Author: admin
ನಾಡ ಹಬ್ಬ ಮೈಸೂರು ದಸರಾ ಅಂದಾಕ್ಷಣ ಗಜಪಡೆಗಳು ನೆನಪಾಗುತ್ತದೆ. ಜಗತ್ತಿನ ಮೂಲೆ ಮೂಲೆಗಳಿಂದ ಬರುವ ಪ್ರವಾಸಿಗರನ್ನು ಆಕರ್ಷಿಸುವ ಶ್ರೀಮಂತ ಸಂಸ್ಕೃತಿಯ ಪರಂಪರೆಯು ದಸರಾದ ವಿಶ್ವ ವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಗಜಪಡೆಯನ್ನು ಸಜ್ಜುಗೊಳಿಸಲು ಅಭ್ಯಾಸ ಮಾಡಿಸುವ ಸಂಪ್ರದಾಯ ಇದೆ. ಇಲ್ಲಿ ಗಜ ಪಡೆಯ ಗಂಭೀರ ನಡಿಗೆಗೆ ತಾಲೀಮು ದಸರಾಗೆ ತಿಂಗಳು ಇರುವಾಗಲೇ ಪ್ರಾರಂಭವಾಗುತ್ತದೆ. ಅದ್ದೂರಿಯಾಗಿ ದಸರಾ ಜಂಬೂ ಸವಾರಿಗಾಗಿ ಕಾಡಿನಿಂದ ನಾಡಿಗೆ ತಂದಿರುವ ಆನೆಗಳಿಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ನಡೆಯುತ್ತದೆ. ವಿಶ್ವ ವಿಖ್ಯಾತ ಮೈಸೂರು ದಸರಾ ನೋಡಲು ಎಷ್ಟು ಸುಂದರವೋ ಅಷ್ಟೇ ಸುಂದರ ನಾಡಹಬ್ಬಕ್ಕೆ ಮುನ್ನುಡಿಯಂತಿರುವ ಗಜ ಪಯಣ ದಸರಾದಲ್ಲಿ ಆನೆ ಅಂಬಾರಿ ಹೊರುವುದನ್ನು ಜನ ವಿಶೇಷವಾಗಿ ನೋಡಿರಬಹುದು. ಆದರೆ ಅದೇ ಆನೆಗಳು ಕಾಡಿನಿಂದ ನಾಡಿಗೆ ಬರುವ ದಿನ ಅಂದರೆ ದಸರಾಕ್ಕೆ ಒಂದು ತಿಂಗಳು ಮೊದಲು ಗಜ ಪಡೆಗಳನ್ನು ನಾಡಿಗೆ ಸ್ವಾಗತಿಸುವ ರೀತಿ ರಿವಾಜುಗಳು ಒಂದು ತರದ ಹಬ್ಬದ ವಾತಾವರಣವನ್ನು ನಿರ್ಮಾಣಗೊಳಿಸುತ್ತವೆ. ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನ…
“ಸಂತೋಷವಾಗಿ ಜೀವಿಸುವುದು ಹೇಗೆ”? ಎಂಬುದು ಬಹುತೇಕ ಜನರ ಪ್ರಶ್ನೆ. ಈ ಪ್ರಶ್ನೆಗೆ ಯಾರ ಬಳಿಯೂ ಸರಿಯಾದ ಉತ್ತರ ಸಿಗಲಾರದು. ಏಕೆಂದರೆ ಆ ವ್ಯಕ್ತಿಯ ಕೈಯ್ಯಲ್ಲೇ ಅವನ ಜೀವನದ ಸಂತೋಷವು ಅಡಗಿದೆ. ಒಂದು ಕೈಯಲ್ಲಿನ ಐದು ವಿವಿಧ ಬೆರಳುಗಳ ಉದ್ದದಂತೆಯೇ, ವಿವಿಧ ಜನರಿಗೆ ಸಂತೋಷವು ವಿಭಿನ್ನವಾಗಿರುತ್ತದೆ. ಈ ಹಿಂದೆ ನಮ್ಮ ಜೀವನದ ಸಂತೋಷವು ವಿಭಿನ್ನವಾಗಿತ್ತು. 