗಳನ್ನು, ಜಿಲ್ಲಾ ಮಟ್ಟದ ಆಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು, ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರನ್ನು, ಜಿಲ್ಲಾ ಮಟ್ಟದ ತೃತೀಯ ಸೋಪಾನ ಪರೀಕ್ಷೆಯಲ್ಲಿ ಪಾಸಾಗಿರುವ ಗೈಡ್ಸ್ ವಿದ್ಯಾರ್ಥಿಗಳನ್ನು, ವಿಶ್ವ…
ರಾಷ್ಟ್ರೀಯ ಹಿರಿಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ರಾಜ್ಯದ ಕುಸ್ತಿಪಟುಗಳ ಮೈಲಿಗಲ್ಲು : ಬಿ ಗುಣರಂಜನ್ ಶೆಟ್ಟಿ
ಡಿಸೆಂಬರ್ 23 ರಂದು ಭಾರತೀಯ ಕುಸ್ತಿ ಸಂಘದ ವತಿಯಿಂದ ವಿಶಾಖಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಫ್ ನ ಎರಡನೇ ದಿನದಲ್ಲೇ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ರಾಜ್ಯ ಕುಸ್ತಿಪಟುಗಳು ಪಡೆದುಕೊಳ್ಳುವ ಮೂಲಕ ನಮ್ಮ ಅಸೋಸಿಯೇಷನ್ ಇತಿಹಾಸದಲ್ಲೇ ಹೊಸದೊಂದು ಮೈಲಿಗಲ್ಲು ನೆಟ್ಟಿದ್ದಾರೆ ಎಂದು ಕರ್ನಾಟಕ ಕುಸ್ತಿಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಎರಡನೇ ದಿನದಂದು ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯದ ಕುಸ್ತಿಪಟು ಹಳಿಯಾಳದ ಸಂದೀಪ್ ಹಳಲ್ದೆಕರ್ರವರು ರಾಷ್ಟ್ರೀಯ ನ್ಯಾಷನಲ್ ಫೈನಲ್ ಪಂದ್ಯಾವಳಿಯಲ್ಲಿ ಪಂಜಾಬಿನ ಕುಸ್ತಿಪಟುವಿನೊಂದಿಗೆ ಪರಾಭವ ಹೊಂದಿ ಎರಡನೇ ಸ್ಥಾನ ಪಡೆದುಕೊಂಡರೆ, ಮತ್ತೊರ್ವ ಕರ್ನಾಕದ ಕುಸ್ತಿಪಟು ದರಿಯಪ್ಪ 87 ಕೆಜಿ ತೂಕ ವಿಭಾಗದಲ್ಲಿ ಗ್ರೀಕೋರೋಮನ್ ಸ್ಪರ್ಧೆಯಲ್ಲಿ ಹಣಾಹಣಿ ನಡೆಸಿ ಸೆಮಿಫೈನಲ್ಸ್ ಗೆದ್ದು ಕಂಚಿನ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ವಿಜೇತ ಸ್ಪರ್ಧಿಗಳಿಗೆ ಪದಕ ತೊಡಿಸಿ ಪ್ರಮಾಣ ಪತ್ರ ವಿತರಿಸಿದ ಕರ್ನಾಟಕ ಕುಸ್ತಿಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಅವರು ಮಾತನಾಡಿ, ಇದು ಹಲವು ವರ್ಷಗಳ ನಂತರ ರಾಷ್ಟ್ರೀಯ ಚಾಂಪಿಯನ್…
ಪುತ್ತೂರು ತಾಲೂಕು ವಿದ್ಯಾರ್ಥಿ ಬಂಟರ ಸಂಘ ನೇತೃತ್ವದಲ್ಲಿ ಉಚಿತವಾಗಿ ‘ಭವಿಷ್ಯ’ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮ ಉದ್ಘಾಟನೆ.
ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಸವಣೂರು ಸೀತಾರಾಮ ರೈ ಯವರು ವಿದ್ಯಾರ್ಥಿ ಬಂಟರ ಸಂಘದ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ಎಲ್ಲರಿಗೂ ಆದರ್ಶ. ಪದವಿ ಪಡೆದ ಕೂಡಲೇ ನಾವು ಎಲ್ಲವನ್ನೂ ತಿಳಿದುಕೊಂಡಿದ್ದೇವೆ ಮಾಡುವೆವು ಎಂದು ಬೀಗುವುದು ಸರಿಯಲ್ಲ. ಭಾಷೆ ಯಾವುದೇ ಇರಲಿ ನಿರರ್ಗಳವಾಗಿ, ನಿರ್ಭಯವಾಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಸ್ಪರ್ಧಾತ್ಮಕವಾಗಿ ಪರೀಕ್ಷೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಬೇಕಾದರೆ ನಾವು ತರಬೇತಿ ಪಡೆಯಬೇಕು. ಅದಕ್ಕೆ ಈ ಕಾರ್ಯಕ್ರಮ ಪೂರಕ ಎಂದು ನಮ್ಮಿಂದ ಏನು ಸಹಾಯಬೇಕು ಅದನ್ನು ಮಾಡುವೆ ಎಂದು ಶುಭಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಃಘದ ಉಪಾಧ್ಯಕ್ಷರು ಎ ಹೇಮನಾಥ್ ಶೆಟ್ಟಿ ಯವರು ಮಾತನಾಡಿ ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷರು ಪವನ್ ಶೆಟ್ಟಿ ಕಂಬಲತ್ತಡ್ಡ ಮತ್ತು ತಂಡ ತನ್ನ ವಿದ್ಯಾರ್ಥಿ ಜೀವನದಲ್ಕಿಯೇ ಸಮಾಜದ ಇತರೇ ಯುವಕ ಯುವತಿಯರಿಗೆ ಉದ್ಯೋಗ ಭರವಸೆ ನೀಡುವ ನಿಟ್ಟಿನಲ್ಲಿ ‘ಭವಿಷ್ಯ’ ಕಾರ್ಯಕ್ರಮದ ಮೂಲಕ ಆರು ತಿಂಗಳ ಕಾಲದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಎಲ್ಲರೂ ಪ್ರಶಂಸೆ ಮಾಡ ಬೇಕಾದ…
ತುಳುನಾಡ ದೈವಾರಾಧನೆ ಅರಿತವ ಮೂಲಕ್ರಮದ ಬದಲಾವಣೆ ಬಗ್ಗೆ ಮಾತ್ರ ವಿರೋಧಿಸುತ್ತಾನೆಯೇ ಹೊರತು, ಬರೀ ಬ್ರಾಹ್ಮಣ ಅಥವಾ ದಲಿತರ ಅಥವಾ ಇನ್ಯಾವುದೋ ಜಾತಿಯ ದ್ವೇಷಕ್ಕೆ ಸೀಮಿತನಾಗಲಾರ !
ದೈವರಾಧನೆಯ ಕರ್ಮಿಗಳಲ್ಲಿ ಎಲ್ಲವರ್ಗದವರೂ ಇರುತ್ತಾರೆ ಎಂಬುದು ತುಳುನಾಡಿನ ಪ್ರತಿಯೊಬ್ಬನಿಗೂ ಗೊತ್ತಿರುವ ವಿಚಾರ. ಅದು ಕೆಲ ಅಲ್ಪರು ಹೇಳುವಂತೆ ಒಂದು ವರ್ಗಕ್ಕೆ ಸೀಮಿತವಾದ ಕಟ್ಟಳೆಯಲ್ಲ. ದೈವಗಳ ನುಡಿ ಎಂದರೆ, ಅದು ತಲೆತಲಾಂತರದಿಂದ ಬಂದ ನುಡಿಕಟ್ಟುಗಳು. ಆ ನುಡಿಕಟ್ಟಲ್ಲಿ ಗಗ್ಗರ ತೆಗೆದುಕೊಳ್ಳುವ ಮುನ್ನ ದೈವ ಹೀಗನ್ನುತ್ತದೆ… ನೂಲುಪಾಲ್ – ನೂರ್ದಾಲ್ – ಸಾರಾಳ್ – ಸಾರುಬಿರು ಒಂಜಿ ರಾಜ್ಯಡ ಕೇಂಡೊಂದು ಗಗ್ಗರ ದೆತೋನ್ವೆ..ಇಲ್ಲಿ ನೂಲುಪಾಲು ಅಂದರೆ ಬ್ರಾಹ್ಮಣರು, ನೂರ್ದಾಲ್ ಅಂದರೆ ಬಂಟರು, ಜೈನರು ಎಂಬ ನಿರ್ದಿಷ್ಟ ಕುಲಕಸುಬಿಗೆ ಒಳಪಡದ ವರ್ಗ, ಸಾರಾಳ್ ಅಂದರೆ ಕುಲಕಸುಬು ಇರುವ ವರ್ಗಗಳು ಅದು ಕುಂಬಾರ, ನೇಕಾರ , ಮಡಿವಾಳ, ಆಚಾರರು, ಚಮ್ಮಾರರು ಹೀಗೆ ನಂತರದಲ್ಲಿ ಬರುವುದು ಸಾರ ಬಿರು ಅಂದರೆ ಬಿರುವರು ಅರ್ಥಾತ್ ಬಿಲ್ಲವರು ಹಾಗೂ ಮಲಯಾಳಿ ಬಿಲ್ಲವರ ವರ್ಗ. ದೈವವೇ ಇವರನ್ನೆಲ್ಲಾ ಒಳಗೊಂಡಂತೆ ಒಂದು ರಾಜ್ಯವೆಂದು ಕರೆದು ಗಗ್ಗರ ಸ್ವೀಕರಿಸಲು ಅನುಮತಿ ಕೇಳುವಾಗ ಒಂದು ವರ್ಗದ ಮೇಲೆ ದ್ವೇಷ ಕಾರಲು ನಾವು ಯಾರು ? ಆರ್ಯ ಹಾಗೂ…
ಜಾಗತಿಕ ಬಂಟರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ 625/625 ಅಂಕ ಪಡೆದ ಮೂಲ್ಕಿಯ ವೀಕ್ಷಾ ಶೆಟ್ಟಿ ಅವರನ್ನು ಗೌರವಧನದೊಂದಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಕಾರ್ಯಕಾರಿ ಸಮಿತಿ ಸದಸ್ಯರಾದ ಮೂಲ್ಕಿ ಜೀವನ್ ಕೆ ಶೆಟ್ಟಿ, ನವೀನ್ ಶೆಟ್ಟಿ, ನಿಶಾಂತ್ ಶೆಟ್ಟಿ, ಮೂಲ್ಕಿ ಚೌಟರಮನೆ ವೇದಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಣ್ಣ ಪ್ರಾಯದಲ್ಲೇ ಹೋಟೆಲ್ ಉದ್ಯಮ ಪ್ರಾರಂಭಿಸಿ ಯಶಸ್ವೀಯಾಗಿ ಸಮಾಜಸೇವೆ ಮಾಡುತ್ತಾ ಬರುತ್ತಿರುವ ಆದರ್ಶ್ ಶೆಟ್ಟಿ
ದಿವಂಗತ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್ ಅವರ ಆಪ್ತರಲ್ಲಿ ಓರ್ವ ಮುಂಬಯಿಯ ಯುವ ಹೋಟೆಲ್ ಉದ್ಯಮಿ ಆದರ್ಶ್ ಶೆಟ್ಟಿ ಹಾಲಾಡಿ ಅವರದ್ದು ವಿಶೇಷ ವ್ಯಕ್ತಿತ್ವ. ಸಣ್ಣ ಪ್ರಾಯದಲ್ಲೇ ಹೋಟೆಲ್ ಉದ್ಯಮ ಪ್ರಾರಂಭಿಸಿ ಯಶಸ್ವೀಯಾಗಿ ಸಮಾಜಸೇವೆ ಮಾಡುತ್ತಾ ಬರುತ್ತಿರುವ ಆದರ್ಶ್ ಶೆಟ್ಟರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ನಮ್ಮ ಫೇಸ್ಬುಕ್ ಪೇಜನ್ನು ಲೈಕ್ ಮಾಡಿ ಪ್ರೋತ್ಸಾಹಿಸಿ.
ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಭೂಮಿ ಪೂಜೆ ನೆರವೇರಿಸಿದರು. ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು ನೆರವಿನ ಸಹಕಾರ ನೀಡಿದಾಗ ಇಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ನೆರವೇರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ವಸತಿ ಸಮಿತಿಯ ಸಂಚಾಲಕ ದೇವೇಂದ್ರ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಮಾಜಿ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಕಾಂತ್ ಶೆಟ್ಟಿ ಬಾಳ, ಪುಷ್ಪರಾಜ ಶೆಟ್ಟಿ ಮದ್ಯ, ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಶೆಟ್ಟಿ, ಕಾರ್ಪೋರೇಟರ್ ಲಕ್ಷ್ಮೀ ದೇವಾಡಿಗ, ನಿರ್ದೇಶಕರಾದ ಸುಜಾತ…