50 ವರ್ಷಗಳ ಹಿಂದೆಯಷ್ಟೇ ತಂತ್ರಜ್ಞಾನವು ಹುಟ್ಟಿಕೊಂಡಿತು ಮತ್ತು ಪ್ರಸ್ತುತ ಸ್ಮಾರ್ಟ್ ಫೋನ್ ಯುಗದಲ್ಲಿ ನಾವು ಸಂತೋಷವನ್ನು ಬೇರೆ ರೀತಿಯಲ್ಲಿ ಹುಡುಕುತ್ತಿದ್ದೇವೆ. ಜೀವನದಲ್ಲಿನ ಸಂತೋಷವನ್ನು ಅನುಭವಿಸುವಲ್ಲಿ ಬಹಳಷ್ಟು ಅಡಚಣೆಗಳಿವೆ. ಆತಂಕ, ವೈಫಲ್ಯದ ಭಯ, ಕೋಪ, ಹತಾಶೆ, ಹೋಲಿಕೆ ಇತ್ಯಾದಿ. ಭೂಮಿಯ ಮೇಲಿನ ಪ್ರತಿಯೊಂದು ಜೀವಿಯೂ ತನ್ನ ಜೀವನದ ಯಾವುದಾದರೊಂದು ಸಮಯದಲ್ಲಿ ಆತಂಕವನ್ನು ಅನುಭವಿಸುತ್ತದೆ. ಅದು ಮನೆಗೆ ಆಹಾರವನ್ನು ಹೊತ್ತೊಯ್ಯುತ್ತಿರುವ ಇರುವೆಯಾಗಿರಬಹುದು ಅಥವಾ ಸಾಗರದಾಳದಲ್ಲಿರುವ ನೀಲಿ ತಿಮಿಂಗಿಲವೇ ಆಗಿರಬಹುದು. ನರಮಂಡಲವನ್ನು ಹೊಂದಿರುವ ಪ್ರತಿಯೊಂದು ಜೀವಿಯಲ್ಲಿಯೂ ಆತಂಕ ಕಂಡು ಬರುತ್ತದೆ. ಹೆಸರೇ ಸೂಚಿಸುವಂತೆ, ನರ್ವಸ್ ಸಿಸ್ಟಮ್ ಪೂರ್ವ ನಿಯೋಜಿತವಾಗಿ ಕೆಲವೊಮ್ಮೆ ನರ್ವಸ್…
ಪುತ್ತೂರು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜು.23 ರಂದು ನಡೆಯಲಿರುವ ತುಳುನಾಡ ಬಂಟೆರೆ ಪರ್ಬ – 2023 ಕಾರ್ಯಕ್ರಮದ ಸಿದ್ಧತಾ ಸಭೆಯು ಪುತ್ತೂರು ಬಂಟರ ಭವನದಲ್ಲಿ ಜರಗಿತು. ಅಪರೂಪದ ಅವಕಾಶ – ಶಶಿರಾಜ್ ರೈ : ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳ ಗುತ್ತುರವರು ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜು.23 ರಂದು ನಡೆಯುವ ಅದ್ದೂರಿ ಕಾರ್ಯಕ್ರಮ ತುಳುನಾಡ ಬಂಟೆರೆ ಪರ್ಬಕ್ಕೆ ಸಮಸ್ತ ಬಂಟ ಬಾಂಧವರು ಪೂರ್ಣ ರೀತಿಯ ಸಹಕಾರವನ್ನು ನೀಡಿ, ಯಶಸ್ಸುಗೊಳಿಸಬೇಕು ಎಂದು ಹೇಳಿದರು. ಬೆಳಿಗ್ಗೆಯಿಂದ ಸಂಜೆ ತನಕ ನಡೆಯುವ ದ.ಕ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಾಂಸ್ಕೃತಿಕ ಸ್ವರ್ಧೆಯ ವೈಭವವನ್ನು ನೋಡುವುದೇ ಒಂದು ಅಪರೂಪದ ಅವಕಾಶವಾಗಿದೆ ಎಂದು ಅವರು ಹೇಳಿದರು. ಯುವ ಬಂಟರ ಸಂಘದ ಕಾರ್ಯ ಪ್ರಶಂಸನೀಯ -…
ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಲನಚಿತ್ರದ ಚಿತ್ರೀಕರಣ, ಡಬ್ಬಿಂಗ್ ಕೆಲಸ ಕಾರ್ಯಗಳು ಸಂಪೂರ್ಣಗೊಂಡಿದ್ದು, ಸಿನಿಮಾ ಆಗೋಸ್ಟ್ ತಿಂಗಳಿನಲ್ಲಿ ತೆರೆಕಾಣಲಿದೆ. ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಸೂಪರ್ ಸ್ಟಾರ್ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮುಖ್ಯವಾಗಿ ಇಲ್ಲಿ ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್ ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅನ್ ಷಾ, ಅಶೋಕ್ ಪಕ್ಕಳ, ಮಾಸ್ಟರ್ ಅತಿಶ್ ಶೆಟ್ಟಿ, ಮಾಸ್ಟರ್ ಅರುಷ್ ಯು ಪೂಜಾರಿ, ಕುಮಾರಿ ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ಶೆಟ್ಟಿಯವರ ಕತೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ಚಿತ್ರಕತೆ :…
ಮೂಡುಬಿದಿರೆಯ ಯುವ ಬಂಟರ ಸಂಘದ ವತಿಯಿಂದ ಮೂರನೇ ವರ್ಷದ ಬಂಟರ ಸಮ್ಮಿಲನ – ಬಂಟ ಕ್ರೀಡೋತ್ಸವ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ಮೂರು ವರ್ಷಗಳಲ್ಲಿ ಯುವ ಬಂಟರ ಸಂಘದ ವತಿಯಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು ಕೊರೋನಾ ಸಂದರ್ಭದಲ್ಲಿ ಬಡ ಕುಟುಂಬಗಳಿಗೆ ನೀಡಿದ ನೆರವು ಹಾಗೂ ಸಹಕರಿಸಿದ ಸದಸ್ಯರ ಬಗ್ಗೆ ಉಲ್ಲೇಖಿಸಿ, ಸಂಘವು ನಡೆಸಿದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. 19 ರಂದು ಬೆಳಿಗ್ಗೆ 9 ಗಂಟೆಗೆ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನೀ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿ ಹಾಗೂ ಬಾರ್ಕೂರು ಸಂತೋμï ಗುರೂಜಿ ಆಶೀರ್ವಚನ ನೀಡಲಿದ್ದು ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಅವರು ಪುμÁ್ಪರ್ಚನೆಗೈಯಲಿದ್ದಾರೆ. ಉದ್ಯಮಿ ಪ್ರಕಾಶ್…
ತೀರ್ಥಹಳ್ಳಿ ಸಮೀಪ ಮಂಜುನಾಥ ಮತ್ತು ಸುಶೀಲ ದಂಪತಿಗಳ ಎರಡನೇ ಮಗನಾಗಿ ಶರತ್ ಏಪ್ರಿಲ್ 17 1989 ರಂದು ಜನಿಸಿದರು.ಅತ್ಯಂತ ಎಳವೆಯಲ್ಲೇ ತನ್ನ ತಂದೆತಾಯಿಯನ್ನು ಕಳೆದುಕೊಂಡ ಇವರು ಕನ್ನಂಗಿ ಸಮೀಪ ಹೊನ್ನಾಸ್ಗದ್ದೆ ಎಂಬ ಹಳ್ಳಿಯಲ್ಲಿ ತನ್ನ ಅಜ್ಜಿ ಮನೆಯಲ್ಲಿ ಬೆಳೆದರು.ಸ್ಥಳೀಯ ಶಾಲೆಯಲ್ಲಿ ಏಳನೇ ತರಗತಿ ತನಕದ ವಿದ್ಯಾಭ್ಯಾಸ.ಕಡುಬಡತನದ ಕಾರಣದಿಂದ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ಇತ್ತು ತೀರ್ಥಹಳ್ಳಿಯಲ್ಲಿ ಹೋಟೆಲೊಂದರಲ್ಲಿ ಕೆಲಸಕ್ಕೆ ಸೇರಿದರು. ಬಾಲ್ಯದಿಂದಲೇ ಮಂದಾರ್ತಿ ಮೇಳದ ಯಕ್ಷಗಾನ ನೋಡುತ್ತಾ ಬೆಳೆದ ಇವರಿಗೆ ಯಕ್ಷಗಾನ ಕಲಾವಿದ ಆಗಬೇಕೆಂಬ ಆಸೆ ಚಿಕ್ಕಂದಿನಿಂದಲೇ ಇತ್ತು. ಮಂದಾರ್ತಿ ಮೇಳದಲ್ಲಿ ತಿರುಗಾಟ ಮಾಡಬೇಕೆಂಬ ಆಸೆ ನಾಟ್ಯ ಕಲಿಯದ ಕಾರಣ ಈಡೇರಲಿಲ್ಲ. ಅದೇ ಸಮಯದಲ್ಲಿ ಧರ್ಮಸ್ಥಳ ಯಕ್ಷಗಾನ ಕೇಂದ್ರದ ಜಾಹೀರಾತು ನೋಡಿ ಭಾಗವತಿಕೆ ಕಲಿಯಲು ಅರ್ಜಿ ಸಲ್ಲಿಸಿದರು. ಕೇಂದ್ರಕ್ಕೆ ಹೋಗಿ ಸಂದರ್ಶನ ಎದುರಿಸಿದ ಇವರನ್ನು ಯಕ್ಷಗಾನದ ಗಂಧಗಾಳಿ ಗೊತ್ತಿಲ್ಲದ ಕಾರಣದಿಂದ ಪಾಸ್ ಮಾಡಲಿಲ್ಲ. ಇವರ ಆಸಕ್ತಿಯನ್ನು ಗಮನಿಸಿದ ದಿ.ಅಡೂರ್ ಗಣೇಶ ರಾವ್ರವರು ಕೇಂದ್ರಕ್ಕೆ ಸೇರ್ಪಡೆಗೊಳಿಸಿದರು. ಆಗ ಭಾಗವತಿಕೆ ಗುರುಗಳಾದ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿಗಳ 15…
ಭಾರತದಲ್ಲಿ ಸಂವಿಧಾನವೇ ಪರಮೋಚ್ಚ. ಈ ದೇಶದ ಬುನಾದಿಯೇ ಸಂವಿಧಾನ. ಉಳಿದೆಲ್ಲವೂ ಕೂಡ ಸಂವಿಧಾನದ ಮೇಲೆಯೇ ಅವಲಂಬಿತವಾಗಿದೆ. ಈ ಸಂವಿಧಾನಕ್ಕೆ ಆಧಾರ ಸ್ಥಂಭಗಳಂತೆ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಿವೆ. ಈ ಮೂರೂ ಅಂಗಗಳು ಒಂದಕ್ಕೊಂದು ಪೂರಕವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ ಯಾಗುತ್ತದೆ. ಆದರೆ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದ ಮಧ್ಯೆ ಹೊಂದಾಣಿಕೆಯ ಕೊರತೆಯಿಂದಾಗಿ ದೇಶದ ಆಡಳಿತಕ್ಕೆ ಧಕ್ಕೆ ಬರುವ ಸಾಧ್ಯತೆಯೇ ಹೆಚ್ಚು. ಶಾಸಕಾಂಗ ಅತೀ ಕಡಿಮೆ ಅವಧಿಗೆ ಕಾರ್ಯಾಚರಿಸುವ ಅಂಗ. ಪ್ರತೀ ವರ್ಷಗಳಿಗೊಮ್ಮೆ ಇದು ಬದಲಾಗುವ ಸಂಭವ ಇರುತ್ತದೆ. ಅದಕ್ಕಿಂತ ಸ್ವಲ್ಪ ಹೆಚ್ಚಿನ ದಿನಗಳ ಅವಕಾಶ ನ್ಯಾಯಾಂಗ ದಲ್ಲಿ ಚುನಾಯಿತರಾದ ನ್ಯಾಯಾಧೀಶರಿಗೆ ದೊರೆಯುತ್ತದೆ. ಇದ್ದುದರಲ್ಲಿ ಕಾರ್ಯಾಂಗದಲ್ಲಿರುವ ಅಧಿಕಾರಿಗಳಿಗೆ ಹೆಚ್ಚಿನ ವರ್ಷಗಳ ಸೇವಾವಧಿ ಸಿಗುತ್ತದೆ. ಹಾಗಾಗಿಯೇ ಕಾರ್ಯಾಂಗದ ಮೇಲೆ ನ್ಯಾಯಾಂಗಕ್ಕೂ, ಶಾಸಕಾಂಗಕ್ಕೂ ಒಂದಿಷ್ಟು ಹೆಚ್ಚಿನ ಅಧಿಕಾರ ಇರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಶಾಸಕಾಂಗದ ಪ್ರಭಾವ ಹೆಚ್ಚುತ್ತಿದೆ. ನ್ಯಾಯಾಂಗದ ಆಗುಹೋಗುಗಳಲ್ಲಿ ಶಾಸಕಾಂಗ ಕೈಹಾಕಬಾರದು. ಆದರೆ ನ್ಯಾಯಾಂಗದಲ್ಲಿ ನ್ಯಾಯಾಧೀಶರ ನೇಮಕಾತಿಯ, ಅದರಲ್ಲೂ…
ಕನ್ನಡ ಸಾಹಿತ್ಯಕ್ಕೆ ನಾನು ಬಂದಿದ್ದು ಆಕಸ್ಮಿಕ. ಬಿಎಸ್ಸಿ ವಿದ್ಯಾರ್ಥಿಯಾಗಿದ್ದ ನನಗೆ ಎಂಎಸ್ಸಿ ಮಾಡಬೇಕು ಎಂಬ ಆಸೆಯಿತ್ತು. ಆದರೆ ಸೀಟು ಸಿಗಲಿಲ್ಲ. ಹಾಗಾಗಿ ಐಚ್ಛಿಕ ಕನ್ನಡ ತೆಗೆದುಕೊಂಡು ಎಂಎ ಪದವಿ ಪಡೆದು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಂಡೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ| ಬಿ.ಎ.ವಿವೇಕ ರೈ ಹೇಳಿದರು.ಬಿಎಂಶ್ರೀ ಪ್ರತಿಷ್ಠಾನ ಎನ್ಆರ್ ಕಾಲನಿಯ ಎಂವಿಸಿ ಸಭಾಂಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಶ್ರೀ ಸಾಹಿತ್ಯ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು. ಹಿರಿಯ ವಿದ್ವಾಂಸ ಹಂಪ ನಾಗರಾಜಯ್ಯ ಮಾತನಾಡಿ, ವಿವೇಕ ರೈ ಅವರು ಜರ್ಮನಿಯಲ್ಲಿ ಕೂಡ ಕನ್ನಡ ಸಾಹಿತ್ಯದ ಬಿತ್ತನೆ ಮಾಡಿದ್ದಾರೆ. ಹೀಗಾಗಿ ಮುಂದಿನ 500 ವರ್ಷಗಳಲ್ಲಿ ಕನ್ನಡ ಸಾಹಿತ್ಯದ ವೈಶಿಷ್ಟ ಏನು ಎಂಬುದು ತಿಳಿಯಲಿದೆ ಎಂದರು. ಶಾ ಬಾಲುರಾವ್ ನೆನಪುಗಳು ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ| ಬೈರಮಂಗಲ ರಾಮೇಗೌಡ, ನಿಕಟಪೂರ್ವ ಅಧ್ಯಕ್ಷ ಡಾ| ಆರ್.ಲಕ್ಷ್ಮಿನಾರಾಯಣ, ಗೌರವಾಧ್ಯಕ್ಷ ಡಾ| ಪಿ.ವಿ.ನಾರಾಯಣ, ಕಮಲಿನಿ ಬಾಲುರಾವ್ ಮತ್ತಿತರರು ಉಪಸ್ಥಿತರಿದ್ದರು.