ದ್ವೀಪದ ಅನಿವಾಸಿ ಬಂಟ ಸಮುದಾಯದ ಒಕ್ಕೂಟವಾದ “ಬಂಟ್ಸ್ ಬಹರೈನ್” ಸಂಘಟನೆ ಇದೀಗ ಯಶಸ್ವಿಯಾಗಿ ಎರಡು ದಶಕಗಳನ್ನು ಪೂರ್ಣಗೊಳಿಸಿದ್ದು ಇದೀಗ ಸಂಘಟನೆಯ ಇಪ್ಪತ್ತನೇ ವಾರ್ಷಿಕೋತ್ಸವಕ್ಕೆ ಕ್ಷಣಗಣನೆ ಪ್ರಾಂಭವಾಗಿದೆ. ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಾ ದ್ವೀಪದ ಬಂಟ ಬಾಂಧವರನ್ನು ತನ್ನ ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು ಸಂಘಟನೆಯ ಪ್ರಸಕ್ತ ಅಧ್ಯಕ್ಷರಾಗಿ ಸೌಕೂರು ಅರುಣ್ ಶೆಟ್ಟಿಯವರು ಕಾರ್ಯನಿರ್ವಹಿಸುತ್ತಿದ್ದು ಇವರ ಸಾರಥ್ಯದಲ್ಲಿ ಇದೆ ನವೆಂಬರ್ ತಿಂಗಳ 10ನೇ ತಾರೀಖಿನ ಶುಕ್ರವಾರದಂದು ಬೆಳಗ್ಗೆ 10:30ಕ್ಕೆ ಇಲ್ಲಿನ ಪಂಚತಾರಾ ಹೋಟೆಲ್ ”ಕ್ರೌನ್ ಪ್ಲಾಜಾ” ದ ಸಭಾಂಗಣದಲ್ಲಿ ಇಪ್ಪತ್ತನೆಯ ವಾರ್ಷಿಕೋತ್ಸವವನ್ನು ಅದ್ದೊರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಂಟ ಸಮುದಾಯದ ಸಾಧಕರಾದ ಸಮಾಜ ಸೇವಕರೂ, ಕಾಪು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ನಾಡಿನ ಖ್ಯಾತ ಮೂಳೆ ತಜ್ಞ ಹಾಗೂ ಮುಂಬಯಿಯ ದೀಪಕ್ ಹಾಸ್ಪಿಟಲ್ ನ ಆಡಳಿತ ನಿರ್ದೇಶಕರಾಗಿರುವ ಡಾಕ್ಟರ್ ಭಾಸ್ಕರ್ ಶೆಟ್ಟಿಯವರು ವಿಶೇಷವಾಗಿ ದ್ವೀಪಕ್ಕೆ ಆಗಮಿಸಿ…
ವಿದ್ಯಾಗಿರಿ: ‘ಮಾತು ಸಕಾರಾತ್ಮಕ ಆಗಿರಲಿ’ ಎಂದು ‘ಸ್ಮೈಲ್ ಮೇಕರ್’ ಕಾರ್ಪೊರೇಟ್ ನಮ್ಯ ಕೌಶಲಗಳ ತರಬೇತುದಾರರಾದ ಶೋಭಾ ಜಿ. ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ವಿಭಾಗವು ಗುರುವಾರ ಹಮ್ಮಿಕೊಂಡ ‘ಪದಗಳ ಶಕ್ತಿ’ – ಸಾಫ್ಟ್ ಸ್ಕಿಲ್ಸ್ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ನಾವು ಬಳಸುವ ಪದಗಳು ನಮ್ಮ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಒಂದು ಪದವು ನಮ್ಮ ವ್ಯಕ್ತಿತ್ವವನ್ನು ವೃದ್ಧಿಸಬಹುದು ಅಥವಾ ಕೆಡಿಸಬಹುದು. ಮಾತನಾಡುವಾಗ ಪದಪ್ರಯೋಗ ಹಾಗೂ ಧ್ವನಿ ಬಗ್ಗೆ ಎಚ್ಚರ ಇರಲಿ ಎಂದರು. ವಿದ್ಯಾರ್ಥಿಗಳಲ್ಲಿ ತಮ್ಮಲ್ಲಿರುವ ಸಾಮಾಥ್ರ್ಯವನ್ನು ಗುರುತಿಸಲು ಹೇಳಿದ ಅವರು, ಸಂವಹನ ಸಂಬಂದಿತ ಚಟುವಟಿಕೆಗಳನ್ನು ನಡೆಸಿದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬಳಕೆಯ ಪದಗಳ ಮೇಲೆ ನಮ್ಮ ಕೌಶಲವು ಮೃದು ಅಥವಾ ಕಠಿಣವೇ ಎಂಬುದನ್ನು ಅಂದಾಜಿಸಲಾಗುತ್ತದೆ. ಜ್ಞಾನವು ಶಕ್ತಿಯಾಗಿದ್ದು, ಸದ್ವಿನಿಯೋಗಿಸಬೇಕು ಎಂದರು. ಕಾರ್ಯಗಾರದಲ್ಲಿ ಶ್ರೀ ಧವಲಾ ಕಾಲೇಜು, ಶ್ರೀ ಮಹಾವೀರ ಕಾಲೇಜು ಹಾಗೂ ಆಳ್ವಾಸ್ನ ಬಿಬಿಎ ಹಾಗೂ ಬಿಎಚ್ಆರ್ಡಿ ವಿಭಾಗದ…