ಪುಣೆ ಬಂಟರ ಸಂಘದ ಯುವ ವಿಭಾಗದ ವತಿಯಿಂದ ಬಾಕ್ಸ್ ಕ್ರಿಕೆಟ್ ಪಂದ್ಯಾಟವು (ಬಂಟ್ಸ್ ಬಾಕ್ಸ್ ಕ್ರಿಕೆಟ್ ಲೀಗ್ ) ಜ .7 ರಂದು ನಗರದ ಗ್ರೀನ್ ಬಾಕ್ಸ್ ಟರ್ಫ್ ,ಭಂಡಾರ್ಕರ್ ಇನ್ಸ್ಟಿಟ್ಯೂಟ್ ,ಲಾ ಕಾಲೇಜು ರೋಡ್ ,ಪುಣೆ ಇಲ್ಲಿ ನಡೆಯಿತು. ಒಟ್ಟು 16 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದು ಅಂತಿಮವಾಗಿ ವೈಷ್ಣವಿ ತಂಡ ಹಾಗೂ ದೇಹು ರೋಡೀಸ್ ತಂಡಗಳು ಫೈನಲ್ ನಲ್ಲಿ ಸೆಣಸಿದ್ದು ವೈಷ್ಣವಿ ತಂಡ ವಿಜೇತ ಟ್ರೋಫಿ ಹಾಗೂ ರೂ 11,111/- ನಗದನ್ನು ಪಡೆದುಕೊಂಡರೆ ರನ್ನರ್ಸ್ ಆಪ್ ತಂಡವಾದ ದೇಹು ರೋಡೀಸ್ ರೂ .7,777/- ನಗದು ಹಾಗೂ ಟ್ರೋಫಿಯನ್ನು ಗಳಿಸಿಕೊಂಡಿತು . ಸುಶಾಂತ್ ಶೆಟ್ಟಿ ಮ್ಯಾನ್ ಆಪ್ ದ ಸೀರಿಸ್ ಪ್ರಶಸ್ತಿ ಗಳಿಸಿದರೆ ನಿಧಿ ಅಜಿತ್ ಹೆಗ್ಡೆ ವಿಮೆನ್ ಆಪ್ ದ ಸೀರೀಸ್ ,ಆರ್ಯನ್ ಕಿಶೋರ್ ಶೆಟ್ಟಿ ಬೆಸ್ಟ್ ಬ್ಯಾಟ್ಸ್ ಮೆನ್ ಹಾಗೂ ಶ್ವೇತಾ ಶೆಟ್ಟಿ ಬೆಸ್ಟ್ ಬೌಲರ್ ಪ್ರಶಸ್ತಿ ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ…
ಮೊದಲಿಗೆ ಹೇಳುತ್ತೇನೆ ನಾನು ಚಿತ್ರ ವಿಮರ್ಶಕನಲ್ಲ ಆದರೆ ಕಾಂತಾರ ಚಲನಚಿತ್ರದ ಸಫಲತೆ ಎಂದರೆ ಬೌದ್ಧಿಕ ಮಟ್ಟದ ಅಧಃಪತನದ ಕಾರಣದಿಂದ ತಮ್ಮ ಮೂಲ ಮರೆತ ಯುವ ತುಳುವ ಜನಾಂಗಕ್ಕೆ ಕಾಂತಾರ ಚಲನಚಿತ್ರ ಅವರ ಮೂಲವನ್ನು ನೆನಪಿಸಿತು. ಕುಟುಂಬದ ಮೂಲಮನೆಯ ಕಡೆಗೆ ತಲೆಹಾಕಿ ಮಲಗದ ಎಷ್ಟೋ ತುಳುವ ಯುವಜನರನ್ನು ನನ್ನ ವೃತ್ತಿ ಜೀವನದಲ್ಲಿ ಕಂಡಿದ್ದೇನೆ.ಆದೂ ಅಲ್ಲದೆ ತನ್ನ ಮೂಲದ ಶಕ್ತಿಯ ಮೇಲಿನ ನಂಬಿಕೆಯನ್ನು ಬಿಟ್ಟು ಇನ್ಯಾವುದೋ ಶಕ್ತಿಯ ಮೇಲಿನ ಭಕ್ತಿಯ ಪರಾಕಾಷ್ಠೆಗೆ ಹೋದವರನ್ನು ಕಂಡಿದ್ದೇನೆ. ಈ ಎಲ್ಲಾ ಏರಿಳಿತಗಳ ನಡುವೆ ಕಾಂತಾರ ಸಿನಿಮಾ ಕತ್ತಲೆಯ ಕಾಡಿನಲ್ಲಿ ದಾರಿ ತಪ್ಪಿದ ತುಳುವರಿಗೆ ಸತ್ಯ ಜೀಟಿಗೆಯಾಗಿ ಮರೆತು ಹೋದ ಮೂಲದ ಮನೆಯ ದಾರಿ ತೋರಿಸಿದ್ದಂತು ಸತ್ಯ. ತುಳುವರ ಕುಟುಂಬದ ತರವಾಡು ಮನೆಯು ಐದು ಸಮೂಹ ಶಕ್ತಿಗಳ ಆರಾಧನಾ ಕೇಂದ್ರ. ಆ ಶಕ್ತಿಗಳೇ ಕುಟುಂಬದ ಸದಸ್ಯರ ಆಗುಹೋಗುಗಳ ಕಾರಣೀಕರ್ತರು ಎಂದು ತೌಳವ ಸಂಪ್ರದಾಯದ ಅನನ್ಯ ನಂಬಿಕೆ. ಆ ಐದು ಶಕ್ತಿಗಳೇ ನಾಗ, ಮುಡಿಪು, ಪಂಜುರ್ಲಿ, ಗತಿಸಿ ಹೋದ ಗುರು…